Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ: ಶ್ರೀ ಸಿದ್ದೇಶ್ವರ ಶ್ರೀಗಳ ಹಸ್ತದಿಂದ ವಿಜಯಪುರದಲ್ಲಿ ಪ್ರಾರಂಭವಾದ ಬಿಎಲ್ಡಿ ಸೌಹಾರ್ದ ಸಹಕಾರಿ ಸಂಘ ಸಧ್ಯ ಹಲವು ಶಾಖೆಗಳನ್ನು ಪ್ರಾರಂಭಿಸಿ ಎರಡೇ ವರ್ಷಗಳಲ್ಲಿ ದಾಖಲೆಯ ೪೦೦ಕೋಟಿ ರೂ ಗಳಷ್ಟು ವ್ಯವಹಾರ ನಡೆಸಿ ಸಾಧನೆಯತ್ತ ಮುನ್ನುಗ್ಗುತ್ತಿರುವದು ಹೆಮ್ಮೆಯ ವಿಷಯ ಎಂದು ಎಂಎಲ್ಸಿ ಸುನೀಲಗೌಡ ಪಾಟೀಲ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದ ಬಳಿ ನೂತನವಾಗಿ ಪ್ರಾರಂಭವಾದ ಬಿಎಲ್ಡಿ ಸೌಹಾರ್ದ ಸಹಕಾರಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಾರ್ವಜನಿಕರಿಗೆ ಸೇವೆ ನೀಡುವ ಉದ್ದೆಶದಿಂದ ಪ್ರಾರಂಭಿಸಲಾಗಿರುವ ಈ ಸೌಹಾರ್ದ ಬರುವ ದಿನಗಳಲ್ಲಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕದ ಜನತೆಗೆ ಅನುಕೂಲವಾಗಲೆಂದು ಅಲ್ಲೊಂದು ಸೇರಿದಂತೆ ಹಲವು ಕಡೆ ಹೆಚ್ಚಿನ ಶಾಖೆಗಳನ್ನು ತೆರೆಯುವ ಉದ್ದೇಶ ಹೊಂದಿದೆ. ನುರಿತ ಸಿಬ್ಬಂದಿ ಎಲ್ಲ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದು ಬರುವ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಿರುವ ವಿಶ್ವಾಸವನ್ನು ವ್ಯಕ್ತಪಡಿಸಿದರು.ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಮಾತನಾಡಿ ಬಿಎಲ್ಡಿ ಸಂಸ್ಥೆ ಅಂದರೆನೇ ಅದೊಂದು ದೊಡ್ಡ ಹೆಸರು. ಈ ಸಂಸ್ಥೆಗೆ ತನ್ನದೇ ಆದ ವ್ಯಕ್ತಿತ್ವ ಇದೆ. ಆರೋಗ್ಯ,…
ಸಿಂದಗಿ: ಬಡವರಿಗೆ ಹಂಚಿಕೆಯಾಗಬೇಕಾದ ಮನೆಗಳ ವಿಧಾನವನ್ನು ಬಿಟ್ಟು ಪುರಸಭೆಯ ಆಡಳಿತ ವ್ಯವಸ್ಥೆ ಯಾವ ರೀತಿ ಮಾಡಿದೆ ಎಂದರೆ ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಬಂದಿರುವ ಮನೆಗಳನ್ನು ಸಾಮಾನ್ಯ ವರ್ಗದವರ ಕುಟುಂಬಗಳಿಗೆ ಮನೆ ಹಾಕಿ ಹಣ ಲೂಟಿ ಹೊಡೆಯೊದಕ್ಕೆ ಕೈಹಾಕಿದ್ದು ಇದು ನಾಚೀಗೇಡಿನ ಸಂಗತಿ ಎಂದು ಬಿಜೆಪ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ನಗರದ ಬಿಜೆಪಿಯ ಎಸ್.ಡಿ.ಮೋರ್ಚಾ ವತಿಯಿಂದ ನಡೆದ ಅಕ್ರಮವಾಗಿ ಬೇರೆ ವರ್ಗದವರಿಗೆ ಮನೆಗಳನ್ನು ಹಂಚಿಕೆ ಮಾಡಿದ ಅಧಿಕಾರಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿ ಮಾತನಾಡಿದ ಅವರು, ದಲಿತ ಸಮುದಾಯಕ್ಕೆ ಮಾಡಿದ ಬಹು ದೊಡ್ಡ ಅನ್ಯಾಯ. ಇದರಿಂದ ಬಡವರಿಗೆ ಅನ್ಯಾಯವಾಗಿದೆ. ದಿನದಲಿತರಿಗೆ ಸಿಗಬೇಕಾದ ಯೋಜನೆಗಳು ಸಿರಿವಂತರಿಗೆ ಸಿಗುವಂತಾಗುತ್ತಿದೆ. ಕೊಟ್ಟೆಂತರ ಹಣ ಲೂಟಿ ಹೊಡೆಯುವ ಹುನ್ನಾರ ನಡೆದಿದೆ. ಎಸ್.ಸಿ/ಎಸ್.ಟಿ ಮನೆಗಳನ್ನು ಯಾರೂ ಸಾಮಾನ್ಯ ವರ್ಗಕ್ಕೆ ಹಂಚಿಕೆ ಮಾಡಿದ್ದಾರೆ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು…
ಮುದ್ದೇಬಿಹಾಳ: ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರನ್ನಾಗಿ ಪರಿಗಣಿಸುವವೆರಗೂ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ದೈಹಿಕ ಶಿಕ್ಷಕ ಜಿ.ಎಂ.ಸಾಲಿಮಠ ಆಕ್ರೋಶ ಹೊರಹಾಕಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಚಿನ್ಮಯ ಜೆ.ಸಿ.ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಪಶ್ಚಿಮ ವಲಯಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಮಾಧ್ಯಮದವರ ಎದುರು ತಮ್ಮ ಆಕ್ರೋಷವನ್ನು ಹೊರಹಾಕಿದರು.ಸತತ ೧೫ ವರ್ಷಗಳಿಂದ ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರನ್ನಾಗಿ ಪರಿಗಣಿಸಬೇಕು ಮತ್ತು ಸಹ ಶಿಕ್ಷಕರಿಗೆ ನೀಡಲಾದ ಎಲ್ಲ ಸೌಲಭ್ಯಗಳನ್ನು ದೈಹಿಕ ಶಿಕ್ಷಕರಿಗೂ ನೀಡಬೇಕು ಎಂದು ಹೋರಾಟಗಳು ನಡೆಯುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ರಾಜ್ಯದಾದ್ಯಂತ ನಮ್ಮ ಹೋರಾಟ ನಿಲ್ಲದು ಎಂದರು.ಮತ್ತೋರ್ವ ದೈಹಿಕ ಶಿಕ್ಷಕ ಎ.ಸಿ.ಕೆರೂರ ಮಾತನಾಡಿ, ಸೇವೆಗೆ ಬಂದಾಗಿನಿಂದ ನಮ್ಮನ್ನ ದುಡಿಸಿಕೊಂಡು ದುಡಿಮೆಗೆ ತಕ್ಕ ಫಲ ಕೊಡುತ್ತಿಲ್ಲ. ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರ ದಿನನಿತ್ಯದ ಪರಿಶ್ರಮ ಸಮನಾಗಿದೆ. ಆದರೆ ಸೌಲಭ್ಯಗಳನ್ನು ನೀಡುವಲ್ಲಿ ನಮಗೆ ಕಡೆಗಣಿಸಲಾಗಿದೆ. ಈ ಧೋರಣೆ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ…
ಬಸವನಬಾಗೇವಾಡಿ: ಬಸವಕಲ್ಯಾಣ ಅನುಭವ ಮಂಟಪಕ್ಕೆ ಅನುದಾನ ನೀಡಿದಂತೆ ಬಸವ ಜನ್ಮ ಸ್ಥಳ ಬಸವನಬಾಗೇವಾಡಿಯ ಅಭಿವೃದ್ಧಿಗಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ ಎಂದು ಬೀದರ್ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.ಪಟ್ಟಣಕ್ಕೆ ಶುಕ್ರವಾರ ಪ್ರಥಮ ಬಾರಿಗೆ ಆಗಮಿಸಿದ ಅವರು ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನ, ಬಸವಜನ್ಮ ಸ್ಮಾರಕಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಸಮಾಲೋಚನೆ ಮಾಡಿ ಇಲ್ಲಿ ಕೈಗೊಳ್ಳಬೇಕಾದ ಕಾರ್ಯಗಳಿಗೆ ಬೇಕಾದ ಅನುದಾನ ಕುರಿತು ಚರ್ಚಿಸಿ ಸಂಸತ್ತಿನಲ್ಲಿ ಇದರ ಬಗ್ಗೆ ಚರ್ಚಿಸುತ್ತೇನೆ ಎಂದರು.ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವರಾಜ ಹಾರಿವಾಳ, ಬಸವರಾಜ ರಾಯಗೊಂಡ, ಸಂಗಮೇಶ ಓಲೇಕಾರ, ಜಟ್ಟಿಂಗರಾಯ ಮಾಲಗಾರ, ಪಿಂಟುಗೌಡ ಪಾಟೀಲ,…
ವಿಜಯಪುರ: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಸೆಪ್ಟೆಂಬರ್ ೧೧ ಮತ್ತು ೧೨ರಂದು ಗ್ರಾಮೀಣ ಪತ್ರಕರ್ತರಿಗೆ ಮಕ್ಕಳ ವಿಷಯಗಳ ವರದಿಗಾರಿಕೆ ಕುರಿತು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲು ಉದ್ದೇಶಿಸಿದೆ.ಈ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತರು, ಮಕ್ಕಳ ತಜ್ಞರು, ಯುನಿಸೆಫ್ ಅಧಿಕಾರಿಗಳು ಮತ್ತು ಮಾಧ್ಯಮ ತಜ್ಞರು, ಮಾಧ್ಯಮ ಅಧ್ಯಯನ ವಿಭಾಗಗಳ ಅಧ್ಯಾಪಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಕಲಬುರಗಿ ಮತ್ತಿತರ ಜಿಲ್ಲೆಗಳ ಪತ್ರಕರ್ತರು ಭಾಗವಹಿಸಬಹುದಾಗಿದೆ. ಆಸಕ್ತ ಪತ್ರಕರ್ತರು ತಮ್ಮ ಹೆಸರು, ಪತ್ರಿಕೆಯ ಹೆಸರು, ಪತ್ರಕರ್ತರಾಗಿ ಎಷ್ಟು ವರ್ಷಗಳ ಅನುಭವ, ಊರು, ಈಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಇಷ್ಟು ವಿವರಗಳನ್ನು ವಾಟ್ಸಾಪ್ ಮೂಲಕ ೯೪೮೧೩೬೪೫೨೬ ನಂಬರ್ಗೆ ಕಳುಹಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.ಹೈದ್ರಾಬಾದಿನ ಯುನಿಸೆಫ್ ಅಧಿಕಾರಿಗಳು ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುವವರ ಆಯ್ಕೆಯನ್ನು ಮಾಡಲಿದ್ದಾರೆ. ಆಯ್ಕೆಯಾದ ಪತ್ರಕರ್ತರಿಗೆ ವಿಜಯಪುರಕ್ಕೆ ಬಂದು ಹೋಗುವ ಬಸ್ ಚಾರ್ಜ್ ಮರುಪಾವತಿಸಲಾಗುವುದು. ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಆಯ್ಕೆಯಾದ ಪತ್ರಕರ್ತರಿಗೆ…
ವಿಜಯಪುರ: ಸಹಕಾರ ಸಂಘಗಳು ಕೃಷಿ ಕ್ಷೇತ್ರ ಹಾಗೂ ಜನ ಸಾಮಾನ್ಯರಿಗೆ ಅತ್ಯಂತ ಉಪಯುಕ್ತವಾಗಿದ್ದು, ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಇವರ ಸಹಯೋಹಗದಲ್ಲಿ ಗುರುವಾರ ಆಯೋಜಿಸಿದ್ದ ಸಹಕಾರ ತತ್ವದ ಕುರಿತ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಅಂತರ್ ಕಾಲೇಜು ಮಟ್ಟದ ಚರ್ಚಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.ಗ್ರಾಮೀಣ ಜನರ ಅನೇಕ ಸಮಸ್ಯೆಗಳನ್ನು ನಿವಾರಿಸುವಲ್ಲಿ ಹಾಗೂ ಅವರ ಜೀವನ ಮಟ್ಟವನ್ನು ಅಭಿವೃದ್ಧಿಪಡಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಗಣನೀಯವಾಗಿದೆ ಎಂದರು.ಈ ಚರ್ಚಾ ಸ್ಪರ್ಧೆಯಲ್ಲಿ ಮುಧೋಳದ ದಾನಮ್ಮದೇವಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಸ್ನಾತಕ ವಿಭಾಗದ ವಿದ್ಯಾರ್ಥಿನಿ ದಾನೇಶ್ವರಿ ಅರಗಂಜಿ (ಪ್ರಥಮ ಸ್ಥಾನ), ಕಲಬುರ್ಗಿಯ ಶರಣೇಶ್ವರಿ ರೇಷ್ಮಿ ಮಹಿಳಾ ಮಹಾವಿದ್ಯಾಲಯ ಅನಿತಾ (ದ್ವಿತೀಯ ಸ್ಥಾನ) ಹಾಗೂ ಮಹಿಳಾ ವಿವಿಯ ಸ್ನಾತಕ ವಿಭಾಗದ…
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಕರವಿನಾಳ ಗ್ರಾಮದಲ್ಲಿ ಗ್ರಾಮದೇವತೆ ಶ್ರೀದೇವಿ ಜಾತ್ರೆ ಶುಕ್ರವಾರ ಸಂಭ್ರಮದಿಂದ ನಡೆಯಿತು. ಬೆಳಗ್ಗೆ ಕುಂಭ ಮೆರವಣಿಗೆಯೊಂದಿಗೆ ಶ್ರೀದೇವಿಗೆ ಉಡಿ ತುಂಬುವ ಕಾಯ೯ಕ್ರಮ ಹಾಗೂ ರಥೋತ್ಸವ ಜರುಗಿತು.ಗ್ರಾಮದ ಶ್ರೀದೇವಿಯ ದೇವಸ್ಥಾನದಿಂದ ಗಂಗಾ ಸ್ಥಳಕ್ಕೆ ತೆರಳಿ ನಂತರ ಪ್ರಮುಖ ಬೀದಿಯಲ್ಲಿ ಡೊಳ್ಳಿನ ವಾಲಗ,ಕುಂಭ ಮೆರವಣಿಗೆ ಮೂಲ ದೇವಸ್ಥಾನಕ್ಕೆ ಬಂದು ತಲುಪಿತು. ಸಾವಿರಾರು ಭಕ್ತರು ಶ್ರೀದೇವಿ ಆಶೀ೯ವಾದ ಪಡೆದು ಪುನೀತರಾದರು. ಪ್ರಧಾನ ಅಚ೯ಕರಾದ ಈರಣ್ಣ ವಿಶ್ವಕಮ೯,ಮಾನಪ್ಪ ವಿಶ್ವಕಮ೯,ವಾಸುದೇವ ವಿಶ್ವಕಮ೯ ಇದ್ದರು. ಸಾವಿರಾರು ಭಕ್ತರಿಗೆ ಅನ್ನಪ್ರಸಾದದ ವ್ಶವಸ್ಥೆ ಮಾಡಲಾಗಿತ್ತು.ಜಾತ್ರೆಯಲ್ಲಿ ಸುತ್ತಮುತ್ತಲಿನ ಹಳ್ಳಿಗಳ ಭಕ್ತರು ಪಾಲ್ಗೊಂಡಿದ್ದರು.
ವಿಜಯಪುರ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಜಿಲ್ಲೆಯ ಆಹಾರ ಉತ್ಪಾದಕರು, ತಯಾರಕರು, ವಿತರಕರಿಗೆ ಪರವಾನಿಗೆ ಅಥವಾ ನೊಂದಣಿ (ರಜಿಸ್ಟೇಶನ್) ಅಭಿಯಾನ ೩೧ ರಂದು ಹಮ್ಮಿಕೊಳ್ಳಲಾಗಿದೆ.ಆಹಾರ ಉತ್ಪಾದಕರು, ವಿತರಕರು ಹಾಗೂ ಮಾರಾಟಗಾರರು ನಿರಂತರವಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಪರವಾನಿಗೆ ಅಥವಾ ನೊಂದಣಿ ಪಡೆಯುವುದು ಕಡ್ಡಾಯವಾಗಿದ್ದು, ಜಿಲ್ಲೆಯಾದ್ಯಂತ ಬೃಹತ್ ಸಂಖ್ಯೆ ಆಹಾರ ಉತ್ಪಾದಕರಿಗೆ ಪರವಾನಿ-ನೊಂದಣಿ ಮಾಡುವ ಉದ್ದೇಶದಿಂದ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪರವಾನಿಗೆಗಾಗಿ ಆಧಾರ ಕಾರ್ಡ, ಫೊಟೋ, ವಿದ್ಯುತ್ ಬಿಲ್ಲ, ಜಿ.ಎಸ್.ಟಿ., ನಗರಸಭೆ ಪರವಾನಿಗೆ, ಪ್ಯಾನ ಕಾರ್ಡ, ಲ್ಯಾಬ ರಿಪೋರ್ಟ್ ಸೀಲು, ಹಾಗೂ ನೊಂದಣಿಗೆ ಆಧಾರ ಕಾರ್ಡ, ಫೋಟೋ, ವಿದ್ಯುತ್ ಬಿಲ್ಲ ಅಥವಾ ಬಾಡಿಗೆ ಒಪ್ಪಂದ ಪತ್ರ- ಉತಾರಿ ದಾಖಲೆಗಳೊಂದಿಗೆ ನೊಂದಣಿ ಮಾಡಿಸಿಕೊಳ್ಳಬಹುದಾಗಿದೆ.ಜಿಲ್ಲೆಯ ಆಹಾರ ಉತ್ಪಾದಕರು, ವಿತರಕರು ಹಾಗೂ ಮಾರಾಟಗಾರರು ಆನ್ಲೈನ್ ಮೂಲಕ ಅಥವಾ ಕಚೇರಿಗೆ ಭೇಟಿ ನೀಡುವ ಮೂಲಕ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು. ಕಲಬೆರಕೆ ಆಹಾರ ಪದಾರ್ಥ ಮಾರಾಟ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಈ ಕುರಿತಂತೆ…
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು ೧೯೭೭ ರ ನಿಯಮ೫ ಮತ್ತು ೨೬(೨) ಹಾಗೂ ೧೨(ಎ) (ಬಿ) ಮತ್ತು (ಸಿ) ರನ್ವಯ ೭ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ಸೆ.೦೬ ರೊಳಗೆ ಅವಶ್ಯಕ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು ೧೯೭೭ ರ ನಿಯಮ೫ ಮತ್ತು ೨೬(೨) ಹಾಗೂ ೧೨(ಎ) (ಬಿ) ಮತ್ತು (ಸಿ) ರನ್ವಯ ೭ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ದಿನಾಂಕ : ೦೬-೦೯-೨೦೨೪ ರೊಳಗೆ ಅವಶ್ಯಕ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
