Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸೆ:೨೨ ರಂದು(ನಾಳೆ) ಓತಿಹಾಳ ಐಪಿ, ಕನ್ನೋಳ್ಳಿ ಐಪಿ, ಬಮ್ಮನಜೋಗಿ ಐಪಿ ಲಿಂಕ್‌ಲೈನ್ ಕಾಮಗಾರಿ ಕೈಗೊಂಡಿರುವುದರಿಂದ ೧೧೦/೧೧ ಕೆ.ವ್ಹಿ ದೇವರಹಿಪ್ಪರಗಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಇಂಗಳಗಿ, ದೇವರಹಿಪ್ಪರಗಿ, ದೇವೂರ,ಕನ್ನೋಳ್ಳಿ ಎನ್‌ಜೆವಾಯ್ ಮತ್ತು ಮಣ್ಣೂರ, ಜಾಲವಾದ, ಕನ್ನೋಳ್ಳಿ, ಓತಿಹಾಳ, ಬಮ್ಮನಜೋಗಿ, ಪಡಗಾನೂರ, ಹರನಾಳ ಐಪಿ ಪೀಢರ್‌ಗಳ ಮೇಲೆ ಬೆಳಿಗ್ಗೆ ೮.೦೦ ಗಂಟೆಯಿಂದ ಸಾಯಂಕಾಲ ೫.೦೦ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕಾರಣ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ಹೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರ ದೇವರಹಿಪ್ಪರಗಿ ಇವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕರ್ನಾಟಕದಲ್ಲಿ ರಾಜಕೀಯ ಮೇಲಾಟಗಳು ಏನು ನಡೆಯುತ್ತಿದೆ ಎಂಬುದು ಜನರಿಗೆ‌ ಗೊತ್ತು. ಹಣ, ಹೆಂಡ, ಅಧಿಕಾರಿದ ಉಪಯೋಗದಿಂದ ರಾಜ್ಯಕೀಯ ಏರಿಳಿತವನ್ನು, ದೊಂಬರಾಟವನ್ನು, ರಾಜ್ಯದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಆದರೆ ಜವಾಬ್ದಾರಿ ರಾಷ್ಟ್ರೀಯ, ರಾಜ್ಯದ ಆಡಳಿತ ಪಕ್ಷಗಳು ಜನರ ಹಿತ ಕಾಪಾಡುವಲ್ಲಿ ವೈಫಲ್ಯ ಕಂಡಿವೆ ಎಂದು ನ್ಯಾಷನಲ್ ಅಪನಿ ಪಕ್ಷದ ರಾಜ್ಯದ ಅಧ್ಯಕ್ಷ ಪಿರೋಜ್ ಬಿ ಎಸ್ ಕಿಡಿಕಾರಿದರು.ಶುಕ್ರವಾರ ಪಟ್ಟಣದ ಖಾಸಗಿ ಹೋಟೆಲನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರು..? ಯಾರನ್ನು..? ಯಾರಿಗೆ ಮುಗಿಸಬೇಕೋ..! ಉಳಿಸಬೇಕೋ..! ಎಂಬ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರಾಜಕಾರಣ ಅರಾಜಕತೆಯಲ್ಲಿದೆ. ಆದರೆ ನ್ಯಾಷನಲ್ ಅಪನಿ ಪಕ್ಷ ರಾಜ್ಯದ ಜನರ ಹಿತದೃಷ್ಟಿಯಿಂದ ಕಾಯಕ‌ ಮಾಡುವ ಅತ್ಯಂತ ಪ್ರಾಮಾಣಿಕ ಮತ್ತು ದಕ್ಷ ಪಕ್ಷವಾಗಿದೆ. ಈಗಾಗಲೇ ರಾಜ್ಯದ ಹಲವು ಭಾಗದಲ್ಲಿ ಪ್ರವಾಸ ಮಾಡಿದ್ದು ಜನರ ನೋವು, ಸಮಸ್ಯೆ ಆಲಿಸುವ ಕಾಯಕ‌ ಮಾಡಿದ್ದು, ಸ್ಪಂದಿಸುವ ಕಾರ್ಯ ಮಾಡಿದ್ದೆವೆ. ಅದಕ್ಕಾಗಿ ರಾಜ್ಯದಲ್ಲಿ ಶಿಗ್ಗಾವಿ, ಸಂಡೂರು‌ ಹಾಗೂ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ನಡೆಯುವ ಉಪ-ಚುನಾವಣೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಹಾಗೂ ಮಹಿಳೆಯರಿಗಾಗಿ ಆಯಾ ತಾಲ್ಲೂಕಗಳಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಏರ್ಪಡಿಸಲಾಗಿದೆ.ಆಸಕ್ತವುಳ್ಳ ಕ್ರೀಡಾಪಟುಗಳು ತಮ್ಮ ತಾಲೂಕುಗಳಲ್ಲಿ ನಡೆಸುವ ತಾಲೂಕ ಮಟ್ಟದ ಅಥ್ಲೆಟಿಕ್, ವಾಲಿಬಾಲ್, ಪುಟ್‌ಬಾಲ್,ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗ ಕ್ರೀಡಾಪಟುಗಳು ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಬಹುದಾಗಿದೆ.ತಾಲ್ಲೂಕ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಆಧಾರ ಕಾರ್ಡನ್ನು ಕಡ್ಡಾಯವಾಗಿ ತರುವುದು. ಈ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ ಹಾಗೂ ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಿರುವುದಿಲ್ಲ.ಸೆ.೨೦ರಂದು ಸಿಂದಗಿಯ ತಾಲೂಕು ಕ್ರೀಡಾಂಗಣ, ಎನ್ ಆರ್ ಚವ್ಹಾಣ, ಮೊ:೯೪೮೦೬೭೮೦೯೭, ಸೆ.೨೧ರಂದು ದೇವರ ಹಿಪ್ಪರಗಿ ತಾಲೂಕಿನ ಜಗದಂಬ ಪ್ರೌಢ ಶಾಲೆ ಹಿಟ್ಟಿನಹಳ್ಳಿ, ಎನ್ ಆರ್ ಚವ್ಹಾಣ, ಮೊ:೯೪೮೦೬೭೮೦೯೭, ಸೆ.೨೧ರಂದು ಆಲಮೇಲ ತಾಲೂಕಿನ ಮಲಘಾಣದ ಸರಕಾರಿ ಪ್ರೌಢ ಶಾಲೆ, ಎನ್ ಆರ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ೧೧ ಕೆ.ವ್ಹಿ ಅರಕೇರಿ ಎನ್.ಜೆ.ವೈ ಮಾರ್ಗದಲ್ಲಿ ಸೆ.೨೨ರ ಬೆಳಿಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೨ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಮ್ ರೇವಣ್ಣ ಅವರು ಸೆ.೨೨ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಂದು ಬೆಳಿಗ್ಗೆ ೯-೪೫ಕ್ಕೆ ಕಲಬುರ್ಗಿಯಿಂದ ಹೊರಟು ೧೨-೧೫ಕ್ಕೆ ವಿಜಯಪುರಕ್ಕೆ ಆಗಮಿಸುವುರು. ೧೨-೩೦ಕ್ಕೆ ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ನಡೆಯುವ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ವಿಜಯಪುರ ಜಿಲ್ಲಾ ಸಮಿತಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ ೩ ಗಂಟೆಗೆ ವಿಜಯಪುರದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ ೩ ವಿದ್ಯಾರ್ಥಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.”ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ಗ್ರಾಮೀಣ ವಲಯದ ಕಣ್ಣಮುಚನಾಳ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಮಾ. ಬಿಜ್ಜರಗಿ ಪ್ರಥಮ, ಸಿಂದಗಿ ತಾಲೂಕಿನ ಕೆರೂಟಗಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಾನಿಯಾ.ಅ.ಕೊಂಡಿ ದ್ವೀತಿಯ ಹಾಗೂ ಇಂಡಿ ತಾಲೂಕಿನ ಹಿರೇರೂಗಿ ಬೋಳೆಗಾಂವದ ಎಸ್.ಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಬೋರಮ್ಮ ತಾವರಖೇಡ ತೃತೀಯ ಸ್ಥಾನ ಪಡೆದಿದ್ದಾರೆ.ಪದವಿಪೂರ್ವ ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಕುಂಬಾರ ಪ್ರಥಮ, ವಿಜಯಪುರ ನಗರದ ಬಿಡಿಇ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಗಿಣಿ ಬಗಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಚಡಚಣ ತಾಲೂಕಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.ತಾಲೂಕ ಕ್ರೀಡಾಂಗಣಕ್ಕೆ ನಿಗದಿಪಡಿಸಿದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.ಸ್ಥಳ ಪರಿಶೀಲನಾ ನಂತರ ಚಡಚಣ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ ಕಟ್ಟಡ ಕಾಮಗಾರಿ, ಗುಂಪು ಶೌಚಾಲಯ ಕಾಮಗಾರಿ, ಗ್ರಂಥಾಲಯ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಚಡಚಣದ ತಾಲೂಕಾ ಕಚೇರಿಯಲ್ಲಿ ಅಧಿಕಾರಿ, ಸಿಬ್ಬಂದಿಗಳ ಸಭೆ ನಡೆಸಿ, ದೀರ್ಘಕಾಲ ವಿಲೇವಾರಿಗೊಳ್ಳದೇ ಬಾಕಿ ಇರುವ ಕಡತಗಳನ್ನು ಆದ್ಯತೆ ಮೇರೆಗೆ ವಿಲೇವಾರಿಗೊಳಿಸಲು, ಆಧಾರ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ-ಆದಾಯ ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಕಡತಗಳ ವಿಳಂಬಕ್ಕೆ ಅವಕಾಶ ನೀಡದೇ ಶೀಘ್ರವಾಗಿ ವಿಲೇವಾರಿಗೆ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಇಂಡಿ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ಹಿಂದು ಮುಸ್ಲಿಂ ಭಾವೈಕ್ಯದ ದೇವತೆ ಹಜರತ್ ಜಚ್ಚಾ ಮಾಸಾಬಿ ಜಾತ್ರಾ ನಿಮಿತ್ಯ ಶುಕ್ರವಾರ ಹಜರತ್ ಜಚ್ಚಾ ಮಾಸಾಬಿ ದರ್ಗಾದ ಸಜ್ಜಾದಾ ನಶೀನ್ ಹಜರತ್ ಷಾ ಮಹಿಬೂಬ ಪಾಶಾ ಖಾಜಿ ಫಾರೂಖಿ ರವರ ನೇತೃತ್ವದಲ್ಲಿ ಭಕ್ತಾದಿಗಳೊಂದಿಗೆ ದರ್ಗಾಕ್ಕೆ ಭೇಟಿ ನೀಡಿ ಮಹಾ ಸತಿ, ಮಹಾ ಸತ್ಯಮ್ಮ, ಮಾಸಾಬಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ಸಜ್ಜಾದಾ ನಶೀನ್ ರೊಂದಿಗೆ ಅನೇಕ ಭಕ್ತರು ಭಾಗವಹಿಸಿ ತಾಯಿಯ ಆರ್ಶಿವಾದ ಪಡೆದು, ಸರ್ವ ಜನರ ಒಳಿತಿಗಾಗಿ ಹಾಗೂ ಗ್ರಾಮದಲ್ಲಿ ಶಾಂತಿ ಸೌಹಾರ್ದತೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.ನಂತರ ಪ್ರಸಾದ ವಿತರಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುರಸಿಂಗಾರ ಕಲೆ‌ ಮತ್ತು ಸಾಂಸ್ಕೃತಿಕ ಸಂಸ್ಥೆಯು ಕನ್ನಡ ಮತ್ರು ಸಂಸ್ಕೃತಿ ಇಲಾಖೆಯ ಧನಸಹಾಯದಲ್ಲಿ”ಅನಂತ ನಮನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ”ವನ್ನು ಶನಿವಾರ ದಿನಾಂಕ ಸೆ.21 ರಂದು ಸಂಜೆ 6-30ಕ್ಕೆ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ ವನ್ನು ಧಾರವಾಡದ ಪಂ. ಕುಮಾರ ಮರಡೂರ ಪ್ರಸ್ತುತ ಪಡಿಸಲಿದ್ದಾರೆ ಇವರ, ಗಾಯನಕ್ಕೆ ಸತೀಶ್ ಭಟ್ ಹೆಗ್ಗಾರ್ ಹಾರ್ಮೋನಿಯಂ ಮತ್ತು ಗಣೇಶ್ ಗುಂಡಕಲ್ ಅವರು ತಬಲಾಸಾಥ್ ನೀಡಲಿದ್ದಾರೆ. ಕಾರ್ಯಕ್ರಮ ಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತ ಆಸಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸುರಸಿಂಗಾರದ ಕಾರ್ಯದರ್ಶಿ ಸಂಗಣ್ಣ ಪಾಟೀಲ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಮಹಾಂತೇಶ ನಗರದ ಎಮ್.ಜಿ.ಎಮ್.ಕೆ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮುದ್ದೇಬಿಹಾಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆ ಗೈದಿದ್ದಾರೆ.ಹಿರಿಯರ ವಿಭಾಗದಲ್ಲಿ ಭಕ್ತಿಗೀತೆ ಸ್ಪರ್ಧೆಯಲ್ಲಿ ನಿಸರ್ಗಾ ಬಿರಾದಾರ ಪ್ರಥಮ ಸ್ಥಾನ ಮತ್ತು ಧಾರ್ಮಿಕ ಪಠಣ (ಸಂಸ್ಕೃತ) ಅಭಿರಾಮ ಹೆಗಡೆ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾದರೆ, ಅಪ್ಸರಾ ಆವಟಿ ಇಂಗ್ಲೀಷ್ ಭಾಷಣದಲ್ಲಿ ಪ್ರೌಢ ವಿಭಾಗದಲ್ಲಿ ದ್ವಿತೀಯ ಸ್ಥಾನ, ಅಂಮೃತಾ ಪತ್ತಾರ ಹಿರಿಯರ ವಿಭಾಗದ ದೇಶ ಭಕ್ತಿಯಲ್ಲಿ ತೃತೀಯ ಸ್ಥಾನ ಹಾಗೂ ಕಿರಿಯರ ವಿಭಾಗದ ದೇಶಭಕ್ತಿಯಲ್ಲಿ ಇಂಚರ ಹಡಲಗೇರಿ ತೃತೀಯ ಸ್ಥಾನವನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅವರ ಸಾಧನೆಗೆ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಕೆ.ಹರನಾಳ, ಪ್ರೌಢ ಶಾಲೆಯ ಮುಖ್ಯಗುರು ಎಸ್.ಎಸ್.ಆಳ್ವಿ, ಶಿಕ್ಷಕರಾದ ರಾಜೇಶ್ವರಿ ಬಿರಾದಾರ, ಶೋಭಾ ಬಲಕುಂದಿ, ವಿಜಯಲಕ್ಷ್ಮೀ ಪಾಟೀಲ್, ಸುಜಾತಾ ಬಲಕುಂದಿ, ಎ.ಕೆ.ಪಡೇಕನೂರ, ಜಿ.ಎಮ್.ಸಾಲಿಮಠ, ಎಸ್.ಎ.ಗಂಗನಗೌಡ ಸೇರಿದಂತೆ ಸರ್ವಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Read More