Author: editor.udayarashmi@gmail.com

ಸೆ.೩೦ರಂದು ಗುಡ್ಡಾಪುರದಲ್ಲಿ ನಡೆವ ಕರ್ನಾಟಕ ಸಂಭ್ರಮ-೫೦ ಕುರಿತು ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸಂಭ್ರಮ-೫೦ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಸುಕ್ಷೇತ್ರದಲ್ಲಿ ಸೆ.೩೦ ರಂದು ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಗುಡ್ಡಾಪುರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಸೇರಿದಂತೆ ಸಚಿವರು, ಗಣ್ಯಾತಿಗಣ್ಯರು ಆಗಮಿಸುವರು. ಶಿಷ್ಟಾಚಾರದಂತೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಕರ್ನಾಟಕ ಗಡಿನಾಡ ಹಿರಿಯ ಚೇತನಗಳಾದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು, ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೂ ನಡೆಯುತ್ತಿದ್ದು, ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ…

Read More

ವಿಜಯಪುರ ದರಬಾರ ಪ್ರೌಡಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ | ಗುರು-ಶಿಷ್ಯರ ಮಹಾಸಂಗಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗುರು ಶಿಷ್ಯರ ನಡುವಿನ ಸಂಬಂಧ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದದ್ದು. ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು, ಗುರು ಶಿಷ್ಯರ ನಡುವಿನ ಸಂಬಂಧದ ಶ್ರೇಷ್ಠತೆಯನ್ನು ಇಂದಿನ ಯುವ ಜನಾಂಗ ಅರಿಯಬೇಕು ಎಂದು ಡಾ. ಆರ್.ಬಿ.ಚೌಧರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೌತಮ್ ಆರ್. ಚೌಧರಿ ಹೇಳಿದರು.ನಗರದ ವಿ.ಭ.ದರಬಾರ ಪ್ರೌಡಶಾಲೆಯ ೧೯೮೬-೮೭ ನೇ ಸಾಲಿನ ೧೦ನೇ ತರಗತಿಯ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ತಮ್ಮ ಅಂದಿನ ಶಾಲಾ ಗುರುಗಳಿಗೆ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ಇಂದು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಪಡೆದಿದ್ದರೆ ಅದರ ಹಿಂದೆ ನಮಗೆ ಅಕ್ಷರ ಜ್ಞಾನ ನೀಡಿದ ಗುರುವಿನ ಶ್ರಮ ಅಡಗಿರುತ್ತದೆ. ಅವರಿಂದಲೇ ನಾವು ಈ ಸ್ಥಾನಕ್ಕೇರಿದ್ದೇವೆ ಎಂಬುದನ್ನು ಯಾವತ್ತೂ ಮರೆಯಬಾರದು ಎಂದರಲ್ಲದೆ, ತಮಗೆ ವಿದ್ಯಾದಾನ ನೀಡಿದ ಗುರುವೃಂದಕ್ಕೆ ಉಚಿತ ವೈದ್ಯಕೀಯ ಸೇವೆ ನೀಡಲು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬಿಜೆಪಿ ಪಕ್ಷದ ಸದಸ್ಯತ್ವ ಅಭಿಯಾನದ ಅಂಗವಾಗಿ ಮತಕ್ಷೇತ್ರದ ಸುಂಗಠಾಣ ಗ್ರಾಮದಲ್ಲಿ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ (ಮಾಗಣಗೇರಾ) ಅವರು ಗುರುವಾರ ಪಕ್ಷದ ಹಿರಿಯ ಸದಸ್ಯರು, ಕಾರ್ಯಕರ್ತರೊಂದಿಗೆ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದ್ದರು.ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಹಾಗೂ ವಿಕಸಿತ ಭಾರತ ನಿಮಿ೯ಸಲು ಅಭಿಯಾನ ಕೈಕೊಂಡಿದ್ದು, ಇದು ಪ್ರತಿ ಮನೆ ಮನೆಯಲ್ಲೂ ಜರುಗಲಿ ಎಂದು ಆಶಿಸಿದರು.ಪ್ರದಾನಿ ಮೋದಿ ಅವರು ಭಾರತವನ್ನು ವಿಶ್ವಗುರುವನ್ನಾಗಿ ಮಾಡುವ ಸಲುವಾಗಿ ಹಗಲಿರುಳು ವಿಶ್ರಮಿಸದೆ ದುಡಿಯುತ್ತಿದ್ದಾರೆ,ಭಾರತದ ಅಭಿವೃದ್ದಿಗಾಗಿ ಹಾಗೂ ಜನರ ಕಲ್ಯಾಣಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡುವ ಮೂಲಕ ಪಕ್ಷವನ್ನು ಬಲಪಡಿಸಬೇಕೆಂದು ಕರೆ ನೀಡಿದರುಈ ಸಂದಭ೯ದಲ್ಲಿ ಮುಖಂಡರಾದ ಯಶವಂತ್ರಾಯಗೌಡ ರೂಗಿ, ಮಡಿವಾಳಪ್ಪಗೌಡ ಪಾಟೀಲ, ರಾಮಚಂದ್ರ ಕಲ್ಲೂರ, ರುದ್ರುಗೌಡ ಬಿರಾದಾರ, ಮಂಡಲ ಸಂಚಾಲಕ ಸಿದ್ದರಾಮ ಆನಗೋಂಡ, ಸಹ ಸಂಚಾಲಕ ಎಸ್, ಆರ್ ಪಾಟೀಲ, ರವಿಗೌಡ ಬಿರಾದಾರ, ದೌವಲತರಾಯಗೌಡ ಬಿರಾದಾರ, ಭೀಮಾಶಂಕರ ಮಜ್ಜಗಿ, ಸುನಿಲ ಪಾಟೀಲ, ಸುನೀಲ ಮಜ್ಜಿಗಿ, ಈರಣ್ಣ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆ ಮತ್ತು ಮನೆಗಳಿಗೆ ನೀರು ನುಗ್ಗಿ ಹಾನಿಯಾದ ಪ್ರದೇಶಗಳಿಗೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ, ನಿರ್ದೇಶಕರು ಹಾಗೂ ನಗರ ಶಾಸಕರ ಪುತ್ರ ರಾಮನಗೌಡ ಪಾಟೀಲ ಯತ್ನಾಳ ಅವರು ಬುಧವಾರ ಭೇಟಿ ನೀಡಿ, ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕಲ್ಪಿಸುವ ಭರವಸೆ ನೀಡಿದರು.ವಾರ್ಡ್ ನಂ.೬ ರಲ್ಲಿ ಬರುವ ಕೆ.ಸಿ.ನಗರ ಹಾಗೂ ಬ್ಯಾಂಕರ್ಸ್ ಕಾಲೊನಿಗೆ ಭೇಟಿ ನೀಡಿ ಪರಿಶೀಲಿಸಿದ ಅವರಿಗೆ, ಕಾಲೊನಿಯಲ್ಲಿ ಹಳೆಯ ಚರಂಡಿ ಇರುವುದರಿಂದ ನೀರು ಸರಾಗವಾಗಿ ಹೋಗದೆ ತೊಂದರೆ ಉಂಟಾಗುತ್ತಿದ್ದು, ಹೊಸ ಚರಂಡಿ ನಿರ್ಮಿಸಬೇಕು, ಉದ್ಯಾನ ಅಭಿವೃದ್ಧಿ ಪಡಿಸಿ ವಾಕಿಂಗ್ ಟ್ರ‍್ಯಾಕ್ ನಿರ್ಮಿಸಬೇಕು ಹಾಗೂ ಹಾಳಾದ ಬೀದಿ ದೀಪಗಳ ಅಳವಡಿಕೆ ಮಾಡಲು ಅಲ್ಲಿನ ನಿವಾಸಿಗಳು ಮನವಿ ಮಾಡಿಕೊಂಡರು.ನಂತರ ವಾರ್ಡ್ ೨೯ರ ರಾಮನಗರ, ರಾಜಾಜಿನಗರಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮನೆಗಳಲ್ಲಿ ಮಳೆ ನೀರು ನುಗ್ಗಿ ಹಾನಿಯಾದ ಕುರಿತಂತೆ ಮಾಹಿತಿ ಪಡೆದುಕೊಂಡರು.ಈ ವೇಳೆ ಅಲ್ಲಿನ ನಿವಾಸಿಗಳು ಚರಂಡಿ…

Read More

ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಖಾಸಗಿ ಶಾಲೆಗಳು! ಲೇಖಕರು- ಸಾಯಬಣ್ಣ ಮಾದರ (ಸಲಾದಹಳ್ಳಿ ) ಉದಯರಶ್ಮಿ ದಿನಪತ್ರಿಕೆ ನಾಯಿ ಕೊಡೆಯಂತೆ ಎಲ್ಲೆಂದರಲ್ಲಿ ತಲೆಯೆತ್ತುತ್ತಿರುವ ಖಾಸಗಿ ಶಾಲೆಗಳು ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿವೆ. ಪೈಪೋಟಿಗೆ ಬಿದ್ದಂತೆ ಖಾಸಗಿ ಶಾಲೆಗಳಿಗೆ ಸರಕಾರ ಪರ್ಮಿಷನ್ ಕೊಡುತ್ತಿರುವುದು ಇದಕ್ಕೆಲ್ಲ ಕಾರಣವಾಗಿದೆ. ಪ್ರತಿಯೊಂದು ಹಳ್ಳಿಗೆ ಒಂದೋ ಎರಡೋ ಖಾಸಗಿ ಶಾಲೆಗಳಿವೆ. ಅವುಗಳಿಗೆ ಪರ್ಮಿಷನ್ ಕೊಡುವಲ್ಲಿ ಯಾವುದೇ ಸರ್ಕಾರಿ ನಿಯಮವನ್ನು ಅಧಿಕಾರಿಗಳು ಪರಿಗಣಿಸಿಲ್ಲ. ಅವರು ಶಾಲಾ ಆಡಳಿತ ಮಂಡಳಿಯ ವರಮಾನದ ಕಡೆ ಮಾತ್ರ ಗಮನಹರಿಸಿರುವುದು ಕಂಡುಬರುತ್ತದೆ.2015ರಂದು ಜನವರಿ ತಿಂಗಳು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಖಾಸಗಿ ಶಾಲಾ ವಿದ್ಯಾರ್ಥಿನಿಯಾದ ರಿಯಾನ ಎಂಬ ವಿದ್ಯಾರ್ಥಿನಿಯು ಶಾಲೆಯನ್ನು ಮುಗಿಸಿಕೊಂಡು ಮೂರು ಚಕ್ರದ ಆಟೋದಲ್ಲಿ ಸುಮಾರು 20 ವಿದ್ಯಾರ್ಥಿನಿಯರನ್ನು ತುಂಬಿಕೊಂಡು ಹೊನ್ನಳ್ಳಿಯಿಂದ 9 ಕಿಲೋಮೀಟರ್ ದೂರ ಇರುವ ಅಸಂತಾಪುರ ಗ್ರಾಮಕ್ಕೆ ಹೊರಟಿತ್ತು. ಆಟೋದ ಚಾಲಕನು ಟೇಪ್ ರೆಕಾರ್ಡನ್ನು ಭಾರಿ ಸೌಂಡ್ ಇಟ್ಟುಕೊಂಡು ಓಡಿಸುತ್ತಿದ್ದ ಚಾಲಕನ ಅಜಾಗ್ರಕತೆಯ ಚಾಲನೆಯಿಂದಾಗಿ ತಿರುವಿನ ರಸ್ತೆಯಲ್ಲಿ ಆಟೋ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ವಿಜಯಪುರ ನಗರದಲ್ಲಿ ಪ್ರಥಮ ಕಿತ್ತೂರು ಕರ್ನಾಟಕ ಜಾಂಬುರೇಟ್ ಆಯೋಜನೆ ಮಾಡುವ ಉದ್ದೇಶದಿಂದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಇವರ ಅಧ್ಯಕ್ಷತೆಯಲ್ಲಿ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಹಾಗೂ ರಾಜ್ಯ ಪ್ರಧಾನ ಆಯುಕ್ತ ಭಾರತ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಇವರ ಮಾರ್ಗದರ್ಶನದಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆ ಜರುಗಿತು.ಈ ಪ್ರಥಮ ಪ್ರಥಮ ಕಿತ್ತೂರು ಕರ್ನಾಟಕ ಜಾಂಬುರೇಟ್ (ಕಾರ್ಯಕ್ರಮ)ದಲ್ಲಿ ರಾಜ್ಯದ ಎಂಟು ಜಿಲ್ಲೆಗಳ ಒಳಗೊಂಡ ಸುಮಾರು ನಾಲ್ಕು ಸಾವಿರ ಸ್ಕೌಟ್ಸ್ ಮತ್ತು ಗೈಡ್ಸ್ ಪಾಲ್ಗೊಳ್ಳುತ್ತಿದ್ದು, ಈ ಕಾರ್ಯಕ್ರಮವು ೨೦೨೪ರ ಡಿಸೆಂಬರ್ ೧೪ ರಿಂದ ೧೮ ರವರೆಗೆ ವಿಜಯಪುರ ನಗರದ ಬಿ.ಎಲ್.ಡಿ.ಈ. ಸಂಸ್ಥೆಯ ನ್ಯೂ ಕ್ಯಾಂಪಸ್, ಸೋಲಾಪುರ ರೋಡ, ಇಲ್ಲಿ ನಡೆಸಲು ತೀರ್ಮಾನಿಸಲಾಯಿತು.ಈ ಐದು ದಿನಗಳ ಕಾರ್ಯಕ್ರಮದಲ್ಲಿ ಕಿತ್ತೂರು ಕರ್ನಾಟಕ ಜಾಂಬೂರೇಟದಲ್ಲಿ ಚಿತ್ರಕಲಾ ಸ್ಪರ್ಧೆ, ಉತ್ತರ ಕರ್ನಾಟಕದ ಜಾನಪದ ಜಾತ್ರೆ, ಫ.ಗು. ಹಳಕಟ್ಟಿಯವರ ವಚನ ಕಮ್ಮಟ, ಮಕ್ಕಳಿಗೆ ಕರಕುಶಲ ಚಟುವಟಿಕೆಗಳು,…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ದೇವರ ದರ್ಶನಕ್ಕೆಂದು ಹೋದವರು ಮನೆಗೆ ಮರಳಿ ಬಾರದೇ ಬಾರದ ಲೋಕಕ್ಕೆ ತೆರಳಿದ ಘಟನೆ ಹುನಗುಂದ ತಾಲೂಕಿನ ಧನ್ನೂರ ಗ್ರಾಮದ ಬಳಿ ನಡೆದಿದೆ.ಮೃತ ದುರ್ದೈವಿಗಳನ್ನು ಮುದ್ದೇಬಿಹಾಳ ಪಟ್ಟಣದ ಮಹಾಂತೇಶ ನಗರದ ನಿವಾಸಿ ರಾಮಣ್ಣ ನಾಯಕಮಕ್ಕಳ(೫೭), ತಾಲೂಕಿನ ಬಿದರಕುಂದಿ ಗ್ರಾಮದ ಲಕ್ಷ್ಮಣ ವಡ್ಡರ(೫೫), ಬೈಲಪ್ಪ ಬಿರಾದಾರ(೪೬), ಮತ್ತು ಗುಡ್ನಾಳ ಗ್ರಾಮದ ಮಹಮ್ಮದ ರಫೀಕ(೨೩) ಎಂದು ಗುರುತಿಸಲಾಗಿದೆ.ಮೃತರು ಹೊಸಪೇಟೆಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಕಾರಿನ ಮೂಲಕ ತೆರಳಿ ದೇವರ ದರ್ಶನ ಪಡೆದು ಮರಳುವಾಗ ಹುನಗುಂದ ತಾಲೂಕಿನ ಧನ್ನೂರ ಗ್ರಾಮದ ಟೋಲ್ ಬಳಿ ಮುದ್ದೇಬಿಹಾಳ ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಗಂಭೀರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ವಾಹನಗಳೆರಡೂ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜಾಗಿದ್ದು, ಲಾರಿ ರಸ್ತೆ ಬಿಟ್ಟು ಪಕ್ಕದ ಜಮೀನೊಂದರಲ್ಲಿ ಬಿದ್ದಿದೆ. ಮಧ್ಯರಾತ್ರಿ ೨:೧೦ ಕ್ಕೆ ಧನ್ನೂರು ಬಳಿ ಇರುವ ಟೂಲ್ ನಿಂದ ಲಾರಿ ಹೊರಟಿತ್ತು ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಸಂಪೂರ್ಣ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಲಿ.ಬಸವಂತರಾಯ ಮಹಾರಾಜರು ಹಾಗು ಲಿಂ.ಬಸವರಾಜ ಮೇಲುಪ್ಪರಗಿಮಠ ನಿರಂತರ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಕ್ಕಾಗಿ ದುಡಿದು ತಮ್ಮ ಜೀವನವನ್ನು ಸಾರ್ಥಕ ಮಾಡಿಕೊಂಡ ಮಹಾನ ಸಾಧಕರು ಎಂದು ಹಿರಿಯ ಪ್ರವಚನಕಾರ ಬಾಬುರಾವ ಮಹಾರಾಜ ಅಭಿಪ್ರಾಯ ವ್ಯಕ್ತಪಡಿಸಿದರು.ತಾಲ್ಲೂಕಿನ ಹೊನವಾಡ ಗ್ರಾಮದ ವಿಠ್ಠಲ ಮಂದಿರದಲ್ಲಿ ಬುಧವಾರ ಲಿಂಗೈಕ್ಯ ಬಸವಂತರಾಯ ಮಹಾರಾಜರ ಹಾಗು ಲಿಂ.ಬಸವರಾಜ ಮೇಲುಪ್ಪರಗಿಮಠ ಅವರ ದತ್ತಿ ನಿಧಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡುತ್ತಾ, ಗ್ರಾಮದ ಈ ಇಬ್ಬರು ಸಾಧಕರಿಂದ ಶೈಕ್ಷಣಿಕ ಹಾಗು ಆಧ್ಯಾತ್ಮಿಕ ಚಿಂತನೆಗಳಿಂದ ಪ್ರಗತಿ ಹೊಂದಲು ಸಾಧ್ಯವಾಗಿದೆ ಎಂದರು.ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಇತಿಹಾಸವಿದೆ. ಕನ್ನಡ ನಾಡು ನುಡಿಯು ಅತ್ಯಂತ ಶ್ರೀಮಂತವಾಗಿದೆ. ಸಾಹಿತ್ಯದಿಂದ ಸಾಮಾಜಿಕ ಮೌಲ್ಯ ಕಾಪಾಡಲು ಸಾಧ್ಯವಾಗಿದೆ ಎಂದರು.ಉಪನ್ಯಾಸಕ ಡಿ.ಬಿ.ಡೇಮ್ರಿ ಮಾತನಾಡಿ, ವಚನ ಸಾಹಿತ್ಯ ಹಾಗೂ ಜಾನಪದ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇವೆ. ಗ್ರಾಮೀಣ ಸಮಾಜದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರಾಧ್ಯಾನತೆ ನೀಡಿ ಹೊನವಾಡದಲ್ಲಿ ಪ್ರೌಢ…

Read More

ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ತಿಕೋಟಾ ತಹಶೀಲ್ದಾರ ಕಛೇರಿ ಎದುರು ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ವತಿಯಿಂದ ಗುರುವಾರ ತಹಶೀಲ್ದಾರ ಕಛೇರಿ ಎದುರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಯಿತು.ಸಂಘದ ತಾಲ್ಲೂಕ ಅಧ್ಯಕ್ಷ ಪ್ರಭು ಸಾತಿಹಾಳ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯ, ಸೇವಾ ಸೌಲಭ್ಯ ಮತ್ತು ಮೊಬೈಲ್ ಅಪ್ಲಿಕೇಷನ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೇರಲಾಗುತ್ತಿರುವ ಒತ್ತಡವನ್ನು ನಿಲ್ಲಿಸಲು ಇಂದು ಮುಷ್ಕರ ಕೈಗೊಂಡಿದ್ದು, ಅನಿರ್ದಿಷ್ಟಾವಧಿ ವರೆಗೆ ಕೆಲಸ ಸ್ಥಗಿತಗೊಳಿಸಿದ್ದೇವೆ.ಇಲಾಖೆಯ ಹದಿನೇಳಕ್ಕಿಂತ ಹೆಚ್ಚು ಆ್ಯಪ್ ಗಳಲ್ಲಿ ಕೆಲಸ ಮಾಡಬೇಕಾಗಿರುವದರಿಂದ ಮೊಬೈಲ್, ಲ್ಯಾಪಟಾಪ್, ನೆಟ್ ಸೌಲಭ್ಯ ಒದಗಿಸಬೇಕು. ಇವುಗಳ ಒತ್ತಡದಿಂದ ಗ್ರಾಮ ಅಧಿಕಾರಿಗಳ ಸಾವು ಸಂಭವಿಸುತ್ತಿವೆ. ನಮ್ಮ ಬೇಡಿಕೆ ಈಡೇರುವವರೆಗೂ ಆಧಾರ ಸೀಡ್, ಲ್ಯಾಂಡ್ ಬಿಟ್, ಬಗೈರ ಹುಕುಂ, ನಮೂನೆ ಒಂದರಿಂದ ಐದು ವೆಬ್ ಅರ್ಜಿ, ಪೌತಿ ಅಂದೋಲನ ಆ್ಯಪ್ ಕಾರ್ಯ ಮಾಡುವದಿಲ್ಲ. ಅಂತರ ಜಿಲ್ಲಾ ವರ್ಗಾವಣೆ ಸಮಸ್ಯೆ ಇತ್ಯರ್ಥ ಸೇರಿದಂತೆ…

Read More