Author: editor.udayarashmi@gmail.com

ವಿಜಯಪುರ: ಕೆಪಿಟಿಸಿಎಲ್ ಮೂಲಕ ಬಬಲೇಶ್ವರ ೧೧೦/೧೧ ಕೆವ್ಹಿ s ಬೇಗಳ ಎರಡನೇ ತ್ರೆöÊಮಾಸಿಕ ನಿರ್ವಾಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ ೧೧೦/೧೧ ಕೆವ್ಹಿ ಸ್ವೀಕರಣಾ ಕೇಂದ್ರ ಬಬಲೇಶ್ವರದಿಂದ ಹೊರಗೋಗುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಸೆ.೨೧ ರಂದು ಬೆಳಿಗ್ಗೆ ೯ ರಿಂದ ಸಂಜೆ ೬ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದಕಾರಣ, ಗ್ರಾಹಕರು ಸಹಕರಿಸುವಂತೆ ವಿಜಯಪುರದ ಹೆಸ್ಕಾಂನ ಕಾರ್ಯನಿರ್ವಾಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದ ಸೊಲಾಪುರದಲ್ಲಿ ಆಯೋಜನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಮಹಾರಾಷ್ಟ್ರ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಸೆ.೨೨ರಂದು ಶ್ರೀ ಸಿದ್ದೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ, ವಿಮಾನ ನಿಲ್ದಾಣ ಪ್ರದೇಶ, ಶಂಕರ ನಗರ ಸೊಲಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಮಹಾರಾಷ್ಟ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ೨೦೨೨-೨೩ ಮತ್ತು ೨೦೨೩-೨೪ನೇ ಸಾಲಿನ ಕಾರ್ಯಕ್ರಮವನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ಸೋಲಾಪುರ ದಕ್ಷಿಣ ಕ್ಷೇತ್ರದ ಶಾಸಕ ಸುಭಾಷ ದೇಶಮುಖ ಅಧ್ಯಕ್ಷತೆ ವಹಿಸಲಿದ್ದಾರೆ. ಸೋಲಾಪುರ ಸಂಸದೆ ಕು.ಪ್ರಣಿತಿ ಸುಶೀಲಕುಮಾರ ಶಿಂಧೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡಮನಿ ಅವರು ಭಾಗವಹಿಸಲಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅನಸೂಯ ಕಾಂಬಳೆ ಹಿತನುಡಿಯನ್ನಾಡಲಿದ್ದಾರೆ.ವಿಶೇಷ ಅಹ್ವಾನಿತರಾಗಿ ಸೋಲಾಪುರ ಶಾಸಕರಾದ ವಿಜಯಕುಮಾರ ದೇಶಮುಖ, ಸೋಲಾಪುರ ಜಿಲ್ಲಾಧಿಕಾರಿ ಕುಮಾರ ಆಶೀರ್ವಾದ, ಸೋಲಾಪುರ…

Read More

ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದ ಸೊಲಾಪುರದಲ್ಲಿ ಆಯೋಜನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಮಹಾರಾಷ್ಟ್ರ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಸೆ.೨೨ರಂದು ಶ್ರೀ ಸಿದ್ದೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ, ವಿಮಾನ ನಿಲ್ದಾಣ ಪ್ರದೇಶ, ಶಂಕರ ನಗರ ಸೊಲಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಮಹಾರಾಷ್ಟ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ೨೦೨೨-೨೩ ಮತ್ತು ೨೦೨೩-೨೪ನೇ ಸಾಲಿನ ಕಾರ್ಯಕ್ರಮವನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ಸೋಲಾಪುರ ದಕ್ಷಿಣ ಕ್ಷೇತ್ರದ ಶಾಸಕ ಸುಭಾಷ ದೇಶಮುಖ ಅಧ್ಯಕ್ಷತೆ ವಹಿಸಲಿದ್ದಾರೆ. ಸೋಲಾಪುರ ಸಂಸದೆ ಕು.ಪ್ರಣಿತಿ ಸುಶೀಲಕುಮಾರ ಶಿಂಧೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡಮನಿ ಅವರು ಭಾಗವಹಿಸಲಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅನಸೂಯ ಕಾಂಬಳೆ ಹಿತನುಡಿಯನ್ನಾಡಲಿದ್ದಾರೆ.ವಿಶೇಷ ಅಹ್ವಾನಿತರಾಗಿ ಸೋಲಾಪುರ ಶಾಸಕರಾದ ವಿಜಯಕುಮಾರ ದೇಶಮುಖ, ಸೋಲಾಪುರ ಜಿಲ್ಲಾಧಿಕಾರಿ ಕುಮಾರ ಆಶೀರ್ವಾದ, ಸೋಲಾಪುರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವಣ್ಣನವರ ಹಿರಿಮೆಯನ್ನು ಕೇಳಿ ರಾಜ್ಯ ತ್ಯಾಗಮಾಡಿ ಕಲ್ಯಾಣಕ್ಕೆ ಬಂದು ಮಾರಯ್ಯ ಹೆಸರಿನಿಂದ ಕಟ್ಟಿಗೆ ಮಾರುವ ಕಾಯಕವನ್ನು ಕೈಕೊಂಡು ಶರಣ ಜೀವನ ನಡೆಸುತ್ತಾ, ಅವರು ಕಾಯಕನಿಷ್ಠರಾಗಿದ್ದರು ಎಂದು ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ ಹೇಳಿದರು.ನಗರದ ಚೇತನಾ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಯುವ ವೇದಿಕೆ ಹಾಗೂ ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ ಜರುಗಿದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಾ, ಶರಣರ ಜೀವನವೇ ಇಂದಿನ ಪೀಳಿಗೆಗೆ ಆದರ್ಶಪ್ರಾಯ ಎಂದು ಹೇಳಿದರು.ಶರಣ ಮೋಳಿಗೆ ಮಾರಯ್ಯರ ಅನುಭಾವ ಕುರಿತು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಉಪನ್ಯಾಸ ನೀಡುತ್ತಾ,ದುಡಿತವೇ ದುಡ್ಡಿನ ತಾಯಿ ಎಂಬಂತೆ ದುಡಿಮೆಯಲ್ಲಿ ಅಪಾರ ಸಂಪತ್ತಿದೆ ಎಂಬುದನ್ನು ಕಲ್ಯಾಣದ ಪರಿಸರದಲ್ಲಿ ಕಂಡುಕೊಂಡ ಮಾರಯ್ಯನವರ ವಚನಗಳಲ್ಲಿ ವೈವಿಧ್ಯಮಯ ತಾತ್ವಿಕ, ಧಾರ್ಮಿಕ, ಸಾಮಾಜಿಕ, ಅನುಭಾವಿಕ ಚಿಂತನೆಗಳಿವೆ. ಅವು ಮಾರಯ್ಯನ ವಿದ್ವತ್ತು, ಆಧ್ಯಾತ್ಮಿಕ ನಿಲುವು, ಅನುಭಾವದ ಎತ್ತರ, ಸಾಮಾಜಿಕ ಕಳಕಳಿ, ಸಾಹಿತ್ಯಿಕ ಶ್ರೀಮಂತಿಕೆಯನ್ನು ಇಂದಿಗೂ ಎತ್ತಿ ತೋರುತ್ತವೆ…

Read More

ಉದಯರಶ್ಮಿ ದಿನಪತ್ರಿಕೆ. ಕೆಂಭಾವಿ: ಸದ್ಭಕ್ತರು ಸದ್ಗುರುವಿನ ಸನ್ನಿಧಿಯಲ್ಲಿ ಸೇರಿ, ದೇವರ ದರ್ಶನ ಪಡೆದು, ಸಂಸಾರ ಜಂಜಾಟಗಳಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಅಕ್ಷರ ದಾಸೋಹ ನಿವೃತ್ತ ಸಹಾಯಕ ನಿರ್ದೇಶಕ ಜಿ ಎನ್, ರೊಡಲಬಂಡಿ ಹೇಳಿದರು.ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಭವರೋಗ ಕಳೆಯಲು ಭಗವಂತನ ನಾಮಸ್ಮರಣೆ ಸಾಕು, ಪುರಾಣ, ಪ್ರವಚನ, ಭಜನೆ, ಕೀರ್ತನೆ, ಸತ್ಸಂಗ, ಶಿವಾನುಭವ, ಸಾಹಿತ್ಯ, ಸಂಗೀತ, ಸತ್ಕಾರ್ಯಗಳಲ್ಲಿ ಭಾಗವಹಿಸುವ ಸದ್ಭಕ್ತರು ಸದಾ ಪುಣ್ಯವಂತರು ಎಂದರು.ಮುರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ, ಪುರಾಣ ಪ್ರವಚನಕಾರ ರಮೇಶ ಶಾಸ್ತ್ರೀ ಯಾಳಗಿ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗುರುವಿನ ಸ್ಪರ್ಶ, ಗುರುವಿನ ವಾಣಿ, ಗುರುವಿನ ದರ್ಶನದಿಂದ ಮಾನವ ಜನ್ಮ ಮುಕ್ತಿ ಹೊಂದಲು ಸಾಧ್ಯ ಎಂದವರು, ಮಲಮೂತ್ರದ ಈ ಕಾಯ ಮಣ್ಣಾಗುವ ಮುನ್ನ ಮಹಾದೇವನ ನೆನೆಯಲು ಸದ್ಭಕ್ತರು ಸತ್ಸಂಗದಲ್ಲಿ ಸೇರಬೇಕು, ಕಾಯ ಶುದ್ದಿಗೆ ಕಾಂತೇಶ್ವರನ ನಿತ್ಯವೂ ಭಜಿಸಿ…

Read More

ಮಾನನಷ್ಟ ಮೊಕದ್ದಮೆಗೆ ತಡೆ ಕೋರಿದ್ದ ಪ್ರಕರಣದಲ್ಲಿ ಶಾಸಕ ಯತ್ನಾಳಗೆ ಹಿನ್ನಡೆ ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೈಕೋರ್ಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.ತಮ್ಮ ಕುಟುಂಬ ಹಾಗೂ ವೈಯಕ್ತಿಕ ನಿಂಧನೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.ತಮ್ಮ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ತಡೆ ನೀಡುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ, ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದೆ. ಅಲ್ಲದೇ ಶಾಸಕರ ಕೀಳು ಅಭಿರುಚಿಯ ಹೇಳಿಕೆಯನ್ನು ಪ್ರಶ್ನಿಸಿದ ನ್ಯಾಯಾಧೀಶರು, ನೀವು ಹೇಳಿಕೆ ನೀಡಿದ್ದು ಹೌದೋ ಅಲ್ಲವೋ ಎಂದು ಪ್ರಶ್ನಿಸಿದರು. ಹೇಳಿಕೆ ನೀಡಿದ್ದನ್ನು ಯತ್ನಾಳ್ ಪರ ವಕೀಲರು ಒಪ್ಪಿಕೊಂಡರು.ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಈ ರೀತಿಯ ಪದ ಬಳಕೆ ಯಾವ ಅರ್ಥ ನೀಡುತ್ತದೆ. ವೈಯಕ್ತಿಕ ತೇಜೋವಧೆಗೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ನೆಟ್ ಬಾಲ್‌ನಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗ ಮತ್ತು ಚೆಸ್‌ನಲ್ಲಿ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಇರ್ವ ವಿದ್ಯಾರ್ಥಿನಿಯರು ಭಾಗವಹಿಸಿ ಒಟ್ಟು ೧೪ ಜನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈ ಸಾಧನೆಗೆ ಮಾರ್ಗದರ್ಶನ ನೀಡಿದ ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಹಾಗೂ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Read More

ಸಿಎಂ ಮೌಖಿಕ ಸೂಚನೆ ಮೇರೆಗೆ ಕೈಗೆತ್ತಿಕೊಂಡ ಕಾಮಗಾರಿಗಳ ವರದಿ ನೀಡಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌಖಿಕ ಸೂಚನೆ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಶ್ರೀರಂಗಪಟ್ಟಣ, ವರುಣಾ ಕ್ಷೇತ್ರದಲ್ಲಿ 387 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ಕೈಗೊಂಡಿರುವ ಕುರಿತಂತೆ ವಿಸ್ತೃತ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚಿಸಿದ್ದಾರೆ.ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಮೂಲದ ಪಿಎಸ್​ ನಟರಾಜ್​ ಎಂಬವರು ಆಗಸ್ಟ್ 27ರಂದು ರಾಜ್ಯಪಾಲರಿಗೆ ದೂರು ನೀಡಿದ್ದು ಸೆಕ್ಷನ್ 15 ಮತ್ತು 25 ಉಲ್ಲಂಘಿಸಿ ಮುಡಾ 387 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಪ್ರಾಧಿಕಾರದಲ್ಲಿ ಹಣ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಪ್ರಾಧಿಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು. ಹೀಗಾಗಿ ಸಿಬಿಐ ತನಿಖೆಗೆ ಸೂಚಿಸುವಂತೆ ಪತ್ರದಲ್ಲಿ ಬರೆದಿದ್ದಾರೆ.ಈ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ಚಾಲ್ತಿಯಲ್ಲಿರುವ ಯು.ಜಿ.ಡಿ ಕಾರ್ಯದ ಅವಧಿ ಮುಗಿದರು ಸಹ ಇನ್ನೂ ಪೂರ್ಣಗೊಂಡಿಲ್ಲ ತುರ್ತಾಗಿ ಪೂರ್ಣಗೊಳಿಸುವದು. ಹಾಗೂ ಬಾಕಿಯಿರುವ ಯು.ಜಿ.ಡಿಯನ್ನು ಪೂರ್ಣಗೊಳಿಸಲು ಕ್ರಮವಹಿಸುವದು. ಯು.ಜಿ.ಡಿ ನಿರ್ಮಾಣ ಕಾರ್ಯದಲ್ಲಿ ಅಗೆಯಲಾದ ರಸ್ತೆಯನ್ನು ಸುವ್ಯವಸ್ಥಿತವಾಗಿ ಮರುಸ್ಥಾಪಿಸುವಂತೆ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇ ಆನಂದ ರಾಠೋಡ ಅವರಿಗೆ ಅಧ್ಯಕ್ಷ ಶಾಂತವೀರ ಬಿರಾದಾರ ಸೂಚಿಸಿದರು.ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷ ಶಾಂತವೀರ ಬಿರಾದಾರ ಅಧ್ಯಕ್ಷತೆಯಲ್ಲಿ ವಿವಿಧ ವಿಷಯಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುಜಿಡಿ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಶೇಖರಣೆ ಟಾಕಿಗಳು ಒಡೆದುಹೋಗಿವೆ ಅವುಗಳ ಬಗ್ಗೆ ಗುತ್ತಿಗೆದಾರರಿಂದ ಮಾಹಿತಿ ಪಡೆದು ದುರಸ್ಥಿಗೊಳಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿ ಎಂದು ತಿಳಿಸಿದರು.ಟ್ರಾಫಿಕ್ ಸಮಸ್ಯೆಯ ನಿರ್ವಹಣೆ ಒನ್‌ವೇ ರಸ್ತೆ ನಿಗದಿಪಡಿಸುವದು. ಬೀದಿ ಬದಿ ವ್ಯಾಪಾರಿಗಳಿಗೆ ಟ್ರಾಫಿಕ್ ಸಮಸ್ಯೆಯಾಗದಂತೆ ಸ್ಥಳಾಂತರಿಸಲು ಕ್ರಮವಹಿಸುವದು. ರಸ್ತೆ ಸುರಕ್ಷತಾ ಕ್ರಮ ವಹಿಸುವುದು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಿ.ಸಿ ಟಿವಿ ಅಳವಡಿಸುವಂತೆ ಕ್ರಮ ವಹಿಸಿ ಎಂದು ಪೋಲಿಸ್ ಇಲಾಖೆಗೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಷ್ಟ್ರೋತ್ಥಾನ ಪರಿಷತ್ತು ಬೆಂಗಳೂರು, ದರ್ಬಾರ್ ಪದವಿ ಮಹಾವಿದ್ಯಾಲಯ ವಿಜಯಪುರ ಇವರುಗಳ ಸಯೋಗದಲ್ಲಿ ವಿಜಯಪುರ ಜಿಲ್ಲೆಯ ಶಿಕ್ಷಣ ಮಹಾವಿದ್ಯಾಲಯಗಳ ಪ್ರಶಿಕ್ಷಣಾರ್ಥಿಗಳಿಗೆ ನಡೆಸಿದ ಸ್ವಸ್ಥ ಸುಸ್ಥಿರ ಸಮಾಜ ನಿರ್ಮಾಣ ಕುರಿತಾದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸಿಂದಗಿಯ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಶ್ರೀ ಪದ್ಮರಾಜ್ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ದೌಲತರಾಯ ಗೊಬ್ಬುರ ಇಂಗ್ಲೀಷ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕನ್ನಡ ವಿಭಾಗದಲ್ಲಿ ಅಶ್ವಿನಿ ಕೋರೆ ಜಿಲ್ಲಾ ಮಟ್ಟಕ್ಕೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಪ್ರಾಚಾರ್ಯ ಜೆ.ಸಿ.ನಂದಿಕೋಲ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More