Author: editor.udayarashmi@gmail.com

ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ “ಲೋಕೋ ಭಿನ್ನ ರುಚಿಃ” – ಲೋಕದಲ್ಲಿ ನಾಲಗೆಗಳೆಷ್ಟೋ ರುಚಿಗಳಷ್ಟು.ಅವರಿಗೆ ರುಚಿಸಿದ್ದು ನನಗೆ ರುಚಿಸಬೇಕೆಂದೇನು ಇಲ್ಲಾ. ಆದರೂ ಒಪ್ಪಿಕೊಳ್ಳಲೇಬೇಕು.ನನಗೆ ರುಚಿಸಿದ್ದು ಮತ್ತೊಬ್ಬರಿಗೆ ರುಚಿಸಬೇಕೆಂದೇನು ಇಲ್ಲಾ. ಹಾಗಾಗಿ ಅವರು ಒಪ್ಪಿಕೊಳ್ಳುವುದಿಲ್ಲ. ಆದರೆ ಅವರು ಒಪ್ಪದಿದ್ದುದ್ದನ್ನೂ ಸಹ ನಾನು ಒಪ್ಪಿಕೊಳ್ಳಲೇಬೇಕು. ಯಾಕೆಂದರೆ ಅವರ ಜೊತೆ ಜೊತೆಯಲ್ಲಿಯೇ ಬದುಕಬೇಕಾದ ಅನಿವಾರ್ಯತೆ ನನಗಿದೆ. ಹಾಗಾಗಿ ಒಳಗಿನ ಮನಸ್ಸನ್ನು ಹಾಗೇ ಕುದಿಯಲು ಬಿಟ್ಟು, ಮೇಲೊಂದು ತಣ್ಣನೆಯ ಮುಖವಾಡ ತೊಟ್ಟು.. ಸುಳ್ಳು ಸುಳ್ಳೇ ಆದರೂ ಸರಿಯೆ.. ಮೆಲ್ಲಗೆ ನಕ್ಕುಬಿಡಬೇಕು.”ಏ ಇಲ್ಲಪ್ಪ ನಾನೇ ತಿಂದುನೋಡಿದ್ದೀನಿ ಹಾಗಲಕಾಯಿ ಸಿಹಿ ಇತ್ತು” ಎಂದು ದೊಡ್ಡ ಸ್ಥಾನದಲ್ಲಿರುವವರು ಅಥವಾ ಹೆಸರು ಮಾಡಿರುವವರು ಹೇಳಿದರೆ, “ಊಹುಂ” ಎಂದವೋ ಅಲ್ಲಿಗೆ ಮುಗಿಯಿತು. ‘ಶನಿಮಹಾತ್ಮ ಹೆಗಲೇರಿದಂತೆಯೇ’ ಇಲ್ಲ-ಸಲ್ಲದ ಆಪಾದನೆಗಳು ನಮ್ಮ ಮೇಲೆಯೇ ಎರಗಿಬೀಳುತ್ತವೆ. “ಒಗ್ಗಟ್ಟಿನಲ್ಲಿ ಬಲವಿದೆ” ಎಂಬುದನ್ನು “ಆ ಬಹುಸಂಖ್ಯಾತರು” ಪ್ರದರ್ಶಿಸಿಬಿಡುತ್ತಾರೆ. “ಗೆದ್ದೆತ್ತಿನ ಬಾಲ ಹಿಡಿಯುವ” ಜನರ ಬೆಂಬಲ ಅಂತವರಿಗೆ ಇದ್ದೇ ಇರುತ್ತದೆ. ಹಾಗಾಗಿ ನಾವು ಕೊನೆಗೆ “ಹೂಂ” ಎನ್ನದೆ ವಿಧಿಯಿಲ್ಲ.ಇದುವೇ ಜೀವನ.…

Read More

ಜಿಪಂನಲ್ಲಿ ಸಿಎಸ್ ಆರ್ ಅನುದಾನದಡಿ ಸಲಕರಣೆ ವಿತರಣೆ | ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಬಣ್ಣನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪವರ್ ಗ್ರೀಡ್ ಸಂಸ್ಥೆ ನಮ್ಮ ದೇಶದಲ್ಲಿರುವ ಹೆಮ್ಮೆಯ ಸಂಸ್ಥೆ, ಈ ಸಂಸ್ಥೆ ಸ್ಪರ್ಧಾತ್ಮಕವಾಗಿ ದೇಶಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಹೇಳಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪವರ್‌ಗ್ರಿಡ್ ಕಾರ್ಪೋರೆಷನ್ ಆಫ್ ಇಂಡಿಯಾ ಲಿಮಿಟೆಡ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಆರೋಗ್ಯ, ಶಿಕ್ಷಣ ಮತ್ತು ಕ್ರೀಡಾ ಇಲಾಖೆಗಳಿಗೆ ಸಾಧನ-ಸಲಕರಣೆಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪವರ್ ಗ್ರೀಡ್ ಸಿಎಸ್‌ಆರ್ ಅನುದಾನದಡಿ ಆರೋಗ್ಯ ಇಲಾಖೆ ಸಲಕರಣೆಗಳು, ಶಿಕ್ಷಣ ಇಲಾಖೆಗೆ ೨೫೦೦ ಮೇಜುಗಳ ವಿತರಣೆ ಸೇರಿದಂತೆ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ವಿದ್ಯುತ್ ವ್ಯವಸ್ಥೆ ಅಳವಡಿಕೆ, ಪ್ರವಾಸೋದ್ಯಮ ಇಲಾಖೆ ಎಸ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲ್ಲೂಕಿನ ಕನ್ನೂರ ಸವಾಯಿ ವಸ್ತಿ ತೋಟದಲ್ಲಿರುವ ಅಸಂಖ್ಯಾತ ಭಕ್ತರ ಆರಾಧ್ಯದೈವ ಹಜರತಪೀರ ದಗಾ೯ದ ಶಾಹನೂರವಲಿ ಬಾಬಾ ದೇವರ ಜಾತ್ರಾ ಮಹೋತ್ಸವ ಇದೇ ಎಪ್ರಿಲ್ 9 ರಂದು ಗುರುವಾರ ವೈಭವದಿಂದ ಜರುಗಲಿದೆ.ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ನಡೆಯಲಿರುವ ಶಾಹನೂರವಲಿ ಬಾಬಾ ದೇವರ ಜಾತ್ರಾ ಉತ್ಸವ ದೇವರ ಪೂಜಾರಿಯಾಗಿರುವ ಶ್ರೀಮತಿ ಶಾರದಾಬಾಯಿ ಮೋಹನ ರಾಠೋಡ ಹಾಗೂ ಸಕಲ ಸದ್ಭಕ್ತರ ಸಹಾಯ, ಸಹಕಾರದಿಂದ ಆಯೋಜಿಸಲಾಗಿದೆ.ಈ ಭಾಗದ ಎಲ್ಲ ಸಮಾಜದವರು ಶ್ರದ್ಧಾಭಕ್ತಿಯಿಂದ ಶಾಹನೂರವಲಿ ಬಾಬಾ ದೇವರನ್ನು ಪೂಜ್ಯ ಭಾವನೆಯಿಂದ ಆರಾಧಿಸಿ ಗೌರವಿಸುತ್ತಾರೆ. ತಮ್ಮ ಸನ್ನಿಧಿಯಲ್ಲಿ ಬಂದ ಭಕ್ತರಿಗೆ ಎದುರಾಗಿರುವ ಸಂಕಷ್ಟಗಳನ್ನು ನಿವಾರಿಸಿ ಜೀವನದಲ್ಲಿ ನೆಮ್ಮದಿ ಕರುಣಿಸುತ್ತಾರೆಂಬ ಆಚಲ ನಂಬಿಕೆ ಭಕ್ತ ವಲಯದಲ್ಲಿ ಇರುವುದರಿಂದ ಬಾಬಾ ಜಾಗೃತ ದೇವರಾಗಿ ಇಲ್ಲಿ ನೆಲೆಗೊಂಡಿದ್ದಾರೆ. ಬಾಬಾರ ಪವಾಡಗಳನ್ನು ಪೂಜಾರಿಣಿ ಶ್ರೀಮತಿ ಶಾರದಾಬಾಯಿ ಮೋಹನ ಚವ್ಹಾಣ ಭಕ್ತರಿಗೆ ಮನದಟ್ಟು ಮಾಡಿಕೊಟ್ಟು ಭಕ್ತಿಯ ರಸಭಾವವನ್ನು ಸೃಜೀಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಇವರ ನೇತೃತ್ವದಲ್ಲಿ ಹಾಗೂ ಭಕ್ತರ ಸಹಕಾರದಲ್ಲಿ ಗುರುವಾರ ದಗಾ೯ದ…

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ತಾಲೂಕಿನ ಚಕ್ಕೋಡನಹಳ್ಳಿ ಗ್ರಾಮದಲ್ಲಿ ಶ್ರೀ ಕಾಳಮ್ಮ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.ಕಾಳಮ್ಮ ದೇವಸ್ಥಾನವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಬೀದಿಗಳನ್ನು ವಿದ್ಯುತ್ ದೀಪಗಳಿಂದ, ಹೂಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿತ್ತು. ಮೂರು ದಿನಗಳ ಕಾಲ ನಡೆದ ದೇವಿಯ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಸಾಕ್ಷಿಯಾದರು.ಇತಿಹಾಸ ಹಿನ್ನೆಲೆಯುಳ್ಳ ಕಾಳಮ್ಮ ದೇವಸ್ಥಾನಕ್ಕೆ ಶುಕ್ರವಾರ ಹಿರೇಹಳ್ಳಿ ಗ್ರಾಮಸ್ಥರು ಸೊಪ್ಪು ತಂದು ಚಪ್ಪರ ಹಾಕಿದರು. ಶನಿವಾರ ಸೋನಹಳ್ಳಿ ಕೆರೆಯಲ್ಲಿ ಕಾಳಮ್ಮ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಸತ್ತಿಗೆ, ಡೊಳ್ಳು ಕುಣಿತ, ವಾದ್ಯಗೋಷ್ಠಿ ಸೇರಿದಂತೆ ಕಲಾತಂಡಗಳೊಂದಿಗೆ ಕೆರೆಯಿಂದ ಕಾಳಮ್ಮ ದೇವಸ್ಥಾನದವರೆಗೂ ತಾಯಿಯ ಮೆರವಣಿಗೆ ಮಾಡಿ ದೇವಸ್ಥಾನದಲ್ಲಿ ಪೂಜಿಸಲಾಯಿತು. ಭಾನುವಾರ ಮುಂಜಾನೆ ಮತ್ತೆ ಕೆರೆಯಲ್ಲಿ ಕಾಳಮ್ಮ ತಾಯಿ ವಿಗ್ರಹವನ್ನು ಶುದ್ಧಗೊಳಿಸಿ, ಹೂವಿನ ಅಲಂಕಾರ ಮಾಡಿ ಪೂಜಿಸಲಾಯಿತು. ಬಳಿಕ ಕೆರೆಯಿಂದ ದೇವಸ್ಥಾನದವರೆಗೂ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಮಾಡಲಾಯಿತು. ಈ ವೇಳೆ ಸಾವಿರಾರು ಮಹಿಳಾ ಭಕ್ತಾದಿಗಳು ತಂಬಿಟ್ಟು ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಈ ದೃಶ್ಯವನ್ನು ನೋಡುವುದಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ಎ.ಕೆ.ನಂದಿ ಕಾಲೇಜಿನಲ್ಲಿ ಆಲಮೇಲ ತಾಲ್ಲೂಕಿನ 2027ರ ಮೊದಲ ಹಂತದ ಜನಗಣತಿ ಕಾರ್ಯದ ಮೇಲ್ವಿಚಾರಕರರಿಗೆ ಹಾಗೂ ಗಣತಿದಾರರಿಗೆ 3 ದಿನದ ತರಬೇತಿಯನ್ನು ಪ್ರಾರಂಭಿಸಲಾಯಿತು.ಈ ವೇಳೆ ತರಬೇತಿ ಕೇಂದ್ರವನ್ನು ಭೇಟಿ ನೀಡಿ ಮಾತನಾಡಿದ ತಹಶಿಲ್ದಾರರರು ಎಮ್.ಅರಕೇರಿ ರವರು ದೇಶದ ಮಹತ್ವಾಕಾಂಕ್ಷೆ ಜನಗಣತಿ 2027 ರ ಮೊದಲ ಹಂತದ ಸಮೀಕ್ಷೆ ಎಪ್ರಿಲ್ 16 ರಿಂದ ಜನಗಣತಿ ಮನೆಗಳ ಭೌತಿಕ ಸ್ಥಿತಿಗತಿಗಳನ್ನು 33 ಸರಳ ಪ್ರಶ್ನೆಗಳೊಂದಿಗೆ ಇದೆ ಮೊದಲ ಬಾರಿಗೆ ಡಿಜಿಟಲ್‌ ರೂಪದಲ್ಲಿ ಸಂಗ್ರಹಿಸಲು ಮನೆ ಮನೆಗೆ ತೆರಳಿ ಗಣತಿ ಕಾರ್ಯ ಪ್ರಾರಂಭಗೊಳ್ಳಲಿದೆ. ಈ ಮಹತ್ವದ ಕಾರ್ಯದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಬರುವ ಹತ್ತು ವರ್ಷಗಳಿಗೆ ಸರಕಾರದ ನೀತಿ ಆಯೋಗಗಳಿಗೆ, ವಿವಿಧ ಯೋಜನೆಗಳಿಗೆ ಮತ್ತು ದೇಶದ ಪ್ರಜೆಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಸರಿಯಾದ ಅಂಕಿ ಅಂಶಗಳನ್ನು ನೀಡಬೇಕು ಎಂದು ತಿಳಿಸಿದರು.ಜನಗಣತಿ ಸಮೀಕ್ಷೆಗೆ ನಿಯುಕ್ತಿ ಆದ ಸಿಬ್ಬಂದಿ ಯಾರಾದರೂ ತರಬೇತಿಗೆ ಗೈರು ಉಳಿದರೆ ಅಂತಹವರ ವಿರುದ್ಧ ಕ್ರಮ ಕೈಗೊಂಡು ಶಿಸ್ತು ಕ್ರಮ ಜರುಗಿಸಲಾಗುವುದು…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಶ್ರೀ ಶಾಂತಿನಾಥ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿನ್ನರ ಉತ್ಸವ ಕಾರ್ಯಕ್ರಮವು ಅತ್ಯಂತ ವಿಜ್ರಮಣೆಯಿಂದ ನೆರವೇರಿತು.ಈ ಸಂದರ್ಭದಲ್ಲಿ 2025-26ನೇ ಸಾಲಿನ ಆದರ್ಶ ವಿದ್ಯಾರ್ಥಿನಿಯಾಗಿ ಸೃಷ್ಟಿ ನರಸಗೊಂಡ ಹಾಗೂ ಆದರ್ಶ ವಿದ್ಯಾರ್ಥಿಯಾಗಿ ನಿಖಿಲಕುಮಾರ ಶಿಂಧೆ ಆಯ್ಕೆಯಾಗಿದ್ದು, ಚೀಟಿ ಹಾರಿಸುವ ಮೂಲಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಶಾಲೆಯ ಕಾರ್ಯಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯೋಪಾಧ್ಯಾಯರು, ಕಾರ್ಯನಿರ್ವಾಹಕರು ಹಾಗೂ ಶಿಕ್ಷಕರ ಬಳಗವು ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು.ಇದೇ ವೇಳೆ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಯೂ ಗಮನ ಸೆಳೆಯಿತು. 5ನೇ ತರಗತಿ ವಿದ್ಯಾರ್ಥಿ ಸೈಯದ್ ಉಜೇರ್ ಜುನೇದಕರ ಕ್ರಿಕೆಟ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, 4ನೇ ತರಗತಿ ವಿದ್ಯಾರ್ಥಿ ಸಮದ್ ಜುನೇದಕರ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶಾಲೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಶಾಲೆಯ ಮುಖ್ಯ ಗುರುಮಾತೆ ಜ್ಯೋತಿ ಚೌಗಲೆ ಅವರು ಮಾಹಿತಿ ನೀಡುತ್ತಾ, “ವಿದ್ಯಾರ್ಥಿಗಳ ಸಾಧನೆ ನಮ್ಮ ಶಾಲೆಯ ಗೌರವವನ್ನು ಹೆಚ್ಚಿಸಿದೆ. ಅವರ ಪರಿಶ್ರಮಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಕಾಲೇಜಿನ 2024-25ನೇ ಸಾಲಿನಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ಪ್ರಶಿಕ್ಷಣಾರ್ಥಿಗಳು ಮೂರು ರ್‍ಯಾಂಕ್ ಪಡೆದಿದ್ದಾರೆ. ವಿಶ್ವವಿದ್ಯಾಲಯ ಕೊಡಲ್ಪಡುವ ಮೂರೂ ರ್‍ಯಾಂಕ್ ಗಳನ್ನು ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ಸುಷ್ಮಾ ತಂಬಾಕು ಸುವರ್ಣ ಪದಕದೊಂದಿಗೆ ಪ್ರಥಮ ರ‍್ಯಾಂಕ್, ಅಮುಲ ಗುಲಗಾಂವಿ ದ್ವಿತೀಯ ರ‍್ಯಾಂಕ್, ರಮೇಶ ಅಂಬಿ ತೃತೀಯ ರ‍್ಯಾಂಕ್ ಪಡೆದು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ. ರ‍್ಯಾಂಕ್ ಬಂದ ಪ್ರಶಿಕ್ಷಣಾರ್ಥಿಗಳಿಗೆ ಬಿ.ಎಲ್.ಡಿ.ಇ ಅಂಗ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಶ್ರೀಕಾಂತ ಲಗಳಿ, ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಅರುಣಕುಮಾರ ಶಹಾ, ಪ್ರಾಂಶುಪಾಲರಾದ ಪ್ರೊ.ಕೆ ಜೆ. ಜೀರಗಾಳಿ, ಉಪನ್ಯಾಸಕ ವೃಂದ, ಪ್ರಶಿಕ್ಷಣಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ತಕ್ಷಣ ಕ್ರಮ ಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿ ಮೂಲಕ ಸಚಿವರಿಗೆ ಶಿವಾನಂದ ಬೋದಲಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಸಮೀಪ ವಿಜಯಪುರ–ಜಮಖಂಡಿ ಮುಖ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಎಡ ಹಾಗೂ ಬಲ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಟ್ಟಂಗಿ ಭಟಿಗಳಿಂದ ಸಾರ್ವಜನಿಕರ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಶಿವಾನಂದ ಬೋದಲಿ ಆರೋಪಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ನಗರದ ತಾಲೂಕು ಆಡಳಿತ ಭವನದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬಿಡಕರ ಅವರ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಇಟ್ಟಂಗಿ ಭಟಿಗಳಿಂದ ಹೊರಬರುವ ದೂಳು, ಹೊಗೆ ಹಾಗೂ ದುರ್ವಾಸನೆಯಿಂದ ವಯೋವೃದ್ಧರು ಮತ್ತು ಚಿಕ್ಕಮಕ್ಕಳು ನಿರಂತರವಾಗಿ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಜೊತೆಗೆ ಭಾರಿ ಪ್ರಮಾಣದ ವಾಹನ ಸಂಚಾರದಿಂದ ಶಾಲಾ ಮಕ್ಕಳಿಗೆ ರಸ್ತೆ ದಾಟಲು ತೊಂದರೆ ಉಂಟಾಗುತ್ತಿದೆ ಎಂದು ತಿಳಿಸಿದರು.ಇನ್ನು ಸುತ್ತಮುತ್ತಲಿನ ಕೃಷಿ ಜಮೀನುಗಳ ಮೇಲೆ ದೂಳು ಜಮೆಯಾಗುವುದರಿಂದ ಬೆಳೆಗಳು ಹಾನಿಗೊಳಗಾಗಿ ಇಳುವರಿ ಕಡಿಮೆಯಾಗುತ್ತಿದೆ. ಭಟಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ…

Read More

ವಿಜಯಪುರ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ 14 ಜನರಲ್ಲಿ ಮೂವರ ಸಾವು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರವಾಸಕ್ಕಾಗಿ ಬೆಂಗಳೂರಿನಿಂದ ಕುಟುಂಬ ಸಮೇತ ವಿಜಯಪುರಕ್ಕೆ ಬಂದಿದ್ದ 14 ಜನರಲ್ಲಿ ನಗರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಸಂಭವಿಸಿದ ದಾರುಣ ಘಟನೆಯಲ್ಲಿ ಮೂವರು ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ.ಬೆಂಗಳೂರಿನ ಆರ್ ಟಿ ನಗರ ನಿವಾಸಿಗಳಾದ ಮಹಮ್ಮದ್ ಹಯಾತ್ (12), ಹೈದರ್ ಪಾಶಾ (32) ಹಾಗೂ ಅಬ್ದುಲ್ ಖುದ್ದುಸ್ (35) ಮೃತರಾಗಿದ್ದಾರೆ.ಒಟ್ಟು 14 ಜನರ ತಂಡ ವಿಜಯಪುರಕ್ಕೆ ಪ್ರವಾಸಕ್ಕೆ ಆಗಮಿಸಿದ್ದು, ಕೆರೆಯ ಬಳಿ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ.ನೀರಿನಲ್ಲಿ ಇಳಿದಿದ್ದ ಬಾಲಕ ಹೈದರ್ ಪಾಶಾ ಮುಳುಗುತ್ತಿದ್ದಂತೆ, ಆತನ ರಕ್ಷಣೆಗೆ ಅಬ್ದುಲ್ ಖುದ್ದುಸ್ ಹಾಗೂ ಮತ್ತೊಬ್ಬರು ಮುಂದಾಗಿದ್ದಾರೆ. ಆದರೆ ದುರದೃಷ್ಟವಶಾತ್ ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಆದರ್ಶ ನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರನ್ನು ನೀರಿನಿಂದ ಹೊರತೆಗೆದರು. ಬಾಲಕ ಮಹಮ್ಮದ್ ಹಯಾತ್ ಹಾಗೂ ಹೈದರ್ ಪಾಶಾ ಸ್ಥಳದಲ್ಲೇ…

Read More