Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಳೆ ಹಾನಿ ಪ್ರದೇಶಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.ವಿಜಯಪುರ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ನಡೆಸಿ, ವಾರ್ಡ್ ೬ರ ಕೆ.ಸಿ.ನಗರ, ಡಿಸಿಸಿ ಬ್ಯಾಂಕ್ ಹತ್ತಿರ ಬಬಲೇಶ್ವರ ನಾಕಾ ಹತ್ತಿರದ ಬಾಗವಾನ ಕಾಲೋನಿ, ಪ್ರೇಮ ನಗರ, ನವಭಾಗ ರಸ್ತೆಯ ಕೋಟೆ ಗೋಡೆ ಹತ್ತಿರ, ಜುಮ್ಮಾ ಮಸಜೀದ್, ವಾರ್ಡ್ ನಂ೧೪ ರ ಅಪ್ಸರಾ ಥೇಟರ್ ಹತ್ತಿರ ಸಂಚರಿಸಿ ಪರಿಶೀಲನೆ ನಡೆಸಿದರು.ಈ ಸಂದರ್ಭ ಜಿಲ್ಲಾಧಿಕಾರಿ ಟಿ.ಭೂಬಾಲನ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸಿ.ಬಿ.ಚಿಕ್ಕಲಕಿ ಸೇರಿದಂತೆ ಅಧಿಕಾರಿ ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಳೆನೀರು ನಿಲ್ಲದೇ ಸರಾಗವಾಗಿ ಹರಿದುಹೋಗುವಂತೆ ಕಸ, ತಾಜ್ಯಗಳನ್ನು ತೆಗೆದು ರಾಜಕಾಲುವೆಗಳನ್ನು ಸ್ವಚ್ಚವಾಗಿಡಬೇಕು. ಒತ್ತುವರಿಯಾಗಿರುವ ರಾಜಕಾಲುವೆ, ಅತಿಕ್ರಮಣವನ್ನು ೧೫ ದಿನಗಳ ಕಾಲಮಿತಿಯಲ್ಲಿ ತೆರವುಗೊಳಿಸಲು ಕ್ರಮವಹಿಸಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಆದ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸೂಚಿಸಿದರು.ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಳೆಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರನ್ನೊಳಗೊಂಡ ಕಾರ್ಯಪಡೆ ರಚಿಸಿಕೊಂಡು ಆಗಾಗ ಸಭೆ ನಡೆಸಬೇಕು ಎಂದು ಹೇಳಿದರು.ಲೋಕೋಪಯೋಗಿ ಇಲಾಖೆಯು ರಸ್ತೆ ನಿರ್ಮಾಣ ಸಂದರ್ಭದಲ್ಲಿ ಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು.ಮಳೆಯಿಂದ ಹಾನಿಯಾದ ರಸ್ತೆ, ವಿದ್ಯುತ್ ಕಂಬ ಮಾಹಿತಿ ಸಂಗ್ರಹಿಸುವಂತೆಯೂ, ಮಳೆ ಸಂದರ್ಭದಲ್ಲಿ ಯಾವುದೇ ಅಪಾಯಗಳು ಉಂಟಾಗದಂತೆ ವಿದ್ಯುತ್ ಕಡಿತಗೊಳಿಸಬೇಕು ಎಂದು ಹೇಳಿದರು.ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ,…
ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ಸಮೀಪದ ಬಿರಾಳ ಹಿಸ್ಸಾ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳಿಗೆ 4 ದಿನ ಪೂರಕ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಶ್ರೀಶೈಲ ಪೂಜಾರಿ, ಪ್ರಮುಖರಾದ ಗುರಣ್ಣಗೌಡ ಪೊಲೀಸ್ ಪಾಟೀಲ, SDMC ಅಧ್ಯಕರಾದ ಶಿವಶರಣಪ್ಪ ಇಂಗಳಗಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನಾ ಯಡ್ರಾಮಿ ತಾಲೂಕಾ ಅಧ್ಯಕ್ಷ ಹುಸೇನ ಭಾಷಾ ನೀರಲಗಿ, ಗುಂಡಪ್ಪ ಹಳ್ಳದಮನಿ, ಮರಲಿಂಗಪ್ಪ ಗುಡ್ಡ್ಯಾಳ, ಶಿಕ್ಷಕಿಯರಾದ ಸುನೀತಾ ಅಂಬೂರೆ, ಶಾಲಾ ಅಡುಗೆ ಸಿಬ್ಬಂದಿ ಹಾಗೂ ಮಳ್ಳಿ ಸಿ ಆರ್ ಪಿ ಪ್ರಶಾಂತ ಕುನ್ನೂರ ಇತರರಿದ್ದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ ಬೆಂಗಳೂರು ಅಡಿಯಲ್ಲಿ ಜರುಗಿದ “ಡಿಜಿ ಇಮೇಜ್ ೨೦೨೪”ರ ವಸ್ತು ಪ್ರದರ್ಶನದಲ್ಲಿ ದೇವರಹಿಪ್ಪರಗಿ ತಾಲ್ಲೂಕಿನ ಉತ್ತಮ ಛಾಯಾಗ್ರಾಹಕರಾಗಿ ಗುರುತಿಸಿಕೊಂಡಿರುವ ಸುನೀಲ ಚವ್ಹಾಣ ಇವರನ್ನು “ಛಾಯಾಶ್ರೀ” ಗೌರವ ನೀಡಿ ಸನ್ಮಾನಿಸಲಾಯಿತು.
ದೇವರಹಿಪ್ಪರಗಿಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಥಮ ಸಭೆ ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ ಅಧ್ಯಕ್ಷತೆಯಲ್ಲಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿತು.ಸಭೆಯಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಕುರಿತು ಚರ್ಚೆ ಆರಂಭಗೊಂಡಿತು.ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಹಾಗೂ ಉಪಾಧ್ಯಕ್ಷ ರೆಹಮಾನ ಕಣಕಾಲ ಮಾತನಾಡಿ, ಹಲವಾರು ಕಡೆ ಗೃಹಲಕ್ಷ್ಮಿ ಯೋಜನೆಯ ಹಣ ಸೂಕ್ತ ರೀತಿಯಲ್ಲಿ ಜಮೆಯಾಗುತ್ತಿಲ್ಲ. ಶಕ್ತಿ ಯೋಜನೆ ಅಡಿಯಲ್ಲಿ ಹೆಚ್ಚುವರಿ ಬಸ್ಸುಗಳನ್ನು ಸಿಂದಗಿ ದೇವರಹಿಪ್ಪರಗಿ ವಿಜಯಪುರ ಮಾರ್ಗಗಳ ಮಧ್ಯ ಓಡಿಸಬೇಕು. ಗ್ರಾಮೀಣ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು, ಅನ್ನಭಾಗ್ಯ ಯೋಜನೆಯಡಿ ಪಡಿತರ ವಿತರಣೆ ಮಾಡುವವರು ಹಣ ಪಡೆದು ಪಾವತಿ ಮಾಡುತ್ತಿದ್ದಾರೆ ಇದನ್ನು ಕೂಡಲೇ ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಪಡಿತರ ಚೀಟಿ ಬಯೋಮೆಟ್ರಿಕ್ ಮಾಡಿಕೊಂಡು ನಂತರ ಪಡಿತರ ವಿತರಣೆ ಮಾಡುತ್ತಿದ್ದಾರೆ. ಈ ರೀತಿಯಾಗದಂತೆ ನೋಡಿಕೊಳ್ಳಬೇಕು. ಯುವ ನಿಧಿ…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನ ಜಾಲಗೇರಿಯ ಹನುಮಾನ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿಧ್ಯಾರ್ಥಿಗಳಿಗೆ ಇನ್ನರ್ ವ್ಹೀಲ್ ಕ್ಲಬ್ ಆಪ್ ವಿಜಯಪುರ ವುಯ್ ಕೇರ್ ( Inner wheel of Bijapur we care) ಸಂಸ್ಥೆಯಿಂದ ಮಕ್ಕಳಿಗೆ ಕಬ್ಬಿಣದ ಡೆಸ್ಕ, ಕುಡಿಯುವ ನೀರಿನ ಪಿಲ್ಟರ್,ನೋಟಬುಕ್, ಪೆನ್ನು ಹಾಗೂ ಕ್ರೀಡಾ ಸಾಮಗ್ರಿ ಸೇರಿ ರೂ.10 ಸಾವಿರ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆಯಾಗಿ ನೀಡಿದ್ದಾರೆ.ಈ ಸಂದರ್ಭದಲ್ಲಿ ಸಂಸ್ಥೆಯ ಡಾ. ರೇಣುಕಾ ಪಾಟೀಲ್, ಡಾ. ಅಶ್ವೀನಿ ಹಿರೇಮಠ, ಡಾ. ಮಹಾನಂದಾ ಚಂದರಗಿ, ಡಾ.ರಾಜಶ್ರೀ ಅಕ್ಕಿ, ಡಾ.ನಳಿನಿ ಬಾಗಲಕೋಟಕರ ಅವರು ಶಾಲಾ ಮಕ್ಕಳಿಗೆ ಉತ್ತಮ ಆರೋಗ್ಯದ ಕುರಿತು ಸಲಹೆ ನೀಡಿದರು. ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಬೇಕು. ಒಳ್ಳೆಯ ಆಹಾರ ಸೇವನೆ ಮಾಡಬೇಕು. ಸ್ವಚ್ಚತೆಯಿಂದ ಇರಬೇಕು. ಮೊಬೈಲಗಳಿಂದ ಮಕ್ಕಳು ದೂರವಿರಬೇಕು ಎಂದು ಸಲಹೆ ನೀಡಿದರು.ಸಿಆರ್ಪಿ ಶರಣಬಸಪ್ಪ ರೆಡ್ಡಿ, ಆರ್.ಡಿ.ಶಿಂಧೆ, ವಿ.ಎನ್.ಕಪಟಕರ, ಶಾಲಾ ಮಕ್ಕಳು ಇದ್ದರು.
ಎನ್ಡಿಎ ಪರೀಕ್ಷೆಯಲ್ಲಿ ವಿಜಯಪುರದ ಎಕ್ಸಲೆಂಟ್ ಕಾಲೇಜ್ ವಿದ್ಯಾರ್ಥಿಗಳ ಸಾಧನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದ ರಕ್ಷಣಾ ವ್ಯವಸ್ಥೆಗೆ ಅವಶ್ಯಕವಾಗಿರುವ ಕೆಲವು ಸೇವೆಗಳಿಗೆ ಬೇಕಾದಂತ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರುವ ಕೇಂದ್ರ ಲೋಕ ಸೇವಾ ಆಯೋಗವು ಪ್ರತಿ ವರ್ಷವು ಎನ್ಡಿಎ ಪರೀಕ್ಷೆಗಳನ್ನು ನಡೆಸುತ್ತದೆ. ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದಕ್ಕೆ ಅವಕಾಶವಿರುತ್ತಲಿದ್ದು ೨೦೨೪ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ವಿಜಯಪುರದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಎಕ್ಸಲೆಂಟ್ ವಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಮರ್ಥ ಎಸ್. ಕಲಾಲ್, ಶ್ರೀಧತ್ತಾ ದೀಕ್ಷಿತ, ಪ್ರಮೋದ ಚಾಂದಕವಟೆ, ಆದರ್ಶ ವಜ್ರವಾಡ, ಪ್ರೀತಿ ಗಿರೀಶ ಮಂಟೂರು ಸೇರಿದಂತೆ ಐದು ಜನ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕಲಿಯುತ್ತಿರುವ ಕಾಲೇಜಿಗೂ ಹಾಗೂ ವಿಜಯಪುರ ಜಿಲ್ಲೆಗೂ ಕೀರ್ತಿ ತಂದಿದ್ದಾರೆ.ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಹರ್ಷ ವ್ಯಕ್ತಪಡಿಸುತ್ತ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಕಠಿಣವಾಗರುವ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ತಮ್ಮಲ್ಲಿನ ದೇಶಭಕ್ತಿಯನ್ನು ಪರೀಕ್ಷೆ ಎದುರಿಸುವ ಮೂಲಕ…
ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿಜಯಪುರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಡಾ ಹಗರಣದಲ್ಲಿ ರಾಜ್ಯ ಹೈಕೋರ್ಟ್ ತೀರ್ಪನ್ನು ಗೌರವಿಸಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಈ ವೇಳೆ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ಮುಡಾನಲ್ಲಿ ಅಕ್ರಮವಾಗಿ 14 ಸೈಟ ಪಡೆದಿರುವುದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆಗೆ ಉತ್ತರ ಕೊಡದೆ ಪಲಾಯನ ಮಾಡಿದರು. ರಾಮಕೃಷ್ಣ ಹೆಗಡೆ, ದೇವೇಗೌಡ, ಪಟೇಲ್ ಅವರಂತಹ ಮೌಲ್ಯಯುತ ರಾಜಕಾರಣಿಗಳ ಸಂಸ್ಕಾರದಲ್ಲಿ ಬೆಳೆದ ಸಿದ್ಧರಾಮಯ್ಯ ನಿಮಗೆ ಇಂತಹ ಘಟನೆ ಶೋಭೆ ತರುವದಿಲ್ಲ. ನೈತಿಕ ಹೊಣೆ ಹೊತ್ತಿ ತಕ್ಷಣವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.ರಾಜ್ಯಪಾಲರ ವಿರುದ್ಧ ಮಾತನಾಡಿ ದಬ್ಬಾಳಿಕೆ ಮಾಡಿದ್ದೀರಿ, ಆದರೆ ಹೈಕೋರ್ಟ್ ರಾಜ್ಯಪಾಲರ ನಿರ್ಣಯವನ್ನು ಎತ್ತಿ ಹಿಡಿದಿದೆ. 30 ಗಂಟೆಗಳ ಕಾಲ ವಾದ-ವಿವಾದ ನಡೆದು ತಾವು ಪಡೆದ ಸೈಟುಗಳು ಅಕ್ರಮ ಎಂದು ತನಿಖೆ ಆದೇಶಿಸಿದೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯದ ಉಚ್ಛನ್ಯಾಯಾಲಯ ಮುಖ್ಯಮಂತ್ರಿಗಳ ವಿರುಧ್ಧ ಪ್ರಾಥಮಿಕ ತನಿಖೆಗೆ ಆದೇಶಿಸಿದ್ದು, ನ್ಯಾಯಾಲಯಕ್ಕೆ ನಾವು ಗೌರವಿಸುತ್ತೇವೆ. ಈ ಕುರಿತು ಕಾನೂನು ಹೋರಾಟದ ಜೊತೆಗೆ ರಾಜಕೀಯ ಹೋರಾಟಕ್ಕೆ ಎಲ್ಲ ೧೩೬ ಜನ ಶಾಸಕರು ಸಿದ್ದರಾಮಯ್ಯನವರೊಂದಿಗೆ ಇರುತ್ತೇವೆ ಎಂದು ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ಹೇಳಿದರುಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಸರಕಾರ ಅಭದ್ರಗೊಳಿಸುವ ಷಡ್ಯಂತರ ನಡೆಸುತ್ತಿರುವ ಬಿಜೆಪಿ ನಾಯಕರ ಕಸರತ್ತು ಕರ್ನಾಟಕದಲ್ಲಿ ನಡೆಯುವುದಿಲ್ಲ, ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಅವರು ದೊಂಬರಾಟ ನಡೆಸುತ್ತಿದ್ದಾರೆ, ಆದರೆ ಅದು ಫಲಿಸುವುದಿಲ್ಲ. ವಿರೋಧ ಪಕ್ಷದ ಷಡ್ಯಂತ್ರಕ್ಕೆ ದೆಹಲಿ, ಜಾರ್ಖಂಡ್ ರಾಜ್ಯಗಳಲ್ಲಿಯೂ ಸಹ ಮುಖ್ಯಮಂತ್ರಿಗಳಿಗೆ ಕೇಂದ್ರ ಸರ್ಕಾರ ಹಾಗೂ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರುಗಳು ಷಡ್ಯಂತ್ರ ರೂಪಿಸಿ ಸರಕಾರ ಅಭದ್ರಗೊಳಿಸುವ ಕಾರ್ಯ ಮಾಡಿವೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಾಗುವುದಿಲ್ಲ.ಬಿಜೆಪಿ ಸರಕಾರ ಈಡಿ, ಸಿಬಿಐ, ಐಟಿ ಇಲಾಖೆಗಳನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ವಿರುಧ್ಧ ಕಾರ್ಯ ಮಾಡುತ್ತಿದ್ದಾರೆ. ಈ ರಾಜ್ಯದ ಪ್ರಜ್ಞಾವಂತ ಜನ ೨೦೨೪ರಲ್ಲಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಬಡ ಮತ್ತು ಮಧ್ಯಮ ವರ್ಗದ ಜನರಲ್ಲಿ ಅರ್ಥಿಕ ಸಬಲತೆ ಉಂಟು ಮಾಡುವ ಉದ್ದೇಶದಿಂದ ಭೀಮಾಶಂಕರ ಸಹಕಾರಿ ಸೌಹಾರ್ಧ ಕಾರ್ಯ ಪ್ರವೃತ್ತವಾಗಿದೆ ಎಂದು ಶಾಸಕ ಮತ್ತು ಭೀಮಾಶಂಕರ ಸಹಕಾರಿ ಸೌಹಾರ್ಧ ಸಂಘದ ಅಧ್ಯಕ್ಷ ಯಶವಂತರಾಯಗೌಡ ಪಾಟೀಲರು ಹೇಳಿದರು.ಪಟ್ಟಣದ ಭೀಮಾಶಂಕರ ಬ್ಯಾಂಕಿನ ಸದಸ್ಯೆ ಡಾ|| ಭಾರತಿ ಗಜಾಕೋಶ ಇವರ ದವಾಖಾನೆ ಆವರಣದಲ್ಲಿ ನಡೆದ ವಾರ್ಷೀಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಹಕಾರಿಯು ಅರ್ಥಿಕವಾಗಿ ಸದೃಢವಾಗಿದ್ದು, ಪ್ರಗತಿಯತ್ತ ಸಾಗುತ್ತಿದೆ. ಇದಕ್ಕೆ ಆಡಳಿತ ಮಂಡಳಿ ಮತ್ತು ನೌಕರ ವರ್ಗದವರು ಠೇವಣಿದಾರರು ಕಾರಣರಾಗಿದ್ದಾರೆ. ಸಾಲವನ್ನು ಸಕಾಲಕ್ಕೆ ಮರುಪಾವತಿಸಬೇಕೆಂದರು.ಮುಖ್ಯ ವ್ಯವಸ್ಥಾಪಕ ಶ್ರೀಧರ ದೇಶಪಾಂಡೆ ಮಾತನಾಡಿ, ಬ್ಯಾಂಕು ಪ್ರಸಕ್ತ ವರ್ಷ ೬೪ ಲಕ್ಷ ರೂ ನಿವ್ವಳ ಲಾಭ ಗಳಿಸಿದೆ. ಇಂಡಿ, ವಿಜಯಪುರ, ಧೂಳಖೇಡ ಮತ್ತು ಚಡಚಣಗಳಲ್ಲಿ ಶಾಖೆಗಳನ್ನು ಹೊಂದಿದ್ದು ೬ ವರ್ಷ ೩ ತಿಂಗಳಲ್ಲಿ ಠೇವಣಿ ದ್ವಿಗುಣ ಗೊಳ್ಳುತ್ತದೆ ಎಂದರು..ಆಡಳಿತ ಮಂಡಳಿಯ ದನ್ಯಕುಮಾರ ಶಹಾ, ರಮೇಶ ಗುತ್ತೆದಾರ, ಡಾ|| ರಮೇಶ ಪೂಜಾರಿ, ಮುತ್ತು ದೇಸಾಯಿ, ಅಶೋಕ ಗಜಾಕೋಶ, ಮಹಮ್ಮದ…
