Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಾರಜೋಳದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ. ಈ ನಿಟ್ಟಿನಲ್ಲಿ ಕಾಯಕನಿರತನಾಗಿರುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ನೂತನ ಕಟ್ಟಡ, ಎನ್.ಆರ್.ಎಲ್.ಎಂ ಕಲಿಕಾ ಕಟ್ಟಡ, ಗೋದಾಮು ಹಾಗೂ ಜಲ ಸಂಗ್ರಹಕ್ಕೆ ಅನುಕೂಲವಾಗುವ ಕಲ್ಯಾಣಿ ಉದ್ಘಾಟನೆ ಹಾಗೂ ಡೋಣಿ ಪ್ರವಾಹದಿಂದಾಗಿ ಪುನರ್ವಸತಿ ಕೇಂದ್ರದಲ್ಲಿ ವಾಸಿಸುತ್ತಿರುವ ತೊನಶ್ಯಾಳ ಗ್ರಾಮದ 312 ಕುಟುಂಬಗಳಿಗೆ 17 ವರ್ಷಗಳ ನಂತರ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.ನೀರಾವರಿ ಕ್ರಾಂತಿಯ ಬಳಿಕ ಈಗ ಶೈಕ್ಷಣಿಕ ಕ್ರಾಂತಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕಾಲುವೆಗಳ ವ್ಯಾಪ್ತಿಯಲ್ಲಿ ಬರುವ 156 ಹಳ್ಳಗಳಿಗೆ ತುಂಬಿಸುವ ಯೋಜನೆ ರೂಪಿಸಲಾಗಿದೆ. ಹಳ್ಳಗಳಲ್ಲಿ ಹೂಳು ತೆಗೆಯಿಸಿ ಪ್ರತಿ ಕಿಲೋ ಮೀಟರ್…
ಸಿದ್ದರಾಮಯ್ಯ, ಜಮೀರ್ ಸೇವೆಗೆ ಅಜೀಜುಲ್ಲ ಅಜ್ಜು ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ : ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ರಾಜ್ಯ ವಕ್ಫ್ ಮಂಡಳಿ ಹಾಗೂ ಮೈಸೂರು ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಪಟ್ಟಣದ ಶಿವಾಜಿ ರಸ್ತೆಯಲ್ಲಿರುವ ಜಾಮಿಯಾ ಮಸೀದಿಯಲ್ಲಿ ತಾಲೂಕಿನ ಮಸೀದಿಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಮೈಸೂರು ಜಿಲ್ಲಾ ಸಮಿತಿ ಅಧ್ಯಕ್ಷ ಅಜೀಜುಲ್ಲ ಅಜ್ಜು ಅವರು ಆಹಾರ ಕಿಟ್ ವಿತರಣೆ ಮಾಡಿ, ವಕ್ಫ್ಅಲ್ಪ ಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಕ್ಫ್ ಮತ್ತು ಅಲ್ಪಸಂಖ್ಯಾತರ ಸಚಿವ ಜಮೀರ್ ಅಹಮದ್ ಖಾನ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು . ಮೈಸೂರು ಜಿಲ್ಲಾ ಸಮಿತಿ ಅಧ್ಯಕ್ಷ ಅಜೀಜುಲ್ಲ ಅಜ್ಜು ಮಾತನಾಡಿ, ವಕ್ಫ್ ಮಂಡಳಿವತಿಯಿಂದ ಈ ವರ್ಷದಿಂದ ಮಸೀದಿಗಳಿಗೆ ಆಹಾರದ ಕಿಟ್ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ರಂಜಾನ್ ಹಬ್ಬದಲ್ಲಿ ಮಸೀದಿಯಲ್ಲಿನ ಗುರುಗಳು ಹೆಚ್ಚಿನ ಕೆಲಸವನ್ನು ಮಾಡುತ್ತಾರೆ. ಅವರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದದಿಂದ…
ತೋಂಟದ ಸಿದ್ದಲಿಂಗ ಶ್ರೀಗಳ ಕಾರ್ಯ ಸರ್ವರಿಗೂ ಆದರ್ಶ ಉದಯರಶ್ಮಿ ದಿನಪತ್ರಿಕೆಆಲಮಟ್ಟಿ : ರಾಷ್ಟ್ರೀಯ ಭಾವೈಕ್ಯತಾ ಪ್ರಶಸ್ತಿ ಪುರಸ್ಕೃತರಾದ ಗದುಗಿನ ತೋಂಟದ ಲಿಂ, ಡಾ.ಸಿದ್ದಲಿಂಗ ಮಹಾಸ್ವಾಮಿಗಳವರ ಸಾಮಾಜಿಕ ಹಿತೋಪ್ತಿ ಸೇವಾ ಕಾಯಕಗಳು ಸದಾ ಸ್ಮರಣೀಯವಾಗಿ ಜನಮಾನಸದಲ್ಲಿ ಅಜರಾಮರಾಗಿ ಉಳಿದಿವೆ ಎಂದು ಮುಖ್ಯೋಪಾಧ್ಯಾಯ ಜಿ.ಎಂ.ಕೋಟ್ಯಾಳ ಹೇಳಿದರು.ಸ್ಥಳೀಯ ರಾವಬಹದ್ದೂರ ಡಾ.ಫ.ಗು.ಹಳಕಟ್ಟಿ ಪ್ರೌಢಶಾಲೆ ಹಾಗೂ ಮಂಜಪ್ಪ ಹಡೇ೯ಕರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ತೋಂಟದ ಡಾ ಸಿದ್ದಲಿಂಗ ಶ್ರೀಗಳವರ 77 ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಭಾವೈಕ್ಯತಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕರುಣಾರಸಭರಿತ ಭಾವದ ಹೃದಯಮಯ ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳು ಸಾಮಾನ್ಯರ ಸ್ವಾಮಿಗಳಾಗಿ ಧಾಮಿ೯ಕ ರಂಗದೊಂದಿಗೆ ಗೈದಿರುವ ಸಮಾಜಮುಖಿ ಸೇವಾ ಮಜಲು ಅನನ್ಯವಾಗಿವೆ. ಕೋಮು ಸೌಹಾರ್ದತೆ ಪ್ರತೀಕವಾಗಿರುವ ಕನ್ನಡಾಂಬೆಯ ಅಪರೂಪದ ಜೀವ ಸಿದ್ದಲಿಂಗ ಶ್ರೀಗಳವರ ಜನ್ಯವೇ ವೈವಿಧ್ಯ.ಕಾಯಕವೇ ನೈವೇದ್ಯವಾಗಿದ್ದು ಸಮಾಜಕ್ಕೆ ಅಮೋಘ ಸಮಪಿ೯ತವಾಗಿದೆ ಎಂದು ಬಣ್ಣಿಸಿದರು.ಗಿಡಮರಗಳೆಂದರೆ ಶ್ರೀಗಳವರಿಗೆ ಬಲು ಪ್ರೀತಿ.ಧರ್ಮ ಪ್ರಸಾರ ಕಾಯಕದೊಂದಿಗೆ ಪರಿಸರ ರಕ್ಷಣೆಯಲ್ಲಿ ಅಗಮ್ಯ ಆಸಕ್ತಿ, ಕಾಳಜಿ ಹೊಂದಿದ್ದರು.…
ಸಾರ್ವಜನಿಕರು-ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಾ.೯ರಂದು ನಗರದಲ್ಲಿ ನಡೆಯಲಿರುವ ಭೀಮ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಅಧಿಕಾರಿಗಳು ಕೈಜೋಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಭೀಮ ಗಾಯನ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ ಅವರ ಜೀವನ, ಸಾಧನೆ ಸಮಾನತೆಯ ಹೋರಾಟ, ಅಸ್ಪಶ್ಯತೆ ನಿವಾರಣೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ಅಂದು ನಡೆಯಲಿದೆ. ಸಮಾನತೆಯ ಸ್ವರ ಸಂಭ್ರಮ, ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಅಭಿವ್ಯಕ್ತಿಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ ಎಂದು ಎಡಿಸಿ ಡಾ. ಔದ್ರಾಮ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು.ಚಿಂತಾಮಣಿಯ ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘ ಈವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು. ಡಾ. ಬಿ.ಆರ್. ಅಂಬೇಡ್ಕರ ಅವರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಲೊಯಲಾ ಐ.ಟಿ.ಐ ಆವರದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳವನ್ನು ಮಾ.೯ ರಂದು ಬೆಳಗ್ಗೆ ೯ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಆಯೋಜಿಸಲಾಗಿದೆ.ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಹಾಗೂ ೨೦೨೬ನೇ ಸಾಲಿನಲ್ಲಿ ೨ನೇ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಮತ್ತು ಉದ್ದಿಮೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಾಲ್ಕು ಪ್ರತಿಗಳ ರೆಸ್ಯೂಮ್, ಬಯೋಡೇಟಾ, ವಿದ್ಯಾರ್ಹತೆಯ ಎಲ್ಲಾ ದಾಖಲೆಗಳು ಹಾಗೂ ಪಾಸ್ಪೋರ್ಟ್ ಸೈಜ್ ಫೋಟೊಗಳೊಂದಿಗೆ ಮೇಳಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೯೮೪೪೭೯೩೭೦,೯೯೦೦೬೨೭೧೯೭ ಅನ್ನು ಸಂಪರ್ಕಿಸಬಹುದಾಗಿದೆ ಅಥವಾ ಹತ್ತಿರದ ಯಾವುದೇ ಸರ್ಕಾರಿ, ಅನುದಾನಿತ, ಖಾಸಗಿ ಐ.ಟಿ.ಐಗಳನ್ನು ಸಂಪರ್ಕಿಸಬಹುದು ಎಂದು ಸದಾಶಿವ ಹಿಟ್ನಳ್ಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ,ಬಬಲೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಜಿಲ್ಲೆಯಾದ್ಯಂತ ಮಾ.೨ ರಿಂದ ಮಾ. ೮ವರೆಗೆ ಹೋಳಿ ಹಬ್ಬ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಶೇಷ ದಂಡಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ ೦೧ ರಿಂದ ೧೮ರವರೆಗೆ ಮಹಾನಗರ ಪಾಲಿಕೆಯ ವಲಯ ಆಯುಕ್ತರಾದ ಹುಚ್ಚೇಶ ಚಿತ್ತರಗಿ ಅವರನ್ನು, ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ ೧೯ ರಿಂದ ೩೫ರವರೆಗೆ ಮಹಾನಗರ ಪಾಲಿಕೆಯ ವಲಯ ಆಯುಕ್ತರಾದ ಮೋಹನ ಜಾಧವ ಅವರನ್ನು ವಿಶೇಷ ದಂಡಾಧಿಕಾರಿಗಳಾಗಿ ನೇಮಕ ಮಾಡಿ ಆದೇಶಿಸಲಾಗಿದೆ.ಈ ಅವಧಿಯಲ್ಲಿ ಜಿಲ್ಲೆಯ ೧೩ ತಾಲೂಕಿನ ತಹಶೀಲ್ದಾರರು ಕೇಂದ್ರ ಸ್ಥಾನದಲ್ಲಿರುವಂತೆಯೂ ಹಾಗೂಉಪ ವಿಭಾಗೀಯ ದಂಡಾಧಿಕಾರಿಗಳು, ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದು, ಅವುಗಳ ಈಡೇರಿಕೆಗಾಗಿ ಮಾ.೧೧ ರಿಂದ ೧೫ರವರೆಗೆ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳುವ ನಿರ್ಧಾರವನ್ನು ಕೈಗೊಂಡಿದ್ದು, ಶಾಸಕ ಅಶೋಕ ಮನಗೂಳಿ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದು ನೌಕರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ತಿಳಿಸಿದರು.ಈ ಸಂದರ್ಭದಲ್ಲಿ ಆಲಮೇಲ ತಾಲೂಕ ಅಧ್ಯಕ್ಷ ರವಿ ಬಿರಾದಾರ, ದೇವರ ಹಿಪ್ಪರಗಿ ತಾಲೂಕ ನೌಕರರ ಸಂಘದ ಅಧ್ಯಕ್ಷ ಸಿ.ಬಿ.ಗಡಿಗಿ ಸಿಂದಗಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ದೇಶಮುಖ, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಮಹಾಂತೇಶ ಹಿರೇಮಠ ಪದಾಧಿಕಾರಿಗಳಾದ ಪಿ.ವಾಯ್.ಚೌಡಕಿ, ಸಿದ್ದು ಕಡಬಗಾವ, ಸಂತೋಷ್ ಕಾಳಶೆಟ್ಟಿ, ಭಾಷಾಸಾಬ್ ನದಾಫ್, ಪಂಡಿತ್ ವಾಷಿನ್, ಜಗದೀಶ ಡೋಣೂರ ರಾಜಶೇಖರ ನರಗೋದಿ, ಚಂದಕವಾಟೆ ವೈದ್ಯಾಧಿಕಾರಿ ಡಾ.ಗುಣಕಿ, ಡಾ.ವಿದ್ಯಾ ಹಿರೇಪೇಟ, ಸುರೇಶ ಬಬಲೇಶ್ವರ, ಅಶೋಕ ಕಡ್ಲಗೊಂಡ, ಲವ ಗಾಣಿಗೇರ, ಪ್ರಕಾಶ ನಾಯಕ ಸೇರಿದಂತೆ ಅನೇಕರು ಇದ್ದರು. “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ವೃಂದಗಳಲ್ಲಿ ಒಟ್ಟು…
ಮೊದಲ ಪುಟ ಸಿಂದಗಿ: ವಿಜ್ಞಾನ ಹಾಗೂ ಪರಿಸರ ವಸ್ತು ಪ್ರದರ್ಶನಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.ಸಿಂದಗಿ ನಗರದ ಶಾಂತವೀರ ನಗರದಲ್ಲಿರುವ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ಯ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸಾಧಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳ ಪ್ರತಿಭೆಗಳನ್ನು ಹೊರಹಾಕುವ ಮೆಟ್ಟಿಲಾಗುತ್ತದೆ. ಮಕ್ಕಳು ಸಂಸ್ಕಾರದ ಜೊತೆಗೆ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು. ಮಕ್ಕಳು ತಂದೆ-ತಾಯಿಗಳ ಕನಸನ್ನು ಈಡೇಸುವಲ್ಲಿ ಶ್ರಮವಹಿಸಬೇಕು ಎಂದರು.ಈ ವೇಳೆ ಶಿಕ್ಷಕ ಸಿದ್ಧಲಿಂಗ ಚೌಧರಿ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ವಿಷಯದ ತತ್ವಗಳನ್ನು ಅರ್ಥ ಮಾಡಿಕೊಳ್ಳಲು ವಿಜ್ಞಾನ ಮತ್ತು ವಸ್ತು ಪ್ರದರ್ಶನ ಮೇಳ ಕಾರ್ಯಕ್ರಮ ಸಹಕಾರಿಯಾಗುತ್ತದೆ. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಗಳಿಸುವ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ೨೦೦೦ ಹಾಗೂ ತಾಲೂಕಿಗೆ ಪ್ರಥಮ ಬರುವ ವಿದ್ಯಾರ್ಥಿಗೆ ರೂ.೧೦ಸಾವಿರ ಪ್ರೋತ್ಸಾಹಧನ ನೀಡುವುದಾಗಿ ವಾಗ್ದಾನ ಮಾಡಿದರು.ಇದೇ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಿಂತ ನೀರಿನಲ್ಲಿ ಮುಳುಗಿ ಬಾಲನೊಬ್ಬ ಸಾವನ್ನಪ್ಪಿದ ಘಟನೆ ಪಟ್ಟಣದ ಕುಂಟೋಜಿ ರಸ್ತೆಯ ಬಸವ ಇಂಟರ್ನ್ಯಾಶನಲ್ ಶಾಲೆಯ ಬಳಿಯ ಜಮೀನೊಂದರಲ್ಲಿ ನಡೆದಿದೆ.ಮೃತ ಬಾಲಕನನ್ನು ಸುದೀಪ ಗಂಗನಹಳ್ಳಿ(೧೫) ಎಂದು ಗುರುತಿಸಲಾಗಿದೆ. ಕುರಿ ಕಾಯಲು ಬಂದಿದ್ದ ಈತ ನೀರಿಗೆ ಹೇಗೆ ಬಿದ್ದ ಎಂಬುದು ನಿಗೂಢವಾಗಿದ್ದು ತನಿಖೆಯಿಂದ ಬಹಿರಂಗವಾಗಬೇಕಿದೆ.ನೀರಿಗೆ ಬಿದ್ದಿರುವ ವಿಷಯ ಅಗ್ನಿಶಾಮಕದವರಿಗೆ ತಿಳಿಸಿದಾಗ ಘಟನಾ ಸ್ಥಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತ ಬಾಲಕನನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು.ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಮೋಹನ ನಾಯಿಕ್ ಹೇಳಿದರು.ಪಟ್ಟಣದ ಕಲ್ಮೇಶ್ವರ ಹಿರೇಮಠ ಆವರಣದಲ್ಲಿ ಸೂಗಮ್ಮ ಹಿರೇಮಠ ಎಂಬುವವರಿಗೆ ೧.೩೫ ಲಕ್ಷ ರೂ.ಗಳ ವೆಚ್ಚದ ವಾತ್ಸಲ್ಯ ಮನೆ ಹಸ್ತಾಂತರಿಸಿ ಮಾತನಾಡಿದರು. ಯೋಜನೆಯಡಿ ಈಗಾಗಲೇ ಸಿಂದಗಿ ಕಾರ್ಯಕ್ಷೇತ್ರದಲ್ಲಿ ೫ ಮನೆಗಳನ್ನು ನಿರ್ಮಿಸಿ ನೀಡಲಾಗಿದೆ. ಕೆರೆಗಳ ಹೂಳೆತ್ತುವ ಕಾರ್ಯ, ಶೈಕ್ಷಣಿಕ ಸಂಸ್ಥೆಗಳಿಗೆ ಶಿಕ್ಷಕರ ನೇಮಕಾತಿ ಹಾಗೂ ನಿರ್ಗತಿಕ ಮಹಿಳೆಯರಿಗೆ ಮಾಸಾಶನ ವಿತರಣೆಯಂತಹ ಹಲವಾರು ಜನೋಪಯೋಗಿ ಕಾರ್ಯ ಮಾಡಲು ಮುಂದಾಗಿದೆ ಇದರ ಸದುಪಯೋಗವನ್ನು ಪಡೆದವರು ಜೀವನ ರೂಪಿಸಿಕೊಂಡು ಸರಳವಾಗಿ ಬದುಕು ಸಾಗಿಸುತ್ತಿದ್ದಾರೆ ಎಂದರು.ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಹಾಗೂ ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಮಾತನಾಡಿ, ಯೋಜನೆಯ ಕಾರ್ಯವನ್ನು ಶ್ಲಾಘಿಸಿದರು.ತಾಲ್ಲೂಕು ಯೋಜನಾಧಿಕಾರಿ ಬಿನೋಯ್, ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ, ಕಾಸುಗೌಡ ಬಿರಾದಾರ, ಪಂಚಾಕ್ಷರಿ ಮಿಂಚನಾಳ, ಸೋಮಶೇಖರ ಹಿರೇಮಠ, ವಿಶ್ವನಾಥ ಸದಲಗೆ, ಸೋಮು ದೇವೂರ,…
