Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸೇವಾನಿರತ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಕ್ಟೋಬರ್ ೧೫ರಂದು ಕೊನೆಯ ದಿನವಾಗಿದ್ದು, ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ ಆವರಣ, ವಿಜಯಪುರ ದೂರವಾಣಿ ಸಂಖ್ಯೆ: ೦೮೩೫೨-೭೯೬೦೬೦ ಅಥವಾ ವೆಬ್ ಸೈಟ್ ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ಸವಿತಾ ಕಾಳೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೋಂದಾ ಸ್ವರ್ಣವಲ್ಲೀ ಶ್ರೀಗಳಾದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಶ್ರೀ ಭಗವದ್ಗೀತಾ ಅಭಿಯಾನದ ನಿಮಿತ್ಯ ವಿಜಯಪುರ ನಗರಕ್ಕೆ ಆಗಮಿಸಿದ್ದು ವಿವಿಧ ಸೋಂದಾ ಸ್ವರ್ಣವಲ್ಲೀ ಶ್ರೀಗಳಾದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಶ್ರೀ ಭಗವದ್ಗೀತಾ ಅಭಿಯಾನದ ನಿಮಿತ್ಯ ವಿಜಯಪುರ ನಗರಕ್ಕೆ ಆಗಮಿಸಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಸೆ.22, ರವಿವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ರುಕ್ಮಾಂಗದ ಪಂಡಿತರ ಸಮಾಧಿಯಲ್ಲಿ ನಡೆಯುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಹಾಗೂ ಶಿಕ್ಷಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4 ಗಂಟೆಗೆ ,ಇದೇ ಸ್ಥಳದಲ್ಲಿ ನಡೆಯುವ ವಿಜಯಪುರ ಜಿಲ್ಲೆಯ ಶ್ರೀ ಭಗವದ್ಗೀತಾ ಅಭಿಯಾನ ತಾಲೂಕಾ ಸಮಿತಿಗಳ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ.ಸೆ.23, ಸೋಮವಾರ ಸಂಜೆ 4 ಗಂಟೆಗೆ ಜಿಲ್ಲೆ ಸಮಿತಿ, ಕೋರ್ ಕಮಿಟಿ, ಹಾಗೂ ಮಹಿಳಾ ಸಮಿತಿ ಸಭೆಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ವಿಜಯಪುರ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಗನಗೌಡ ಪಾಟೀಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಲೆಮರೆಯ ಕಾಯಿಯಂತೆ ಹಗಲಿರಳೆನ್ನದೇ ಕಾಯಕದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದೇ ಆದರೆ ಜನರು ಮೆಚ್ಚುವುರಲ್ಲದೇ ಗೌರವ ಸನ್ಮಾನಗಳು ಲಭಿಸುವುದುಂಟು. ತೋರಿಕೆಗಾಗಿ ಅಥವಾ ಪ್ರಶಸ್ತಿಗಾಗಿ ಕಾಯಕ ಮಾಡದೇ ಮನಸ್ಸಿನ ತೃಪ್ತಿಗಾಗಿ ಕಾಯಕ ಮಾಡುವುದು ಲೇಸು ಎಂದು ಇತ್ತೀಚಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ವಿಜಯಪುರ ಜಿಲ್ಲಾ ಘಟಕದ ಕಚೇರಿಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪುರಸ್ಕೃತರ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರು, ರಾಜ್ಯ ಪ್ರಶಸ್ತಿ ಪುರಸ್ಕೃತರೂ ಆದ ಶ್ರೀ ಎಸ್. ವಿ. ಬುರ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಬೆಂಗಳೂರು ಇವರು ನೀಡುವ “ರಾಜ್ಯ ಮಟ್ಟದ ಕಾಯಕ ರತ್ನ” ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಸರೋಜಾ ಕೌಲಾಪುರ ಹಾಗೂ ಶಾಲಾ ಶಿಕ್ಷಣ ಇಲಾಖೆ, ವಿಜಯಪುರ ಇವರು ಶಿಕ್ಷಕ ದಿನಾಚರಣೆಯಂದು ನೀಡುವ “ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ” ಪ್ರಶಸ್ತಿ ಪುರಸ್ಕೃತರಾದ ಶ್ರೀ ರಾಜಕುಮಾರ ವಿ.ಚವ್ಹಾಣ ಇವರನ್ನು ಕರ್ನಾಟಕ ರಾಜ್ಯ ವೈಜ್ಞಾನಿಕ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸುಮಾರು 15 ವರ್ಷಗಳದಿಂದ ಕಾರ್ಯಕ್ರಮ ಆಯೋಜಿಸುತ್ತಾ ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಲಾಗುತ್ತದೆ. ಇದರಲ್ಲಿ ಮಕ್ಕಳ ಪ್ರತಿಭೆ ಹೊರಹೊಮ್ಮಿದರೆ ಸಾಧನೆ ಸಾಧ್ಯೆವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣ ಇಲಾಖೆ ಇಸಿಒ ಆನಂದ ಹುಣಸಿಗಿ ಹೇಳಿದರು.ತಾಲ್ಲೂಕಿನ ತಡವಲಗಾ ಗ್ರಾಮದ ಶ್ರೀ ಮರುಳಸಿದ್ದೇಶ್ವರ ಪ್ರೌಢ ಶಾಲೆಯ ಆವರಣದಲ್ಲಿ ನಮ್ಮ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಮುಗ್ಧ ಮನಸುಗಳ ಪ್ರತಿಭೆ ಅನಾವರಣವೇ ಪ್ರತಿಭಾ ಕಾರಂಜಿ ಶಿಕ್ಷಣ ಇಲಾಖೆ 1ರಿಂದ 12 ತರಗತಿ ವಿದ್ಯಾರ್ಥಿಗಳಿಗೆ ಜನಪದ ನೃತ್ಯ, ಧಾರ್ಮಿಕ ಪಠಣ, ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಭಾಷಾ ಕಂಠಪಾಠ, ಭರತನಾಟ್ಯ, ಚಿತ್ರಕಲೆ, ರಂಗೋಲಿ ಸ್ಪರ್ಧೆ, ಆಶುಭಾಷಣ, ಮಿಮಿಕ್ರಿ, ಕ್ವೀಜ್ ಹಾಗೂ ಕವಾಲಿ ಮೂಲಕ ಮುಗ್ಧ ಮನಸುಗಳ ಪ್ರತಿಭೆಯನ್ನು ಕ್ಲಸ್ಟರ್ ಹಂತದಲ್ಲಿ ಗುರುತಿಸಿ ಪ್ರೋತ್ಸಾಹಿಸುವಂತ ಕಾರ್ಯ ಮಹತ್ವದ ಕಾರ್ಯನಡೆಯುತ್ತಿದೆ. ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ ೩ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.”ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ಗ್ರಾಮೀಣ ವಲಯದ ಕಣ್ಣಮುಚನಾಳ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಮಾ. ಬಿಜ್ಜರಗಿ ಪ್ರಥಮ, ಸಿಂದಗಿ ತಾಲೂಕಿನ ಕೆರೂಟಗಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಾನಿಯಾ.ಅ.ಕೊಂಡಿ ದ್ವೀತಿಯ ಹಾಗೂ ಇಂಡಿ ತಾಲೂಕಿನ ಹಿರೇರೂಗಿ ಬೋಳೆಗಾಂವದ ಎಸ್.ಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಬೋರಮ್ಮ ತಾವರಖೇಡ ತೃತೀಯ ಸ್ಥಾನ ಪಡೆದಿದ್ದಾರೆ.ಪದವಿಪೂರ್ವ ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಕುಂಬಾರ ಪ್ರಥಮ, ವಿಜಯಪುರ ನಗರದ ಬಿಡಿಇ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಗಿಣಿ ಬಗಲಿ ದ್ವೀತಿಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೨ನೇ ತ್ರೈಮಾಸಿಕ ನಿರ್ವಹಣ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ೨೨ರಂದುದು ೧೧೦/೧೧ಕೆವಿ ವಿದ್ಯುತ್ ವಿತರಣ ಕೇಂದ್ರ ಭೂತನಾಳ ಹಾಗೂ ಸೆಪ್ಟೆಂಬರ್ ೨೪ರಂದು ೧೧೦/೧೧ ಕೆವಿ ವಿದ್ಯುತ್ ವಿತರಣ ಕೇಂದ್ರ ಕೆಐಎಡಿಬಿ, ಜುಮನಾಳ, ವಿಜಯಪುರ ಸಿಟಿ, ಮತ್ತು ೨೨೦/೧೧೦ ಕೆವಿ ಸ್ವೀಕರಣಾ ಕೇಂದ್ರದಿಂದ ಹೊರಹೋಗುವ ಎಲ್ಲಾ ೧೧ಕೆವಿ ವಿದ್ಯುತ್ ಮಾರ್ಗಗಳಿಗೆ ಸದರಿ ದಿನದಂದು ಬೆಳಿಗ್ಗೆ ೯ರಿಂದ ೩ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕು ಎಂದು ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್ ೨ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಯಿತು.ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಸಾರ್ವಜನಿಕರಿಗೆ ಮಹಾತ್ಮ ಗಾಂಧೀಜಿಯವರ ಬದುಕು, ಆದರ್ಶ ಹಾಗೂ ಅವರ ಜೀವನ ಸಂದೇಶದ ಅರಿವು ಮೂಡಿಸುವ ನಿಟ್ಟಿನಲ್ಲಿ ಅಕ್ಟೋಬರ್ ೧ ರಂದು ಬೆಳಗ್ಗೆ ೬.೩೦ಕ್ಕೆ ಸೈನಿಕ ಶಾಲೆಯ ಎದುರಿಗೆ ಇರುವ ಲಾಲ್ ಬಹದೂರ ಶಾಸ್ತಿç ಪುತ್ಥಳಿಯಿಂದ ಅಲ್ಲಾಪೂರ ಓಣಿಯವರೆಗೆ ಸೈಕಲ್ ಜಾಥಾ ಕಾರ್ಯಕ್ರಮ ಹಾಗೂ ಅಲ್ಲಾಪೂರ ಓಣಿ ಹಾಗೂ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ, ಅಕ್ಟೋಬರ್ ೨ರಂದು ಬೆಳಿಗ್ಗೆ ೬.೩೦ಕ್ಕೆ ತೊರವಿಯಲ್ಲಿ ಸ್ವಚ್ಚತಾ ಹಾಗೂ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ವಿವಿಧ ಸಂಘ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಎನ್, ಎಸ್, ಎಸ್ ಘಟಕ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಚಡಚಣ ಇವರ ಸಹಯೋಗದೊಂದಿಗೆ ಶ್ರೀ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶುಕ್ರವಾರದಂದು ರಾಷ್ಟ್ರೀಯ ಪೋಷಣಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಚಡಚಣ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾಹೇಬಗೌಡ ಜುಂಜರವಾಡ ಮಾತನಾಡಿ, ಪೋಷಕಾಂಶಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳ ಬೇಕು ಎಂದರು.ಮುಖ್ಯ ಅತಿಥಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಚಾರಕಿ ಶ್ರೀಮತಿ ಎನ್. ಆರ್. ಬಿರಾದಾರ ಅವರು ಮಾತನಾಡಿ, ಆರೋಗ್ಯಕಾರಿ ಹಾಗೂ ಪೋಷಕಾಂಶಗಳಿರುವಂತಹ ಆಹಾರ ಕ್ರಮವು ನಮ್ಮ ಆರೋಗ್ಯಕ್ಕೆ ಅತೀ ಅಗತ್ಯ, ಅದನ್ನು ನಾವು ದಿನನಿತ್ಯ ರೂಡಿಸಿಕೊಳ್ಳಬೇಕು ಎಂದರು.ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಮ್.ವಿ. ಕಟಗೇರಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎಸ್. ಎಸ್.ಚೋರಗಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಎನ್ . ಎಸ್.ಎಸ್. ಅಧಿಕಾರಿಗಳಾದ ಎಚ್.ಎಸ್. ಮಕಾನದಾರ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತೃತೀಯ ಲಿಂಗದವರು ಸಮಾಜದ ಮುಖ್ಯವಾಹಿನಿಗೆ ಬರಲು ಶಿಕ್ಷಣ ಮತ್ತು ಕೌಶಲ್ಯ ಆಧಾರಿತ ತರಬೇತಿಯನ್ನು ಪಡೆದುಕೊಳ್ಳಬೇಕೆಂದು ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ ಹೇಳಿದರು.ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಡಾ.ರೂಪಾ.ಕ.ನಾಯಕೋಡಿ ಅವರ ಐಸಿಎಸ್ಎಸ್ಆರ್ ಪಿ.ಡಿ.ಎಫ್ ಸಂಶೋಧನೆ ಅಂಗವಾಗಿ ನವಸ್ಪೂರ್ತಿ ಸರಕಾರೇತರ ಸಂಘದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ೧೦೦ ಜನ ತೃತಿಯ ಲಿಂಗದವರ “ಒಂದು ದಿನದ ಕೌಶಲ್ಯ ಆಧಾರಿತ ತರಬೇತಿಯನ್ನು” ಉದ್ಘಾಟಿಸಿ ಅವರು ಮಾತನಾಡಿದರು.ಮುಖ್ಯಅತಿಥಿಗಳಾಗಿದ್ದ ನಿಪ್ಪಾಣಿಯ ಕೆ.ಎಲ್.ಇ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಿ.ಬಿ. ಪೋಲಿಸಪಾಟೀಲ್ ಅವರು, ಮೂಢನಂಬಿಕೆಗಳಿಂದ ಹೊರಬಂದು ಶಿಕ್ಷಣ ಮತ್ತು ಕೌಶಲ್ಯ ಆಧಾರಿತ ತರಬೇತಿಯನ್ನು ಪಡೆದುಕೊಂಡಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ನವಸ್ಪೂರ್ತಿ ಸರಕಾರೇತರ ಸಂಸ್ಥೆಯ ನಿರ್ದೇಶಕ ಶೆಬ್ಬೀರ ಕಾಗಜಕೊಟಿ, ರುಢಸೆಟ್ ಸಂಸ್ಥೆ ನಿರ್ದೇಶಕ ಮುತ್ತಣ್ಣಾ ಧನಗಾರ, ಪ್ರೊ.ಬಿ.ಎಲ್.ಲಕ್ಕಣ್ಣನವರ, ಪ್ರೊ.ವೆಂಕೋಬಾ ನಾರಾಯಣ್ಣಪ್ಪ, ಪ್ರೊ.ವಿಷ್ಟು ಶಿಂದೆ, ಪ್ರೊ.ಅಶೋಕ ಸುರಪುರ, ಉಪಸ್ಥಿತರಿದ್ದರು.ಡಾ.ರೂಪಾ ನಾಯ್ಕೋಡಿ ಸ್ವಾಗತಿಸಿದರು. ಸಂಶೋಧನಾ ವಿಧ್ಯಾರ್ಥಿನಿ ಪದ್ಮಾವತಿ ಯತಗಲ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೆಣ್ಣು ಮಗುವನ್ನು ಸಂರಕ್ಷಿಸಿ, ಪೋಷಣೆ ಮಾಡಿ ಸುಶಿಕ್ಷಿತರನ್ನಾಗಿ ಮಾಡಿದರೆ ಲಿಂಗಾಧಾರಿತ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಅಂಗನವಾಡಿ ಕೇಂದ್ರದ ಹಿರಿಯ ಮೇಲ್ವಿಚಾರಕಿ ಪ್ರಮೀಳಾ ಕುಂದಗೋಳ ಹೇಳಿದರು.ಅವರು ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದ ಅಂಗನವಾಡಿ ಕೇಂದ್ರ-5 ರಲ್ಲಿ ಗ್ರಾಮ ಪಂಚಾಯಿತಿ, ಆರೋಗ್ಯ-ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಜಯಪುರ ಇವರ ಸಹಯೋಗದಲ್ಲಿ ಪಾಲಕರ ಸಭೆ,ಪೋಷಣ್ ಮಾಸಾಚಾರಣೆ, ‘ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ’ ಅಭಿಯಾನವನ್ನುಉದ್ಘಾಟಿಸಿ ಮಾತನಾಡಿದರು.ಹೆಣ್ಣು ಮಕ್ಕಳನ್ನು ಸಬಲೀಕರಣ ಮಾಡುವದೇ ಬೇಟಿ ಬಚಾವೊ,ಬೇಟಿ ಪಡಾವೋ ಯೋಜನೆ ಉದ್ದೇಶವಾಗಿದೆ ಎಂದು ಹೇಳಿದರು.ಹಿರಿಯ ಮೇಲ್ವಿಚಾರಕಿ ಪವಿತ್ರಾ ಪತ್ತಾರ ಮಾತನಾಡಿ,ಗರ್ಭಿಣಿಯರು, ಶಿಶುವಿನ ಬೆಳವಣಿಗೆ ಕುಂಠಿತ, ತೂಕ ಕೊರತೆ, ರಕ್ತಹೀನತೆ, ಕಡಿಮೆ ತೂಕದ ಶಿಶು ಸೇರಿದಂತೆ ಅಪೌಷ್ಟಿಕತೆ ಸಮಸ್ಯೆಯಿಂದ ಬಳಲುತ್ತಿರುವವರನ್ನು ಹೊರಕ್ಕೆ ತರಲು ಪೋಷಣ ಅಭಿಯಾನ ಪರಿಣಾಮಕಾರಿಯಾಗಿದೆ ಎಂದು ಹೇಳಿದರು.ಶಿಕ್ಷಕ ಸಂತೋಷ ಬಂಡೆ ಸಸಿಗೆ ನೀರುಣಿಸಿ ಮಾತನಾಡಿ,ಗಂಡು, ಹೆಣ್ಣಿನ ಅನುಪಾತ ಅವಲೋಕಿಸಿ ನಾವು ಎಚ್ಚೆತ್ತುಕೊಳ್ಳಬೇಕಿದೆ. ತನಗೆ ಗಂಡು ಮಗು ಬೇಕು ಎಂಬ ಆಸೆ…
