Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದರಬಾರ ಸಂಸ್ಥೆಯ ಶ್ರೀಮತಿ ಕುಮುದಬೇನ ದರಬಾರ ಬಿಬಿಎ ಮತ್ತು ಬಿಸಿಎ ಕಾಲೇಜು, ಡಿ.ಕೆ.ಎಸ್ ಎಜುಕೇಷನ್ ಟ್ರಸ್ಟ್ ಇವುಗಳ ಸಹಯೋಗದಲ್ಲಿ ನಗರದ ಜೆ.ಎಂ ರಸ್ತೆಯಲ್ಲಿರುವ ಶ್ರೀಮತಿ ಕುಮುದಬೇನ ದರಬಾರ ಬಿಬಿಎ ಮತ್ತು ಬಿಸಿಎ ಕಾಲೇಜು ಆವರಣದಲ್ಲಿ ಅಕ್ಟೋಬರ್ ೪ರಂದು ಉದ್ಯೋಗಮೇಳ ಆಯೋಜಿಸಲಾಗಿದೆ.ವಿವಿಧ ಎಂಎನ್‌ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳ ವಿವಿಧ ಹುದ್ದೆಗಳಿಗಾಗಿ ನೇಮಕಾತಿ ನಡೆಯಲಿದೆ. ಆಸಕ್ತರು ತಮ್ಮ ಶಾಲಾ ದಾಖಲಾತಿಗಳ ಸಹಿತ ಕನಿಷ್ಠ ೫ ಸೆಟ್ ಬಯೋಡೇಟಾ ಮತ್ತು ಆಧಾರ ಕಾರ್ಡನೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಖುದ್ದಾಗಿ ಅಥವಾ ಪೋನ್ ಮೂಲಕ(ಮೊ.೯೪೮೦೩೧೦೮೩೭, ೯೯೪೫೦೦೦೭೯೩) ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿಯೊಬ್ಬರು ತಮ್ಮ ಮನೆಯ ಸುತ್ತ ಮುತ್ತಲಿನ ವಾತಾವರಣ ಸ್ವಚ್ಚತೆ ಕಾಪಾಡಿ ನಗರದ ಸೌಂದರ್ಯೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಮಹಾನಗರಪಾಲಿಕೆ ಉಪ ಮೇಯರ್ ದಿನೇಶ್ ಹಳ್ಳಿ ಹೇಳಿದರು.ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಸಂದೇಶದಡಿಯಲ್ಲಿ ಸೆ.೨೭ರ ನಡೆಯುವ ವಿಶ್ವ ಪ್ರವಾಸೋಧ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ವಿಜಯಪುರ ಹೊಟೇಲ್ ಅಸೋಸಿಯೇಷನ್, ಸಜ್ಜನ ಪದವಿಪೂರ್ವ ಮಹಾವಿದ್ಯಾಲಯ, ಪೋಟೋಗ್ರಾಪರ್ ಅಸೋಶಿಯೇಷನ್ ಹಾಗೂ ಮ್ಯಾನ್ಯುಮೆಂಟಲ್ ಹೇರಿಟೆಜ್ ಸಿಟಿ ಅವರ ಸಹಯೋಗದಲ್ಲಿ ಗುರುವಾರ ಗೋಳಗುಮ್ಮಟದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ, ಇಗ್ನೋ ಪ್ರಾದೇಶಿಕ ನಿರ್ದೇಶಕರು, ಗೋಳಗುಮ್ಮಟದ ಸಹಾಯಕ ಸಂರಕ್ಷಾಣಾಧಿಕಾರಿ ವಿಜಯಕುಮಾರ, ಪೀಟರ್ ಅಲೆಕ್ಸಾಂಡರ್, ಅಮೀನ್ ಹುಲ್ಲೂರು, ರಮೇಶ ಚವ್ಹಾಣ, ಜಗದೇವಿ ಕೆಂಬಾವಿ, ಬುಡ್ಡಾಸಾಬ್ ಕುಡುಪಲಿ, ಅನಿಲಕುಮಾರ ಬಣಜಿಗೇರ ಸೇರಿದಂತೆ ಪ್ರವಾಸಿ ಮಿತ್ರ, ಎಎಸ್‌ಐ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ತಾಲೂಕಿನ ಮಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನೂತನವಾಗಿ ಬಸನಗೌಡ ಮಾಲಿ ಪಾಟೀಲ, ಉಪಾಧ್ಯಕ್ಷ ಸ್ಥಾನಕ್ಕೆ ರೂಪಾಬಾಯಿ ವಾಲು ಚವ್ಹಾಣ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಶಶಿಕಲಾ ಪಾದಗಟ್ಟಿ ಘೋಷಣೆ ಮಾಡಿದರು.ಈ ಹಿಂದಿನ ಅಧ್ಯಕ್ಷೆ ರಾಜಿನಾಮೆ ನೀಡಿದ ಪ್ರಯುಕ್ತ ಗುರುವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ಮಾಲಿ ಪಾಟೀಲ ಮತ್ತು ಕಂಟೆಪ್ಪ ಪೂಜಾರಿ ಚೊಣ್ಣಿ, ಈ ಇಬ್ಬರು ಕಾಂಗ್ರೆಸ್ ಬೆಂಬಲಿತ ಸದಸ್ಯರೆ ಆಗಿದ್ದರಿಂದ ಬಹಳ ತುರುಸಿನ ಜಿದ್ದಾ ಜಿದ್ದಿ ನಡೆದಿತ್ತು. ಅಧ್ಯಕ್ಷ ಸ್ಥಾನಕ್ಕೆ ಒಂದೇ ಪಕ್ಷದ ಎರಡು ನಾಮಪತ್ರ ಸಲ್ಲಿಕೆ ಆಗಿದ್ದರಿಂದ ಗುಪ್ತ ಮತದಾನ ನಡೆಸಲಾಯಿತು. ಗುಪ್ತ ಮತದಾನದಲ್ಲಿ ಒಟ್ಟು ಚಲಾವಣೆಗೊಂಡ 19 ಮತಗಳು ಪೈಕಿ ಬಸನಗೌಡ ಮಾಲಿ ಪಾಟೀಲ ಹನ್ನೊಂದು ಮತಗಳನ್ನು ಪಡೆದರೆ, ಕಂಟೆಪ್ಪ ಪೂಜಾರಿ ಚೋಣ್ಣಿ ಎಂಟು ಮತಗಳನ್ನು ಪಡೆದರು. ಮೂರು ಮತಗಳ ಅಂತರದಿಂದ ಬಸನಗೌಡ ಪಾಟೀಲ ಜಯ ಗಳಿಸಿದರು.ಪರಿಶಿಷ್ಟ ಜಾತಿಗೆ (ಮಹಿಳೆ) ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ರೂಪಾಬಾಯಿ ಚೌವ್ಹಾಣ…

Read More

ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಹಲವು ಒತ್ತಡಗಳ ಮಧ್ಯೆ ಸಾರ್ವಜನಿಕರ ಸೇವೆ ಮಾಡುವದರಿಂದ ನೌಕರರ ನೆಮ್ಮದಿ ಹಾಳಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಹೇಳಿದರು.ಬಬಲೇಶ್ವರ ಪಟ್ಟಣದ ತಹಶಿಲ್ದಾರ ಕಛೇರಿ ಎದುರು ಗುರುವಾರ ತಾಲ್ಲೂಕ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅವರು ಮಾತನಾಡಿದರು.ಕಡಿಮೆ ಸೌಲಭ್ಯ ಒದಗಿಸಿ ಹೆಚ್ಚಿನ ಸೇವೆ ಮಾಡುವುದಾಗಿದೆ. ಎಲ್ಲ ಸೇವೆಗಳು ಆನಲೈನದಲ್ಲಿ ಮಾಡಬೇಕು. ಹಳ್ಳಿಗಳಲ್ಲಿ ನೆಟ್ ಸಮಸ್ಯೆಯಾಗುತ್ತದೆ. ಸೇವೆ ಮಾಡಲು ಬೇಕಾದ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ರಾಜ್ಯಾಧ್ಯಕ್ಷ ಷಡಕ್ಷರಿ ಅವರ ಗಮನಕ್ಕೂ ಬಂದಿದ್ದು, ನಿಮ್ಮ ಸಮಸ್ಯೆಗೆ ಪರಿಹಾರ ಸಿಗುವವರೆಗೂ ನೀವು ಹಮ್ಮಿಕೊಳ್ಳುವ ತಾಲ್ಲೂಕ, ಜಿಲ್ಲಾ ಹಾಗೂ ರಾಜ್ಯ ಹಂತದ ಮುಷ್ಕರಕ್ಕೆ ಬೆಂಬಲ ಸೂಚಿಸಿ ನಿಮ್ಮ ಜೊತೆ ಇರುತ್ತೇವೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ನೌಕರ ಸಂಘದ ಖಜಾಂಚಿ ಜುಬೇರ ಕೆರೂರ, ಜಿಲ್ಲಾ ಕಂದಾಯ ಇಲಾಖಾ ನೌಕರ…

Read More

ಇಂಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಇಂಡಿ: ವಿವಿಧ ಬೇಡಿಕೆಗೆ ಆಗ್ರಹಿಸಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಆಡಳಿತ ಸೌಧದ ಎದುರು ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭಿಸಿ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.ರಾಜ್ಯದಾದ್ಯಂತ ರಾಜ್ಯ ಸಂಘದ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಇಂಡಿ ತಾಲ್ಲೂಕಿನಲ್ಲಿಯೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ ಎಂದು ಗ್ರಾಮ ಆಡಳಿತ ತಾಲೂಕು ಘಟಕದ ಅಧ್ಯಕ್ಷ ಯಲ್ಲು ಪೂಜಾರಿ ತಿಳಿಸಿದ್ದಾರೆ.ಈ ವೇಳೆ ಮಾತನಾಡಿದ ಮುಖಂಡರು, ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳಾದ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು, ಕಚೇರಿ, ಗುಣಮಟ್ಟದ ಮೊಬೈಲ್, ಡೇಟಾ, ಸಿಮ್ ನೀಡಬೇಕು. ಪ್ರಿಂಟರ್ ಹಾಗೂ ಸ್ಕ್ಯಾನರ್, ಲ್ಯಾಪ್‌ಟಾಪ್, ಗೂಗಲ್ ಕ್ರೋಮ್ ಬುಕ್ ಒದಗಿಸಬೇಕು. ಸರಕಾರಿ ರಜಾ ದಿನಗಳಂದು ಮೆಮೊ ಕೊಡುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಅಂತರ ಜಿಲ್ಲಾ ವರ್ಗಾವಣೆ ನಿಯಮ ೧೬ (ಎ) ಉಪಖಂಡ (೨) ಮರುಸೇರ್ಪಡೆ ಮಾಡಬೇಕು, ಪತಿ-ಪತ್ನಿ ವರ್ಗಾವಣೆ…

Read More

ಸಾಧಕ ವಿದ್ಯಾರ್ಥಿಗಳಿಗೆ ಏಕಲವ್ಯ ಸ್ಕೆಟಿಂಗ್ ಅಕಾಡಮಿ ವತಿಯಿಂದ ಗೌರವ ಸನ್ಮಾನ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕ್ರೀಡೆಗಳಲ್ಲಿ ಉತ್ಸಾಹದಿಂದ ಭಾಗವಹಿಸುವ ಛಲ ಇರುವವರು ಖಂಡಿತ ಯಶಸ್ಸು ಕಾಣಲು ಸಾಧ್ಯ ಎಂದು ಏಕಲವ್ಯ ಸ್ಕೆಟಿಂಗ್ ಅಕಾಡೆಮಿಯ ಸಂಸ್ಥಾಪಕ ಶಿವುಕುಮಾರ ಶಾರದಳ್ಳಿ ಹೇಳಿದರು.ಪಟ್ಟಣದ ಅಂಬೇಡ್ಕರ್ ಭವನದ ಎದುರು ಅಕಾಡೆಮಿ ವತಿಯಿಂದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಯಾವುದೇ ಕ್ರೀಡೆಯಾದರೂ ಸಾಕಷ್ಟು ಅನುಭವ ಪಡೆಯಬೇಕು. ಅನುಭವ ಹೆಚ್ಚಾದಂತೆ ಕ್ರೀಡೆಯಲ್ಲಿ ಗೆಲುವು ಸಾಧಿಸುವ ತಂತ್ರಗಳು ತಿಳಿಯುತ್ತವೆ. ಬಳಿಕ ಯಶಸ್ಸಿನ ಹಾದಿ ಸುಲಭವಾಗಿರುತ್ತದೆ. ಆದರೆ ಕ್ರೀಡೆ ಕಲಿತ ಬಳಿಕವೇ ಸ್ಪರ್ದೆಯಲ್ಲಿ ಪಾಲ್ಗೊಂಡು ಗೆಲ್ಲಲಿಲ್ಲ ಎಂದು ಕೊರಗಬಾರದು. ನಿರಂತರ ಶ್ರದ್ಧೆ ಹೊಂದಿರಬೇಕು ಎಂದರು.ಕಾರ್ಯಕ್ರಮದಲ್ಲಿ ಚೆಸ್ ಆಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ ಹರನಾಳ, ಭರತನಾಟ್ಯ ಸ್ಪರ್ದೆಯಲ್ಲಿ ಭಾಗಿಯಾಗಿದ್ದ ಸಿಂಧು ಅನ್ನಗೌನಿ ಮತ್ತು ರನ್ವಿತ ಅನ್ನಗೌನಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆ ಸುನೀಲ ಹವಾಲ್ದಸಾರ, ಬಸವರಾಜ ನಾಗೂರ, ರುದ್ರು ಮುರಾಳ, ರಿಯಾಜ ನಾಯ್ಕೋಡಿ, ಗುರು ಡಮನಾಳ ಸೇರಿದಂತೆ ಮತ್ತೀತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ೦೬ ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಕಚೇರಿ ಸಹಾಯಕರ ಎರಡು ಹುದ್ದೆ ಹಾಗೂ ಕಚೇರಿ ಪ್ಯೂನ್ ಎರಡು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು, ಅಕ್ಟೋಬರ್ ೦೩ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಡಿಆರ್ ಕಟ್ಟಡ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ವಿಜಯಪುರ ಇವರಿಗೆ ಸಲ್ಲಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಜಿಲ್ಲೆಯ ೧೪ ಗ್ರಾಮಗಳಲ್ಲಿ ಅಕ್ಟೋಬರ್ ೦೫ ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಅಕ್ಟೋಬರ್ ೦೫ರ ಬೆಳಿಗ್ಗೆ ೧೧ ಗಂಟೆಗೆ ಮುದ್ದೇಬಿಹಾಳ ತಾಲೂಕಿನ ಸರೂರ ಗ್ರಾಮದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ವಿಜಯಪುರದ ಉಪ ವಿಭಾಗಾಧಿಕಾರಿಗಳು ಮತ್ತು ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದ ಶ್ರೀ ಹನುಮಾನ ಮಂದಿರದಲ್ಲಿ, ಇಂಡಿ ಉಪ ವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.ವಿಜಯಪುರ ಗ್ರೇಡ್-೨ ತಹಶೀಲ್ದಾರ ಅವರು ಡೋಮನಾಳ ಗ್ರಾಮದ ಗ್ರಾಮ ಚಾವಡಿಯಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಮಲಕನದೇವರಹಟ್ಟಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ, ಬಬಲೇಶ್ವರದ ಗ್ರೇಡ-೨ ತಹಶೀಲ್ದಾರ ಅವರು ತಾಜಪೂರ ಪಿ.ಎಂ. ಗ್ರಾಮದ ಸರ್ಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.ಬಸವನ ಬಾಗೇವಾಡಿ ಗ್ರೇಡ್-೨ ತಹಶೀಲ್ದಾರ ಅವರು, ಮನಗೂಳಿ ಗ್ರಾಮದ ಗ್ರಾಮ ಚಾವಡಿಯಲ್ಲಿ, ತಹಶೀಲ್ದಾರ್ ಗ್ರೇಡ್-೧…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮ ನಿಯಮಿತದ (ಕೆಪೆಕ್) ಅಧ್ಯಕ್ಷರಾದ ಬಿ.ಎಚ್.ಹರೀಶ ಅವರು ಸೆ.೨೭ ಹಾಗೂ ಸೆ.೨೮ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಸೆ.೨೭ ರಂದು ಸಂಜೆ ೫:೩೦ಕ್ಕೆ ಬಾಗಲಕೋಟೆಯಿಂದ ಹೊರಟು, ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಸೆ.೨೮ರ ಬೆಳಿಗ್ಗೆ ೯ ಗಂಟೆಯಿಂದ ೧೦ ಗಂಟೆಯವರೆಗೆ ಶೀತಲಗೃಹ ಘಟಕಗಳಿಗೆ ಭೇಟಿ ನೀಡುವರು. ಬೆಳಿಗ್ಗೆ ೧೦ ರಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ತೋಟಗಾರಿಕಾ ಉಪ ನಿರ್ದೇಶಕರು, ಕೃಷಿ ಮಾರುಕಟ್ಟೆ ಉಪ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬೆಳಿಗ್ಗೆ ೧೧ ಗಂಟೆಗೆ ವಿಜಯಪುರದಿಂದ ಕುಷ್ಟಗಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತದ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ್ ಘೋಷ ಅವರು ಸೆಪ್ಟಂಬರ್ ೨೭ ಹಾಗೂ ೨೮ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಸೆ.೨೭ರಂದು ವಿಜಯಪುರಕ್ಕೆ ಆಗಮಿಸಿ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳಿಗೆ ಹಾಗೂ ಶಾಲೆ, ಕಾಲೇಜು ಮತ್ತು ಐಟಿಐಗಳಿಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯಲ್ಲಿನ ಹಾಸ್ಟೇಲ್‌ಗಳು, ಆಸ್ಪತ್ರೆಗಳಿಗೆ, ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರ ಕಚೇರಿಗಳಿಗೆ ಭೇಟಿ ನೀಡಿ, ನಂತರ ಮುಂಗಾರು ಋತುವಿನ ವಿಪತ್ತು ನಿರ್ವಹಣಾ ಯೋಜನೆಯ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.ಅಂದು ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೫-೩೦ರವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸೆ.೨೮ರ ಬೆಳಿಗ್ಗೆ ವಿಜಯಪುರದಿಂದ ಕಲಬುರಗಿ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More