Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರಂಥ ಮಹಾನ ಚೇತನರ ತತ್ವ, ಸಿದ್ಧಾಂತಗಳು ಜನಮನದ ಹೃದಯದಲ್ಲಿ ನೆಲೆಸಿವೆ.ಅದರಲ್ಲೂ ಭಾರತೀಯರ ಧ್ರುವತಾರೆಯಾಗಿ ಮಿನುಗಿರುವ ಗಾಂಧೀಜಿಯವರ ಸತ್ಯ ಪ್ರೇಮ,ಅಹಿಂಸೆ ನೀತಿಭಾವ ಇಂದಿಗೂ ಪರಮಳಿಸಿವೆ. ಅವು ಸದಾಕಾಲವೂ ಪ್ರಸ್ತುತವಾಗಿವೆ. ಈ ಮಹಾತ್ಮರ ಜೀವನ ಎಂದೂ ಮರೆಯಲಾಗದು ಎಂದು ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಅನಂತಪೂರ ನುಡಿದರು.ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆ ವತಿಯಿಂದ ನಡೆಯುತ್ತಿರುವ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಬುಧವಾರ ಜರುಗಿದ ಗಾಂಧೀಜಿಯವರ 155 ನೇ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ 120 ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭಾರ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ, ಗಾಂಧೀಜಿಯವರ ರಚನಾತ್ಮಕ ಕಾಯಕಗಳು,ಪರಿಕಲ್ಪನೆಗಳು ಸ್ಮರಣೀಯವಾಗಿವೆ. ಈ ಪುಣ್ಯ ಪುರುಷ ಭಾರತೀಯರಿಗಷ್ಟೇ ಅಲ್ಲ, ಜಗತ್ತಿನ ಸ್ಪೂರ್ತಿಯ ಮೂಲವಾಗಿದ್ದಾರೆ ಎಂದರು.ಸಮಾಜ ವಿಜ್ಞಾನ ಶಿಕ್ಷಕಿ ಕವಿತಾ ಅಂಬಿ ಮಾತನಾಡಿ, ಮಹಾತ್ಮ ಗಾಂಧೀಜಿ ನಮಗೆಲ್ಲ ಆದರ್ಶಪ್ರಾಯವಾಗಿದ್ದಾರೆ. ಶಾಸ್ತ್ರೀಜಿಯವರ ಸರಳ, ಸಜ್ಜನಿಕೆಯೂ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶ್ರಮದಾನ ಮಾಡುವ ಮೂಲಕ ಪಟ್ಟಣದ ಸುಂದರತೆಯನ್ನು ಹೆಚ್ಚಿಸಬಹುದು ಎಂಬ ಸಂದೇಶವನ್ನು ಬುಧವಾರ ಪೊಲೀಸರು ರವಾನಿಸಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ನೇತೃತ್ವದಲ್ಲಿ ಬಿಳಿಯ ಬಣ್ಣದ ಟೀ ಶರ್ಟ, ನೀಲಿ ಬಣ್ಣದ ಟ್ರ್ಯಾಕ್ ಪ್ಯಾಂಟ್ ಮತ್ತು ಶೂ ಧರಿಸಿ ಅಖಾಡಕ್ಕಿಳಿದ ಸಿಬ್ಬಂದಿ ಮೂರು ಗಂಟೆಗಳಿಗೂ ಅಧಿಕ ಕಾಲ ಶ್ರಮದಾನ ಮಾಡಿ ಸಾರ್ವಜನಿಕರಿಗೆ ತಂಗಲು ಸುಂದರ ಆಸನಗಳ ವ್ಯವಸ್ಥೆ ಕಲ್ಪಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.ಇವರ ಶ್ರಮದಾನಕ್ಕೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮತ್ತು ಕಚೇರಿಯ ಸಿಬ್ಬಂದಿ ಪಟ್ಟಣದ ಮುಖಂಡರು ಸಾಥ್ ನೀಡಿದರು.ಈ ವೇಳೆ ಸಿಪಿಐ ತುಳಸಿಗೇರಿ ಮಾತನಾಡಿ, ಪಟ್ಟಣದ ಸುಂದರತೆ ಹೆಚ್ಚಿಸಲು ಮೇಲಿಂದ ಮೇಲೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಪುರಸಭೆಯವರೇ ಮಾಡಲಿ ಎಂದು ಕಾಯುವ ಬದಲು ನಮ್ಮ ಕಾರ್ಯವನ್ನು ನಾವೇ ಮಾಡಿಕೊಳ್ಳಬೇಕು ಎನ್ನುವ ಭಾವನೆ ಸಾರ್ವಜನಿಕರಲ್ಲಿ ಬರಬೇಕು. ಎಲ್ಲಂದರಲ್ಲಿ ಕಸ ಬಿಸಾಡುವದು, ರಸ್ತೆಯನ್ನು ಅತಿಕ್ರಮಿಸಿ ಅನಧೀಕೃತವಾಗಿ ಡಬ್ಬಾ ಅಂಗಡಿಗಳನ್ನಿಟ್ಟು ವ್ಯಾಪಾರ ನಡೆಸುವದು ಮಾಡಬಾರದು.…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಕೆಪಿಆರ್ ಸಕ್ಕರೆ ಕಾರ್ಖಾನೆಯು ಕಬ್ಬು ಕಟಾವುದಾರರಿಗೆ ಹೆಚ್ಚುವರಿ ಬಾಕಿ ಹಣ ನೀಡದಿರುವದನ್ನು ಖಂಡಿಸಿ ಕಳೆದ ನಾಲ್ಕುದಿನಗಳಿಂದ ಕಬ್ಬು ಕಟಾವುದಾರರು ದರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ ಮಾಡಿದರು.ಕಬ್ಬು ಕಟಾವುದಾರರ ಟ್ರಾಕ್ಟರ್ ಮಾಲಿಕರಾದ ಬಸುಗೌಡ ಬಿರಾದಾರ, ಶಶೀಧರ ನಾಯ್ಕೋಡಿ ಮುಂತಾದವರು ಮಾತನಾಡಿ, ಸರ್ಕಾರದ ನಿದೇರ್ಶನದಂತೆ ಎಪ್‌ಆರ್‌ಪಿ ಪ್ರಕಾರ ಕಬ್ಬು ಕಟವುದಾರರಿಗೆ ಪ್ರತಿ ಟನ್ ಕಬ್ಬಿಗೆ ೩೨೫ರೂ ನೀಡಿದ್ದು ಹೆಚ್ಚುವರಿಯಾಗಿ ೧೧೪ರೂ ನೀಡಬೇಕು ಎಂದು ಆದೇಶವಿದ್ದು, ಈ ನಿಯಮದಂತೆ ಇಗಾಗಲೆ ಪಕ್ಕದ ಮಾರಾಷ್ಟ್ರದಲ್ಲಿನ ಎಲ್ಲ ಸಕ್ಕರೆ ಕಾರ್ಖಾನೆಗಳು ಮತ್ತು ಕರ್ನಾಟಕ ಅನೇಕ ಸಕ್ಕರೆ ಕಾರ್ಖಾನೆಗಳು ಹೆಚ್ಚುವರಿ ಹಣ ನೀಡಿದ್ದು ಆಲಮೇಲ ಕೆಪಿಆರ್ ಕಾರ್ಖಾನೆ ಇನ್ನುವರೆಗೂ ನೀಡಿಲ್ಲ ಕೆಳಿದರೆ ಯಾವುದೆ ಸ್ಪಂದನೆ ನೀಡುತ್ತಿಲ್ಲ, ಈ ಬಗ್ಗೆ ತಹಶೀಲ್ದಾರ, ಉಪ ವಿಭಾಗಾಧಿಕಾರಿಗಳಿಗೆ, ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗದ್ದರಿಂದ ಕಳೆದ ನಾಲ್ಕುದಿನಗಳಿಂದ ಕೆಪಿಆರ್ ಕಾರ್ಖಾನೆ ಮುಂದೆ ಧರಣಿ ಸತ್ಯಾಗ್ರಹ ಆರಂಬಿಸಿದ್ದೇವೆ ಎಂದರು.ವಿಷಯ ತಿಳಿದು…

Read More

ಸಿಂದಗಿ ವಿವಿಧೆಡೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇಶದ ಸ್ವಾತಂತ್ರ‍್ಯಕ್ಕಾಗಿ ಅನೇಕ ಚಳುವಳಿ ಹಾಗೂ ಹೋರಾಟಗಳನ್ನು ರೂಪಿಸಿ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ‍್ಯ ಚಳುವಳಿಯನ್ನು ಮುನ್ನಡೆಸಿದ ಮಹಾತ್ಮ ಗಾಂಧಿಯವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವರ ಹಾದಿಯಲ್ಲಿ ಸಾಗೋಣ ಎಂದು ಪದ್ಮರಾಜ ಮಹಿಳಾ ಕಾಲೇಜಿನ ಉಪನ್ಯಾಸಕಿ ಹೇಮಾ ಹಿರೇಮಠ ಹೇಳಿದರು.ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಶ್ರೀ ಸಂಗಮೇಶ್ವರ ಪಾರ್ಮಸಿ ಹಾಗೂ ಕಾವ್ಯಾ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಆಚರಣೆಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಅವರ ಸತ್ಯ, ಸಮಾನತೆ, ಅಹಿಂಸೆ, ಶಾಂತಿಯ ಬಹುದೊಡ್ಡ ಪ್ರತಿಪಾದಕರಾಗಿದ್ದಾರೆ. ಇಂದು ವಿಶ್ವದಾದ್ಯಂತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.ಈ ವೇಳೆ ಕಾನಿಪ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಕಸಾಪ ಅಧ್ಯಕ್ಷ ಶಿವಾನಂದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮುಂದಿನ ವರ್ಷ ಗಾಂಧಿ ಜಯಂತಿ ಎನ್ನುವಷ್ಟರಲ್ಲಿ ಅತ್ಯದ್ಭುತವಾದ ನೂತನ ಗಾಂಧಿ ಪುತ್ಥಳಿಯನ್ನು ನಗರದಲ್ಲಿರುವ ಗಾಂಧಿ ವೃತ್ತದಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡ ಮಹಾತ್ಮ ಗಾಂಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕೊಡುಗೆ ಅಪಾರವಾದದ್ದು, ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಗಳ ಮೂಲಕ ದೇಶದಲ್ಲಿ ಜನಸ್ನೇಹಿ ಆಡಳಿತವನ್ನು ನೀಡಿದ ಅಪರೂಪದ ಪ್ರಧಾನಿಯಾಗಿದ್ದಾರೆ. ಗಾಂಧಿ ಅವರ ಬದುಕು ಮತ್ತು ಶಾಸ್ತ್ರೀಜಿ ಅವರ ಜೀವನ ಶೈಲಿ ನಮಗೆಲ್ಲ ಮಾದರಿಯಾಗಬೇಕು. ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮಕ್ಕೂ ಮುಂಚೆ ೧೯೨೪ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂದೀಜಿ ಅವರು ವಹಿಸಿ ೧೦೦ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಎಪಿಎಂಸಿ ಯಾರ್ಡನಲ್ಲಿರುವ ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಿಂದ ಸಂಗೋಳ್ಳಿ ರಾಯಣ್ಣ ವೃತ್ತ, ಅಂಬಿಗರ ಚೌಡಯ್ಯ ವೃತ್ತ,…

Read More

2400 ಜನರಿಗೆ ಸ್ವಂತ ಖರ್ಚಿನಲ್ಲಿ ಉಚಿತ ಕಾಶಿ ಯಾತ್ರೆ ಮಾಡಿಸಿದ ಮುತ್ತಿನ ಸಹೋದರರು ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಪ್ರಸಿದ್ಧ ಜವಳಿ ವರ್ತಕರಾದ ಅಜಿತ ಮುತ್ತಿನ ಅವರು ಕಳೆದ ವಾರ 2400 ಜನರನ್ನು 1 ವಾರದ ಕಾಲ ತಮ್ಮ ಸ್ವಂತ ಖರ್ಚಿನಲ್ಲಿ ಕಾಶಿ ಯಾತ್ರೆಗೆ ಕರೆದುಕೊಂಡು ಯಶಸ್ವಿಯಾಗಿ ಹೋಗಿ ಬಂದ ಹಿನ್ನಲೆಯಲ್ಲಿ ಮುತ್ತಿನ ಸಹೋದರರ ಈ ಮಹತರ ನಿಸ್ವಾರ್ಥ ಸೇವೆಯನ್ನು ಕೊಂಡಾಡಿದ ಬ್ಯಾಂಕ್ ಆಫ್ ಬರೋಡ ಶಾಖೆ ನಿವರಗಿ ಸಿಬ್ಬಂದಿ ಅಜಿತ್ ಮುತ್ತಿನ ದಂಪತಿಗೆ ಸನ್ಮಾನಿಸಿ, ಗೌರವಿಸಿದರು.ಕಳೆದ ಏಳೆಂಟು ವರ್ಷಗಳಿಂದ ಪ್ರಸಿದ್ಧ ಜವಳಿ ವ್ಯಾಪಾರಸ್ಥರಾದ ಮುತ್ತಿನ ಸಹೋದರರು ಉಚಿತ ಯಾತ್ರೆ ಕೈಗೊಳ್ಳುತ್ತಿದ್ದು, ಈ ಬಾರಿಯೂ ತಮ್ಮ ಸ್ವಂತ ಆದಾಯದಲ್ಲಿನ ಸುಮಾರು 2 ಕೋಟಿ ರೂ. ವೆಚ್ಚವನ್ನು ಭರಿಸಿ, ಉಚಿತವಾಗಿ ಒಂದು ವಾರದ ಕಾಶಿ ಯಾತ್ರೆ ಆಯೋಜಿಸಿದ್ದರು.ಈ ಸಂದರ್ಭದಲ್ಲಿ ನಿವರಗಿಯ ಬ್ಯಾಂಕ್ ಆಫ್ ಬರೋಡ ಶಾಖಾ ವ್ಯವಸ್ಥಾಪಕರಾದ ಸಂತೋಷ ಹಿಟ್ನಳ್ಳಿ ಮಾತನಾಡಿ, ಇವರ ಸಮಾಜಮುಖಿ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಅವರ ಸೇವಾ ಮನೋಭಾವ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸತ್ಯ ಮತ್ತು ಅಹಿಂಸೆ ಪ್ರತಿಪಾದಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ,155 ನೇ ಹಾಗೂ ಜೈ ಜವಾನ್ ಜೈ ಕಿಸಾನ್ ಎಂದ ಲಾಲ್ ಬಹದ್ದೂರ್ ಶಾಸ್ತ್ರಿಯವರ,120 ನೇ ಜನ್ಮದಿನದ ಅಂಗವಾಗಿ ಉಭಯ ನಾಯಕರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯ ಸರ್ಕಾರ, ರಾಯಚೂರು ವಿಶ್ವವಿದ್ಯಾಲಯ ರಾಯಚೂರು, ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆಂಭಾವಿ ಸಹಯೋಗದಲ್ಲಿ ಸೆಪ್ಟೆಂಬರ್ 17 ರಿಂದ 02 ಅಕ್ಟೋಬರ್ ವರೆಗೆ ಹಮ್ಮಿಕೊಂಡಿದ್ದ”ಸ್ವಚ್ಛತೆಯೇ ಸೇವೆ” ಎಂಬ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಅಭಿಯಾನದಲ್ಲಿ ಪಾಲ್ಗೊಂಡು ಮೆರುಗು ತಂದು ಕೊಟ್ಟರು.ಇದೇ ಸಂದರ್ಭದಲ್ಲಿ ಪುರಸಭೆ ನಾಮನಿರ್ದೇಶಿತ ಸದಸ್ಯ ಶಿವಶಂಕರ ಖಾನಾಪುರ, ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕು ಸಮಿತಿ ಸದಸ್ಯ ಆನಂದ ಎಂ ವಜ್ಜಲ್, ಮಾಜಿ ಗ್ರಾಪಂ ಅಧ್ಯಕ್ಷ ಸೋಮಲಿಂಗಪ್ಪ ದೊಡ್ಮನಿ, ಪ್ರಾಂಶುಪಾಲ ಡಾ ನಾಗಪ್ಪ ಚಾವಲ್ಕರ್, ಉಪನ್ಯಾಸಕರಾದ ಡಾ ಸಿದ್ದಲಿಂಗ ರಾಠೋಡ್,…

Read More

ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕಾರ್ಯವೈಖರಿಗೆ ಸಚಿವ ಸಂತೋಷ ಲಾಡ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಈ ನಾಡಿನ ಮಕ್ಕಳಿಗಾಗಿ ಹಾಗೂ ಅದರಲ್ಲೂ ವಿಶೇಷವಾಗಿ ರಾಜ್ಯಾದ್ಯಂತ ಇರುವ ಬಾಲಮಂದಿರದ ಮಕ್ಕಳಿಗಾಗಿ ಹಮ್ಮಿಕೊಂಡಿರುವ ವಿಶೇಷ ಹೃದಯಸ್ಪರ್ಶಿ ಕಾರ್ಯಕ್ರಮಗಳನ್ನು ಕಂಡಾಗ ಹೃದಯ ತುಂಬಿ ಬರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸ್ನೇಹಿತರಾದ ಸಚಿವ ಎಂ.ಬಿ.ಪಾಟೀಲರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ನಮ್ಮ ಸರ್ಕಾರ ಸೂಕ್ತ ವ್ಯಕ್ತಿಯನ್ನು ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರನ್ನಾಗಿ ಮಾಡಿದೆ ಎಂದು ಸಚಿವ ಸಂತೋಷ ಲಾಡ ಶ್ಲಾಘಿಸಿದರು.ಧಾರವಾಡದ ಹೊರವಲಯ ಹಳ್ಳಿಗೇರಿಯ ಸಮೀಪದಲ್ಲಿರುವ ನೇಚರ್ ಫಸ್ಟ್ ಇಕೋ ವಿಲೇಜ್ ನಲ್ಲಿ ರಾಜ್ಯದ ಬಾಲಮಂದಿರದ ಮಕ್ಕಳಿಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಆಯೋಜಿಸಿರುವ ರಾಜ್ಯ ಮಟ್ಟದ ಕಥಾ ಕಮ್ಮಟ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಾತ್ಮ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಜಯಂತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.ಸಂಗಮೇಶ ರಂತಹ ತಾಯಿ ಹೃದಯದ ಗೆಳೆಯ ನನ್ನ ಸ್ನೇಹಿತರಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮಧ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದಡಿ ಚಹಾ ಅಂಗಡಿಯ ಮಾಲೀಕನೊಬ್ಬನ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಾಲೂಕಿನ ಕುಂಟೋಜಿ ಗ್ರಾಮದ ಶೇಕಪ್ಪ ಹೂಗಾರ ಮೇಲೆ ಪ್ರಕರಣ ದಾಖಲಾಗಿದ್ದು ಗ್ರಾಮದ ಬಸವೇಶ್ವರ ವೃತ್ತದ ಬಳಿ ಇರುವ ತನ್ನ ಚಹಾದ ಅಂಗಡಿಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವನೆ ಮಾಡಲು ಗ್ಲಾಸು, ನೀರು ಮತ್ತು ತಿನಿಸು ಕೊಟ್ಟು ಪ್ರಕರಣಕ್ಕೆ ದಾರಿ ಮಾಡಿಕೊಂಡಿದ್ದಾನೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿಕ್ಷಕ ಮತ್ತು ವಿದ್ಯಾರ್ಥಿಗಳ ಅವಿನಾಭಾವ ಬಾಂಧವ್ಯ ಇರುತ್ತದೆ. ಶಿಕ್ಷಕರ ಸ್ಥಾನ ಜವಾಬ್ದಾರಿಯುತ ಆಗಿದ್ದು, ವಿದ್ಯಾರ್ಥಿಗಳು ಸಮಾಜದ ಪ್ರಗತಿಗೆ ಸೇವೆ ಸಲ್ಲಿಸಿದಾಗ ಶಿಕ್ಷಕನ ಸೇವೆ ಸಾರ್ಥಕವಾಗುತ್ತದೆ. ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್‌ರವರು ಹೇಳಿದರು.ಬಂಜಾರಾ ಶಿಕ್ಷಣ ಸಂಸ್ಥೆಯಲ್ಲಿ ಸುರ್ದಿರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ನೆರವೇರಿಸಿ ಮಾತನಾಡಿದ ಅವರು. ಶಿಕ್ಷಕ ವಿದ್ಯಾರ್ಥಿಗಳಿಗೆ ಬರೀ ಜೌಪಚಾರಿಕ ಶಿಕ್ಷಣ ಮಾತ್ರ ನೀಡದೇ ಸಂಸ್ಕಾರಯುತ ಬೋಧನೆಯೊಂದಿಗೆ ಬದುಕಿನ ಸವಾಲುಗಳನ್ನು ಎದುರಿಸಲು ಕೌಶಲಗಳನ್ನು ಕರಗತ ಮಾಡಿಕೊಡುತ್ತಾನೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದೀರ್ಘ ಸೇವೆ ಸಲ್ಲಿಸಿ ತಮ್ಮ ಇಳಿ ಪ್ರಾಯದಲ್ಲೂ ವಿವಿಧ ಕ್ಷೆತ್ರಗಳಲ್ಲಿ ನಿಸ್ಪೃಹ ಸೇವೆ ಸಲ್ಲಿಸುತ್ತಿರುವ ನಿವೃತ್ತ ಶಿಕ್ಷಕರಾಗಿರುವ ಬಿ.ಡಿ.ಚವ್ಹಾಣ್, ಬಿ.ಎಸ್.ಕುಂಬಾರ, ಎ.ಪಿ.ಕಳಸರಡ್ಡಿ, ಎಸ್.ವ್ಹಿ.ಬುರ್ಲಿ, ಎಸ್.ವ್ಹಿ.ದೇಶಪಾಂಡೆ ಹಾಗೂ ಜಿ.ಎ.ಉಗಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆಯಲ್ಲಿ ತಿಡಗುಂದಿ, ಜಾಲಗೇರಿ, ಕಳಬಳಗಿ ಹಾಗೂ ನಗರದ ಬಂಜಾರಾ ಪ್ರಾಥಮಿಕ ಹಾಗೂ ಪ್ರೌಢ…

Read More