Author: editor.udayarashmi@gmail.com

ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳದಿಂದ ಗಣೇಶ ವಿಸರ್ಜನಾ ಮೆರವಣಿಗೆ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಗಳ ಪವಿತ್ರ ಹಬ್ಬವಾದ ಗಣಪತಿ ವಿಸರ್ಜನೆ ಮೆರವಣಿಯನ್ನು ಸಹಿಸುವ ಶಕ್ತಿ ಕೆಲವರಿಗೆ ಇಲ್ಲ. ಇಲ್ಲಿ ಮೋದಿ ಮತ್ತು ಯೋಗಿ ಇರುವವರೆಗೂ ನೀವಿಲ್ಲಿ ಬಾಲ ಬಿಚ್ಚಲಾಗಲ್ಲ. ಇಲ್ಲಿ ಇರಬೇಕೆಂದರೇ ಚಂದಾಗಿ ಇರಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ದೇಶ ವಿರೋಧಿ, ಧರ್ಮ ವಿರೋಧಿಗಳಿಗೆ ಎಚ್ಚರಿಕೆ ನೀಡಿದರು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಮುಂಭಾಗದ ಸರ್ದಾರ ವಲ್ಲಭಬಾಯಿ ಪಟೇಲ್ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳದ ವತಿಯಿಂದ ಹಮ್ಮಿಕೊಂಡಿದ್ದ 7ನೇ ದಿನ ಗಣೇಶ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಇನ್ನು ಮುಂದೆ ನಾವೆಲ್ಲ ಒಂದಾಗಿರಬೇಕು. ಗಣಪತಿ ಪ್ರತಿಷ್ಠಾಪನೆಗೆ ಪರವಾನಗಿ ಇಲ್ಲದೆ ಇಡುವಂತ ಹಾಗೂ ಗಣಪತಿ ಮೇಲೆ ಕಲ್ಲು ಹಾಕಿದರೆ ಅವರ ಮೇಲೆ ಬುಲ್ಡೋಜರ್ ಹಾಕೋ ಮುಖ್ಯಮಂತ್ರಿ ಬೇಕು. ಇದು ಶಿವಾಜಿ ಮಹಾರಾಜರ ನೆಲವಿದು. ಯಾರಿಗೂ ಹೆದರುವ ಅವಶ್ಯಕತೆಯಿಲ್ಲ. ನಾವು ವಿಜಯಪುರದಲ್ಲಿ ಆವಾಜ್…

Read More

ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ತಾಲ್ಲೂಕಿನ ಜೈನಾಪುರ ಸರ್ಕಾರಿ ಪ್ರೌಢ ಶಾಲೆಯ ವಿಧ್ಯಾರ್ಥಿಗಳಿಗೆ ಬೆಳ್ಳುಬ್ಬಿಯ ಮಳೆ ಮಲ್ಲೇಶ್ವರ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯ ವತಿಯಿಂದ ಎಲ್ಲ ವಿಧ್ಯಾರ್ಥಿಗಳಿಗೆ ಶನಿವಾರ ಕಲಿಕಾ ಸಾಮಗ್ರಿಗಳ ವಿತರಣೆ ಮಾಡಿ ಬಡ ಮಕ್ಕಳ ಕಲಿಕೆಗೆ ಪ್ರೋತ್ಸಾಹಿಸಿದರು.ಸಂಸ್ಥೆಯ ಉಪಾಧ್ಯಕ್ಷ ಸಿದರಾಯ ಹೊಸಮನಿ ಮಾತನಾಡಿ ಮಕ್ಕಳ ಅಭಿವೃದ್ಧಿಗಾಗಿ ನಮ್ಮ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಮಮದಾಪೂರ ವಲಯ ಮಟ್ಟದಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಬಡ ಮಕ್ಕಳ ಕಲಿಕೆಗೆ ಅಗತ್ಯ ಕಲಿಕಾ ಸಾಮಗ್ರಿ ವಿತರಿಸುತ್ತಾ ಮಕ್ಕಳ ಕಲಿಕೆಗೆ ಅನೂಕೂಲ ಮಾಡಿಕೊಡುತ್ತಿದ್ದೇವೆ ಎಂದರು.ಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಅವಟಿ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಓದುವ ಬಡ ಮಕ್ಕಳಿಗೆ ಈ ಸೇವಾ ಸಂಸ್ಥೆ ಎಲ್ಲ ಸಹಕಾರ ನೀಡಿ ಮಕ್ಕಳ ಕಲಿಕೆಗೆ ಉತ್ತೇಜನ ನೀಡುತ್ತಿದೆ. ಈ ಸಂಸ್ಥೆ ಇನ್ನೂ ಹೆಚ್ಚು ಅಭಿವೃದ್ಧಿ ಹೊಂದಲಿ ಎಂದು ಸೇವಾ ಸಂಸ್ಥೆಯ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಾನಂದ ಚನಗೊಂಡ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸದಾನಂದ ಮಂಟೂರ, ಶಾಲಾ ಶಿಕ್ಷಕರು,…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆ ಹಾಗೂ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಂಡರೆ ಆರೋಗ್ಯಯುತ ಸಮಾಜ ನಿರ್ಮಾಣವಾಗುತ್ತದೆ ಎಂದು ಸ್ಥಳೀಯ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪುರಸಭೆ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಪುರಸಭೆ ಪೌರಕಾರ್ಮಿಕರು ಪ್ರತಿ ಮನೆಗಳ ಕಸ ಸಂಗ್ರಹಿಸುವುದರೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಸಂಗ್ರಹಿಸುವ ಮೂಲಕ ಪಟ್ಟಣದ ಸ್ವಚ್ಛತೆಗೆ ಶ್ರಮಿಸುತ್ತಿದ್ದಾರೆ. ಅವರೊಂದಿಗೆ ಜನರು ಸಹಕರಿಸಿ ಕೈಜೋಡಿಸಿದಾಗ ಸುಂದರ ಪಟ್ಟಣವನ್ನಾಗಿಸಬಹುದು. ನಮ್ಮ ಸ್ವಭಾವ, ಸಂಸ್ಕಾರ ಸ್ವಚ್ಛವಾಗಿದ್ದಾಗ ಸ್ವಚ್ಛತೆಯ ಮಹತ್ವ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಪುರಸಭೆ ಸದಸ್ಯೆ ಜಗದೇವಿ ಗುಂಡಳ್ಳಿ , ಅಶೋಕ ಹಾರಿವಾಳ ಮಾತನಾಡಿ, ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಹೇಳಿದರು.ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಮಾತನಾಡಿ, ಸ್ವಚ್ಛತೆಯ ಮಹತ್ವ ತಿಳಿಸಿಕೊಡುವುದಕ್ಕಾಗಿ ಮಾನವ ಸರಪಳಿ, ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ, ತ್ಯಾಜ್ಯ ವಸ್ತುಗಳಿಂದ ತಯಾರಿಸಿದ ವಸ್ತುಗಳ ಪ್ರದರ್ಶನ, ಬೀದಿ ನಾಟಕ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಕರವೇ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿ, ದೇಶದಲ್ಲಿನ ವಿವಿಧ ಭಾಷೆಗಳು ತನ್ನದೇಯಾದ ವಿಶಿಷ್ಟ ಸ್ಥಾನಮಾನ ಹೊಂದಿವೆ. ಪ್ರತಿಯೊಂದು ಭಾಷೆ ಬೆಳವಣಿಗೆಗೆ ತನ್ನದೇಯಾದ ಇತಿಹಾಸವಿದೆ. ಕೇಂದ್ರ ಸರ್ಕಾರ ಹಿಂದಿ ಭಾಷೆ ದಿವಸ, ಹಿಂದಿ ಸಪ್ತಾಹದಂತಹ ಕಾರ್ಯಕ್ರಮಗಳ ಮೂಲಕ ಹಿಂದಿ ಭಾಷೆ ಹೆರಿಕೆ ಮಾಡಲು ಮುಂದಾಗುತ್ತಿರುವುದನ್ನು ಕರವೇ ಬಲವಾಗಿ ಖಂಡಿಸುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಹಾಂತೇಶ ಚಕ್ರವರ್ತಿ, ಮಹಾಂತೇಶ ಗಿಡ್ಡಪ್ಪಗೋಳ, ರವಿ ವಡ್ಡರ, ರವಿ ಗೊಳಸಂಗಿ, ಹಣಮಂತ ಟಕ್ಕಳಕಿ, ರಾಜು ಬೇಲಿ, ಅಸ್ಲಂ ಹಳ್ಳಿ, ವೀರೇಶ ಭಂಡಾರಿ, ಅನಿಲ ಕುಶಾಲಕರ, ರಫಿಕ ಜೈನಾಪುರ, ಗಣೇಶ ವಾಲಿಕಾರ, ಮಲ್ಲು ಗುಂಡಣ್ಣವರ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಕಾಂಗ್ರೆಸ್ ಸರಕಾರ ಹಣ ಬಿಡುಗಡೆ ಮಾಡಿದ್ದರೆ ದಾಖಲೆ ಬಿಡುಗಡೆ ಮಾಡಲಿ, ಬಿಜೆಪಿ ಅವಧಿಯಲ್ಲಿನ ಎಷ್ಟು ಕಾಮಗಾರಿಗಳನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿಲ್ಲವೇ..?ಲೋಕಾರ್ಪಣೆಗೊಳಿಸಿಲ್ಲವೇ..? ಕೇಂದ್ರ ಸರಕಾರದ ಹಲವಾರು ಯೋಜನೆಗಳ‌ ಕಾಮಗಾರಿ ಪೂಜೆ ಸಹ ಶಾಸಕರೆ ಮಾಡಿದ್ದಾರೆ.‌ ಅದಕ್ಕೆ ಸಂಸದರ ತ್ಯಾಗ ಭಾವನೆ ಕಾರಣ. ಆದರೆ ಚಿಕ್ಕ ಪುಟ್ಟ ವಿಷಯಗಳಿಗೆ ರಾಜಕಾರಣ ಮಾಡುತ್ತಿರುವುದು ಕಾಂಗ್ರೆಸ್ ಮುಖಂಡರ‌‌‌ ಹಾಗೂ ಶಾಸಕರ ನಡೆ ಜನರಿಗೆ ಅರ್ಥವಾಗುತ್ತಿದೆ ಎಂದು ಬಿಜೆಪಿ ಮಂಡಳ‌ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಕೈ ಮುಖಂಡರ ವಿರುದ್ಧ ಆರೋಪಿಸಿ, ಕಿಡಿಕಾರಿದರು.ಅವರು ಶುಕ್ರವಾರ ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಕೇಂದ್ರ ಸರ್ಕಾರದ ಯೋಜನೆಗಳ ಕಾಮಗಾರಿಗಳ ಭೂಮಿ ಪೂಜೆಯನ್ನು ಸಹ ತಾವೇ ಮಾಡುವ ಶಾಸಕರಿಗೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಭೂಮಿ ಪೂಜೆಯನ್ನು ಸಂಸದರಿಂದ ಮಾಡಿಸಿ ಜನರಿಗೆ ಬಿಜೆಪಿಯ ಕಾರ್ಯ ಎಂದು ಗೊತ್ತಾಗುವಂತೆ ಮಾಡಿದ್ದು ಹೊಟ್ಟೆಯಲ್ಲಿ ಬೆಂಕಿ ಬಿದ್ದಂತಾಗಿದೆ ಹೀಗಾಗಿ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದರ ಬಗ್ಗೆ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕ್ಯಾಂಟರ್ ಗೂಡ್ಸ್ ಮತ್ತು ಟಂ,ಟಂ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಟಂ,ಟಂ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಕವಡಿಮಟ್ಟಿ-ಹಿರೇಮುರಾಳ ಗ್ರಾಮಗಳ ಮಧ್ಯೆ ಶನಿವಾರ ಮದ್ಯಾಹ್ನ ಸಂಭವಿಸಿದೆ.ಮೃತ ದುರ್ದೈವಿಯನ್ನು ಕರೆಪ್ಪ ನಾಲತವಾಡ(೪೮) ಎಂದು ಗುರುತಿಸಲಾಗಿದೆ. ಮೂಲತಃ ಚವನಭಾವಿ ಗ್ರಾಮದ ಕರೆಪ್ಪ ತಮ್ಮೂರಲ್ಲಿ ಕಿರಾಣಿ ಅಂಗಡಿಯೊಂದರ ಮಾಲೀಕನಾಗಿದ್ದ. ತನ್ನ ಅಂಗಡಿಗೆ ಸರಕು ತರಲು ಪಟ್ಟಣಕ್ಕೆ ಅಟೋ ಮೂಲಕ ಬಂದಿದ್ದು, ಎಲ್ಲ ಸರಕನ್ನು ಖರೀದಿಸಿ ಮರಳುವಾಗ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನೆಯಲ್ಲಿ ಚವನಭಾವಿ ಗ್ರಾಮದ ಆಟೋ ಚಾಲಕ ಯಮನಪ್ಪ ಜಗಂಡಬಾವಿ ಈತನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಸಂಜೀವ ತಿಪರೆಡ್ಡಿ ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.ಮೃತನಿಗೆ ಪತ್ನಿ, ಪುತ್ರಿ, ಈರ್ವರು ಪುತ್ರರು ಇದ್ದು ಮನೆಯ ಒಡೆಯನನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ.ಎಫ್‌ಐಆರ್ ದಾಖಲು :ಕ್ಯಾಂಟರ್ ವಾಹನ ಚಾಲಕ ವಾಹನವನ್ನು ನಾತವಾಡ ಕಡೆಯಿಂದ ಅತೀ ವೇಗವಾಗಿ ನಿರ್ಲಕ್ಷತನದಿಂದ ಚಲಾಯಿಸಿ ಟಂ,ಟಂ ಗೆ ಹಾಯಿಸಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿದರು.ಮುದ್ದೇಬಿಹಾಳ: ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು.ಸದರಿ ಲೋಕ ಅದಾಲತ್ ನಲ್ಲಿ ಎರಡು ನ್ಯಾಯಾಲಯಗಳಿಗೆ ಸಂಬAಧಿಸಿದAತೆ ನ್ಯಾಯಾಲಯದಲ್ಲಿ ಒಟ್ಟು ೬೨೯೧ ಬಾಕಿ ಇರುವ ಪ್ರಕರಣಗಳ ಪೈಕಿ ೧೮೬೬ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್.ಎ.ಸಿ ಇಪಿ ಪ್ರಕರಣಗಳು, ಎಮ್.ವಿ.ಸಿ, ಇಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳು, ಹಾಗೂ ಅಬಕಾರಿ ಇಲಾಖೆಯ ಪ್ರಕರಣಗಳು ಹೀಗೆ ಒಟ್ಟು ೧೨೬೫ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.ಅಲ್ಲದೇ ಪೂರ್ವದಾವೆ ಪ್ರಕರಣಗಳಲ್ಲಿ, ಟ್ರಾಫಿಕ್ ಚಲನ್ ಪ್ರಕರಣಗಳು, ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು, ಹಾಗೂ ಬ್ಯಾಂಕಿನ ಪ್ರಕರಣಗಳು ಸೇರಿ ಒಟ್ಟು ೪೫೦೧…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾರ್ವಜನಿಕರಲ್ಲಿ ಸ್ವಚ್ಛತೆಯ ಪಾಲುದಾರಿಕೆ ಅರಿವು ಮೂಡಿಸುವ ಅಂಗವಾಗಿ ಸ್ವಭಾವ ಸ್ವಚ್ಛತೆ ಮತ್ತು ಸಂಸ್ಕಾರ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಹೇಳಿದರು.ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಶನಿವಾರ ಸ್ವಚ್ಛ ಭಾರತ ಮಿಷನ್ ಯೋಜನೆಯ ಸ್ವಚ್ಛತೆಯೇ ಸೇವೆ ಕಾರ್ಯಕ್ರಮದ ಅಡಿಯಲ್ಲಿ ಪಟ್ಟಣ ಪಂಚಾಯಿತಿ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರೊಂದಿಗೆ ಸ್ವಚ್ಛತಾ ಕಾರ್ಯ ನೆರವೇರಿಸಿ ಮಾತನಾಡಿದರು.ಸ್ವಚ್ಛ ಭಾರತ ಮಿಷನ್ ನಿರ್ದೇಶನದಂತೆ ಪಟ್ಟಣದಾದ್ಯಂತ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಪಟ್ಟಣದಲ್ಲಿ ಈಗಾಗಲೇ ಮನೆ ಮನೆ ಕಸ ಸಂಗ್ರಹಣೆ ಮಾಡಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ಯುವಕ, ಸ್ತ್ರೀಶಕ್ತಿ ಸಂಘಗಳು ಕೈಜೋಡಿಸಬೇಕು ಎಂದರು.ನಂತರ ಪೌರಕಾರ್ಮಿಕರೊಂದಿಗೆ ಸೇರಿ ಸ್ವಚ್ಛತಾ ಹೀ ಸೇವಾ ಎಂಬ ರಂಗೋಲಿ ಬಿಡಿಸಿ ಮಹಾತ್ಮ ಗಾಂಧೀಜಿಯವರ ಸ್ವಚ್ಛತಾ ಕನಸನ್ನು ಎಲ್ಲರೂ ಒಂದಾಗಿ ನನಸು ಮಾಡೋಣ ಎಂದು ಕರೆ ನೀಡಿದರು.ಪಟ್ಟಣ ಪಂಚಾಯಿತಿಯ ೧೭ ಹಾಗೂ ೩ ನಾಮನಿರ್ದೇಶಿತ ಸದಸ್ಯರಲ್ಲಿ ಕೇವಲ ೮ನೇ ವಾರ್ಡಿನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಗೆ ಕೇಂದ್ರ ಜಲ ಶಕ್ತಿ ತಂಡದ ನೂಡಲ್ ಅಧಿಕಾರಿಗಳಾದ ವಿಕಾಸ್ ಡೋಗ್ರಾ ನಿರ್ದೇಶಕರು, ಬೃಹತ್ ಕೈಗಾರಿಕೆ ಸಚಿವಾಲಯ ಮತ್ತು ಕೇಂದ್ರ ಜಲ ಶಕ್ತಿ ನೋಡಲ್ ಅಧಿಕಾರಿಗಳು, ಅನಾಮಿಕ ಐಚ್ ತಾಂತ್ರಿಕ ಅಧಿಕಾರಿಗಳು ಬೆಂಗಳೂರು ಇವರು ವಿಜಯಪುರ ತಾಲೂಕು ಹಾಗೂ ಇಂಡಿ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ವಿಜಯಪುರ ತಾಲೂಕಿನ ಭೂತನಾಳ ಗ್ರಾಮದ ಅರಣ್ಯ ಇಲಾಖೆಯ ನರ್ಸರಿಗೆ ಭೇಟಿ ನೀಡಿ ಸಸಿಗಳ ಪಾಲನೆ ಪೋಷಣೆಗಳ ಬಗ್ಗೆ ಮಾಹಿತಿ ಪಡೆದ ಅವರು, ಸ್ವತಃ ತಾವೇ ಸಸಿಗಳಿಗೆ ನೀರುಣಿಸಿದರು. ತದನಂತರ ತಿಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ನಿರ್ಮಿಸಿರುವ ಪ್ರತಿ ಮನೆಗಳಿಗೆ ನಲ್ಲಿಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಕುರಿತು ಪರಿಶೀಲನೆ ನಡೆಸಿದರು.ಡೋಮನಾಳ ಗ್ರಾಮದ ಗುಡ್ಡದ ಅರಣ್ಯ ವಲಯಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ತೋಟಗಾರಿಕೆ ಇಲಾಖೆಯಡಿ ಅನುಷ್ಠಾನಗೊಂಡಿರುವ ದ್ರಾಕ್ಷಿ ಬೆಳೆ ವೀಕ್ಷಿಸಿದರು. ನಂತರ ಇಂಡಿ ತಾಲೂಕಿನ ಬಸನಾಳ…

Read More

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪ್ರಜಾಪ್ರಭುತ್ವ ವನ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸೆ.೧೫ರಂದು ಜಿಲ್ಲೆಯಾದ್ಯಂತ ವಿವಿಧ ಕ್ಷೇತ್ರದ ೨೮.೫೦ ಹೆಕ್ಟೇರ್ ಪ್ರದೇಶದಲ್ಲಿ ೩೦,೦೦೦ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಪ್ರಾದೇಶಿಕ ಅರಣ್ಯ ವಿಭಾಗದಿಂದ ಸಸಿಗಳನ್ನು ನೆಡಲು ಜಿಲ್ಲೆಯ ವಿವಿಧ ಸ್ಥಳಗಳನ್ನು ಆಯ್ಕೆ ಮಾಡಲಾಗಿದ್ದು, ಆಯಾ ಕ್ಷೇತ್ರಗಳಲ್ಲಿ ವಿವಿಧ ವರ್ಗಗಳ ಪ್ರತಿನಿಧಿಗಳಿಂದ ಉದ್ಘಾಟನೆಗೊಳಿಸಿ ಆಯಾ ಕ್ಷೇತ್ರಗಳಿಗೆ ಅರ್ಪಣೆ ಮಾಡಲಾಗುವುದು.ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ೧೦ ಹೆಕ್ಟೇರ್ ಪ್ರದೇಶದಲ್ಲಿ ೬೦೦೦ ಸಸಿಗಳನ್ನು ನಾಗರಿಕರಿಂದ ನೆಡುವ ಮೂಲಕ ನಾಗರಿಕರಿಗೆ ಈ ಕ್ಷೇತ್ರವನ್ನು ಅರ್ಪಣೆ ಮಾಡಲಾಗುವುದು.ಚಡಚಣ ತಾಲೂಕಿನ ಬಳ್ಳೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ೫ ಹೆಕ್ಟೇರ್ ಪ್ರದೇಶದಲ್ಲಿ ೨೫೦೦ ಸಸಿಗಳನ್ನು ಪತ್ರಿಕಾ ಮಾಧ್ಯಮದವರಿಂದ ನೆಡುವ ಮೂಲಕ ಪತ್ರಿಕಾ ಮಾಧ್ಯಮದವರಿಗೆ ಈ ಕ್ಷೇತ್ರವನ್ನು ಅರ್ಪಣೆ ಮಾಡಲಾಗುವುದು.ಸಿಂದಗಿ ತಾಲೂಕಿನ ಸಿಂದಗಿ ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ ೪…

Read More