Author: editor.udayarashmi@gmail.com

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಅನುದಾನವನ್ನು ಲ್ಯಾಪ್ಸ್ ಆಗದಂತೆ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ೨೦೨೪-೨೫ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಆಗಸ್ಟ್-೨೦೨೪ರ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈಗಾಗಲೇ ವಿವಿಧ ಇಲಾಖೆಗಳಿಗೆ ಅನುದಾನ ಬಿಡುಗಡೆಯಾಗಿದ್ದು ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸುವಂತೆ ಸೂಚಿಸಿದರು. ಬಾಕಿ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಪೌರ ಕಾರ್ಮಿಕರಿಗೆ ನೇಮಕಾತಿ ಸಂದರ್ಭದಲ್ಲಿ ಬೇಕಾದ ಪ್ರಮಾಣ ಪತ್ರ ನೀಡಿಕೆ ವಿಳಂಬ ಆಗುತ್ತಿದ್ದು, ಆದಷ್ಟು ಶೀಘ್ರವಾಗಿ ಪರಿಶೀಲನೆ ಮಾಡಿ ಪೌರ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಹೊರಗುತ್ತಿಗೆ ಆಧಾರದಲ್ಲಿರುವ ಪೌರ ಕಾರ್ಮಿಕರಿಗೆ ಸಮರ್ಪಕವಾಗಿ ಇ.ಪಿ.ಎಫ್…

Read More

ಮುಡಾ ಹಗರಣ | ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ ಬೆಂಗಳೂರು: ಮುಡಾ ಹಗರಣ ಪ್ರಕರಣದ ರಿಟ್ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಹೈಕೋರ್ಟ್ ತೀರ್ಪು ಪಕ್ಷದ ಹೋರಾಟಕ್ಕೆ ಸಂದ ಜಯ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಹೈಕೋರ್ಟ್‌ನ ತೀರ್ಪು ಸಾಬೀತಾಗಿದೆ ಎಂದು ಹೇಳಿದ್ದಾರೆ.ಹಗರಣ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಬಿಜೆಪಿ ತೀರ್ಮಾನಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದ ಆದೇಶವನ್ನು ಗೌರವಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.ಸುದೀರ್ಘ ಚರ್ಚೆಯ ನಂತರ ಈ ಆದೇಶ ಬಂದಿದೆ. ಹಲವು ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಕೇಂದ್ರ ಸರ್ಕಾರದ ಏಜೆಂಟ್ ಎಂದು ಕರೆದಿದ್ದರು. ಕೋರ್ಟ್ ಆದೇಶ ನೀಡಿದ್ದು, ರಾಜ್ಯಪಾಲರ ಕ್ರಮಗಳನ್ನು ಹೈಕೋರ್ಟ್ ಮಾನ್ಯ ಮಾಡಿದೆ, ತನಿಖೆಗೆ ಆದೇಶಿಸಿರುವ ಅವರ ನಿರ್ಧಾರ ಕಾನೂನುಬದ್ಧತೆ ಮತ್ತು ಸಾಂವಿಧಾನಿಕ ತತ್ವಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರ ಸ್ವಚ್ಚತೆಯಿಂದ ಕೂಡಿರಬೇಕು ಜನರಿಗೆ ಮೂಲಭೂತ ಸೌಕರ್ಯಗಳಾದ ಶೌಚಾಲಯ ಮತ್ತು ಮೂತ್ರಾಲಯ ಒದಗಿಸಬೆಕು ಎನ್ನುವ ನಿಟ್ಟಿನಲ್ಲಿ ೨೦೨೩-೨೪ನೇ ಸಾಲಿನ ಎಸ್.ಬಿಎಂ ೨.೦ ಯೋಜನೆ ಅಡಿಯಲ್ಲಿ ರೂ.೫೯.೧೦ಲಕ್ಷಗಳ ಮಿಸಲಿಟ್ಟು ನಗರ ಜನತೆಯ ಜೊತೆ ಗ್ರಾಮೀಣದಿಂದ ವ್ಯಾಪಾರ ಉದ್ಯೋಗಕ್ಕಾಗಿ ಆಗಮಿಸುತ್ತಿರುವ ಸಾರ್ವಜನಿಕರು, ರೈತಾಪಿ ವರ್ಗ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಯ್ಕೆಯಾದ ನಗರದ ೮ಸ್ಥಳಗಳಲ್ಲಿ ೪ಶೌಚಾಲಯ ಹಾಗೂ ೪ ಮೂತ್ರಾಲಯ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಕನಕದಾಸ ವೃತ್ತದ ಹತ್ತಿರ ಸನ್ ೨೦೨೩-೨೪ನೇ ಸಾಲೀನ ಎಸ್‌ಬಿಎಂ ೨.೦ ಯೋಜನೆಯಡಿಯಲ್ಲಿ ರೂ ೫೯ಲಕ್ಷ ೧೦ಸಾವಿರ ರೂ.ವೆಚ್ಚದಲ್ಲಿ ೮ಶೌಚಾಲಯ ನಿರ್ಮಾಣದ ಭೂಮಿ ಪೂಜೆಯನ್ನು ನೇರವೇರಿಸಿ ಮಾತನಾಡಿದ ಅವರು, ಸಿಂದಗಿ ನಗರವನ್ನು ಸ್ವಚ್ಚತೆಯಿಂದ ಕೂಡಿರಬೇಕು ಎನ್ನುವ ನಿಟ್ಟಿನಲ್ಲಿ ಕನಕದಾಸ ವೃತ್ತ, ವಿದ್ಯಾನಗರ ಕ್ರೀಡಾಂಗಣ, ಬಸ್ ಡಿಪೋ ಆಶ್ರಯ ಕಾಲೋನಿ, ಗಾಂಧಿ ವೃತ್ತದ ಹತ್ತಿರ ೪ ಶೌಚಾಲಯ ಹಾಗೂ ಸಂಗಮ ಬಾರ್, ಕೆಇಬಿ, ಮೋರಟಗಿ ನಾಕಾ, ಕೋರ್ಟ ಹತ್ತಿರ ಒಟ್ಟು ೪ ಮೂತ್ರಾಲಯಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಪಂಚದ ಪ್ರತಿಯೊಂದು ಮೂಲೆಯಲ್ಲಿಯೂ ಆರೋಗ್ಯವನ್ನು ಸುಧಾರಿಸುವಲ್ಲಿ ಔಷಧಿಕಾರರ ಪಾತ್ರವನ್ನು ಉತ್ತೇಜಿಸುವ ಮತ್ತು ಪ್ರತಿಪಾದಿಸುವ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದು ಈ ದಿನದ ಉದ್ದೇಶವಾಗಿದೆ ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಔಷದಾಲಯ ತಜ್ಞಾಧಿಕಾರಿ ಶ್ರೀಶೈಲ ಪರೀಟ್ ಹೇಳಿದರು.ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಶ್ರೀ ಸಂಗಮೇಶ್ವರ ಪಾರ್ಮಸಿ ಕಾಲೇಜಿನಲ್ಲಿ ಹಮ್ಮಿಕೊಂಡ ವಿಶ್ವ ಔಷಧಿಕಾರರ ದಿನಾಚರಣೆಯ ಕಾರ್ಯಕ್ರಮವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಔಷದಾಲಯ ತಜ್ಞಾಧಿಕಾರಿ ಶ್ರೀಶೈಲ ಪರೀಟ್ ಉದ್ಘಾಟಿಸಿ ಮಾತನಾಡಿದ ಅವರು, ಔಷಧಿ ತಜ್ಞ ಎನ್ನುವುದು ಆರೋಗ್ಯ ರಕ್ಷಣೆ ವೃತ್ತಿಪರ ಪರವಾನಿಗೆಯಾಗಿದ್ದು, ಔಷಧಿಗಳನ್ನು ವಿತರಣೆ ಮಾಡುವುದು, ಲಸಿಕೆಗಳನ್ನು ನೀಡುವುದು, ಆಹಾರ ಪೂರಕಗಳ ಸರಿಯಾದ ಬಳಕೆಯ ರೋಗಿಗಳಿಗೆ ಸಲಹೆ ನೀಡುವುದು ಸೇರಿದಂತೆ ಕರ್ತವ್ಯಗಳೊಂದಿಗೆ ಔಷಧಾಲಯದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿದರು.ಈ ವೇಳೆ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಎಂ.ಹಂಗರಗಿ, ಹಾಗೂ ಪತ್ರಕರ್ತ ಇಸ್ಮಾಯಿಲ್ ಶೇಖ್ ಮಾತನಾಡಿದರು.ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ ಅಧ್ಯಕ್ಷೀಯ ನುಡಿಗಳನ್ನಾಡಿದರು.ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಬಳಗಾನೂರ ಪ್ರಾಥಮಿಕ ಆರೋಗ್ಯ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ರೇವತಗಾಂವ ಗ್ರಾಮದ ಮಲ್ಲಿಕಾರ್ಜುನ ಕಲ್ಲಪ್ಪ ಮಾನೆ ಅವರು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ(ರಿ)ದ ಮತಿಯಿಂದ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸದ್ಯ ಚಡಚಣ ಮಟ್ಟಣದ ಎಂ.ಇ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರಿಗೆ ಶನಿವಾರದಂದು ಬೆಂಗಳೂರಿನ ಜ್ಞಾನ ಭಾರತಿ ಆವರಣದ ಪ್ರೊ.ಕೆ ವೆಂಕಟಗಿರಿ ಗೌಡ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ(ರಿ)ದ ರಾಜ್ಯಾಧ್ಯಕ್ಷ ಸುರೇಶ ಗೊಲ್ಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅಂತಾರಾಷ್ಟ್ರೀಯ ಪ್ರಸವಪೂರ್ವ ಆರೈಕೆ ಮುಂದುವರೆದ ವೈದ್ಯಕೀಯ ಶಿಕ್ಷಣ ಕುರಿತ ಕಾರ್ಯಾಗಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸವ ಪೂರ್ವ ಆರೈಕೆ ಕಾರ್ಯಾಗಾರಗಳು ತಾಯಂದಿರು ಮತ್ತು ಶಿಶುಗಳ ಆರೈಕೆ ವೃತ್ತಿಪರರಿಗೆ ತಾಂತ್ರಿಕ ಮತ್ತು ವೈಜ್ಞಾನಿಕವಾಗಿ ಕೌಶಲ್ಯ ಅಳವಡಿಸಿಕೊಳ್ಳಲು ಅವಕಾಶ ನೆರವು ನೀಡುತ್ತವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಂಪತ್ ಗುಣಾರಿ ಹೇಳಿದ್ದಾರೆ.ಶನಿವಾರ ನಗರದ ಬಿ. ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಅಮೇರಿಕದ ಟಿ.ಎ.ಎಚ್.ಬಿ ಟೆಕ್ಸಾಸ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಸವಪೂರ್ವ ಆರೈಕೆ ಮುಂದುವರೆದ ವೈದ್ಯಕೀಯ ಶಿಕ್ಷಣ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ತಾಯಂದಿರು ಮತ್ತು ನವಜಾತ ಶಿಶುಗಳ ಆರೈಕೆ ಬಹುಮುಖ್ಯವಾಗಿದೆ. ಈ ಕೆಲಸದಲ್ಲಿ ಕಾರ್ಯ ನಿರ್ವಹಿಸುವ ವೃತ್ತಿಪರರಿಗೆ ಬದಲಾಗುತ್ತಿರುವ ಇಂದಿನ ಆಧುನಿಕ ವೈಜ್ಞಾನಿಕ ಪದ್ಧತಿಯಲ್ಲಿ ತಾಂತ್ರಿಕ ಕೌಶಲ್ಯ ಮತ್ತು ವೃತ್ತಿಕೌಶಲ್ಯ ಅಗತ್ಯವಾಗಿದೆ. ತರಬೇತಿ ಶಿಬಿರಗಳು ಮತ್ತು ಕಾರ್ಯಾಗಾರಗಳು ಈ ವೃತ್ತಿಪರರಿಗೆ ವೃತ್ತಿ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ನೆರವು ನೀಡುತ್ತವೆ ಎಂದು ಡಾ.ಗುಣಾರಿ ಹೇಳಿದರು.ಟೆಕ್ಸಾಸ್ ನ ಟಿ.ಎ.ಬಿ.ಎಚ್. ಪ್ರತಿನಿಧಿ ಡಾ.ಪ್ರಕಾಶ ಕಬ್ಬೂರ ಅವರು ವಿಶ್ವಾದ್ಯಂತ…

Read More

ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ವಿಜಯಪುರದಲ್ಲಿ ಸೆ.29 ಭಾನುವಾರದಂದು ಜರುಗುವ ಗ್ರಾಮ ಆಡಳಿತ ಅಧಿಕಾರಿ, ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗುವ ನಿಡಗುಂದಿ ತಾಲೂಕಿನ ಪರೀಕ್ಷಾರ್ಥಿಗಳಿಗೆ ವಿಜಯಪುರಕ್ಕೆ ಹೋಗಲು ತೊಂದರೆಯಾಗದಂತೆ ಪಟ್ಟಣದ ಬಸ್ ನಿಲ್ದಾಣದಿಂದ ಹೆಚ್ಚುವರಿ ಬಸ್ಸುಗಳನ್ನು ಒದಗಿಸಬೇಕೆಂದು ಆಗ್ರಹಿಸಿ ನವ ನಿಡಗುಂದಿ ಜನಾಭಿಪ್ರಾಯ ವೇದಿಕೆಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿಡಗುಂದಿ ನಿಯಂತ್ರಕ ಎಚ್.ಕೆ.ಕಟ್ಟಿಮನಿ ಅವರಿಗೆ ಬುದವಾರ ಮನವಿ ಸಲ್ಲಿಸಲಾಯಿತು.ಈ ಸಮಯದಲ್ಲಿ ಎಸ್ ಎಸ್ ಕೋತಿನ, ವಿಜಯ್ ಕಟ್ಟಿಮಠ, ಬಸಲಿಂಗಪ್ಪ ಕುಂಬಾರ, ವಿಜಯ್ ಕುಮಾರ ಚಿನಿವಾಲರ, ಸಂತೋಷ್ ಕಡಿ, ಆನಂದ್ ಬೋವಿವಡ್ಡರ, ಸಿದ್ದು ಚಲವಾದಿ, ಹನುಮಂತ್ ಭಜಂತ್ರಿ, ಗಂಗಾರಾಮ್ ಬಂಡಿವಡ್ಡರ, ಮುತ್ತುರಾಜ್ ಚಲವಾದಿ, ಶಾಂತಪ್ಪ ಹಡಪದ ಸೇರಿದಂತೆ ಅನೇಕರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಸೆ.19 ರಂದು ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಗಣೇಶ ವಿಸರ್ಜನೆಯ ವೇಳೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಜರತ ಟಿಪ್ಪುಸುಲ್ತಾನ ಶಹೀದ ರವರಿಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪಟ್ಟಣದ ಮುಸ್ಲಿಂ ಹಾಗೂ ದಲಿತ ಮುಖಂಡರು ಬುಧವಾರ ಪೊಲೀಸ್ ಠಾಣೆಗೆ ತೆರಳಿ ಪಿಎಸ್ಐ ಅಮೋಜ್ ಕಾಂಬ್ಳೆ ಅವರಿಗೆ ದೂರು ಸಲ್ಲಿಸಿ ಒತ್ತಾಯಿಸಿದರು.ಪದೇ ಪದೇ ಮುಸ್ಲಿಂ ಸಮುದಾಯವನ್ನು ಟಾರ್ಗೆಟ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಹೀಯಾಳಿಸುವುದು, ಪ್ರಚೋದನಕಾರಿ ಭಾಷಣ ಮಾಡಿ, ಕೋಮು ಸಾಮರಸ್ಯಕ್ಕೆ ದಕ್ಕೆ ತರುವ ಮೂಲಕ ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ, ವಿಫಲವಾದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವರ್ತನೆ ಖಂಡನೀಯ ಎಂದವರು, ಕೂಡಲೇ ಅವರ ಮೇಲೆ ದೂರ ದಾಖಲಿಸಿ, ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.ಇದೇ ವೇಳೆ ಪ್ರಮುಖರಾದ ಅಬ್ದುಲ್ ರಜಾಕ್ ಸಾಸನೂರ್, ನಿಂಗಣ್ಣ ಗೋನಾಳ, ಹಮೀದ್ ಹುಣಚ್ಯಾಳ, ಬಂದೇನವಾಜ್ ನಾಲತವಾಡ, ಇಲಿಯಾಸ್ ಪಟೇಲ್ ಬಳಗಾನೂರ, ಬಾಬಾ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಮ್ಮ ಅಧಿಕಾರದ ಅವಧಿಯಲ್ಲಿ ಪಟ್ಟಣದ ಉದ್ಯಾನವನಗಳ ಅಭಿವೃದ್ಧಿಗೆ ಹಾಗೂ ಪಟ್ಟಣದ ಕೆರೆಯ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡುತ್ತೇನೆ ಎಂದು ಪುರಸಭೆಯ ನೂತನ ಅಧ್ಯಕ್ಷ ಮಹಿಬೂಬ ಗೊಳಸಂಗಿ ಹೇಳಿದರು.ಪಟ್ಟಣದ ಹುಡ್ಕೊ ಬಡಾವಣೆಯ ಉದ್ಯಾನವನದಲ್ಲಿ ಪುರಸಭೆ, ಅರಣ್ಯ ಇಲಾಖೆ ಹಾಗೂ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಸ್ವಚ್ಚತಾ ಹಿ ಸೇವಾ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಪಟ್ಟಣದ ಜೀವನಾಡಿಯಾಗಿರುವ ಕೆರೆಯ ಸ್ವಚ್ಛತೆ ಹಾಗೂ ಸೌಂದರ್ಯವನ್ನು ಹೆಚ್ಚಿಸಲು ನಾವು ಕ್ರಿಯಾ ಯೋಜನೆ ರೂಪಿಸುತ್ತಿದ್ದೇವೆ. ಇದಕ್ಕೆ ಶಾಸಕರು ಸಹ ಒಪ್ಪಿಗೆ ನೀಡಿದ್ದಾರೆ. ಹಸಿರು ತೋರಣ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳ ಸದಸ್ಯರ ಸಲಹೆ ಪಡೆದು ಕೆರೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.ಪುರಸಭೆ ನೂತನ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಮಾತನಾಡಿ, ಪಟ್ಟಣದ ಸ್ವಚ್ಛತೆ ಬಗ್ಗೆ ಜನರು ಪ್ರಜ್ಞಾವಂತರಾಗಿ ಕೆಲಸ ಮಾಡಬೇಕು. ತ್ಯಾಜ್ಯ ಮುಕ್ತ ಪಟ್ಟಣ ಮಾಡಲು ಎಲ್ಲರೂ ಕೈ ಜೋಡಿಸಬೇಕು ಎಂದರು.ಪುರಸಭೆಯ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಾತನಾಡಿ, ನಾವು ನಡೆಯುವ ಮಾರ್ಗ ಮತ್ತು ಮನಸ್ಸುಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಾಲಟ್ಟಿ, ಕೊಟ್ಯಾಳ ಹಾಗೂ ಬಬಲೇಶ್ವರ ತಾಲೂಕಿನ ದಾಶ್ಯಾಳ, ಸಾರವಾಡ, ಹೊನಗನಹಳ್ಳಿ ಮತ್ತು ತೊನಶ್ಯಾಳ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದ ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಿದರು.ಮಳೆಯಿಂದ ಹಾನಿಯಾಗಿರುವ ಬೆಳೆ ಸರಿಯಾಗಿ ನಿಯಮಾನುಸಾರ ಸಮೀಕ್ಷೆ ಕೈಗೊಳ್ಳಲು ತಿಳಿಸಿದರು. ಸಮೀಕ್ಷಾ ಕಾರ್ಯಕ್ಕೆ ನೂತನ ತಂತ್ರಜ್ಞಾನಗಳನ್ನು ಬಳಸಿಕೊಂಡು ಬೆಳೆಗಳ ಜೊತೆಗೆ ಹಾನಿಗೊಳಗಾದ ಮನೆಗಳ ಕುರಿತು ಹಾಗೂ ಇತರೆ ಅಂಶಗಳ ಕುರಿತು ಸಹ ಸಮೀಕ್ಷೆ ನಡೆಸಲು ಸೂಚನೆ ನೀಡಿದರು.ಸುರಕ್ಷಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ , ತಿಕೋಟಾ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಬಬಲೇಶ್ವರ ಕಾರ್ಯನಿರ್ವಾಹಕ ಅಧಿಕಾರಿ ವ್ಹಿ.ಎಸ್.ಹಿರೇಮಠ ಸೇರಿದಂತೆ ಕೃಷಿ, ತೋಟಗಾರಿಕೆ ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು…

Read More