Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಆಲಮೇಲ ಕೋ-ಆಪರೇಟಿವ್ ಬ್ಯಾಂಕಿನ ಬೆಳ್ಳಿ ಮಹೋತ್ಸವ | ಶೇರುದಾರರಿಗೆ ಡಿವಡೆಂಟ್ ಜೊತೆಗೆ ಬೆಳ್ಳಿ ನಾಣ್ಯ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಶೇರುದಾರರು ನಮ್ಮ ಉದ್ದೇಶಗಳ ಸ್ಪೂರ್ತಿಯ ಸೆಲೆ, ನಮ್ಮ ವ್ಯವಹಾರಗಳಿಗೆ ಅವರು ಹೊರಗಿನವರಲ್ಲ, ಅವರು ನಮ್ಮ ವ್ಯವಹಾರದ ಮುಖ್ಯ ಅಂಗ, ಇದರ ಜೊತೆಗೆ ಗ್ರಾಹಕರು ಕೂಡಾ ನಮ್ಮ ಬ್ಯಾಂಕಿನ ಜೀವಾಳ ಎಂದು ಆಲಮೇಲ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಶಿವುಕುಮಾರ ಗುಂದಗಿ ಹೇಳಿದರು.ಪಟ್ಟಣದಲ್ಲಿ ಸೆ.೧೫ ರವಿವಾರ ನಡೆಯಲ್ಲಿರುವ ಆಲಮೇಲ ಕೋ-ಆಪರೇಟಿವ್ ಬ್ಯಾಂಕಿನ ಬೆಳ್ಳಿ ಮಹೋತ್ಸವ ಹಾಗೂ ವಾರ್ಷಿಕ ವರದಿ ಹಾಗೂ ಅಢಾವೆ ಕುರಿತು ಬ್ಯಾಂಕಿನ್ ಸಭಾ ಭವನದಲ್ಲಿ ಗುರುವಾರ ಸಾಯಂಕಾಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ೧೯೯೭-೯೮ ರಲ್ಲಿ ಗದುಗಿನ ಜಗದ್ಗುರು ಲಿಂಗೈಕ್ಯ ಡಾ,ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರ ಅಮೃತಹಸ್ತದಿಂದ ಸ್ಥಾಪನೆಗೊಂಡ ಈ ಬ್ಯಾಂಕು ನಾವೆಲ್ಲರೂ ಇಂದು ಬೆಳ್ಳಿ ಮಹೋತ್ಸವದ ಸಂಭ್ರಮಕ್ಕೆ ಮುನ್ನಡಿ ಬರೆಯುತ್ತಿದ್ದೇವೆ. ಒಂದು ಸಂತೋಷದ ಸಂಗತಿ ಏನೆಂದರೆ ಪ್ರಾರಂಭದಲ್ಲಿ ೧೦.೨೨ ಲಕ್ಷ ರೂಪಾಯಿ ಶೇರು ಬಂಡವಾಳದೊಂದಿಗೆ ಪ್ರಾರಂಭವಾದ ನಮ್ಮ ಬ್ಯಾಂಕು ಇಂದು ೫೦ಕೋಟಿ…
ಕೇಂದ್ರ ಜಲ ಶಕ್ತಿ ತಂಡದ ನೋಡಲ್ ಅಧಿಕಾರಿ ವಿಕಾಸ ಡೋಗ್ರಾ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳಾದ ಕೆರೆ, ನಾಲಾ, ಕಲ್ಯಾಣಿ ಮತ್ತು ಇನ್ನಿತರ ಕಾಮಗಾರಿಗಳನ್ನು ನಿಯಮಾನುಸಾರ ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಬೇಕು ಎಂದು ಭಾರತ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿ ವಿಕಾಸ ಡೋಗ್ರಾ ಸೂಚನೆ ನೀಡಿದರು.ಶುಕ್ರವಾರ ತಾಂತ್ರಿಕ ಅಧಿಕಾರಿಗಳಾದ ಅನಾಮಿಕಾ ಐಚ್ ಅವರೊಂದಿಗೆ ವಿಜಯಪುರ ಜಿಲ್ಲೆಗೆ ಭೇಟಿ ನೀಡಿ, ವಿಜಯಪುರ ಜಿಲ್ಲೆಯ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಈ ವೇಳೆ ಮಾತನಾಡಿದ ವಿಕಾಸ ಡೋಗ್ರಾ ಅವರು, ಜಲಾನಯನ ಕಾಮಗಾರಿಗಳನ್ನು ಕಾಲ-ಕಾಲಕ್ಕೆ ಜಿಯೋ ಟ್ಯಾಗ್ ಮಾಡುವುದು, ಜಲ ಶಕ್ತಿ ಅಭಿಯಾನದ ಅಡಿಯಲ್ಲಿ (ಜೆಎಸ್ಎ) ಅನುಷ್ಠಾನಗೊಳಿಸುವ ಕಾಮಗಾರಿಗಳನ್ನು ಹಾಗೂ ಮುಕ್ತಾಯಗೊಂಡ ಕಾಮಗಾರಿಗಳನ್ನು ಕಡ್ಡಾಯವಾಗಿ ಜಲ ಶಕ್ತಿ ಅಭಿಯಾನ (ಜೆಎಸ್ಎ)ದ ತಂತ್ರಾಂಶದಲ್ಲಿ ಜಿಯೋಟ್ಯಾಗ್ ಮಾಡಬೇಕು. ಜಲ ಸಂರಕ್ಷಣೆ, ಮಳೆ…
ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗಾಗಿ ಕೆಳದಿ ಚನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.ಈ ಪ್ರಶಸ್ತಿಯು ತಲಾ ೧೦ ಸಾವಿರ ನಗದು ಬಹುಮಾನ ಒಳಗೊಂಡಿದ್ದು, ೫ ರಿಂದ ೧೮ ವರ್ಷದೊಳಗಿನ ಮಕ್ಕಳು ಅಗತ್ಯ ದಾಖಲೆ ಸಹಿತ ಸೆಪ್ಟೆಂಬರ್ ೧೫ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರಕಾರ ಸೆ.15 ರವಿವಾರದಂದು ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮ ಆಯೋಜಿಸಿದೆ. ಇದರ ಭಾಗವಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ನಿಡಗುಂದಿ ತಾಲೂಕಿನ ಆಲಮಟ್ಟಿಯವರೆಗೆ ಒಟ್ಟು 62 ಕಿ. ಮೀ ವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕೋರಿದ್ದಾರೆ.ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಡಾ. ಬಿ. ಆರ್. ಅಂಬೇಡ್ಕರ ಅವರ ಸಂವಿಧಾನದ ಆಶಯಗಳ ಕುರಿತು ಜನಜಾಗೃತಿ ಮೂಡಿಸುವ ದಿಕ್ಕಿನಲ್ಲಿ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದುವುದನ್ನು ಕಡ್ಡಾಯಗೊಳಿಸಿದೆ. ಸಂವಿಧಾನ ಜಾಗೃತಿ ಜಾಥಾದ ಮೂಲಕ…
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಕರೆ ವಿಜಯಪುರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ಅವರು ಶುಕ್ರವಾರ ಕೇಸ್ವಾನ ಸಭಾಂಗಣದಲ್ಲಿ ವಿವಿಧ ತಾಲೂಕಿನ ತಹಶೀಲ್ದಾರ್, ತಾಲೂಕ ಪಂಚಾಯತ್ ಅಧಿಕಾರಿ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಪುರಸಭೆಯ ಅಧಿಕಾರಿ ಸಿಬ್ಬಂದಿಗಳೊಂದಿಗೆ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಆಲಮಟ್ಟಿಯವರೆಗೆ ನಡೆಯುವ ಮಾನವ ಸರಪಳಿ ರಚನೆಯ ಮಾರ್ಗದುದ್ದಕ್ಕೂ ಕಿಮೀ ಗುರುತಿಸುವ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಈ ಕಾರ್ಯಕ್ರಮಕ್ಕಾಗಿ ನಿಯೋಜಿಸಿದ ಅಧಿಕಾರಿ ಸಿಬ್ಬಂದಿಗಳು, ಮಾನವ ಸರಪಳಿ ಮಾರ್ಗದ ಪರಿಶೀಲನೆ ನಡೆಸಬೇಕು. ಶಾಲಾ ಕಾಲೇಜು, ವಸತಿ ನಿಲಯ, ಗ್ರಾಮಗಳ, ಪಟ್ಟಣಗಳ ವಿವರ ಖಚಿತ ಪಡಿಸಿಕೊಂಡು, ಪ್ರತಿ ಒಂದು ಕೀ.ಮಿಗೆ ಯೋಜನೆ ಸಿದ್ಧಪಡಿಸಿ ಮೈಕ್ರೋ ಪ್ಲಾನಿಂಗ್ ಮಾಡಿಕೊಂಡು ಅಚ್ಚುಕಟ್ಟಾಗಿ ಯಾವುದೇ ಸಮಸ್ಯೆ ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಮಾನವ ಸರಪಳಿ…
ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ‘ಸತ್ಯಮೇವ ಜಯತೆ’ ಎನ್ನುವುದು ಮತ್ತೆ ಸಾಬೀತಾಗಿದೆ. ಅರವಿಂದ್ ಕೇಜ್ರಿವಾಲ್ ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು ಆರೋಪ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹಿಸಿದ್ದಾರೆ.ಆಮ್ ಆದ್ಮಿ ಪಾರ್ಟಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಸುಕ್ರವಾರ ನಗರದ ಪಕ್ಷದ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಭೋಗೇಶ್ ಸೋಲಾಪುರ್ ಅವರು, ಸುಪ್ರೀಂ ಕೋರ್ಟ್ನಲ್ಲಿ ಸತ್ಯಕ್ಕೆ ಗೆಲುವು ಸಿಕ್ಕಿದೆ. ಪ್ರಾಮಾಣಿಕತೆಗೆ ಎಂದೂ ಸೋಲಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ ಸಂಸ್ಥೆಯನ್ನು ಪಂಜರದ…
ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹ *ಉದಯರಶ್ಮಿ ದಿನಪತ್ರಿಕೆ ವಿಜಯಪುರ: ‘ಸತ್ಯಮೇವ ಜಯತೆ’ ಎನ್ನುವುದು ಮತ್ತೆ ಸಾಬೀತಾಗಿದೆ. ಅರವಿಂದ್ ಕೇಜ್ರಿವಾಲ್ ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು ಆರೋಪ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹಿಸಿದ್ದಾರೆ.ಆಮ್ ಆದ್ಮಿ ಪಾರ್ಟಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಸುಕ್ರವಾರ ನಗರದ ಪಕ್ಷದ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಭೋಗೇಶ್ ಸೋಲಾಪುರ್ ಅವರು, ಸುಪ್ರೀಂ ಕೋರ್ಟ್ನಲ್ಲಿ ಸತ್ಯಕ್ಕೆ ಗೆಲುವು ಸಿಕ್ಕಿದೆ. ಪ್ರಾಮಾಣಿಕತೆಗೆ ಎಂದೂ ಸೋಲಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ ಸಂಸ್ಥೆಯನ್ನು ಪಂಜರದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಈ ದೇಶದ ಯಾರೊಬ್ಬರು ಹಸಿವಿನಿಂದ ಸಾಯಬಾರದು ಎಂದು ಅನ್ನಭಾಗ್ಯ ಯೋಜನೆಯನ್ನು ತಂದಿದ್ದಾರೆ. ಆದರೆ ಆಹೇರಿ(ಜ) ಗ್ರಾಮದ ದಿನಸಿ ಹಂಚುವ ವಿತರಕರು ಫಲಾನುಭವಿಗಳಿಂದ ಹೆಬ್ಬೆಟ್ಟು ಒತ್ತಿಸಿಕೊಂಡು ಮುಂದಿನ ತಿಂಗಳ ಬನ್ನಿ ಎಂದು ೨-೩ ತಿಂಗಳಿನಿಂದ ದಿನಸಿ ಕೊಡದೇ ಮುಂದೆ ಹಾಕುತ್ತಿದ್ದಾರೆ. ಹೆಚ್ಚಿಗೆ ಕೇಳಿದರೆ ನಿಮ್ಮ ರೇಷನ್ ಕಾರ್ಡ ರದ್ದು ಪಡಿಸುವುದಾಗಿ ಹೇಳಿರುತ್ತಾರೆ. ಕಾರಣ ಇವರ ವಿತರಣಾ ಲೈಸನ್ಸ್ ರದ್ದು ಮಾಡಿ ಬೇರೆಯವರಿಗೆ ವಹಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ವಿನಯಕುಮಾರ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ರೈತ ಸಂಘದ ತಾಲೂಕಾ ಅಧ್ಯಕ್ಷ ಮಹಾದೇವಪ್ಪ ತೇಲಿ, ಆಹೇರಿ ಗ್ರಾಮದ ರೈತ ಸಂಘದ ಅಧ್ಯಕ್ಷ ಆತ್ಮಾನಂದ ಭೈರೋಡಗಿ ಮಾತನಾಡಿ, ಈ ವಿತರಕರು ಪ್ರತಿ ತಿಂಗಳು ೮೦-೧೦೦ ಜನರಿಗೆ ರೇಷನ್ ಖಾಲಿ ಆಗಿದೆ, ಮೇಲಿನಿಂದಲೇ ಕಡಿಮೆ ಕಳುಹಿಸಿದ್ದಾರೆ, ಮುಂದಿನ ತಿಂಗಳು ಬನ್ನಿ…
ಬಸವನಬಾಗೇವಾಡಿ: ಪಟ್ಟಣದ ವೀರಭದ್ರೇಶ್ವರ ನಗರದ ನಿವಾಸಿ ಕಂದಾಯ ಇಲಾಖೆ ನಿವೃತ್ತ ನೌಕರ ಸಾಹೇಬಗೌಡ ನಿಂಗಪ್ಪ ನಂದಿಹಾಳ(76) ಶುಕ್ರವಾರ ಬೆಳಗ್ಗೆ ನಿಧನರಾದರು.ಮೃತರಿಗೆ ಪತ್ನಿ, ಪತ್ರಕರ್ತ ಬಸವರಾಜ ನಂದಿಹಾಳ ಸೇರಿ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಆಗಲಿದ್ದಾರೆ.
ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಪಿಲ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲೆಗಳ ಮೇಲಾಟದ ಸ್ಪರ್ಧೆಗಳಲ್ಲಿ ಬಸವರಾಜ್ ಕರಡಿ ೩೦೦೦ ಮೀಟರ್ ಓಟ ಪ್ರಥಮ ೧೫೦೦ ಮೀಟರ್ ಓಟ ಪ್ರಥಮ ಹಾಗೂ ೧೦೦ ಮೀಟರ್ ಓಟದಲ್ಲಿ ದ್ವೀತಿಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿ ಸಾಧನೆಗೆ ಬಿ ಎಲ್ ಡಿ ಇ ಸಂಸ್ಥೆಯ ಅದ್ಯಕ್ಷರು ಹಾಗೂ ಕರ್ನಾಟಕ ರಾಜ್ಯದ ಬೃಹತ್ ಮದ್ಯಮ ಕೈಗಾರಿಕಾ ಸಚಿವ ಡಾ.ಎಂ ಬಿ ಪಾಟೀಲ ಹಾಗೂ ಆಡಳಿತಾಧಿಕಾರಿ ಆಯ್ ಎಸ್ ಕಾಳಪ್ಪನವರ. ಉಪ, ಪ್ರಾಂಶುಪಾಲ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ಕೆ ವಿ ಒಡೆಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
