Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನಲ್ಲೆಡೆ ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹಳ್ಳಕೊಳ್ಳ ಬಾಂದಾರಗಳು ತುಂಬಿ ಹರಿಯುತ್ತಿದ್ದು, ರೈತರ ತೋಟಗಳಿಗೆ ನೀರು ನುಗ್ಗಿದ್ದರಿಂದ ದ್ರಾಕ್ಷಿ ಪಡಗಳು ನೀರಲ್ಲೆ ನಿಂತಿವೆ.ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳದ ಬಾಂದಾರ ತುಂಬಿ ಹರಿಯುತ್ತಿದ್ದು, ಅಪಾಯಮಟ್ಟ ಮೀರಿ ಹರಿದು ಸೇತುವೆ ಮೇಲಗಡೆ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿರುವದರಿಂದ ವಾಹನ ಸವಾರರಿಗೆ ತೊಂದರೆಯುಂಟಾಗಿ ಸಾಲುಗಟ್ಟಲೆ ವಾಹನಗಳು ನಿಂತಿದ್ದವು. ಸಂಗಮನಾಥ ದೇವಾಲಯದ ಗರ್ಭಗುಡಿಯ ಒಳಗೆ ನೀರು ನುಗ್ಗಿದ್ದರಿಂದ ಪೂಜಾ ಕಾರ್ಯಗಳು ಸ್ಥಗಿತಗೊಂಡಿವೆ.ಡೋಣಿ ನದಿ ಹರಿವು ಮಳೆಯಿಂದಾಗಿ ಹೆಚ್ಚಾಗಿದ್ದರಿಂದ ರೈತರ ತೋಟಗಳಿಗೆ ನೀರು ಹರಿದು ತೊಗರಿ ಇತರೆ ಬೆಳೆಗಳು ಜಲಾವೃತ್ತವಾಗಿವೆ. ಕೆಲವೆಡೆ ಸೇತುವೆ ಮೇಲಿರುವ ಡಾಂಬರಿ ಕಿತ್ತು ಹೋಗಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿರುವದರಿಂದ ಶಾಲಾ ಮಕ್ಕಳಿಗೆ ಶಾಲೆಗಳಿಗೆ ತೆರಳಲು ತೊಂದರೆಯಾಯಿತು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಜಯಪುರ ಮುಖ್ಯ ಆವರಣ ಹಾಗೂ ಮಂಡ್ಯ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸ್ಗಳ ವಿಷಯಗಳಿಗೆ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಮೂಲ ಹಾಗೂ ನಕಲು ದ್ವಿಪ್ರತಿಯ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಭರಿಸಿ, ನಿಗದಿಪಡಿಸಿದ ವೇಳಾಪಟ್ಟಿಯನುಸಾರ ಅಕ್ಟೋಬರ ೦೧ ರಂದು ಮಧ್ಯಾಹ್ನ ೩.೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಎಸ್ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾದ್ಯಂತ ಸೋಮವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಇಂದು ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ. ಎಲ್ಲ ತಾಲೂಕುಗಳ ತಹಸೀಲ್ದಾರರಿಂದ ಮಳೆಯ ಪ್ರಮಾಣ ಮತ್ತು ಅದರಿಂದ ಉಂಟಾಗಿರುವ ಆಸ್ತಿ- ಪಾಸ್ತಿ ಹಾನಿಯ ಕುರಿತು ಕೂಡಲೇ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.ವಿಜಯಪುರ ನಗರ ಮತ್ತು ಜಿಲ್ಲಾದ್ಯಂತ ಮಳೆಯಿಂದ ಸಮಸ್ಯೆ ಎದುರಾಗಿರುವ ಸ್ಥಳಗಳಿಗೆ ಖುದ್ದಾಗಿ ತೆರಳಿ ಪರಿಶೀಲನೆ ನಡೆಸಬೇಕು. ಮಳೆ ನೀರಿನಿಂದ ಸಂತ್ರಸ್ತರಾದ ಜನರ ನೆರವಿಗೆ ಧಾವಿಸುವಂತೆ ಹೇಳಿದ್ದೇನೆ. ಬೆಳೆಹಾನಿ, ಆಸ್ತಿಪಾಸ್ತಿ ನಷ್ಟದ ಕುರಿತು ಕಂದಾಯ, ಕೃಷಿ, ತೋಟಗಾರಿಕೆ, ಆರೋಗ್ಯ, ಪೊಲೀಸ್ ಇಲಾಖೆಗಳು ಸಮನ್ವಯತೆಯಿಂದ…

Read More

ಲೇಖಕರುವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ ಉದಯರಶ್ಮಿ ದಿನಪತ್ರಿಕೆ ಜಗತ್ತಿನ ಪ್ರಖ್ಯಾತ ಬಾಣಸಿಗರಲ್ಲಿ ಒಬ್ಬರಾದ ಸ್ಟಾರ್ ಶೆಫ್ ವಿಕಾಸ್ ಖನ್ನ ಯಾರಿಗೆ ಗೊತ್ತಿಲ್ಲ. ರುಚಿಕರವಾದ ಖಾದ್ಯಗಳನ್ನು ಮಾಡಿ ಬಡಿಸುವುದರ ಜೊತೆ ಜೊತೆಗೆ ತನ್ನ ಸರಳತೆಗೂ ಹೆಸರಾದ ವ್ಯಕ್ತಿ ವಿಕಾಸ್ ಖನ್ನ. 2020 ರಲ್ಲಿ ಬಿಬಿಸಿ ವರ್ಲ್ಡ್ ಚಾನೆಲ್ ಗೆ ನೀಡಿದ ಸಂದರ್ಶನವೊಂದರಿಂದ ಇದೀಗ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.ಭಾರತೀಯ ಪಾಕ ಕಲೆಯ ಸಾಂಸ್ಕೃತಿಕ ಇತಿಹಾಸವನ್ನು ಅರಿಯದ, ಸಹಭೋಜನ, ಪ್ರಸಾದ, ದಾಸೋಹಗಳ ಹೆಸರಿನಲ್ಲಿ ದೀನ ದಲಿತರಿಗೆ ಉಣ ಬಡಿಸುವ ಭಾರತ ದೇಶದ ಶ್ರೀಮಂತ ಸಂಸ್ಕೃತಿಯ ಗರಿಮೆಯನ್ನು ಅರಿಯದ ಬಿಬಿಸಿಯ ಸಂದರ್ಶಕ ವಿಕಾಸ ಖನ್ನ ಅವರಿಗೆ ಭಾರತದಲ್ಲಿ ಬಡತನ ತಾಂಡವವಾಡುತ್ತಿರುವ ಕಾರಣ ನಿಮಗೆ ಹಸಿವು ಎಂಬ ಪದದ ಅರಿವು ಉಂಟಾಯಿತಲ್ಲವೇ? ಎಂದು ಪ್ರಶ್ನೆಯೆಸಗಿದ.ಅತ್ಯಂತ ಶಾಂತವಾದ ಮನಸ್ಥಿತಿಯೊಂದಿಗೆ ವಿಕಾಸ್ ಖನ್ನ ಉತ್ತರಿಸಿದರು “ನನಗೆ ‘ಹಸಿವು’ ಎಂಬ ಪದದ ಅರಿವು ಭಾರತ ದೇಶದಲ್ಲಿ ಆಗಿಯೇ ಇಲ್ಲ ಕಾರಣ ನಾನು ಹುಟ್ಟಿ ಬೆಳೆದದ್ದು ಭಾರತ ದೇಶದ ಗೋದಿಯ ಕಣಜ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬೆಂಗಳೂರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಬೆಂಗಳೂರಿನಲ್ಲಿ ನಡೆದ ೨೦೨೪-೨೫ನೆಯ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಜ್ಞಾನ ಭಾರತಿ ಪ್ರೌಢಶಾಲೆಯ ವಿದ್ಯಾರ್ಥಿ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ.ಸ್ಥಳೀಯ ನ್ಯಾಯವಾದಿ ಪಿ.ಎಂ.ಹೊಸಮನಿ ಅವರ ಚಿರಂಜೀವಿಯಾದ ಕು.ಶ್ರೀಷನ ಅಪರೂಪದ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶಿವಾನಂದ ಶಿವಾಚಾರ್ಯರು, ಕಾರ್ಯದರ್ಶಿ ಸತೀಶ ಹಿರೇಮಠ ಸೇರಿದಂತೆ ಶಾಲೆಯ ಮುಖ್ಯಗುರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. ಶಾಸಕರಿಂದ ಶ್ರೀಷ ಗೆ ಸನ್ಮಾನಸಿಂದಗಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಅಬು ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಈಚೆಗೆ ನಡೆದ ಕ್ರೀಡಾಕೂಟ ಸಮಾರಂಭದಲ್ಲಿ ಶಾಸಕ ಅಶೋಕ ಮನಗೂಳಿ ಅವರು ವಿದ್ಯಾರ್ಥಿ ಶ್ರೀಷ ಹೊಸಮನಿ ಸಾಧನೆಯನ್ನು ಗೌರವಿಸಿ ಸನ್ಮಾನಿಸಿದರು.ಈ ವೇಳೆ ಪುರಸಭೆ ಅಧ್ಯಕ್ಷ ಶಾಂತಗೌಡ ಬಿರಾದಾರ, ಶಿಕ್ಷಣ ಇಲಾಖೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ತೆಗೆದು ಹಾಕುತ್ತೇನೆ ಎಂದು ಹೇಳಿರುವ ರಾಹುಲ್ ಗಾಂಧಿ ದಲಿತ ವಿರೋಧಿ ಹೇಳಿಕೆ ಖಂಡನೀಯ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಸಿಂದಗಿ ತಾಲೂಕು ಬಿಜೆಪಿ ಎಸ್.ಟಿ.ಮೋರ್ಚಾ ಅಧ್ಯಕ್ಷ ಪ್ರಶಾಂತ ಕದ್ದರಗಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾಂಗ್ರೆಸ್ ಪಕ್ಷ ೬೫ ವರ್ಷಗಳಿಂದ ದಲಿತರನ್ನು ತಮ್ಮ ಮನಃ ಬಂದ ಹಾಗೆ ಬಳಕೆ ಮಾಡಿಕೊಂಡಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ತೆಗೆದುಹಾಕುತ್ತೇನೆ ಎಂದು ಹೇಳಿದ ಲೋಕಸಭಾ ಸದಸ್ಯ ರಾಹುಲ ಗಾಂಧಿಯವರನ್ನು ಸದಸ್ಯ ಸ್ಥಾನದಿಂದ ಅನರ್ಹಗೊಳಿಸಬೇಕು. ಸಂವಿಧಾನ ಬರೆದ ಡಾ.ಬಾಬಾ ಸಾಹೇಬ ಅಂಬೇಡ್ಕರ್‌ರವರನ್ನೇ ಎರಡು ಬಾರಿ ಸೋಲಿಸಿದ ಪಕ್ಷದ ನಾಯಕ ಮೀಸಲಾತಿಯನ್ನು ತೆಗೆಯುತ್ತೇನೆ ಎಂದು ಹೇಳಿರುವುದು ಶೋಷಿತ ಸಮುದಾಯಕ್ಕೆ ದಶಕಗಳಿಂದ ಮಾಡುತ್ತಿರುವ ಅವಮಾನವಾಗಿದೆ. ದಲಿತರಿಗೆ ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷೆಯಲ್ಲ, ಅದು ಡಾ.ಬಿ.ಆರ್.ಅಂಬೇಡ್ಕರ್ ಶೋಷಿತ ವರ್ಗಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಾಗಲೋಟದಲ್ಲಿ ಬೆಳೆಯುತ್ತಿರುವ ವಿಜ್ಞಾನದ ಮಧ್ಯದಲ್ಲಿ ನಮ್ಮ ಮಕ್ಕಳು ಬೆಳೆಯಬೇಕಾದರೆ ಅವರಿಗೆ ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯ, ತಂತ್ರಜ್ಞಾನ, ಅನೇಕ ಚಟುವಟಿಕೆಗಳನ್ನು ಕಲಿಸುವುದು ಅನಿವಾರ್ಯವಾಗಿದೆ ಎಂದು ಎಚ್.ಜಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.ಪಟ್ಟಣದ ಬಂದಾಳ ರಸ್ತೆಯ ವಿವೇಕ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನಡೆದ ಯೂತ್ ಫೆಸ್ಟಿವಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಶಿಕ್ಷಕರಿಗಿಂತ ಹೆಚ್ಚು ಸಮಯವನ್ನು ಕಳೆಯುವುದು ಪಾಲಕರ ಬಳಿ. ಶಿಕ್ಷಕರಷ್ಟೇ ಜವಾಬ್ದಾರಿಯನ್ನ ಪಾಲಕರು ಮಕ್ಕಳ ಮೇಲೆ ಇಡಬೇಕು. ವಿಜ್ಞಾನದ ಭರಾಟೆಯಲ್ಲಿ ಮಕ್ಕಳಲ್ಲಿ ಮಾನವೀಯ ಸಂಬಂಧಗಳು, ವಿವೇಚನಾ ಶಕ್ತಿ, ಸೃಜನಶೀಲ ಚಟುವಟಿಕೆಗಳು ಕುಸಿತಗೊಳ್ಳುತ್ತಿವೆ ಇದರ ಬಗ್ಗೆ ಹೆಚ್ಚು ಪಾಲಕರು ಮತ್ತು ಶಿಕ್ಷಕರು ಗಮನಹರಿಸಬೇಕು ಎಂದರು.ಸಂಸ್ಥೆಯ ಮಾರ್ಗದರ್ಶಕ ಎಚ್‌ಜಿ ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಮಾತನಾಡಿದರು.ಶಾಲೆಯ ಪ್ರಾಚಾರ್ಯ ಶಾನಿಮೋಲ್ ರಾಬಿನ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಕ್ಕಳು ನೀಡಿದ ವಿವಿಧ ರೀತಿಯ ಚಟುವಟಿಕೆಗಳ ನಿರ್ಣಾಯಕರಾಗಿ ಶಿಕ್ಷಕಿ ಬಂಗಾರಿ ಕುಲಕರ್ಣಿ ಆಗಮಿಸಿದ್ದರು.ಸಂಸ್ಥೆಯ ಅಧ್ಯಕ್ಷೆ ನೀಲಮ್ಮ ಹೆಗ್ಗಣದೊಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಧ್ಯಯನ ಅತ್ಯಂತ ಅವಶ್ಯವಾಗಿದೆ. ಅಧ್ಯಯನ ನಮ್ಮನ್ನು ಕ್ರೀಯಾಶೀಲರನ್ನಾಗಿ ಮಾಡುತ್ತದೆ ಎಂದು ಆರ್.ಡಿ.ಪಾಟೀಲ ಪಪೂ ಕಾಲೇಜಿನ ಉಪನ್ಯಾಸಕ ಪಿ.ವ್ಹಿ.ಮಹಲಿನಮಠ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ ವಿಜಯಪುರದ ಗೆಜ್ಜಿ ಕರಿಯರ್ ಅಕಾಡಮಿಯಿಂದ ಹಮ್ಮಿಕೊಂಡ ಎರಡು ದಿನಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರೀಕ್ಷೆಗಳಿಗೆ ಮಾರ್ಗದರ್ಶನ ಅತ್ಯಂತ ಮುಖ್ಯವಾಗಿದೆ. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವಾಗ ನೀವು ಯಾವ ಅಧ್ಯಯನ ಸಾಮಗ್ರಿಯನ್ನು ಬಳಸುತ್ತಿರಿ ಎಂಬುದನ್ನು ಮೊದಲು ಸ್ಪಷ್ಟ ಪಡಿಸಬೇಕು. ಬಹಳಷ್ಟು ಪುಸ್ತಕಗಳನ್ನು ಓದುವುದು ನಿಮ್ಮ ಸಿದ್ದತೆಗಳಿಗೆ ಅಡ್ಡಿಯಾಗಬಹುದು ನಿರ್ದಿಷ್ಟ ಪರೀಕ್ಷೆಯ ತಯಾರಿಗಾಗಿ ಮೂಲ ಮತ್ತು ಪ್ರಮಾಣಿತ ಪುಸ್ತಕಗಳನ್ನು ಅಧ್ಯಯನ ಮಾಡಲು ಖಚಿತ ಪಡಿಸಿಕೊಳ್ಳಿ. ವೇಳಾ ಪಟ್ಟಿಗೆ ಅನುಗುಣವಾಗಿ ಓದಿನ ರೂಡಿ ಮಾಡಿಕೊಳ್ಳಿ ಎಂದು ಪ್ರಶಿಕ್ಷಣಾರ್ಥಿಗಳಿಗೆ ಸಲಹೆ ನೀಡಿದರು.ಈ ವೇಳೆ ಮಹಾವಿದ್ಯಾಲಯದ ಪ್ರಾಚಾರ್ಯ ಜೆ.ಸಿ.ನಂದಿಕೋಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆ ಮೇಲೆ ವಿಜಯಪುರದ ಗೆಜ್ಜಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೨೦/೧೧೦/೧೧ ಕೆ.ವಿ ಬಸವನ ಬಾಗೇವಾಡಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ೨೨೦ ಕೆ.ವಿ ಐಸೋಲೇಟರ್‌ಗಳ ನಿರ್ವಹಣೆ ಕೈಗೊಂಡಿರುವುದರಿಂದ ೧೧೦ ಕೆ.ವಿ ಮಾರ್ಗಗಳಲ್ಲಿ ಬರುವ ೧೧೦/೧೧ ಕೆ.ವಿ ಮಟ್ಟಿಹಾಳ, ಮಲಘಾಣ, ರೋಣಿಹಾಳ, ಮುದ್ದೇಬಿಹಾಳ, ಹಿರೇಮುರಾಳ, ಕೋಳೂರು, ಉಕ್ಕಲಿ ಹಾಗೂ ನಂದಿಹಾಳ ಉಪಕೇಂದ್ರಗಳಲ್ಲಿಯೂ ಸಹ ಎರಡನೇ ತ್ರೈಮಾಸಿಕ ನಿರ್ವಹಣಾ ಕಾರ್ಯಕೈಗೆತ್ತಿಕೊಳ್ಳುವ ಹಿನ್ನೆಲೆಯಲ್ಲಿ ಈ ವಿದ್ಯುತ್ ಉಪಕೇಂದ್ರಗಳಿಂದ ಸರಬರಾಜಾಗುವ ೧೧ಕೆವಿ ಮಾರ್ಗಗಳಲ್ಲಿನ ನಗರ, ಗ್ರಾಮೀಣ ಪ್ರದೇಶಗಳಲ್ಲಿ, ಹಾಗೂ ಕೃಷಿ ನೀರಾವರಿ ಮಾರ್ಗಗಳಿಗೆ ಸೆಪ್ಟೆಂಬರ್ ೨೫ರಂದು ಬೆಳಿಗ್ಗೆ ೯ರಿಂದ ಸಾಯಂಕಾಲ ೫ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಬಸವನ ಬಾಗೇವಾಡಿಯ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More