Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ದೇಶದ ಶೋಷಿತ, ನಿರ್ಗತಿಕರು, ತಳ ಸಮುದಾಯದ ಏಳಿಗೆಗಾಗಿ ಹೋರಾಟ ಮಾಡಿದ ಧೀಮಂತ ನಾಯಕ ಡಾ ಬಾಬಾಸಾಹೇಬ ಅಂಬೇಡ್ಕರ್ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮಹಿಪಾಲರಡ್ಡಿ ಡಿಗ್ಗಾವಿ ಹೇಳಿದರು.ಪಟ್ಟಣದ ಮಾಹಾನಾಯಕ ಡಾ. ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಯ ಮುಂದುಗಡೆ ಶನಿವಾರ ಶೋಷಿತ ಸಮುದಾಯದ ನಾಯಕ, ಮಹಾ ಮಾನವತಾವಾದಿ ಡಾ. ಬಿ.ಆರ್.ಅಂಬೇಡ್ಕರ್ ಅವರ 69 ನೇ ಮಹಾಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿಮಾತನಾಡಿದ ಅವರು ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರರು ಮಹಿಳೆಯರ ಹಕ್ಕಿಗಾಗಿ ಹೋರಾಟ ಮಾಡಿದ ಮೊದಲ ಭಾರತೀಯ ಅವರ ಹಕ್ಕಿಗಾಗಿ ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಸಾಮಾಜಿಕ ನ್ಯಾಯದ ಹರಿಕಾರ ಎಂದವರು. ಸರ್ವ ಜನಾಂಗಕ್ಕೆ ನ್ಯಾಯವನ್ನು ಒದಗಿಸಿ ಕೊಟ್ಟ ಶ್ರೇಷ್ಠ ಕಾನೂನು ತಜ್ಞರು ಎಂದರು.ಪುರಸಭೆ ಅಧ್ಯಕ್ಷೆ ಶ್ರೀಮತಿ ಪ್ರೀಯಾ ರಾಮನಗೌಡ ಪೊಲೀಸ್ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮೀಬಾಯಿ ಕಂಬಾರ, ಯುವ ನಾಯಕ ಆದಿತ್ಯಗೌಡ ಪೊಲೀಸ್ ಪಾಟೀಲ್, ಪುರಸಭೆ ಸದಸ್ಯರುಗಳಾದ ರವಿಶಂಕರ ಸೊನ್ನದ, ಆರಿಫ್ ಖಾಜಿ,…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು ಎಂದು ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ಬಬಲೇಶ್ವರ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ಸಹಯೋಗದೊಂದಿಗೆ ನಡೆದ ವಿಶ್ವ ವಿಕಲಚೇತನ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ತೀರ್ಮಾನದ ಅನುಸಾರ ಈ ಕಾರ್ಯಕ್ರಮ ನಡೆದಿದೆ. ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಟೈಟಾನ ಕಂಪನಿ ಬೆಂಗಳೂರು ಅವರ ಕಣ್ಣಿನ ತಪಾಸಣೆ, ಚಿಕಿತ್ಸೆ ನೀಡುವಲ್ಲಿ ವಿಜಯಪುರ ಗ್ರಾಮೀಣ ವಲಯ ರಾಜ್ಯದಲ್ಲೀಯೆ ಪ್ರಥಮ ಸ್ಥಾನದಲ್ಲಿದೆ. 871 ವಿಶೇಷ ಚೇತನ ಮಕ್ಕಳನ್ನು ಗುರುತಿಸಿದ್ದು ಅವರಲ್ಲಿ 161 ತೀವ್ರತರ ನ್ಯೂನತೆಯ ಮಕ್ಕಳು ಗೃಹ ಆಧಾರಿತ ಶಿಕ್ಷಣಕ್ಕೆ ಒಳಪಟ್ಟಿದ್ದಾರೆ. ಅರ್ಹ ಎಲ್ಲರಿಗೂ ಸಾಧನ ಸಲಕರಣೆ ವಿತರಿಸಿದೆ. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಲ್ಲಿ ಉಚಿತ ಹೃದಯ ಇತರೆ ತೀವ್ರತರ ಕಾಯಿಲೆಗೆ ಸಂಭಂದಿಸಿದ ಚಿಕಿತ್ಸೆ ಇದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು. ಇಲಾಖೆ ವತಿಯಿಂದ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಗೀತೆಯು ನಾವೆಲ್ಲ ಒಂದೇ ಎನ್ನುವ ಚಿಂತನೆಯನ್ನು ನೀಡುವುದರ ಮೂಲಕ ಸಾಮಾಜಿಕ ಸಾಮರಸ್ಯ ಮೂಡಿಸುತ್ತದೆ ಎಂದು ಭಗವದ್ಗೀತಾ ಅಭಿಯಾನ ಸಂಚಾಲಕ ರಾಮಚಂದ್ರ ಹೆಗಡೆ ಹೇಳಿದರು.ಪಟ್ಟಣದ ರಾಘವೇಂದ್ರ ಮಠದ ಧಾರ್ಮಿಕ ಭವನದಲ್ಲಿ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸೋಂದಾ ಸ್ವರ್ಣವಲ್ಲೀ ಸಂಸ್ಥಾನ ಶಿರಸಿ,(ಉ.ಕ) ) ಮತ್ತು ಶ್ರೀ ಭಗವದ್ಗೀತಾ ಅಭಿಯಾನ ಮುದ್ದೇಬಿಹಾಳ ತಾಲೂಕಾ ಸಮಿತಿ ಹಾಗೂ ರಾಘವೇಂದ್ರ ಮಠದ ಸಹಯೋಗದಲ್ಲಿ ಆಯೋಜಿಸಿರುವ ಗೀತಾ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಜೀವನದ ಪ್ರತಿಯೊಂದು ಸುಖ-ದು:ಖಗಳಿಗೆ ಗೀತೆಯಲ್ಲಿ ಉತ್ತರವಿದೆ. ಕಲೆ ಮತ್ತು ವಿಜ್ಞಾನ ಸದೃಶವಾದ ಅಂಶಗಳು ಅಡಕವಾಗಿದೆ. ಹಾಗಾದರೆ ಅದನ್ನು ಅಳವಡಿಸಿಕೊಳ್ಳುವ ಚಿಂತೆನೆಮಾಡಬೇಕಾಗಿದೆ, ಗೀತೆಯ ಪ್ರತಿಯೊಂದು ಅಂಶಗಳನ್ನು ಅನ್ವಯಮಾಡಿಕೊಳ್ಳುತ್ತಾ ಸಾರ್ಥಕ್ಯ ಕಾಣಬೇಕಾಗಿದೆ. ಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ಮಾಡಬಾರದನ್ನು ಮಾಡುವ, ನೋಡಬಾರದನ್ನು ನೋಡುವ ಕಾರ್ಯಕ್ಕೆ ಮುಂದಾಗಿ ಸಮಾಜಕ್ಕೆ ಕಂಟಕರಾಗುತ್ತಾರೆ. ಆದುದರಿಂದ ಮನೆಯ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಧರ್ಮಮಾರ್ಗದ ಸುವಾಸನೆ ಪಸರಿಸುತ್ತ ಇರಬೇಕು. ಭಾರತವು ಆರ್ಥಿಕರಂಗವನ್ನು ಹೊರತುಪಡಿಸಿ ಉಳಿದ ರಂಗಗಳಲ್ಲಿ ಯಾವತ್ತೂ ವಿಕಾಸವಾಗಿಯೆ ಇದೆ. ಅಂದರೆ ಜ್ಞಾನ,…
೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ್ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಮ್ಮದಲ್ಲದ ಸಮಸ್ಯೆಗಳನ್ನು ತಮ್ಮದೇ ಎಂದು ಭಾವಿಸಿ ಪಕ್ಷಗಾರರಿಗೆ ನ್ಯಾಯ ಕೊಡಿಸುವ ಕಾರ್ಯ ಮಾಡುವ ಏಕೈಕ ವೃತ್ತಿ ವಕೀಲಿ ವೃತ್ತಿ ಮಾತ್ರ ಎಂದು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಹೇಳಿದರು.ಇಲ್ಲಿನ ನ್ಯಾಯವಾದಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಕೀಲರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ತಮ್ಮ ಪಕ್ಷಗಾರರಿಗೆ ನ್ಯಾಯ ಕೊಡಿಸಲು ಪ್ರತೀ ದಿನ ಅಭ್ಯಾಸದಲ್ಲಿ ನಿರತರಾಗಿ, ನಾಳೆ ದಿನದ ಪ್ರಕರಣದಲ್ಲಿ ನಾನೇನು ಮಾಡಬೇಕು, ಹೇಗೆ ನಾನು ಈ ಪ್ರಕರಣವನ್ನು ಗೆಲ್ಲಬೇಕು ಎಂಬ ಬಗ್ಗೆ ಪೂರ್ವ ತಯಾರಿ ಮಾಡಿಕೊಳ್ಳುವಲ್ಲಿ ಸಾಕಷ್ಟು ಒತ್ತಡಗಳನ್ನು ಅನುಭವಿಸುವ ಎಲ್ಲ ವಕೀಲರದ್ದು ನೈತಿಕತೆ, ಪ್ರಾಮಾಣಿಕತೆ, ಸತ್ಯ ನಿಷ್ಟೆ-ಈ ಮೌಲ್ಯಗಳನ್ನು ಕಾಪಾಡುವ ಬಹುದೊಡ್ಡ ಕರ್ತವ್ಯವೂ ಕೂಡ ಇದೆ. ಹಾಗಾಗಿ ಎಲ್ಲ ವಕೀಲರು ತಮ್ಮ ಆರೋಗ್ಯದ ಕಡೆಗೆ ಗಮನ ಕೊಡುವಂತೆ ಕಿವಿಮಾತು ಹೇಳಿದರು.ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ…
ಲೇಖನ- ಬಸವರಾಜ ಹೂಗಾರಹವ್ಯಾಸಿ ಬರಹಗಾರರುಆಲಮೇಲಮೊ: 9740207097 ಉದಯರಶ್ಮಿ ದಿನಪತ್ರಿಕೆ ಭಾರತದ ರಾಜಕೀಯ ಇತಿಹಾಸವು ಕೆಲವರನ್ನು ನಾಯಕರೆಂದು ಗುರುತಿಸುತ್ತದೆ, ಕೆಲವರನ್ನು ಐಕಾನ್ಗಳೆಂದು ನೋಡುತ್ತದೆ. ಆದರೆ ಅಟಲ್ ಬಿಹಾರಿ ವಾಜಪೇಯಿ ಅವರು ನಾಯಕನಷ್ಟೇ ಅಲ್ಲ, ಅವರು ಒಂದು ಮೌಲ್ಯಗಳ ಯುಗ. ಅವರ ಹೆಸರನ್ನು ಉಚ್ಚರಿಸಿದಾಗಲೂ ದೇಶದ ನಾಗರಿಕರಿಗೆ ಒಂದು ವಿಶಿಷ್ಟವಾದ ಮೌನ-ಭಾವನೆ ಮೂಡುವುದು. ಅದು ಭಯದಿಂದ ಹುಟ್ಟಿದ ಮೌನವಲ್ಲ, ಗೌರವದಿಂದ ತುಂಬಿದ ಮೌನ.ಅವರನ್ನು “ಅಜಾತಶತ್ರು” ಎಂದು ಕರೆಯುವುದು ಭಾವೋದ್ರೇಕದ ಪದವಲ್ಲ, ಅದು ವಾಜಪೇಯಿಯವರ ವ್ಯಕ್ತಿತ್ವದ ನಿಖರ ವಾಸ್ತವ್ಯ.ನೆಹರು-ಅಟಲ್: ರಾಜಕೀಯ ಮೀರಿದ ಬಂಧಅಟಲ್ಜಿಯವರ ರಾಜಕೀಯದ ದೃವತಾರೆಯಂತೆ ಇಂದು ನೆನಪಾಗುವುದು ಅವರ ನೆಹರುರವರೊಂದಿಗೆ ಹೊಂದಿದ್ದ ಒಡನಾಟ.1957ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಮೊದಲಬಾರಿ ಲೋಕಸಭೆಗೆ ಆಯ್ಕೆಯಾದಾಗ ಅವರು ವಿರೋಧ ಪಕ್ಷದ ಯುವ ನಾಯಕ. ಆದರೆ ಅವರ ವಾಗ್ಮಿಯತೆ, ಅವರ ಸ್ವಚ್ಛ ರಾಜಕೀಯ ಧಾಟಿ, ಮತ್ತು ದೇಶದ ಬಗ್ಗೆ ಅವರ ಪ್ರೀತಿ ಇವು ನೆಹರುರವರ ಗಮನ ಸೆಳೆದಿದ್ದವು.ಒಂದು ಬಾರಿ ಲೋಕಸಭೆಯಲ್ಲಿ ಅಟಲ್ ಜೀ ಉತ್ಸಾಹಪೂರ್ಣವಾಗಿ ಮಾತನಾಡಿದ ನಂತರಜವಾಹರಲಾಲ್ ನೆಹರುರವರು ತಮ್ಮ…
ಅವ್ಯವಹಾರ & ಭ್ರಷ್ಟಾಚಾರದ ಆರೋಪ ಹಿನ್ನೆಲೆ ಡಿಡಿಪಿಐ ಕಚೇರಿ ಹಾಗೂ ವಿಜಯಪುರ ನಗರ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ಮೇಲೆ ದಾಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಡಿಡಿಪಿಐ ಕಚೇರಿ ಹಾಗೂ ವಿಜಯಪುರ ನಗರ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದರು.ಶಿಕ್ಷಣ ಇಲಾಖೆಯಲ್ಲಿನ ಅವ್ಯವಹಾರ, ಭ್ರಷ್ಟಾಚಾರದ ದೂರುಗಳ ಆಧಾರದ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸ್ವಯಂ ಪೇರಿತ ಪ್ರಕರಣ ದಾಖಲಿಸಿಕೊಂಡು, ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಲು ವಾರೆಂಟ್ ಹೊರಡಿಸಿದ್ದರು. ಅದರಂತೆ ಗುರುವಾರ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕರು ಹಾಗೂ ನಾಲ್ವರು ಇನ್ಸ್ಪೆಕ್ಟರ್ಗಳ ತಂಡವು ಮೂರು ಕಚೇರಿಗಳ ಮೇಲೆ ಬೆಳಗ್ಗೆ 11 ಗಂಟೆಗೇ ದಾಳಿ ನಡೆಸಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆಯಲ್ಲಿರುವ ಡಿಡಿಪಿಐ ಕಚೇರಿ ಹಾಗೂ ನಗರ ಹಾಗೂ ಗ್ರಾಮೀಣ…
ವೃಕ್ಷಥಾನ್ ಹೆರಿಟೇಜ್ ರನ್ | ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳ ಓಟ & ಮಾಧ್ಯಮ ಪ್ರತಿನಿಧಿಗಳ ಓಟ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೃಕ್ಷಥಾನ್ ಹೆರಿಟೇಜ್ ರನ್-2025 ಅಂಗವಾಗಿ ಇಂದು ಶುಕ್ರವಾರ ನಗರದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳ ಓಟ ಹಾಗೂ ಮಾಧ್ಯಮ ಪ್ರತಿನಿಧಿಗಳ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಓಟಗಾರರು ಉತ್ಸಾಹದಿಂದ ಪಾಲ್ಗೋಂಡಿದ್ದಾರೆ.ಬೆಳಿಗ್ಗೆ ಎಂಟು ಗಂಟೆಗೆ ಪ್ರಾರಂಭವಾದ ನಾನಾ ವಿಭಾಗಗಳ ಓಟಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ವೃಕ್ಷಥಾನ್ ಧ್ವಜ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬೆಳಿಗ್ಗೆ ಏಳು ಗಂಟೆಯಿಂದಲೇ ಜಿಲ್ಲಾ ಕ್ರೀಡಾಂಗಣದಲ್ಲಿ ಸೇರಿದ ಎಲ್. ಕೆ. ಜಿ, ಯು.ಕೆ.ಜಿ, ಮತ್ತು ಒಂದರಿಂದ 5ನೇ ತರಗತಿ ವರೆಗಿನ ಮಕ್ಕಳು, ವಾಕ್ ಮತ್ತು ಶ್ರವಣ ದೋಷ ಮಕ್ಕಳು ಅತ್ಯುತ್ಸಾಹದಿಂದ ಓಟದಲ್ಲಿ ಪಾಲ್ಗೋಂಡರು. ಅಷ್ಟೇ ಅಲ್ಲ, ಓಡುತ್ತಿದ್ದ ಮಕ್ಕಳಿಗೆ ಚಪ್ಪಾಳೆ ತಟ್ಟುವ ಮೂಲಕ, ಘೋಷಣೆ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಅಜ್ಞಾನದಿಂದ ಸುಜ್ಞಾನದೆಡೆಗೆ ಕೊಂಡೊಯ್ಯುವ ಮಹಾ ಶಕ್ತಿಯೇ ಗುರು ಅಂತಹ ಸದ್ಗುರುವಿನ ಸನ್ನಿಧಿಯಲ್ಲಿ ಜರುಗುವ ಹುಣ್ಣಿಮೆಯ ಸತ್ಸಂಗ ಮಹಾ ಬೆಳಕು ಎಂದು ಶಿವಬಸಯ್ಯ ಸ್ವಾಮಿ ಕುಕೂನೂರು ಹೇಳಿದರು.ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಉದ್ಘಾಟಿಸಿ ಉಪನ್ಯಾಸ ನೀಡಿದ ಅವರು ಗುರು ಎಂದರೆ ಅಭಿಮಾನ, ಗುರು ಎಂದರೆ ಆಶಿರ್ವಾದ, ಗುರು ಎಂದರೆ ಚೈತನ್ಯ ಸ್ವರೂಪ, ಎನ್ನುತ್ತಾ, ಜಗದ ಜನರು ಜಂಜಾಟಗಳಿಂದ ಜರ್ಜರಿತವಾದಗ ಜನಜೀವನಕ್ಕೆ ಜೀವಾಮೃತ ತುಂಬಿ ಜಾಗೃತಿಗೊಳಿಸುವ ಜಂಗಮ ಸ್ವರೂಪವೇ ಗುರು ಎಂದವರು, ಸಾಧು, ಸಂತರು, ಸತ್ಪುರುಷರು, ಚಿಂತಕರು, ಶ್ರೇಷ್ಠ ದಾರ್ಶನಿಕರು ತೋರಿದ ಮಾರ್ಗವನ್ನು ಅನುಸರಿಸುತ್ತಾ, ಭಗವಂತನ ಸಾಕ್ಷಾತ್ಕಾರಕ್ಕೆ ಸಾಕ್ಷಿಯಾಗುವ ಮೂಲಕ ಸದ್ಭಕ್ತರ ಬಾಳು ಬೆಳಗಲಿ ಎಂಬ ಸದುದ್ದೇಶದಿಂದ ಮಾಸಿಕ ಶಿವಾನುಭವ ಗೋಷ್ಠಿಯನ್ನು ಆಯೋಜಿಸಿ ಅನುಭವದ ಅಮೃತಧಾರೆ ಎರೆಯುವ ಷ ಬ್ರ ಚನ್ನಬಸವ ಶಿವಾಚಾರ್ಯರ ಘನ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.ಸದ್ಭಕ್ತರಾದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸುವುದಕ್ಕೆ, ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕಾಗಿ ಎನ್ಎಸ್ಎಸ್ ಶಿಬಿರ ನಡೆಯುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿ ಇದರ ಅನುಭವ ಪಡೆದುಕೊಳ್ಳಬೇಕೆಂದು ವಿಶ್ರಾಂತ ಉಪನ್ಯಾಸಕ ಬಿ. ಎಸ್. ಬಿರಾದಾರ ಹೇಳಿದರು.ಅವರು ಪಟ್ಟಣದ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್ಜಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ 2025-26 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಶಿಕ್ಷ ಣ ಹೇರಿಕೆ ಆಗಬಾರದು, ಪಠ್ಯ ಶಿಕ್ಷ ಣ ಜತೆ ಸಮುದಾಯದ ಪರಿಚಯ, ಸೇವೆ ಮೂಲಕ ಸ್ವಚ್ಛತೆ ಅರಿವು, ನಮ್ಮಲ್ಲಿನ ಸಂಸ್ಕೃತಿ ಪ್ರದರ್ಶನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಸಹ ಭೋಜನ, ಕ್ರೀಡೆ ಮೂಲಕ ಸಮಗ್ರತೆ ಪರಿಕಲ್ಪನೆ ಹೀಗೆ ಹಲವು ಚಿಂತನೆ ಸಾಕಾರಕ್ಕಾಗಿ ಶಿಬಿರ ನಡೆಯುತ್ತದೆ. ಅದನ್ನು ಅರ್ಥ ಮಾಡಿಕೊಂಡು ಎಲ್ಲ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಎ. ಆರ್. ಹೆಗ್ಗನದೊಡ್ಡಿ ಮಾತನಾಡಿ,ಕಲಿಕೆ ವಿದ್ಯಾರ್ಥಿ, ಶಿಕ್ಷ ಕರ ನಡುವಿನ ಕೊಂಡಿ ಆಗಿರದೆ ಸಮುದಾಯದ ನಡುವೆಯೂ ರಚನಾತ್ಮಕ ಸಂಬಂಧ ಏರ್ಪಡಬೇಕು…
ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದ ಸಹಸ್ರಾರು ಭಕ್ತ ಸಮೂಹ | ವಿವಿಧೆಡೆ ಅನ್ನ ಸಂತರ್ಪಣೆ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಉತ್ತರಕರ್ನಾಟಕದ ದೊಡ್ಡ ಜಾತ್ರೆಗಳಲ್ಲಿ ಒಂದಾದ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಆರಾಧ್ಯ ಧೈವವಾದ ಶ್ರೀಗುರು ವೀರಘಂಟೈ ಮಡಿವಾಳೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ರವಿವಾರ ನಸುಕಿನ ಜಾವ ೫ ಗಂಟೆಗೆ ಅಗ್ಗಿ ಉತ್ಸವ ಹಾಗೂ ಸಂಜೆ ೫ ಘಂಟೆಗೆ ಮೃಘಶಿರ ನಕ್ಷತ್ರದಲ್ಲಿ ಭಾರಿ ಜನಸ್ತೋಮದ ಜಯಘೋಷಗಳೊಂದಿಗೆ ವಿಜೃಂಭಣೆಯಿಂದ ಅದ್ದೂರಿಯಾಗಿ ಶ್ರೀಗುರು ವೀರಘಂಟೈ ಮಡಿವಾಳೇಶ್ವರರ ಜೋಡು ರಥೋತ್ಸವವು ನಡೆಯಿತು.ರವಿವಾರ ನಸುಕಿನ ಜಾವ ವೇ.ಮೂ.ಮಲ್ಲಯ್ಯಮುತ್ಯಾ ಗದ್ದಿಗೆಮಠ ಅವರ ನೇತೃತ್ವದಲ್ಲಿ ದೇವಸ್ಥಾನದ ಸಂಪ್ರದಾಯದಂತೆ ಅಗ್ನಿಕುಂಡಕ್ಕೆ ವಿವಿಧ ವಾಧ್ಯಮೇಳ ಕಳಸಾರತಿಯೊಂದಿಗೆ ಐದು ಸುತ್ತು ಪೂಜಾ ಕೈಂಕರ್ಯವನ್ನು ನಡೆಸಿ ನಂತರ ಅಗ್ಗಿಯನ್ನು ಹಾಯಲಾಯಿತು. ನಂತರ ಉಚ್ಚಾಯಿ ಉತ್ಸವ, ವೀರಂಘಂಟೈ ಮಡಿವಾಳೇಶ್ವರರ ಕರ್ತೃ ಗದ್ದಿಗೆಗೆ ಮಹಾರುದ್ರಾಭಿಷೇಕ, ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು, ಬೆಳ್ಳಿಗ್ಗೆ ೯ ಗಂಟೆಯಿಂದ ಗ್ರಾಮದ ಸಾವಿರಾರು ಯುವಪಡೆಯ ಭಕ್ತ ಸಮೂಹ ಹಿರಿಯರ ಮಾರ್ಗದರ್ಶನದಲ್ಲಿ ಪದ್ದತಿಯಂತೆ ರಥಕ್ಕೆ ಎಣ್ಣೆಯನ್ನು…
