Author: editor.udayarashmi@gmail.com

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಮೋಘ ಸಾಧನೆ ಮಾಡಿದ ವಿಜಯಪುರದ ಎಕ್ಸಲಂಟ್ ವಿಜ್ಞಾನ ಪ.ಪೂ ಕಾಲೇಜು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ಸಾಲಿನ ಬಹು ನಿರೀಕ್ಷಿತ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟಗೊಂಡಿದ್ದು ವಿಜಯಪುರ ನಗರದ ಪ್ರತಿಷ್ಠಿತ ಎಕ್ಸಲಂಟ್ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಅದರಲ್ಲಿ ಅನುಷ್ಕಾ ಮಹಿಶಾಳೆ ೬೦೦ ಕ್ಕೆ ೫೮೮ ಅಂಕಗಳನ್ನು ಪಡೆಯುವುದರೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನಪಡೆದರೆ, ನಿಖಿಲ ಕಿತ್ತೂರ ೫೮೫ ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಪ್ರತೀಕ ಚವ್ಹಾಣ ಹಾಗೂ ಅಂಜನಾ ಹೊನ್ನುಂಗುರ ೫೮೪ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ತೃತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಉಳಿದಂತೆ ಮಲ್ಲಿಕಾರ್ಜುನ ಮುಚ್ಚಂಡಿ(೫೮೨), ಅಕ್ಷತಾ ದೊಡ್ಡಮನಿ (೫೮೨), ರಕ್ಷಿತಾ ಬಿರಾದಾರ (೫೮೨), ಅಮನ್ ಮದಬಾವಿ(೫೮೧), ಶ್ರೇಯಾ ಗಂಗರಗೊಂಡ(೫೮೧) ಶ್ರೇಯಾ ಮುರುಗುಂಡೆ (೫೮೦), ಸಹನಾ ಮಾವಿನಗಿಡದ(೫೭೯), ಅಮರ್ ಇರಕಲ್(೫೭೯), ಧರಣಿ ಜ್ಯೋಷಿ(೫೭೯), ಸಾವಿತ್ರಿ ಸುನೀಲ್ ಪಾಟೀಲ(೫೭೯), ಅನುಶ್ರಿ ಬಿರಾದಾರ (೫೭೮), ಸುದೀಪ ದೊರನಳ್ಳಿ (೫೭೮), ವೈಷ್ಣವಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬ -೨೭ನೇ ಸಾಲಿನ ಜಿಲ್ಲಾ ಬಾಲಭವನದ ವತಿಯಿಂದ ೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಏ.೧೦ ರಿಂದ ೨೪ ರವರೆಗೆ ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧:೩೦ ಗಂಟೆಯವರೆಗೆ ನಡೆಯಲಿದೆ. ಮಕ್ಕಳ ಸೃಜನಾತ್ಮಕತೆ, ಕೌಶಲ್ಯಾಭಿವೃದ್ಧಿ ಮತ್ತು ಮನರಂಜನೆಗಾಗಿ ಚಿತ್ರಕಲೆ, ನೃತ್ಯ, ಕರಾಟೆ ಹಾಗೂ ಕರಕುಶಲ ಕಲೆ ಚಟುವಟಿಕೆಗಳು ಶಿಬಿರದಲ್ಲಿ ಏರ್ಪಡಿಸಿದೆ. ಕಚೇರಿ ವೇಳೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಜಿಲ್ಲಾ ಬಾಲಭವನ, ಮನಗೂಳಿ ರಸ್ತೆ, ವಿಜಯಪುರ ಅವರನ್ನು ಮೊ.೭೭೬೦೪೦೨೨೩೯ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿಗಾಗಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇ೮ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳ ಪಾಲಕರು-ಪೋಷಕರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ hಣಣಠಿs://eಡಿಠಿ.ಜom.ಞಚಿಡಿಟಿಚಿಣಚಿಞಚಿ.gov.iಟಿ/ಟಞg ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂರವಾಣಿ ಸಂಖ್ಯೆ:೦೮೩೫೨-೨೯೫೫೨೩, ವಿಜಯಪುರ ತಾಲೂಕು ವಿಸ್ತರಣಾಧಿಕಾರಿಗಳು ಉಪವಿಭಾಗ ಮೊ. ಸಂಖ್ಯೆ: ೮೯೭೦೭೦೪೯೮೬, ತಾಲೂಕು ವಿಸ್ತರಣಾಧಿಕಾರಿಗಳು ಉಪಯುವಾಗ ಇಂಡಿ ಮೊ. ಸಂಖ್ಯೆ ೯೯೦೦೨೨೯೭೭೮೦, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ವಿಜಯಪುರ ಮೊ. ಸಂಖ್ಯೆ ೮೧೨೩೭೧೧೦೭೬೬, ಬಸವನ ಬಾಗೇವಾಡಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ. ಸಂಖ್ಯೆ ೯೯೭೨೩೪೦೭೨೧, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ…

Read More

ವಿಜಯಪುರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನಗಣತಿ ಗಣತಿದಾರರು ಮತ್ತು ಮೇಲ್ವಿಚಾರಕರು ಸರಿಯಾದ ರೀತಿಯಲ್ಲಿ ತರಬೇತಿ ಪಡೆದುಕೊಂಡು ಗಣತಿ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಜೊತೆಗೆ ಸಾರ್ವಜನಿಕರೂ ಜನ ಗಣತಿ ಕಾರ್ಯದ ಯಶಸ್ಸಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ.ಅವರು ಹೇಳಿದರು. ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ, ದೇಶದ ಸಾಮಾಜಿಕ, ಆರ್ಥಿಕ ಸ್ಥಿತಿಗಳು ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ದಾಖಲಿಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು, ಹಾಗಾಗಿ ಜನಗಣತಿ-೨೦೨೭ರ ಮೇಲ್ವಿಚಾರಕರ ಮತ್ತು ಗಣತಿದಾರರಿಗೆ ಹಮ್ಮಿಕೊಳ್ಳಲಾದ ತರಬೇತಿಯನ್ನು ಸರಿಯಾಗಿ ಪಡೆದುಕೊಂಡು, ಗಣತಿ ಕಾರ್ಯಕ್ಕೆ ತೆರಳಿದಾಗ ಸಾರ್ವಜನಿಕರಿಗೆ ಸೂಕ್ತ ತಿಳಿವಳಿಕೆ ನೀಡಿ, ಗಣತಿ ಕಾರ್ಯಕ್ಕೆ ಒಳಪಡಿಸುವ ಮೂಲಕ ಜನಗಣತಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದ ಅವರು, ಜಿಲ್ಲೆಯ ಜನತೆ ಜನಗಣತಿಯಿಂದ ಹೊರುಗುಳಿಯಬಾದು ಎಂದರು.ಡಿಜಿಟಲ್‌ಗಣತಿಇದೇ ಮೊದಲ ಬಾರಿಗೆ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ.೨ ಹಂತಗಳಲ್ಲಿ ನಡೆಯಲಿರುವ ಗಣತಿ ಕಾರ್ಯವನ್ನು ಸ್ವತಃ ಗಣತಿದಾರರು ವಿಶೇಷ ಕಾಳಜಿ ವಹಿಸುವ…

Read More

ಗ್ರಾಮೀಣ – ನಗರ ಭಾಗದಲ್ಲಿ ಕುಡಿಯುವ ನೀರಿಗೆ ಅನುದಾನದ ಕೊರತೆಯೂ ಇಲ್ಲ | ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ. ಅದರಂತೆ, ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸಬಹುದಾದ ೧೧ ತಾಲೂಕುಗಳ ೩೮ ಗ್ರಾಮ ಪಂಚಾಯತಿ ವ್ಯಾಪ್ತಿಯ ೬೫ ಗ್ರಾಮಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ನೀರಿನ ಯಾವುದೇ ಸಮಸ್ಯೆ ಉಂಟಾಗದAತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏ.೯ರ ಇದೇ ದಿನ ಆಲಮಟ್ಟಿ ಜಲಾಶಯದಲ್ಲಿ ಕಳೆದ ವರ್ಷ ೨೯.೭೧೨ ಟಿಎಂಸಿ ನೀರಿತ್ತು, ಪ್ರಸ್ತುತ ೩೪.೮೯೫ ಟಿಎಂಸಿ ಅಂದರೆ ಅಂದಾಜು ೫.೧೮೩ ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ ತಿಳಿಸಿದರು. ನಾರಾಯಣಪುರ ಜಲಾಶಯದಲ್ಲಿ ಕಳೆದ ವರ್ಷ ೧೯.೫೯೫ ಟಿಎಂಸಿ, ಪ್ರಸ್ತುತ ೨೧.೨೬೯ ಟಿಎಂಸಿ ಅಂದರೆ ಅಂದಾಜು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಸರ್ವೈಕಲ್ ಸ್ಪಾಂಡೊಲೈಸಿಸ್(cervical spondylsis) ಲಕ್ಷಣಗಳು, ಕುತ್ತಿಗೆಯ ಹಿಂಬಾಗ ಬಿಗಿಯುವುದು, ಕುತ್ತಿಗೆ ನೋವು, ಕುತ್ತಿಗೆಯನ್ನು ತಿರಿಗಿಸಲು ಕಷ್ಟವಾಗುವುದು, ಭುಜದಿಂದ ಕೈಗಳಲ್ಲಿ ನೋವು, ಹರಡುವ ಸಮಸ್ಯೆ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರವನ್ನು ಎಪ್ರಿಲ್ 13 ರಿಂದ ಎಪ್ರಿಲ್18 ರ ವರೆಗೆ ನಡೆಯಲಿದೆ.ಬಿ.ಎಲ್.ಡಿ.ಇ ಆಯುರ್ವೇದ ಆಸ್ಪತ್ರೆಯಲ್ಲಿ‌ ಸೋಮವಾರದಿಂದ ಶನಿವಾರದಂದು ಆರು ದಿನಗಳ ಕಾಲ ನಡೆಯಲಿದೆ. ಮೇಲಿನ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು(30ರಿಂದ 60 ವರ್ಷದವರಿಗೆ) ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9513397413 ಸಂಪರ್ಕಿಸಬಹುದಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಆಲಗೂರು ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಏಪ್ರಿಲ್ 14ರ ಸಂಭ್ರಮದ ಅಂಗವಾಗಿ “ಅಂಬೇಡ್ಕರ್ ಅವರ ಕುರಿತು 100 ಅಂಕಗಳ ಸಿಇಟಿ ಮಾದರಿ ಪರೀಕ್ಷೆ” ನಡೆಯಲಿದೆ.ಪರೀಕ್ಷೆ ಏಪ್ರಿಲ್ 10, 2026ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಹಾಗೂ ಆಸಕ್ತರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.ಈ ಪರೀಕ್ಷೆಯಲ್ಲಿ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿದೆ. ಪ್ರಥಮ ಬಹುಮಾನ ₹500, ದ್ವಿತೀಯ ಬಹುಮಾನ ₹300 ಹಾಗೂ ತೃತೀಯ ಬಹುಮಾನ ₹200 ನಿಗದಿಪಡಿಸಲಾಗಿದೆ.ಹಾಗೂ ಭಾಗವಹಿಸುವ ಪ್ರತಿಯೊಬ್ಬರೂ ಅಂಬೇಡ್ಕರ್ ಅವರ ಜೀವನ ಹಾಗೂ ಸಾಧನೆಗಳ ಕುರಿತು ತಿಳಿದುಕೊಳ್ಳುವ ಅವಕಾಶವನ್ನು ಪಡೆಯಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.ಕಾರ್ಯಕ್ರಮದ ಬಹುಮಾನ ದಾನಿಗಳಾಗಿ ಸಾರಿಗೆ ನೌಕರ ಮಹಾದೇವ ಫೋತರಾಜ್ ಅವರು ನೀಡುತ್ತಿದ್ದಾರೆ, ಸ್ಥಳೀಯ ಶಿಕ್ಷಣಾಭಿಮಾನಿಗಳು ಮತ್ತು ಗ್ರಾಮಸ್ಥರು ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದಾರೆ.ಕಾರ್ಯಕ್ರಮದ ಸಂಘಟಕರಾಗಿ ಶಿಕ್ಷಕ ಆರ್.ಎಸ್. ದೇಸಾಯಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಅಂಬೇಡ್ಕರ್ ಅವರ ಆದರ್ಶಗಳು…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಭಾರತ ಸರ್ಕಾರವು 2027ರ ಜನಗಣತಿ ಕಾರ್ಯಕ್ರಮವನ್ನು ಡಿಜಿಟಲ್ ಮಾದರಿಯಲ್ಲಿ ಪ್ರಾರಂಭಿಸುತ್ತಿರುವ ಹಿನ್ನೆಲೆಯಲ್ಲಿ ಜಮಖಂಡಿ ನಗರದಲ್ಲಿ ಜಾಗೃತಿ ಮೂಡಿಸಲು ಬೈಕ್ ರ್ಯಾಲಿಯನ್ನು ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮಾತನಾಡಿ, ಪ್ರತಿ 10 ವರ್ಷಕ್ಕೊಮ್ಮೆ ನಡೆಯುವ ಜನಗಣತಿ ಈ ಬಾರಿ ಪ್ರಪ್ರಥಮ ಬಾರಿಗೆ ಡಿಜಿಟಲ್ ವಿಧಾನದಲ್ಲಿ ನಡೆಯುತ್ತಿದೆ ಎಂದು ಹೇಳಿದರು. ಸಾರ್ವಜನಿಕರಿಗೆ ಸ್ವಯಂ ಗಣತಿ (Self Enumera-tion) ಮಾಡುವ ಅವಕಾಶ ನೀಡಲಾಗಿದ್ದು, ಎಲ್ಲರೂ https://se.census.gov.in ವೆಬ್ಬಸೈಟ್ ಮೂಲಕ ತಮ್ಮ ಮಾಹಿತಿ ಸಲ್ಲಿಸಿ ಈ ಮಹತ್ತರ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಏಪ್ರಿಲ್ 15ರೊಳಗೆ ಸ್ವಯಂಗಣತಿ ಪೂರ್ಣಗೊಳಿಸಿದ ಬಳಿಕ ದೊರೆಯುವ ಅಂಕಿತ ತಿಳಿಸಿದರು.ಸಂಖ್ಯೆಯನ್ನು (Acknowl-edgement Number) ಗಣತಿದಾರರಿಗೆ ನೀಡುವಂತೆ ತಿಳಿಸಿದರು.ಪೌರಾಯುಕ್ತ ಜ್ಯೋತಿ ಗಿರೀಶ್ ಮಾತನಾಡಿ, ಏಪ್ರಿಲ್ 1ರಿಂದ 15ರವರೆಗೆ ಸ್ವಯಂ ಗಣತಿಯ ಅವಕಾಶ ಲಭ್ಯವಿದ್ದು, ಇದರಿಂದ ಸಮಯ ಉಳಿತಾಯವಾಗಲಿದೆ ಎಂದು ಹೇಳಿದರು.ಮನೆಗೆ ಬರುವ ಗಣತಿದಾರರಿಗೆ ಉತ್ತರ ನೀಡುವ ಬದಲು ನಾಗರಿಕರು ತಮ್ಮ ಮನೆಯಲ್ಲಿ ಸುಲಭವಾಗಿ ಮಾಹಿತಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.ಸುಮಾರು 35…

Read More

ಲೇಖನ- ಬಸಲಿಂಗಯ್ಯ ಹಿರೇಮಠಶಿಕ್ಷಕರು, ಸಿಂದಗಿವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ​ಪೂರ್ಣಯೋಗದಲ್ಲಿ ವಿಶೇಷ ಆಸನ ಅಥವಾ ಪ್ರಾಣಾಯಾಮಗಳಿಗಿಂತ ‘ಸಮರ್ಪಣಾ ಭಾವ’ ಮುಖ್ಯ. ನಾವು ಮಾಡುವ ಪ್ರತಿಯೊಂದು ಕೆಲಸವನ್ನು (ಕಚೇರಿ ಕೆಲಸ, ಓದು, ಕಲೆ) ದೈವಕ್ಕೆ ಅರ್ಪಿಸುವ ಮೂಲಕ ಯೋಗವನ್ನಾಗಿ ಮಾಡಬಹುದು ಎಂಬುದು ಅರವಿಂದರ ನಿಲುವು.​ಪೂರ್ಣಯೋಗದ ಮೂರು ಪ್ರಮುಖ ಹಂತಗಳು:​ಆತ್ಮಶುದ್ಧಿ: ಅಹಂಕಾರವನ್ನು ಬಿಟ್ಟು ಮನಸ್ಸನ್ನು ಸ್ಥಿಮಿತಕ್ಕೆ ತರುವುದು.​ಸಮರ್ಪಣೆ: ನಮ್ಮ ಇಡೀ ಅಸ್ತಿತ್ವವನ್ನು ದೈವೀ ಶಕ್ತಿಗೆ ಒಪ್ಪಿಸುವುದು.​ಪರಿವರ್ತನೆ: ದೈವೀ ಶಕ್ತಿಯ ಪ್ರಭಾವದಿಂದ ನಮ್ಮ ಸ್ವಭಾವವೇ ಬದಲಾಗುವುದು.ಅರವಿಂದರ ಪೂರ್ಣಯೋಗವನ್ನು ​ಸಂಕ್ಷಿಪ್ತವಾಗಿ ಹೇಳುವುದಾದರೆ, “ಜೀವನದಿಂದ ಪಲಾಯನ ಮಾಡುವುದಲ್ಲ, ಜೀವನವನ್ನು ಗೆದ್ದು ಅದನ್ನು ದಿವ್ಯವನ್ನಾಗಿ ಮಾಡುವುದೇ ಪೂರ್ಣಯೋಗ.”

Read More

ಲೇಖನ- ಡಾ ಶಶಿಕಾಂತ ಪಟ್ಟಣ ರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಗೊಗ್ಗವ್ವೆ ಬಾಲ್ಯದಿಂದಲೂ ವಿಶಿಷ್ಟ ಶಿವಭಕ್ತೆ. ಇವಳ ಜೀವನ ಒಂದು ಬಗೆಯ ಹೋರಾಟದಿಂದ ಕೂಡಿದೆ. ಹೆತ್ತವರು ಈಕೆಗೆ ವಿವಾಹ ಮಾಡಲು ಬಯಸಿದಾಗ, ಮದುವೆ ಬಗ್ಗೆ ಆಸಕ್ತಿ ಇರದ ಈಕೆ ‘ಗೊಗ್ಗಳೇಶ್ವರ’ ದೇಗುಲದಲ್ಲಿ ಅಡಗಿ ಕುಳಿತು ವಿವಾಹ ಆಗುವ ಸಂದರ್ಭವನ್ನು ತಪ್ಪಿಸಿಕೊಂಡ ಳಂತೆ. ಇವಳು ಕೇರಳದ ಅವಳೂರಿನ ಗೊಗ್ಗಳೇಶ್ವರ ದೇವಾಲಯದಲ್ಲಿ ಧೂಪದ ಕಾಯಕ ಮಾಡುತ್ತಿದ್ದುದರಿಂದ ಈಕೆಯನ್ನು ‘ಧೂಪದ ಗೊಗ್ಗವ್ವೆ’ಯೆಂದೂ ಕರೆಯುವರು. ಗುಗ್ಗಳ ಧೂಪ ಸಸ್ಯದ ಒಂದು ಪ್ರಕಾರದ ಅಂಟು. ಪೂಜೆ ಸಮಾರಂಭಗಳಲ್ಲಿ ಪರಿಮಳ ಸೂಸುವ ಕಾರ್ಯಕ್ಕೆ ಬೆಂಕಿಯಲ್ಲಿ ಈ ಧೂಪದ ಪದಾರ್ಥವನ್ನು ಹಾಕಿ ವಾತಾವರಣವನ್ನು ಪ್ರಸನ್ನಗೊಳಿಸುವ ಕೆಲಸ ಕಾಯಕವಾಗಿತ್ತು.ಈಕೆಯ ವಚನಗಳ ಅಂಕಿತ ‘ನಾಸ್ತಿನಾಥಾ’. ಗೊಗ್ಗವ್ವೆಜನನ೧೨ ನೆಯ ಶತಮಾನಅಂಕಿತನಾಮನಾಸ್ತಿನಾಥಾಒಟ್ಟು ವಚನಗಳು. ೬ಇವರು ೧೨ನೇ ಶತಮಾನದ ವಚನಕಾರರಲ್ಲಿ ಒಬ್ಬರು. ಇವರು ಬಾಲ್ಯದಿಂದಲೆ ಶಿವನ ಆರಾಧಕರಾಗಿದ್ದರು. ಇವರು ಮೂಲತಃ ಕೇರಳ ರಾಜ್ಯದ ಅವಲೂರಿನವರು. ಇವರು ತಮ್ಮ ಮದುವೆಯ ವಯಸ್ಸಿಗೆ ಬಂದಾಗ ಮನೆಯವರು ಇವರ ಮದುವೆ ವಿಷಯದ ಪ್ರಸ್ತಾವನೆ ಇವರ…

Read More