Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸವಭವನದಲ್ಲಿ ಶನಿವಾರ ತಾಜ್ ಸೋಶಿಯಲ್ ಗ್ರುಫ್ ಹಮ್ಮಿಕೊಂಡಿದ್ದ ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರನ್ನು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ರಾಜ್ಯದ ಸಾಂಸ್ಕ್ರತಿಕ ನಾಯಕ ಬಸವೇಶ್ವರರ ಭಾವಚಿತ್ರ ನೀಡುವ ಮೂಲಕ ಸನ್ಮಾನಿಸಿದರು.ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ್ ಪಾಟೀಲ, ಕೆಪಿಸಿಸಿ ವಕ್ತಾರ ನಿಕಿತರಾಜ್ ಮೌರ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವೇಶ್ವರ ಸೇವಾ ಸಮಿತಿ ಉಪಾಧ್ಯಕ್ಷ ಬಸವರಾಜ ಹಾರಿವಾಳ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ಅಧ್ಯಕ್ಷ ಪರಶುರಾಮ ಜಮಖಂಡಿ, ಪುರಸಭೆ ಸದಸ್ಯರಾದ ಜಗದೇವಿ ಗುಂಡಳ್ಳಿ, ಪ್ರವೀಣ ಪೂಜಾರಿ, ನಜೀರ ಗಣಿ,ಟಿಎಪಿಎಂಸಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಬಸವೇಶ್ವರ ದೇವಾಲಯ ಇಂಟರ್ನ್ಯಾಷನಲ್ ಶಾಲೆಯ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡುವ ಜೊತೆಗೆ ಪ್ರೋತ್ಸಾಹಿಸುವ ಕೆಲಸವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಮಾಡುತ್ತಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ, ಬೀದರಿನ ಡಾ.ಸಂಜೀವಕುಮಾರ ಅತಿವಾಳೆ ಹೇಳಿದರು.ಪಟ್ಟಣದ ಮಾರ್ಗವಾಗಿ ಗುಡ್ಡಾಪುರಕ್ಕೆ ತೆರಳುವ ಸಂದರ್ಭದಲ್ಲಿ ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ನಿವಾಸದಲ್ಲಿ ಭಾನುವಾರ ಸಂಜೆ ಸನ್ಮಾನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಒಂದಾಗಿ ಕನ್ನಡ ಕಟ್ಟುವ ಕೆಲಸವನ್ನು ಮಾಡಬೇಕಿದೆ. ಗಡಿ ಪ್ರದೇಶದಲ್ಲಿ ಕನ್ನಡ ಬೆಳವಣಿಗೆಗೆ ಇನ್ನೂ ಹೆಚ್ಚು ಒತ್ತು ನೀಡಬೇಕಾಗಿದೆ. ಗಡಿ ಪ್ರದೇಶದಲ್ಲಿರುವ ಕನ್ನಡ ಶಾಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅವಶ್ಯಕತೆ ಇಂದು ಹೆಚ್ಚಾಗಿದೆ ಎಂದರು.ಇದೇ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಗಡಿನಾಡ ಚೇತನ ಪ್ರಶಸ್ತಿಗೆ ಭಾಜನರಾದ ಬೀದರ ಖ್ಯಾತ ಸಾಹಿತಿ, ಕನ್ನಡಪರ ಹೋರಾಟಗಾರ ಪಂಚಾಕ್ಷರಿ ಪುಣ್ಯಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ, ತಾಲೂಕು ಶರಣ ಸಾಹಿತ್ಯ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಅಧಿಕಾರ ಶಾಶ್ವತ ಅಲ್ಲ ಇರುವ ದಿನಗಳು ಸಾರ್ವಜನಿಕರ ಬಡವರ ನೊಂದವರ ದನಿಯಾಗಿ ಕಾರ್ಯ ಮಾಡೋಣ, ತಾಲೂಕಿನ ತಾಂಬಾ ಗ್ರಾಮದ ಅಭಿವೃದ್ಧಿಗೆ ಜೀತದಾಳಿನಂತೆ ದುಡಿದು ಗ್ರಾಮ ಮಾದರಿ ಗ್ರಾಮನ್ನಾಗಿಸುತ್ತೇನೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.ಅವರು ೨೦೨೩-೨೪ನೇ ಸಾಲಿನ ಮುಖ್ಯ ಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆಗೆ ಅಂದಾಜು ರೂ ೫೦ ಲಕ್ಷ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ ಈ ರಸ್ತೆ ಸುಧಾರಣೆ ಮಾಡಬೇಕೆಂಬ ಸಂಕಲ್ಪದಂತೆ ಕಾಮಗಾರಿಗೆ ಅನುದಾನ ನೀಡಲಾಗಿದೆ.ಯಾವುದೇ ಧರ್ಮ ಹಾಗೂ ಜಾತಿಗೆ ಅಂಟಿಕೊಂಡು ಕೆಲಸ ಮಾಡದೆಯೆ, ಎಲ್ಲ ಧರ್ಮ ಹಾಗೂ ಪ್ರತಿಯೊಂದು ಜಾತಿಯವರ ಕೆಲಸ ಕಾರ್ಯ ಮಾಡುತ್ತಿದ್ದೇನೆ. ಅದಕ್ಕೆ ಪ್ರತಿಯೊಂದು ಸಮಾಜದವರು ಯಾವುದೇ ಕೆಲಸ ಕಾರ್ಯಗಳಿದ್ದರೆ ನಿರ್ಭಿತಿಯಿಂದ ಬಳಿ ಬಂದು ಕೆಲಸ ಮಾಡಿಕೊಳ್ಳುವಂತೆ ಮನವಿ ಮಾಡಿದರು. ನಾನು ನಿಮ್ಮಂತೆ ಒಬ್ಬ ವ್ಯಕ್ತಿ. ನಿಮ್ಮ ಕಷ್ಟಗಳಿಗೆ ಸ್ಪಂದಿಸಿ, ಸಹಾಯ ಮಾಡುವ ಸೇವಕನಾಗಿದ್ದೇನೆ. ಹೊರತು ನಾಯಕನಲ್ಲ..! ಗ್ರಾಮದಲ್ಲಿ ಆಗದೆಯಿರುವ ಕೇಲಸಗಳನ್ನು ಈಗಿರುವ ಅಧಿಕಾರದಲ್ಲಿ ಮಾಡಿತೋರಿಸುವೆ. ಜನ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಳಿಕೋಟೆ ತಾಲೂಕು ಆದ ಬಳಿಕ ನಡೆಯುತ್ತಿರುವ ಪ್ರಥಮ ತಾಳಿಕೋಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲ ಸಾಹಿತಿಗಳು, ಕನ್ನಡಾಭಿಮಾನಿಗಳು ಭಾಗಿಯಾಗಿ ಕನ್ನಡದ ತೇರನ್ನು ಎಳೆಯುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅ.೧ ರಂದು ಸಮ್ಮೇಳನ ನಿಗದಿಯಾಗಿದ್ದು ಅಂದು ಬೆಳಿಗ್ಗೆ ಸಮ್ಮೇಳನಕ್ಕೆ ತೆರಳಲು ಮತ್ತು ಸಂಜೆ ಅಲ್ಲಿಂದ ಮರಳಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಿಕೊಳ್ಳೋಣ. ನಮ್ಮ ತಾಲೂಕಿನ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾದಲ್ಲಿ ಸಮ್ಮೇಳನ ಯಶಸ್ವಿ ಸಾಧ್ಯತೆ ಹೆಚ್ಚಿರುವದರಿಂದ ಶಾಲೆಗಳಿಗೆ ರಜೆ ಕೊಡಿಸುವ ಪ್ರಯತ್ನ ಮಾಡುವೆ ಎಂದರು.ಸಾಹಿತಿಗಳಾದ ಅಶೋಕ ಮಣಿ, ಪಿ.ಎಚ್.ಉಪ್ಪಲದಿನ್ನಿ, ಶಿವಕುಮಾರ ಹಡಪದ, ಪ್ರಭುಗೌಡ ರಾಯರೆಡ್ಡಿ, ಬಿ.ವಿ.ಕೋರಿ, ಎಂ.ಬಿ.ಪಾಟೀಲ ಮತ್ತೀತರರು ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು.ಈ ವೇಳೆ ಎಪಿಎಂಸಿ ನಿರ್ದೇಶಕ ವಾಯ್.ಎಚ್.ವಿಜಯಕರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ, ಜಯ ಕರ್ನಾಟಕ ಸಂಘಟನೆಯ…

Read More

ಸೇತುವೆಯ ಮೇಲೆ ಸಿಸಿ ರಸ್ತೆಗೆ ಆಗ್ರಹ | 4 ಗಂಟೆ ರಸ್ತೆ ತಡೆ | ಸಂಚಾರ ಅಸ್ತವ್ಯಸ್ತ ಉದಯರಶ್ಮಿ ದಿನಪತ್ರಿಕೆ ಆಲಮೇಲ: 65 ವರ್ಷಗಳ ಹಳೆಯದಾದ ದೇವಣಗಾಂವ ಐತಿಹಾಸಿಕ ಸೇತುವೆ ಕಳೆದ ಹಲವಾರು ವರ್ಷಗಳಿಂದ ಸೇತುವೆಯ ಮೇಲ್ಭಾಗ ಮಾತ್ರ ಕುಸಿಯುತ್ತ ಸಾಗಿದ್ದು ಕೆಳಗಿನ ಭಾಗ ಸಂಪೂರ್ಣ ಇನ್ನೂ ಗಟ್ಟಿಮುಟ್ಟಾಗಿದೆ ಆದ್ದರಿಂದ ಮೇಲ್ಭಾಗದ ರಸ್ತೆ ದುರಸ್ತಿ ಮಾಡಬೇಕೆಂದು ಆಗ್ರಹಿಸಿ ದೇವಣಗಾಂವ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಸೋಮವಾರ 4 ತಾಸು ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಿದರು.ಸಾಮಾಜಿಕ ಹೋರಾಟಗಾರ ದತ್ತಾತ್ರೇಯ ಸೊನ್ನ ಮಾತನಾಡಿ ಕಳೆದ 15 ವರ್ಷದಿಂದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಐತಿಹಾಸಿಕ ಭೀಮಾ ನದಿಗೆ ಅಡ್ಡಲಾಗಿರುವ ಸೇತುವೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ ನಾವು ಈ ಪ್ರತಿಭಟನೆ ಮಾಡುವ ಉದ್ದೇಶ ಸೇತುವೆಯ ಮೇಲೆ ಸಿಸಿ ರಸ್ತೆ ಮಾಡಬೇಕು ಹಾಗೂ ತಾಲ್ಲೂಕಾ ಕೇಂದ್ರವಾದ ಆಲಮೇಲ ಪಟ್ಟಣಕ್ಕೆ ಹೋಗಲು ಸರಿಯಾದ ರಸ್ತೆ ಇಲ್ಲ ಈ ರಸ್ತೆಯ ಮೇಲೆ ಸಂಚಾರ ಮಾಡಬೇಕಾದರೆ ಜೀವ ಕೈಯಲ್ಲಿ ಹಿಡಿದು…

Read More

ಅದ್ಧೂರಿಯಾಗಿ ಜರುಗಿದ ಗಡಿ ಕನ್ನಡಿಗರ ಸಮಾವೇಶ | ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ೭೪೨ ಗ್ರಾಮಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ, ಗಡಿನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ, ಕನ್ನಡಿಗರು ವಾಸಿಸುವ ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ, ನೀರು, ಬಸ್ ಸೌಕರ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರು ಭರವಸೆ ನೀಡಿದರು.ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ವಿಜಯಪುರ, ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನ ಟ್ರಸ್ಟ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ಕನ್ನಡ ಸಂಘಟನೆಗಳ ಸಹಯೋಗದಲ್ಲಿ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಸೋಮವಾರ ಹಮ್ಮಿಕೊಂಡ ಕರ್ನಾಟಕ ಸಂಭ್ರಮ-೫೦, ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕರ್ನಾಟಕ ಗಡಿ ಪ್ರಾಧಿಕಾರದ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ರಾಜ್ಯದಲ್ಲಿಯೇ ಮೊಟ್ಟಮೊದಲ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನ ಕಗ್ಗೋಡ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದಲ್ಲಿ ಸೆ.೨೮ರಂದು ಶನಿವಾರ ವಿಶ್ವ ರೇಬೀಸ್ ದಿನಾಚರಣೆ ಆಚರಿಸಲಾಯಿತು.ಈ ವೇಳೆ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ. ಬಿ.ಎಸ್.ಕನಮಡಿ ಮಾತನಾಡಿ, ನಾಯಿಯು ಸ್ನೇಹಮಯಿ ಮತ್ತು ಆಜ್ಞಾಪಾಲಕ ಪ್ರಾಣಿಯಾಗಿದ್ದರೂ ಸಹ ಅದಕ್ಕೆ ರೇಬೀಸ್ ರೋಗ ತಗುಲಿದರೆ ಅದರಿಂದ ಮಾನವನ ಜೀವಕ್ಕೆ ಅಪಾಯವಿದೆ. ಕಾರಣ ನಾಯಿ ಸಾಕುವವರು ಮತ್ತು ಸಾರ್ವಜನಿಕರು ಈ ಕುರಿತು ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.ಈ ವರ್ಷ ಇಲಾಖೆ ವತಿಯಿಂದ ಗ್ರಾಮೀಣ ಪ್ರದೇಶದ ಪ್ರತಿ ಹಳ್ಳಿಗಳಲ್ಲಿ ನಾಯಿಗಳಿಗೆ ಉಚಿತವಾಗಿ ರೇಬೀಸ್ ಲಸಿಕೆ ಹಾಕಲಾಗಿದೆ. ಅಲ್ಲದೇ ಶಾಲಾ ಮಕ್ಕಳಿಗೆ ರೇಬೀಸ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಎಂದು ಡಾ.ಕನಮಡಿ ವಿವರಿಸಿದರು.ಕುಮಟಗಿ ಗ್ರಾಪಂ ಅಧ್ಯಕ್ಷ ರಮೇಶ ಸಜ್ಜನ, ಹಿರಿಯ ಪಶುವೈದ್ಯಾಧಿಕಾರಿ ಡಾ.ಬಾಳಾಸಾಹೇಬ ಬಂಡಿ ಹಾಗೂ ಸಿಬ್ಬಂದಿ ಸೇರಿದಂತೆ ಗ್ರಾಮಸ್ಥರಿದ್ದರು.ಈ ಸಂದರ್ಭದಲ್ಲಿ ಸುಮಾರು ೩೫ ನಾಯಿಗಳಿಗೆ ಉಚಿತವಾಗಿ ರೇಬೀಸ್ ಲಸಿಕೆ ಹಾಕಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಇಂದಿರಾ ನಗರದ ನಿವಾಸಿಗಳು ತಮ್ಮ ತಗಡಿನ ಮನೆಗಳನ್ನು ತೆರವು ಮಾಡುವುದನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿ ತಹಶೀಲ್ದಾರ ಕಚೇರಿಯ ಎದುರು, ಕೊಳಗೇರಿ ಅಭಿವೃದ್ಧಿ ಮಂಡಳಿ ನೀಡಿದ ಹಕ್ಕುಪತ್ರ ಹಿಡಿದು ದಿಢೀರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.ಈ ವೇಳೆ ನಿವಾಸಿಗಳಾದ ರಾಮು ದಳವಾಯಿ ಮಾತನಾಡಿ, ಕೊಳಗೇರಿ ಅಭಿವೃದ್ದಿ ಮಂಡಳಿಯವರು ಮತ್ತು ಪುರಸಭೆಯವರು ಜಂಟಿಯಾಗಿ ಸರ್ವೇ ಮಾಡಿ ನಮಗೆ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನೀಡಲಾಗಿದೆ. ಸುಮಾರು ವರ್ಷಗಳಿಂದ ನಾವು ಇಲ್ಲಿ ವಾಸವಿದ್ದೇವೆ. ಸಧ್ಯ ಪುರಸಭೆ ಮುಖ್ಯಾಧಿಕಾರಿಗಳು ದಿಢೀರನೆ ಬಂದು ಮಂಡಳಿ ನೀಡಿದ ಹಕ್ಕು ಪತ್ರಗಳನ್ನೂ ಸಹ ಗಮನಿಸಿದೇ ನಿಮ್ಮ ತಗಡಿನ ಮನೆಗಳು ಅನಧಿಕೃತವಾಗಿವೆ. ಕೂಡಲೇ ಖಾಲಿ ಮಾಡಿ ಇಲ್ಲದಿದ್ರೆ ತೆರವುಗೊಳಿಸುವದಾಗಿ ತಿಳಿಸಿದ್ದಾರೆ. ಈ ನಡೆಯನ್ನು ನಾವು ಖಂಡಿಸುತ್ತೇವೆ. ಕೊಳಗೇರಿ ಅಭಿವೃದ್ಧಿ ಮಂಡಳಿ ನೀಡಿದ ಹಕ್ಕುಪತ್ರವನ್ನು ಗಮನಿಸದೇ, ಯಾವ ನೊಟೀಸನ್ನೂ ನೀಡದೇ ನಮ್ಮ ಮನೆಗಳನ್ನು ತೆರವುಗೊಳಿಸಲು ಹುನ್ನಾರ ನಡೆಸಿರುತ್ತಾರೆ. ಕೂಡಲೇ ಈ ದಬ್ಬಾಳಿಕೆಯನ್ನು ಕೈಬಿಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿರುವ ಅಕ್ರಮ ನಳಗಳನ್ನು ಸಕ್ರಮಗೊಳಿಸಿದರೆ ಪುರಸಭೆಗೆ ಆದಾಯ ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದು ಅಧ್ಯಕ್ಷ ಶಾಂತವೀರ ಬಿರಾದಾರ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಪುರಸಭೆಯ ಸಭಾ ಭವನದಲ್ಲಿ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಹಲವು ವಿಷಯಗಳನ್ನು ಚರ್ಚಿಸಿ ಮಾತನಾಡಿದ ಅವರು, ಅಕ್ರಮವಾಗಿ ನಳ ಸಂಪರ್ಕ ಪಡೆದ ಮನೆಯ ಮಾಲಿಕರಿಗೆ ಸಕ್ರಮಗೊಳಿಸಿಕೊಳ್ಳಲು ಕಾಲಾವಕಾಶ ಅಥವಾ ನೋಟಿನ್ ನೀಡಿ ಸಕ್ರಮಗೊಳಿಸಲು ತಿಳಿಸಬೇಕು ಎಂಬುದಕ್ಕೆ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು.ಬಳಿಕ ಮುಖ್ಯಾಧಿಕಾರಿ ಸುರೇಶ ನಾಯಕ ಮಾತನಾಡಿ, ಪಟ್ಟಣದಲ್ಲಿ ಒಟ್ಟು ೧೦ ಸಾವಿರಕ್ಕೂ ಅಧಿಕ ಮನೆಗಳಿವೆ. ಆದರೆ ಅದರಲ್ಲಿ ಕೇವಲ ೨ಸಾವಿರ ಮನೆಗಳು ಮಾತ್ರ ಅಧಿಕೃತ ನಳಗಳ ಜೋಡಣೆಯಿದ್ದು, ಇನ್ನೂಳಿದ ಮನೆಗಳಿಗೆ ಅಕ್ರಮ ನಳಗಳ ಜೋಡಣೆ ಇದೆ ಅವುಗಳನ್ನು ಸಕ್ರಮಗೊಳಿಸುವುದು ಸೂಕ್ತ ಎಂದು ಉಲ್ಲೇಖ ಮಂಡಿಸಿದರು.ಪುರಸಭೆಯಲ್ಲಿ ಚುನಾಯಿತರಾದ ಸದಸ್ಯರಿಗೆ ಗೌರವ ಇಲ್ಲದಂತಾಗಿದೆ. ನಮ್ಮ ವಾರ್ಡಿನ ಸಮಸ್ಯೆಗಳನ್ನು ಪುರಸಭೆ ಮುಖ್ಯಾಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದರೂ ಯಾವುದೇ ಕ್ರಮ ಜರುಗಿಸಲ್ಲ ಎಂದು ಸದಸ್ಯೆ ಪ್ರತಿಭಾ ಕಲ್ಲೂರ ಆರೋಪಿಸಿದರು.ಗುಂಟಾ ಪ್ಲಾಟ್‌ಗಳಿಗೂ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇತ್ತೀಚೆಗೆ ಆಹಾರ ಪದ್ದತಿಯಲ್ಲಿನ ಬದಲಾವಣೆಯಿಂದಾಗಿ ಜನರಲ್ಲಿ ರಕ್ತದೊತ್ತಡ, ಸಕ್ಕರೆ ಖಾಯಿಲೆ, ಹೃದಯ ಸಂಬಂಧಿಸಿದ ಖಾಯಿಲೆ ಸೇರಿದಂತೆ ಅನೇಕ ರೋಗಗಳು ಸಾಮಾನ್ಯವಾಗಿವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಮತಕ್ಷೇತ್ರದ ಆಲಮೇಲ ಪಟ್ಟಣದಲ್ಲಿ ಡಾ.ಸಮೀರ ಹಾದಿಮನಿ ಹಾಗೂ ಸಮಾನ ಮನಸ್ಕರ ಬಳಗದ ವತಿಯಿಂದ ಹಮ್ಮಿಕೊಂಡ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಹಾದಿಮನಿ ಆಸ್ಪತ್ರೆಯು ಗ್ರಾಮೀಣ ಪ್ರದೇಶದ ಬಡ ರೋಗಿಗಳಿಗಾಗಿ ಉಚಿತ ಆರೋಗ್ಯ ಶಿಬಿರ ಏರ್ಪಡಿಸುವ ಮೂಲಕ ಆರೋಗ್ಯ ಜಾಗೃತಿ ಮತ್ತು ರೋಗಿಗಳ ಆರ್ಥಿಕ ಹೊರೆ ತಗ್ಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಹಾದಿಮನಿ ಆಸ್ಪತ್ರೆಯ ವೈದ್ಯ ಡಾ.ಸಮೀರ ಹಾದಿಮನಿ ಇವರ ಸಾಮಾಜಿಕ ಕಳಕಳಿ ಹಾಗೂ ಇವರ ನಿಸ್ವಾರ್ಥ ಸೇವಾಕಾರ್ಯ ಶ್ಲಾಘನೀಯ ಎಂದರು.ಈ ವೇಳೆ ವಿಜಯಪುರದ ನೇತ್ರ ತಜ್ಞ ಡಾ.ಬಸವರಾಜ್ ಝಳಕಿ, ಮೂತ್ರಪಿಂಡ ತಜ್ಞ ಡಾ. ಸಂದೀಪ ಪಾಟೀಲ್, ಎಲುಬು-ಕೀಲು ತಜ್ಞ ಡಾ. ಪ್ರೀತಿಶ್ ಯಂಡಿಗೇರೆ ಮಾತನಾಡಿ, ಜನರು ತಮ್ಮ…

Read More