Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ವಾರ್ಡ ನಂ.೨೭, ೨೮ ಹಾಗೂ ೩೧ರ ವ್ಯಾಪ್ತಿಯಲ್ಲಿ ಬರುವ ನವಭಾಗ ರಸ್ತೆ, ಒಳಚರಂಡಿ ಮೇಲೆ ಅತಿಕ್ರಮಣ ಮಾಡಿಕೊಂಡು ನಿರ್ಮಿಸಿಕೊಂಡ ಕಟ್ಟಡಗಳನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು.ಸೆ.೩೦ರಂದು ತೆರವು ಕಾರ್ಯಾಚರಣೆ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ, ತೆರವು ಕಾರ್ಯಾಚರಣೆಯನ್ನು ಪರಿಶೀಲಿಸಿದ ಅವರು, ಮುಂಬರುವ ದಿನಗಳಲ್ಲಿ ನಗರದ ವಿವಿಧೆಡೆ ಒತ್ತುವರಿಯಾಗಿರುವ ಸಾರ್ವಜನಿಕ ರಸ್ತೆಗಳನ್ನು ಗುರುತಿಸಿಕೊಂಡು ತೆರವುಗೊಳಿಸಲು ಕ್ರಮ ವಹಿಸಬೇಕು. ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಬೇಕು. ರಾಜ್‌ಕಾಲುವೆಗಳ ಮೂಲಕ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ಕ್ರಮ ವಹಿಸುವಂತೆ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.ನಗರದ ನವಭಾಗ ರಸ್ತೆಯು ನಗರದ ಮಾಸ್ಟರ್ ಪ್ಲಾನ್‌ನಡಿ ೬೦ ಅಡಿ ಮುಖ್ಯ ರಸ್ತೆಯಾಗಿದ್ದು, ಜನ-ವಾಹನ ಸಂಚಾರಕ್ಕೆ ಅನಾನೂಕುಲವಾಗುತ್ತಿರುವ ಹಿನ್ನಲೆಯಲ್ಲಿ ಹಾಗೂ ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಯ ನೀರು ಸಂಗ್ರಹಣೆಯಾಗಿ ಅನಾನೂಕೂಲವಾಗಿರುವುದರಿಂದ ರಸ್ತೆ ಅಗಲೀಕರಣ ಕಾರ್ಯ ಕೈಗೊಂಡು ನಗರದ ಅಭಿವೃದ್ದಿ ಉದ್ದೇಶದಿಂದ ಅತಿಕ್ರಮಣ ಮಾಡಿಕೊಂಡ…

Read More

ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಲು ತಾಪಂ ಇಒ ಗಳಿಗೆ ಎಂಎಲ್ಸಿ ಸುನೀಲಗೌಡ ಪತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಎಲ್ಲ 13 ತಾಲೂಕುಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿ 2024-25ನೇ ಆರ್ಥಿಕ ವರ್ಷದಲ್ಲಿ ವಸತಿರಹಿತರಿಗೆ ಮನೆ ಕಟ್ಟಲು ಸರಕಾರದಿಂದ ಅನುದಾನ ಬಿಡುಗಡೆಯಾಗಿದೆ. ಆದ್ದರಿಂದ ಕೂಡಲೇ ಈ ಮನೆಗಳ ಜಿ.ಪಿ.ಎಸ್ ಮಾಡಿ, ಫಲಾನುಭವಿಗಳು ಮನೆ ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿ.ಡಿ.ಓ)ಗಳಿಗೆ ನಿರ್ದೇಶನ ನೀಡುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಬಿ. ಪಾಟೀಲ ಜಿಲ್ಲೆಯ ಎಲ್ಲ ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ(ಇ.ಓ)ಗಳಿಗೆ ಪತ್ರ ಬರೆದಿದ್ದಾರೆ.ಈ ಎಲ್ಲ ಮನೆಗಳ ನಿರ್ಮಾಣಕ್ಕೆ ಸರಕಾರ ಎಸ್.ಸಿ ಫಲಾನುಭವಿಗಳಿಗೆ ರೂ. 43,750 ಮತ್ತು ಇತರೆ ಫಲಾನುಭವಿಗಳಿಗೆ ರೂ. 30,000 ಅನುದಾನವನ್ನು ಫಲಾನುಭವಿಗಳಿಗೆ ಖಾತೆಗಳಿಗೆ ನೇರವಾಗಿ ಜಮೆ ಮಾಡುತ್ತಿದೆ.ಜಿಲ್ಲೆಯ ಆಲಮೇಲ ತಾಲೂಕಿನ 13 ಗ್ರಾ. ಪಂ ಗಳಲ್ಲಿ 511, ಬಬಲೇಶ್ವರ ತಾಲೂಕಿನ 16 ಗ್ರಾ. ಪಂ ಗಳಲ್ಲಿ 711, ಬಸವನ ಬಾಗೇವಾಡಿ ತಾಲೂಕಿನ 18 ಗ್ರಾ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಐಶ್ವರ್ಯ ನಗರದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಅ.3 ರಂದು ಮೊಟ್ಟ ಮೊದಲ ಬಾರಿಗೆ ದಸರಾ ಉತ್ಸವ ಹಮ್ಮಿಕೊಳ್ಳಲಾಗಿದ್ದು, ಉತ್ತರ ಕರ್ನಾಟಕದಲ್ಲಿಯೇ ಮೊದಲ ಬಾರಿ ಜಂಬುಸವಾರಿ ಮೆರವಣಿಗೆ ನಡೆಯಲಿದೆ ಎಂದು ದೇವಸ್ಥಾನ ಕಮಿಟಿ ಅಧ್ಯಕ್ಷ ವಿವೇಕ ಹುಂಡೈಕರ ಹೇಳಿದರು.ನಗರದಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8:30 ಕ್ಕೆ ಶ್ರೀ ಚಾಮುಂಡೇಶ್ವರಿ ದೇವಿಯ ಜಂಬುಸವಾರಿಯ ಭವ್ಯ ಮೆರವಣಿಗೆಯು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆಶ್ರಮ ರಸ್ತೆ, ಐಶ್ವರ್ಯ ನಗರದ ಮುಖ್ಯ ರಸ್ತೆಗಳ ಮೂಲಕ ಸಾಗಲಿದೆ. ಕುಂಭ ಮೇಳದೊಂದಿಗೆ ಒಂಟೆ, ಕುದುರೆ, ಗೊಂಬೆ ಕುಣಿತ, ಕರಡಿ ಮಜಲು ಸೇರಿದಂತೆ ಕೊಂಬುಕಹಳೆ ಭವ್ಯ ಮೆರವಣಿಗೆ ನಡೆಯಲಿದ್ದು, ಜಂಬುಸವಾರಿ ಆಕರ್ಷಣೆ ಕೇಂದ್ರ ಬಿಂದುವಾಗಲಿದೆ ಎಂದು ವಿವರಿಸಿದರು.ಕಾರ್ಯದರ್ಶಿ ನಾನಾಗೌಡ ಬಿರಾದಾರ ಮಾತನಾಡಿ, ಒಂಬತ್ತು ದಿನಗಳ ಕಾಲ ನಿರಂತರ ಪೂಜೆ ಕಾರ್ಯಕ್ರಮಗಳು ನಡೆಯಲಿವೆ. 9 ದಿನಗಳ ಕಾಲ ಚಾಮುಂಡೇಶ್ವರಿ ಪುರಾಣ ಪ್ರವಚನ ನಡೆಯಲಿದ್ದು 9 ನೇ ದಿನ ಬನ್ನಿ ಮೂಡಿಯುವ ಕಾರ್ಯಕ್ರಮ ನಡೆಯಲಿದೆ. ಜಂಬುಸವಾರಿಗೆ…

Read More

ಬಾಲಮಂದಿರ ಮಕ್ಕಳಿಗಾಗಿ ಬಾಲ ವಿಕಾಸ ಅಕಾಡೆಮಿ ಆಯೋಜಿಸಿದ ೨ನೇ ಹಂತದ ರಾಜ್ಯಮಟ್ಟದ ಕಥಾ ಕಮ್ಮಟಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಸೇವೆಯಲ್ಲಿ ಭಗವಂತನನ್ನು ಕಾಣುವ, ಮಕ್ಕಳ ಬಗೆಗೆ ಅಪಾರ ಕಾಳಜಿ ಕಕ್ಕುಲತೆಯನ್ನು ಹೊಂದಿರುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರ ಕಾರ್ಯ ಅನನ್ಯವಾದದ್ದು. ನಾಡಿನ ಬಾಲಮಂದಿರದ ಮಕ್ಕಳನ್ನು ನಿಸರ್ಗದ ಮಡಿಲಿನಲ್ಲಿ ಕರೆತಂದು, ಮಕ್ಕಳ ಸೃಜನಶೀಲ ವ್ಯಕ್ತಿತ್ವ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಸಂಗಮೇಶ ಅವರಿಗೆ ದೇವರು ಇನ್ನಷ್ಟು ಶಕ್ತಿಯನ್ನು, ಅಧಿಕಾರವನ್ನು ನೀಡಲಿ ಎಂದು ಧಾರವಾಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಶ್ರೀಮತಿ ಗೀತಾ ಸಿ.ಡಿ ಹೇಳಿದರು.ಹಳ್ಳಿಗೇರಿ ಹತ್ತಿರವಿರುವ ನೇಚರ್ ಫಸ್ಟ್ ಇಕೋ ವಿಲೇಜ್ ರೆಸಾರ್ಟ್ ನಲ್ಲಿ ಹತ್ತು ಜಿಲ್ಲೆಗಳಿಂದ ಆಗಮಿಸಿರುವ ಬಾಲಮಂದಿರದ ಮಕ್ಕಳಿಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಆಯೋಜಿಸಿರುವ ಎರಡನೇ ಹಂತದ ರಾಜ್ಯಮಟ್ಟದ ಕಥಾ ಕಮ್ಮಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಮಾತನಾಡಿ, ಕರ್ನಾಟಕ ಬಾಲ ವಿಕಾಸ…

Read More

ಬಸವನಬಾಗೇವಾಡಿಯಲ್ಲಿ ತಾಜ್ ಸೋಶಿಯಲ್ ಗ್ರುಫ್ ನಿಂದ ಸೌಹಾರ್ದ ಸಮಾವೇಶ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ದೇಶದ ಸಂವಿಧಾನವು ಎಲ್ಲ ಸಮಸ್ಯೆಗಳಿಗೆ, ಜನರ ನೋವುಗಳಿಗೆ ಸರಿಪಡಿಸುವ ಶಕ್ತಿಯಿದೆ. ದೇಶದ ಸಂವಿಧಾನವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರದಾಗಿದೆ. ಪ್ರತಿಯೊಬ್ಬರೂ ಕಾನೂನುಗಳನ್ನು ಪಾಲಿಸುವ ಮೂಲಕ ದೇಶದಲ್ಲಿ ಎಲ್ಲರೂ ಪ್ರೀತಿ, ವಿಶ್ವಾಸ, ಸಹಬಾಳ್ವೆಯೊಂದಿಗೆ ಜೀವನ ಮಾಡಿದರೆ ಸಮಾಜದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ತಾಜ್ ಸೋಶಿಯಲ್ ಗ್ರುಫ್ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಸೌಹಾರ್ದ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ವಾಸಿಸುವ ಎಲ್ಲ ಜನರು ಸಹೋದರತೆ, ಸಹಬಾಳ್ವೆ, ಮಾನವೀಯತೆ ಮೌಲ್ಯ ಗುಣಗಳನ್ನು ಅಳವಡಿಸಿಕೊಂಡು ಜೀವನ ಮಾಡುವಂತಾಗಬೇಕು. ಸೌಹಾರ್ದ ಸಮಾವೇಶಗಳಿಂದ ಇಂತಹ ಗುಣಗಳನ್ನು ಮೈಗೂಡಿಸಿಕೊಂಡರೆ ಸಮಾವೇಶ ಮಾಡಿದ್ದು ಸಾರ್ಥಕವಾಗುತ್ತದೆ. ಸಮಾಜಕ್ಕೆ ಯಾವುದೇ ಕಂಟಕವಾಗದ ರೀತಿಯಲ್ಲಿ ಜೀವನ ಮಾಡಬೇಕು. ಸಮಾಜಕ್ಕೆ ಪೂರಕವಾದ ಜೀವನ ಮಾಡಿದರೆ ಸಮಾಜದಲ್ಲಿ ಯಾವುದೇ ಕಂಟಕಗಳು ಬಾರದೇ ಎಲ್ಲರೂ ಸೌಹಾರ್ದತೆಯಿಂದ ಇರಲು ಸಾಧ್ಯವಿದೆ ಎಂದರು.ಕೆಪಿಸಿಸಿ ವಕ್ತಾರ ನಿಕಿತರಾಜ ಮೌರ್ಯ ಮಾತನಾಡಿ, ಧರ್ಮದ ಹೆಸರಿನಲ್ಲಿ…

Read More

ಇಂದು (ಅ.೦೨) ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಈ ವಿಶೇಷ ಲೇಖನ ಲೇಖನ:- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬ ಉದಯರಶ್ಮಿ ದಿನಪತ್ರಿಕೆ ಪ್ರಪಂಚವೇ ಮಹಾತ್ಮಾ ಎಂದು ಕರೆದ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಶಾಂತಿಯನ್ನು ಪ್ರತಿಪಾದಿಸಿ, ಭಾರತ ದೇಶಕ್ಕೆ ಸ್ವಾತಂತ್ರ‍್ಯ ಬಂದ ನಂತರ ರಾಮರಾಜ್ಯದ ಕನಸನ್ನು ಕಂಡಿದ್ದರು. ಗಾಂಧೀಜಿಯವರ ರಾಮರಾಜ್ಯವು ಹಿಂದೂ ರಾಜ್ಯವಾಗಿರದೆ ಎಲ್ಲ ಧರ್ಮಗಳನ್ನು ಸಮಾನವಾಗಿ ಗೌರವಿಸುವ ಸಮಾನತೆಯನ್ನು ಸಾರುವ ಸಮಾಜವಾಗಬೇಕು ಎಂಬ ಕನಸು ಅವರಲ್ಲಿತ್ತು. ಮಹಾತ್ಮಾ ಗಾಂಧೀಜಿಯವರ ಕುರಿತು ಕೆಲವೊಂದು ಅಚ್ಚರಿಯ ವಿಚಾರಗಳು ಇಲ್ಲಿವೆ.ಗಾಂಧೀಜಿಯು ನಾವು ಜೀವಿಸಲು ತಿನ್ನಬೇಕೇ ಹೊರತು, ತಿನ್ನಬೇಕೆಂದು ಜೀವಿಸಬಾರದು ಎಂಬ ತತ್ವಕ್ಕೆ ಬದ್ಧರಾಗಿದ್ದರು. ಅವರು ಎಷ್ಟು ಸಾಧ್ಯವೋ ಅಷ್ಟು ಕನಿಷ್ಠ ಆಹಾರವನ್ನು ಸೇವಿಸುತ್ತಿದ್ದರು. ಅನೇಕ ಬಾರಿ ಅವರು ಕೇವಲ ಹಣ್ಣಷ್ಟೇ ತಿಂದು ಆಡಿನ ಹಾಲನ್ನು ಕುಡಿದು ಬದುಕುತ್ತಿದ್ದರು. ಗಾಂಧೀಜಿಯು ವಿದೇಶದಲ್ಲಿ ಹ್ಯಾಟ್ ಧರಿಸಿದರೆ ಭಾರತ ದೇಶದಲ್ಲಿ ಪಂಚೆಯನ್ನು ಧರಿಸುತ್ತಿದ್ದರು. ಬ್ರಿಟನ್ ಹಾಗೂ ಆಫ್ರಿಕದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಗಡಿಭಾಗದ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಹಾಗೂ ಶೈಕ್ಷಣಿಕ ಪ್ರಗತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವದು ಎಂದು ಕರ್ನಾಟಕ ಗಡಿ ಪ್ರದೇಶ ಅಭೀವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರ ಹೇಳಿದರು.ಸ್ಥಳಿಯ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಭಾನುವಾರ ಜರುಗಿದ ಗುರುವಂದನೆ ಹಾಗೂ ಜಿಲ್ಲಾ,ತಾಲ್ಲೂಕು ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಗಡಿ ಭಾಗದ ಶಿಕ್ಷಣ ಸಂಸ್ಥಗೆಳಿಗೆ ಸಾಕಷ್ಟು ಅನುದಾನ ಒದಗಿಸಲಾಗುತ್ತಿದೆ. ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ಕೇರಳ ಹಾಗೂ ಗೋವಾ ರಾಜ್ಯಗಳಿಗೆ ಹೊಂದಿಕೊಂಡಿರುವ ಕನ್ನಡ ಭಾಷಾ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ತಿಳಿದುಕೊಂಡು ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಿ ಆ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವದು ಎಂದ ಅವರು, ಶಿಕ್ಷಕ ವೃತ್ತಿ ಪವಿತ್ರವಾದುದು, ವಿದ್ಯೆ,ಸಂಸ್ಕಾರ ಕೊಟ್ಟು, ಉತ್ತಮ ಪ್ರಜೆಗಳ ನಿರ್ಮಾಣ ಮಾಡುವ ಶಿಕ್ಷಕರಿಗೆ ಸಮಾಜದಲ್ಲಿ ಉನ್ನತ ಸ್ಥಾನವಿದೆ ಎಂದರುಕೃಪಾ ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ ತಾಳಿಕಟ್ಟಿ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ, ಆದರೂ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತಿಚಿಗೆ ಜಿಲ್ಲೆಯಲ್ಲಿ ಕಳೆದ ೩೧ ವರ್ಷಗಳ ದಾಖಲೆ ಮುರಿದ ಮಳೆಯಿಂದಾಗಿ ಜಿಲ್ಲೆಯ ಸಾಕಷ್ಟು ರೈತರಿಗೆ ಅನೇಕ ಸಮಸ್ಯೆಗಳು ಉದ್ಭವಿಸಿವೆ, ಕೈಗೆ ಬಂದಿರುವ ಬೆಳೆ ನೀರಲ್ಲಿ ನಿಂತು ಸಂಪೂರ್ಣ ನಾಶವಾಗಿವೆ. ಈ ಬೆಳೆಗಳನ್ನೆ ನಂಬಿರುವ ರೈತರಿಗೆ ದಿಕ್ಕು ತೊಚದಂತಾಗಿದೆ, ಇದರಿಂದ ವರ್ಷಪೂರ್ತಿ ಕುಟುಂಬದ ನಿರ್ವಹಣೆ ಮಾಡಬೇಕಿರುವ ರೈತರು ಚಿಂತೆ ಮಾಡುವಂತಾಗಿದೆ, ಮಕ್ಕಳ ಆರೋಗ್ಯ, ಶಿಕ್ಷಣ, ಊಟ, ಬಟ್ಟೆ ಸೇರಿದಂತೆ ಇನ್ನಿತರ ಖರ್ಚು ವೆಚ್ಚವನ್ನು ಹೇಗೆ ನೀಭಾಯಿಸಬೇಕು ಎಂದು ದಿಕ್ಕೆ ತೋಚದಂತಾಗಿದೆ.ಕೂಡಲೇ ಬೆಳೆವಿಮೆ ಹಾಗೂ ಪ್ರಕೃತಿ ವಿಕೋಪದ ಮಾರ್ಗಸೂಚಿಯಂತೆ ನಷ್ಟಗೊಂಡ ಎಲ್ಲಾ ರೈತರಿಗೂ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿಗಳು ಹಾಗೂ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮನವಿ ಸಲ್ಲಿಸಿ ಮಾತನಾಡಿ, ಕೂಡಲೇ ಇಲಾಖೆಯಿಂದ ಸಮೀಕ್ಷೆ ಮಾಡಿ ನಷ್ಟಗೊಂಡ ದಾಳಿಂಬೆ, ದ್ರಾಕ್ಷಿ, ಲಿಂಬೆ, ಉಳ್ಳಾಗಡ್ಡಿ, ಸೇರಿದಂತೆ ಇನ್ನಿತರ ತೋಟಗಾರಿಕೆ ಬೆಳೆಗಳಿಗೆ ವಿಮೆ ಹಾಗೂ ರಾಜ್ಯ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ನಡೆದ ಹಡಪದ ಸಮಾಜದ ಮಹಿಳೆಯ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಇಲ್ಲಿನ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.ಈ ವೇಳೆ ಸಮಾಜದ ಅಧ್ಯಕ್ಷ ಶಂಕ್ರಪ್ಪ ಕುಂಚುಗುನೂರ, ಉಪಾಧ್ಯಕ್ಷ ಭೀಮಣ್ಣ ಬಳವಾಟ ಸದಸ್ಯರಾದ ಬಸವರಾಜ್ ಯರಗಲ್, ಶೇಕು ಅರಸನಾಳ, ಶಿವರಾಜ್ ಹಡಪದ್, ಶಿವಕುಮಾರ್ ಬಿದರಕುಂದಿ, ಶ್ರೀಕಾಂತ್ ಹಡಪದ ಸೇರಿದಂತೆ ಹಲವರು ಇದ್ದರು.

Read More