Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಎಂ ಆದ ಮೇಲೆ ಸಿದ್ದರಾಮಯ್ಯ ಹಿಟ್ಲರ್ ರೀತಿ ವರ್ತನೆ | ಅಲ್ಪಸಂಖ್ಯಾತರ ಓಲೈಕೆಗಾಗಿ ಪ್ರಜಾತಂತ್ರದ ಕಗ್ಗೊಲೆ | ಸಚಿವೆ ಶೋಭಾ ಆರೋಪ ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ. ಬಿಜೆಪಿಯ ಸಂಸದರು ಮತ್ತು ಶಾಸಕರ ಮೇಲೆ ಎಫ್ಐಆರ್ಗಳು ದಾಖಲಾಗುತ್ತಿವೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿಪಕ್ಷದ ನಾಯಕ ಹಾಗೂ ಕೇಂದ್ರದ ಸಚಿವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದರೂ ಕಾಂಗ್ರೆಸ್ ಶಾಸಕರ ಮೇಲೆ ಕ್ರಮ ಆಗಲಿಲ್ಲ. ಮಾಜಿ ಸಚಿವ ನಾಗೇಂದ್ರ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಆದರೆ ಎಸ್ಐಟಿ ಚಾರ್ಜ್ಶೀಟ್ನಲ್ಲಿ ಅವರ ಹೆಸರೇ ಇಲ್ಲ. ರಾಜ್ಯವನ್ನು ಏನು ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ ಎಂದು ಶೋಭಾ ಪ್ರಶ್ನಿಸಿದರು.ಕರ್ನಾಟಕವನ್ನು ನೀವೇನು ಮಾಡಲು ಹೊರಟಿದ್ದೀರಿ? ನಾಗಮಂಗಲದಲ್ಲಿ ಘಟನೆ ನಡೆಯಿತು. ಇತಿಹಾಸದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಗಣೇಶನನ್ನು…
ವಿಜಯಪುರದಲ್ಲಿ ಸಂಸ್ಕೃತಿ ಹಾಗೂ ಸ್ಚಚ್ಚತೆ ಸಂಗಮದ ಜಿಲ್ಲಾ ಯುವ ಮಹೋತ್ಸವ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆರೋಗ್ಯ ಜೀವನದ ಭಾಗ್ಯ, ಸ್ವಚ್ಚತೆ ಆರೋಗ್ಯದ ಬಾಗಿಲು ಎಂದು ನವದೆಹಲಿಯ ಲಾಡಲಿ ಫೌಂಡೇಶನ್ ರಾಷ್ಟ್ರೀಯ ಸಲಹೆಗಾರ ಡಾ.ಜಾವೀದ ಜಮಾದಾರ ಹೇಳಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಟ್ಯಾಂಡರ್ಡ್ ಚಾರ್ಟೆಡ್ ಸಿಎಸ್ ಆರ್ ಯೋಜನೆಯ ಪ್ರಾಯೋಜಕತ್ವ ಹಾಗೂ ನವದೆಹಲಿ ಲಾಡಲಿ ಫೌಂಡೇಶನ್, ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಯುವ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಚ್ಚತೆ ಆರೋಗ್ಯದ ಬೀಗದ ಕೈ ಇದ್ದಂತೆ, ಹೀಗಾಗಿ ಸ್ವಚ್ಚತೆ ಅರಿವು ಮೂಡಿಸಲು ಲಾಡಲಿ ಫೌಂಡೇಶನ್ ೧೦೦ ಜಿಲ್ಲೆಗಳಲ್ಲಿ ಈ ಮಹೋತ್ಸವ ಆಯೋಜಿಸಿದೆ, ಸಂಸ್ಕತಿ ಹಾಗೂ ಸ್ವಚ್ಚತೆ ನಮ್ಮ ಜೀವನದ ಭಾಗವಾಗಬೇಕು, ಹೀಗಾಗಿ ನಮ್ಮ ದೇಶದ ಭವ್ಯ ಸಂಸ್ಕೃತಿ ಪ್ರತಿಬಿಂಬಿಸುವ ಕಾರ್ಯಕ್ರಮದ ಮೂಲಕ ಸ್ವಚ್ಚತೆಯ ಬಗ್ಗೆ ೧೦೦ ಜಿಲ್ಲೆಗಳಲ್ಲಿ ಯುವ ಮಹೋತ್ಸವ ಆಯೋಜಿಸಲಾಗುತ್ತಿದೆ, ವಿಜಯಪುರ ಜಿಲ್ಲೆಯಲ್ಲಿ ಈ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರಕಿದೆ ಎಂದರು.ಸಮಾಜ ಸೇವೆಯ ಭಾಗವಾಗಿ ಪ್ರತಿಷ್ಠಾನ ವತಿಯಿಂದ ಈಗಾಗಲೇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ಪಟ್ಟಣದ ರೈಲ್ವೆ ನಿಲ್ದಾಣದ ಹತ್ತಿರ ಗುರುವಾರ ನಡೆದ ಅಪಘಾತದಲ್ಲಿ 13 ಜನರಿಗೆ ಗಾಯಗೊಂಡಿದ್ದರು. ಇವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇವರಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದವು. ಅದರಲ್ಲಿ ಈಗ ಇಬ್ಬರು ಸಾವನ್ನಪ್ಪಿದ್ದಾರೆ.ವಿಜಯಪುರ ಆಸ್ಪತ್ರೆಗೆ ರವಾನಿಸಲಾಗಿದ್ದ ಆಕಾಶ ಚವ್ಹಾಣ ಹಾಗೂ ರವಿ ಚವ್ಹಾಣ ಮೃತಪಟ್ಟಿದ್ದಾರೆ. ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವಿಜಯಪುರ ಎಸ್ಪಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ.ಸರಣಿ ಅಪಘಾತದಲ್ಲಿ ಸುರೇಖಾ ಚವ್ಹಾಣ, ಶೀರುಪವಾರ, ಶಂಕರ ಪವಾರ, ಇಂದು ಪವಾರ, ಮಾಧವಿ ಪವಾರ, ಮಾಯಾ ಪವಾರ, ಮಧು ಪವಾರ, ಲಕ್ಷ್ಮೀ ಪವಾರ, ಸವಿತಾ ಚವ್ಹಾಣ, ಮಲ್ಲಿ ಶಂಕರ ಪವಾರ, ಸತ್ಯಬಾಯಿ ಶಂಕರ ಪವಾರ, ರಾಜವೀರ ಶಂಕರ ಪವಾರ ಗಾಯಗೊಂಡವರು. ಎಲ್ಲರೂ ಇಂಡಿಯವರೇ ಆಗಿದ್ದಾರೆ. ಸ್ಥಳಕ್ಕೆ ಎಸ್.ಪಿ ಋಷಿಕೇಶ ಸೋನವನೆ, ಡಿ.ವೈ.ಎಸ್.ಪಿ ಜಗದೀಶ ಎಚ್.ಎಸ್., ಸಿಪಿಐ ರತನಕುಮಾರ ಜಿರಗಿಹಾಳ, ಮಲ್ಲಿಕಾರ್ಜುನ ದಪ್ಪಿನ ಭೇಟಿ ನೀಡಿಪರಿಶೀಲಿಸಿದ್ದಾರೆ.
ಮಲಘಾಣ: ತಂದೆತಾಯಿ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವನಬಾಗೇವಾಡಿ ತಾಲ್ಲೂಕಿನ ಮಲಘಾಣದ ನಿವೃತ್ತ ಶಿಕ್ಷಕ ಲಿಂಗೈಕ್ಯ ಹಣಮಂತಗೌಡ ತಿಮ್ಮನಗೌಡ ಬಿರಾದಾರ ಹಾಗೂ ಅವರ ಧರ್ಮಪತ್ನಿ ಲಿಂ. ಕಸ್ತೂರಿ ಅವರ ಸ್ಮರಣಾರ್ಥ ಶಿಕ್ಷಣಪ್ರೇಮಿಗಳಾಗಿರುವ ಅವರ ಮೂವರು ಮಕ್ಕಳು ಕಳೆದ 6 ವರ್ಷಗಳಿಂದ ಗ್ರಾಮದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಪರಂಪರೆ ಮುಂದುವರೆಸಿಕೊಂಡು ಬಂದಿದ್ದು ಪ್ರೇರಣೀಯ ಸೇವೆಗೈಯುತ್ತಿದ್ದಾರೆ ಎಂದು ನಿವೃತ್ತ ಶಿಕ್ಷಕ ಎಸ್.ಎಸ್.ಗರಸಂಗಿ ಶ್ಲಾಘನೆ ವ್ಯಕ್ತಪಡಿಸಿದರು. ಮಲಘಾಣದ ಆರಾಧ್ಯದೈವ ಸದ್ಗುರು ಸದಾನಂದ ಶಿವಯೋಗಿಗಳ 52 ನೇ ಪುಣ್ಯಾರಾಧನೆ ಹಾಗೂ ಜಾತ್ರೋತ್ಸವ ನಿಮಿತ್ತ ಶುಕ್ರವಾರ ಶಿವಯೋಗಾಶ್ರಮದಲ್ಲಿ ಜರುಗಿದ ಧರ್ಮಸಭೆಯಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹಧನ ವಿತರಿಸುವ ವೇಳೆ ಅವರು ಮಾತನಾಡಿದರು.ನಿವೃತ್ತ ಶಿಕ್ಷಕ ಲಿಂ. ಹಣಮಂತಗೌಡ ತಿಮ್ಮನಗೌಡ ಬಿರಾದಾರ ಶಿಕ್ಷಕರಾಗಿದ್ದರೂ ಜೀವನದಲ್ಲಿ ಕಷ್ಟಪಟ್ಟು ಅವರ ಮೂವರು ಮಕ್ಕಳಾದ ಡಾ.ಮಹಾಂತೇಶ ಬಿರಾದಾರ, ಪಾಂಡುರಂಗ ಬಿರಾದಾರ ಹಾಗೂ ಡಾ.ವಾಸಂತಿ ಪಾಟೀಲ್ ಅವರಿಗೆ ನೈತಿಕ, ಮೌಲ್ಯಯುತ ಶಿಕ್ಷಣ ನೀಡಿ ಇಂದು ಎಲ್ಲರೂ ನೌಕರಸ್ಥರಾಗಿ ಉನ್ನತ ಸ್ಥಾನಮಾನದಲ್ಲಿದ್ದಾರೆ. ಸದ್ಯ ಮೂವರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ ಪಂಚಾಯತಿ ಪಿಡಿಓ ಹಾಗೂ ಪಂಚಾಯತ ಅಧ್ಯಕ್ಷ ಮಗನ ಜಾತಿನಿಂದನೆ ಮಾಡಿ ಗೂಂಡಾಗಿರಿ ಮಾಡಿರುವ ಅಧಿಕಾರಿ ಮತ್ತು ಅಧ್ಯಕ್ಷೆಯನ್ನು ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಪರಿಶಿಷ್ಟ ಜಾತಿ ಸಂಘಟನೆ ವತಿಯಿಂದ ಅಪರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸೇವಾಲಾಲ ಸೇನೆಯ ಜಿಲ್ಲಾಧ್ಯಕ್ಷ ಸುರೇಶ ಚವ್ಹಾಣ ಮಾತನಾಡಿ, ಮುಳಸಾವಳಗಿ ಗ್ರಾಪಂ ಸದಸ್ಯರಾಜು ಮೋತಿಲಾಲ ರಾಠೋಡ ಇವರಿಗೆ ಮುಳಸಾವಳಗಿ ಪಿಡಿಓ ಗೊಲ್ಲಾಳಪ್ಪಾ ಕನ್ನೊಳ್ಳಿ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷೆಯ ಮಗ ಗುರುರಾಜ ಶಾಂತಪ್ಪ ಅಕ್ಕಳವಾಡಿ ಇವರು ಜಾತಿ ನಿಂದನೆ ಮಾಡಿ ತಾಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿ ಮುಂದೆಯೇ ಹೊಡಿ-ಬಡಿ ಮಾಡಿದ್ದು ಈಗಾಗಲೇ ಅದು ಪ್ರಕರಣ ದಾಖಲಾಗಿದೆ. ಆದ್ದರಿಂದ ಸದರಿ ಜನಪ್ರತಿನಿಧಿಯ ಮೇಲೆ ಹಲ್ಲೆ ಮಾಡಿ ಜಾತಿನಿಂದನೆ ಮಾಡಿರುವಂತಹ ಗೊಲ್ಲಾಳಪ್ಪ ಕನ್ನೊಳ್ಳಿ ಪಿಡಿಓ ಹಾಗೂ ತನ್ನ ಅಧಿಕಾರ ದುರ್ಬಳಕೆ ಮಾಡಿ ತನ್ನ ಮಗನ ಕೈಯಲ್ಲಿ ಅಧಿಕಾರ ನಡೆಸಿರುವಂತಹ ಗ್ರಾಪಂ ಅಧ್ಯಕ್ಷೆಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಸೂಕ್ತ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಸಮಾಜಕ್ಕೆ ಆರೋಗ್ಯಪೂರ್ಣ ತಾಯಿ , ಮಗುವನ್ನು ನೀಡುವ ನಿಟ್ಟಿನಲ್ಲಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳ ಸದುಪಯೋಗ ಪಡೆದುಕೊಂಡು ಆರೋಗ್ಯವಂತರಾಗಬೇಕೆಂದು ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ ಹೇಳಿದರು.ಗ್ರಾಮದ ಶ್ರೀ ಬನಶಂಕರಿದೇವಿ ಕಲ್ಯಾಣ ಮಂಟಪದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತಾಲೂಕು ಆಡಳಿತ, ತಾಲುಕಾ ಪಂಚಾಯತ್, ಶಿಶು ಅಭಿವೃದ್ದಿ ಯೋಜನಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಹಮ್ಮಿಕೊಂಡ “ಪೋಷಣ್ ಮಾಸಾಚರಣೆ” ಕಾರ್ಯಕ್ರಮದ ಉದ್ಘಾಟಣೆ ನೆರವೇರಿಸಿ ಮಾತನಾಡಿದ ಅವರು, ಈ ಹಿಂದೆ ಹೆರಿಗೆ ಸಮಯದಲ್ಲಿ ತಾಯಿ ಅಥವಾ ಮಗು ಸಾವನ್ನಪ್ಪುವ ಪ್ರಕರಣ ಹೆಚ್ಚುತಿದ್ದವು ಈಗ ಮಹಿಳೆ ಗರ್ಭವತಿಯಾದಾಗಿನಿಂದ ಜನಿಸಿದ ಮಗು ಪ್ರೌಢಾವಸ್ತೆ ತಲುಪುವವರೆಗೂ ಸರಕಾರ ಪ್ರತೀ ಹಂತದಲ್ಲಿ ಮೊಟ್ಟೆ, ಹಾಲು ಸೇರಿದಂತೆ ಪೋಷಕಾಂಶಯುಕ್ತ ಆಹಾರ ನೀಡುತ್ತಿದೆ ಅಲ್ಲದೇ ಕಾಲಕಾಲಕ್ಕೆ ಪರೀಕ್ಷೆ ಮಾರ್ಗದರ್ಶನ ನೀಡುತಿದ್ದು ಇದರಿಂದ ಆಹಾರ ಕೊರತೆಯ ಮರಣ ಪ್ರಮಾಣ ಕಡಿಮೆಯಾಗಿದೆ ಎಂದರು.ಶಿಕ್ಷಣ ಇಲಾಖೆಯ ಸಿಆರ್ಸಿ ಶ್ರೀಮತಿ ಗದ್ರಾಕ್ಷಾಯಿಣಿ ಮಂಡಿ ಮಾತನಾಡಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂಡಿ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ ತಾಲೂಕು ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಯ ಬಾಕಿ ಕಡತಗಳ ಪರಿಶೀಲನೆ, ಆಧಾರ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇಂಡಿ ಮೆಘಾ ಮಾರುಕಟ್ಟೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ರಸ್ತೆ ಅಭಿವೃದ್ಧಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕುರಿತು ವೀಕ್ಷಿಸಿದರು. ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ತಹಶೀಲ್ದಾರ ಬಿ.ಎಸ್.ಕಡಕಬಾವಿ, ಪರಸಭೆಯ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಇತರರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನಲ್ಲಿ ಗುಬ್ಬೇವಾಡ, ಶಿರಗೂರ, ಉಮರಾಣಿ, ಕೊಳುರಗಿ, ಚಿಕ್ಕಬೇನೂರ, ಸಾತಲಗಾಂವ ಸೇರಿದಂತೆ ಸುಮಾರು ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ಸರಿಯಾಗಿ ಬಸು ಓಡಾಡುತ್ತಾಯಿಲ್ಲ. ವಿಧ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಪೆಟ್ಟಾಗುತ್ತಿದೆ. ಕೂಡಲೇ ಬಸ್ಸಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ವ್ಯವಸ್ಥಾಪಕ ಸಂಗಮೇಶ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಸಚಿನ್ ಧಾನಗೊಂಡ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಿಂದ ಹಲವಾರು ವಿದ್ಯಾರ್ಥಿಗಳು ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ಹಾಗೂ ಸಾಮಾನ್ಯ ಜನರು ತಮ್ಮ ದಿನ ನಿತ್ಯದ ಕೆಲಸಕ್ಕಾಗಿ ಇಂಡಿ ನಗರಕ್ಕೆ ಬರುತ್ತಾರೆ. ಆದರೆ ಸರಿಯಾದ ಸಮಯಕ್ಕೆ ಬಸ್ ಓಡಾಡುದೆ ಇರುವುದರಿಂದ ವಿಧ್ಯಾರ್ಥಿಗಳು ಜ್ಞಾನಾರ್ಜನೆ ಪಡೆಯುವುದು ಅತ್ಯಂತ ದುಸ್ಥಿತಿಯಾಗಿದೆ. ಕೂಡಲೇ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬಸ್ಸಿನ ಸಮಸ್ಯೆ ಪರಿಹರಿಸಬೇಕು. ಇಲ್ಲವಾದರೆ ಉಗ್ರವಾದ ಪ್ರತಿಭಟನೆ ಮಾಡುತ್ತೆವೆ ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಅರುಣ ಪೂಜಾರಿ, ಗಣೇಶ ಹಂಜಗಿ ಇನ್ನೂ ಅನೇಕರು ಉಪಸ್ಥಿತರಿದ್ದರು.
ರದ್ದುಗೊಳಿಸಿದ ಚಿಟ್ ಫಂಡ್ ಕಂಪನಿಗಳಲ್ಲಿ ಹೂಡಿರುವ ಸಾರ್ವಜನಿಕರ ಹಣ ಮರಳಿಸುವಂತೆ ರೈತ ಸಂಘ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಗ್ರಿಗೊಲ್ಡ್, ಪಿ.ಎ.ಸಿ.ಎಲ್, ಸಮೃದ್ಧ ಜೀವನ ಸೇರಿದಂತೆ ಇನ್ನಿತರ ಕಂಪನಿಗಳಲ್ಲಿ ಕಷ್ಟಪಟ್ಟು ದುಡಿದಿರುವ ಬಡವರು ಹಾಗು ರೈತರ ಹಣ ೬ ವರ್ಷದಲ್ಲಿ ದ್ವೀಗುಣವಾಗುತ್ತದೆ ಎಂಬ ನಂಬಿಕೆಯೊಂದಿಗೆ ಹೂಡಿಕೆ ಮಾಡಿದ್ದರು, ಆದರೆ ಕೇಂದ್ರ ಸರಕಾರ ಏಕಾಏಕಿ ೧೮೫ ಚಿಟ್ ಫಂಡ್ ಕಂಪನಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಎಲ್ಲಾ ಹೂಡಿಕೆದಾರರು ಚಿಂತೆ ಮಾಡುವಂತೆ ಮಾಡಿದೆ. ಈ ಕುರಿತು ಸರಕಾರ ಮಧ್ಯಸ್ತಿಕೆ ವಹಿಸಿ ಹಣ ಹಿಂತಿರಗಿಸಲು ಆದೇಶ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರುಕಳೆದ ೨೦ ದಿನಗಳಿಂದ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬದ ವತಿಯಿಂದ ನಡೆಸಿರುವ ಹೋರಾಟಕ್ಕೆ ರೈತ ಸಂಘ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಬೆಂಬಲ ನೀಡಿ ಮಾತನಾಡುತ್ತಾ, ನಮ್ಮ ಜಿಲ್ಲೆಯಲ್ಲಿ ಅಂದಾಜು ೨ ಲಕ್ಷ ಗ್ರಾಹಕರು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷೆ ಜಯಶ್ರೀ ದೇವಣಗಾಂವ ಹಾಗೂ ಉಪಾಧ್ಯಕ್ಷ ರಮೇಶ ಮಸಬಿನಾಳರನ್ನು ತಾಲ್ಲೂಕು ಕುರುಬ ಸಮಾಜಸೇವಾ ಸಂಘದಿಂದ ಸನ್ಮಾನಿಸಲಾಯಿತು.ಪ್ರಕಾಶ ದೊಡಮನಿ, ಗುರುನಾಥ ಮುರುಡಿ, ಕೆಂಚು ಪೂಜಾರಿ, ರೇವಣಸಿದ್ಧ ಮಣೂರ, ಶರಣು ಮನಗೂಳಿ, ಜಕ್ಕು ದೊಡ್ಡಿಣಿ, ಬಸಪ್ಪ ದೇವಣಗಾಂವ ಸೇರಿದಂತೆ ಇತರರು ಇದ್ದಾರೆ.
