Author: editor.udayarashmi@gmail.com

ಕ್ರೀಡಾಪಟುಗಳ ಅಮೋಘ ಆಟೋಟಗಳ ಪ್ರದರ್ಶನ | ೨೯ ಸ್ಪರ್ಧೆಗಳಲ್ಲಿ ವೀರೋಚಿತ ಗೆಲುವು | ಮಾಳಪ್ಪಗೆ ಟ್ರಾಕ್ ಆ್ಯಂಡ್ ಫೀಲ್ಡ್ ಚಾಂಪಿಯನ್ ಪಟ್ಟ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಪ್ರಸಕ್ತ ೨೦೨೪-೨೫ ನೇ ಸಾಲಿನ ನಿಡಗುಂದಿ “ಎ” ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಆಲಮಟ್ಟಿ ಎಂ.ಎಚ್.ಎಂ ಪ್ರೌಢಶಾಲೆಯ ಕ್ರೀಡಾಪಟುಗಳು ಹಲವಾರು ಸ್ಪರ್ಧೆಗಳಲ್ಲಿ ವೀರೋಚಿತ ಅಮೋಘ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿ ಪದಕಗಳ ಸರಮಾಲೆ ಬಾಚಿಕೊಂಡು ಕ್ರೀಡಾಪ್ರೇಮಿಗಳ ಗಮನ ಸೆಳೆದಿದ್ದಾರೆ.   ನಿಡಗುಂದಿ ಬನಶಂಕರಿ ಪಬ್ಲಿಕ್ ಸ್ಕೂಲ್ ಮತ್ತು ಪಿಯುಸಿ ಕಾಲೇಜು ಆಶ್ರಯದಲ್ಲಿ ಜರುಗಿದ ಈ ಕ್ರೀಡಾಕೂಟದಲ್ಲಿ ಇಲ್ಲಿನ ಎಂ.ಎಚ್.ಎಂ.ಪ್ರೌಢಶಾಲೆಯ ಮಕ್ಕಳು ಬರೋಬ್ಬರಿ ೨೯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿ ಮಿಂಚಿದ್ದಾರೆ. ಪರಿಣಾಮ ಎಂ.ಎಚ್.ಎಂ. ಪ್ರೌಢಶಾಲೆಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಲಭಿಸಿದೆ. ಜೊತೆಗೆ ಈ ಶಾಲೆಯ ಮಾಳಪ್ಪ ಇಲ್ಯಾಳ ೧೦೦ ಮೀ, ೪೦೦ ಮೀ ಹಾಗೂ ಉದ್ದ ಜಿಗಿತದ ಸ್ಪರ್ಧೆಗಳಲ್ಲಿ ಜಯ ಸಾಧಿಸಿ ಸಮಗ್ರ ವೀರಾಗ್ರಣಿ ಸ್ಪಧಾ೯ಳು ಪ್ರಶಸ್ತಿ ಪಡೆದು ಮಿನುಗಿದ್ದಾನೆ.    ಎಂ.ಎಚ್.ಎಂ.ಶಾಲಾ ಕ್ರೀಡಾಪಟುಗಳು ಬಾಲಕ, ಬಾಲಕಿಯರ…

Read More

ಲೇಖಕರು- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ ಉದಯರಶ್ಮಿ ದಿನಪತ್ರಿಕೆ ಒಂದು ದೇಶದ ಆಡಳಿತವು ಆ ದೇಶದ ಎಲ್ಲಾ ನಾಗರಿಕರ ಸಮಾನ ಸಹಭಾಗಿತ್ವದೊಂದಿಗೆ ಸಾಗುವುದನ್ನು ನಾವು ‘ಪ್ರಜಾಪ್ರಭುತ್ವ’ ಎಂದು ಕರೆಯಬಹುದು. ಅಮೆರಿಕಾದ ಹಿಂದಿನ ಅಧ್ಯಕ್ಷರಾಗಿದ್ದ ಅಬ್ರಹಾಂ ಲಿಂಕನ್ ಅವರು ಹೇಳಿದಂತೆ ‘ಜನರಿಂದ ಜನರಿಗಾಗಿ ಜನರಿಗೋಸ್ಕರ ಇರುವ ಸರ್ಕಾರವೇ ಪ್ರಜಾಪ್ರಭುತ್ವ’.’ ಲೋಕವಾಣಿಯೇ ದೇವವಾಣಿ’ ಎಂಬಂತಹ ಪರಿಕಲ್ಪನೆಯನ್ನು ಹೊಂದಿರುವ ಪ್ರಜಾಪ್ರಭುತ್ವದಲ್ಲಿ ಆಳುವವರು ಮತ್ತು ಆಳಲ್ಪಡುವವರು ಪ್ರಜೆಗಳೇ. ಯಾವುದೇ ಜಾತಿ, ಮತ, ಪಂಥ, ಬಡವ, ಶ್ರೀಮಂತ ಎಂಬ ಭೇದವಿಲ್ಲದೆ ಸರ್ವರಿಗೂ ಸಮಾನವಾದ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಕೊಡ ಮಾಡುವ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ಎಂದು ಕರೆಯುತ್ತೇವೆ.ಈ ಮೊದಲು ರಾಜನ ಆಳ್ವಿಕೆಯನ್ನು, ಏಕ ಚಕ್ರಾಧಿಪತ್ಯವನ್ನು ಒಳಗೊಂಡಿದ್ದ ವಿಶ್ವದ ಬಹುತೇಕ ದೇಶಗಳಲ್ಲಿ ಪ್ರಜಾಪ್ರಭುತ್ವದ ಪರಿಕಲ್ಪನೆಯೇ ಇರಲಿಲ್ಲ. 16ನೇ ಶತಮಾನದ ಅಂತ್ಯದ ಸುಮಾರಿಗೆ ಅರಸೊತ್ತಿಗೆಗಳು ತಮ್ಮ ಬಲವನ್ನು ಕಳೆದುಕೊಳ್ಳುತ್ತಾ ಬಂದಂತೆ ಪ್ರಜಾಪ್ರಭುತ್ವದ ಕುರಿತಾದ ಯೋಜನೆಗಳು ರಾಜಕೀಯ ತಂತ್ರಜ್ಞರ, ಜ್ಞಾನಿಗಳ ಮನದಲ್ಲಿ ರೂಪುಗೊಳ್ಳಲಾರಂಭಿಸಿದವು.ಪ್ರಜಾಪ್ರಭುತ್ವದಲ್ಲಿ ಎರಡು ವಿಧಗಳಿದ್ದು ಒಂದು ನೇರ ಪ್ರಜಾಪ್ರಭುತ್ವವಾದರೆ ಮತ್ತೊಂದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿನ ಗೀತಾಂಜಲಿ ಮಾದರಿ ಶಾಲೆಯಲ್ಲಿ ಸೆ.೧೩ ರಂದು ಹಿಂದಿ ದಿವಸ್ ಆಚರಣೆ ಮಾಡಲಾಯಿತು. ಹಿಂದಿ ರಾಷ್ಟ್ರ ಭಾಷೆಯಾಗಿದ್ದು ಬೇರೆ ರಾಜ್ಯದ ಜನರೊಂದಿಗೆ ಸಂಪರ್ಕ ಸಾಧಿಸಬೇಕಾದರೆ ಅಲ್ಲಿನ ಸಂಸ್ಕೃತಿ, ಪರಿಸರ, ಸಂಪ್ರದಾಯ ತಿಳಿದುಕೊಳ್ಳಬೇಕಾದರೆ ರಾಷ್ಟ್ರೀಯ ಭಾಷೆಯಾದ ಹಿಂದಿ ಕಲಿಯುವದು ಬಹುಳ ಅವಶ್ಯಕತೆಯಿದೆ ಎಂದು ಶ್ರೀಮತಿ ಸುನಂದಾ ಕೊಂಡಗುಳಿ ಮುಖ್ಯೋಪಾಧ್ಯಾಯರು ಹೇಳಿದರು.ವಿದ್ಯಾರ್ಥಿಗಳು ಹಿಂದಿ ದಿವಸ್ ಕುರಿತು ನಾಟಕ ಪ್ರದರ್ಶಿಸಿದರಲ್ಲದೆ, ತುಳಸಿದಾಸರ ದೂಹೆ ಕುರಿತು ಮಾತನಾಡಿದರು.ಹಿಂದಿ ಭಾಷೆ ಶಿಕ್ಷಕಿ ಶ್ರೀಮತಿ ಗಾಯತ್ರಿ ಅಯೂಬ ಹಾಗೂ ಶ್ರೀಮತಿ ವಿಜಯಾ ಆಕಳವಾಡಿ ಗುರುಮಾತೆಯರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.ಎಲ್ಲ ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ನಿರೂಪಿಸಿದರು. ಚಿತ್ರಕಲಾ ಶಿಕ್ಷಕ ಬಿ.ಎಸ್.ಪಾಟೀಲ ವಂದಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆ -2024ರ ಮೂಲಕ ಅಲ್ಪಸಂಖ್ಯಾತ ಸಮುದಾಯದ ಆರ್ಥಿಕ ಸಂಪನ್ಮೂಲಕ್ಕೆ ಕೊಡಲಿ ಪೆಟ್ಟು ಕೊಡಲು ಹೊರಟಿದ್ದು, ಕೂಡಲೇ ಕೇಂದ್ರ ಸರಕಾರ ತಿದ್ದುಪಡಿಯನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಅಂಜುಮನ್ ಬೈತುಲ್ ಮಾಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಹಾಗೂ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ವತಿಯಿಂದ ಕೆಂಭಾವಿ ಉಪತಹಸೀಲ್ದಾರ್ ಅವರ ಮೂಲಕ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರು ಮತ್ತು ಇತರ ಸದ್ಯಸರು ಸಂಸತ್ ಭವನ ನವದೆಹಲಿ ಇವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.ಅಂಜುಮನ್ ಬೈತುಲ್ ಮಾಲ್ ಉಪಾಧ್ಯಕ್ಷರಾದ ಅಬ್ದುಲ್ ರಜಾಕ್ ಸಾಸನೂರ್ ಹಾಗೂ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆಯ ಅಧ್ಯಕ್ಷ ಬಂದೇನವಾಜ್ ನಾಲತವಾಡ ಜಂಟಿಯಾಗಿ ಮನವಿ ಸಲ್ಲಿಸಿ ಮಾತನಾಡಿದ ಅವರು, ವಕ್ಫ್‌ ಮಂಡಳಿ ಸುಧಾರಣೆಯ ನೆಪದಲ್ಲಿ ವಕ್ಫ್ ವ್ಯವಸ್ಥೆಯ ಪ್ರಯೋಜನಗಳನ್ನು ಕಸಿದುಕೊಳ್ಳುವ ಹುನ್ನಾರದೊಂದಿಗೆ ಮುಸ್ಲಿಂ ಸಮುದಾಯದ ಆಸ್ತಿಪಾಸ್ತಿಗೆ ಸರಿಪಡಿಸಲಾಗದ ಹಾನಿಯನ್ನುಂಟುಮಾಡಲು ಬಿಜೆಪಿ ಪಕ್ಷ ಬಯಸಿದೆ. ಇದು ಬಿಜೆಪಿ ಪ್ರಣಾಳಿಕೆ 2019ಕ್ಕೆ ವಿರುದ್ಧವಾಗಿದೆ. ವಕ್ಫ್‌ಗಳು ಜಾತ್ಯತೀತ ಮೌಲ್ಯಗಳಿಗೆ…

Read More

ಸಾರ್ವಜನಿಕ ಹಿತಾಸಕ್ತಿಯು ಮಂಡಳಿಗಿಂತ ಮೇಲಿರಬಾರದು | ಸುಪ್ರೀಂ ಕೋರ್ಟ್‌ ಅಭಿಮತ ನವದೆಹಲಿ: ಕೇಂದ್ರೀಯ ತನಿಖಾ ದಳವು (ಸಿಬಿಐ) ‘ಪಂಜರದ ಗಿಳಿ’ ಎಂಬ ಕಲ್ಪನೆ ಹೋಗಲಾಡಿಸುವುದು ಅನಿವಾರ್ಯ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.ಸಿಬಿಐ ಅನ್ನು “ಪಂಜರದ ಗಿಳಿ” ಎಂದು 2013 ರಲ್ಲಿ ಸುಪ್ರೀಂ ಕೋರ್ಟ್‌ ಕುಟುಕಿದ್ದ ಪ್ರಸಂಗ ಶುಕ್ರವಾರ ಮರುಕಳಿಸಿತು.ಶುಕ್ರವಾರ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ‘ಅಬಕಾರಿ ನೀತಿ ಹಗರಣ’ಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿತು.ಪ್ರಕರಣದ ಬಗ್ಗೆ ಪ್ರತ್ಯೇಕ ತೀರ್ಪು ಬರೆದ ಜಸ್ಟಿಸ್ ಭುಯಾನ್, ಕಾನೂನಿನ ನಿಯಮ, ಗ್ರಹಿಕೆ ವಿಷಯಗಳ ಆಡಳಿತದ ಕ್ರಿಯಾತ್ಮಕ ಪ್ರಜಾಪ್ರಭುತ್ವದಲ್ಲಿ ಸೀಸರ್ ಅವರ ಪತ್ನಿಯಂತೆ ತನಿಖಾ ಸಂಸ್ಥೆಯು ಮಂಡಳಿಗಿಂತ ಮೇಲಿರಬೇಕು ಎಂದು ಸಲಹೆ ನೀಡಿದರು.“ಈ ನ್ಯಾಯಾಲಯವು ಸಿಬಿಐ ಅನ್ನು ಪಂಜರದ ಗಿಳಿಗೆ ಹೋಲಿಸಿ ದೂಷಿಸಿತು. ಸಿಬಿಐ ಪಂಜರದ ಗಿಳಿ ಎಂಬ ಕಲ್ಪನೆಯನ್ನು ಹೋಗಲಾಡಿಸುವುದು ಅನಿವಾರ್ಯವಾಗಿದೆ. ಬದಲಿಗೆ,…

Read More

ಕೊಲ್ಹಾರ: ದಲಿತರ ಮುಸ್ಲಿಂರ ಎಸ್ ಟಿ ಹಾಗೂ ಸಿಖ್ ಸಮುದಾಯದ ಮತಗಳನ್ನು ಕಾಂಗ್ರೆಸ್ ಪಕ್ಷವು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎನ್ನುವ ನಿಜಬಣ್ಣ ದೇಶದ ಜನತೆ ತಿಳಿಯಬೇಕಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.ಕಾಂಗ್ರೇಸ್ ಪಕ್ಷದ ನೇತಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂದಿಯವರು ಅಮೇರಿಕಾ ದೇಶದಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಕೊಲ್ಹಾರ ಪಟ್ಟಣದಲ್ಲಿ ನಡೆದ ಪ್ರತಿಭಟನೆಯ ನೇತ್ರತ್ವ ವಹಿಸಿಕೊಂಡು ಅವರು ಮಾತನಾಡುತ್ತಿದ್ದರು.ದೇಶದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಸ್ಸಿ-ಎಸ್ಟಿ ಮೀಸಲಾತಿ ತೆಗೆದುಹಾಕುತ್ತೇವೆ ಎಂದು ಹೇಳಿಕೆ ಕೊಟ್ಟಿರುವುದು ಹಾಸ್ಯಾಸ್ಪದ ಎಂದರು.ಪಟ್ಟಣ ಪಂಚಾಯತ ಸದ್ಯಸ್ಯರಾದ ಶ್ರಿಶೈಲ ಅಥಣಿ, ಅಪ್ಪಸಿ ಮಟ್ಟಿಹಾಳ, ಬಾಬು ಭಜಂತ್ರಿ, ಪ್ರಶಾಂತ ಪವಾರ, ಸಿದ್ರಾಮಪ್ಪ ಕಾಖಂಡಕಿ, ಡೊಂಗ್ರಿ ಸಾಳುಂಕೆ, ಚಿದಾನಂದ ದಳವಾಯಿ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ಡಾ.ಅಂಬೇಡ್ಕರ್ ನಿಗಮ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಪ್ರಕರಣ ಸಿಓಡಿ ತನಿಖೆಗೆ ಒಪ್ಪಿಸಲು ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಖೊಟ್ಟಿ ಆಧಾರ ಕಾರ್ಡ್ ಖೊಟ್ಟಿ ಜಾತಿ ಪ್ರಮಾಣ ಪತ್ರ, ಖೊಟ್ಟಿ ಪ್ರಮಾಣ ಪತ್ರ ಫಲಾನುಭವಿಗಳನ್ನು ಸೃಷ್ಟಿಮಾಡಿ ಹಣ ಲೂಟಿಮಾಡಿದ ಇಲಾಖೆಯ ಎಲ್ಲ ನಿಗಮದ ಅಧಿಕಾರಿಗಳನ್ನು ಲೋಕಾಯುಕ್ತ ತನಿಖೆ ಮಾಡುವಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ದಲಿತ ಸಂಘರ್ಷ ಸಮಿತಿ (ರಿ) ಭೀಮವಾದ ಜಿಲ್ಲಾ ಘಟಕ ಪದಾಧಿಕಾರಿಗಳು ಮನವಿ ಸಲ್ಲಿಸಿದರು.ಡಾ.ಬಾಬಾಸಾಹೇಬ ಅಂಬೇಡ್ಕರ್ ನಿಗಮ ವಿಜಯಪುರ ಜಿಲ್ಲಾ ವ್ಯವಸ್ಥಾಪಕರಾಗಿದ್ದ ರೇಣುಕಾ ಸಾತರ್ಲೆಯವರ ಪ್ರಕರಣವನ್ನು ಸಿಓಡಿ ತನಿಖೆಗೆ ಒಪ್ಪಿಸಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.ವಿಜಯಪುರ ಜಿಲ್ಲೆಯ ಡಾ ಬಿ.ಆರ್ ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಶ್ರೀಮತಿ ರೇಣುಕಾ ಸಾತರ್ಲೆ ಫಲಾನುಭವಿಗಳಿಗೆ ಹಂಚಲಾಗಿರುವ ಹಾಗೂ ಸರಕಾರದ ಹಣ ಪಾವತಿಯಲ್ಲಿ ಆಗಿರುವ ಅವ್ಯವಹಾರ ಮಾಡಿದ್ದು ಜಿಲ್ಲೆಯ ಇಂಡಿ ತಾಲೂಕಿನ ಗುಂದವಾನ ಗ್ರಾಮದ ಮಲ್ಲಿಕಾರ್ಜುನ ಶಂಕರ ಬಗಲಿ ಇವರಿಗೆ ಸೇರಿದ ರಿ.ಸ.ನಂ.…

Read More

ಕೊಲ್ಹಾರ: ತಾಲೂಕಿನ ಕುಪಕಡ್ಡಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 8 ನೇ ವರ್ಗದ ಮಕ್ಕಳ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಗುವಿಗೆ ಬಹುಮಾನ ವಿತರಣೆ ಮಾಡಲು ಸರಕಾರಿ ಪ್ರೌಢಶಾಲೆ ಕುಪಕಡ್ಡಿಯ ನೂತನ SDMC ಸದಸ್ಯ ಚಂದ್ರಶೇಖರ ಅಂಬಿಗೇರ ( ಪೊಟೊಗ್ರಾಫರ) ರವರು ₹21000 ರೂಪಾಯಿಗಳನ್ನು ದೇಣಿಗೆಯಾಗಿ ನೀಡಿರುತ್ತಾರೆ. ಸದರಿ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಠೇವಣಿ ಇಟ್ಟು ಅದರ ಬಡ್ಡಿ ಹಣದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರತಿವರ್ಷ ಬಹುಮಾನ ವಿತರಿಸಲಾಗುವುದು ಎಂದು ಶಿಕ್ಷಕ ಸಿದ್ದು ಕೋಟ್ಯಾಳ ತಿಳಿಸಿದರು. ಗ್ರಾಮದಲ್ಲಿ ಛಾಯಾಗ್ರಾಹಕರಾಗಿ ಪುಟ್ಟ ಉದ್ಯೋಗ ಮಾಡುತ್ತಿದ್ದರೂ ಅವರ ಶಿಕ್ಷಣ ಪ್ರೇಮಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಂದ್ರಶೇಖರ ಅವರಿಗೆ ಗುರನಗೌಡ ಬಿರಾದಾರ, ಉದಯಕುಮಾರ ಹಳ್ಳಿ, ಮುರುಗೇಶ ಹಳ್ಳಿ, ಸಿದ್ದನಗೌಡ ಪಾಟೀಲ, ಸತ್ಯಪ್ಪ ಮದಗುಣಕಿ, ಮಹಾಂತಪ್ಪ ಇಂಡಿ, ಭೀಮಸಿ ಪಾಯಗೊಂಡ ಸೇರಿದಂತೆ ಶಾಲಾ ಸಿಬ್ಬಂದಿ, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮತಕ್ಷೇತ್ರದಲ್ಲಿ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಕಂಡಿರುವ ಬಿಜೆಪಿ ಮುಖಂಡರು ಹಾಗೂ ಸಂಸದರು ಹತಾಶೆಗೊಂಡು ಒಂದೇ ರಾಷ್ಟ್ರೀಯ ಹೆದ್ದಾರಿಯನ್ನು ಪುನಃ ಪುನಃ ಉದ್ಘಾಟನೆ ಮಾಡಿ ಜಿಲ್ಲೆಯಲ್ಲಿ ನಗೆಪಾಟಲಿಗೆ ಈಡಾಗಿದ್ದಾರೆಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್ ಮೋಮಿನ್ ವ್ಯಂಗ್ಯವಾಡಿದರು.ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸದರ ಬಗ್ಗೆ ಅತ್ಯಂತ ಗೌರವವಿದೆ. ಆದರೆ ಈಗಾಗಲೇ ಬೆಳಗಾವಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ರಾಷ್ಟ್ರೀಯ ಹೆದ್ದಾರಿಯನ್ನು ಉದ್ಘಾಟನೆಗೊಳಿಸಿದ್ದು, ಅದೇ ರಾಷ್ಟ್ರೀಯ ಹೆದ್ದಾರಿಯನ್ನು ಪುನಃ ಉದ್ಘಾಟನೆಗೊಳಿಸುವಂತಹ ಅತ್ಯಂತ ದುಸ್ಥಿತಿಗೆ ಬಿಜೆಪಿಗರು ಹಾಗೂ ಸಂಸದರು ತಲುಪಿದ್ದಾರೆ ಎಂದು ಕಿಡಿಕಾರಿದರು.ಇನ್ನು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಸರಕಾರಿ ಕಾರ್ಯಕ್ರಮದಂತೆ ಪ್ರತಿಬಿಂಬಿಸಿ, ಧ್ವನಿವರ್ಧಕ ಹಾಗೂ ನಗರದ ತುಂಬೆಲ್ಲಾ ಪಕ್ಷದ ಬ್ಯಾನರ್ ಅಳವಡಿಸಿ ಮೈತ್ರಿ ಪಕ್ಷದ ವೇದಿಕೆ ಕಾರ್ಯಕ್ರಮ ಮಾಡಿ ಶಾಸಕರ ಮೇಲೆ ಆರೋಪ ಮಾಡುತ್ತಾರೆ. ಇದು ಎಷ್ಟು ಸರಿ..? ಕಳೆದ 35 ವರ್ಷಗಳಿಂದ ಶಾಸಕ ಯಶವಂತರಾಯಗೌಡ ಪಾಟೀಲ ರಾಜಕಾರಣ ‌ಮಾಡುತ್ತಿದ್ದು, ಮತಕ್ಷೇತ್ರದ ಹಾಗೂ ಜಿಲ್ಲೆಯ ಜನರಿಗೆ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನ ಸಿದ್ದಾಪುರ (ಕೆ) ಗ್ರಾಮದ ಸರಕಾರಿ ಪ್ರೌಢಶಾಲೆಯು ಸನ್ 2024-25 ನೇ ಸಾಲಿನ ಟಕ್ಕಳಕಿ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆಯನ್ನು ಮಾಡಿದೆ.ಗುಂಪು ಆಟಗಳಲ್ಲಿ ಬಾಲಕರ ಖೋಖೋ ಪ್ರಥಮ, ಬಾಲಕಿಯರ ಖೋಖೋ ಪ್ರಥಮ, ಬಾಲಕರ ಥ್ರೋಬಾಲ್ ದ್ವಿತೀಯ,ಬಾಲಕಿಯರ ವಾಲಿಬಾಲ್ ದ್ವಿತೀಯ, ಬಾಲಕರ 400 ಮೀ. ರಿಲೇ ಪ್ರಥಮ, ಬಾಲಕಿಯರ 400ಮೀ. ರಿಲೇ ಪ್ರಥಮ, ಬಾಲಕಿಯರ 100 ಮೀ ರಿಲೇ ಪ್ರಥಮ ಸ್ಥಾನ ಪಡೆದಿದ್ದಾರೆ.ವೈಯಕ್ತಿಕ ವಿಭಾಗದಲ್ಲಿ ಅಕ್ಷತಾ ವಾಡೇದ 400 ಮೀ. ಓಟ ಪ್ರಥಮ, ಅಶ್ವಿನಿ ರಾಠೋಡ 800 ಮೀ ಓಟ ದ್ವಿತೀಯ, ಶ್ರದ್ದಾ ಖೋತ 3000 ಮೀ ಓಟ ದ್ವಿತೀಯ, ಸಾಕ್ಷಿ ಅತ್ತಿಗೇರಿ 3 ಕೀಮಿ ನಡಿಗೆ ಪ್ರಥಮ, ಕೀರ್ತಿ ಪೂಜಾರಿ 3ಕೀಮಿ ನಡಿಗೆ ದ್ವಿತೀಯ, ಅಕ್ಷತಾ ವಾಡೇದ ಗುಂಡು ಎಸೆತ ದ್ವಿತೀಯ, ಅಶ್ವಿನಿ ರಾಠೋಡ ಗುಂಡು ಎಸೆತ ತೃತೀಯ, ಸಂಜನಾ ಖೋತ ಚಕ್ರ ಎಸೆತ ಪ್ರಥಮ, ಚನ್ನಮ್ಮ ಚೌಧರಿ…

Read More