Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದ ಸಹಸ್ರಾರು ಭಕ್ತ ಸಮೂಹ | ವಿವಿಧೆಡೆ ಅನ್ನ ಸಂತರ್ಪಣೆ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಉತ್ತರಕರ್ನಾಟಕದ ದೊಡ್ಡ ಜಾತ್ರೆಗಳಲ್ಲಿ ಒಂದಾದ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಆರಾಧ್ಯ ಧೈವವಾದ ಶ್ರೀಗುರು ವೀರಘಂಟೈ ಮಡಿವಾಳೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ರವಿವಾರ ನಸುಕಿನ ಜಾವ ೫ ಗಂಟೆಗೆ ಅಗ್ಗಿ ಉತ್ಸವ ಹಾಗೂ ಸಂಜೆ ೫ ಘಂಟೆಗೆ ಮೃಘಶಿರ ನಕ್ಷತ್ರದಲ್ಲಿ ಭಾರಿ ಜನಸ್ತೋಮದ ಜಯಘೋಷಗಳೊಂದಿಗೆ ವಿಜೃಂಭಣೆಯಿಂದ ಅದ್ದೂರಿಯಾಗಿ ಶ್ರೀಗುರು ವೀರಘಂಟೈ ಮಡಿವಾಳೇಶ್ವರರ ಜೋಡು ರಥೋತ್ಸವವು ನಡೆಯಿತು.ರವಿವಾರ ನಸುಕಿನ ಜಾವ ವೇ.ಮೂ.ಮಲ್ಲಯ್ಯಮುತ್ಯಾ ಗದ್ದಿಗೆಮಠ ಅವರ ನೇತೃತ್ವದಲ್ಲಿ ದೇವಸ್ಥಾನದ ಸಂಪ್ರದಾಯದಂತೆ ಅಗ್ನಿಕುಂಡಕ್ಕೆ ವಿವಿಧ ವಾಧ್ಯಮೇಳ ಕಳಸಾರತಿಯೊಂದಿಗೆ ಐದು ಸುತ್ತು ಪೂಜಾ ಕೈಂಕರ್ಯವನ್ನು ನಡೆಸಿ ನಂತರ ಅಗ್ಗಿಯನ್ನು ಹಾಯಲಾಯಿತು. ನಂತರ ಉಚ್ಚಾಯಿ ಉತ್ಸವ, ವೀರಂಘಂಟೈ ಮಡಿವಾಳೇಶ್ವರರ ಕರ್ತೃ ಗದ್ದಿಗೆಗೆ ಮಹಾರುದ್ರಾಭಿಷೇಕ, ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು, ಬೆಳ್ಳಿಗ್ಗೆ ೯ ಗಂಟೆಯಿಂದ ಗ್ರಾಮದ ಸಾವಿರಾರು ಯುವಪಡೆಯ ಭಕ್ತ ಸಮೂಹ ಹಿರಿಯರ ಮಾರ್ಗದರ್ಶನದಲ್ಲಿ ಪದ್ದತಿಯಂತೆ ರಥಕ್ಕೆ ಎಣ್ಣೆಯನ್ನು…
ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ ಪ್ರಭುದ್ದ ನಾಗರಿಕರಾಗಿ ನಿರ್ಮಾಣ ಮಾಡಬೇಕು ಎಂದು ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ತಾಲ್ಲೂಕಿನ ಕಾಖಂಡಕಿ ಗ್ರಾಮದ ನಂದಗೋಕುಲ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ಸಹಯೋಗದಲ್ಲಿ ಶುಕ್ರವಾರ ನಡೆದ 2025-26 ನೇ ಸಾಲಿನ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಅನಾವರಣ ಮಾಡಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಮಕ್ಕಳಲ್ಲಿರುವ ವ್ಯಕ್ತಿತ್ವವನ್ನು ಹಲವು ವಿಧಗಳ ಮೂಲಕ ಮಕ್ಕಳು ವ್ಯಕ್ತಪಡಿಸುತ್ತಾರೆ. ನವರಸಗಳು ಕೂಡಿದಾಗ ಒಂದು ಕಲೆಯಾಗುತ್ತದೆ. ಶಿಕ್ಷಕರು ಹಗಲಿರುಳು ಶ್ರಮಿಸಿ ಮಕ್ಕಳನ್ನು ಪ್ರತಿಭಾ ಕಾರಂಜಿಗೆ ತಯಾರು ಮಾಡಿದ್ದಾರೆ. ಮಕ್ಕಳ ಸುರಕ್ಷತೆ ಕಡೆಗೆ ಕೂಡಾ ಗಮನವಿರಲಿ ಎಂದರು.ಗುರುಸ್ಪಂದನ ಕಾರ್ಯಕ್ರಮ ಮಾಡಲು ಚಿಂತನೆ ಮಾಡಿರುವ ಬಿಇಓ ತಳವಾರ 1763 ಶಿಕ್ಷಕರ ಸೇವಾ ಪುಸ್ತಕ ಅಪಡೇಟ್ ಮಾಡಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಜರುಗಿದ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ-೧ ನೇಯ ಸೆಮೆಸ್ಟರ್ ವ್ಯಾಸಂಗ ಮಾಡುತ್ತಿರುವ ಅಮೀರ ತಾಂಬೋಳಿ ಇವರು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾನೆ.ಅದೇ ರೀತಿ ಮಲ್ಲಮ್ಮ ತೋಳಮಟ್ಟಿ ಇವಳು ೧೫೦೦ ಮೀಟರ್ ಹಾಗೂ ೫೦೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕಾಲೇಜಿನ ಮೆಚ್ಚುಗೆ ಪಾತ್ರರಾಗಿದ್ದಾಳೆ.ಈ ಇಬ್ಬರು ಕ್ರೀಡಾಪಟುಗಳ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮೀತಿ ಅಧ್ಯಕ್ಷರೂ ಹಾಗೂ ವಿಜಯಪುರ ನಗರದ ಶಾಸಕರೂ ಆದ ಬಸನಗೌಡ. ಆರ್. ಪಾಟೀಲ, ಪ್ರಾಂಶುಪಾಲರಾದ ಡಾ. ಎ.ಐ.ಹಂಜಗಿ, ಕ್ರೀಡಾ ನಿರ್ದೇಶಕ ಪ್ರೊ ಸಂಗಮೇಶ ಗುರವ, ಕ್ರೀಡಾ ಸಮೀತಿಯ ಸದಸ್ಯರಾದ ಡಾ. ಚಿದಾನಂದ ಆನೂರ, ಪ್ರೊ. ಎಂ.ಎಸ್, ಖೊದ್ನಾಪೂರ, ಡಾ. ದೇವೇಂದ್ರಗೌಡ ಪಾಟೀಲ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ. “ಪ್ರಾಂಶುಪಾಲರ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿವರ್ಗ ಪ್ರೇರಣೆ…
ನವದೆಹಲಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿಕೆ ನವದೆಹಲಿ: ಭಾರತ ಮತ್ತು ರಷ್ಯಾ ‘ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಟ್ಟಾಗಿ ನಡೆಯುತ್ತವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.ದ್ವಿಪಕ್ಷೀಯ ಸಭೆ ನಂತರ ಶುಕ್ರವಾರ ಮಧ್ಯಾಹ್ನ ಹೈದರಾಬಾದ್ ಹೌಸ್ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು, ಭಯೋತ್ಪಾದನೆಯನ್ನು ಎದುರಿಸಲು ಭಾರತದ ಪ್ರಯತ್ನಗಳಿಗೆ ಮಾಸ್ಕೋ ಬಲವಾದ ಬೆಂಬಲ ನೀಡುತ್ತಿದೆ ಮತ್ತು ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ನ ನಂಟಿದೆ ಎಂಬ ಆರೋಪದ ನಂತರ ಅದು ಬಲವಾಗಿ ಪ್ರತಿಕ್ರಿಯಿಸಿದೆ. ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಮಾಸ್ಕೋ, “ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಭಾರತದೊಂದಿಗೆ ಕೈಜೋಡಿಸುವುದಾಗಿ” ಹೇಳಿದರು.ಪಾಕಿಸ್ತಾನದಲ್ಲಿನ ಭಯೋತ್ಪಾದಕ ಮೂಲಸೌಕರ್ಯ ಮತ್ತು ಆ ದೇಶವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರದ ಕೆಲವು ಭಾಗಗಳನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ…
ಅಕ್ಕಮಹಾದೇವಿ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಿಜಿಟಲೀಕರಣ ವೇಗವಾಗಿ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ ಸೈಬರ್ ಅಪರಾಧಗಳೂ ಆತಂಕಕಾರಿ ಮಟ್ಟಕ್ಕೆ ಏರಿದ್ದು, ಅದಕ್ಕೆ ಬಲಿಯಾಗುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರಲ್ಲಿ ಸೈಬರ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಯುಜಿ ಬ್ಲಾಕ್ ಹಾಗೂ ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಇವರ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಿದ್ದ “ಡಿಜಿಟಲ್ ಸುರಕ್ಷತೆ ಮತ್ತು ಸೈಬರ್ ಜಾಗೃತಿ” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ಯುವಜನತೆ ಡಿಜಿಟಲ್ ವೇದಿಕೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿದ್ದು, ಡಿಜಿಟಲ್ ಸುರಕ್ಷತೆಯ ನಿರ್ಲಕ್ಷ್ಯದಿಂದ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯಲ್ಲಿ ಕಾರ್ಯಾಗಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ. ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ. ಸಿ. ಪಿ. ವಿಜ್ಞಾನ ಕಾಲೇಜಿನಲ್ಲಿ ಐಕ್ಯೂಎಸಿ ಸಹಯೋಗದಲ್ಲಿ ಡಿ.೦೪ ರಂದು ‘ಸಾಧನೆ, ಮಾನ್ಯತೆ ಮತ್ತು ಗುಣಮಟ್ಟದ ಭರವಸೆಗಾಗಿ ಸಿಒ-ಪಿಒ ಮ್ಯಾಪಿಂಗ್ನಲ್ಲಿ ಪರಿಣಾಮಕಾರಿ ಅಭ್ಯಾಸಗಳು’ ಎಂಬ ವಿಷಯದ ಒಂದು ದಿನದ ಅಧ್ಯಾಪಕರ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.ಈ ವೇಳೆಯಲ್ಲಿ ಬಿಎಲ್ಡಿಇ ಸಂಸ್ಥೆಯ ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ ಡಾ. ಬಿ. ವೈ. ಖಾಸ್ನಿಸ್ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು ಫಲಿತಾಂಶ ಆಧಾರಿತ ಶಿಕ್ಷಣ (ಒಬಿಇ) ಮುಖ್ಯವಾಗಿದೆ. ಇದು ವಿದ್ಯಾರ್ಥಿ ಕೇಂದ್ರಿತವಾಗಿದ್ದು ಅವರಿಗೆ ತಮ್ಮದೇ ಆದ ವೇಗದಲ್ಲಿ ಕಲಿಯಲು ಅನುವು ಮಾಡಿಕೊಡುತ್ತದೆ, ವಿಭಿನ್ನ ಶೈಲಿಗಳನ್ನು ಅಳವಡಿಸಿಕೊಳ್ಳುವುದು ಮತ್ತು ಪ್ರೇರಣೆಯನ್ನು ಹೆಚ್ಚಿಸುತ್ತದೆ. ಅಗತ್ಯಕ್ಕೆ ಸಂಬಂಧಿತ ಕೌಶಲ್ಯಗಳನ್ನು ಬೆಳೆಸುವುದಾಗಿದೆ ಎಂದು ಹೇಳಿದರು.(ಒಬಿಇ)ಯ ಮೂಲಭೂತ ಅಂಶಗಳನ್ನು ಕೇಂದ್ರೀಕರಿಸುವ, ಸ್ಮಾರ್ಟ್ ಕೋರ್ಸ್ ಫಲಿತಾಂಶಗಳನ್ನು (ಸಿಒಎಸ್) ರೂಪಿಸುವುದು ಕಾರ್ಯಕ್ರಮದ ಫಲಿತಾಂಶಗಳನ್ನು (ಪಿಒಎಸ್) ಅರ್ಥಮಾಡಿಕೊಳ್ಳುವುದು, (ಸಿಒ-ಪಿಒ)ಮ್ಯಾಪಿಂಗ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೨೦ ಎಂವಿಎ ೧೧೦/೩೩ ಕೆವಿ ಪರಿವರ್ತಕ ಸೇರಿದಂತೆ ವಿವಿಧ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ, ೧೧೦/೧೧ಕೆವಿ ವಿಜಯಪುರ ಕೆಐಎಡಿಬಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೋಗುವ ೩೩ ಕೆವಿ ಮಾರ್ಗಗಳಾದ ಹೊನ್ನುಟಗಿ, ನಾಗಠಾಣ ಮತ್ತು ಗುಡ್ಡೋಡಗಿ ಎಚ್ ಟಿ ಹಾಗೂ ಎಲ್ಲಾ ೩೩/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ ಎಲ್ಲಾ ೧೧ ಕೆವಿ ಮಾರ್ಗಗಳಲ್ಲಿ ಡಿಸೆಂಬರ್ ೬ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ೨೦೨೫-೨೬ನೇ ಸಾಲಿನ ಸ್ನಾತಕೋತ್ತರ ಎಂಸಿಎ ಕೋರ್ಸ್ಗಳ ವ್ಯಾಸಂಗಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಎಂಸಿಎ ವಿಭಾಗದಲ್ಲಿ ಕೆಇಎಯಿಂದ ಭರ್ತಿಯಾಗದೇ ಬಾಕಿ ಉಳಿದಿರುವ ಸೀಟುಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ವಿಜಯಪುರದ ಗಣಕ ವಿಜ್ಞಾನ ವಿಭಾಗ ಸ್ನಾತಕೋತ್ತರ ಕೇಂದ್ರದಿಂದ ಪಡೆದುಕೊಳ್ಳಬಹುದಾಗಿದೆ.ಅರ್ಜಿಪಡೆದುಕೊಳ್ಳಲು ಕೊನೆಯ ದಿನಾಂಕ: ೧೦-೧೨-೨೦೨೫ ಆಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು, ಸ್ನಾತಕೋತ್ತರ ಕೇಂದ್ರ ವಿಜಯಪುರ ಇವರನ್ನು ಹಾಗೂ ಅಶೋಕ ಮೀಶಿ ಮೊ: ೯೯೦೦೭೬೨೮೮೮ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ೧೬ ರಿಂದ ೨೪ ವರ್ಷ ವಯೋಮಾನದ ಅಭ್ಯರ್ಥಿಗಳಿಂದ ಶಿಷ್ಯ ವೇತನ ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ೨೦-೧೨-೨೦೨೫ ಕೊನೆಯ ದಿನವಾಗಿದ್ದು, ಶಿಷ್ಯವೇತನದ ಬಗ್ಗೆ ಮಾಹಿತಿ ಹಾಗೂ ಅರ್ಜಿಯನ್ನು sangeeetanrityaacademy.karnataja.gov.inನಲ್ಲಿ ಪಡೆದುಕೊಳ್ಳಬಹುದು. ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೂ ಪಡೆಯಬಹುದಾಗಿದೆ. ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ವಿಡಿಯೋ ಚಿತ್ರೀಕರಿಸಿ ಪೆನ್ ಡ್ರೈವ್ ನಲ್ಲಿ ರಿಜಿಸ್ಟರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ೨ನೆಯ ಮಹಡಿ, ಜೆಸಿ ರಸ್ತೆ ಬೆಂಗಳೂರು -೫೬೦೦೦೨ ಕಾರ್ಯಾಲಯಕ್ಕೆ ಅಂಚೆ ಅಥವಾ ಖುದ್ದಾಗಿ ತಲುಪಿಸಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.೭ರಂದು ವೃಕ್ಷಥಾನ್ ಓಟ ಹಾಗೂ ೬೪ ಪರೀಕ್ಷಾ ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆ | ಜಿಲ್ಲಾಧಿಕಾರಿ ಡಾ. ಆನಂದ ಕೆ ಆದೇಶ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಿಸೆಂಬರ್ ೭ರಂದು ನಗರದಲ್ಲಿ ವೃಕ್ಷಥಾನ್ ಓಟ ಹಾಗೂ ಅದೇ ದಿನ ೬೪ ಪರೀಕ್ಷಾ ಕೇಂದ್ರಗಳಲ್ಲಿ ಟಿ.ಇ.ಟಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವೃಕ್ಷಥಾನ್ ಓಟಗಾರರಿಗೆ ಹಾಗೂ ಟಿಇಟಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಹಾಲಿ ಜಾರಿಯಲ್ಲಿರುವ ಸಾರ್ವಜನಿಕ ರಸ್ತೆ ಸಂಚಾರಿ ಮಾರ್ಗಗಳನ್ನು ಡಿಸೆಂಬರ್ ೭ರ ಬೆಳಿಗ್ಗೆ ೪ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.ವೃಕ್ಷಥಾನ ಹೆರಿಟೇಜ್ ರನ್ ಪ್ರಯುಕ್ತ ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳುಜಮಖಂಡಿಯಿಂದ ಕೇಂದ್ರ ಬಸ್ ನಿಲ್ದಾಣದಿಂದ ಬರುವ ವಾಹನಗಳು ವಲ್ಲಬಬಾಯಿ ಸರ್ಕಲ್ – ನವಭಾಗ ಕ್ರಾಸ್ – ಬಬಲೇಶ್ವರ ನಾಕಾ -ಗುಂಡಬಾವಡಿ ಕ್ರಾಸ್ – ತಾಜ್ಬಾವಡಿ- ಜೋಡ ಗುಮ್ಮಟ – ಕೇಂದ್ರ ಬಸ್ ನಿಲ್ದಾಣದವರೆಗೆ, ಕೋಲ್ಹಾರ ಕಡೆಯಿಂದ ಕೇಂದ್ರ ಬಸ್ ನಿಲ್ದಾಣದ…
