Author: editor.udayarashmi@gmail.com

ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದ ವಿಜಯಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಸೀಮಾ ಇ.ಚಪ್ಪರಬಂದ ಅವರಿಗೆ ಅಕ್ಟೋಬರ್ ೨ ರಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ೨೦೨೪, ಟೀಯೆಸ್ಸಾರ್ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಹುಮಾನ ವಿತರಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ೧೧ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಗರದ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜ್, ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಪಿಡಿಜೆ ಕಾಲೇಜು ಹಾಗೂ ವಿ.ಬಿ.ದರಬಾರ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಮಂಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪರೀಕ್ಷೆಗಳು ಅತ್ಯಂತ ಸುಗಮ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಿಸಿದವರಿಗೆ ಅವರು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ ಹೊಸಮನಿ ಇದ್ದರು.ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಯ ಪರೀಕ್ಷೆಗೆ ಜಿಲ್ಲೆಯಲ್ಲಿ ೪,೯೨೦ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪರೀಕ್ಷೆಗೆ ೧,೪೪೯ ಅಭ್ಯರ್ಥಿಗಳು ಗೈರಾಗಿದ್ದು, ೩,೪೭೧ ಅಭ್ಯರ್ಥಿಗಳು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅಕ್ಕಮಹಾದೇವಿ ವಿವಿ ದಲ್ಲಿ ‘ಹಿಂದಿ ಭಾಷೆ ಮತ್ತು ಉದ್ಯೋಗದ ನಿರೀಕ್ಷೆಗಳು’ ವಿಷಯದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದಿ ಭಾಷೆಯು ದೇಶದಲ್ಲಿ ಪ್ರಮುಖ ಸ್ಥಾನವನ್ನು ಸಾಧಿಸಿದ್ದು, ಹಲವಾರು ಉದ್ಯೋಗಾವಕಾಶಗಳ ದಾರಿ ತೆರೆದಿದೆ. ಅನುವಾದ, ಮಾಧ್ಯಮ, ಶಿಕ್ಷಣ, ತಂತ್ರಜ್ಞಾನ, ಮತ್ತು ಬಾಹ್ಯ ಸಂಬಂಧಗಳ ಕ್ಷೇತ್ರದಲ್ಲಿ ಹಿಂದಿಯ ಜಾಗತಿಕ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಹಿಂದಿ ದಿನಾಚರಣೆಯ ಅಂಗವಾಗಿ ಸೋಮವಾರ ಆಯೋಜಿಸಿದ್ದ ‘ಹಿಂದಿ ಭಾಷೆ ಮತ್ತು ಉದ್ಯೋಗದ ನಿರೀಕ್ಷೆಗಳು’ ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟಭಾಷೆಯಾದ ಹಿಂದಿ ಮತ್ತು ಇತರ ಭಾಷೆಗಳನ್ನೂ ಗೌರವಿಸುವುದು ಅತಿ ಮುಖ್ಯ. ಭಾಷೆಯೇ ನಮ್ಮ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಐಕ್ಯತೆಯನ್ನು ಪ್ರತಿನಿಧಿಸುವುದು, ಹೀಗಾಗಿ ಇವುಗಳ ಮಹತ್ವವನ್ನು ಅರಿತುಕೊಳ್ಳಕೊಳ್ಳಬೇಕು ಎಂದರು.ವಿಚಾರ ಸಂಕಿರಣ ಉದ್ಘಾಟಿಸಿದ ಮಹಾರಾಷ್ಟ್ರದ ಔರಂಗಬಾದನ ನಲದುರ್ಗಾ ವಿಶ್ವವಿದ್ಯಾಲಯದ ಪ್ರೊ.…

Read More

ರೂ.೧೪೫ ಕೋಟಿ ರೂ. ಪ್ರಸ್ಥಾವನೆ | ಮೊದಲ ಹಂತದಲ್ಲಿ ರೂ.೪೦ ಕೋಟಿ ಮಂಜೂರಾಗಿ ರೂ.೧೦ ಕೋಟಿ ಬಿಡುಗಡೆ B* ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದಲ್ಲಿ ಮಂಜೂರಾಗಿರುವ ತೋಟಗಾರಿಕೆ ಕಾಲೇಜು ಆರಂಭಕ್ಕೆ ೧೪೫ ಕೋಟಿ ರೂ. ಸರ್ಕಾರಕ್ಕೆ ಪ್ರಸ್ಥಾವನೆ ಮಾಡಿದ್ದು, ಮೊದಲ ಹಂತದಲ್ಲಿ ರೂ.೪೦ ಕೋಟಿ ಮಂಜೂರಾಗಿ ರೂ.೧೦ ಕೋಟಿ ಬಿಡುಗಡೆಗೊಳಿಸಿದ್ದಾರೆ, ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು ಎಂದು ಬಾಗಲಕೋಟ ತೋಟಗಾರಿಕೆ ವಿಶ್ವ ವಿದ್ಯಾಲಯದ ಉಪ ಕುಲಪತಿ ವಿಷ್ಟುವರ್ಧನ ಹೇಳಿದರು.ಬುಧವಾರ ತೋಟಗಾರಿಕೆ ವಿಶ್ವ ವಿದ್ಯಾಲಯದ ಉಪ ಕುಲಪತಿ ಹಾಗೂ ಅಧಿಕಾರಿಗಳು ಆಲಮೇಲದಲ್ಲಿ ಸ್ಥಳ ಪರಿಶೀಲಿಸಿ ನಂತರ ಮಾತನಾಡುತ್ತ ಹೇಳಿದರು.ಕಾಲೇಜು ಆರಂಭಿಸಲು ಸರ್ಕಾರ ಅವಕಾಶ ನೀಡಿದ್ದರಿಂದ ತಾತ್ಕಾಲಿಕವಾಗಿ ಆಲಮೇಲ ತೋಟಗಾರಿಕೆ ಕಾಲೇಜಿನ ಹೆಸರಿನಲ್ಲಿ ಇದೆ ತಿಂಗಳು ಅಕ್ಟೋಬರ ೨೧ ರಂದು ಬಾಗಲಕೋಟ ತೋಟಗಾರಿಕೆ ಕಾಲೇಜಿನಲ್ಲಿ ತರಗತಿ ಆರಂಭವಾಗಲಿದೆ. ಅದಕ್ಕೆ ಮೊದಲ ವರ್ಷದಲ್ಲಿ ೨೫ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಿದ್ದು ವಿದ್ಯಾರ್ಥಿಗಳನ್ನು ಮೆರಿಟ್ ಮೇಲೆ ಪ್ರವೇಶ ಪಡೆದುಕೊಳ್ಳಲಿದ್ದಾರೆ ಎಂದರು.ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ನಿರ್ಮಾಣಕ್ಕೆ ಸ್ಥಳಿಯ ಕೃಷಿ…

Read More

ಡಾ. ಎಚ್.ಎಸ್.ಸಿದ್ದಗಂಗಪ್ಪ ಇವರ ’ಕರ್ನಾಟಕದ ಸಾಧನೆ ಸಂಪನ್ನರು’ ಕೃತಿ ಆಯ್ಕೆ ಉದಯರಶ್ಮಿ ದಿನಪತ್ರಿಕೆ ಗದಗ: ಬೆಂಗಳೂರಿನ ಡಾ. ಎಚ್. ಎಸ್. ಸಿದ್ದಗಂಗಪ್ಪ ಇವರ ಕರ್ನಾಟಕದ ಸಾಧನೆ ಸಂಪನ್ನರು ಸಾಹಿತ್ಯ ಕೃತಿಯು ಡಾ. ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಗೆ, ಆಯ್ಕೆಯಾಗಿದೆ. ಈ ಪ್ರಶಸ್ತಿಯು ೫೦೦೦ ನಗದು ಬಹುಮಾನ ಮಾನಪತ್ರ ನೆನಪಿನ ಕಾಣಿಕೆ ಸಾಲು ಸತ್ಕಾರವನ್ನು ಒಳಗೊಂಡಿರುತ್ತದೆ. ೨೦ ಅಕ್ಟೋಬರ್ ೨೦೨೪ ತಿಂಗಳಿನಲ್ಲಿ ಸೇವಾ ಸಮಿತಿಯು ಹಮ್ಮಿಕೊಳ್ಳುವ ಪಂ. ಪುಟ್ಟರಾಜ ಸಾಹಿತ್ಯೋತ್ಸವ-೨೦೨೪ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು.ಈ ಪ್ರಶಸ್ತಿಗಾಗಿ ಬಂದ ೧೩೦ ಕ್ಕೂ ಹೆಚ್ಚು ಸಾಹಿತ್ಯ ಕೃತಿಗಳಲ್ಲಿ ಪ್ರಥಮ ಸ್ಥಾನ ಪಡೆದ ಕೃತಿಗಳಾದ ಹುಬ್ಬಳ್ಳಿಯ ಪದ್ಮಜಾ ಜಯತೀರ್ಥ ಉಮರ್ಜಿ ಇವರ ಬೃಂಗದ ಬೆನ್ನೇರಿ (ಕಥಾ ಸಂಕಲನ), ಬಾದಾಮಿಯ ಸುರೇಶ್ ಅರಳಿಮರದರವರ ಹೀಗೇ ಒಂದಿಷ್ಟು (ಕವನ ಸಂಕಲನ) ಧಾರವಾಡದ ಡಾ. ಈರಣ್ಣ ಇಂಜಗನೇರಿ ಇವರ ಫ್ರೀಡಮ್ (ಕಾದಂಬರಿ) ಕೊಪ್ಪಳ ಜಿಲ್ಲೆಯ ಬೈರಾಪುರದ ಎಲ್ಲಪ್ಪ ಮ. ಹರ್ನಾಳಗಿ ಇವರ ತಿರುವು (ಲೇಖನಗಳ ಸಂಗ್ರಹ),…

Read More

ಉದಯರಶ್ಮಿ’ ವರದಿ ಪರಿಣಾಮ | ಅಧಿಕಾರಿಗಳಿಂದ ಸಮಸ್ಯೆ ಆಲಿಕೆ | ಮೊಟ್ಟೆ ಪೂರೈಕೆಗೆ ಕ್ರಮ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಗುಡಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮೊಟ್ಟೆ ಕೊಟ್ಟಿಲ್ಲ ಅಂತಾ ಸೋಮುವಾರ ಪ್ರತಿಭಟಿಸಿದ್ದರು. ಈ ಬಗ್ಗೆ ’ಉದಯರಶ್ಮಿ’ ಪತ್ರಿಕೆ ಸುದ್ದಿ ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆದಿತ್ತು.ಸುದ್ದಿ ಗಮನಿಸಿದ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಮತ್ತು ಸಿಆರ್‌ಪಿ ಎಸ್.ಎಸ್.ಬಾಬಣ್ಣವರ ಮಂಗಳವಾರ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ವಿದ್ಯಾರ್ಥಿಗಳಿಗೆ ಪ್ರತಿದಿನ ಮೊಟ್ಟೆ ಅಥವಾ ಶೇಂಗಾಚಿಕ್ಕಿ ನೀಡುವ ಬಗ್ಗೆ ಇರುವ ನಿಯಮಗಳನ್ನು ವಿವರಿಸಿದರು. ವಿದ್ಯಾರ್ಥಿಗಳು ಅಧಿಕಾರಿಗಳ ಎದುರು ಪ್ರಭಾರ ಮುಖ್ಯ ಶಿಕ್ಷಕ ಸಂಗಮೇಶ ನವಲಿ ಅವರು ವಿದ್ಯಾರ್ಥಿಗಳು ಮೊಟ್ಟೆ ಕೊಡದ ಬಗ್ಗೆ, ಶಾಲೆಗೆ ತಡವಾಗಿ ಬರುವ ಮತ್ತು ಬೇಗನೆ ಹೋಗುವ ಬಗ್ಗೆ ದೂರಿದರೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಈ ಮುಖ್ಯ ಶಿಕ್ಷಕ ನಮ್ಮೂರಿಗೆ ಅಗತ್ಯವಿಲ್ಲ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.ಈ ಎಲ್ಲ ಅಂಶಗಳನ್ನು ಕ್ರೋಢೀಕರಿಸಿದ ಅಧಿಕಾರಿಗಳು ಯಾವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾರ್ವಜನಿಕರು ಹಾಗೂ ಪ್ರಯಾಣಿಕರ ಕುಂದುಕೊರತೆಯನ್ನು ಆಲಿಸಲು ವಿಜಯಪುರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಅಕ್ಟೋಬರ್ ೭ರಂದು ಮಧ್ಯಾಹ್ನ ೩.೩೦ ರಿಂದ ೪.೩೦ರವರೆಗೆ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಮೊಬೈಲ್ ಸಂಖ್ಯೆ ೬೩೬೬೪೨೮೮೭ ಕರೆ ಮಾಡಿ ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ವಿಜಯಪುರ ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಂಯಂತ್ರಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೨೦ ಕೆ.ವಿ ಆಹೇರಿಯಲ್ಲಿ ಟರ್ಮಿನಲ್ ಬೇ ನಿರ್ಮಾಣ ಕಾಮಗಾರಿ ಕೈಗೊಂಡಿದೆ. ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ೧೧೦ಕೆವಿ ಸಿಂದಗಿ, ೧೧೦ಕೆವಿ ಮೋರಟಗಿ, ೧೧೦ಕೆವಿ ಮಲಘಾಣ, ೧೧೦ಕೆವಿ ಚಾಂದಕವಟೆ, ೧೧೦ ಕೆವಿ ಆಲಮೇಲ ಹಾಗೂ ೧೧೦ ಕೆವಿ ದೇವಣಗಾಂವ ಸದರಿ ವಿದ್ಯುತ್ ವಿತರಣಾ ಕೇಂದ್ರದ ಎಲ್ಲಾ ೩೩ ಕೆ.ವಿ ಹಾಗೂ ೧೧ ಕೆ.ವಿ ಮಾರ್ಗಗಳಲ್ಲಿ ಅಕ್ಟೋಬರ್ ೦೪ ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೦೩ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ಸಿಂದಗಿ ತಾಲೂಕ ಪಂಚಾಯತ್ ಸಭಾಭವನದಲ್ಲಿ ಅಕ್ಟೋಬರ್ ೯ ರಂದು ಬೆಳಿಗ್ಗೆ ೧೧ ಗಂಟೆಯಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.ಲೋಕಾಯುಕ್ತ ಪೊಲೀಸ್ ಅಧೀಕ್ಷಕರು (ಮೊ:೯೩೬೪೦೬೨೫೨೮) ಉಪಾಧೀಕ್ಷಕರ (ಮೊ:೯೩೬೪೦೬೨೫೫೭), ಪೊಲೀಸ್ ಇನ್‌ಸ್ಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್ಸಪೆಕ್ಟರ್-೨ (ಮೊ:೯೩೬೪೦೬೨೬೩೯) ಇವರು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಹಾಗೂ ಸರಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂರವಾಣಿ: ೦೮೩೫೨-೨೫೫೩೩೩, ೨೫೭೭೮೬,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಸಾಮಾನ್ಯ ವರ್ಗದ ರೈತರಿಗೆ ೫ ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲು ಅವಕಾಶವಿದ್ದು, ಮೊದಲನೇ ೨ ಹೆಕ್ಟೇರ್ ವರೆಗೆ ಶೇ.೯೦ ರಷ್ಟು ಹಾಗೂ ೨ ಹೆಕ್ಟೇರ್ ಮೇಲ್ಪಟ್ಟು ೫ ಹೆಕ್ಟೇರ್‌ವರೆಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇ.೪೫ರಷ್ಟು ಸಹಾಯಧನ ಪಡೆದುಕೊಳ್ಳಲು ಅವಕಾಶ ವಿರುತ್ತದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು ಈ ಹಿಂದೆ ಅಳವಡಿಸಿಕೊಂಡಿದ್ದ ಸೂಕ್ಷ ನೀರಾವರಿ ಘಟಕ ಹಾಳಾಗಿದ್ದಲ್ಲಿ ಅಥವಾ ಕಾರ್ಯ ನಿರ್ವಹಿಸದೇ ಇದ್ದಲ್ಲಿ ೦೭ ವರ್ಷಗಳ ನಂತರ ಅದೇ ಜಮೀನಿಗೆ ಮತ್ತೊಮ್ಮೆ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಂಡಲ್ಲಿ ಸಹಾಯಧನ ಪಡೆದುಕೊಳ್ಳಲು ಅವಕಾಶವಿರುತ್ತದೆ. ರೈತರು ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More