Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರದ ಲೋಕಾಯುಕ್ತ ಕಚೇರಿಯಲ್ಲಿರುವ ಹಳೆಯ ಅನುಪಯುಕ್ತ ವಸ್ತುಗಳನ್ನು ವಿಲೇವಾರಿ ಮಾಡಲು ಉದ್ದೇಶಿಸಲಾಗಿದ್ದು, ವಿಲೇವಾರಿಯ ಕುರಿತು ಡಿಸೆಂಬರ್ 17ರ ಬೆಳಿಗ್ಗೆ11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಲೋಕಾಯುಕ್ತ ಇಲಾಖೆಯ ಪೊಲೀಸ್ ಅಧೀಕ್ಷಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್ಸಿ ಪ್ರಥಮ ಸೆಮೆಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರೀತಿ ಹೊನಖಂಡೆ ಇವಳು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವ್ಹಾಲಿಬಾಲ್ ತಂಡಕ್ಕೆ ‘ಯುನಿವ್ಹರ್‌ಸಿಟಿ ಬ್ಲ್ಯೂ’ ಆಗಿ ಆಯ್ಕೆಯಾಗಿದ್ದಾಳೆ.ಕಾಲೇಜಿಗೆ ಕೀರ್ತಿ ತಂದ ಈ ಕ್ರೀಡಾಪಟು ಸಾಧನೆಗೆ ಕಾಲೇಜು ಅಭಿವೃದ್ಧಿ ಸಮೀತಿ ಅಧ್ಯಕ್ಷರೂ ಹಾಗೂ ವಿಜಯಪುರ ನಗರದ ಶಾಸಕರೂ ಆದ ಬಸನಗೌಡ.ಆರ್.ಪಾಟೀಲ ಹಾಗೂ ಕಾಲೇಜಿನ ಅಭಿವೃದ್ಧಿ ಸಮೀತಿ ಸದಸ್ಯರು, ಪ್ರಾಂಶುಪಾಲ ಡಾ. ಎ.ಐ.ಹಂಜಗಿ, ಕ್ರೀಡಾ ನಿರ್ದೇಶಕ ಪ್ರೊ. ಸಂಗಮೇಶ ಗುರವ, ಕ್ರೀಡಾ ಸಮಿತಿ ಸದಸ್ಯರಾದ ಪ್ರೊ. ಎಂ.ಎಸ್.ಖೊದ್ನಾಪೂರ, ಡಾ. ಪ್ರಕಾಶ ಹಾವೇರಿಪೇಠ ಹಾಗೂ ಡಾ. ದೇವೇಂದ್ರಗೌಡ ಪಾಟೀಲ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮದಡಿ ಮೀನುಗಾರರಿಗೆ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ ಹಾಗೂ ತ್ರಿ ಚಕ್ರ ವಾಹನ ಖರೀದಿಗೆ ೨೦೨೫-೨೬ ನೇ ಸಾಲಿನ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ನಿಡಗುಂದಿ ತಾಲೂಕಿನ ಇಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಜನಾಳ ಗ್ರಾಮ, ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ ಗ್ರಾಮ, ಅಸ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಸ್ಕಿ ಗ್ರಾಮ, ಸಾಸನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೊಮನಾಳ ಗ್ರಾಮ, ಕೊಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಡೇಕನೂರ ಹಾಗೂ ಕೊಣ್ಣೂರ ಗ್ರಾಮ, ಬಾವೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ವನಹಳ್ಳಿ ಗ್ರಾಮ, ತುಂಬಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತುಂಬಗಿ ಹಾಗೂ ಹೊಸಹಳ್ಳಿ ಗ್ರಾಮ, ಬಂಟನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಟನೂರ ಗ್ರಾಮ, ಕೊಡಗಾನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಡಗಾನೂರ, ಕಾರಗನೂರ, ಬೇಲೂರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿಗೆ ಉದ್ಯೋಗಿನಿ ಯೋಜನೆ, ಚೇತನಾ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಆನ್‌ಲೈನ್ ಮತ್ತು ಆಪ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಡಿಸೆಂಬರ್ ೧೫ರೊಳಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ನೇರವಾಗಿ ಅಥವಾ ಬಾಪೂಜಿ ಸೇವಾ ಕೇಂದ್ರ, ಗಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ:೦೮೩೫೨-೨೯೫೩೫೩ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ…

Read More

ವಿಜಯಪುರ ಶಾಸಕ ಬಸನಗೌಡ ಪಾಟೀಲ ( ಯತ್ನಾಳ) ಅಭಿಮತ ಉದಯರಶ್ಮಿ ದಿನಪತ್ರಿಕೆ ಇಂಡಿ: ಹಿಂದುಗಳು ಒಂದಾಗದಿದ್ದರೆ ದೇಶ ಮತ್ತು ಸಂವಿಧಾನ ಉಳಿಯುವದಿಲ್ಲ. ಈ ಬಗ್ಗೆ ದೇಶದ ಹಿಂದುಗಳು ಎಚ್ಚರಿಕೆ ವಹಿಸಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಅವರು ಭಾನುವಾರ ಸಾಯಂಕಾಲ ಪಟ್ಟಣದ ಶಿರಶ್ಯಾಡ ಶಾಖಾ ಮಠದಲ್ಲಿ ನಿರ್ಮಾಣಗಿಳ್ಳುತ್ತಿರುವ ಬಡ ಮಕ್ಕಳ ಶಿಕ್ಷಣ ಉಚಿತ ಪ್ರಸಾದ ನಿಲಯ ಹೊಸ್ತಿಲ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದಲ್ಲಿರುವ ಹಿಂದು ಮಠಮಾನ್ಯಗಳು ಕೇವಲ ವೀರಶೈವ ಲಿಂಗಾಯತ ಮಕ್ಕಳಿಗೆ ಅಷ್ಟೇ ಶಿಕ್ಷಣ ನೀಡಿಲ್ಲ. ಅಲ್ಲಿ ಮುಸ್ಲಿಂ ಸೀಖ ಪಾರ್ಸಿ ಜೈನ ಸೇರಿದಂತೆ ಎಲ್ಲಾ ಸಮುದಾಯದ ಮಕ್ಕಳಿಗೂ ಅವಕಾಶ ಮಾಡಿಕೊಡಲಾಗಿದೆ ಎಂದರು.ಸನಾತನ ಹಿಂದು ಧರ್ಮದಲ್ಲಿ ದಲಿತ ಸಮುದಾಯಕ್ಕೆ ಅನ್ಯಾಯವಾಗಿರುವದು ಸತ್ಯ. ಅದನ್ನು ಸರಿಪಡಿಸಿಕೊಳ್ಳುವ ಕಾಲ ಬಂದಿದೆ. ಕಾರಣ ದೇಶದ ಎಲ್ಲರೂ ಒಗ್ಗಟ್ಟಾಗಬೇಕು ದೇಶ ಮತ್ತು ಸಂವಿಧಾನ ಉಳಿಸಿಕೊಳ್ಳಲು ಸಹಕರಿಸಬೇಕೆಂದು ಕರೆ ನೀಡಿದರು.ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಅಲ್ಲ, ಅವೆರಡೂ ಒಂದೇ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಎಲ್ಲರೂ ನಡೆದುಕೊಳ್ಳುತ್ತಾರೆ. ಬಸವಣ್ಣನವರು…

Read More

ಬಿಜೆಪಿ ಜಿಲ್ಲಾ ಅಧ್ಯಕ್ಷ ಗುರಲಿಂಗಪ್ಪ ಅಂಗಡಿ ಆರೋಪ | ಡಿ.೯ ಕ್ಕೆ ಬೆಳಗಾವಿ ವಿಧಾನಸೌಧಕ್ಕೆ ಮುತ್ತಿಗೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈತರ ಸಮಸ್ಯೆಗಳನ್ನು ಬಗೆಹರಿಸದ ಕಾಂಗ್ರೆಸ್ ಸರ್ಕಾರದ ದೋರಣೆಯನ್ನು ಖಂಡಿಸಿ ಇದೇ ೯ ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಳಗಾವಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಹೇಳಿದರು.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ರೈತರಿಗೆ ಅನ್ಯಾಯವಾಗಿದೆ. ಬೆಳೆ ಪರಿಹಾರ ನೀಡುವಲ್ಲಿ ಸರ್ಕಾರ ನಿರ್ಲಕ್ಷ ಮಾಡುತ್ತಿದೆ. ತೋಟಗಾರಿಕೆ ಬೆಳೆಯಾದ ದ್ರಾಕ್ಷಿ ವಿಜಯಪುರ ಜಿಲ್ಲೆಯ ಜೀವನಾಡಿಯಾಗಿದೆ. ರಾಜ್ಯ ಸರ್ಕಾರ ದ್ರಾಕ್ಷಿ ಬೆಳೆಗಾರರಿಗೆ ವಿಮೆ ಹಣ ಬರದಂತೆ ತಡೆ ಹಿಡಿದಿದ್ದಾರೆ. ನಮ್ಮ ನಾಯಕ ವಿಜೇಂದ್ರ ಹೋರಾಟಕ್ಕೆ ಇಳಿದ ತಕ್ಷಣ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರೈತರಿಗೆ ಹಣ ಜಮೆ ಮಾಡಿದೆ. ಆದರೆ ಬಹಳಷ್ಟು ರೈತರಿಗೆ ಇನ್ನೂ ಪರಿಹಾರ ಹಣ ಬಂದಿಲ್ಲ. ಆ ಹಣವನ್ನು ಬೇರೆಬೇರೆ ಉದ್ದೇಶಕ್ಕೆ ಸರ್ಕಾರವೇ ಬಳಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದರು.ಸಬ್ಸಿಡಿ ದರದಲ್ಲಿ ರೈತರಿಗೆ ಕೃಷಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾರ್ವಜನಿಕ ಜೀವನದಲ್ಲಿ ಇರುವುದರಿಂದ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಹಾಗೂ ಇಷ್ಟಪಡುವುದಿಲ್ಲ. ಎಂದಿನಂತೆ ನನಗೆ ದಿನವೂ ಜನಸೇವೆಯ ದಿನವಾಗಿದ್ದು, ಡಿಸೆಂಬರ್ 13 ರಂದು ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇರುವುದರಿಂದ, ಯಾವುದೇ ತರಹದ ಹೂ-ಗುಚ್ಚ, ಉಡುಗೊರೆ, ಬ್ಯಾನರ್ ಗೆ ಅನಾವಶ್ಯಕ ವೆಚ್ಚ ಮಾಡಬಾರದೆಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಡೀ ರಾಜ್ಯಾದ್ಯಂತ ಅಸಂಖ್ಯಾತ ಹಿಂದೂ ಕಾರ್ಯಕರ್ತರು, ಅಭಿಮಾನಿಗಳು, ಮುಖಂಡರು, ಹಿತೈಷಿಗಳು ತೋರುತ್ತಿರುವ ಅಭೂತಪೂರ್ವ ಬೆಂಬಲ, ಪ್ರೋತ್ಸಾಹ, ಆಶೀರ್ವಾದವೇ ನನಗೆ ಬಹುದೊಡ್ಡ ಉಡುಗೊರೆ ಎಂದು ಶಾಸಕರು ತಿಳಿಸಿದ್ದಾರೆ.

Read More

“ಸಹಕರಿಸಿದ ಸರ್ವರಿಗೂ ವೃಕ್ಷ ಅಭಿಯಾನ ಸಮಿತಿ ಕೃತಜ್ಞತೆ ಸಲ್ಲಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೃಕ್ಷಥಾನ್ ಹೆರಿಟೇಜ್ ರನ್-2025 ನೀರಿಕ್ಷೆಗೂ ಮೀರಿ ಯಶಸ್ವಿಯಾಗಲು ಸಹಕರಿಸಿದ ಸರ್ವರಿಗೂ ವೃಕ್ಷ ಅಭಿಯಾನ ಸಮಿತಿ ಕೃತಜ್ಞತೆ ಸಲ್ಲಿಸಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡೀರುವ ಸಮಿತಿ ಸಂಚಾಲಕ ಡಾ.ಮುರುಗೇಶ ಪಟ್ಟಣಶೆಟ್ಟಿ ಈ ಬಾರಿ ಓಟದಲ್ಲಿ 21 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಿರುವುದು ವಿಜಯಪುರದ ಜನತೆಯ ಪರಿಸರದ ಬಗ್ಗೆ ಇರುವ ಕಾಳಜಿ ತೋರಿದೆ. ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಗಳಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ. ಈ ಯಶಸ್ಸಿಗೆ ಪ್ರಾಯೋಜಕರು, ದೇಣಿಗೆ ನೀಡಿದ ಗಣ್ಯರು, ವೃಕ್ಷಥಾನ್ ರನ್ ಗೆ ಶ್ರಮಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಪ್ರವಾಸೋದ್ಯಮ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಬಿ.ಎಲ್.ಡಿ.ಇ ಸಂಸ್ಥೆ, ಸೈನಿಕ ಶಾಲೆ, ಸೊಸೈಟಿ ಫಾರ್ ಪ್ರೊಟೇಕ್ಷನ್ ಆಫ್ ಪ್ಲ್ಯಾಂಟ್ಸ್ ಆಂಡ್ ಅನಿಮಲ್ಸ್ ಮತ್ತು ವಿಜಯಪುರ ಸೈಕ್ಲಿಂಗ್ ಗ್ರುಪ್ ಹಾಗೂ ವೃಕ್ಷಥಾನ್ ಕೋರ್ ಕಮಿಟಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಇದೇ ವೇಳೆ ವೃಕ್ಷಥಾನ್…

Read More

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನವನ್ನು ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸದ್ಭಳಕೆ ಮಾಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ರವಿವಾರ ಬಬಲೇಶ್ವರ ತಾಲೂಕಿನ ದೂಡಿಹಾಳ ಗ್ರಾಮದಲ್ಲಿ ಶಾಹಿ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ರೂ. 1.30 ಕೋ. ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ, ಅವರು ಮಾತನಾಡಿದರು.ಗ್ರಾಮೀಣ ಸರಕಾರಿ ಶಾಲೆಗಳಲ್ಲಿ ಮಕ್ಕಳು ಗುಣಮಟ್ಟ ಶಿಕ್ಷಣ ಪಡೆಯಲು ಬೋಧನೆಯ ಜೊತೆಗೆ, ಕಟ್ಟಡ, ಕಲಿಕಾ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ಶಿಕ್ಷಕರ ಅತ್ಯುತ್ತಮ ಮಾರ್ಗದರ್ಶನದಲ್ಲಿ ರೈತರ ಮತ್ತು ಬಡ ಮಕ್ಕಳ ಕಲಿಯಲು ಉತ್ತಮ ಶೈಕ್ಷಣಿಕ ವಾತಾವರಣದ ವ್ಯವಸ್ಥೆ ಮಾಡಲಾಗುತ್ತಿದೆ. ಪಾಲಕರು ತಮ್ಮ ಮಕ್ಕಳಿಗೆ, ಅದರಲ್ಲೂ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಶ್ರೀ ಮಲಕಯ್ಯ ಹಿರೇಮಠ, ಶಾಹಿ ಕಂಪನಿಯ ಉಸ್ತುವಾರಿ ಎಂಜನಿಯರ ಧನಂಜಯಕುಮಾರ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲಾ ಪರಿಷತ್‌ನ ಆಕಳವಾಡಿ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆಗೆ ಗುಜರಾತ ರಾಜ್ಯದ ತಾಪಿದಾಸ ವಜ್ರದಾಸ ತುಲಸಿದಾಸ ಚಾರಿಟೇಬಲ್ ಟ್ರಸ್ಟ್ ನ ಮುಂಬೈ ಶಾಖೆ ವತಿಯಿಂದ ಅತ್ಯಾಧುನಿಕ ಡಿಜಿಟಲ್ ಇಂಟರ್‌ಯಾಕ್ಟಿವ್ ಸ್ಮಾರ್ಟ್ ಬೋರ್ಡ್, ಪ್ರೊಜೆಕ್ಟರ್ ಹಾಗೂ ₹1,25,000 ಮೌಲ್ಯದ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಟ್ರಸ್ಟ್ ನ ಪ್ರತಿನಿಧಿ ವಿ.ಎಂ. ಸಿಂದಗಿ ಮಾತನಾಡಿ, ಗುಜರಾತ ರಾಜ್ಯದ ತಾಪಿದಾಸ ವಜ್ರದಾಸ ತುಲಸಿದಾಸ ಚಾರಿಟೇಬಲ್ ಟ್ರಸ್ಟ್ ಕೈಗೊಂಡಿರುವ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ವಿವರಿಸಿದರು. “ಉಚಿತ ಪುಸ್ತಕ ವಿತರಣೆ, ಪ್ರೋಜೆಕ್ಟರ್ ಮತ್ತು ಸೌಂಡ್ ಸಿಸ್ಟಮ್, ಶಾಲಾ ಫರ್ನಿಚರ್ ಮತ್ತು ಡಿಜಿಟಲ್ ಸ್ಮಾರ್ಟ್ ಬೋರ್ಡ್ ವಿತರಣೆಗಳ ಮೂಲಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಟ್ರಸ್ಟ್ ನಿರಂತರವಾಗಿ ಕೊಡುಗೆ ನೀಡುತ್ತಿದೆ. ಸಮಾಜದ ಬೆಳವಣಿಗೆಗೆ ಬೇಕಾದ ಸ್ಥಳಗಳಲ್ಲಿ ಸಾಧ್ಯವಾದ ಮಟ್ಟಿಗೆ ದಾನ ಮಾಡುವುದೇ ನಿಜವಾದ ಸೇವೆ,” ಎಂದರು.ಕಾರ್ಯಕ್ರಮವನ್ನು ಶಿಕ್ಷಕ ನದಾಫ ನಿರೂಪಿಸಿದರು. ಶಿಕ್ಷಕರಾದ ಡಿ.ಎಲ್. ಕಾಂಬಳೆ, ಎಸ್.ಎಂ. ಹಿರೇಮಠ ಹಾಗೂ…

Read More