Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಸಾಮೂಹಿಕ ಮದುವೆಗಳು ಅರ್ಥಿಕ ಹೊರೆಯನ್ನು ಕಡಿಮೆ ಮಾಡುವದರ ಜತೆಗೆ ಕುಟುಂಬಗಳನ್ನು ಸಂಕಷ್ಟದಿಂದ ಪಾರು ಮಾಡುತ್ತವೆ. ನಾಡಿನ ಸಂತರ ಶರಣರ ಸ್ವಾಮೀಜಿಗಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು ಪುಣ್ಯವಂತರು ಎಂದು ಯರನಾಳದ ಶ್ರೀ ಸಂಗನಬಸವ ಶ್ರೀಗಳು ಹೇಳಿದರು.ತಾಲೂಕಿನ ಲಚ್ಯಾಣದ ಶ್ರೀ ಸಿದ್ದಲಿಂಗ ಮಹಾರಾಜರ ಮಠದಲ್ಲಿ ಶ್ರೀ ಶಂಕರಲಿಂಗ ಜಾತ್ರಾ ಮಹೋತ್ಸವ ನಿಮಿತ್ಯ ನಡೆದ ಧರ್ಮಸಭೆ ಮತ್ತು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಾಮೂಹಿಕ ವಿವಾಹದಿಂದ ದುಂದು ವೆಚ್ಚ ಕಡಿವಾಣ ಹಾಕುವದರ ಜತೆಗೆ ಸಮಾಜದಲ್ಲಿ ಸಾಮರಸ್ಯ ವೃದ್ದಿಸುತ್ತದೆ ಎಂದರು.ತುಂಗಳದ ಅನುಸುಯ ಅಮ್ಮನವರು ಮಾತನಾಡಿ ಸಾಮೂಹಿಕ ವಿವಾಹದಿಂದ ಸಮಾಜದಲ್ಲಿ ಸಾಮರಸ್ಯ ಸಹಬಾಳ್ವೆ ಮತ್ತು ಸೌಹಾರ್ಧತೆ ಹೆಚ್ಚಿಸುತ್ತದೆ. ಸರಳ ವಿವಾಹಕ್ಕೆ ಮಾದರಿಯಾಗುವ ಮೂಲಕ ದೇಶದ ಪ್ರಗತಿಗೂ ಸಹಕಾರಿಯಾಗಿ ಎಂದರು.ಮಂಜುನಾಥ ವಂದಾಲ, ಧರ್ಮರಾಜ ಮುಜಗೊಂಡ, ಸಿದ್ದಾರ್ಥ ಬೈಚಬಾಳ, ಎಂ.ಎಲ್ ಮುಜಗೊಂಡ, ನಿವೃತ್ತ ಪ್ರಾಚಾರ್ಯ ಎ.ಪಿ.ಕಾಗವಾಡಕರ ಮುರಲೀಧರ ಬಜಂತ್ರಿ ಮಾತನಾಡಿದರು.ವೇದಿಕೆಯ ಮೇಲೆ ಲಚ್ಯಾಣದ ಪೀಠಾಧಿಪತಿ ಡಾ. ವೃಷಭಲಿಂಗೇಶ್ವರ ಶ್ರೀಗಳು, ಸಿದ್ದಲಿಂಗ ದೇವರು ಜಕನೂರ, ಶಿವಾನಂದ ಶ್ರೀಗಳು…

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ವಿಶ್ವ ಆರೋಗ್ಯ ದಿನದ ಉದ್ದೇಶ ಜನರಿಗೆ ಕಾಲಕ್ಕೆ ಅನುಗುಣವಾಗಿ ಆರೋಗ್ಯದ ಮಾಹಿತಿಯನ್ನು ನೀಡುವುದು, ಮತ್ತು ಜನರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ದಿನವನ್ನು ಆಚರಣೆ ಮಾಡುತ್ತಿದ್ದೇವೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಗೋಪಿನಾಥ್ ತಿಳಿಸಿದರು.ಹಾರ್ಟ್ ಸಂಸ್ಥೆ ಮೈಸೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೋಗ್ಯ ದಿನದ ಕುರಿತು ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಮತ್ತು ತಾಲೂಕು ನೋಡಲ್ ಅಧಿಕಾರಿ ಡಾ. ಬೃಂದಾ ಮಾತನಾಡಿ, ಆರೋಗ್ಯವನ್ನು ಕಾಪಾಡಿಕೊಳ್ಳಲು ವಿಜ್ಞಾನದ ಸಹಕಾರವನ್ನು ಪಡೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ವಿಶ್ವ ಸಂಸ್ಥೆ ಒಂದೊಂದು ಘೋಷವಾಕ್ಯವನ್ನು ಇಟ್ಟುಕೊಂಡು ಆಚರಣೆ ಮಾಡಲಾಗುತ್ತದೆ. ಇವಾಗ ನಾವು ಬೇಸಿಗೆ ಕಾಲದಲ್ಲಿ ಇದ್ದೇವೆ. ಈ ಸಮಯದಲ್ಲಿ ತುಂಬಾ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಇದರ ಬಗ್ಗೆ ಸದಾ ಜಾಗೃತಿಯಿಂದ ಇರಬೇಕು ಎಂದು ತಿಳಿಸಿದರು.ತಾಲ್ಲೂಕು ಆರೋಗ್ಯಾಧಿಕಾರಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಶರಣಕ್ಷೇತ್ರ ವಡವಡಗಿ ಗ್ರಾಮದ ಗುರುವೀರಸಿದ್ಧ ಶಿವಯೋಗಿಗಳ 76 ನೇ ಜಾತ್ರಾಮಹೋತ್ಸವ ಹಾಗೂ ಮಲ್ಲಿಕಾರ್ಜುನ ಸ್ವಾಮೀಜಿಯವರ ಚತುರ್ಥ ಪುಣ್ಯಾರಾಧನೆಯಂಗವಾಗಿ ಸೋಮವಾರ ಪ್ರಥಮ ಬಾರಿಗೆ ಗ್ರಾಮದ ಸೈನಿಕ ಬಳಗದ ಸಹಯೋಗದಲ್ಲಿ ಐದು ಕಿಲೋ ಮೀಟರ್ ಮೆಗಾ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆ ಜರುಗಿತು.ಓಟದ ಸ್ಪರ್ಧೆಗೆ ನಂದಿಮಠದ ವೀರಸಿದ್ಧ ಸ್ವಾಮೀಜಿ ಚಾಲನೆ ನೀಡಿ ಮಾತನಾಡಿದ ಅವರು ಶ್ರೀಮಠದ ಜಾತ್ರಾ ಮಹೋತ್ಸವದಂಗವಾಗಿ ಸೈನಿಕ ಬಾಂಧವರು ಪ್ರಥಮ ಬಾರಿಗೆ ಯುವಕರ ನಡೆ ಕ್ರೀಡೆಯೆಡೆಗೆ ಧ್ಯೇಯದೊಂದಿಗೆ ಇಂತಹ ಓಟದ ಸ್ಪರ್ಧೆ ಹಮ್ಮಿಕೊಂಡಿರುವುದು ಶ್ಲಾಘನೀಯ. ಇದು ಯುವಜನಾಂಗವು ಅಧ್ಯಯನದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೇರಣೆ ನೀಡುವಂತಾಗಲೆಂದು ಆಶಯ ವ್ಯಕ್ತಪಡಿಸಿದರು.ಮಾಜಿ ಸೈನಿಕ ಭೀಮನಗೌಡ ಪಾಟೀಲ ಮಾತನಾಡಿ, ಯುವಜನಾಂಗಕ್ಕೆ ದೇಶ ಪ್ರೇಮ, ಸೇವೆ ಸಲ್ಲಿಸಲು ಪ್ರೇರಣೆ ನೀಡುವ ಸದುದ್ದೇಶದಿಂದ ಇಂತಹ ಓಟದ ಸ್ಪರ್ಧೆಯನ್ನು ಆಯೋಜನೆ ಮಾಡಿರುವದು ಒಳ್ಳೆಯದು. ಯುವಜನಾಂಗವು ಸೈನಿಕರಾಗಲು ಉತ್ತಮ ದೈಹಿಕ ಸಾಮರ್ಥ್ಯ ಹೊಂದುವ ಜೊತೆಗೆ ಉತ್ತಮ ನಡುವಳಿಕೆ ಹೊಂದಬೇಕು. ಸೈನ್ಯಕ್ಕೆ ಸೇರಲು ಬೇಕಾದ ಅರ್ಹತೆ ಕುರಿತು…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಜನಗಣತಿ ಕಾರ್ಯ ಒಂದು ಹಬ್ಬವಿದ್ದಂತೆ. ಡಿಜಿಟಲ್ ಮಾದರಿ ಜನಗಣತಿ ಕಾರ್ಯ ಮಾಡುವ ಮೂಲಕ ಶಿಕ್ಷಕರು ಉತ್ತಮ‌ ಕರ್ತವ್ಯದೊಂದಿಗೆ ಹಬ್ಬದಂತೆ ಯಶಸ್ವಿಗೊಳಿಸಬೇಕು ಎಂದು ತಹಶಿಲ್ದಾರ ಸುರೇಶ ಚವಲರ ಹೇಳಿದರು.ಪಟ್ಟಣದ ಎ.ಬಿ.ಜತ್ತಿ ಪದವಿಪೂರ್ವ ಮಹಾವಿಧ್ಯಾಲಯದಲ್ಲಿ ತಾಲ್ಲೂಕ ಆಡಳಿತ ಹಾಗೂ ಪಟ್ಟಣ ಪಂಚಾಯತಿ ಸಹಯೋಗದಲ್ಲಿ ಭಾರತದ ಜನಗಣತಿ 2027 ನಿಮಿತ್ಯ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ಮಂಗಳವಾರ ನಡೆದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಿಕ್ಷಕರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸತ್ತಾರೆ ಎಂಬ ವಿಶ್ವಾಸವಿದೆ. ನಿಗದಿಪಡಿಸಿದ ನಕ್ಷೆಯನ್ನು ತಯಾರಿಸಿಕೊಂಡರೆ ಮೊದಲ ಹಂತದ ಮನೆಗಳ ಪಟ್ಟಿ ಕಾರ್ಯ ಮಾಡಲು ಸುಲಭವಾಗುತ್ತದೆ. ಭಾರತದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿ ತಿಳಿಯಲು ಜನಗಣತಿಯೇ ಮೂಲ ಆಧಾರವಾಗಿರುತ್ತದೆ. ಆದ್ದರಿಂದ ಪರಿಪೂರ್ಣ ಮಾಹಿತಿಯೊಂದಿಗೆ ಕರ್ತವ್ಯ ನಿರ್ವಹಿಸಿ ಗಣತಿ ಕಾರ್ಯ ಯಶಸ್ವಿಯಾಗಿಸಬೇಕು ಎಂದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಘು ನಡುವಿನಮನಿ, ಉಪತಹಶಿಲ್ದಾರ ಎಚ್.ಎನ್.ಬಡಿಗೇರ, ಎಸ್.ಬಿ.ಬಿರಾದರ, ಅನೀಲ ಕೊಟ್ಯಾಳ, ಪ್ರವೀಣ ಬಸರಕೋಡ, ಸಂತೋಷ ಹೆಗಡೆ, ರಮೇಶ ಚವ್ಹಾಣ ಇದ್ದರು.

Read More

ಏ.9 ರಂದು ನಡೆಯಲಿರುವ ಉಪಚುನಾವಣೆ | ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲ್ಲುವ ಅವಕಾಶ | ವಿಪಕ್ಷ ನಾಯಕ ಆರ್.ಅಶೋಕ ಹೇಳಿಕೆ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್‌ನ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಸ್ಪರ್ಧೆಯಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದ್ದು, ರಾಜ್ಯದ ಭವಿಷ್ಯವನ್ನು ನಿರ್ಧರಿಸಲಾಗುತ್ತದೆ ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡವರನ್ನು ಗೆಲ್ಲಿಸಿ’ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಬಿಜೆಪಿ ಬಡ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ದಾವಣಗೆರೆಯಲ್ಲಿ ಬಿಜೆಪಿ ಸಾಮಾನ್ಯ ವ್ಯಕ್ತಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ ಪ್ರಬಲ ಮತ್ತು ಪ್ರಭಾವಿಗಳಿಗೆ ಟಿಕೆಟ್ ನೀಡಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಬಗ್ಗೆ ಉತ್ತಮ ಅಭಿಪ್ರಾಯವಿದೆ ಎಂದು ತಿಳಿಸಿದರು.ಕಾಂಗ್ರೆಸ್ ಎರಡೂ ಕಡೆ ವಂಶಾಡಳಿತ ರಾಜಕಾರಣಕ್ಕೆ ಅವಕಾಶ ನೀಡಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಪ್ರಬಲ ಅವಕಾಶವಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್…

Read More

ಲೇಖಕರುಶ್ರೀ ಹರಿಹರ ಶಿವಕುಮಾರಪ್ರಕಾಶಕರು, ಹರಿವು ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರುಬೆಲೆ 180 ರೂಪಾಯಿವರ್ಷ 2026 ಉದಯರಶ್ಮಿ ದಿನಪತ್ರಿಕೆ ನಾಡಿನ ಹಿರಿಯ ಅನುಭಾವಿ ಚಿಂತಕರು ಸಾಹಿತಿಗಳೂ ಆದ ಹರಿಹರ ಶಿವಕುಮಾರ ಬೆಂಗಳೂರು ಇವರು ಹರಿವು ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಪ್ರಕಾಶಕರ ಮೂಲಕ ಅನನ್ಯ ಅಲ್ಲಮ ಎಂಬ ಕೃತಿಯನ್ನು ಲೋಕಾರ್ಪಣೆ ಮಾಡಿದ್ದು ವಚನ ಸಾಹಿತ್ಯದ ಮೌಲ್ಯವನ್ನು ಪಸರಿಸುವ ವೈಚಾರಿಕ ನೆಲೆಯಲ್ಲಿ ರೂಪಗೊಂಡ ಸಿದ್ಧಾಂತಗಳ ಚರ್ಚೆಗೆ ಅವಕಾಶ ಮಾಡಿಕೊಡುವ ಸಂಗ್ರಹಕ್ಕೆ ಯೋಗ್ಯವಾದ ಒಂದು ಸುಂದರ ಆಕರ ಗ್ರಂಥ.ಹರಿಹರ ಶಿವಕುಮಾರ ಬೆಂಗಳೂರು ಇವರು ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಮೂಲತಃ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನವರು.ವಚನ ಸಾಹಿತ್ಯದ ಬಗ್ಗೆ ಆಳವಾದ ಅಧ್ಯಯನ ಮಾಡಿದ ಅಪರೂಪದ ಪ್ರಬುದ್ಧ ಪ್ರಾಮಾಣಿಕ ವ್ಯಕ್ತಿ.ಅನನ್ಯ ಅಲ್ಲಮ ಎಂಬ ಕೃತಿಯಲ್ಲಿ ಇವರು ಅಲ್ಲಮ ಪ್ರಭುಗಳ 75 ಸರಳ ಸ್ಥಲ ಕಟ್ಟಿನ ವಚನಗಳನ್ನು ಆಯ್ಕೆ ಮಾಡಿದ್ದಾರೆ.ಅಲ್ಲಮರ ವಚನ ವಿಶ್ಲೇಷಣೆ ಚಿಂತನೆ ನಿಜಕ್ಕೂ ಕಬ್ಬಿಣದ ಕಡಲೆ ಇದ್ದ ಹಾಗೆ. ಲೇಖಕರಿಗೂ ಅಲ್ಲಮರ ವಚನ ವಿಶ್ಲೇಷಣೆ ಒಂದು ಕಠಿಣ ಪರಿಶ್ರಮವೆಂದು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಮಾಜದ ಹಿರಿಯ ವ್ಯಕ್ತಿಯನ್ನು ಗುರುತಿಸಿ ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಸರಕಾರಕ್ಕೆ ಮತ್ತು ಸಿಂದಗಿ ಶಾಸಕರಿಗೆ ಅಭಿನಂದನೆಗಳು ಎಂದು ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಶಿವಾಜಿ ಮೇಟಗಾರ ಹೇಳಿದರು.ಸಿಂದಗಿ ನಗರದ ಮರಗಮ್ಮ ಲಕ್ಕಮ್ಮ ದೇವಸ್ಥಾನದಲ್ಲಿ ನೂತನವಾಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ ಹಣಮಂತ ಸುಣಗಾರ ಅವರಿಗೆ ತಳವಾರ ಸಮಾಜದ ವತಿಯಿಂದ ಹಮ್ಮಿಕೊಂಡ ಸನ್ಮಾನಿಸಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಧನೆ ಮಾಡಿದ ಸಾಧಕರಿಗೆ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸುವ ಕಾರ್ಯ ಶ್ಲಾಘನೀಯ ಎಂದರು.ಈ ವೇಳೆ ಸನ್ಮಾನವನ್ನು ಸ್ವೀಕರಿಸಿದ ನೂತನ ಅಧ್ಯಕ್ಷ ಹಣಮಂತ ಸುಣಗಾರ ಮಾತನಾಡಿ, ಪಕ್ಷ ಹಾಗೂ ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪಕ್ಷದ ಹಿರಿಯರು, ಸಿಎಂ, ಡಿಸಿಎಂ ಹಾಗೂ ಸಚಿವರು ನನ್ನನ್ನು ಈ ಹುದ್ದೆಗೆ ನೇಮಕವಾಗಲು ಸಹಕರಿಸಿದ್ದಾರೆ. ಹಿರಿಯರು ಹಾಗೂ ಸಾರ್ವಜನಿಕರು ಇಟ್ಟಿರುವ ಭರವಸೆಗೆ ಚ್ಯುತಿ ಬಾರದಂತೆ ನಗರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.ಈ ವೇಳೆ ಎಸ್.ಎಂ.ಬಿರಾದಾರ, ಭೀಮರಾಯ ಯಾತನೂರ, ಪರಶುರಾಮ…

Read More

ಲೇಖನ- ಜ್ಯೋತಿ ಎಸ್ಪತ್ರಿಕೋದ್ಯಮ ವಿದ್ಯಾರ್ಥಿನಿವಿಜಯಪುರ ಉದಯರಶ್ಮಿ ದಿನಪತ್ರಿಕೆ ಭರತನಾಟ್ಯದ ನಾದವೇ ಜೀವನದ ಸ್ಪಂದನೆ ಎಂದು ನಂಬಿಕೊಂಡು, ಹೆಜ್ಜೆಗೆ ಗೆಜ್ಜೆ ಕಟ್ಟಿದ ಕ್ಷಣದಿಂದಲೇ ಕಲೆಯ ಮಾರ್ಗದಲ್ಲಿ ನಿಶ್ಚಲವಾಗಿ ಸಾಗುತ್ತಿರುವ ಯುವ ನೃತ್ಯ ಸಾಧಕಿ ಕುಮಾರಿ ಪ್ರಣಾಂಜಲಿ, ಇಂದಿನ ತಲೆಮಾರಿನಲ್ಲೇ ವಿಶಿಷ್ಟ ಸಾಂಸ್ಕೃತಿಕ ಚೈತನ್ಯವನ್ನು ಹೊತ್ತಿರುವ ಕಲಾವಿದೆ.ಭರತನಾಟ್ಯದ ಮಧುರ ಲಯಕ್ಕೆ ಬಾಲ್ಯದಲ್ಲೇ ಮನಸೋತು, ಎಂಟರ ಎಳೆವಯಸ್ಸಿನಲ್ಲೇ ಗೆಜ್ಜೆ ಕಟ್ಟಿದ ಪ್ರತಿಭಾವಂತ ನೃತ್ಯಗಾರ್ತಿ ಕುಮಾರಿ ಪ್ರಣಾಂಜಲಿ, ಇಂದು ತನ್ನ ಕಲೆ ಮೂಲಕ ಸಂಸ್ಕೃತಿಯ ಸೌಂದರ್ಯವನ್ನು ಹರಡುತ್ತಿರುವ ಯುವ ಕಲಾವಿದೆ. ಭರತನಾಟ್ಯದ ಲಯ ಲಾಸ್ಯಕ್ಕೆ ಮನಸೊಪ್ಪಿದ ಅವಳು, ಧಾರವಾಡದ ಸಂಸ್ಕೃತಿಯ ಸುವಾಸನೆಯಲ್ಲಿ ವಿದುಷಿ ಶ್ರೀಮತಿ ಕುಮುದಿನಿ ರಾವ್ ಅವರಲ್ಲಿ ಪಂದನಲ್ಲೂರು ಶೈಲಿಯ ಶಿಸ್ತಿನ ಅಭ್ಯಾಸವನ್ನು ಆರಂಭಿಸಿದಳು. ಅದೇ ಸಮಯದಲ್ಲಿ ಕಥಕ್‌ನ ಸೊಗಡನ್ನೂ ಅರ್ಥೈಸಿಕೊಂಡು ತನ್ನ ಕಲಾ ವಿಸ್ತಾರವನ್ನು ಹೆಚ್ಚಿಸಿಕೊಂಡಳು. ನಂತರ ಬೆಂಗಳೂರಿನ ಕಲಾಭೂಮಿಯಲ್ಲಿ ವಳವೂರು ಶೈಲಿಯ ನುಡಿಮುತ್ತುಗಳನ್ನು ವಿದುಷಿ ಬಿ. ಭಾನುಮತಿ ಅವರಿಂದ ಕಲಿತು, ಅವರ ಆಶೀರ್ವಾದದಲ್ಲಿ ರಂಗಪ್ರವೇಶದ ಮಹತ್ವದ ಹೆಜ್ಜೆಯನ್ನು ಇಟ್ಟಳು. ವಿದುಷಿ ವಂದನಾ ಭಾರಧ್ವಾಜ್…

Read More

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮.ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಹಳ್ಳಿಯಲ್ಲಿ ಸಣ್ಣ ಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದ ಹರೀಶನು ತನ್ನ ಭವಿಷ್ಯವನ್ನು ರೂಪಿಸಿಕೊಳ್ಳುವ ಉದ್ದೇಶದಿಂದ ತನ್ನ ಹೆಂಡತಿ ಜೊತೆಗೆ ಪಟ್ಟಣಕ್ಕೆ ಉದ್ಯೋಗಕ್ಕೆಂದು ಬಂದನು. ಪಟ್ಟಣದಲ್ಲಿ ಈ ದಂಪತಿಗಳಿಬ್ಬರು ಬಾಡಿಗೆಯ ಮನೆಯೊಂದರಲ್ಲಿ ವಾಸವಾಗಿದ್ದರು. ಒಂದು ದಿನ ಹರೀಶನ ಹೆಂಡತಿ ಮಂಜುಳಾ ತನ್ನ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಮಹಿಳೆಯೊಬ್ಬಳು ತನ್ನ ದೈನಂದಿನ ಬಟ್ಟೆಗಳನ್ನು ಒಗೆದು ಒಣಗಲು ಹಾಕಿರುವುದನ್ನು ಕಿಟಕಿಯ ಮೂಲಕ ನೋಡಿದಳು. ಕಿಟಕಿಯ ಮೂಲಕ ಹೊರಗೆ ನೋಡಿದಾಗ ಆಕೆಯು ಒಗೆದು ಒಣಗಲು ಹಾಕಿದ್ದ ಬಟ್ಟೆಗಳು ಸ್ವಚ್ಛವಾಗಿರದೇ, ತೀರಾ ಕೊಳೆಯಾಗಿ ಇರುವುದು ಕಂಡುಬಂತು.ಬಹುಶಃ ಆಕೆಗೆ ಈಗಷ್ಟೇ ಮದುವೆ ಆಗಿರಬೇಕು, ಹಾಗಾಗಿ ಸ್ವಚ್ಛವಾಗಿ ಬಟ್ಟೆ ಒಗೆಯುವುದನ್ನು ಆಕೆಯಿನ್ನೂ ಕಲಿತಿರಲಿಕ್ಕಿಲ್ಲ, ಅಥವಾ ಬಟ್ಟೆ ಸ್ವಚ್ಛವಾಗಿ ಒಗೆಯಲು ಅಗತ್ಯವಿರುವ ಸಾಬೂನು ಮತ್ತು ಬಟ್ಟೆ ಒಗೆಯುವ ಪುಡಿ ಆಕೆಯಲ್ಲಿ ಇಲ್ಲದಿರಬಹುದು ಎಂದು ವ್ಯಂಗ್ಯವಾಗಿ ಮಂಜುಳಾ ತನ್ನ ಗಂಡನಿಗೆ ಹೇಳಿದಳು. ಪ್ರತಿದಿನವೂ ಆಕೆಯು ಒಗೆದು ಹಾಕುತ್ತಿದ್ದ…

Read More