Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಸ್ಕೃತದಲ್ಲಿ ಶ್ಲೋಕದ ರೂಪದಲ್ಲಿರುವ ಆಯುರ್ವೇದ ಔಷಧಿಗಳ ಮಾಹಿತಿಯನ್ನು ಯುವವೈದ್ಯರು ಮತ್ತು ಸಂಶೋಧಕರಿಗೆ ಸರಳವಾಗಿ ಅಧ್ಯಯನ ಮಾಡಲು ‘ಅಗದ ಸಮುಚ್ಚಯ’ ಪುಸ್ತಕ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್.ವಿ.ಕುಲಕರ್ಣಿ ಹೇಳಿದ್ದಾರೆ.ಗುರುವಾರ ವಿವಿ ಕಚೇರಿಯಲ್ಲಿ ಎ. ವಿ. ಎಸ್ ಆಯುರ್ವೇದ ಕಾಲೇಜಿನ ಅಗದ ತಂತ್ರವಿಭಾಗದ ಮುಖ್ಯಸ್ಥೆ ಡಾ.ಮಲ್ಲಮ್ಮ ಬಿರಾದಾರ ಅವರು ರಚಿಸಿದ ‘ಅಗದ ಸಮುಚ್ಚಯ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ಡಾ.ಮಲ್ಲಮ್ಮ ಬಿರಾದಾರ ಮಾತನಾಡಿ, ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಆಯುರ್ವೇದ ವಿಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಈ ಪುಸ್ತಕದಲ್ಲಿ ಆಯುರ್ವೇದದಲ್ಲಿ ಉಲ್ಲೇಖಿಸಿರುವ ಬಹಳಷ್ಟು ವನಸ್ಪತಿ ಮತ್ತು ಗಿಡಮೂಲಿಕೆಗಳ ಮಾಹಿತಿ ಇದೆ. ಒಂದೇ ಹೆಸರನ್ನು ಹಲವಾರು ಗಿಡಮೂಲಿಕೆಗಳಿಗೆ ಬಳಸಿರುವುದರಿಂದ ನಿಜವಾದ ವಿಷನಾಶಕ ದ್ರವ್ಯ ಯಾವುದು? ಯಾವ ಭಾಗದಲ್ಲಿ ಉತ್ಕೃಷ್ಟ ಗುಣಗಳಿವೆ? ಎಂಬುದನ್ನು ಸವಿಸ್ತಾರವಾಗಿ ತಿಳಿಸಲಾಗಿದೆ. ವಿಷಜಂತುಗಳಿಂದ ಅಪಾಯ ಎದುರಾದ ಸಂದರ್ಭದಲ್ಲಿ ತುರ್ತಾಗಿ ಕೈಗೊಳ್ಳಬೇಕಿರುವ ಕ್ರಮಗಳು, ಔಷಧಿ ಬಳಕೆ ವಿಧಾನದ ಕುರಿತು ಮಾಹಿತಿ ನೀಡಲಾಗಿದೆ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಗೆ ಅಂತಿಮ ಮುದ್ರೆ ಒತ್ತಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಡೆ ಸ್ವಾಗತಾರ್ಹ ಎಂದು ಹಿರಿಯ ಪತ್ರಕರ್ತ ಸಂಜೀವರಾವ್ ಕುಲ್ಕರ್ಣಿ ಹರ್ಷ ವ್ಯಕ್ತಪಡಿಸಿದರು.ಈ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ಅವರು, ದಶಕಗಳ ಬೇಡಿಕೆ ಈಡೇರಿಕೆಗೆ ಸಂತಸ ವ್ಯಕ್ತಪಡಿಸುತ್ತಾ, ಈ ಆದೇಶದಿಂದ ರಾಜ್ಯದ ಅರ್ಹ ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಬಹಳಷ್ಟು ಸಹಕಾರಿಯಾಗಲಿದೆ ಎಂದವರು, ಪ್ರಣಾಳಿಕೆಯಲ್ಲಿ ತಿಳಿಸಿದಂತೆ ನುಡಿದಂತೆ ನಡೆದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಅರ್ಪಿಸಿದ ಅವರು ಯೋಜನೆ ಜಾರಿಗೊಳಿಸಲು ಕಾರಣೀಭೂತರಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾದ್ಯಮ ಸಲಹೆಗಾರ ಕೆ ವಿ ಪ್ರಭಾಕರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರಿಗೆ ಅಭಿನಂದನೆ ಸಲ್ಲಿಸಿದರು.

Read More

ಗ್ರಾಮ ಆಡಳಿತ ಲೆಕ್ಕಾಧಿಕಾರಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ ರೈತ ಮುಖಂಡರು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ ಲೆಕ್ಕಾಧಿಕಾರಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಿ ರಾಜ್ಯದಲ್ಲಿ ೫೦ ಕ್ಕೂ ಹೆಚ್ಚು ತಲಾಟಿಗಳು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ, ಸಾರ್ವಜನಿಕರಿಗೆ, ರೈತರಿಗೆ ವಿವಿಧ ಸೇವೆಗಳನ್ನು ಒದಗಿಸಬೇಕಾಗಿರುವ ಗ್ರಾಮ ಆಡಳಿತ ಲೆಕ್ಕಾಧಿಕಾರಿಗಳು ಹಾಗೂ ಸಹಾಯಕ ಸಲಹೆಗಾರರಿಗೆ ಕೆಲಸ ಹೆಚ್ಚಾಗಿ ಮಾನಸಿಕವಾಗಿ ನೊಂದುಕೊಳ್ಳುವುದು ಮಾತ್ರವಲ್ಲದೇ ಕೆಲಸದ ಒತ್ತಡದಿಂದ ಸಾರ್ವಜನಿಕರಿಗೆ ಸಿಗದೇ ಜನಸಾಮಾನ್ಯರಿಂದ ಹಿಡಿ ಶಾಪ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆರೋಪಿಸಿದೆ.ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಕಂದಾಯ ಸಚಿವ ಕೃಷ್ಣ ಭೈರೆಗೌಡ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, ಸರಕಾರ ವಿವಿಧ ಇಲಾಖೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೊಟಿ ವಿನಾಃ ಹರಣ ಮಾಡಿ, ಯಾವುದೇ ಕೆಲಸಕ್ಕೆ ಬರದ ಕಟ್ಟಡ ಸೇರಿದಂತೆ ಬೇಕಾಬಿಟ್ಟಿ ಯೋಜನೆಗಳಿಗೆ ಹಣ ವ್ಯಯ ಮಾಡುತ್ತಿದೆ. ಆದರೆ ಇಂದು ಗ್ರಾಮ ಲೆಕ್ಕಾಧಿಕಾರಿಗಳಿಗೆ ಸ್ವಂತ ಸೂರು ಇಲ್ಲದೇ ಹಳ್ಳಿ ಹಳ್ಳಿ ತಿರುಗಾಡಿ ಕೊನೆಗೆ ತಾಲೂಕಾ ಕಛೇರಿಗೆ ಅಲೆದಾಡಿ…

Read More

ಮುಡಾ ಹಗರಣ | ಮೈಸೂರು ಲೋಕಾಯುಕ್ತದಲ್ಲಿ ದಾಖಲು | ಸಿಎಂ ಸಿದ್ದರಾಮಯ್ಯ A1, ಅವರ ಪತ್ನಿ ಪಾರ್ವತಿ A2 ಆರೋಪಿ ಉದಯರಶ್ಮಿ ದಿನಪತ್ರಿಕೆ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಎಫ್ಐಆರ್ ದಾಖಲಾಗಿದೆ.ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಲೋಕಾಯುಕ್ತದಲ್ಲಿ ಎಫ್​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ.ಸಿಆರ್‌ಪಿಸಿ ಅಡಿಯಲ್ಲಿ ಎಫ್​ಐಆರ್​ ದಾಖಲಿಸಿ ಎಂದು ಕೋರ್ಟ್​ ಆದೇಶ ನೀಡಿತ್ತು. ಹಲವು ಸೆಕ್ಷನ್ ಗಳಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿತ್ತು. ನ್ಯಾಯಾಲಯ ಸೂಚಿಸಿರುವ ಐಪಿಸಿ…

Read More

ವಿಜಯಪುರದ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಆಯೋಜನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಸಿದ್ದೇಶ್ವರ ಸಂಸ್ಥೆಯ ಅಡಿಯಲ್ಲಿ ನಡೆಯುವ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಗುರುವಾರ ಯು ಕೆ ಜಿ ಮುದ್ದು ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಹಣ್ಣು ಹಮತ್ತು ವಿವಿಧ ರೀತಿಯ ತರಕಾರಿ ಚಟುವಟಿಕೆ ಏರ್ಪಡಿಸಲಾಗಿತ್ತುಈ ಸಂದರ್ಭದಲ್ಲಿ ಕಿಂಡರ್‌ಗಾರ್ಟನ್‌ ಮಕ್ಕಳು ವಿವಿಧ ಹಣ್ಣು ಮತ್ತು ತರಕಾರಿಗಳ ತೊಡಗು ಉಡಿದು ಶಾಲೆಯಲ್ಲಿ ಗಮನ ಸೆಳೆದರು.ಚಟುವಟಿಕೆಗೆ ಕೊಡುಗೆ ನೀಡಿದ ಮಕ್ಕಳು ಟೊಮ್ಯಾಟೊ, ಬೆಳ್ಳುಳ್ಳಿ, ಪೈನಾಪಲ್, ಕಿವಿ ಸೇರಿದಂತೆ ವಿವಿಧ ಹಣ್ಣುಗಳ ಆಕೃತಿಯಲ್ಲಿ ಸಿದ್ಧಗೊಂಡು ಮುದ್ರಣದಂತ ಸೊಬಗಿನೊಂದಿಗೆ ಪ್ರದರ್ಶನ ನೀಡಿದರು. ಮಕ್ಕಳ ಉತ್ಸಾಹದಿಂದ ಈ ಕಾರ್ಯಕ್ರಮ ಮತ್ತಷ್ಟು ಚೈತನ್ಯವನ್ನು ಪಡೆದುಕೊಂಡಿತು.ಯು ಕೆ ಜಿ ವಿದ್ಯಾರ್ಥಿಗಳು ಹಣ್ಣುಗಳು ಮತ್ತು ತರಕಾರಿಗಳಲ್ಲಿ ತಜ್ಞರಂತೆ ಪ್ರದರ್ಶನವನ್ನು ಆಯೋಜಿಸುತ್ತಿದ್ದಾರೆ. ಈ ಉತ್ಸವವು ಮಕ್ಕಳಿಗೆ ಆರೋಗ್ಯಕರ ಆಹಾರ ಮತ್ತು ಪೋಷಣೆಯ ಮಹತ್ವವನ್ನು ಅರಿಯಲು ಸಹಾಯ ಮಾಡುತ್ತದೆ. ಪ್ರದರ್ಶನದಲ್ಲಿ ಸೃಜನಾತ್ಮಕ ಶ್ರೇಣೀಬದ್ಧತೆ, ಕ್ರಿಯಾತ್ಮಕ ಚಟುವಟಿಕೆಗಳು ಪಾಲಕರ ಪ್ರಶಂಸೆಗೆ ಪಾತ್ರವಾದವು.ಈ ಪ್ರದರ್ಶನವನ್ನು ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಹಾದಿಮನಿ ಆಸ್ಪತ್ರೆ ಮತ್ತು ಆಲಮೇಲ ಸಮಾನ ಮನಸ್ಕರ ಬಳಗ(ರಿ) ಇವರ ಸಂಯುಕ್ತ ಆಶ್ರಯದಲ್ಲಿ ಸೆ.29ರಂದು ಪಟ್ಟಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಈ ಶಿಬಿರದಲ್ಲಿ ಶ್ರೀ ರಾಮಸುಧಾ ಆಸ್ಪತ್ರೆಯ ನೇತ್ರ ತಜ್ಣ ಡಾ.ಗುರುರಾಜ ಕುಲಕರ್ಣಿ, ಮೂತ್ರಪಿಂಡ ತಜ್ಞ ಡಾ.ಸಂದೀಪ ಪಾಟೀಲ್, ಎಲುಬು-ಕೀಲು ತಜ್ಞ ಡಾ.ಪ್ರೀತಿಶ್ ಯಂಡಿಗೇರೆ, ಡಾ.ರವಿ ಬಿರಾದಾರ ಚಿಕಿತ್ಸೆ ನೀಡುವರು.ತಜ್ಞ ವೈದ್ಯರ ಸಲಹೆ ಮೇರೆಗೆ ಉಚಿತವಾಗಿ ರಕ್ತ, ಮೂತ್ರ ತಪಾಸಣೆ ಮಾಡಲಾಗುತ್ತಿದ್ದು,ಸಂಧಿವಾತ, ಸ್ನಾಯು ಸೆಳೆತ, ಮೂಳೆಮುರಿತ ಮುಂತಾದ ಎಲುಬು-ಕೀಲುಗಳ ಸಮಸ್ಯೆ, ಅಂಧತ್ವ, ಕಣ್ಣಿನ ಪೊರೆ, ಬಿಪಿ, ಮಧುಮೇಹ (ಶುಗರ್), ಕಿಡ್ನಿ ಸ್ಟೋನ್ಸ್( ಹರಳುಗಳು), ಮೂತ್ರಕೋಶದ ಸೋಂಕು, ಕಿಡ್ನಿ ವೈಫಲ್ಯ, ಉರಿ ಮೂತ್ರ ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುವವರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ.ಸಮೀರ ಹಾದಿಮನಿ, ಡಾ.ಜುನೇರಾ ಹಾದಿಮನಿ ತಿಳಿಸಿದ್ದಾರೆ

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಬ್ಬಳ್ಳಿಯ ನೀಲಮ್ಮ ಹಂಪಣ್ಣ ಹಡಪದ ಇವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವದನ್ನು ಖಂಡಿಸಿ ವಿಜಯಪುರ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ (ರಿ) ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಮುಖಾಂತರ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಹಡಪದ ಸಮಾಜದ ಮುಖಂಡರು, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಮ್ಮ ಹಿಂದುಳಿದ ಹಡಪದ ಸಮಾಜಕ್ಕೆ ಸೇರಿದ ಶ್ರೀಮತಿ ನೀಲಮ್ಮ ಹಡಪದ ಇವರ ಮೇಲೆ ದುಷ್ಕರ್ಮಿಯೊಬ್ಬ ಮಾರಣಾಂತಿಕ ಹಲ್ಲೆಯನ್ನು ನಡೆಸಿ ಹತ್ಯೆಗೆ ಪ್ರಯತ್ನ ಪಟ್ಟಿದ್ದು, ದುಷ್ಕರ್ಮಿಯ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ಹಿಂದುಳಿದ ಸಮಾಜಕ್ಕೆ ಸಾಮಾಜಿಕ ನ್ಯಾಯ ದೊರಕಿಸಿ ಕೊಡಬೇಕು. ಕ್ಷೌರಿಕ ವ್ರತ್ತಿಯ ಆಧಾರದ ಮೇಲಿರುವ ಈ ಸಮುದಾಯಕ್ಕೆ ಸಾಮಾಜಿಕ ಜೀವನದಲ್ಲಿ ಅಗೌರವ ಮೇಲಿಂದ ಮೇಲೆ ನಡೆಯುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಕಾರಣ ಹಲ್ಲೆಗೊಳಗಾದ ಮಹಿಳೆಯ ಕುಟುಂಬಕ್ಕೆ ಭದ್ರತೆ ನೀಡಿ ಹಲ್ಲೆ ನಡೆಸಿದ ದುಷ್ಕರ್ಮಿಯ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮತ್ತು ಸಾಮಾಜಿಕ ನ್ಯಾಯದ ಅಡಿಯಲ್ಲಿ ಮಹಿಳೆಗೆ ಜೀವನೋಪಾಯಕ್ಕೆ…

Read More

ಭೀಕರ ಅಪಘಾತದಲ್ಲಿ ನಾಲ್ವರ ದುರಂತ ಅಂತ್ಯ | ಕಣ್ಣೀರ ಕಡಲಲ್ಲಿ ಕುಟುಂಬಗಳು | ನ್ಯಾಯ ಕೊಡಿಸುವವರಿಗೆ ಅನ್ಯಾಯ ಉದಯರಶ್ಮಿ ದಿನಪತ್ರಿಕೆ – ಚೇತನ ಶಿವಶಿಂಪಿಮುದ್ದೇಬಿಹಾಳ: ಮನೆ ಮಾರಿ ಮಗನ ಉದ್ಯೋಗಕ್ಕಾಗಿ ಕಾರು ಕೊಡಿಸಿದ್ದ ಒಂದು ಕುಟುಂಬ, ಸಾರ್ವಜನಿಕರ ನ್ಯಾಯವನ್ನು ಸರಳವಾಗಿ ಬಗೆಹರಿಸಿ ಸಾಕಷ್ಟು ನೊಂದ ಕುಟುಂಬಗಳಿಗೆ ಆಸರೆಯಾಗಿದ್ದ ಸೀದಾ ಸಾದಾ ನಾಯಕನ ಇನ್ನೊಂದು ಕುಟುಂಬ, ಘಟನೆಯೊಂದರಲ್ಲಿ ತನ್ನ ಎರಡೂ ಕೈಗಳನ್ನು ಕಳೆದುಕೊಂಡು ಎದೆಗುಂದದೆ ಬಾಳ ಪಯಣದಲ್ಲಿ ದಿನ ನಿತ್ಯ ಹೋರಾಟ ಮಾಡುತ್ತ ಸಾಗುತ್ತಿದ್ದ ವ್ಯಕ್ತಿಯ ಮತ್ತೊಂದು ಕುಟುಂಬ, ಬಡತನದ ಕುಟುಂಬದಲ್ಲಿ ಬೆಳೆದು ಗುತ್ತಿದಾರನಾಗಿ ಹೆಸರುವಾಸಿಯಾಗಿದ್ದವನ ಕುಟುಂಬ, ಈ ನಾಲ್ಕೂ ಕುಟುಂಬಗಳು ಸಧ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿವೆ.ಈ ಕುಟುಂಬಗಳು ಕಣ್ಣೀರಿಡಲು ಕಾರಣವಾಗಿದ್ದೇ ಆ ಭಯಾನಕ ವಾಹನ ಅಪಘಾತ. ಬುಧವಾರ ಮಧ್ಯರಾತ್ರಿ ಮುದ್ದೇಬಿಹಾಳ-ಹುನಗುಂದ ಹೈವೇ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಡೆದ ನಾಲ್ವರ ದುರಂತ ಅಂತ್ಯಕ್ಕೆ ನಾಲ್ಕೂ ಕುಟುಂಬಗಳಿಗೆ ಬರಸಿಡಿಲು ಬಡಿದಂತಾಗಿದೆ.ದೇವರ ದರ್ಶನಕ್ಕೆಂದು ಮನೆಯಿಂದ ಹೊರಟವರು ಮರಳಿ ಮನೆಗೆ ಬಾರದೆ ಮಸಣದತ್ತ ಪಯಣ ಬೆಳೆಸಿದರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೃಕ್ಷೋಥಾನ್ ಹೆರಿಟೇಜ್ ರನ್-2024ಕ್ಕೆ ಪೂರಕವಾಗಿ ಬಿ.ಎಲ್.ಡಿ.ಇ ಸಂಸ್ಥೆಯ ಎಲ್ಲ ಸಿಬ್ಬಂದಿ ಅ.7ರಂದು ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಸಸಿ ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿ ತೆಗೆದುಕೊಳ್ಳೋಣ ಎಂದು ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ ಡಾ. ಆರ್. ವಿ. ಕುಲಕರ್ಣಿ ಹೇಳಿದ್ದಾರೆ.ಗುರುವಾರ ಮುಸ್ಸಂಜೆ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರದಲ್ಲಿ ವೃಕ್ಷೋಥಾನ್ ಹೆರಿಟೇಜ್ ರನ್-2024ರ ಅಂಗವಾಗಿ ನಡೆದ ಸಂಸ್ಥೆಯ ನಾನಾ ಹೈಸ್ಕೂಲುಗಳ ಮುಖ್ಯೋಪಾಧ್ಯಾಯರು ಮತ್ತು ಕಾಲೇಜುಗಳ ಪ್ರಾಚಾರ್ಯರ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಅರಣ್ಯೀಕರಣಕ್ಕಾಗಿ ಎಂ. ಬಿ. ಪಾಟೀಲ ಅವರು ವೃಕ್ಷೋಥಾನ್ ಹೆರಿಟೇಜ್ ರನ್ ಪ್ರಾರಂಭಿಸುವ ಮೂಲಕ ಹಸಿರುಕರಣಕ್ಕೆ ನಾಂದಿ ಹಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಾವೆಲ್ಲರೂ ಕೈಜೋಡಿಸೋಣ. ಅ. 7 ರಂದು ಎಂ. ಬಿ. ಪಾಟೀಲರ ಜನ್ಮದಿನದ ಹಿನ್ನೆಲೆಯಲ್ಲಿ ಎಲ್ಲ ಸಿಬ್ಬಂದಿ ಒಂದೊಂದು ಸಸಿ ನೆಟ್ಟು ಅವುಗಳನ್ನು ದತ್ತು ಪಡೆದು ಬೆಳೆಸೋಣ. ಪ್ರತಿವರ್ಷ ಅವುಗಳ ಆಡಿಟ್…

Read More