Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಸೌಹಾರ್ದ ಸಹಕಾರಿಗಳ ಆರ್ಥಿಕ ಬೆಳವಣಿಗೆಯಲ್ಲಿ ಸಾಲಗಾರರು ಹಾಗೂ ಜಾಮೀನುದಾರರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ನಿರ್ದೇಶಕ ವೈ ಟಿ ಪಾಟೀಲ ಹೇಳಿದರುಪಟ್ಟಣದ ಶ್ರೀ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಸಂಘ ನಿಯಮಿತದ 17 ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಕಾಲಕ್ಕೆ ಸಾಲ ಪಡೆಯುವ ಸದಸ್ಯರಿಗೆ, ಜಾಮೀನು ಆಗುವ ಸದಸ್ಯರು ಸಾಲ ಮರುಪಾವತಿ ವಿಷಯದಲ್ಲಿ ಸಾಲಗಾರನಷ್ಟೇ ಜವಾಬ್ದಾರಿಯನ್ನು ಹೊಂದಿರುತ್ತಾನೆ ಎಂದವರು, ಸಾಲ ಬೇಡಿಕೆ ಸಮಯದಲ್ಲಿದ್ದ ಗ್ರಾಹಕರ ಉತ್ಸಾಹ, ಹುಮ್ಮಸ್ಸು, ಸಾಲ ಮರುಪಾವತಿ ಮಾಡುವವರೆಗೂ ಉಳಿಸಿಕೊಂಡಾಗ ಸೌಹಾರ್ದ ಸಹಕಾರಿಗಳು ನಿರೀಕ್ಷಿತ ಗುರಿ ತಲುಪಲು ಸಾಧ್ಯ. ಸಹಕಾರವೇ ಸೌಹಾರ್ದ ಸಹಕಾರಿಗಳ ಆರ್ಥಿಕತೆಗೆ ತಳಹದಿ ಎನ್ನುತ್ತಾ, ಪ್ರಸಕ್ತ ಸಾಲಿನ ಡಿವಿಡೆಂಡ್ 18% ಕೊಡುವುದಾಗಿ ಘೋಷಿಸಿದರು.ಮುಖ್ಯ ಕಾರ್ಯನಿರ್ವಾಹಕ ಸುರೇಶ ಯಾಳಗಿ 17 ನೇ ವಾರ್ಷಿಕ ಮಹಾಸಭೆಯ ನೋಟೀಸ್ ಓದಿ ಮಂಡಿಸಿದಾಗ ಸರ್ವ ಸದಸ್ಯರು ಚಪ್ಪಾಳೆ ತಟ್ಟುವ…

Read More

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಟೀಕೆಗೆ ಖಂಡನೆ |ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪತ್ರಿಕಾಗೋಷ್ಠಿ ನವದೆಹಲಿ: ಆರೆಸ್ಸೆಸ್-ಬಿಜೆಪಿಯ ವಿಷಕಾರಿ ಮನಸ್ಥಿತಿಯಿಂದ ತಾವು ಹೆದರುವುದಿಲ್ಲ ಎಂದು ಪ್ರತಿಪಾದಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಗೆ ಬೆದರಿಕೆಗಳ ವಿರುದ್ಧ ತಮ್ಮ ಪಕ್ಷವು ಆಂದೋಲನವನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ.ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಬಳಸಿದ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ವೈಫಲ್ಯವನ್ನು ಪ್ರಶ್ನಿಸಿದ್ದಾರೆ.ಶಾಸಕರು, ಸಂಸದರು ಸೇರಿದಂತೆ ಬಿಜೆಪಿ, ಆರ್‌ಎಸ್‌ಎಸ್ ನಾಯಕರು ನಮ್ಮ ನಾಯಕರ ನಾಲಿಗೆಯನ್ನು ಕತ್ತರಿಸುವ ಬಗ್ಗೆ ಮಾತನಾಡುತ್ತಾರೆ, ಸತ್ಯವನ್ನು ಮಾತನಾಡಿದ್ದಕ್ಕಾಗಿ ರಾಹುಲ್ ಗಾಂಧಿಯವರ ಮೇಲೆ ದಾಳಿ ನಡೆಯುತ್ತಿದೆ ಮತ್ತು ಅವರ ವಿರುದ್ಧ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗಿದೆ (ಅವರ ಅಜ್ಜಿ ಇಂದಿರಾ ಗಾಂಧಿ ವಿರುದ್ಧ ಇದನ್ನು ಮಾಡಲಾಗಿದೆ) ಎಂದು ಜಮ್ಮುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದರು. “ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಇಂತಹ ಪ್ರಚೋದನಕಾರಿ ಭಾಷಣಗಳನ್ನು ಪ್ರಧಾನಿ ನಿರ್ಲಕ್ಷಿಸಿದ್ದಾರೆ, ಅವರು ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಸೆ.೨೩ ರಿಂದ ೨೪ ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಸೆ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ಸಂಭ್ರಮ-೫೦ ರ ಆಚರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸುವರು.ಮಧ್ಯಾಹ್ನ ೧.೩೦ಕ್ಕೆ ವಿಜಯಪುರದಿಂದ ಹೊರಟು, ಸಂಜೆ ೪ಗಂಟೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಗುಡ್ಡಾಪೂರದಲ್ಲಿ ವಿಜಯಪುರದ ಅಪರ ಜಿಲ್ಲಾಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಶ್ರೀದಾನಮ್ಮ ದೇವಿ ದೇವಸ್ಥಾನದ ಸಭಾಂಗಣದಲ್ಲಿ ಸೆ.೩೦ರಂದು ನಡೆಯುವ ಕರ್ನಾಟಕ ಸಂಭ್ರಮ-೫೦ರ ಆಚರಣೆಗೆ ಸಂಬಂಧಿಸಿದಂತೆ ವೇದಿಕೆ ಮತ್ತು ಇತರ ವ್ಯವಸ್ಥೆಗಳ ಕುರಿತು ಸ್ಥಳ ಪರಿಶೀಲನೆ ಮತ್ತು ಪ್ರಮುಖ ಸಂಘ ಸಂಸ್ಥೆಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೭.೩೦ಕ್ಕೆ ಗುಡ್ಡಾಪೂರದಿಂದ ಹೊರಟು, ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಸೆ೨೪ ರಂದು ಬೆಳಿಗ್ಗೆ ೧೧ಗಂಟೆಗೆ ವಿಜಯಪುರದಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ…

Read More

ವಿಜಯಪುರ: ಗ್ರಾಮೀಣ ರೈತ ಉತ್ಪಾದಕರ ಕಂಪನಿಯ ಮೂರನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಸೆ.೨೧ರಂದು ನಗರದ ಕಾರ್ಪೋರೇಟ್ ಆಫೀಸ್‌ನಲ್ಲಿ ಜರುಗಿತು.ದಿವ್ಯ ಸಾನಿಧ್ಯ ವಹಿಸಿಕೊಂಡಂತ ನಬಾರ್ಡ್ ಸಂಸ್ಥೆಯ ಎಜಿಎಂ ವಿಕಾಸ್ ರಾಠೋಡ್ ಹಾಗೂ ಡಾ|| ಎಸ್ ಪಿ ಕುಂಬಾರ್ ಡಾ|| ಬಿ ಆರ್ ಅಥಣಿ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಶರಣಪ್ಪ ಉಕ್ಕಲಿ ಅವರ ನೇತೃತ್ವದಲ್ಲಿ ಕಂಪನಿಯ ಶೇರುದಾರರು ಹಾಗೂ ನಿರ್ದೇಶಕರು ಸೇರಿಕೊಂಡು ವಾರ್ಷಿಕ ವ್ಯಾಪಾರ ವಿನಿಮಯ ಬಗ್ಗೆ ಚರ್ಚಿಸಿದರುನಬಾರ್ಡಿನ ಎಜಿಎಂ ವಿಕಾಸ್ ರಾಠೋಡ್ ಅವರು ೨೦೨೩-೨೪ರ ವಾರ್ಷಿಕ ವರ್ಷದಲ್ಲಿ ೫೦ ಲಕ್ಷ ವ್ಯವಹಾರ ಮಾಡಿರುವುದು ಇರುತ್ತದೆ. ಇದೇ ರೀತಿ ಮುಂಬರುವ ೨೦೨೪-೨೫ ವಾರ್ಷಿಕ ವರ್ಷದಲ್ಲಿ ಕಂಪನಿಯು ಒಂದು ಕೋಟಿ ವರೆಗೆ ವ್ಯವಹಾರ ಮಾಡಬೇಕೆಂದು ಸಲಹೆ ನೀಡಿದರುಭೀಮನಗೌಡ ಇಂಚಗೇರಿ, ಜಯಶ್ರೀ ಕವಲಗಿ, ರೇಖಾ ಚಿಪಾಟಿ, ಉಮೇಶ ಬಿರಾದಾರ ಉಪಸ್ಥಿತರಿದ್ದರು.ಕಂಪನಿಯ ನಿರ್ದೇಶಕ ರಾಮಪ್ಪ ಪೂಜಾರಿ ಅವರ ನಿರೂಪಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಭರದಿಂದ ನಡೆಯುತ್ತಿದ್ದು, ಅಪರಾಧ‌ ಎಂದು ತಿಳಿದರೂ ಅಕ್ರಮ ಮದ್ಯ ಮಾರಾಟಗಾರರಿಗೆ ಕಾನೂನಿನ ಭಯವೇ ಇಲ್ಲ. ಇದಕ್ಕೆಲ್ಲ ಕಾರಣ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಎಂದು ದೂರಿದ ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಅಬಕಾರಿ ‌ನಿರೀಕ್ಷಕ ನಾಯಿಕ‌ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಗಣಪತಿ ರಾಠೋಡ ‌ಮಾತನಾಡಿದ ಅವರು, ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ವೈಫಲ್ಯ ಕಂಡಿದ್ದಾರೆ. ಸುಮಾರು 3 ಬಾರಿ‌ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಅದಕ್ಕಾಗಿ ಅಕ್ರಮ ಮದ್ಯ ಮಾರಾಟಗಾರರಿಗೆ ಕಾನೂನಿನ ಭಯ ಅಥವಾ ಅಧಿಕಾರಿಗಳ ಬಗ್ಗೆ ಕಿಂಚಿತ್ತೂ ಭಯವೇ ಇಲ್ಲ. ತಾಲ್ಲೂಕಿನ ಪ್ರತಿ ಹಳ್ಳಿಯಲ್ಲೂ ಅಕ್ರಮ ಮದ್ಯ ಹೆಚ್ಚಾಗಿ ಜನರ ಜೀವನ ಅಸ್ತವ್ಯಸ್ತತೆ ಕೂಡುತ್ತಿದೆ. ಅದಕ್ಕೆ ನೇರಹೊಣೆ ಅಬಕಾರಿ ಅಧಿಕಾರಿಗಳು ‌ಹೊಣೆ‌ ಹೊರಬೇಕಾಗುತ್ತದೆ. ಈ ಕೂಡಲೇ ಅಕ್ರಮ ಮದ್ಯ ತಡೆಗಟ್ಟಲು ಕಾನೂನು ಕ್ರಮಕೈಗೊಳ್ಳಬೇಕು. ಒಂದು…

Read More

ಮಲಘಾಣ: ತಂದೆತಾಯಿ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವನಬಾಗೇವಾಡಿ ತಾಲ್ಲೂಕಿನ ಮಲಘಾಣದ ನಿವೃತ್ತ ಶಿಕ್ಷಕ‌ ಲಿಂಗೈಕ್ಯ ಹಣಮಂತಗೌಡ ತಿಮ್ಮನಗೌಡ ಬಿರಾದಾರ ಹಾಗೂ ಅವರ ಧರ್ಮಪತ್ನಿ ಲಿಂ. ಕಸ್ತೂರಿ ಅವರ ಸ್ಮರಣಾರ್ಥ ಶಿಕ್ಷಣಪ್ರೇಮಿಗಳಾಗಿರುವ ಅವರ ಮೂವರು ಮಕ್ಕಳು ಕಳೆದ 6 ವರ್ಷಗಳಿಂದ ಗ್ರಾಮದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಪರಂಪರೆ ಮುಂದುವರೆಸಿಕೊಂಡು ಬಂದಿದ್ದು ಪ್ರೇರಣೀಯ ಸೇವೆಗೈಯುತ್ತಿದ್ದಾರೆ ಎಂದು ನಿವೃತ್ತ ಶಿಕ್ಷಕ ಎಸ್.ಎಸ್.ಗರಸಂಗಿ ಶ್ಲಾಘನೆ ವ್ಯಕ್ತಪಡಿಸಿದರು.ಮಲಘಾಣದ ಆರಾಧ್ಯದೈವ ಸದ್ಗುರು ಸದಾನಂದ ಶಿವಯೋಗಿಗಳ 52 ನೇ ಪುಣ್ಯಾರಾಧನೆ ಹಾಗೂ ಜಾತ್ರೋತ್ಸವ ನಿಮಿತ್ತ ಶುಕ್ರವಾರ ಶಿವಯೋಗಾಶ್ರಮದಲ್ಲಿ ಜರುಗಿದ ಧರ್ಮಸಭೆಯಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹಧನ ವಿತರಿಸುವ ವೇಳೆ ಅವರು ಮಾತನಾಡಿದರು. ನಿವೃತ್ತ ಶಿಕ್ಷಕ ಲಿಂ. ಹಣಮಂತಗೌಡ ತಿಮ್ಮನಗೌಡ ಬಿರಾದಾರ ಶಿಕ್ಷಕರಾಗಿದ್ದರೂ ಜೀವನದಲ್ಲಿ ಕಷ್ಟಪಟ್ಟು ಅವರ ಮೂವರು ಮಕ್ಕಳಾದ ಡಾ.ಮಹಾಂತೇಶ ಬಿರಾದಾರ, ಪಾಂಡುರಂಗ ಬಿರಾದಾರ ಹಾಗೂ ಡಾ.ವಾಸಂತಿ ಪಾಟೀಲ್ ಅವರಿಗೆ ನೈತಿಕ, ಮೌಲ್ಯಯುತ ಶಿಕ್ಷಣ ನೀಡಿ ಇಂದು ಎಲ್ಲರೂ ನೌಕರಸ್ಥರಾಗಿ ಉನ್ನತ ಸ್ಥಾನಮಾನದಲ್ಲಿದ್ದಾರೆ. ಸದ್ಯ ಮೂವರು…

Read More

ಉದಯರಶ್ಮಿ ದಿನಪತ್ರಿಕೆ ಢವಳಗಿ: ತಾಳಿಕೋಟಿ ತಾಲೂಕಿನ ಮೈಲೇಶ್ವರ ಗ್ರಾಮದ ಬ್ರೀಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಡ ಶಾಲೆಯಲ್ಲಿ ಸೆ.20 ನಡೆದ ಕ್ರೀಡಾಕೂಟದಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮದ ಬಸವ ಬಾಲ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 400 ಮೀಟರ್ ಓಟ, ಉದ್ದ ಜಿಗಿತ, ಮತ್ತು ಎತ್ತರ ಜಿಗಿತದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.ಎತ್ತರ ಜಿಗಿತದಲ್ಲಿ ಭಾಗವಹಿಸಿದ ಮಾರುತಿ ನಾಗರಬೆಟ್ಟ ಅವರು ದ್ವೀತಿಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗುವುದರ ಮುಖಾಂತರ ಗ್ರಾಮದ ಮತ್ತು ಶಾಲೆಯ ಕೀರ್ತಿ ತಂದಿರುತ್ತಾನೆ. ಮತ್ತು 400 ಮೀಟರ್ ಓಟದಲ್ಲಿ ಸಂಗಮೇಶ ಯಾಳವಾರ ತೃತೀಯ ಸ್ಥಾನ ಪಡೆದಿರುತ್ತಾನೆ. ಹಾಗೂ ಉದ್ದ ಜಿಗಿತದಲ್ಲಿ ಭಾಗವಹಿಸಿದ ನಿಂಗನಗೌಡ ಕರಡ್ಡಿ ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ಶನಿವಾರದಂದು ಮುಂಜಾನೆ ಶಾಲಾ ಸಮಯದಲ್ಲಿ ಶಾಲೆಯ ಮುಖ್ಯ ಗುರು ರಮೇಶ ಮೂಲಿಮನಿ ಮತ್ತು ತಾರನಾಳ ಶಾಲೆಯ ಮುಖ್ಯ ಗುರುಗಳಾದ ಡಿ ಬಿ ಬಿರಾದಾರ ಹಾಗೂ ಸಹ ಶಿಕ್ಷಕರು ಸೇರಿ ಸನ್ಮಾನಿಸಿ ಗೌರವಿಸಿದರು.ಇದೇ…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ರಾಜ್ಯದ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್‌ಕೆಸಿಸಿಐ) ನಿರ್ದೆಶಕರಾಗಿ ಗ್ರಾಮದ ಸಿ.ಎ. ರವೀಂದ್ರ ಎಸ್. ಕೋರೆ ಸತತವಾಗಿ ನಾಲ್ಕನೇಯ ಬಾರಿಗೆ ಆಯ್ಕೆಯಾಗಿದ್ದು ಗ್ರಾಮಸ್ಥರು ಹರ್ಷ ವಕ್ತಪಡಿಸಿದ್ದಾರೆ.ರವಿಂದ್ರ ಕೋರೆಯವರು ವಾಣಿಜ್ಯ ಮತ್ತು ಕಾನೂನು ಪದವಿಧರರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಚಿಮ್ಮಡ ಗ್ರಾಮದಲ್ಲಿಯೇ ಪೋರೈಸಿದ್ದು, ಪ್ರೌಢ ಹಾಗೂ ಪದವಿ ಶಿಕ್ಷಣವನ್ನು ಮಹಾಲಿಂಗಪುರದ ಎಸ್.ಸಿ.ಪಿ.(ಕೆಎಲ್‌ಇ) ಮಹಾವಿದ್ಯಾಲಯದಲ್ಲಿ ಪೋರೈಸಿದ್ದಾರೆ. ಇತ್ತೀಚೆಗೆ ನಡೆದ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಚುನಾವಣೆಯಲ್ಲಿ ವೃತ್ತಿಪರ ಕ್ಷೇತ್ರದಿಂದ ನೂತನ ನಿರ್ದೆಶಕರಾಗಿ ಆಯ್ಕೆಯಾಗಿದ್ದಾರೆ.ಉತ್ತರ ಕರ್ನಾಟಕ ಭಾಗದಿಂದ ಪ್ರಪ್ರಥಮ ಬಾರಿಗೆ ವೃತ್ತಿಪರ ಕ್ಷೇತ್ರದಿಂದ ಆಯ್ಕೆಯಾಗಿರುವ ರವೀಂದ್ರ ಕೋರೆ ಪತ್ರಿಕೆಯೊಂದಿಗೆ ಮಾತನಾಡಿ ಕಳೆದ ಬಾರಿ ಹುಬ್ಬಳ್ಳಿಯಲ್ಲಿ ರಾಜ್ಯದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಮೂಲಕ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಕಾರ್ಯಕ್ರಮಗಳನ್ನು ಸಂಸ್ಥೆಯ ಮೂಲಕ ಹಮ್ಮಿಕೊಂಡಿದ್ದು ಅದನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸುವ ಗುರಿಯನ್ನು ಹೊಂದಿದ್ದು ಶೀಘ್ರದಲ್ಲಿಯೇ ಇದರ ರೂಪುರೇಷೆ ತಯಾರಿಸಲಾಗುವುದೆಂದರು.ಗ್ರಾ. ಪಂ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ೨೦೨೪-೨೫ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಜಿಲ್ಲೆಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಸೆಪ್ಟೆಂಬರ್ ೩೦ರ ಒಳಗಾಗಿ sತಿ.ಞಚಿಡಿ.ಟಿiಞ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಅರ್ಜಿ ನಮೂನೆ ಹಾಗೂ ಅಗತ್ಯ ದೃಡೀಕೃತ ದಾಖಲೆಗಳ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೆಪ್ಟೆಂಬರ್ ೨೨ರಂದು ಮಧ್ಯಾಹ್ನ ೧೨ ಗಂಟೆಗೆ ಜಿಲ್ಲಾ ಪಂಚಾಯತಿಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭ ನಡೆಯಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್. ಎಂ. ರೇವಣ್ಣ, ಸಂಸದರಾದ ರಮೇಶ ಜಿಗಜಿಣಗಿ, ಶ್ರೀಮತಿ ಸುಧಾ ಮೂರ್ತಿ, ಕರ್ನಾಟಕ ರಾಜ್ಯ…

Read More