Author: editor.udayarashmi@gmail.com

ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಪ್ರಜಾವಾಣಿಯ ರಶ್ಮಿ ಎಸ್. ಸೇರಿ ಹಲವರ ನೇಮಕ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಯಮಾವಳಿಗಳಲ್ಲಿ ಅವಕಾಶ ಕಲ್ಪಿಸಿರುವಂತೆ ವಿವಿಧ ಪತ್ರಕರ್ತರ ಸಂಘಟನೆಗಳ ಪ್ರತಿನಿಧಿಗಳನ್ನು, ಅವುಗಳ ಪ್ರಾತಿನಿಧ್ಯದ ಸಂಖ್ಯೆಗೆ ಅನುಗುಣವಾಗಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.ಬೆಂಗಳೂರಿನ ಶಿವಾನಂದ ತಗಡೂರು, ದಾವಣಗೆರೆ ಜಿಲ್ಲೆಯ ಜನತಾವಾಣಿಯ ಇ.ಎಂ. ಮಂಜುನಾಥ್, ವಿಜಯಪುರ ಜಿಲ್ಲೆಯ ವಿಜಯ ಕರ್ನಾಟಕ ವರದಿಗಾರ ಸಂಗಮೇಶ ಚೂರಿ, ಬೆಂಗಳೂರಿನ ಸುವರ್ಣ ಟಿ.ವಿಯ ಇನ್‍ಪುಟ್ ಮುಖ್ಯಸ್ಥೆ ಶೋಭಾ ಎಂ.ಸಿ. ಹುಬ್ಬಳ್ಳಿಯ ಪತ್ರಕರ್ತ ಜೆ.ಅಬ್ಬಾಸ್ ಮುಲ್ಲಾ, ಟಿವಿ 9 ಹಿರಿಯ ಪತ್ರಕರ್ತ ಹೆಚ್.ವಿ.ಕಿರಣ್ ಬೆಂಗಳೂರಿನ ಟೈಮ್ಸ್ ಆಫ್ ಇಂಡಿಯಾದ ಹಿರಿಯ ಪತ್ರಕರ್ತ ಅನಿಲ್ ವಿ. ಗೆಜ್ಜಿ, ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಕೆಂಚೇಗೌಡ, ಉಡುಪಿ ಜಿಲ್ಲೆ ಕುಂದಾಪುರದ ಕುಂದಪ್ರಭ ಸಂಪಾದಕ ಯು. ಸುರೇಂದ್ರ…

Read More

ಸಿಎಂ ಸಿದ್ದರಾಮಯ್ಯ, ಪ್ರಭಾಕರ್ ಅವರಿಗೆ ಕೆಯುಡಬ್ಲೂಜೆ ಅಭಿನಂದನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡಬೇಕು ಎನ್ನುವುದು ಮೂರು ದಶಕಗಳ ಹೋರಾಟ. ಈ ಹೋರಾಟಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಆದೇಶವನ್ನು ಹೊರಡಿಸಿದ್ದು, ಅದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಅಭಿನಂದಿಸುತ್ತದೆ.ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ಹಕ್ಕೋತ್ತಾಯ ಪರಿಗಣಿಸಿ, ಬಜೆಟ್‌ನಲ್ಲಿಯೇ ಉಚಿತ ಬಸ್ ಪಾಸ್ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಬಜೆಟ್‌ನಲ್ಲಿಯೂ ಘೋಷಣೆ ಮಾಡಿದ್ದರು. ಈಗ ಉಚಿತ ಬಸ್ ಪಾಸ್ ಸೌಲಭ್ಯ ನನಸಾಗುವಂತೆ ಮಾಡಿರುವುದು ಶ್ಲಾಘನೀಯ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯಿಸಿದ್ದಾರೆ.ಉಚಿತ ಬಸ್ ಪಾಸ್‌ಗೆ 15.66 ಕೋಟಿ ರೂ ಹಣವನ್ನು ಮೀಸಲಿರಿಸಿ ಯೋಜನೆಗೆ ಅನುಮತಿ ಪಡೆಯಲು ವಾರ್ತಾ ಇಲಾಖೆ ಮತ್ತು ಹಣಕಾಸು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇವೆ ಎಂದು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಹೆಚ್.ಕೆ.ಅಂಗಡಿ ಹೇಳಿದರು.ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಲೇಖನಿ ಸ್ಥಗಿತಗೊಳಿಸುವ ಮೂಲಕ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಮಾತನಾಡಿದ ಅವರು, ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.೨೬ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದೇವೆ ನಮ್ಮ ಬೇಡಿಕೆ ಈಡೇರಿಕೆಯಾಗದೇ ಹೋದರೆ ಈ ಮುಷ್ಕರ ಹೀಗೆ ಲೇಖನಿ ಸ್ಥಗಿತಗೊಳಿಸುವುದು ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದರು.ಈ ವೇಳೆ ಗ್ರಾಮ ಆಡಳಿತಾಧಿಕಾರಿ ಬಸಯ್ಯ ಮಠ ಮಾತನಾಡಿ, ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ವರ್ಷದ ಅತ್ಯತ್ತಮ ಕಂದಾಯ ಅಧಿಕಾರಿ 2024 ರ ಪ್ರಶಸ್ತಿಗೆ ವಲಯ ಪ್ರಭಾರಿ ಕಂದಾಯ ನಿರೀಕ್ಷಕ ರಾಜಾಸಾಬ್ ಕಂದಗಲ್ ಆಯ್ಕೆಯಾಗಿದ್ದಾರೆ.ರಾಜ್ಯಾದಾದ್ಯಂತ ಪ್ರಶಸ್ತಿ ಪುರಸ್ಕೃತ 36 ಗ್ರಾಮ ಆಡಳಿತ ಅಧಿಕಾರಿಗಳಲ್ಲಿ ರಾಜೇಸಾಬ್ ಒಬ್ಬರು. ಸೆಪ್ಟೆಂಬರ್ 27 ರಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆಯಲ್ಲಿರುವ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶಸ್ತಿಯನ್ನು ನೀಡುವುದಾಗಿ ತಿಳಿದುಬಂದಿದೆ.

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುದೀಪ್ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಪ್ರಾಧ್ಯಾಪಕಿ ಡಾ ನಂದಾ ವಾರದ, ಹಾಗೂ ಪ್ರಾಧ್ಯಾಪಕ ಗುಲಾಂ ಮೈಹಿಬೂಬಸಾಬ್ ಇವರುಗಳಿಗೆ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಗುರುವಾರ ಸನ್ಮಾನಿಸಿ ಗೌರವಿಸಿ ಶುಭಹಾರೈಸಿಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಈರ್ವರೂ ತಮ್ಮ ಸೇವಾವಧಿಯಲ್ಲಿ ಸಹಕಾರ ನೀಡಿದ ಸ್ಥಳೀಯರಿಗೂ ಹಾಗೂ ಸಿಬ್ಬಂದಿ ವರ್ಗಕ್ಕೂ ಕೃತಜ್ಞತೆ ಸಲ್ಲಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ ನಾಗಪ್ಪ ಚಾವಲ್ಕರ್ 14 ವರ್ಷ ಸೇವೆ ಸಲ್ಲಿಸಿದ ಡಾ ನಂದಾ ವಾರದ ಹಾಗೂ 7 ವರ್ಷ ಸೇವೆ ಸಲ್ಲಿಸಿದ ಗುಲಾಂ ಮೈಹಿಬೂಬಸಾಬ್ ಈರ್ವರ ಸೇವೆ ಅನನ್ಯ ಎಂದು ಗುಣಗಾನ ಮಾಡಿದರು.ಡಾ ಸಿದ್ದಲಿಂಗ ರಾಠೋಡ್,‌ ಡಾ ಬಸಮ್ಮ ಎಸ್, ನಸ್ರೀನ್ ತಾಜ್, ಡಾ ಪೂಜ್ಯಾ ಹೊನ್ನುಟಗಿ, ಡಾ ಯಂಕನಗೌಡ ಪಾಟೀಲ, ಶರಣಪ್ಪ ಗೊಡ್ರಿಹಾಳ, ಸಂದೀಪ್ ಸಂಶಿಕರ್, ಸಂಗಪ್ಪ ಪಟ್ಟಣಕರ್, ಮಾಸುಮ ಅಲಿ ನಾಶಿ, ಸೇರಿದಂತೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ರೀಡೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರಿಂದ ತಾಳ್ಮೆ ಹಾಗೂ ಆತ್ಮವಿಶ್ವಾಸ ವೃದ್ಧಿಯಾಗಿ ಸುಂದರ ವ್ಯಕ್ತಿತ್ವದ ಬದುಕು ನಮ್ಮದಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಹಯೋಗದಲ್ಲಿ ನಗರದ ಡಾ.ಬಿ.ಆರ್ ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಜನೆಯೊಂದಿಗೆ ಆಟೋಟಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಚೈತನ್ಯಶಾಲಿಗಳಾಗಿ ಸದಾ ಚಟುವಟಿಕೆಯಿಂದಿರಲು ಸಹಾಯಕವಾಗುತ್ತದೆ ಎಂದು ಹೇಳಿದರು. ಆರೋಗ್ಯ ಸಂಪತ್ತು ನಮ್ಮೆಲ್ಲರ ಸಂಪತ್ತು. ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಂತೆ ಕ್ರೀಡೆಗಳಲ್ಲಿ ಭಾಗವಹಿಸಿ ದೈಹಿಕ ಹಾಗೂ ಮಾನಸಿಕ ಸಧೃಡತೆ ಹೊಂದಿ ದೈಹಿಕ ಆರೋಗ್ಯವಾಗಿರಬೇಕು ಎಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ನ್ಯಾಯವಾದಿ ನಾಗರಾಜ ಲಂಬು, ಅಡಿವೆಪ್ಪ ಸಾಲಗಲ್ ತರಬೇತುದಾರರಾದ ರಾಜು ಚವ್ಹಾಣ, ರಫಿಕ್ ನಧಾಪ್, ಸಲ್ಲಾವುದ್ದೀನ್ ಮಳಗಿ, ಶಿವು…

Read More

ಸಿದ್ದರಾಮಯ್ಯ ಕಲ್ಲುಬಂಡೆಯಂತೆ ಗಟ್ಟಿ | ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ | ಸಚಿವ ಪರಮೇಶ್ವರ್ ಸ್ಪಷ್ಟನೆ ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ವೀಕ್ ಆಗಿಲ್ಲ, ಕಲ್ಲುಬಂಡೆಯಂತೆ ಗಟ್ಟಿಯಾಗಿದ್ದು, ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಿಲ್ಲ. ಪಕ್ಷದಲ್ಲಿ ಅಂತಹ ಮಾತುಕತೆಯಾಗಲೀ, ಒತ್ತಡವಾಗಲೀ ಇಲ್ಲ. ಪಕ್ಷದ ಹೈಕಮಾಂಡ್ ಕೂಡ ಸಿಎಂಗೆ ಬೆಂಬಲ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದರು.ಕೆಸಿ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅವರೆಲ್ಲ ಸಿಎಂ ಜೊತೆಗಿದ್ದಾರೆ ಮುಡಾ ಹಗರಣದಲ್ಲಿ ಸಿಎಂ ಪಾತ್ರವಿಲ್ಲ. ಕಾನೂನು ಹೋರಾಟಕ್ಕೆ ಅವಕಾಶವಿರುವುದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಯಾವುದೇ ಕಡತ ಅಥವಾ ದಾಖಲೆಗಳಿಗೆ ಸಹಿ ಹಾಕಿಲ್ಲ, ಯಾವುದೇ ಅಧಿಕಾರವನ್ನೂ ದುರುಪಯೋಗಪಡಿಸಿಕೊಂಡಿಲ್ಲ. ಇದನ್ನು ಆಧರಿಸಿಯೇ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯದ ಆದೇಶ ನಮ್ಮ ಪರವಾಗಿ ಬಂದಿಲ್ಲ. ನಾವು ಆದೇಶವನ್ನು ಗೌರವಿಸುತ್ತೇವೆ. ಆದರೆ, ನಮಗೆ ನ್ಯಾಯ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಇಲ್ಲಿನ ತಹಶೀಲ್ದಾರ ಕಚೇರಿಯ ಎದುರು ಅನಿರ್ದಿಷ್ಠಾವಧಿ ಮುಷ್ಕರವನ್ನು ಪ್ರಾರಂಭಿಸಿದರು.ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ ನಾಯ್ಕೋಡಿ ಮಾತನಾಡಿ, ಸ್ವಾತಂತ್ರ್ಯ ಬಂದಾಗಿನಿಂದಲೂ ಎಲ್ಲ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದು ಅವುಗಳ ಜವಾಬ್ದಾರಿಯನ್ನು ನಮ್ಮ ಮೇಲೆ ಹೇರುತ್ತವೆ. ಆದರೆ ಅವುಗಳಿಗೆ ಬೇಕಾಗಿರುವ ಕನಿಷ್ಟ ಮೂಲಭೂತ ಸೌಕರ್ಯಗಳನ್ನೂ ಇಲ್ಲಿಯವರೆಗೆ ಯಾವ ಸರ್ಕಾರಗಳೂ ಮಾಡಿಲ್ಲ. ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಹುಟ್ಟಿದಾಗಿನಿಂದಲೂ ನಮ್ಮ ಬಗ್ಗೆ ಯಾವ ಸರ್ಕಾರಗಳೂ ಯೋಚಿಸಿಲ್ಲ. ಇಲಾಖೆಯಲ್ಲಿ ಮತ್ತು ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ಆಗುವ ಬದಲಾವಣೆಗಳಿಗೆ ನಮ್ಮ ಬೆಂಬಲ ಇದೆ. ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇಸಲು ಮುಂದಾಗಬೇಕು. ಕಡೆಗಣಿಸಿದಲ್ಲಿ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯಲಿದೆ ಎಂದರು.ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ ಮಾತನಾಡಿ, ದಿನನಿತ್ಯ ನಾವು ಕುಟುಂಬದ ಜೊತೆ ಒಂದು ನಿಮಿಷದ ನೆಮ್ಮದಿಯ ಬದುಕನ್ನೂ ಕಳೆಯುವಷ್ಟು ಸಮಯ ನಮಗಿಲ್ಲ. ಅಷ್ಟೊಂದು ಒತ್ತಡ ನಮ್ಮಮೇಲೆ…

Read More

ಚಡಚಣ: ತಾಲೂಕಿನ ನಿವರಗಿ ಗ್ರಾಮದ ಶಿಕ್ಷಕರಾದ ಧರೇಪ್ಪ. ಅಡವೇಪ್ಪ. ಪೂಜಾರಿ ಅವರು ಲೋಣಿ(ಬಿ.ಕೆ) ಗ್ರಾಮದ ಶ್ರೀ ರುದ್ರೇಶ್ವರ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ವಿಭಾಗದ ಶಿಕ್ಷಕರಾಗಿ ಕಳೆದ ಐದು ವರ್ಷಗಳಿಂದ ಮಕ್ಕಳಿಗೆ ಜ್ಞಾನಾರ್ಜನೆ ನೀಡುತ್ತಿರುವದನ್ನು ಗುರುತಿಸಿ, ಇವರನ್ನು ‘ಚಡಚಣ ತಾಲೂಕು ಮಟ್ಟದ ಶಿಕ್ಷಕರತ್ನ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಇವರ ವತಿಯಿಂದ ಚಡಚಣ ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಸೆ.29 ರ ಭಾನುವಾರದಂದು ಜರುಗುವ ‘ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ’ ಸಮಾರಂಭದಲ್ಲಿ ‘ಶಿಕ್ಷಕ ಧರೇಪ್ಪ ಪೂಜಾರಿ’ ಇವರನ್ನು ‘ಶಿಕ್ಷಕ ರತ್ನ ಪ್ರಶಸ್ತಿ’ಯನ್ನು ಪ್ರದಾನ ಮಾಡಿ, ಗೌರವಿಸಲಾಗುವುದು ಎಂದು ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಶಂಕರ ಹಾವಿನಾಳ ತಿಳಿಸಿದ್ದಾರೆ.

Read More

ಹೊರ ಗುತ್ತಿಗೆ ಪೌರಕಾರ್ಮಿಕರನ್ನು ಖಾಯಾಂಗೊಳಿಸಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ : ಎಲ್ಲಾ ಗುತ್ತಿಗೆ ಮುನ್ಸಿಪಲ್ ಕಾರ್ಮಿಕರ ಖಾಯಂಮತಿಗಾಗಿ ನೇರ ಪಾವತಿ ಅಡಿಯಲ್ಲಿ ಸಮಾನ ವೇತನ ಜಾರಿಗೆ ಒತ್ತಾಯಿಸಬೇಕೆಂದು ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಜ ಮುನ್ಸಿಪಲ್ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಲಕ್ಷö್ಮಣ ಹಂದ್ರಾಳ ಮಾತನಾಡಿ, ರಾಜ್ಯದ ನಗರ ಸ್ಥಳಿಯ ಸಂಸ್ಥೆಗಳಾದ ಮಹಾನಗರ ಪಾಲಿಕೆಗಳಲ್ಲಿ. ಗುತ್ತಿಗೆ, ಹೊರ ಗುತ್ತಿಗೆ, ಆಧಾರಿತ ನೇರ ಪಾವತಿ ಪೌರಕಾರ್ಮಿಕರು, ಲೋಡರ್, ಕಸದ ಮತ್ತು ಇತರ ವಾಹನ ಚಾಲಕರು, ಸಹಾಯಕರು, ಕ್ಲಿನರ್ ಗಳು, ಸ್ಯಾನಿಟರಿ ಸುಪರವೈಜರ್‌ಗಳು, ಪಾರ್ಕ, ಸ್ಮಶಾನ, ಯು.ಜಿ.ಡಿ, ಘನತಾಜ್ಯ ವೀಲೆವಾರಿ, ಯು.ಜಿ.ಡಿ. ನೀರು ಸಂಸ್ಕರಣಾ ಕಾರ್ಮಿಕರು, ಕಳೆದ ೧೫-೨೦ ವರ್ಷಗಳಿಂದ ನಿರಂತರವಾಗಿ ನಾಗರಿಕರಿಗೆ ಅಗತ್ಯವಾದ ಸ್ವಚ್ಚತೆ ಯು.ಜಿ.ಡಿ. ನಿರ್ವಾಹಣೆ ವಿಭಾಗದಲ್ಲಿ ನಿರಂತರ ದುಡಿಯುತ್ತಿರುವ ಕಾರ್ಮಿಕರು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ಈ ಎಲ್ಲಾ ಗುತ್ತಿಗೆ, ಹೊರಗುತ್ತಿಗೆ, ಮುನ್ಸಿಪಲ್ ಕಾರ್ಮಿಕರು ಕಾಯಂಗೊಳಿಸುವ ನೇರ ಪಾವತಿ ಅಡಿಯಲ್ಲಿ ದುಡಿಯುತ್ತಿರುವ ೨೪…

Read More