Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಹಮಾಲರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಲಾರಿ ಹಮಾಲರ ಯುನಿಯನ್ (ಸಿಐಟಿಯು ಸಂಯೋಜಿತ) ವತಿಯಿಂದ ಜಿಲ್ಲಾಧಿಕಾರಿಗಳು, ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ ಮಾತನಾಡಿ, ಅಸಂಘಟಿತ ಕಾರ್ಮಿಕರ ಸಹಜ ಮರಣಕ್ಕೂ ರೂ. ೦೧ ಲಕ್ಷ ರೂಗಳ ಪರಿಹಾರ ನೀಡಬೇಕು, ಹಾಗೂ ಶವ ಸಂಸ್ಕಾರ ಪರಿಹಾರದ ಮೊತ್ತವನ್ನು ರೂ.೨೫ ಸಾವಿರಕ್ಕೆ ಹೆಚ್ಚಿಸಬೇಕು. ಕರ್ನಾಟಕ ಅಸಂಘಟಿತ ಕಾರ್ಮಿಕರ ಭವಿಷ್ಯನಿಧಿ ಯೋಜನೆ ಹಾಗೂ ಸೂಕ್ತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಎಲ್ಲಾ ಹಮಾಲಿ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು. ಎಪಿಎಂಸಿ ಕಾಯಕ ನಿಧಿಯಡಿ ನಿವೃತ್ತಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಕೂಡಲೇ ಕೇಂದ್ರ ಸರಕಾರ ಇ-ಶ್ರಮ ಕಾರ್ಡ್ ಪಡೆದ ಅಸಂಘಟಿತ ಕಾರ್ಮಿಕರಿಗೆ ಸಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಮಾಡಬೇಕು. ಮಿಲ್ ಗೋಡೌನ ವೇರಹೌಸ್ಗಳಲ್ಲಿ ಕೆಲಸ ನಿರ್ವಹಿಸುವ ಹಮಾಲಿ ಕಾರ್ಮಿಕರಿಗೆ…
ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿಕ್ಷಣ ಎಂಬ ಧಿವ್ಯ ಬೆಳಕನ್ನು ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನಲ್ಲಿ ಬೆಳಗಿಸಿದ ಶ್ರೇಯಸ್ಸು ತ್ಯಾಗವೀರ ಶಿರಸಂಗಿ ಲಿಂಗರಾಜ ಮಹಾರಾಜರಿಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ನಗರದ ಜಿ.ಕೆ.ಪಾಟೀಲ ಸಮುದಾಯ ಭವನದಲ್ಲಿ ದಿ.ಶ್ರೀ ಲಿಂಗರಾಜ ವಿವಿದೋದ್ಧೇಶ ಸಂಸ್ಥೆ, ಶ್ರೀ ಸಿರಸಂಗಿ ಲಿಂಗರಾಜ ಪತ್ತಿನ ಸಹಕಾರಿ ಸಂಘ ನಿಯಮಿತ, ಹಾಗೂ ಜಿಲ್ಲಾ ಲಿಂಗಾಯತ ಕುಡುವಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿರಸಂಗಿ ಲಿಂಗರಾಜ ಮಹಾರಾಜರು ಶಿಕ್ಷಣವೇ ಶಕ್ತಿ ಎಂದು ತಿಳಿದಿದ್ದರು, ಹೀಗಾಗಿ ತಮ್ಮ ಅಪಾರ ಸಂಪತ್ತನ್ನು ಶಿಕ್ಷಣದ ಪವಿತ್ರ ಕಾರ್ಯಕ್ಕೆ ಬಳಕೆಯಾಗಬೇಕು ಎಂದು ದಾನ ಮಾಡಿದರು. ಅವರ ತ್ಯಾಗ, ಶ್ರಮದ ಫಲವಾಗಿ ಕೆ.ಎಲ್.ಇ., ಬಿಎಲ್ಡಿಇ ಸಂಸ್ಥೆಗಳು ಹೆಮ್ಮರವಾಗಿ ಬೆಳೆಯಲು ಸಾಧ್ಯವಾಯಿತು ಎಂದರು.ಜಿ.ಪಂ.ಮಾಜಿ ಸದಸ್ಯೆ ಪ್ರತಿಭಾಗೌಡತಿ ಪಾಟೀಲ ಮಾತನಾಡಿ, ಪ್ರತಿಭೆಗೆ ಪ್ರೋತ್ಸಾಹ ಅಗತ್ಯ, ಪ್ರತಿಭಾನ್ವಿತರಿಗೆ ಪ್ರೋತ್ಸಾಹ ನೀಡುವುದರಿಂದ ಇತರರಿಗೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ೧೩ ತಾಲೂಕುಗಳಲ್ಲಿ ರೈತರು ಪ್ರತಿನಿತ್ಯ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆಯಿಸಿ ಶೀಘ್ರದಲ್ಲಿ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು, ೨೦೨೩-೨೪ ನೇ ಫಸಲ್ ಭೀಮಾ ಯೋಜನೆಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿರುವ ಕುರಿತು ೩ ತಿಂಗಳಿನಿಂದ ನಿರಂತರ ಹೋರಾಟ ಮಾಡಿದರೂ ಸಹ ಜಿಲ್ಲಾಡಳಿತ ಮಾಹಿತಿ ನೀಡುತ್ತಿಲ್ಲ, ಜಿಲ್ಲಾಧ್ಯಂತ ನಡೆಯುತ್ತಿರುವ ಎಲ್ಲ ನೀರಾವರಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದು, ವಿವಿಧ ಏತನೀರಾವರಿ ಯೋಜನೆಗಳು ಸಂಪೂರ್ಣವಾಗಿ ಮುಗಿಸಿ ಭೂಸ್ವಾಧಿನದ ಹಣವನ್ನು ರೈತರಿಗೆ ಶೀಘ್ರದಲ್ಲಿ ಕೊಡಿಸುವುದು, ವಿದ್ಯುತ್ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಚಿವರ ಗಮನ ಸೆಳೆದರು.ಈ ವೇಳೆ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ತಾಲೂಕಾ ಅಧ್ಯಕ್ಷ ಮಹಾದೇವಪ್ಪ ತೇಲಿ, ತಿಕೊಟಾ ಅಧ್ಯಕ್ಷ ಸಾತಲಿಂಗಯ್ಯ ಸಾಲಿಮಠ, ಮಹಾದೇವ ಕದಂ, ಮಹಾಂತೇಶ ಮಮದಾಪುರ, ಸಂಗಪ್ಪ ಟಕ್ಕೆ, ತಿಪ್ಪರಾಯ…
ಆಲಮೇಲದಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಶಾಸಕ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರ ಹೆಚ್ಚು ಅನುಕೂಲವಾಗಲಿದೆ. ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿದರೆ ಸಾವಿರಾರು ರೂಪಾಯಿಗಳು ಖರ್ಚು ಆಗುತ್ತದೆ, ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಕೇಂದ್ರ ಬಡವರಿಗೆ ಹೆಚ್ಚು ನೆರವಾಗಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಿಸಿಡಿಸಿ ಕಿಡ್ನಿ ಕೇರ್ ಇವರ ಸಂಯುಕ್ತ ಆಶ್ರಯದಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿ ಮಾತನಾಡಿದರು.ಸರ್ಕಾರ ಬಡವರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ. ಆಸ್ಪತ್ರೆಯನ್ನು ಶುಚಿಯಾಗಿಡುವ ಜತೆಗೆ ರೋಗಿಗಳಿಗೆ ಡಾಕ್ಟರ್ಗಳು ಸ್ಪಂದಿಸಿ ಚಿಕಿತ್ಸೆ ನೀಡಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೋಮಯ್ಯ ಸ್ವಾಮೀಜಿ, ಡಾ.ಸಂದೀಪ ಜೆ. ಪಾಟೀಲ, ಆಲಮೇಲ ಪ.ಪಂ ಅಧ್ಯಕ್ಷ ಸಾಧಿಕ ಸುಂಬಡ,ಸಿಂದಗಿ ತಾಲೂಕಾ…
ವೈಜ್ಞಾನಿಕ ಪ್ರತಿಭೆ ಅನಾವರಣಗೊಳಿಸಿದ ವಿಜ್ಞಾನ ವಸ್ತು ಪ್ರದರ್ಶನ ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬಿತ್ತುವಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಲಿದೆ. ಬರೀ ಅಂಕ ಗಳಿಕೆ ಶಿಕ್ಷಣವಲ್ಲ, ಮಕ್ಕಳಲ್ಲಿ ಕೌಶಲ, ಕುತೂಹಲ ಶಕ್ತಿಯನ್ನೂ ಬಲಪಡಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಸಹನಿರ್ದೇಶಕಿ ಮತ್ತು ಜಮಖಂಡಿಯ ಶಿಕ್ಷಕರ ಸರಕಾರಿ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ ಮಂಗಲಾ ನಾಯಕ ಹೇಳಿದರು.ಬಬಲೇಶ್ವರದ ಪಟ್ಟಣದ ಶಾಂತವೀರ ಪ್ರೌಢಶಾಲೆಯಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಶುಕ್ರವಾರ ಆಯೋಜಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮತ್ತು ವಿಜ್ಞಾನ ಬೋಧಕರಿಗೆ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ (ಅಭಿವೃದ್ಧಿ) ಉಮಾದೇವಿ ಸೊನ್ನದ ಮಾತನಾಡಿ,ಪಠ್ಯಪೂರಕ ಚಟುವಟಿಕೆಗಳೂ ಶಿಕ್ಷಣದ ಅವಿಭಾಜ್ಯ ಅಂಗವಾಗಿವೆ. ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಇಲಾಖೆಯು ಪ್ರತಿ ವರ್ಷ ವಿಜ್ಞಾನ ಗೋಷ್ಠಿ, ವಿಜ್ಞಾನ ನಾಟಕ, ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಶಿಕ್ಷಕರು ಸೂಕ್ತ ಮಾರ್ಗದರ್ಶನವನ್ನು ನೀಡಬೇಕು ಎಂದರು.ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂಗಾಂಗ ದಾನ ಶ್ರೇಷ್ಠ ದಾನವಾಗಿದ್ದು, ಇದಕ್ಕೆ ಅಗತ್ಯವಾಗಿರುವ ಕಾನೂನು ನೆರವು ನೀಡಲು ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ ಎಂದು ಎಸ್ಪಿ ರಿಷಿಕೇಶ ಸೋನಾವಣೆ ಹೇಳಿದ್ದಾರೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಮೂತ್ರಶಾಸ್ತ್ರ (ಯುರಾಲಜಿ) ವಿಭಾಗದ ವತಿಯಿಂದ ಆಯೋಜಿಸಲಾದ ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಯ ಮತ್ತು ಮೃತ ವ್ಯಕ್ತಿಯಿಂದ ಅಂಗಾಗ ದಾನ ಪಡೆಯುವ ಕುರಿತು ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಅಂಗಾಗ ಕಸಿಯಲ್ಲಿ ದಾನಿಗಳು ಮತ್ತು ಅಂಗಾಗ ಕಸಿಗೆ ಒಳಗಾಗುವ ರೋಗಿಗಳು ಕಾನೂನು ಕೆಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಅಲ್ಲದೇ, ಅಂಗಾಂಗಗಳನ್ನು ತ್ವರಿತವಾಗಿ ಕಳುಹಿಸಲು ಸುಗಮ ರಸ್ತೆ ಸಂಚಾರಕ್ಕಾಗಿ ಶೂನ್ಯ ಟ್ರಾಫಿಕ್ ಕಾರಿಡಾರ್ ಕೂಡ ಒದಗಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸದಾ ನೆರವು ಒದಗಿಸಲು ಬದ್ಧವಾಗಿದೆ ಎಂದು ಅವರು ತಿಳಿಸಿದರು.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ಮಾತನಾಡಿ, ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಘಟಕ ಪ್ರಾರಂಭಿಸಲು ವಿವಿ…
ಎಸ್.ಬಿ ಕಲಾ & ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ :ಪ್ರಪಂಚದಲ್ಲೇ ವೈಜ್ಞಾನಿಕ ಕ್ಷೇತ್ರದಲ್ಲಿ ನಮ್ಮ ಭಾರತ ದೇಶ ಒಂದು ಹೆಜ್ಜೆ ಮುಂದಿದೆ. ಚಂದ್ರನ ಮೇಲೆ “ಚಂದ್ರಯಾನ-೩” ಅನ್ನು ಇಳಿಸುವ ಮೂಲಕ ವೈಜ್ಞಾನಿಕ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಸ್ನಾತಕೋತ್ತರ ಭೌತಶಾಸ್ತ್ರ ಅಧ್ಯಯನ ವಿಭಾಗದ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಾಯೋಜಕತ್ವದಲ್ಲಿ “ಚಂದ್ರಯಾನ್ ಭಾರತೀಯ ಬಾಹ್ಯಾಕಾಶ ತಂತ್ರಜ್ಞಾನದ ಚಿನ್ನದ ಗರಿ” ಎಂಬ ಶೀರ್ಷಿಕೆಯ ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶವು ಇಡೀ ಜಗತ್ತಿದೆ ಮಾದರಿಯಾಗಿದೆ. ವೈಜ್ಞಾನಿಕ ಕ್ಷೇತ್ರದಲ್ಲಿ ನಮ್ಮ ದೇಶ ಒಂದು ಹೆಜ್ಜೆ ಮುಂದಿದೆ ಎಂದರು.ಈ ಸಂದರ್ಭದಲ್ಲಿ ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪನ್ಹಾಲದ ಬಾಹ್ಯಾಕಾಶ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಮತ್ತು ಸಂಯೋಜಕರಾಗಿರುವ ಸಂಪನ್ಮೂಲ…
ಲೇಖನ:ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ದೇಶದಲ್ಲಿ ರಾಜರ ಆಳ್ವಿಕೆಯ ಕಾಲದಲ್ಲಿ ಪ್ರೆಗಳ ನಡುವಿನ ಒಗ್ಗಟ್ಟಿನ ಕೊರತೆ ಮತ್ತು ಪ್ರಜೆಗಳ ಒಳಗೇ ಇದ್ದ ಜಾತೀಯತೆ ಮತ್ತು ಪರಸ್ಪರ ದ್ವೇಷ ಮತ್ತು ಅಸೂಯೆಯ ಕಾರಣದಿಂದ ವಿದೇಶೀಯರು ಇಲ್ಲಿನ ರಾಜರನ್ನು ಸೋಲಿಸಿ ತಾವು ಸಧಿಪತ್ಯವನ್ನು ಸ್ಥಾಪಿಸಿದರು. ೧೯೪೭ರ ಪೂರ್ವದ ವರೆಗೂ ಭಾರತವು ಪರಕೀಯರ ದಾಸ್ಯಕ್ಕೆ ಒಳಪಟ್ಟಿತ್ತು. ಈ ದೇಶದ ಸಾವಿರಾರು ನಾಯಕರ ಮತ್ತು ಲಕ್ಷೋಪಲಕ್ಷ ಪ್ರಜೆಗಳ ತ್ಯಾಗ ಮತ್ತು ಬಲಿದಾನಗಳ ಫಲವಾಗಿ ೧೯೪೭ ಆಗಸ್ಟ್ ೧೪ರ ಮಧ್ಯರಾತ್ರಿ ಈ ದೇಶವು ಪರಕೀಯರ ದಾಸ್ಯದಿಂದ ಬಿಡುಗಡೆಯನ್ನು ಕಂಡಿತು. ಇಂದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿದ ದೇಶವಾಗಿ ಭಾರತವು ಗುರುತಿಸಿಕೊಂಡಿದೆ.ಅಂಬೇಡ್ಕರ್ ಹೇಳಿದ ‘ಇತಿಹಾಸವನ್ನು ಮರೆತವರು ಎಂದಿಗೂ ಇತಿಹಾಸವನ್ನು ಸೃಷ್ಟಿಸಲಾರರು’ ಎಂಬ ಮಾತು ಖಂಡಿತಾ ಸತ್ಯ. ಸ್ವಾತಂತ್ರ್ಯದ ಧ್ಯೋತಕವಾಗಿ ದೇಶಕ್ಕೆ ದೊರೆತ ‘ಸೆಂಗೋಲ್’ ಎನ್ನುವ ದಂಡ ಇದೀಗ ದೇಶದ ಸಂಸತನ್ನು ಪ್ರವೇಶಿಸಿ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಶಾಲೆಗಳಲ್ಲಿ ಮೈದಾನಗಳ ಅಭಿವೃದ್ಧಿ ಅಗತ್ಯವಿದೆ. ಅದಕ್ಕಾಗಿ ಮನರೇಗಾ ಯೋಜನೆಯಡಿ ತಾಲ್ಲೂಕಿನ ಆಯ್ದ ಶಾಲೆಗಳಲ್ಲಿ ಗ್ರಾಮ ಪಂಚಾಯ್ತಿಯಡಿ ಮೈದಾನ ನಿರ್ಮಿಸಲಾಗುವುದು ಎಂದು ನಿಡಗುಂದಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ ವಂದಾಲ ಭರವಸೆ ನೀಡಿದರು.ಅವರು ಸ್ಥಳಿಯ ಆಲಮಟ್ಟಿಯ ಎಂ.ಎಚ್.ಎಂ ಪ್ರೌಢಶಾಲೆಯಲ್ಲಿ ಜಿಲ್ಲಾಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪುರ, ಕ್ಷೇತ್ರಶಿಕ್ಷಣಾಧಿಕಾರಿಗಳು, ಕ್ಷೇತ್ರಸಮನ್ವಯಾಧಿಕಾರಿಗಳು ಬಸವನಬಾಗೇವಾಡಿ ಹಾಗೂ ಮಂಜಪ್ಪ ಹರ್ಡೇಕರ ಸ್ಮಾರಕ ಪ.ಪೂ.ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ಸಹಯೋಗದೊಂದಿಗೆ ನಡೆದ೨೦೨೪-೨೫ನೇ ಸಾಲಿನ ಬಸವನಬಾಗೇವಾಡಿ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದರು.ವಿದ್ಯಾರ್ಥಿ ದೆಸೆಯಲ್ಲಿ ಮಕ್ಕಳು ಮೋಬೈಲ್ ಮತ್ತು ಟಿವಿಗಳನ್ನು ತ್ಯಜಿಸಿ ದೇಶೀ ಕ್ರೀಡೆಗಳನ್ನು ಆಡುವದರಿಂದ ಮಕ್ಕಳಲ್ಲಿ ಉತ್ತಮ ದೈಹಿಕ ಬೆಳವಣಿಗೆಯಾಗುತ್ತದೆ.ಕ್ರೀಡೆಗಳೊಂದಿಗೆ ಪಠ್ಯವೂ ಮುಖ್ಯವಾಗಿದ್ದು ಮಕ್ಕಳು ಕ್ರಿಕೆಟ್ಗಳಂತಹ ವಿದೇಶೀ ಕ್ರೀಡೆಗಳಲ್ಲಿ ಸಮಯ ವ್ಯರ್ಥಮಾಡದೆ ಓದುವ ಕಡೆಗೂ ಗಮನಹರಿಸಬೇಕು ಎಂದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಮಾತನಾಡಿ, ಆಟವೂ ಒಂದು ಅದ್ಭುತ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಟಿಪ್ಪರನ ಹಿಂಬದಿ ಸಿಲುಕಿ ಎರಡೂ ಕೈಗಳಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ತಲುಪುವ ಮುನ್ನವೇ ಯುವಕನೋರ್ವ ಪ್ರಾಣ ಕಳೆದುಕೊಂಡ ಘಟನೆ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಬಳಿ ನಡೆದಿದೆ.ಮೃತ ದುರ್ದೈವಿ ಯುವಕನನ್ನು ವಿನೋದ ತಿಪ್ಪಣ್ಣ ಶಹಾಪೂರ(೧೯) ಎಂದು ಗುರುತಿಸಲಾಗಿದೆ. ಬಸವೇಶ್ವರ ವೃತ್ತದಿಂದ ನೇಬಗೇರಿ ಗ್ರಾಮದತ್ತ ಹೊರಟಿದ್ದ ಟಿಪ್ಪರ್ ಗೆ ನೇಬಗೇರಿ ಕಡೆಯಿಂದ ದ್ವಿಚಕ್ರ ವಾಹನ ಸವಾರಿ ಮಾಡುತ್ತ ಬರುತ್ತಿದ್ದ ವಿನೋದ ಪಟ್ಟಣದ ಲಕ್ಷ್ಮಿ ಚಿತ್ರ ಮಂದಿರದ ಬಳಿ ಬಂದಾಗ ಟಿಪ್ಪರ್ ನ ಮಧ್ಯಭಾಗಕ್ಕೆ ಕೈ ತಗುಲಿ ಬೈಕ್ ನಿಂದ ಕೆಳಗೆ ಬಿದ್ದು ಮತ್ತೊಂದು ಕೈ ತೋಳಿನ ಮೇಲೆ ಟಿಪ್ಪರ್ ನ ಹಿಂಬದಿ ಚಕ್ರ ಹರಿದು ಗಂಭೀರ ಸ್ವರೂಪದ ಗಾಯವಾಗಿದೆ ಎನ್ನಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಕ್ರೈಂ ಪಿಎಸ್ಐ ಆರ್.ಎಲ್.ಮನ್ನಾಬಾಯಿ ಗಾಯಾಳುವನ್ನು ಅಟೋ ಮೂಲಕ ಸ್ಥಳೀಯ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತೆರಳುವಾಗ ಮಾರ್ಗ ಮಧ್ಯೆ ಗಾಯಾಳು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
