Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿರುವ ಕುಂಟೋಜಿ ಪೆಟ್ರೋಲ್ ಪಂಪ್ ಎದುರಿಗೆ ಇದ್ದ ಟೀ ಪಾಯಿಂಟ್ ಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಶುಕ್ರವಾರ ವ್ಯಕ್ತಿಯೊರ್ವ ಮೃತ ಪಟ್ಟ ಘಟನೆ ಜರುಗಿದೆ.ಮೃತ ದುರ್ದೈವಿ ಕಾಸೀಂಸಾಬ ಮಲ್ಲಿಕಸಾಬ ನದಾಫ್(೫೧) ಅವರು ಟೀ ಪಾಯಿಂಟ್ ನಡೆಸುತ್ತಿದ್ದರು. ಎಂದಿನಂತೆ ಟೀ ಪಾಯಿಂಟ್ಚ ನಡೆಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಟೀ ಪಾಯಿಂಟ್ ಗೆ (ಕಬ್ಬಿಣದ ತಳ್ಳಗಗಾಡಿ) ವಿದ್ಯುತ್ ತಗುಲಿದ ಪರಿಣಾಮ ವ್ಯಕ್ತಿ ಮೃತ ಪಟ್ಟಿದ್ದಾನೆ. ಸ್ಥಳಕ್ಕೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪಿಐ ಗುರುಶಾಂತ ದಾಶ್ಯಾಳ, ಪಿಎಸ್ಐಗಳಾದ ಐ.ಎಂ.ದುಂಡಸಿ, ವಿನೋದ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದರು.ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿರುವ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಜಯಪುರದಲ್ಲಿ ಜರುಗಿದ ಜಿಲ್ಲಾ ಮಟ್ಟದ ದಸರಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.ಪುರುಷರ ಹ್ಯಾಂಡ್ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಕ್ಕೆ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಹಿಳೆಯರ ಹ್ಯಾಂಡ್ಬಾಲ್ನಲ್ಲಿ ದ್ವಿತೀಯ ಸ್ಥಾನ, ಪುರುಷರ ಟೇಬಲ್ ಟೆನ್ನಿಸ್ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರಾದ ಮಹೇಶ ಸಂಗಮ, ವಿಜಯ ರಾಠೋಡ ತರಬೇತಿ ನೀಡಿದ್ದಾರೆ. ತರಬೇತಿ ನೀಡಿದ ಶಿಕ್ಷಕರಿಗೆ, ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಸಲಹಾ ಸಮಿತಿ ಅಧ್ಯಕ್ಷ ಅನಿಲ ಅಗರವಾಲ, ಪ್ರಾಚಾರ್ಯೆ ಆರ್.ಎಂ.ರೋಣದ, ಶಿಕ್ಷಕ ಸಿಬ್ಬಂದಿ ಅಭಿನಂದಿಸಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ಆಟಗಳಲ್ಲಿ ಬಾಲಕರ ಥ್ರೋಬಾಲ್ದಲ್ಲಿ ಪ್ರಥಮಸ್ಥಾನ, ಬಾಲಕರ ನೆಟ್ಬಾಲ್ ದ್ವಿತೀಯ, ಬಾಲಕಿಯರ ನೆಟ್ಬಾಲ್ ದ್ವಿತೀಯ, ಬಾಲಕಿಯರ ಹ್ಯಾಂಡ್ಬಾಲ್, ಚೆಸ್ನಲ್ಲಿ ದ್ವಿತೀಯ ಸ್ಥಾನಗಳನ್ನು ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ೨೯ ಜನ ವಿದ್ಯಾರ್ಥಿಗಳು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪಪ್ರಾಚಾರ್ಯ ಪಿ.ವ್ಹಿ.ಮಹಲಿನಮಠ, ಸುನೀಲ ಪಾಟೀಲ, ಎನ್.ಬಿ.ಪೂಜಾರಿ, ಶಿವಶರಣ ಬೂದಿಹಾಳ, ಬಿ.ಬಿ.ಜಮಾದಾರ, ಡಾ. ಶರಣಬಸವ ಜೋಗೂರ, ಎಸ್.ಜಿ.ಮಾರ್ಸನಳ್ಳಿ, ಎಸ್.ಎಚ್.ಜಾಧವ, ಡಾ.ವಿಶ್ವನಾಥ ನಂದಿಕೋಲ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ರೋಹಿತ ಸುಲ್ಪಿ, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ, ರಾಹುಲ ದಾಸರ್, ಸುಮಿತ್ರಾ ಕರನಾಳ, ಭಾಗ್ಯ ಕೋರಿ, ಎ.ಬಿ.ಬಮ್ಮಣ್ಣಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಚಾಲಿತ ಬೈಕ್ ನ ಹಿಂಬದಿ ಓಡಿ ಬಂದು ಬೈಕ್ ಬ್ಯಾಗ್ನಲ್ಲಿದ್ದ ರೂ.೨ ಲಕ್ಷ ರೂಪಾಯಿಗಳನ್ನು ಎಗರಿಸಿದ ಘಟನೆ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಇರುವ ಕೆನರಾ ಬ್ಯಾಂಕ್ ಬಳಿ ಶುಕ್ರವಾರ ಮದ್ಯಾಹ್ನ ನಡೆದಿದೆ.ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಯೊಬ್ಬರು ಮಧ್ಯಾಹ್ನ ೧೨ರ ಸುಮಾರು ಕೆನರಾ ಬ್ಯಾಂಕ್ ನಲ್ಲಿ ೨ಲಕ್ಷ ರೂಪಾಯಿಗಳನ್ನು ಡ್ರಾ ಮಾಡಿಕೊಂಡು ತಮ್ಮ ಸಿಟಿ ೧೦೦ ಬೈಕ್ ನ ಹಿಂಬದಿಯ ಬಟ್ಟೆಯ ಬ್ಯಾಗ್ನಲ್ಲಿಟ್ಟು ಹೋಗುವಾಗ ಬ್ಯಾಂಕ್ ಎದುರಿಗೆ ಕಾಯುತ್ತಿದ್ದ ಖದೀಮನೊಬ್ಬ ಬ್ಯಾಗ್ನಲ್ಲಿರುವ ಹಣ ಎಗರಿಸಿ ಪರಾರಿಯಾಗಿದ್ದಾನೆ. ಬ್ಯಾಂಕಿನ ಸಿಸಿಟಿವಿಯಲ್ಲಿ ಖದೀಮ ಹಣ ಕಬಳಿಸಿದ ವಿಡಿಯೋ ಸೆರೆಯಾಗಿದೆ ಎನ್ನಲಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳ್ಳನ ಕೈಗೆ ಕೋಳ ತೊಡಿಸಲು ಪೊಲೀಸರು ಬಲೆ ಬೀಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಲೋಣಿ(ಬಿ.ಕೆ) ಗ್ರಾಮದ ಶ್ರೀ ರುದ್ರೇಶ್ವರ ಪ್ರೌಢ ಶಾಲೆಯಲ್ಲಿ ವಿಜ್ಞಾನ ವಿಷಯದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಶೋಕ ಡುಣಗಿ ಹಾಗೂ ಕೇರೂರು ಗ್ರಾಮದ ಭೈರವನಾಥ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ವಿಠ್ಠಲ್ ಸಿದ್ದಗೊಂಡಪ್ಪ. ತಿಕ್ಕುಂಡಿ ಸೇವೆ ಸಲ್ಲಿಸುತ್ತಿರುವದನ್ನು ಗುರುತಿಸಿ, ಇವರನ್ನು ‘ಚಡಚಣ ತಾಲೂಕು ಮಟ್ಟದ ಶಿಕ್ಷಕರತ್ನ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಇವರ ವತಿಯಿಂದ ಚಡಚಣ ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಸೆಪ್ಟೆಂಬರ್. 29 ರ ಭಾನುವಾರದಂದು ಜರುಗುವ ‘ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ’ ಸಮಾರಂಭದಲ್ಲಿ ‘ಶಿಕ್ಷಕ ಧರೇಪ್ಪ ಪೂಜಾರಿ’ ಇವರನ್ನು ‘ಶಿಕ್ಷಕ ರತ್ನ ಪ್ರಶಸ್ತಿ’ಯನ್ನು ಪ್ರದಾನ ಮಾಡಿ, ಗೌರವಿಸಲಾಗುವುದು ಎಂದು ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಹಾಗೂ ಜಿಲ್ಲಾ ಕಾನಿಪ ಸಂಘದ ನಿರ್ದೇಶಕ ಶಂಕರ ಹಾವಿನಾಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಿಕ್ಷಕರೊಬ್ಬನನ್ನು ಅಪ್ಪಿ, ನೀವು ನಮ್ಮ ಶಾಲೆ ಬಿಟ್ಟು ಹೋಗಬೇಡಿ ಎಂದು ಅತ್ತು ಗೋಗರೆಯುತ್ತಿದ್ದರು. ಗುರುವಾರ ಬೆಳಿಗ್ಗೆಯಿಂದಲೂ ಸಂಜೆ ಅವರು ಶಾಲೆಯ ಆವರಣ ಬಿಟ್ಟು ಕದಲಲು ವಿದ್ಯಾರ್ಥಿಗಳು ಬಿಡಲಿಲ್ಲ, ವಿದ್ಯಾರ್ಥಿಗಳ ಭಾವುಕ ಕ್ಷಣಗಳಿಗೆ ಹಲವಾರು ಶಿಕ್ಷಕರ ಕಣ್ಣೀರಿನ ಹನಿಗಳೇ ಸಾಕ್ಷಿಗಳಾದವು.ಹೌದು, ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿದ್ದು ಆಲಮಟ್ಟಿ ಆರ್.ಎಸ್. ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ.ಅಲ್ಲಿಯ ವಿಜ್ಞಾನ ಶಿಕ್ಷಕ ರಾಘವೇಂದ್ರ ವಂದಗನೂರ ಈಚೆಗೆ ವರ್ಗಾವಣೆಗೆ ಕೌನ್ಸಲಿಂಗ್ ನಲ್ಲಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಹಿರೇಮಾಗಿ ಶಾಲೆಗೆ ಆಯ್ಕೆ ಮಾಡಿಕೊಂಡಿದ್ದರು. ಗುರುವಾರ, ಅವರು ಶಾಲೆಯಿಂದ ರಿಲೀವ್ ಆಗಿ ಇಂದು ಬೀಳ್ಕೊಡುವಾಗ ವಿದ್ಯಾರ್ಥಿಗಳ ರೋಧನ, ಆಪ್ತತೆ ನೆರೆದ ಎಲ್ಲರ ಮನಸ್ಸು ಭಾವುಕಗಳಾದವು.ಅವರು ಕಳೆದ ಮೂರು ವರ್ಷಗಳಿಂದ ವಿಜ್ಞಾನ ಶಿಕ್ಷಕರಾಗಿ ವಿಶಿಷ್ಟವಾಗಿ ಸೇವೆ ಸಲ್ಲಿಸಿದ್ದ ರಾಘವೇಂದ್ರ ವಂದಗನೂರ ಅವರ ಸೇವೆ ಅನನ್ಯ. ಅವರು ಹೋಗಬಾರದು ಎಂಬುದೇ ಅಲ್ಲಿ ನೆರೆದಿದ್ದ ಶಾಲೆಯ ೨೦೦ ಕ್ಕೂ ಅಧಿಕ ಮಕ್ಕಳ ಮುಗ್ಧ ಭಾವನೆಗಳು ಶಿಕ್ಷಕರ ಸೇವೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಇಂದಿನ ಜನತೆ ಆರೋಗ್ಯಯುತ, ಸದೃಢ-ಸಶಕ್ತರಾಗಿ ಸ್ವಾಭಿಮಾನದಿಂದ ಬದುಕಬೇಕೆಂದರೆ ಸ್ವಚ್ಛತೆಯ ಅಭ್ಯಾಸಗಳನ್ನು ಪ್ರತಿನಿತ್ಯ ರೂಢಿಸಿಕೊಂಡು, ಸ್ವಚ್ಛತೆಯನ್ನು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಬೇಕುಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಅವರು ಶುಕ್ರವಾರದಂದು ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ‘ಸ್ವಚ್ಛತೆಯೇ ಸೇವೆ’ ಅಭಿಯಾನದಡಿ “ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ”ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಆರೋಗ್ಯದ ಮೂಲವೇ ಸ್ವಚ್ಛತೆ ಮತ್ತು ನೈರ್ಮಲ್ಯವಾಗಿದ್ದು, ಇಂದಿನ ಯುವಕರು ಸಮೃದ್ಧ ಸಮಾಜವನ್ನು ನಿರ್ಮಿಸಲು ತಮ್ಮ ದಾಪುಗಾಲನ್ನು ಹಾಕಬೇಕು.’ಸ್ವಚ್ಛ ಮೇವ ಜಯತೇ’ ಎಂದು ಜಗತ್ತಿಗೆಲ್ಲ ಸಾರೋಣ. ಪ್ರತಿಯೊಬ್ಬರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದಾಗ ಮಾತ್ರ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತದ ಕನಸು ನನಸಾಗುತ್ತದೆ ಎಂದು ಹೇಳಿದರು.ಪ್ರಭಾರಿ ಪ್ರಾಚಾರ್ಯ ಪರಶುರಾಮ ರಜನಿಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸ್ವಚ್ಛತೆಯನ್ನು ಸೇವೆ’ ಎಂದು ಪರಿಗಣಿಸಿ ಅದಕ್ಕೆ ಹೆಚ್ಚು ಒತ್ತು ನೀಡಿದ್ದ ಗಾಂಧೀಜಿ ಅವರು, ಸಾರ್ವಜನಿಕ ಸ್ವಚ್ಛತೆಯ ಮಹತ್ವವನ್ನು ಸಾರಿದ್ದರು.ಪ್ರತಿಯೊಬ್ಬರ ಮನದಲ್ಲೂ ಸ್ವ-ಆಸಕ್ತಿಯಿಂದ ಸ್ವಚ್ಛತೆಯ ಅರಿವು ಜಾಗೃತವಾದಾಗ ಸ್ವಚ್ಛ ಭಾರತದ ಕನಸು ನನಸಾಗುತ್ತದೆ ಎಂದು ಹೇಳಿದರು.ಉಪನ್ಯಾಸಕರಾದ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ನಾದ ಕೆಡಿ ಗ್ರಾಮದ ಕಾಶಿಬಾಯಿ ತೆನೆಹಳ್ಳಿ ಪ್ರಥಮ ಹೆರಿಗೆ ನೋವಿನಿಂದ ಮಧ್ಯಾನ್ಹ ನರಳುತ್ತಿದ್ದರು.ಕಾಶಿಬಾಯಿ ಗಂಡ ಪರಶುರಾಮ ಆಶಾ ಕಾರ್ಯಕರ್ತೆ ಜ್ಯೋತಿ ಇಂಡಿ ಮತ್ತು ಎಸ್.ಎ. ಶೇಖ ಇವರನ್ನು ಸಂಪರ್ಕಿಸಿದರು.ಆಗ ಆಶಾ ಕಾರ್ಯಕರ್ತೆಯರು ಕ್ಷೇತ್ರ ಆರೋಗ್ಯ ಮೇಲ್ವಿಚಾರಕ ವೈ.ಎಂ.ಪೂಜಾರಿ ಇವರನ್ನು ಸಂಪರ್ಕಿಸಿದರು.ಆಗ ವೈ.ಎಂ.ಪೂಜಾರಿಯವರು ಖಾಸಗಿ ವಾಹನದಲ್ಲಿ ಹೆರಿಗೆ ವೇಳೆ ಬೇಕಾಗುವ ಸಲಕರಣೆ ಗಳೊಂದಿಗೆ ಬರಲು ಜ್ಯೋತಿ ಇಂಡಿ, ಶೇಖ ಆಶಾ ಕಾರ್ಯಕರ್ತರಿಗೆ ಬರಲು ತಿಳಿಸಿದರು.ಇಂಡಿ ಬರುವ ಮಧ್ಯೆ ಸಾಲೋಟಗಿ ಗ್ರಾಮದ ತೋಟದ ಹತ್ತಿರ ನೋವು ಹೆಚ್ಚಾದಾಗ ತೋಟದ ಮಾಲಿಕರ ಪರವಾನಿಕೆ ಪಡೆದು ಅಲ್ಲಿಯೇ ವಾಹನ ನಿಲ್ಲಿಸಿ ಅವರಿಂದ ಆಸರೆಗೆಂದು ಸೀರೆ ಪಡೆದು ಕಾರಿನಲ್ಲಿಯೇ ಹೆರಿಗೆ ಮಾಡಿದ ಘಟನೆ ನಡೆದಿದೆ.ಹೆರಿಗೆ ನಂತರ ತಾಯಿ ಮತ್ತು ಮಗುವನ್ನು ಇಂಡಿಯ ಸರಕಾರಿ ಆಸ್ಪತ್ರೆಗೆ ತಂದಿದ್ದಾರೆ.ಅಲ್ಲಿ ಚಿಕ್ಕ ಮಕ್ಕಳ ತಜ್ಞ ಡಾ.ವಿಪುಲ್ ಕೋಳೆಕರ, ಡಾ.ಪ್ರಶಾಂತ ಧೂಮಗೊಂಡ, ಶುಶ್ರಿಕೆ ವಿಜಯಲಕ್ಷ್ಮಿ ಹಾದಿಮನಿ ಮತ್ತು ವೈ.ಎಂ.ಪೂಜಾರಿ ತಪಾಸಣೆ ಮಾಡಿ ಮಗು ೧ ಕೆ.ಜಿ ೫೦೦ ಗ್ರಾಂ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಅನುಸೂಚಿತ ಜಾತಿ, ಪಂಗಡದ ಜನರ ಮೇಲೆ ದೌರ್ಜನ್ಯ ನಡೆದ ದೂರು ದಾಖಲಾದರೆ ತ್ವರಿತವಾಗಿ ಕ್ರಮ ಕೈಕೊಳ್ಳಬೇಕು ಇಲ್ಲದಿದ್ದರೆ ಸಂಬಂದಿತ ಅಧಿಕಾರಿವಿರುದ್ಧ ಕ್ರಮ ಕೈಕೊಳ್ಳಲಾಗುವುದು ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ಮಿನಿ ವಿಧಾನಸೌಧದ ಕಂದಾಯ ಉಪವಿಬಾಗಾಧಿಕಾರಿಗಳ ಸಭಾಭವನದಲ್ಲಿ ನಡೆದ ಉಪವಿಭಾಗೀಯ ಮಟ್ಟದ ಎಸ್ ಸಿ, ಎಸ್ ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿ ಹಾಗೂ ಸಿಬ್ಬಂದಿವರ್ಗ ಸೌಜನ್ಯದಿಂದ ವರ್ತಿಸಬೇಕು. ಪರಿಶಿಷ್ಠ ಜಾತಿ, ಪಂಗಡದವರು ವಿವಿಧ ಯೋಜನೆಗಳ ಸಾಲ ಸೌಲಭ್ಯ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಿ ಶೀಘ್ರ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದರು.ಡಿ.ವಾಯ್.ಎಸ್.ಪಿ ಜಗದೀಶ ಮಾತನಾಡಿ ದೌರ್ಜನ್ಯದಲ್ಲಿ ನೊಂದ ಸಂತೃಸ್ತರಿಗೆ ತಕ್ಷಣ ಇಲಾಖೆಯಿಂದ ಪರಿಹಾರ ಧನ ನೀಡಲು ಕೇಳಿಕೊಂಡರು.ಸಹಾಯಕ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ ಇಂಡಿಯ ಉಮೇಶ ಲಮಾಣಿ ಮಾತನಾಡಿ ಜನೇವರಿ ೨೦೨೪ ರಿಂದ ಇಲ್ಲಿಯ ವರೆಗೆ ೧೭ ಪ್ರಕರಣ ದಾಖಲಾಗಿದ್ದು ಅದರಲ್ಲಿ ೯ ಪ್ರಕರಣಗಳಿಗೆ ಪರಿಹಾರ ನೀಡಿದ್ದು…
Udayarashmi kannada daily newspaper
