Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 77 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಪ್ರಯುಕ್ತ ಪ್ರಿನ್ಸಿಪಾಲ್ ಪ್ರೊ ನಾಗಪ್ಪ ಚಾವಲ್ಕರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಒಕ್ಕೂಟಕ್ಕೆ ಹೈದ್ರಾಬಾದ್ ಕರ್ನಾಟಕ ಅಥವಾ ಕಲ್ಯಾಣ ಕರ್ನಾಟಕದ ಬೀದರ್, ಕಲಬುರ್ಗಿ, ರಾಯಚೂರು, ಬಳ್ಳಾರಿ ಕೊಪ್ಪಳ, ಯಾದಗಿರಿ, ವಿಜಯನಗರ ಏಳು ಜಿಲ್ಲೆಗಳನ್ನು ವಿಲೀನಗೊಳಿಸಲು ಶ್ರಮಿಸಿದ ಸಮಸ್ತ ಹೋರಾಟಗಾರ ತ್ಯಾಗ ಬಲಿದಾನವನ್ನು ಸ್ಮರಿಸಿ, ಗೌರವಪೂರ್ವಕ ನಮನಗಳನ್ನು ಸಲ್ಲಿಸಿದರು.ಇದೇ ವೇಳೆ ಉಪನ್ಯಾಸಕರಾದ ಡಾ ಸಿದ್ದಲಿಂಗ ರಾಠೋಡ್, ಗುಲಾಂ ಮೈಹಿಬೂಬಸಾಬ್, ಡಾ ಬಸಮ್ಮ ಎಸ್, ನಸ್ರೀನ್ ತಾಜ್, ಡಾ ಪೂಜ್ಯಾ ಹೊನ್ನುಟಗಿ, ಡಾ ಯಂಕನಗೌಡ ಎಸ್, ಶರಣಪ್ಪ ನಡಕೂರ, ಸಂಗಪ್ಪ ಪಟ್ಟಣಕರ್, ಮಾಸುಮ ಅಲಿ ನಾಶಿ, ಮಾಳಪ್ಪ, ಹರ್ಷದ್, ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಇದೇ ಸಂದರ್ಭದಲ್ಲಿ ಶ್ರೀ ವಿಶ್ವಕರ್ಮ ಜಯಂತಿಯ ಅಂಗವಾಗಿ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.
ರಾಜ್ಯಮಟ್ಟದ ಮಕ್ಕಳ ಕಥಾ ಕಮ್ಮಟ ಉದ್ಘಾಟಿಸಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ಉದಯರಶ್ಮಿ ದಿನಪತ್ರಿಕೆ ಧಾರವಾಡ: ಬಾಲಮಂದಿರದ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಾಗರೀಕ ಸಮಾಜದಲ್ಲಿರುವ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ, ಆ ಒಂದು ಪ್ರಯತ್ನದ ಭಾಗವಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ಮಕ್ಕಳ ವ್ಯಕ್ತಿತ್ವ ಅರಳಲಿ ಎನ್ನುವ ಸದಾಶಯದಿಂದ ರಾಜ್ಯಮಟ್ಟದ ಮಕ್ಕಳ ಕಥಾ ಕಮ್ಮಟವನ್ನು ನಾಡಿನ ಬಾಲ ಮಂದಿರದ ಮಕ್ಕಳಿಗಾಗಿ ಐದು ದಿನಗಳ ಕಾಲ ನಿಸರ್ಗದ ಮಡಿಲಲ್ಲಿ ರೂಪಿಸಲಾಗಿದೆ. ಇಂಥ ಮಕ್ಕಳ ಸೇವೆ ಮಾಡುವ ಸೌಭಾಗ್ಯ ನನಗೆ ದೊರೆತಿದ್ದು ನನ್ನ ಜೀವನದ ಅಮೃತ ಘಳಿಗೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಮಂಗಳವಾರ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಹಾಗೂ ಸಮಗ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಆಶ್ರಯದಲ್ಲಿ ಧಾರವಾಡದ ಸಮೀಪವಿರುವ ಹಳ್ಳಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಚರ್ ಫಸ್ಟ್ ಇಕೋ ವಿಲೇಜ್ ನಲ್ಲಿ ಬಾಲಮಂದಿರ ಮಕ್ಕಳಿಗಾಗಿ ನಡೆಯುತ್ತಿರುವ ರಾಜ್ಯಮಟ್ಟದ ಮಕ್ಕಳ ಕಥಾ…
Udayarashmi kannada daily newspaper
ಉದಯರಶ್ಮಿ ದಿನಪತ್ರಿಕೆ ಚಡಚಣ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ವೇದಿಕೆಯಾಗಿದ್ದು, ಮಕ್ಕಳಲ್ಲಿನ ಸೃಜನಶೀಲತೆಯೂ ವೃದ್ಧಿಸುವ ಜತೆಗೆ ವೇದಿಕೆ ಮೇಲಿನ ಭಯ ದೂರ ಮಾಡಲು ಸಹಕಾರಿಯಾಗಿದೆ ಎಂದು ಶಿಕ್ಷಕರ ಸೋಸಾಯಿಟಿ ಅಧ್ಯಕ್ಷ ಎಸ್.ಎಸ್ ಪಾಟೀಲ್ ಅವರು ಹೇಳಿದರು.ಪಟ್ಟಣದ ಶ್ರೀ ಕಲ್ಮೇಶ್ವರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಶಿಕ್ಷ ಣ ಹಾಗೂ ಸಾಕ್ಷರತಾ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರಸಮನ್ವಯ ಅಧಿಕಾರಿಗಳ ಕಾರ್ಯಾಲಯ ಚಡಚಣ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಚಡಚಣ ಇವರ ಸಹಯೋಗದಲ್ಲಿ ಆಯೋಜಿಸಿದ್ದ, ಚಡಚಣ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ‘ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಪ್ರತಿಭಾ ಕಾರಂಜಿ, ಮಕ್ಕಳ ಸಂತೆ ಮೇಳ, ಕ್ರೀಡಾಕೂಟ ಸೇರಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಕಾರದ ಪ್ರತಿಭೆಯನ್ನು ವ್ಯಕ್ತಪಡಿಸಬೇಕು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ ಖಂಡಿಸಿ ತಾಲೂಕಿನ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಸೆ.೧೭ ರಂದು ಬೆಳಿಗ್ಗೆ ೧೧ ಗಂಟೆಗೆ ಪ್ರತಿಭಟನೆ ನಡೆಸುವ ಮೂಲಕ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತಿದ್ದು ತಾಲೂಕಿನ ಎಲ್ಲ ಬಾಂಧವರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಡಿಎಸ್ಎಸ್ ಮುಖಂಡರು ಮನವಿ ಮಾಡಿದರು.ಈ ಕುರಿತು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಹರೀಶ ನಾಟೆಕಾರ, ಚನ್ನಪ್ಪ ವಿಜಯಕರ, ತಿಪ್ಪಣ್ಣ ದೊಡಮನಿ ಮತ್ತೀತರರು ಮಾತನಾಡಿ, ಕೂಡಲೇ ಶಾಸಕ ಮುನಿರ್ನ ಕುಟುಂಬವನ್ನು ರಾಜ್ಯದಿಂದ ಗಡಿಪಾರು ಮಾಡಬೇಕು. ಅಲ್ಲಿಯವರೆಗೆ ವಿವಿಧ ದಲಿತಪರ ಸಂಘಟನೆಗಳು ವಿವಿಧ ಹಂತದ ಹೋರಾಟವನ್ನು ಮಾಡಲು ಸಿದ್ಧರಿದ್ದೇವೆ ಎಂದರು.ದಲಿತರ ಮೇಲೆ ಮೇಲಿಂದ ಮೇಲೆ ಶೋಷಣೆಗಳು ನಡೆಯುತ್ತಲೇ ಇವೆ. ಇನ್ನೂ ಸಮಾಜ ಬಹಳ ಪರಿವರ್ತನೆಯಾಗಬೇಕಾಗಿದೆ. ೫ಜಿ ಯುಗದಲ್ಲಿ ಒಬ್ಬ ಶಾಸಕರ ಬಾಯಲ್ಲಿ ಇಂತಹ ಪದಗಳು ಬಳಕೆಯಾಗಿದ್ದು ದುರಾದೃಷ್ಟಕರ. ಈ ವಿಷಯವನ್ನು ಮುಂದಿಟ್ಟುಕೊಂಡು ಬೃಹತ್ ಹೋರಾಟ ನಡೆಸುತ್ತಿದ್ದು ತಾಲೂಕಿನ ಎಲ್ಲ ಬಾಂಧವರು ಭಾಗಿಯಾಗುವಂತೆ ಕರೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದಿದ್ದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ಇಬ್ಬರು ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ.ಸೋಮವಾರ ವಿಜಯಪುರದಲ್ಲಿರುವ ಗೃಹ ಕಚೇರಿಗೆ ಆಗಮಿಸಿದ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ವಿದ್ಯಾರ್ಥಿ ಶ್ರೀಧರ ಬಸವರಾಜ ಕಲ್ಯಾಣಿ ಮತ್ತು ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ವಿದ್ಯಾರ್ಥಿ ಯಮನಪ್ಪ ಕಾಡಪ್ಪ ಮಾದರ ಅವರಿಗೆ ಸಚಿವರು ಎಂ. ಬಿ. ಬಿ. ಎಸ್. ಕೋರ್ಸಿನ ಮೊದಲ ವರ್ಷದ ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ ಮತ್ತು ಊಟದ ಶುಲ್ಕಕ್ಕೆ ಅಗತ್ಯವಾಗಿರುವ ರೂ. 1,29,400 (ಒಂದು ಲಕ್ಷದ 29 ಸಾವಿರದ 400 ರೂಪಾಯಿ) ಹಣದ ಚೆಕ್ ವಿತರಿಸಿದರು.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಡೀ ಪ್ರಪಂಚದಲ್ಲಿಯೇ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರತಕ್ಕಂತಹ ಏಕೈಕ ರಾಷ್ಟ್ರ ಭಾರತ. ಹಾಗಾಗಿ ಇತರರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾರಬಾರದು ಎಂಬುದು ಭಾರತ ಸಂವಿಧಾನದ ಸ್ಪಷ್ಟವಾದ ನಿಲುವಾಗಿದೆ, ಆದರೆ ಬಿಹಾರ್ ರಾಜ್ಯದಲ್ಲಿ ಬೌದ್ಧರಲ್ಲದವರ ಅಧೀನದಲ್ಲಿರುವಬೌದ್ಧ ಗಯಾ ಬುದ್ಧ ವಿಹಾರದ ವಿಮೋಚನಾ ಸಂಕಲ್ಪಕ್ಕಾಗಿ ಬಿಹಾರದ ಪಾಟ್ನಾದಲ್ಲಿ ಸುಮಾರು 5 ಲಕ್ಷ ಬೌದ್ಧರ ಸಾರ್ವಜನಿಕ ಸಭೆ ಮತ್ತು ಶಾಂತಿಯಾತ್ರೆಗೆ ವಿಶೇಷವಾಗಿ ಸಿಂದಗಿ, ವಿಜಯಪುರ, ಮತ್ತು ಉತ್ತರ ಕರ್ನಾಟಕದಿಂದ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಮತ್ತು ಎಲ್ಲಾ ದಲಿತ ಸಂಘಟನೆಗಳ ನೇತೃತ್ವದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಭಾಗವಹಿಸಲು ಹೋಗುತ್ತಿದ್ದೇವೆಂದು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ,ಧಮ್ಮ ವಿಜಯ ಬುದ್ಧ ವಿಹಾರದ ಉಪಾಸಕ ರವಿ ಹೋಳಿ ಭಂಟನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬ (ಟಿಪಿಜೆಪಿ) ಪದಾಧಿಕಾರಿಗಳು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ ಮುಂದೆ ಹಮ್ಮಿಕೊಂಡ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಭಾನುವಾರ ೧೫ನೇ ದಿನಕ್ಕೆ ಕಾಲಿಟ್ಟಿದೆ.ಈ ಸಂದರ್ಭದಲ್ಲಿ ಟಿಪಿಜೆಪಿ ಆಲಮೇಲ ತಾಲೂಕಾ ಉಪಾಧ್ಯಕ್ಷರಾದ ಮಂಜುಕುಮಾರ ಕಾಂಬಳೆ ಮಾತನಾಡಿ, ಇಲ್ಲಿಯವರೆಗೂ ೧೫ ದಿನಗಳ ವರೆಗೆ ನಿರಂತರ ಶಾಂತ ರೀತಿಯಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದು ಇರುತ್ತದೆ. ಆದರೂ ಸರ್ಕಾರ ಸ್ಪಂದಿಸದೆ ಇರುವುದು ಸರ್ಕಾರದ ನಿಷ್ಕಾಳಜಿತನ ಎತ್ತಿ ತೋರಿಸುತ್ತದೆ. ಕೂಡಲೇ ಶೀಘ್ರವಾಗಿ ನಮ್ಮ ಹಣವನ್ನು ನಮಗೆ ಮರಳಿಸಬೇಕು ಕೂಡಲೇ ನಮ್ಮ ಸಮಸ್ಯೆಗೆ ಸ್ಪಂದಿಸದೆ ಇದ್ದರೆ ಮುಂದಿನ ದಿನಮಾನಗಳಲ್ಲಿ ನಾವು ಉಗ್ರವಾದ ಹೋರಾಟ ಹಮ್ಮಿಕೊಂಡು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಬಾಬು ಪಟೇಲ ಬಿರಾದಾರ ಮಾತನಾಡಿ, ಸರ್ಕಾರ ಬಡವರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಬಡವರ ಮೇಲಿನ ಕಾಳಜಿ ವಹಿಸದೆ ನಿರ್ಲಕ್ಷ್ಯ ತೋರಿಸುತ್ತಿರುವುದು ದುರದುಷ್ಟಕರವಾಗಿದೆ. ಆದಷ್ಟು ಬೇಗನೆ ಬಡವರ ಹಣವನ್ನು ಮರಳಿಸಿ…
ವಿಜಯಪುರದಲ್ಲಿ ಅಭಿಯಂತರ ದಿನಾಚರಣೆಗೆ ಚಾಲನೆ ನೀಡಿದ ಡಿಸಿ ಟಿ.ಭೂಬಾಲನ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್.ಎಂ.ವಿಶ್ವೇಶ್ವರಯ್ಯನವರು ಇಂಜನಿಯರಿಂಗ್ ಕ್ಷೇತ್ರದಲ್ಲಿ ಅಗಾಧ ಕೊಡುಗೆ ನೀಡಿದ ಅಪ್ರತಿಮ ಕನ್ನಡಿಗರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ ಹೇಳಿದರು.ನಗರದ ಸ್ಪೂರ್ತಿ ರೆಸಾರ್ಟ್ ಆವರಣದಲ್ಲಿ ಭಾನುವಾರ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ ಸಿವಿಲ್ ಇಂಜಿನಿಯರ್ಗಳ ಸಂಘ ವಿಜಯಪುರ ಅಡಿಯಲ್ಲಿ ಎಂ.ವಿಶ್ವೇಶ್ವರಯ್ಯ ಜನ್ಮದಿನವನ್ನು ಅಭಿಯಂತರ ದಿನಾಚರಣೆಯನ್ನಾಗಿ ಆಚರಣೆ ಮಾಡುವ ಸಂದರ್ಭದಲ್ಲಿ ಪಾಲ್ಗೊಂಡು ದೀಪ ಬೆಳಗಿಸಿ ಮಾತನಾಡಿದರು.ಭಾರತದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಎಲ್ಲಾ ಅಭಿಯಂತರರಿಗೆ ಅಭಿನಂದನೆಗಳು. ವಿಕಸಿತ ಭಾರತ ನಿರ್ಮಾಣದಲ್ಲಿ ನಿಮ್ಮ ಕೊಡುಗೆ ಅಮೂಲ್ಯ ಎಂದರು.ಕಾರ್ಯಕ್ರಮದ ಪ್ರಾಯೋಜಕ ಜೆಎಸ್ಡಬ್ಲೂ ಸ್ಟೀಲ್ಸ್ನ ಅತಿಶ ಶಶಿಧರ, ಸಹಪ್ರಾಯೋಜಕ ವಿವಾ ಗ್ರೂಪ್ನ ಕರ್ನಾಟಕ ಭಾಗದ ಮುಖ್ಯಸ್ಥ ಗೋವಿಂದರಾಜ. ವಿ. ಅಲ್ಟಾçಟೆಕ್ ತಾಂತ್ರಿಕ ಮುಖ್ಯಸ್ಥ ಚೇತನ ತಮ್ಮ ಕಂಪನಿಗಳ ಕಾರ್ಯಕ್ಷಮತೆ, ವ್ಯಾಪ್ತಿ, ಗುಣಮಟ್ಟ, ಉತ್ಪನ್ನಗಳ ಕುರಿತು ಮಾಹಿತಿ ನೀಡಿದರು.ರಿಯಲ್ ಎಸ್ಟೇಟ್ ಉದ್ಯಮದ ಮಹಾವೀರ ಮೆಹತಾ, ನಿವೃತ್ತ ಕಾರ್ಯನಿರ್ವಾಹಕ ಇಂಜನೀಯರ ಎಂ.ಬಿ.ಉಳ್ಳಾಗಡ್ಡಿ, ಗುತ್ತಿಗೆದಾರ ಎಸ್.ಐ. ಡೋಣೂರಮಠ, ಬಿ.ಎಲ್.ಡಿ.ಇ ಇಂಜನಿಯರಿಂಗ್ ಕಾಲೇಜಿನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೆ.15 ರಂದು ಬೆಂಗಳೂರಿನ ದಿ.ಮಿಥಿಕ ಸೊಸೈಟಿ ಯವರು ಪ್ರತಿ ತಿಂಗಳ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಂಗವಾಗಿ ದಲಿತಗುರು ದಿ.ತಲಕಾಡು ರಂಗೇಗೌಡ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹರಿಜನ ಮಕ್ಕಳ ಶಿಕ್ಷಣಕ್ಕಾಗಿ ಹರಿಜನ ವಸತಿ ನಿಲಯವನ್ನು ಸ್ಥಾಪಿಸಿ, ಆ ಮಕ್ಕಳಿಗಾಗಿ ಆಜೀವ ಬ್ರಹ್ಮಚರ್ಯ ವ್ರತವನ್ನಚಾರಿಸಿ ದುಡಿದ ಪದ್ಮಶ್ರೀ ಗಣೇಶ ಗೋವಿಂದ ಕಾರಾಖನಿಸರ ವಿಷಯವನ್ನು ಆಧರಿಸಿ ಸಂಸದ ಗೋವಿಂದ ಎಂ. ಕಾರಜೋಳ ಅವರು ಉಪನ್ಯಾಸ ನೀಡಿದರು.ವಿಜಯಪುರದ ಸಾಕ್ಷ್ಯಚಿತ್ರ ನಿರ್ಮಾಪಕ ಮೋಹನ ಕಟ್ಟಿಮನಿ ನಿರ್ಮಿಸಿದ ಕಿರುಚಿತ್ರ ದಲಿತೋದ್ಧಾರಕ ಪದ್ಮಶ್ರೀ ಕಾಕಾ ಕಾರಖಾನಿಸರ ಟೀಸರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಸಮಗ್ರ ಕಾರ್ಯಕ್ರಮ ಕುರಿತು, ಹಿರಿಯ ಪತ್ರಕರ್ತ ವಾದಿರಾಜ ಮಾತನಾಡಿ, ಈ ತರದ ವ್ಯಕ್ತಿಗಳ ಚಿತ್ರಗಳು ಸವರ್ಣಿಯರಿಗೆ ಪ್ರೇರಣೆಯದರೆ ಬೇರೂರಿದ್ದ ಜಾತಿಯತೆಯಿಂದ ಹೊರಬರಲು ಸಾಧ್ಯವಾಗುತ್ತದೆಂದು ಹೇಳಿದರು.ಕಾಕಾ ಕಾರಾಖಾನಿಸ್ ಅವರ ಶಾಲೆಯಲ್ಲಿ ಕಲಿತ ತಮ್ಮ ಅಪರೂಪದ ಅನುಭವಗಳನ್ನು ಸಂಸದ ಕಾರಜೋಳ ಅವರು ಹಂಚಿಕೊಂಡು ಭಾವುಕರಾದರು.ಈ ಸಂದರ್ಭದಲ್ಲಿ ದಿ ಮಿಥಿ ಕ್ ಸೊಸೈಟಿಯ ಅಧ್ಯಕ್ಷರು ಅಧ್ಯಕ್ಷತೆಯ ವಹಿಸಿದ್ದರು.ಭಾಜಪ ಯುವ…
