Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ತಾಯಂದಿರ ಸಭೆ ಹಮ್ಮಿಕೊಳ್ಳಲಾಯಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀಮತಿ ಶಾರದಾಭಾಯಿ ಲಮಾಣಿ ಅವರು ಸರ್ಕಾರದಿಂದ ಸಿಗುವ ಕುಟುಂಬ ಕಲ್ಯಾಣ ವಿಧಾನಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.ಮುಖ್ಯ ಅತಿಥಿಗಳಾಗಿ ಮಾತನಾಡಿದ ಫಾರೂಕ್ ವಲ್ಲಿಭಾಯಿ, ಪೌಷ್ಟಿಕ ಆಹಾರದ ಬಗ್ಗೆ ಮತ್ತು ಪೌಷ್ಟಿಕ ಆಹಾರ ಕೊರತೆಯಿಂದ ಬರುವ ರೋಗಗಳ ಬಗ್ಗೆ ವಿವರಿಸಿ ಕ್ಷಯರೋಗದ ಬಗ್ಗೆ ತಾಯಂದಿರಿಗೆ ತಿಳಿಸಿದರು.ಕ್ಷಯರೋಗ ಅನ್ನೋದು ಸಾಂಕ್ರಾಮಿಕ ರೋಗ ಮೈಕೋ ಬ್ಯಾಕ್ಟಿರಿಯಂ ಎಂಬ ಸೂಕ್ಷ್ಮಾಣು ಜೀವಿಯ ಮುಖಾಂತರ ಬರುತ್ತದೆ. ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಕಫದಲ್ಲಿ ರಕ್ತ ಬರುವುದು, ತೂಕ ಕಡಿಮೆಯಾಗುವುದು, ಹಸಿವು ಆಗದೇ ಇರುವುದು, ಮೇಲಿಂದ ಮೇಲೆ ಜ್ವರ ಬರುವುದು ಮತ್ತು ಎದೆ ನೋವು ಕೂಡ ಈ ರೋಗದ ಲಕ್ಷಣಗಳಾಗಿದ್ದು, ಕ್ಷಯರೋಗದ ಲಕ್ಷಣವಿದ್ದರೆ ಕೂಡಲೇ ವೈದ್ಯರ ಸಲಹೆ ಪಡೆದು ಪರೀಕ್ಷಿಸಿಕೊಳ್ಳಬೇಕು, ಒಂದು ವೇಳೆ ಖಚಿತವಾದರೆ ಸಂಪೂರ್ಣವಾಗಿ ಚಿಕಿತ್ಸೆ ಉಚಿತವಾಗಿರುತ್ತದೆ. ಭಾರತ ಸರ್ಕಾರ ೨೦೨೫ಕ್ಕೆ ಕ್ಷಯ…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ದಲಿತ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಹನುಮಂತ ಯಳಸಂಗಿ ಅವರನ್ನು ಏಳಿಗೆ ಸಹಿಸದವರು ಷಡ್ಯಂತ್ರ ರಚಿಸಿ ಜೈಲು ಪಾಲಾಗುವಂತೆ ಮಾಡಿದ್ದು ಕೂಡಲೇ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಬೇಕೆಂದು ದಲಿತ ಸೇನೆ ತಾಲೂಕು ಅಧ್ಯಕ್ಷ ಮಹಾಂತೇಶ ಬಳೂಂಡಗಿ ಹೇಳಿದರು.ಅವರು ಪಟ್ಟಣದ ತಹಸೀಲ್ ಕಛೇರಿಯಲ್ಲಿ ತಹಸೀಲ್ದಾರ ಸಂಜೀವಕುಮಾರ ದಾಸರ್ ಅವರ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡುತ್ತಾ, ಕಲಬುರಗಿ ನಗರದಲ್ಲಿರುವ ಕೆಲವು ಪುಡಿ ರೌಡಿಗಳು, ಮಿಟರ್ ಬಡ್ಡಿ ಆಡುವವರು, ಸಮಾಜಘಾತುಕ ಕೆಲಸ ಮಾಡುವವರು ಕೂಡಿಕೊಂಡು ಷಡ್ಯಂತ್ರ ರಚಿಸಿ ನ್ಯಾಯವಾದಿ, ದಲಿತ ಸೇನೆ ರಾಜ್ಯಾಧ್ಯಕ್ಷ ಹನುಮಂತ ಯಳಸಂಗಿ ಅವರನ್ನು ಜೈಲಿಗೆ ಹೋಗುವಂತೆ ಮಾಡಿದ್ದಾರೆ. ಆದರೆ ಪೊಲೀಸ್ ಇಲಾಖೆ ಸತ್ಯಾಸತ್ಯತೆ ಪರಿಶೀಲನೆ ಮಾಡಬೇಕು. ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುವ ಹನುಮಂತ ಯಳಸಂಗಿ ಅವರನ್ನು ಬಿಡುಗಡೆಗೊಳಿಸಿ ಷಡ್ಯಂತ್ರ ರಚಿಸಿದವರನ್ನು ಬಂಧಿಸಿ ರಾಜ್ಯ ನೋಡುವ ರೀತಿಯಲ್ಲಿ ಕಠಿಣ ಕಾನೂನು ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ತಾಲೂಕಿನ ಅರ್ಜುಣಗಿ ತಾಂಡಾದಿಂದ ಬಡದಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಡಾಂಬರ್ ರಸ್ತೆ ನಿರ್ಮಾಣವಾದ ಒಂದು ವರ್ಷದಲ್ಲೇ ಹಾಳಾಗಿ ಹೋಗಿದ್ದು ಸಂಬಂಧ ಪಟ್ಟವರು ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಎರಡು ಗ್ರಾಮಸ್ಥರು ಆಗ್ರಹಿಸಿದ್ದಾರೆ.ಅರ್ಜುಣಗಿ ತಾಂಡಾದಿಂದ ಬಡದಾಳ ಗ್ರಾಮದ ಮಾರ್ಗವಾಗಿ ೨ ಕಿ.ಮೀ ರಸ್ತೆ ನಿರ್ಮಿಸಲಾಗಿದೆ. ಈ ರಸ್ತೆ ನಿರ್ಮಿಸಿ ಒಂದು ವರ್ಷವಾಗಿಲ್ಲ ಈಗಲೇ ರಸ್ತೆಗೆ ಹಾಕಿರುವ ಡಾಂಬರ್ ಕಿತ್ತು ಹೋಗಿದ್ದು ಸುಗಮ ಸಂಚಾರ ಸಾಧ್ಯವಾಗುತ್ತಿಲ್ಲ. ಅರ್ಜುಣಗಿ ಗ್ರಾಮಸ್ಥರು, ವಿದ್ಯಾರ್ಥಿಗಳು ತಾಂಡಾ ನಿವಾಸಿಗಳು ಆಸ್ಪತ್ರೆಗೆ, ಸಂತೆಗಾಗಿ ಮತ್ತು ಶಾಲಾ, ಕಾಲೇಜಿನ ವ್ಯಾಸಂಗಕ್ಕಾಗಿ ಬಡದಾಳ ಗ್ರಾಮಕ್ಕೆ ನಿತ್ಯ ಹೋಗಿ ಬರುತ್ತಾರೆ. ಅಲ್ಲದೆ ರೈತರು ತಮ್ಮ ಹೊಲಗದ್ದೆಗಳಿಗೆ ಹೋಗುತ್ತಾರೆ. ಇವರಿಗೆಲ್ಲ ಈ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವಾಗ ನರಕಯಾತನೆ ಅನುಭವಿಸದಂತಾಗುತ್ತಿದೆ. ಕೂಡಲೇ ಸಂಬಂಧ ಪಟ್ಟವರು ಹಾಳಾದ ರಸ್ತೆ ಸುಧಾರಿಸುವ ಕೆಲಸ ಮಾಡಬೇಕು ಎಂದು ಎರಡು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಪಟ್ಟಣದ ಶರಣ ರೇವಣಸಿದ್ದ ಹೂಗಾರ ಅವರ ಮನೆಯಲ್ಲಿ ಶರಣ ಹೂಗಾರ ಮಾದಣ್ಣನವರ ಜಯಂತಿ ಆಚರಣೆ ಮಾಡಲಾಯಿತು.ತಹಸೀಲ್ದಾರ ಸಂಜೀವಕುಮಾರ ದಾಸರ್ ಮಾತನಾಡುತ್ತಾ ೧೨ನೇ ಶತಮಾನದಲ್ಲಿ ಕಾಯಕ ತತ್ವದಡಿಯಲ್ಲಿ ಬದುಕು ನಡೆಸಿದ ಶರಣ ಹೂಗಾರ ಮಾದಣ್ಣನವರು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ಇಂದು ಅವರ ಅನುಯಾಯಿಗಳು ಅವರ ತತ್ವಾದರ್ಶಗಳ ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದರು.ಶಿಕ್ಷಕ ಬಾಪುಗೌಡ ಬಿರಾದಾರ ಮಾತನಾಡುತ್ತಾ ಬಸವಾದಿ ಶರಣರು ಯಾವುದೇ ಒಂದು ಸಮಾಜಕ್ಕೆ ಸೀಮಿತರಾದವರಲ್ಲ. ಅವರು ಎಲ್ಲರಿಗೂ ಒಳಿತಾಗುವಂತೆ ಮಾದರಿ ಜೀವನ ನಡೆಸಿದ್ದಾರೆ ಎಂದ ಅವರು ಹೂಗಾರ ಸಮಾಜ ಎಲ್ಲಾ ಸಮಾಜಗಳೊಂದಿಗೆ ಸಹಬಾಳ್ವೆಯಿಂದ ಬದುಕುವ ಸಮಾಜವಾಗಿದೆ. ಹೂಗಾರ ಮಾದಣ್ಣ ಶರಣರು ಕೇವಲ ಒಂದು ಸಮಾಜಕ್ಕೆ ಸೀಮಿತರಾದ ಶರಣರಲ್ಲ, ಅವರ ತತ್ವಾದರ್ಶಗಳು ಎಲ್ಲರಿಗೂ ಪ್ರೇರಣೆಯಾಗಿವೆ ಎಂದರು.ಪುರಸಭೆ ಮುಖ್ಯಾಧಿಕಾರಿ ವಿಜಯಮಹಾಂತೇಶ ಹೂಗಾರ, ಆಶಾಕಿರಣ ಸೇವಾಸಂಸ್ಥೆಯ ಅಧ್ಯಕ್ಷೆ ಪ್ರಭಾವತಿ ಮೇತ್ರಿ, ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಬಸವರಾಜ ಚಾಂದಕವಟೆ, ಹಿರಿಯ ಸಾಹಿತಿ…

Read More

ಲಾಲ್ ಬಹದ್ದೂರಶಾಸ್ತ್ರಿ ಹಾಗೂ ಬಸವ ಸಾಗರ ಜಲಾಶಯಗಳ ನೀರು ಮರು ಹಂಚಿಕೆ ಮಾಡಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅವಳಿ ಜಲಾಶಯಗಳ ನೀರು ಮರು ಹಂಚಿಕೆ ಹೋರಾಟ ಸಮೀತಿ ಜಿಲ್ಲಾ ಘಟಕ ವಿಜಯಪುರ ವತಿಯಿಂದ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರಿಗೆ ಒತ್ತಾಯಪಡಿಸುವಂತೆ ಆಗ್ರಹಿಸಿ ಅವಳಿ ಜಲಾಶಯಗಳ ಹೋರಾಟ ಸಮಿತಿ ವತಿಯಿಂದ ರೈತ ಮುಖಂಡರುಗಳು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ರವಿವಾರ ಅವರ ಸ್ವಗ್ರಹದಲ್ಲಿ ಮನವಿ ಸಲ್ಲಿಸಿದರು.ಈ ವೇಳೆ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಅವರು ಮಾತನಾಡಿ, ಆಲಿಮಟ್ಟಿ ಜಲಾಶಯದ ನಿರ್ಮಾಣಕ್ಕೆ ಫಲವತ್ತಾದ ಬಹುತೇಕ ಭೂಮಿಯನ್ನು ಕಳೆದುಕೊಂಡಿರುವ ಕೃಷ್ಣೆಯ ಮಕ್ಕಳು ಅನಾಥರಾಗಿ ದಿಕ್ಕು ತೊಚದಂತಾಗಿದ್ದಾರೆ, ಭೂಮಿ ಕಳೆದುಕೊಂಡವರು ನಮ್ಮ ಜಿಲ್ಲೆಯವರು ಆದರೆ ಇದರ ಸಂಪೂರ್ಣ ಫಲ ಉಣ್ಣುತ್ತಿರುವವರು ನೆರೆಯ ಬಸವ ಸಾಗರ ಆಣೆಕಟ್ಟು ಹಾಗೂ ಆಂದ್ರದ ಜನರು, ಆದ್ದರಿಂದ ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಸ್ತೂರಿ ಕಾಲೊನಿ ನಿವಾಸಿ, ಸಮರವಾಣಿ ಕನ್ನಡ ದಿನಪತ್ರಿಕೆಯ ಸಂಪಾದಕ ರಜಾಕ್ ಬಾಗೇವಾಡಿ ಅವರ ತಂದೆ ಇಬ್ರಾಹಿಂಸಾಬ ಬಾಗೇವಾಡಿ (೮೨) ಅವರು ಭಾನುವಾರ ನಿಧನರಾದರು.ಮೃತರಿಗೆ ಸಂಪಾದಕ ರಜಾಕ್ ಬಾಗೇವಾಡಿ ಸೇರಿದಂತೆ ಓರ್ವ ಪುತ್ರ, ಪತ್ನಿ, ಹಾಗೂ ಮೂವರು ಪುತ್ರಿಯರಿದ್ದಾರೆ.ಮೃತರ ಅಂತ್ಯಕ್ರಿಯೆಯು ಉಕ್ಕಲಿ ರಸ್ತೆಯಲ್ಲಿರುವ ಖಬರಸ್ಥಾನದಲ್ಲಿ ಭಾನುವಾರ ರಾತ್ರಿ ೮ ಗಂಟೆಗೆ ನೆರವೇರಿತು.

Read More

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರದ ಮಹತ್ವಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿಯಿಂದ ರಾಜ್ಯದ ಎಲ್ಲಾ ವರ್ಗದವರ ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸದಂತಹ ಹಲವು ರೂಪದಲ್ಲಿ ಸಹಕಾರಿಯಾಗಿದ್ದು, ಅರ್ಹರಿಗೂ ಈ ಯೋಜನೆಗಳ ಲಾಭ ದೊರಕಿಸಿ ಯಾರೂ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ ಪಾಟೀಲ ಹೇಳಿದರು.ಅವರು ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾ ಪಂಚಾಯತಿಯ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಕಳೆದ ಬಾರಿಯ ನಮ್ಮ ಸರ್ಕಾರದ ಅವಧಿಯಲ್ಲಿ ನೀಡಿದ ೧೬೫ ಭರವಸೆಯಲ್ಲಿ ೧೫೮ ಭರವಸೆಗಳನ್ನು ಈಡೇರಿಸಿದ್ದಲ್ಲದೇ, ಹೊಸದಾಗಿ ೩೦ ಯೋಜನೆಗಳನ್ನು ಸೇರಿಸಿ ೧೮೮ ಭರವಸೆಗಳನ್ನು ಪೂರೈಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ನಮ್ಮ…

Read More

ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಸಮೀಪದ ನಾಗನೂರ ಗ್ರಾಮದ ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಜರುಗಿದ ಹಿರೇಪಡಸಲಗಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಹಲವು ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಹಿರೇಪಡಸಲಗಿ ಸಿ.ಆರ್.ಪಿ. ಆರ್.ಎಚ್.ಮುದ್ನೂರ, ಶಿಕ್ಷಣ ಸಂಯೋಜಕರಾದ ಎಸ್.ವಿ.ವಿಜಾಪೂರ, ಮಹಾಂತೇಶ ಚವ್ಹಾಣ, ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಅನಂತಪೂರ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಆರ್.ಎಸ್.ದೇಸಾಯಿ ಇತರರನ್ನು ಕಾರ್ಯಕ್ರಮದಲ್ಲಿ ಸಂಘಟಕರು ಶಾಲು ಹೊದಿಸಿ ಗೌರವಿಸಿದರು.

Read More

ನಾಗನೂರ ಗ್ರಾಮದಲ್ಲಿ ಪ್ರತಿಭಾ ಕಾರಂಜಿ | ಕಲೋತ್ಸವ ಕಲರವ | ಮಕ್ಕಳ ನೃತ್ಯ, ವೇಷ ಭೂಷಣ ವೈಭವ ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಮುಗ್ದ ಮನಸ್ಸಿನ ಮಕ್ಕಳ ಮನಭಾವದಲ್ಲಿ ಹುದುಗಿರುವ ಕಲಾ,ಕೌಶಲ್ಯದ ಸುಪ್ತಾವಸ್ಥೆಯ ಪ್ರತಿಭೆ ಹೊರಗಟ್ಟಲು ಪ್ರತಿಭಾ ಕಾರಂಜಿ, ಕಲೋತ್ಸವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಹಿರೇಪಡಸಲಗಿ ವಲಯದ ಸಿ.ಆರ್.ಪಿ. ರಾಚಣ್ಣ ಹಣಮಂತ ಮುದ್ನೂರ ಹೇಳಿದರು.ಸಮೀಪದ ನಾಗನೂರ ಗ್ರಾಮದ ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಪಂ ಬಾಗಲಕೋಟ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾಯಾ೯ಲಯ ಜಮಖಂಡಿ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಹಿರೇಪಡಸಲಗಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಪ್ರತಿ ಮಗುವಿನಲ್ಲಿ ಒಂದಿಲ್ಲೊಂದು ರೀತಿಯ ಕೌಶಲ್ಯಗಳಿವೆ. ಹಲ ಮಕ್ಕಳು ತಮ್ಮಲ್ಲಿ ಅಡಗಿರುವ ಪ್ರತಿಭೆ ಹೊರಹಾಕಲು ಭಯ ಪಡುತ್ತಾರೆ. ಅಧೈರ್ಯದಿಂದ ಹಿಂಜರಿದು ಕಲಾತ್ಮಕ ಕಲಾ, ಕಲೆ ಕಮರಿಸಿಕೊಂಡು ದೂರುಳಿಯುತ್ತಲ್ಲಿದ್ದಾರೆ. ಇಂಥ ಯುವ ಮಕ್ಕಳ…

Read More

ರಾಷ್ಟ್ರಶಕ್ತಿ ಇನ್‌ವ್ಹೆಸ್ಟ್ ಕೋ- ಆರ್ಡಿನೇಶನ್ ಕಮೀಟಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಸಿಎಂ ಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿವಿಧ ಕಂಪನಿಗಳಿಂದ ವಂಚನೆಗೆ ಒಳಗಾದ ರಾಜ್ಯದ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ರಾಷ್ಟ್ರಶಕ್ತಿ ಇನ್‌ವ್ಹೆಸ್ಟ್ ಕೋ- ಆರ್ಡಿನೇಶನ್ ಕಮೀಟಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.ಇದೇ ಸಂದರ್ಭದಲ್ಲಿ ರಾಷ್ಟ್ರಶಕ್ತಿ ಸಂಘಟನೆ ಜಿಲ್ಲಾಧ್ಯಕ್ಷ ಲಕ್ಷ್ಮೀಪುತ್ರ ಕಿರನಳ್ಳಿ ಮಾತನಾಡಿ, ೨೦೧೪ ರಲ್ಲಿ ಕೇಂದ್ರ ಸರಕಾರ ದೇಶದ ೧೮೫ ಕ್ಕಿಂತ ಹೆಚ್ಚು ಹಣಕಾಸು ಹಾಗೂ ವಿವಿಧ ಉದ್ಯಮ ಮಾಡುತ್ತಿರುವ ಖಾಸಗಿ ಕಂಪನಿಗಳನ್ನು ಏಕಾಏಕಿ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಈ ಅನ್ಯಾಯದ ಕುರಿತು ಪಿಎಸಿಎಲ್, ಪ್ಯಾನಕಾರ್ಡ್ ಕ್ಲಬ್, ಅಗ್ರಿಗೋಲ್ಡ, ಸಮೃದ್ಧಿ ಜೀವನ ಹೀಗೆ ನಾನಾ ಕಂಪನಿಗಳ ಗ್ರಾಹಕರು ಕೋರ್ಟ್ ಮೆಟ್ಟಲೇರಿದವು. ವಿಚಾರಣೆ ನಡೆಸಿದ ಕೋರ್ಟ್ ಬಹುಸಂಖ್ಯಾತ ಕಂಪನಿಗಳ ಗ್ರಾಹಕರ ಪರವಾಗಿ ತೀರ್ಪು ನೀಡಿದೆ. ತೀರ್ಪಿನನ್ವಯ ಸೆಬಿ ಸಂಸ್ಥೆಗೆ ನಿರ್ದೇಶನ ನೀಡಿ ತೀರ್ಪು ಬಂದ ೩ ತಿಂಗಳ ಒಳಗೆ ವಂಚನೆ ಒಳಗಾದ…

Read More