Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅವ್ಯಾಹಿತವಾಗಿ ನಡೆಯುತ್ತಿರುವ ಗೃಹ ಬಳಕೆ ಅಡುವೆ ಸಿಲೆಂಡರ್ಗಳನ್ನು ಅಕ್ರಮವಾಗಿ ಆಟೋಗಳಿಗೆ ಸರಬರಾಜು ಮಾಡುತ್ತಿರುವ ದಂಧೆಯು ವಿಜಯಪುರದಲ್ಲಿ ತಲೆ ಎತ್ತಿದ್ದು, ಈ ಅಕ್ರಮ ಅನೀಲ ಸರಬರಾಜು ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಂಗಮೇಶ ಸಿದ್ದನಗೌಡ ದಾಶ್ಯಾಳ ಮಾತನಾಡಿ, ವಿಜಯಪುರ ನಗರದಲ್ಲಿ ಬಹಳ ವರ್ಷಗಳಿಂದ ಅಕ್ರಮವಾಗಿ ಗೃಹ ಬಳಕೆ ಆಡುವೆ ಸಿಲೆಂಡರ್ಗಳನ್ನು ಆಟೋರಿಕ್ಷಾಗಳಿಗೆ ಸರಬರಾಜು ಮಾಡುತ್ತಿರುವ ಸಂಗತಿಯ ಬಗ್ಗೆ ಕ್ರಮಕೈಗೊಳ್ಳುವಂತೆ ಈ ಮೊದಲು ಮನವಿ ಸಲ್ಲಿಸಲಾಗಿತ್ತು. ಆದರೂ ಸಹ ಇಲ್ಲಿಯವರೆಗೆ ಕ್ರಮ ಕೈಗೊಂಡಿರುವದಿಲ್ಲ. ಈ ಬಗ್ಗೆ ಆಹಾರ ಇಲಾಖೆಯು ಇಂತಹ ದಂಧೆಯಲ್ಲಿ ತೊಡಗಿರುವವರ ಮೇಲೆ ಯೋಗ್ಯ ಕಾನೂನು ಕ್ರಮಕೈಗೊಳ್ಳಬೇಕು. ಹಾಗೂ ಅಕ್ರಮ ಸಿಲೆಂಡರ್ ಸರಬರಾಜು ದಂಧೆಗೆ ಕಡಿವಾಣ ಹಾಕಬೇಕೆಂದು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಿಂಟು ಗೊಬ್ಬೂರ, ಮುಕದ್ಸಸ್ ಇನಾಮದಾರ, ಸಿದ್ರಾಮ ಹೋಳಿ, ಆನಂದ ಹುನ್ನೂರ, ಶಿವರಾಜಗೌಡ ಪಾಟೀಲ, ಅಶೋಕ ಕೊಡಗ, ವಿರೇಶ ಪಾಟೀಲ, ಉಮೇಶ…
ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ (ಜಮಖಂಡಿ ): ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2024-25 ನೇ ಸಾಲಿನ ಜಿಲ್ಲಾ ಮಟ್ಟದ 17 ವಯೋಮಿತಿ ಒಳಗಿನ ಪ್ರೌಢಶಾಲೆಗಳ 55 ಕೆಜಿ ವಿಭಾಗದ ಕುಸ್ತಿ ಪಂದ್ಯದಲ್ಲಿ ಚಿಕ್ಕಪಡಸಲಗಿ ಶಾಲಾ ಬಾಲಕನೊಬ್ಬ ಅಮೋಘ ಸಾಧನಗೈದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ.ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆ ವತಿಯಿಂದ ನಡೆಯುತ್ತಿರುವ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆ ವಿದ್ಯಾಥಿ೯ ಮಹೇಶ ಅಡಿಹುಡಿ ಜಿಲ್ಲಾ ಮಟ್ಟದ ಕುಸ್ತಿ ಸ್ಪಧೆ೯ಯಲ್ಲಿ ಚಾಕಚಕ್ಕತೆಯ ಆಟವನ್ನಾಡಿ ಜಯದ ಮಾಲೆಯನ್ನು ಧರಿಸಿಕೊಂಡು ಸಾಧನೆ ಮೆರೆದಿದ್ದಾನೆ.ಪ್ರಸ್ತುತ ಹರಳಯ್ಯ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ಕ್ರೀಡಾಪಟು ಮಹೇಶ ಅಡಿಹುಡಿ ಕುಸ್ತಿ ಆಟದ ಕೌಶಲ್ಯ ತಂತ್ರಗಳನ್ನು ಮೈಗೂಡಿಸಿಕೊಂಡು ಭರವಸೆ ಮೂಡಿಸಿ ಗಮನ ಸೆಳೆದಿದ್ದಾನೆ.ಮಹೇಶ ಅಡಿಹುಡಿ ಅಂತಿಮ ಹಂತದ ಕುಸ್ತಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಗೈದು ಸಂಸ್ಥೆ, ಶಾಲೆ, ಗ್ರಾಮಕ್ಕೆ ಕೀತಿ೯ ತಂದಿದ್ದಕ್ಕೆ ಹಾಗೂ ಆ ನಿಟ್ಟಿನಲ್ಲಿ ಉತ್ತಮವಾಗಿ ತರಬೇತಿಗೊಳಿಸಿದ ಹಿರಿಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒಬ್ಬ ರಕ್ತದಾನಿ ೩ ಜೀವಗಳನ್ನು ಉಳಿಸಬಹುದು. ಕಾರಣ ಯುವಕ, ಯುವತಿಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸಂಪತಕುಮಾರ ಗುಣಾರಿ ಕರೆ ನೀಡಿದರು.ನಗರದ ಸರಕಾರಿ ಪಾಲಟೆಕ್ನಿಕ್ ಕಾಲೇಜಿನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ -೨೦೨೪ ಉದ್ಘಾಟಿಸಿ ಅವರು ಮಾತನಾಡಿದರು.ರಕ್ತದಾನ ಮಾಡಿದ ನಂತರ ೫ ಕಾಯಿಲೆಗಳ ಬಗ್ಗೆ ಪರೀಕ್ಷೆ ಮಾಡಿ ಅದರಲ್ಲಿ ಯಾವದೇ ಸಮಸ್ಯೆ ಇಲ್ಲವೆಂದು ಖಾತರಿಪಡಿಸಿಕೊಂಡ ಬಳಿಕವೇ ಬೇರೆಯವರಿಗೆ ರಕ್ತವನ್ನು ನೀಡಲಾಗುವುದು. ಪ್ರತಿಯೊಬ್ಬರೂ ರಕ್ತದಾನ ಮಾಡಿದಾಗ ಮಾತ್ರ ಬೇರೆಯವರಿಗೆ ರಕ್ತವನ್ನು ಪೂರೈಸಲು ಸಾದ್ಯವಾಗುತ್ತದೆ ಎಂದು ಡಾ.ಸಂಪತಕುಮಾರ ಸಲಹೆ ನೀಡಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಮಾತನಾಡಿ, ನಮ್ಮ ಜಿಲ್ಲೆಗೆ ಬೇಕಾದ ರಕ್ತವನ್ನು ಪೂರೈಕೆಯಾಗಬೇಕಾದರೆ ಆರೋಗ್ಯವಂತ ಯುವಕ/ಯುವತಿಯರು ರಕ್ತದಾನ ಮಾಡಿದಾಗ ಮಾತ್ರ ಸಾಧ್ಯ. ದೇಹಕ್ಕೆ ವಯಸ್ಸಾದರು ಸಹ ಯುವಕರಂತೆ ಕಾಣಬೇಕಾದರೆ ನಿರಂತರವಾಗಿ ರಕ್ತದಾನ ಮಾಡಬೇಕು ಎಂದು ಹೇಳಿದರು.ಅಧ್ಯಕ್ಷತೆಯನ್ನು ಸರಕಾರಿ ಪಾಲಟೆಕ್ನಿಕ್ ಕಾಲೇಜು ಪ್ರಾಚಾರ್ಯಎಸ್.ಬಿ.ಜವಳಿ ವಹಿಸಿದ್ದರು.ಜಿಲ್ಲಾ ಏಡ್ಸ್/ಕ್ಷಯರೋಗ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಶಿಕ್ಷಣ ಮನುಷ್ಯನಿಗೆ ಆಭರಣವಿದ್ದಂತೆ, ಒಂದು ದೇಶದ ಪ್ರಗತಿಗೆ ಶಿಕ್ಷಣ ಮುಖ್ಯ. ರಾಜಕೀಯ ಜೀವನದಲ್ಲಿ ಅತೀ ಹೆಚ್ಚು ಶಿಕ್ಷಣಕ್ಕೆ ಮಹತ್ವ ನೀಡಿದ್ದೇನೆ. ಮುಂಬರುವ ದಿನಗಳಲ್ಲಿ ಬೇರೆ ಬೇರೆ ವಿಧದಲ್ಲಿ ಶಿಕ್ಷಣ ಅಭಿವೃದ್ದಿಪಡಿಸೋಣ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ತಾಲೂಕಿನ ಪಡನೂರ ಗ್ರಾಮದ ವ್ಹಿ.ವಾಯ್.ಪಾಟೀಲ ಪ್ರೌಢ ಶಾಲೆಯ ನೂತನ ಶಾಲಾ ಕೋಣೆಗಳ ಉದ್ಘಾಟನೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಪಡನೂರ ನೂತನ ಸ್ಮಾರ್ಟ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ಸಮಾಜದ ಪರಿವರ್ತನೆ ಶಿಕ್ಷಣ ಕೇಂದ್ರದಿಂದ ಮಾತ್ರ ಸಾದ್ಯ, ವಿದ್ಯಾರ್ಥಿಗಳು ಉತ್ತಮ ಸಮಾಜದ ನಿರ್ಮಾತೃಗಳಾಗಲಿ ಎಂದು ಹೇಳಿದರು.ಸಾನಿಧ್ಯವಹಿಸಿದ ಅಂತರಾಷ್ಟ್ರೀಯ ಗುರುದೇವ ಯೋಗಾಶ್ರಮ ಬಾಲಗಾಂವ-ಕಾತ್ರಾಳ ಡಾ.ಅಮೃತಾನಂದ ಮಹಾಸ್ವಾಮಿಜಿ ಆಶೀರ್ವಚನ ನೀಡಿದರು.ಸಾಹಿತಿ ಮಲ್ಲಿಕಾರ್ಜುನ ಮೇತ್ರಿ, ಡಾ.ಬಸವಾನಂದ ಮಹಾಸ್ವಾಮಿಗಳು, ಸಿದ್ದರಾಮೇಶ್ವರ ಪಟ್ಟದ ದೇವರು ಸಾನಿಧ್ಯ ವಹಿಸಿದ್ದರು.ಶರಣಬಸಪ್ಪಾ ಎನ್.ಕೆ, ಧನರಾಜ ಮುಜಗೊಂಡ ಮಾತನಾಡಿದರು.ಪಡನೂರ ಗ್ರಾಪಂ ಅಧ್ಯಕ್ಷ ಷಡಕ್ಷರಿ ಮೇತ್ರಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಸೌದಾಗರ, ಉಪವಿಭಾಗಾಧಿಕಾರಿ ಅಬೀದ ಗದ್ಯಾಳ, ತಹಶೀಲ್ದಾರ ಬಿ.ಎಸ್ ಕಡಕಭಾವಿ, ಪೊಲೀಸ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ಒಟ್ಟು ೧೧ ಕೇಂದ್ರಗಳಲ್ಲಿ ಅಕ್ಟೋಬರ್ ೦೩ರಂದು ಜರುಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು ೪,೯೨೦ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ ೧೦-೩೦ರಿಂದ ೧೨-೦೦ರವರೆಗೆ ಪತ್ರಿಕೆ-೧ ಹಾಗೂ ಮಧ್ಯಾಹ್ನ ೧೨-೩೦ರಿಂದ ಮಧ್ಯಾಹ್ನ ೨-೦೦ ರವರೆಗೆ ಪತ್ರಿಕೆ-೨ರ ಪರೀಕ್ಷೆಗಳು ನಡೆಯಲಿವೆ.ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಎಲ್ಲಾ ಸಿಸಿಟಿವಿ ಕ್ಯಾಮಾರಾಗಳ ವಿಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್…
ಸೇವೆಯಿಂದ ವಯೋನಿವೃತ್ತಿ ಹೊಂದಿದ ವಾರ್ತಾ ಇಲಾಖೆ ವಾಹನ ಚಾಲಕ ಜಿ.ಬಿ.ತಾಟೆ ಗೆ ಆತ್ಮೀಯ ಬೀಳ್ಕೊಡುಗೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಜಯಪುರ ಕಚೇರಿಯಲ್ಲಿ ಕಳೆದ ೨೭ ವರ್ಷಗಳಿಂದ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ಸೆ.೩೦ರಂದು ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ ವಾಹನ ಚಾಲಕರಾದ ಜಿ.ಬಿ.ತಾಟೆ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಂಡ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಅವರು ಮಾತನಾಡಿ, ಈ ಕಚೇರಿಯಲ್ಲಿ ಕಳೆದ ೨೭ ವರ್ಷಗಳಿಂದ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಪತ್ರಕರ್ತರು ಸೇರಿದಂತೆ ಕಚೇರಿ ಸಿಬ್ಬಂದಿಯೊಂದಿಗೆ ಅತ್ಯಂತ ಪ್ರೀತಿ, ವಿಶ್ವಾಸದಿಂದ ಯಾರ ಮನಸ್ಸಿಗೆ ನೋವು ಬಾರದ ಹಾಗೆ ನಡೆದುಕೊಳ್ಳುವ ಮೂಲಕ ಸರ್ಕಾರಿ ಸೇವೆಗೆ ವಿಶೇಷ ಗೌರವವನ್ನು ನೀಡಿ, ಇತರರಿಗೂ ಮಾದರಿಯಾಗಿದ್ದಾರೆ. ಇವರ ಮುಂದಿನ ನಿವೃತ್ತಿ ಜೀವನವು ಅತ್ಯಂತ ಸುಖಕರವಾಗಿರಲಿ ಎಂದು ಅವರು ಹಾರೈಸಿದರು.ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಪ್ರಥಮ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಗು ಹಾಗೂ ವೈಯಕ್ತಿಕ ಆರೋಗ್ಯಕ್ಕಾಗಿ ತಾಯಂದಿರು ಪೌಷ್ಟಿಕಾಂಶಗಳನ್ನು ಒಳಗೊಂಡ ಆಹಾರ ಸೇವನೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಸಿಂದಗಿ ತಾಲ್ಲೂಕು ಸಿಡಿಪಿಓ ಎಸ್.ಎನ್.ಹಿರೇಮಠ ಹೇಳಿದರು.ಪಟ್ಟಣದ ಕರಿದೇವರ ದೇವಸ್ಥಾನದ ಆವರಣದಲ್ಲಿ ಸೋಮವಾರ ಜರುಗಿದ ರಾಷ್ಟ್ರೀಯ ಪೋಷಣಾ ಅಭಿಯಾನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಇಲಾಖೆ ಅಡಿಯಲ್ಲಿ ದೊರೆಯುವಂತ ಸೌಲಭ್ಯಗಳನ್ನು ಮನೆ, ಮನಗಳಿಗೆ ತಲುಪಿಸಲು ಕಾರ್ಯಕರ್ತೆಯರು ಶ್ರಮವಹಿಸಬೇಕು ಎಂದರು.ಎಸಿಡಿಪಿಓ ಎಸ್.ಎನ್.ಕೋರವಾರ ಮಾತನಾಡಿ, ಇಂದಿನ ದಿನಗಳಲ್ಲಿ ಹಳೆಯ ಆಹಾರ ಪದ್ಧತಿ ಮರೆಯಾಗುತ್ತಿದೆ. ಇದರಿಂದ ಮಹಿಳೆ ಹಾಗೂ ಮಕ್ಕಳ ಆರೋಗ್ಯದ ಮೇಲೆ ಪರಿಣಾಮಗಳಾಗುತ್ತಿವೆ. ಆದ್ದರಿಂದ ನಾವು ಕಾಳು, ಹಣ್ಣು, ಹಂಪಲು, ತರಕಾರಿ ಸೇರಿದಂತೆ ಸಿರಿಧಾನ್ಯಗಳನ್ನು ಆಹಾರದಲ್ಲಿ ಸಮಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂದರು.ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಮಕ್ಕಳ ಭದ್ರ ಬುನಾದಿಗೆ ಶಿಕ್ಷಕಿಯರ ಪ್ರಾಮಾಣಿಕ ಪ್ರಯತ್ನ ಅಗತ್ಯವಾಗಿದೆ ಎಂದರು. ನಂತರ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನಪ್ರಾಶನ, ಹೆಣ್ಣುಮಗುವಿನ ಜನ್ಮದಿನಾಚರಣೆ, ಚಿಕ್ಕಮಕ್ಕಳ ಛದ್ಮವೇಶ ಜರುಗಿ ಉಡುಗೊರೆ ನೀಡಲಾಯಿತು.ಗ್ರಾಮಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ,…
ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ತಾಲೂಕಿನ ಮಣೂರ ಗ್ರಾಮದ ಕೆ.ಎಸ್.ಎಲ್.ಎ ಪ್ರೌಢಶಾಲಾ ವಿದ್ಯಾರ್ಥಿಗಳು ೨೦೨೪-೨೫ನೇ ಸಾಲಿನ ಪ್ರೌಢಶಾಲಾ ವಿಭಾಗದ ಬಾಲಕರ ತಾಲ್ಲೂಕು ಮಟ್ಟದ ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಶ್ರೀವೆಂಕಟೇಶ್ವರ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಎಲ್.ಆರ್.ಅಂಗಡಿ, ಮುಖ್ಯಶಿಕ್ಷಕ ಎಸ್.ಸಿ.ಕಿತ್ತೂರ, ದೈಹಿಕ ಶಿಕ್ಷಕ ಎಸ್.ಡಿ.ಆನೆಗುಂದಿ, ಶಿಕ್ಷಕ ಸಿಬ್ಬಂದಿ ಪ್ರಕಾಶ ನಾಯಿಕ್, ಮೋಹನ ಸಜ್ಜನ ಇದ್ದರು.
ಉದಯರಶ್ಮಿ ದಿನಪತ್ರಿಕೆ ಬೀಳಗಿ: ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ವಿದ್ಯಾರ್ಥಿಗಳಿಗೆ ಜ್ಞಾನ ದಾಸೋಹ ನೀಡಿದ್ದೇನೆ. ವೃತ್ತಿಯಲ್ಲಿ ಸಮಯ ಪಾಲನೆ, ಶಿಸ್ತುಬದ್ಧತೆ ಮತ್ತು ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಅಕ್ಷರ ಕಲಿಸಿದ್ದೇನೆ ಎಂದು ಸಾಹಿತಿ – ಶಿಕ್ಷಕ ಬಾಳನಗೌಡ ಎಸ್ ಪಾಟೀಲ ಹೇಳಿದರು.ಬೀಳಗಿ ತಾಲೂಕು ಯಡಹಳ್ಳಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ, ವರ್ಗಾವಣೆಗೊಂಡ ಪ್ರಯುಕ್ತ ಏರ್ಪಡಿಸಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ೨೬ ವರ್ಷಗಳ ಕಾಲ ಯಡಹಳ್ಳಿಯಲ್ಲಿ ಕೈಗೊಂಡ ಶಿಕ್ಷಕ ವೃತ್ತಿ ನನಗೆ ತೃಪ್ತಿ ತಂದಿದೆ. ವರ್ಗ ಕೋಣೆಯಲ್ಲಿ ದೇವಾಲಯ ಮತ್ತು ಸಮಾಜ ಕಂಡಿದ್ದೇನೆ. ೨೬ ವರ್ಷದ ಸೇವೆಗೆ ಅವಕಾಶ ನೀಡಿದ ಯಡಹಳ್ಳಿ ನಾಗರಿಕರಿಗೆ, ಸಹೋದ್ಯೋಗಿಗಳಿಗೆ ಮತ್ತು ಅಧಿಕಾರಿಗಳಿಗೆ ಋಣಿಯಾಗಿದ್ದೇನೆ ಎಂದರು.ಹಿಂದಿನ CRP ಶಿಕ್ಷಕ ಜಗದೀಶ ಮುಚ್ಚಂಡಿ ಮಾತನಾಡಿ, ಬಾಳನಗೌಡ ಪಾಟೀಲ ಶಿಕ್ಷಕರು ಕೇವಲ ಶಿಕ್ಷಣ ಅಷ್ಟೆ ಅಲ್ಲ ಸಾಂಸ್ಕೃತಿಕವಾಗಿಯೂ ವಿದ್ಯಾರ್ಥಿಗಳನ್ನು ಬೆಳೆಸುತ್ತ ಬೋಧನೆ ಮಾಡಿದ್ದಾರೆ ಎಂದು ತಮ್ಮ ಭಾವನಾತ್ಮಕ ಮಾತುಗಳನ್ನಾಡಿದರು.ಪ್ರಭಾರಿ ಮುಖ್ಯಗುರು ಆನಂದ ಬಿರಾದಾರ, DPEP ಶಾಲೆಯ ಮುಖ್ಯ ಗುರು ಎಚ್ ಜಿ ಜಡಿಮಠ ಮಾತನಾಡಿದರು.ಶಿಕ್ಷಕರಾದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಕ್ಟೋಬರ್ ೨ರಂದು ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಂದು ರಾಜ್ಯದಾದ್ಯಂತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದೆ. ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಮಹಾನಗರಪಾಲಿಕೆಯ ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
