Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಡಚಣ: ಪಟ್ಟಣದ ಸಾಧಕ, ಸ್ನಾತಕೋತ್ತರ ಪತ್ರಿಕೋದ್ಯಮ ಪದವಿ ವಿಭಾಗದಲ್ಲಿ ಇತ್ತೀಚೆಗೆ ರಾಜಪಾಲರಿಂದ ‘ಚಿನ್ನದ ಪದಕ’ವನ್ನು ಸ್ವೀಕರಿಸಿದ ವಿದ್ಯಾರ್ಥಿ ಸಂತೋಷ ಮಲ್ಲಿಕಾರ್ಜುನ ಬಗಲಿ ಅವರಿಗೆ ಪಟ್ಟಣದ ಮಹಾ ಶಿವಶರಣ ಹರಳಯ್ಯನವರ ಸಮುದಾಯದ ಶಿಕ್ಷಕರ ಬಳಗ ವತಿಯಿಂದ ಸನ್ಮಾನ ಕಾರ್ಯಕ್ರಮ ಜರುಗಿತು.ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಮಲ್ಲಪ್ಪ ವಾಘಮೊರೆ ಮಾತನಾಡಿ, ವಿವಿಧ ಕ್ಷೇತ್ರದ ಸಾಧಕರು ನಮ್ಮ ಸಮುದಾಯದಲ್ಲಿದ್ದು, ಅಂತಹ ಪ್ರತಿಭಾನ್ವಿತರು ಹಾಗೂ ಸಾಧಕರನ್ನು ಗುರುತಿಸಿ ಗೌರವಿಸುವದು ನಮ್ಮೆಲ್ಲರ ಜವಾಬ್ದಾರಿ. ವಿದ್ಯಾರ್ಥಿ ಸಂತೋಷ ಬಡತನದಲ್ಲಿ ವಿದ್ಯಾಭ್ಯಾಸ ಮಾಡಿ ಸಾಧನೆ ಮಾಡಿರುವುದು ಇಡಿ ಸಮಾಜಕ್ಕೆ ಸಂದ ಗೌರವ. ಇವರ ಚಿನ್ನದ ಸಾಧನೆ ನಮ್ಮ ಯುವ ಪೀಳಿಗೆಗೆ ಮಾದರಿಯಾಗಲಿದೆ ಎಂದು ಹೇಳಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಸಿ.ಆರ್.ಸಿ ಎಸ್.ಎಲ್ ಅಹಿರಸಂಗ ಅವರು, ಚಿನ್ನದ ಹುಡುಗ ಸಂತೋಷನಿಗೆ ಚಿನ್ನದ ಪದಕ ಬಂದಿರುವುದು ಕೇವಲ ಚಡಚಣಕ್ಕೆ ಅಷ್ಟೇ ಅಲ್ಲ, ಇಡಿ ಜಿಲ್ಲೆ ಹೆಮ್ಮೆ ಪಡುವ ವಿಷಯ. ಇವರ ಸಾಧನೆಯನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ಛಲದಿಂದ ಓದಿ, ಉನ್ನತ ಸಾಧಕರಾಗಬೇಕು ಎಂದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂತೋಷ ಅವರು, ಛಲದಿಂದ…
ಚಡಚಣ: ಪಟ್ಟಣದ ಸಾಧಕ, ಸ್ನಾತಕೋತ್ತರ ಪತ್ರಿಕೋದ್ಯಮ ಪದವಿ ವಿಭಾಗದಲ್ಲಿ ಇತ್ತೀಚೆಗೆ ರಾಜಪಾಲರಿಂದ ‘ಚಿನ್ನದ ಪದಕ’ವನ್ನು ಸ್ವೀಕರಿಸಿದ ವಿದ್ಯಾರ್ಥಿ ಸಂತೋಷ ಮಲ್ಲಿಕಾರ್ಜುನ ಬಗಲಿ ಅವರಿಗೆ ಪಟ್ಟಣದ ಮಹಾ ಶಿವಶರಣ ಹರಳಯ್ಯನವರ ಸಮುದಾಯದ ಶಿಕ್ಷಕರ ಬಳಗ ವತಿಯಿಂದ ಸನ್ಮಾನ ಕಾರ್ಯಕ್ರಮ ಜರುಗಿತು.ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಮಲ್ಲಪ್ಪ ವಾಘಮೊರೆ ಮಾತನಾಡಿ, ವಿವಿಧ ಕ್ಷೇತ್ರದ ಸಾಧಕರು ನಮ್ಮ ಸಮುದಾಯದಲ್ಲಿದ್ದು, ಅಂತಹ ಪ್ರತಿಭಾನ್ವಿತರು ಹಾಗೂ ಸಾಧಕರನ್ನು ಗುರುತಿಸಿ ಗೌರವಿಸುವದು ನಮ್ಮೆಲ್ಲರ ಜವಾಬ್ದಾರಿ. ವಿದ್ಯಾರ್ಥಿ ಸಂತೋಷ ಬಡತನದಲ್ಲಿ ವಿದ್ಯಾಭ್ಯಾಸ ಮಾಡಿ ಸಾಧನೆ ಮಾಡಿರುವುದು ಇಡಿ ಸಮಾಜಕ್ಕೆ ಸಂದ ಗೌರವ. ಇವರ ಚಿನ್ನದ ಸಾಧನೆ ನಮ್ಮ ಯುವ ಪೀಳಿಗೆಗೆ ಮಾದರಿಯಾಗಲಿದೆ ಎಂದು ಹೇಳಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಸಿ.ಆರ್.ಸಿ ಎಸ್.ಎಲ್ ಅಹಿರಸಂಗ ಅವರು, ಚಿನ್ನದ ಹುಡುಗ ಸಂತೋಷನಿಗೆ ಚಿನ್ನದ ಪದಕ ಬಂದಿರುವುದು ಕೇವಲ ಚಡಚಣಕ್ಕೆ ಅಷ್ಟೇ ಅಲ್ಲ, ಇಡಿ ಜಿಲ್ಲೆ ಹೆಮ್ಮೆ ಪಡುವ ವಿಷಯ. ಇವರ ಸಾಧನೆಯನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ಛಲದಿಂದ ಓದಿ, ಉನ್ನತ ಸಾಧಕರಾಗಬೇಕು ಎಂದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂತೋಷ ಅವರು, ಛಲದಿಂದ…
ಬಸವನ ಬಾಗೇವಾಡಿ: ಇಂದು ಶಿಕ್ಷಣ ತನ್ನ ಹಿಡಿತ ಕಳೆದುಕೊಳ್ಳುತ್ತಿರುವ ಕಾಲಘಟ್ಟದಲ್ಲಿ ಮಕ್ಕಳ ಶಿಕ್ಷಣಕ್ಕೆ ಪಾಲಕರು ದಿನದ ಒಂದಿಷ್ಟು ಸಮಯವನ್ನು ಕೊಡಬೇಕು. ಮಕ್ಕಳಲ್ಲಿ ಮೌಲ್ಯಗಳನ್ನು ತುಂಬುವಲ್ಲಿ ಪಾಲಕರು ಸಹ ಶಿಕ್ಷಕರ ಜೊತೆ ಕೈ ಜೋಡಿಸಬೇಕೆಂದು ಶಿಕ್ಷಕ ಬಾಬು ನಾಯಕ ಹೇಳಿದರು.ಪಟ್ಟಣದ ಬಿ. ಎಲ್. ಡಿ. ಇ. ಸಂಸ್ಥೆಯ ಪಿ. ಯು. ಕಾಲೇಜಿನಲ್ಲಿ ಜರುಗಿದ ಪಾಲಕರ ಸಭೆಯಲ್ಲಿ ಪಾಲಕರ ಪ್ರತಿನಿಧಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರು ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಮಕ್ಕಳಿಗಾಗಿ ಸಮಯ ಮತ್ತು ಬದುಕನ್ನು ಮಿಸಲಿಡಬೇಕು. ಪ್ರತಿಯೊಬ್ಬ ಮಗುವಿಗೂ ಕುಟುಂಬದ ಕಷ್ಟವನ್ನು ಮನವರಿಕೆ ಮಾಡಿಕೊಡಬೇಕೆಂದು ಅಭಿಪ್ರಾಯಪಟ್ಟರು.ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ. ವಿ. ಸೂರ್ಯವಂಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಮಕ್ಕಳನ್ನು ಕಲಿಕೆಯ ಜೊತೆಗೆ ಕ್ರೀಡಾ ಮನೋಭಾವವನ್ನು ಬೆಳೆಸಿದಾಗ ಮಾತ್ರ ಮಕ್ಕಳು ಸಾರ್ವತ್ರಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯವೆಂದು ಅಭಿಪ್ರಾಯಪಟ್ಟರು.ಪ್ರೊ. ಎಂ. ಕೆ. ಯಾದವ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಆರ್. ಎ. ಪವಾರ ಅಧ್ಯಕ್ಷತೆ ವಹಿಸಿದ್ದರು.ವಾಣಿಜ್ಯ ಮತ್ತು ವಿಜ್ಞಾನ…
ಬಸವನ ಬಾಗೇವಾಡಿ: ಇಂದು ಶಿಕ್ಷಣ ತನ್ನ ಹಿಡಿತ ಕಳೆದುಕೊಳ್ಳುತ್ತಿರುವ ಕಾಲಘಟ್ಟದಲ್ಲಿ ಮಕ್ಕಳ ಶಿಕ್ಷಣಕ್ಕೆ ಪಾಲಕರು ದಿನದ ಒಂದಿಷ್ಟು ಸಮಯವನ್ನು ಕೊಡಬೇಕು. ಮಕ್ಕಳಲ್ಲಿ ಮೌಲ್ಯಗಳನ್ನು ತುಂಬುವಲ್ಲಿ ಪಾಲಕರು ಸಹ ಶಿಕ್ಷಕರ ಜೊತೆ ಕೈ ಜೋಡಿಸಬೇಕೆಂದು ಶಿಕ್ಷಕ ಬಾಬು ನಾಯಕ ಹೇಳಿದರು.ಪಟ್ಟಣದ ಬಿ. ಎಲ್. ಡಿ. ಇ. ಸಂಸ್ಥೆಯ ಪಿ. ಯು. ಕಾಲೇಜಿನಲ್ಲಿ ಜರುಗಿದ ಪಾಲಕರ ಸಭೆಯಲ್ಲಿ ಪಾಲಕರ ಪ್ರತಿನಿಧಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರು ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಮಕ್ಕಳಿಗಾಗಿ ಸಮಯ ಮತ್ತು ಬದುಕನ್ನು ಮಿಸಲಿಡಬೇಕು. ಪ್ರತಿಯೊಬ್ಬ ಮಗುವಿಗೂ ಕುಟುಂಬದ ಕಷ್ಟವನ್ನು ಮನವರಿಕೆ ಮಾಡಿಕೊಡಬೇಕೆಂದು ಅಭಿಪ್ರಾಯಪಟ್ಟರು.ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ. ವಿ. ಸೂರ್ಯವಂಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಮಕ್ಕಳನ್ನು ಕಲಿಕೆಯ ಜೊತೆಗೆ ಕ್ರೀಡಾ ಮನೋಭಾವವನ್ನು ಬೆಳೆಸಿದಾಗ ಮಾತ್ರ ಮಕ್ಕಳು ಸಾರ್ವತ್ರಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯವೆಂದು ಅಭಿಪ್ರಾಯಪಟ್ಟರು.ಪ್ರೊ. ಎಂ. ಕೆ. ಯಾದವ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಆರ್. ಎ. ಪವಾರ ಅಧ್ಯಕ್ಷತೆ ವಹಿಸಿದ್ದರು.ವಾಣಿಜ್ಯ ಮತ್ತು ವಿಜ್ಞಾನ…
ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯಾ ಶ್ರೀಗಳ ಅಭಿಮತ ಬಸವನಬಾಗೇವಾಡಿ: ಅಣ್ಣ ಬಸವಣ್ಣನವರು ಜಾತಿಯ ವಿಷಬೀಜವನ್ನು ಕಿತ್ತೆಸೆಯಲು ಹೋರಾಟ ಮಾಡಿದರು. ಅವರ ತತ್ವಗಳನ್ನು ಬೋದನೆ ಹಾಗೂ ಪೋಟೋ ಪೂಜೆ ಮಾಡುವಂತಹ ಭಕ್ತಿಯ ಜೊತೆಗೆ ಅವರ ಅವರ ತತ್ವ ಜೀವನದಲ್ಲಿ ಅಳವಡಿಸಿಕೊಂಡು ಬದುಕಿದಾಗ ಮಾತ್ರ ಬಸವಣ್ಣನವರ ನಿಜವಾದ ಭಕ್ತನಾಗಲು ಸಾಧ್ಯ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯಾ ಶಿವಾಚಾರ್ಯರು ಹೇಳಿದರು.ತಾಲೂಕಿನ ಕಣಕಾಲ ಗ್ರಾಮದ ಶ್ರೀ ಮಡಿವಾಳೇಶ್ವರಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ಬಸವ ಪುರಾಣ ಮುಕ್ತಾಯ, ಶ್ರೀಶೈಲ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮ ಸಭೆ ಸಮಾರಂಭದ ದಿವ್ಯಸಾನಿದ್ಯತೆ ವಹಿಸಿ ಮಾತನಾಡಿದರು.ಅಣ್ಣ ಬಸವಣ್ಣನವರು ೧೨ ನೇ ಶತಮಾತನದಲ್ಲಿ ಎಲ್ಲ ಶರಣರೊಂದಿಗೆ ವಚನ ಸಾಹಿತ್ಯ ಮೂಲಕ ಸಾಮಾಜಿಕ ಕ್ರಾಂತಿಗೈದು ಮೇಲು ಕೀಳು ಎಂಬ ಜಾತಿಯನ್ನು ಹೊಗಲಾಡಿಸಲು ಪ್ರಯತ್ನಿಸಿದರು. ಅವರಂತೆ ನಾವು ಕೂಡಾ ಜಾತಿಯತೆ ಎಂಬ ವಿಷ ಬೀಜವನ್ನು ಹೊಗಲಾಡಿಸಲು ಪ್ರಯತ್ನಿಸಿ ಎಲ್ಲರು ಒಂದೆ ಎಂಬ ಮನೋಭಾವನೆಯನ್ನು ಹೊಂದಿದಾಗ ಮಾತ್ರ ಬಸವಣ್ಣನವರ ನಿಜವಾದ ಆದರ್ಶವನ್ನು ಅಳವಡಿಕೆ…
ಕಲಕೇರಿ: ಇತ್ತೀಚಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಲಪೂರಿನಲ್ಲಿ ಕೆ ಎ ಮಹಾಜನ್ಗುರುಮಾತೆಯರ ವರ್ಗಾವಣೆ ನಿಮಿತ್ಯ ಬೀಳ್ಕೋಡುಗೆ ಸಮಾರಂಭಅದ್ಧೂರಿಯಾಗಿ ನಡೆಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿಕ್ಷಣಸಂಯೋಜಕ ಐ ಎಫ್ ಬಾಲ್ಕಿ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಪಾತ್ರ ಪವಿತ್ರವಾಗಿದ್ದು ಮಕ್ಕಳ ಭವಿಷ್ಯವನ್ನು ಬೆಳಗುವ ಜ್ಯೋತಿಗಳಾಗಿದ್ದಾರೆ ಎಂದರು.ಕೆ ಎ ಮಹಾಜನ್ಗುರುಮಾತೆಯರು ಜಲಪೂರ ಶಾಲೆಯಲ್ಲಿ ಸುಮಾರು ಹದಿನೈದು ವರ್ಷಗಳ ಕಾಲ ಸಾರ್ಥಕ ಸೇವೆಯನ್ನು ಸಲ್ಲಿಸಿ ಬೇರೆ ಶಾಲೆಗೆ ವರ್ಗಾವಣೆ ಆಗಿದ್ದಾರೆ. ಅವರು ಈಶಾಲೆಯಲ್ಲಿ ಒಳ್ಳೆಯ ಶಿಕ್ಷಣವನ್ನು ನೀಡುವದರ ಜೊತೆಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಬಿತ್ತಿದ್ದಾರೆ ಎಂದರು.ಶಾಲೆಯ ಮುಖ್ಯಗುರು ಮಹ್ಮದಶಫೀಕ ಮುಜಾವರ ಮಾತನಾಡಿ, ಕೆ ಎ ಮಹಾಜನ್ ಗುರುಮಾತೆಯರು ಶಾಲಾಮಕ್ಕಳ ಜೊತೆಗೆ ಜಲಪೂರ ಗ್ರಾಮದಎಲ್ಲರೊಂದಿಗೂ ಒಳ್ಳೆಯ ಸಂಬಂದ ಹೊಂದಿದ್ದರು ಎಂದರು.ಅಸ್ಕಿ ಕ್ಲಸ್ಟರ್ನ ಸಮೂಹ ಸಂಪನ್ಮೂಲ ವ್ಯಕ್ತಿಗ ರಾಮಣ್ಣ ನಾಯ್ಕೋಡಿ ಮಾತನಾಡಿದರು.ಕೆ ಎ ಮಹಾಜನ್ ಗುರುಮಾತೆಯರು ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ,ಜಲಪೂರ ಗ್ರಾಮ ನನಗೆ ತುಂಬಾ ಪ್ರೀತಿ ಮತ್ತು ವಿಶ್ವಾಸವನ್ನು ನೀಡಿದೆ. ಶಾಲೆಯ ಮಕ್ಕಳು, ಎಲ್ಲ ಶಿಕ್ಷಕ ಸಿಬ್ಬಂದಿ, ಅಡುಗೆ ಸಿಬ್ಬಂದಿ…
ವ್ಯಕ್ತಿ – ವ್ಯಕ್ತಿತ್ವ – ಸಾಧನೆ ಲೇಖಕರು- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ ಅದು 2014ನೇ ಇಸವಿ. ಆಗತಾನೆ ಎಲ್ಲೆಡೆ ವಾಟ್ಸಪ್ ಕಾಲಿಟ್ಟಿದ್ದು ಜಿಲ್ಲಾ ಕೇಂದ್ರದಲ್ಲಿ ವಾಸವಾಗಿದ್ದ ಟ್ರ್ಯಾಕ್ಟರ್ ಶೋರೂಮ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪದವೀಧರನಾದ ಉತ್ಸಾಹಿ ಯುವಕನೋರ್ವ ತನ್ನ ಪರಿಚಿತ ವಲಯದ ಸ್ನೇಹಿತರ ಗುಂಪೊಂದನ್ನು ವಾಟ್ಸಪ್ ನಲ್ಲಿ ಕ್ರಿಯೇಟ್ ಮಾಡಿದ. ಸಾಮಾನ್ಯವಾಗಿ ಮೆಸೇಜ್ಗಳು, ವಿಡಿಯೋಗಳಿಂದ ಕೂಡಿದ ಗುಂಪುಗಳ ನಡುವೆ ರಕ್ತದಾನವನ್ನು ಮುಖ್ಯ ಉದ್ದೇಶವನ್ನಾಗಿಸಿಕೊಂಡು ಪ್ರಾರಂಭವಾದ ಈ ವಾಟ್ಸಪ್ ಗ್ರೂಪ್ ಮೂಲಕ ಹಲವಾರು ಜನ ಗರ್ಭಿಣಿಯರಿಗೆ, ಅಪಘಾತದಿಂದ ತೀವ್ರ ರಕ್ತಸ್ರಾವ ದಿಂದ ಬಳಲುತ್ತಿರುವವರಿಗೆ ಸೂಕ್ತ ಗುಂಪಿನ ರಕ್ತವನ್ನು ಅವಶ್ಯಕ ಸಮಯದಲ್ಲಿ ಪೂರೈಕೆ ಮಾಡುತ್ತಿದ್ದರು.ಅದೊಂದು ದಿನ ಮುಂಜಾನೆ ತನ್ನ ಕೆಲಸದಲ್ಲಿ ನಿರತನಾಗಿದ್ದ ಈ ಉತ್ಸಾಹಿ ಯುವಕನನ್ನು ತುರ್ತಾಗಿ ಸರ್ಕಾರಿ ಆಸ್ಪತ್ರೆಗೆ ಬರಲು ಹೇಳಿದ ಆಸ್ಪತ್ರೆಯವರು ಆತ ಬಂದ ಕೂಡಲೇ ನೆನ್ನೆ ದಾಖಲಾದ ಗರ್ಭಿಣಿ ಸ್ತ್ರೀ ಹೆರಿಗೆಯಾಗಿದ್ದು ಆತನಿಂದಲೇ ಆಕೆಗೆ ಎಬಿ ನೆಗೆಟಿವ್ ರಕ್ತ ಪೂರೈಕೆ ಆಗಲು ಅನುಕೂಲವಾಗಿದ್ದನ್ನು ಹೇಳಿದರು. ಜವಾಬ್ದಾರಿ…
ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಹಿರಿಯ ಸಾಹಿತಿ ಡಾ. ಅರ್ಜುನ ಗೊಳಸಂಗಿ ಅವರಿಗೆ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆ (ರಿ) ವತಿಯಿಂದ ಸಂಸ್ಥೆಯ ನೂತನ ಕಚೇರಿಯಲ್ಲಿ ಸಾಹಿತಿ , ಪತ್ರಕರ್ತ ಕಲ್ಲಪ್ಪ ಶಿವಶರಣ ವಿರಚಿತ ಕಲ್ಲು ಮನಸ್ಸು ಕೃತಿ ನೀಡಿ ಹಾಗೂ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆ ಅಧ್ಯಕ್ಷ ಕಲ್ಲಪ್ಪ ಶಿವಶರಣ, ತೆರಿಗೆ ಇಲಾಖೆಯ ಅಧಿಕಾರಿಗಳಾದ ಸುರೇಶ ಗೊಳಸಂಗಿ, ಹಿರಿಯ ಪತ್ರಕರ್ತ, ಸಾಹಿತಿ ಪರಶುರಾಮ ಶಿವಶರಣ, ಲಕ್ಷ್ಮಣ ಲೋಗಾಂವಿ, ಸಂಶೋಧಕ ಲಾಯಪ್ಪ ಇಂಗಳೆ, ಪತ್ರಕರ್ತ ಉಮೇಶ ಶಿವಶರಣ, ಸಾಗರ ಲಾಯದಗುಂದಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಸಾತಲಗಾಂವ ಕ್ರಾಸ್ ನಲ್ಲಿ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರ ಉದ್ಘಾಟನೆ ಇಂಡಿ: ತಾಲೂಕಿನಲ್ಲಿ ಈಗಾಗಲೇ ೧೩ ವಿದ್ಯುತ್ ವಿತರಣಾ ಕೇಂದ್ರಗಳಿದ್ದು ಇನ್ನೂ ಎರಡು ಸಧ್ಯದಲ್ಲಿಯೇ ಪ್ರಾರಂಭವಾಗಲಿದ್ದು ಇನ್ನು ನಾಲ್ಕು ಮಂಜುರಾತಿ ಹಂತದಲ್ಲಿವೆ. ತಾಲೂಕಿಗೆ ವಿದ್ಯುತ್ ಇಲಾಖೆಯ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.ಅವರು ತಾಲೂಕಿನ ಸಾತಲಗಾಂವ ಕ್ರಾಸ್ ನಲ್ಲಿ ೧೧೦/ ೧೧ ಕೆ ವಿ ವಿದ್ಯುತ್ ವಿತರಣಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ರಾಜ್ಯವು ವಿದ್ಯುತ್ ವಿತರಣೆಯಲ್ಲಿ ಸ್ವಾವಲಂಬಿಯಾಗಿದ್ದು ಹೈಡ್ರೊ, ವಿಂಡ್, ಸೋಲಾರ, ಎನ್.ಟಿ.ಪಿಸಿ ಮತ್ತು ಕಾರ್ಖಾನೆಯ ಕೊಜೆನ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು ದಿನದ ಏಳು ಗಂಟೆ ವಿದ್ಯುತ್ ಇಂಡಿ ತಾಲೂಕಿನಲ್ಲಿ ರೈತರಿಗೆ ನೀಡಲಾಗುತ್ತಿದೆ ಎಂದರು.ಕೇಂದ್ರದ ಆಗಿನ ಇಂಧನ ಸಚಿವ ಸುಶೀಲಕುಮಾರ ಇವರ ಸಹಕಾರದಿಂದ ಎನ್ಟಿಪಿಸಿ ಕೂಡಗಿಯಲ್ಲಿ ಆಗಿದ್ದು ಆಲಮಟ್ಟಿ ಆಣೆಕಟ್ಟಿನ ಎತ್ತರ ೫೨೪ ಮೀ ಆದರೂ ನಾವು ರೈತರ ಹೊಲಗಳಿಗೆ ವಿದ್ಯುತ್ ಸಾಕಾಗುತ್ತದೆ ಎಂದರು.ಈ ಹಿಂದೆ ದಕ್ಷಿಣ ಕರ್ನಾಟಕದಲ್ಲಿ ವಿದ್ಯುತ ತೊಂದರೆ ಇರಲಿಲ್ಲ. ನಾವು ನ್ಯಾಯಯುತವಾದ ಬೇಡಿಕೆ ಮಾಡಿದ್ದರಿಂದ…
ವಿಜಯಪುರ: ಜಾನಪದ ಸಾಹಿತ್ಯ ಬದುಕಲು ಸನ್ಮಾಗ೯ ತೋರಿಸಿಕೊಟ್ಟಿದೆ.ಮಾನವೀಯ ಮೌಲ್ಯಗಳನ್ನು ಕಾಪಾಡಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ ಎಂದು ವಿಜಯಪುರ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ರಮೇಶ ದೇಸಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.ಮಂಗಳವಾರ ಜಾನಪದ ಚಿಂತನ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಜಾನಪದ ಗೀತೆಗಳು ಬದುಕು ಪರಿವತ೯ನೆ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿವೆ, ಜಾನಪದ ಸಾಹಿತ್ಯ ನಮ್ಮೆಲ್ಲರ ಸಂಸ್ಕೃತಿಯ ಪ್ರತೀಕವಾಗಿದೆ ಎಂದರು.ಮುಖ್ಯ ಅತಿಥಿಗಳಾದ ಡಾ.ಸಂಗಮೇಶ ಮೇತ್ರಿ ಮಾತನಾಡಿ, ಮಕ್ಕಳಲ್ಲಿ ಜಾನಪದ ಸಾಹಿತ್ಯ ಅಭಿರುಚಿ ಬೆಳೆಸುವ ಅವಶ್ಯವಿದೆ. ಜಾನಪದ ಸಾಹಿತ್ಯಕ್ಕೆ ಪೂರ್ವಜರ ಕೊಡುಗೆ ಅಪಾರವಾಗಿದೆ. ರೈತರು ಹಾಗು ಮಹಿಳೆಯರು ದಿನನಿತ್ಯ ಕಾಯಕದಲ್ಲಿ ತೊಡಗಿರುವಾಗ ಹಾಡುಗಳನ್ನು ರಚಿಸಿ ಹಾಡಿದ್ದಾರೆ. ಎಂದರು.ಜಾನಪದ ವಿದ್ವಾಂಸ, ಬಸವನ ಬಾಗೇವಾಡಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಂದು ಅನೇಕ ಗೋಷ್ಠಿಯನ್ನು ಹಾಗು ದತ್ತಿ ನಿಧಿ ಕಾರ್ಯಕ್ರಮ ಮಾಡುವದರ ಮೂಲಕ ಜಾನಪದ ಸಾಹಿತ್ಯ ಉಳಿಸುವ ಹಾಗು ಬೆಳೆಸುವ ಕಾರ್ಯ ಶ್ಲಾಘನೀಯ ಎಂದರು.ತಾಳಿಕೋಟೆಯ ಜಾನಪದ ವಿದ್ವಾಂಸೆ…
