Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರತಿವರ್ಷದಂತೆ ಈ ವರ್ಷವು ಸಹ ನೆಚ್ಚಿನ ಶಿಕ್ಷಕರನ್ನು ನೆನೆದು, ಅವರು ನಮಗೆ ನೀಡಿದ ಮಾರ್ಗದರ್ಶನ, ಶಿಕ್ಷಣ, ಕಲಿಸಿದ ನೈತಿಕ ಶಿಕ್ಷಣ, ಸಹಕಾರ ಎಲ್ಲವನ್ನೂ ಸ್ಮರಿಸಿ ಅವರಿಗೆ ಗೌರವ ಸಮರ್ಪಣೆ ನೀಡುವ ದಿನವೇ ಶಿಕ್ಷಕರ ದಿನ ಎಂದು ಸಂಸ್ಥೆಯ ನಿರ್ದೇಶಕ ಸಂತೋಷ ಫಾದರ್ ಹೇಳಿದರು.ಪಟ್ಟಣದ ಸಂಗಮ ಸಂಸ್ಥೆಯಲ್ಲಿ ಹಮ್ಮಿಕೊಂಡ ಸಂತ ಮದರ್ ತೆರೆಸಾ ದಿನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನ, ಕೌಶಲ್ಯ ಮಟ್ಟ, ಆತ್ಮ ವಿಶ್ವಾಸವನ್ನು ಸುಧಾರಿಸಲು ಸಹಾಯ ಮಾಡುವ ಶಿಕ್ಷಕರನ್ನು ನಾವು ಎಷ್ಟೂ ಸ್ಮರಿಸಿದರು ಸಾಲದು. ವರ್ಷಕ್ಕೊಮ್ಮೆ ಸೆ.೦೫ರಂದು ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಶಿಕ್ಷಣದಲ್ಲಿ ಗುರುಗಳ ಪಾತ್ರ ಬಹಳ ಮುಖ್ಯವಾಗಿದೆ. ಶಿಕ್ಷಕರನ್ನು ಗೌರವದಿಂದ ಸಮಾಜ ಅವರನ್ನು ಕಾಣಬೇಕಾಗಿದೆ. ಜೊತೆಗೆ ಸಂತ ಮದರ್ ತೆರೇಸಾ ಅವರು ಸುಮಾರು ೪೫ ವರ್ಷಗಳಿಗೂ ಹೆಚ್ಚು ಕಾಲ ಬಡ ರೋಗಿಗಳ ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಂಡಿದ್ದರು.…

Read More

ಮಾಧ್ಯಮ ಕಾರ್ಯಾಗಾರ ಉದ್ಘಾಟಿಸಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಹಕ್ಕುಗಳು ಮತ್ತು ಅವರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಯೂನಿಸೆಫ್, ರಾಜ್ಯದ ಎಲ್ಲ ಪತ್ರಿಕೋದ್ಯಮ ವಿಭಾಗಳೊಂದಿಗೆ ಕೆಲಸ ಮಾಡಲು ಬಾಲ ವಿಕಾಸ ಅಕಾಡೆಮಿ ಸಿದ್ಧವಿದೆ. ಒಪ್ಪಂದ ಮಾಡಿಕೊಂಡು ಇದಕ್ಕೆ ಅಗತ್ಯವಾದ ಅನುದಾನ ನೀಡಲಾಗುವುದು ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಯುನಿಸೆಫ್ ಪ್ರಾಯೋಜಕತ್ವ ಮತ್ತು ಇವರ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಮಾಧ್ಯಮ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಿಗೆ ಜಾತಿ, ಪಂಥ, ಬೇಧವಿಲ್ಲ. ಕೇವಲ ಸರ್ಕಾರಿ ಸೌಲಭ್ಯಗಳ ಮೂಲಕ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯವಿಲ್ಲ. ಪ್ರೀತಿ, ಮಮತೆಯಿಂದ ಮಾತ್ರ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವಿಜಯಪುರ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಿಂದಗಿ ಹಾಗೂ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ೨೦೨೪-೨೫ನೆಯ ಸಾಲಿನ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ವರುಣಾ ಮೆಟಗಾರ, ಅಪೂರ್ವಾ ಅಡಕಿ, ದಿವ್ಯಾಶ್ರೀ ಬೋರಾವತ, ಮೇಘಾ ಹಳ್ಳೆಪ್ಪಗೋಳ, ಸುಶೀಲಾ ಅಂಗಡಿ, ವಿದ್ಯಾಶ್ರೀ ನಾಯಕ, ಗೀತಾಂಜಲಿ ಬೂದಿಹಾಳ, ವೇದಾ ಬಾಗಲಕೋಟ, ಸುಚಿತ್ರಾ ಗುಗ್ಗರಿ, ಸೃಷ್ಟಿ ಕಲಕೇರಿ, ರಿದ್ಧಿ ಬೋರಾಣಾ ಭಾಗವಹಿಸಿ ಥ್ರೋಬಾಲ್ ಗುಂಪು ಆಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ಕಬಡ್ಡಿ ಹಾಗೂ ವಾಲಿಬಾಲ್‌ನಲ್ಲಿ ದ್ವಿತಿಯ ಸ್ಥಾನ ಪಡೆದಿದ್ದಾರೆ.ಸಿಂದಗಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯ ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಭಾಷಣ ಸ್ಪರ್ಧೆಯಲ್ಲಿ ಅಪೇಕ್ಷಾ ಹುಗ್ಗಿ ಪ್ರಥಮ, ಅರೇಬಿಕ್ ಧಾರ್ಮಿಕ ಪಠಣದಲ್ಲಿ ರಪತ್‌ಕೌಸರ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದಲ್ಲಿ ಅಲ್ಲಲ್ಲಿ ಕೊಳಚೆ ಪ್ರದೇಶಗಳಿವೆ, ಅವುಗಳನ್ನು ಸ್ವಚ್ಚಗೊಳಿಸುವದು ಮತ್ತು ಕಾಯಿಪಲ್ಲೆ, ಹಣ್ಣು ಮಾರುಕಟ್ಟೆಯನ್ನು ಮೆಗಾ ಮಾರುಕಟ್ಟೆಯ ಕೆಳಗಡೆ ಆಯೋಜಿಸಲು ಯೋಜನೆಯೊಂದನ್ನು ರೂಪಿಸಲಾಗುವದು ಎಂದು ಎಸಿ ಅಬೀದ್ ಗದ್ಯಾಳ ಮತ್ತು ಪುರಸಭೆಯ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಜಂಟಿಯಾಗಿ ಹೇಳಿದರು.ಬುಧವಾರ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿದ ಮೆಗಾ ಮಾರುಕಟ್ಟೆಗೆ ಮತ್ತು ಅದರ ಪಕ್ಕದಲ್ಲಿಯ ಕೊಳಚೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.ಮೆಗಾ ಮಾರುಕಟ್ಟೆಯ ಎದುರಿಗೆ (ಇಂಡಿ ಬಸ್ ನಿಲ್ದಾಣದಿಂದ ಸ್ಟೇಶನ್ ರಸ್ತೆಗೆ) ಇರುವ ಮುಖ್ಯ ರಸ್ತೆಗೆ ಮಾರ್ಗ ಕಲ್ಪಿಸಿಕೊಟ್ಟು ಮಾರುಕಟ್ಟೆಯ ಕೆಳಗಡೆ ನಿರ್ಮಿಸಲು ಉದ್ದೇಶಿಸಿರುವ ಕಾಯಿಪಲ್ಲೆ, ಹಣ್ಣು ಮಾರುಕಟ್ಟೆಗೆ ಹೋಗಿಬರಲು ಮೆಗಾ ಮಾರುಕಟ್ಟೆಗೆ ಇನ್ನೂ ಮೂರು ಕಡೆ ಹೆಬ್ಬಾಗಿಲು ನಿರ್ಮಿಸುವದು, ವಾಹನಗಳ ನಿಲುಗಡೆಗೆ ವ್ಯವಸ್ಥೆ, ಕೊಳಚೆ ಪ್ರದೇಶ ಸ್ವಚ್ಚಗೊಳಿಸುವದು, ಹಳೆಯ ಸರಕಾರಿ ಆಸ್ಪತ್ರೆಯಲ್ಲಿರುವ ಹಳೆಯ ಕಟ್ಟಡಗಳನ್ನು ನೆಲಸಮಗೊಳಿಸಿ ಮೆಗಾ ಮಾರುಕಟ್ಟೆಗೆ ಕಂಪೌಂಡ್ ಗೋಡೆ ನಿರ್ಮಿಸುವದು, ಕುಡಿಯುವ ನೀರಿನ ವ್ಯವಸ್ಥೆ ಮುಂತಾದ ಕೆಲಸಗಳನ್ನು ಶೀಘ್ರದಲ್ಲಿಯೇ ಮಾಡಲಾಗುವದು ಎಂದರು.ಈ ವ್ಯವಸ್ಥೆಯಿಂದ ಇಂಡಿ-ಸಿಂದಗಿ, ಇಂಡಿ-…

Read More

ವಿಶ್ವ ರೇಬೀಸ್ ದಿನಾಚರಣೆ | ಪ್ರಾಣಿಜನ್ಯ ರೋಗಗಳ ಬಗ್ಗೆ ಶಾಲಾ ಮಕ್ಕಳಿಗೆ ಅರಿವು ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಹುಚ್ಚು ನಾಯಿ ಕಡಿತದ ರೇಬೀಸ್ ರೋಗ ಮಾರಣಾಂತಿಕ ರೋಗವಾಗಿದ್ದು, ಆ ದಿಸೆಯಲ್ಲಿ ಜನಜಾಗೃತಿ ವಹಿಸುವುದು ಅತ್ಯಗತ್ಯ ಎಂದು ಜಮಖಂಡಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ,ಆರ್.ಬಿ.ನಾಗರಳ್ಳಿ ಹೇಳಿದರು.ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾ ಪ್ರಾಣಿದಯಾ ಸಂಘ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಬೀಸ್ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಪ್ರಾಣಿಜನ್ಯ ರೋಗಗಳ ಬಗ್ಗೆ ಶಾಲಾ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಾಕು ನಾಯಿಗಳ ಬಗ್ಗೆಯೂ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಬೀದಿ ನಾಯಿಗಳ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿ ಜಾಗರೂಕತೆಯಿಂದ ಇರಬೇಕು. ಹುಚ್ಚುನಾಯಿ ರೋಗದ ಹೆಸರು ಕೇಳಿದ ಕೂಡಲೇ ಭಯಬೀತಿ ಆವರಿಸುತ್ತದೆ. ಇದು ಮೈಮನ ನಡುಕು ಹುಟ್ಟಿಸುವ ಪ್ರಾಣಿಜನ್ಯ ರೋಗವಾಗಿದ್ದು ಲಿಸ್ಸಾ ಎಂಬ ವೈರಾಣುವಿನಿಂದ ಹರಡುವ ಮಾರಣಾಂತಿಕ ರೋಗವಾಗಿದೆ. ಒಮ್ಮೆ ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಗಜಾನನೋತ್ಸವ ಮಹಾಮಂಡಲ ವತಿಯಿಂದ ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಚಾಲನೆ ನೀಡಿದರು.ಶಿಬಿರದಲ್ಲಿ ಜುಗತಿ ಹೆಲ್ತ್ ಕೇರ್ ಸೆಂಟರ್ ಆಸ್ಪತ್ರೆಯ ವೈದ್ಯ ಡಾ.ಅವಿನಾಶ್ ಜುಗುತಿ ಅವರಿಂದ ಆರೋಗ್ಯ ತಪಾಸಣೆ ಮಾಡಲಾಯಿತು.ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅನೇಕರು ಭಾಗವಹಿಸಿದರು.ಆರೋಗ್ಯ ಶಿಬಿರದಲ್ಲಿ ಸುಮಾರು ಜನ ಭಾಗವಹಿಸಿ ಇದರ ಉಪಯೋಗವನ್ನು ಪಡೆದುಕೊಂಡರು.ಪ್ರತಿ ವರ್ಷ ಗಜಾನನ ಮಹಾಮಂಡಲ ಈ ಕಾರ್ಯ ಮಾಡುತ್ತಾ ಬಂದಿರುವುದನ್ನು ಇಲ್ಲಿ ಸ್ಮರಿಸಬಹುದು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿರುವ ಗಜಾನನ ಮಹಾ ಮಂಡಳಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಗಂಗಾ ಆರತಿ ನಡೆಯಿತು.ಆರತಿಯನ್ನು ವಾರಣಾಸಿಯಿಂದ ಆಗಮಿಸಿದ್ದ ಐದು ಜನ ಅರ್ಚಕರಿಂದ ಗಣೇಶನಿಗೆ ಒಂದು ಗಂಟೆ ಕಾಲ ಗಂಗಾ ಆರತಿ ಮಾಡಲಾಯಿತು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಭಿನವ ಶ್ರೀ ಅವಧೂತ ಸಿದ್ಧ ಮಹಾರಾಜರು ಅರಿಕೇರಿಗುಡ್ಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.ಸಾವಿರಾರು ಭಕ್ತರು ಉಪಸ್ಥಿತರಿದ್ದರು. ಗಂಗಾ ಆರತಿ ಬಳಿಕ ಭಕ್ತರಿಗೆ ಪ್ರಸಾದ ವಿತರಣೆ. ಮಾಡಲಾಯಿತು. ಸುಮಾರು 1ಗಂಟೆ ಕಾಲ ಗಣೇಶನಿಗೆ ಗಂಗಾ ಆರತಿ ಮೂಲಕ ಪೂಜೆ ಸಲ್ಲಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಗ್ರಾಮೀಣ ಭಾಗದ ಜನರ ಆರೋಗ್ಯವನ್ನು ವೃದ್ಧಿಸುವ ದೃಷ್ಠಿಯಿಂದ ಗ್ರಾಮ ಪಂಚಾಯತಿಗಳ ಜೊತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿ ಎಲ್ಲ ಇಲಾಖೆಗಳ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಈ ರೀತಿ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದ್ದಲ್ಲಿ ನಾವು ಎಲ್ಲ ವಿಷಯದಲ್ಲಿಯೂ ಪ್ರಗತಿ ಸಾಧಿಸಬಹುದು ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಹೇಳಿದರು.ಪಟ್ಟಣದ ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಸೆ.೧೦ರಂದು ಹಮ್ಮಿಕೊಂಡ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಈ ರೀತಿಯಾಗಿ ಕಾರ್ಯ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಹಾಗೂ ಗ್ರಾಮೀಣರಲ್ಲಿರುವ ರೋಗ ಭಯವನ್ನು ಹೊಗಲಾಡಿಸಬಹುದು ಎಂದರು. ಜೊತೆ ಜೊತೆಗೆ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಶಾಲೆಯಲ್ಲಿ, ಅಂಗನವಾಡಿ ಕೇಂದ್ರದಲ್ಲಿ ಇತರೆ ಸಮುದಾಯ ಜನ ಸೇರುವ ಸ್ಥಳದಲ್ಲಿ ಆರೋಗ್ಯ ಶಿಬಿರ, ಅರಿವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಆರೋಗ್ಯದ ಕುರಿತು ಪ್ರಚಾರ ಮಾಡಬೇಕು ಎಂದರು.ಆರೋಗ್ಯದ ಜೊತೆಜೊತೆಗೆ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರ್ತಿಸುವುದೇ ಪ್ರತಿಭಾ ಕಾರಂಜಿ ಏರ್ಪಡಿಸುವ ಉದ್ದೇಶವಾಗಿದೆ ಎಂದು ಕಳ್ಳಕವಟಗಿ ಸಮೂಹ ಸಂಪನ್ಮೂಲ ವ್ಯಕ್ತಿ ಜಿ.ಜಿ.ದೊಡ್ಡಿಹಾಳ ಹೇಳಿದರು.ತಾಲ್ಲೂಕಿನ ಘೋಣಸಗಿ ಗ್ರಾಮದ ಅಮೋಘ ನವೋದಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ಮಕ್ಕಳ ಸೃಜನಶೀಲತೆ ಹೊರ ಹಾಕುವ ವೇದಿಕೆಯಾಗಿದೆ ಎಂದರು.ಸಂಸ್ಥೆಯ ಅಧ್ಯಕ್ಷ ಟಿ.ಎಂ.ಪಾಟೀಲ್ ಮಾತನಾಡಿ ನಿರ್ಣಾಯಕರು ಯಾವುದೇ ಬೇಧ ಮಾಡದೇ ಸೂಕ್ತ ಪ್ರತಿಭೆ ಹೊಂದಿದ ಮಕ್ಕಳನ್ನು ಪ್ರಾಮಾಣಿಕತೆಯಿಂದ ಆಯ್ಕೆ ಮಾಡಬೇಕು. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸೂಕ್ತ ವೇದಿಕೆಯಾಗಬೇಕು. ಸೋಲು ಗೆಲುವು ಯೋಚಿಸದೇ ಸ್ಪರ್ಧೆಯಲ್ಲಿ ಮಕ್ಕಳು ಭಾಗವಹಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಮೈಬುಬ್ ಜತ್ತಿ, ಸಿದ್ದಪ್ಪ ಮುಚ್ಚಂಡಿ, ಎಸ್.ಎನ್.ಬಾಗಲಕೋಟ, ಜೆ.ಎ.ಆಯತವಾಡ, ಎಸ್.ಬಿ.ಖಂಡೆಕರ್, ಶಾಂತವೀರಯ್ಯ ಹಿರೇಮಠ, ಎನ್.ಆರ್.ಬಾನಿಕೋಲ್, ಎಸ್.ಎಸ್.ಗಣಿ, ವಸಂತ ಲೋಣಿ, ಪಿ.ಎಸ್.ಗದ್ಯಾಳ ಇದ್ದರು.ನಿರೂಪಣೆಯನ್ನು ಸಂತೋಷ ಕಾಂಬಳೆ, ಸ್ವಾಗತವನ್ನುಐ.ಎಂ.ಅರಳಿ, ವಂದನಾರ್ಪಣೆಯಯನ್ನು ಅನ್ನಪೂರ್ಣ ಭಜಂತ್ರಿ ನೆರವೇರಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮದ ಶ್ರೀಮಲ್ಲಿಕಾರ್ಜುನ ಗಜಾನನ ಉತ್ಸವದ ಅಂಗವಾಗಿ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.ತಾಲ್ಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಬುಧವಾರ ಗಜಾನನ ಉತ್ಸವದ ಅಂಗವಾಗಿ ಮುತೈದೆಯರಿಗೆ ಉಡಿ ತುಂಬುವುದರ ಮೂಲಕ ನಾಡಿನ ಹಿತಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಉಡಿ ತುಂಬಿಕೊಂಡ ಮುತೈದೆಯರು ನಾಡಿಗೆ ಮಳೆ, ಬೆಳೆ ಸಮೃದ್ಧಿಯಾಗಲಿ, ಮಕ್ಕಳೆಲ್ಲಾ ಸಂಸ್ಕಾರವಂತರಾಗಲಿ, ಪ್ರಾಣಿ, ಪಕ್ಷಿಗಳೆಲ್ಲಾ ಸಂತೋಷವಾಗಿ ಬದುಕಲಿ, ನಮ್ಮ ಪ್ರಕೃತಿ, ಪರಿಸರ ವಿಕೋಪಕ್ಕೆ ಒಳಗಾಗದೇ ಶಾಂತಿಮಯವಾಗಿರಲಿ, ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕಲು ಆ ವಿಘ್ನನಿವಾರಕ ವಿನಾಯಕ ನಮ್ಮನ್ನೆಲ್ಲಾ ಆಶೀರ್ವದಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ಮುತೈದೆಯರು ಸೇರಿದಂತೆ ಗ್ರಾಮಸ್ಥರಿಗೆ ಮಹಾಪ್ರಸಾದ ವಿತರಿಸಲಾಯಿತು.ಅನೀತಾ ಪಾಟೀಲ, ರತ್ನಾಬಾಯಿ ಬಿರಾದಾರ, ಭಾಗೀರಥಿ ನಾಗರಳ್ಳಿ, ಜಯಶ್ರೀ ಬಿರಾದಾರ, ಮಹಾದೇವಿ ಬಿರಾದಾರ, ಸರುಬಾಯಿ ಹೊನ್ನುಟಗಿ, ಶಂಕ್ರಮ್ಮ ಬಸರಕೋಡ, ಭಾರತಿ ಗಬ್ಬೂರ, ಗಂಗೂಬಾಯಿ ಪೋಲೇಶಿ, ಸುಕನ್ಯಾ ಸರಬಡಗಿ, ಭೋರಮ್ಮ ರೋಡಗಿ, ಲಕ್ಷ್ಮೀ ಹದರಿ, ರಶ್ಮೀ ಬಿರಾದಾರ ಸೇರಿದಂತೆ ಗಜಾನನ ಉತ್ಸವ ಸಮಿತಿಯ ಸರ್ವಸದಸ್ಯರು ಇದ್ದರು.

Read More