Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ರೇವತಗಾಂವ ಗ್ರಾಮದಲ್ಲಿ ವಿದ್ಯುತ್ ತಂತಿ ಕಡಿದು ಬಿದ್ದುದ್ದರಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು, ಕಟಾವಿಗೆ ಬಂದಿದ್ದ ಎರಡು ಎಕರೆ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರದಂದು ನಡೆದಿದೆ.ನಿವರಗಿ ಕೆಇಬಿಯಿಂದ ರೇವತಗಾಂವ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೇನ್ಲೈನ್ ತಂತಿ ಹರಿದು ಅಪ್ಪಾಸಾಬ ಚನ್ನಗೊಂಡ ಹಾವಿನಾಳರವರು ಬೆಳೆದಿರುವ ಕಬ್ಬಿನ ಗದ್ದೆಗೆ ಬಿದ್ದುದ್ದರಿಂದಾಗಿ ಎರಡು ಎಕರೆ ಕಬ್ಬು ಸುಟ್ಟು ಹೋಗಿದೆ. ಸುಮಾರು ೩ ಲಕ್ಷದಷ್ಟು ಬೆಳೆ ಹಾನಿಯಾಗಿದೆ.ಕೆಇಬಿ ಅಧಿಕಾರಿ ಭೇಟಿ: ನನ್ನ ಬೆಳೆಗೆ ಸೂಕ್ತ ಪರಿಹಾರ ನೀಡುವವರೆಗೆ ಹರಿದು ಬಿದ್ದಿರುವ ತಂತಿ ದುರಸ್ಥಿಗೊಳಿಸಲು ಅವಕಾಶ ಕಲ್ಪಿಸುವುದಿಲ್ಲ ಎಂದು ರೈತ ಹಟ ಹಿಡಿದಿರುವುದರಿಂದ ಸ್ಥಳಕ್ಕೆ ಚಡಚಣ ಪ್ರಭಾರಿ ಶಾಖಾಧಿಕಾರಿಗಳಾದ ಎಸ್.ಎಲ್.ಝಂಡೆ ಹಾಗೂ ಲೈನ್ಮನ್ ಅಂಬಿರವರುಗಳು ಭೇಟಿ ನೀಡಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದ್ದರು.ಅಲ್ಲದೇ ಘಟನಾ ಸ್ಥಳಕ್ಕೆ ಗ್ರಾಮ ಸೇವಕ ಅಮಸಿದ್ದ ಬನ್ನೆ ಹಾಗೂ ಗ್ರಾಪಂ ಸದಸ್ಯ ಮಹಾದೇವ ಅಂಕಲಗಿ, ಚಡಚಣ ಪೊಲೀಸ್ ಠಾಣೆಯ ಸಿಬ್ಬಂದಿ ಕೆ.ಬಿ.ಪಾಟೀಲ ಹಾಗೂ…
ವಿಜಯಪುರದಲ್ಲಿ ಇಂದು ೬ ನೇ ದಿನಕ್ಕೆ ಕಾಲಿರಿಸಿದ ಜಯ ಕರ್ನಾಟಕ ಸಂಘಟನೆ ಧರಣಿ ಸತ್ಯಾಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರ ಹೆಸರು ಗಾಂಧಿ ವೃತ್ತದ ನವೀಕರಣ, ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಹೆಸರನ್ನು ಮರುನಾಮಕರಣ ಹಾಗೂ ವಿಜಯಪುರ ನಗರದ ಕಿತ್ತೂರ ರಾಣಿ ಚನ್ನಮ್ಮ ರಂಗ ಮಂದಿರ ನವೀಕರಗೊಳಿಸಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಯ ಕರ್ನಾಟಕ ಸಂಘಟನೆ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಸೋಮವಾರ ೫ನೇ ದಿನಕ್ಕೆ ಮುನ್ನಡೆದಿದೆ.ಧರಣಿ ಸ್ಥಳಕ್ಕೆ ಭೇಟಿ ನೀಡಿದ ಶರಣು ಹೂಗಾರ, ರವಿ ಶಿಂಧೆ, ರಂಗಭೂಮಿ ಕಲಾವಿದರಾದ ಸಿದ್ದು ನಾಲತವಾಡ ಮಾತನಾಡಿ, ಕಿತ್ತೂರ ರಾಣಿ ಚೆನ್ನಮ್ಮ ನಾಟಕ ಮಂದಿರ ಸ್ಥಗಿತಗೊಂಡು ಸುಮಾರು ದಶಕಗಳೆ ಕಳೆದಿವೆ. ನಾಟಕ ಮಂದಿರ ಪ್ರಾರಂಭ ಇದ್ದ ಸಂದರ್ಭದಲ್ಲಿ ರಂಗಭೂಮಿ ಕಲಾವಿದರು ತಮ್ಮ ದಿನನಿತ್ಯದ ಜೀವನ ನಡೆಸಿಕೊಂಡು ಬಂದಿದ್ದರೂ ಇದು ಸದ್ಯಕ್ಕೆ ಬಂದ ಇದ್ದ ಕಾರಣ ರಂಗಭೂಮಿ ಕಲಾವಿದರು ನಾಟಕವನ್ನು ನಂಬಿ ಜೀವನ ನಡೆಸುವವರು ಕಷ್ಟದಲ್ಲಿದ್ದಾರೆ. ಪುನಃ…
ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲಮಿತಿಯಲ್ಲಿ ಪ್ರಕರಣಗಳ ಇತ್ಯಥ್ಯಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ಥರಿಗೆ ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು.ದೌರ್ಜನ್ಯ ಪ್ರತಿಬಂಧ ಅಧಿನಿಯಮ, ಅಸ್ಪೃಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರಗಳನ್ನು ಜಿಲ್ಲಾ ಮಟ್ಟದಲ್ಲಿ ಸೇರಿದಂತೆ ತಾಲೂಕಾ ಹಾಗೂ ಗ್ರಾಮ ಮಟ್ಟದಲ್ಲಿ ಆಯೋಜಿಸುವ ಮೂಲಕ ಜಾಗೃತಿ ಮೂಡಿಸಬೇಕು. ಇಂತಹ ಕಾರ್ಯಕ್ರಮಗಳಿಗೆ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಆಹ್ವಾನಿಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಮಾಹಿತಿಯನ್ನೊಳಗೊಂಡ ಫಲಕವನ್ನು…
ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ | ಸಚಿವ ಎಚ್ಕೆ ಪಾಟೀಲ್ ಮಾಹಿತಿ ಬೆಂಗಳೂರು: ಪರಿಶಿಷ್ಟ ಜಾತಿ(ಎಸ್ಸಿ)ಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಮತ್ತು ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಅವರು, ಒಳ ಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗುವುದು ಎಂದರು.ಎಸ್ಸಿಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ನಂಬಲರ್ಹ ದಾಖಲೆಗಳು ಹಾಗೂ ದತ್ತಾಂಶ ಸಂಗ್ರಹಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ನಿರ್ಧಾರ ಮಾಡಲಾಗಿದೆ. ಮೂರು ತಿಂಗಳಲ್ಲಿ ಆಯೋಗ ವರದಿ ನೀಡಲಿದೆ ಎಂದರು.ಒಳಮೀಸಲಾತಿ ನೀಡುವಂತೆ ರಾಜ್ಯದಲ್ಲಿ ಬೇಡಿಕೆ ಹೆಚ್ಚುತ್ತಿದೆ. ಈ ಬಗ್ಗೆ ಚರ್ಚೆಗಳು ಮತ್ತು ಚಿಂತನೆಗಳು ನಡೆದಿವೆ. ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಪ್ರಯಾಣಿಕರ ಅಹವಾಲು-ಕುಂದುಕೊರತೆಗಳನ್ನು ಆಲಿಸಲು ನವೆಂಬರ್ ೪ರಂದು ಮಧ್ಯಾಹ್ನ ೩-೩೦ರಿಂದ ೪-೩೦ರವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು-ಪ್ರಯಾಣಿಕರು ದೂರವಾಣಿ ಸಂಖ್ಯೆ : ೬೩೬೬೪೨೩೮೮೭ಗೆ ಕರೆ ಮಾಡುವ ಮೂಲಕ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರಿಗೆ ಸೌಕರ್ಯದ ಅಹವಾಲು-ಕುಂದು ಕೊರತೆಗಳಿದ್ದಲ್ಲಿ ಪರಿಹರಿಸಿಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ದೌರ್ಜನ್ಯ ಪ್ರತಿಬಂಧ ಅಧಿನಿಯಮ-ಅಸ್ಪೃಶ್ಯತೆ ನಿವಾರಣೆ ಅರಿವು ಮೂಡಿಸುವ ವಿಚಾರಗೋಷ್ಠಿ- ಕಾರ್ಯಾಗಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ಉತ್ತಮ ಬದಲಾವಣೆಯನ್ನು ತರಲು ನಮ್ಮ ಇಲಾಖೆ ಕಾರ್ಯ ನಿರ್ವಹಿಸುತ್ತಿದ್ದು, ಸಮಾಜದಲ್ಲಿನ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು ಪ್ರತಿಯೊಬ್ಬರು ಜಾಗೃತ ಹೊಂದುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಹೇಳಿದರು.ಸೋಮವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖಾ ಕಾರ್ಯಕ್ರಮಗಳ ಮಾಹಿತಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ, ಅಸ್ಪೃಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಸ್ಪ್ರಶ್ಯತೆಯಂತಹ ಅನಿಷ್ಟ ಪದ್ದತಿಗಳು ವರದಿಯಾದ ತಕ್ಷಣ ಘಟನೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಿಸಿಕೊಂಡು ಕ್ರಮ ವಹಿಸಲಾಗುತ್ತದೆ. ಸಮಾಜದಲ್ಲಿನ ಪ್ರತಿಯೊಬ್ಬರು ಮೇಲು-ಕೀಳು ಭಾವನೆ ತೊಡೆದು ಹಾಕಬೇಕು ಎಂದು ಅವರು ಹೇಳಿದರು.ಪ್ರತಿಯೊಬ್ಬರು ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು, ಬಾಬಾ ಸಾಹೇಬ ಅಂಬೇಡ್ಕರ್, ಸೇರಿದಂತೆ ಮಹನೀಯರು ಹಾಕಿ ಕೊಟ್ಟ…
ವಿಜಯಪುರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ೨೦೨೩-೨೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವಾದಿ ಶರಣರು ಸತ್ಯ ತತ್ವಗಳನ್ನು ಸಾಮರಸ್ಯಗೊಳಿಸಿದವರು. ಶರಣರ ವಿಚಾರಗಳು ನಮಗೆ ಆದರ್ಶ, ನಿತ್ಯ ಸ್ಪೂರ್ತಿ. ಸಮಾಜದಲ್ಲಿರುವ ಬಡಜನರ ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕವಾಗಿ ಎಲ್ಲರನ್ನು ಒಗ್ಗೂಡಿಸಿದ ಕೀರ್ತಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು.ಅಖಿಲ ಭಾರತ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ೨೦೨೩-೨೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ನಮ್ಮ ಸಮಾಜದಲ್ಲಿ ವೀರಶೈವ, ಲಿಂಗಾಯತ ಸ್ವಲ್ಪ ಅಂತರವಿದೆ. ತಲತಲಾಂತರದಿAದ ಬಂದ ವೀರಶೈವ ಸಮಾಜ ಧರ್ಮ ಉಳಿಯಬೇಕಾಗಿದೆ. ಎಲ್ಲ ವರ್ಗಗಳ ಸಹಕಾರ ಇಂದು ಅವಶ್ಯಕತೆ ಇದೆ. ನೆರೆಯ ಮಹಾರಾಷ್ಟç, ತೆಲಂಗಾಣ ರಾಜ್ಯಗಳಲ್ಲಿ ವೀರಶೈವ ಲಿಂಗಾಯತ ಸಮಾಜ ಇದೆ. ಎಲ್ಲರನ್ನು ಜೊತೆಗೂಡಿ ಒಗ್ಗಟ್ಟಾಗಿ ಹೋಗಬೇಕಾಗಿದೆ. ವೀರಶೈವ ಪದ ಹಿಂದುಳಿದ ಓಬಿಸಿ ಪಟ್ಟಿಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುವರ್ಣ ಮಹೊತ್ಸವ ಕಂಡ ಮುಳವಾಡದ ಶ್ರೀ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘವೂ ಸ್ಥಾಪನೆಗೊಂಡು ಇಂದಿಗೆ ೬೨ ವರ್ಷಗಳಾದವು. ಸಂಘದಡಿಯಲ್ಲಿ ಪ್ರೌಢ ಶಾಲೆ, ಪ್ರಾಥಮಿಕ ಶಾಲೆ, ಮತ್ತು ಇಂಗ್ಲೀಷ ಮಾಧ್ಯಮ ಪ್ರಾಥಮಿಕ ಶಾಲೆಗಳು ಅಸ್ತಿತ್ವದಲ್ಲಿವೆ. ಇತ್ತೀಚೆಗೆ ಸಂಘದ ಕಾರ್ಯಕಾರಿ ಮಂಡಳಿಗೆ ಚುನಾವಣೆ ನಡೆಯಿತು. ಹನ್ನೊಂದು ಜನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಗೊಂಡರು.ಎ.ಎಸ್. ಐಹೊಳ್ಳಿ (ಅಧ್ಯಕ್ಷರು) ಬಿ.ಆಯ್.ಪಾಟೀಲ (ಉಪಾಧ್ಯಕ್ಷರು) ಜೆ.ಎಸ್. ಕಂಚ್ಯಾಣಿ (ಗೌರವ ಕಾರ್ಯದರ್ಶಿ) ಎ.ಜಿ. ಕಳಸಗೊಂಡ (ಕೋಶಾಧಿಕಾರಿ) ಹಾಗೂ ಎಸ್.ಪಿ. ಕೆಂಗನಾಳ ಆರ್.ಡಿ. ಐಹೊಳ್ಳಿ ಆಯ್.ಕೆ. ಗುಚ್ಚೆಟ್ಟಿ, ಎಸ್.ಬಿ. ಪಾಟೀಲ ಡಾ. ಎಸ್.ಎಂ. ಕುಬಸದ, ಎಸ್.ಎಸ್. ಮಂಟೂರ, ಶ್ರೀಮತಿ ಉಮಾ ಟಿ. ಹುಂಡೇಕಾರ, ಇವರೆಲ್ಲ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಡಾ. ವಿ.ಡಿ. ಐಹೊಳ್ಳಿ ಅವರನ್ನು ಶಿಕ್ಷಣ ತಜ್ಞರಾಗಿ ಮತ್ತು ಎಸ್.ಎಚ್. ಬುಸಾರಿ ಅವರನ್ನು ಕಾನೂನು ಸಲಹೆಗಾರರನ್ನಾಗಿ ನೇಮಿಸಿ, ಗೌರವ ಸದಸ್ಯ ಸ್ಥಾನವನ್ನು ನೀಡಲಾಗಿದೆ ಎಂದು ಗೌ. ಕಾರ್ಯದರ್ಶಿಗಳಾದ ಜಂಬುನಾಥ ಕಂಚ್ಯಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ವೇದಿಕೆ ನೀಡಲು ಸರಕಾರ ಪ್ರತಿಭಾಕಾರಂಜಿಯAತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಇದನ್ನು ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕೆಂದು ಶಾಸಕ ಸಿದ್ದು ಸವದಿ ಹೇಳಿದರು.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶೀಕ್ಷಣಾಧಿಕಾರಿಗಳ, ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ಪ್ರಭುಲಿಂಗೇಶ್ವರ ಇಂಟರನ್ಯಾಷನಲ್ ಸ್ಕೂಲ್ ಚಿಮ್ಮಡ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ೨೦೨೪-೨೫ನೇ ಸಾಲಿನ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಉದ್ಘಾಟಣೆ ನೆರವೇರಿಸಿ ಮಾತನಾಡಿದ ಅವರು ದೇಶದ ಬಹುತೇಕ ದಿಗ್ಗಜ ಕಲಾವಿದರು, ಸಂಗೀರಗಾರರ ಪಾದಾರ್ಪಣೆಗೆ ಮೊದಲ ವೇದಿಕೆಯೇ ಪ್ರತಿಭಾ ಕಾರಂಜಿಯAತಹ ಕಾರ್ಯಕ್ರಮಗಳು, ಇಂತಹ ದೇಶ ಕಟ್ಟುವಲ್ಲಿ ಸಹಕಾರಿಯಾಗಬಲ್ಲ ಕಾರ್ಯಕ್ರಮಗಳಿಗೆ ವೇದಿಕೆಯಾಗಲು ಪ್ರತೀವರ್ಷವೂ ನಮ್ಮ ಸಂಸ್ಥೆ ಸಿದ್ದವಿದೆ ಎಂದರು.ಕ್ಷೇತ್ರ ಶಿಕ್ಷ ಣಾಧಿಕಾರಿ ಅಶೋಕ ಬಸಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿ ಶಿಕ್ಷಣದ ಮೂಖ್ಯ ಭಾಗ ಈ ಪ್ರತಿಭಾ ಕಾರಂಜಿಯಲ್ಲಿ ಅಡಗಿದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವುದನ್ನೂ ಈ ವೇದಿಕೆ ಕಲಿಸಿ ಕೊಡುತ್ತದೆ. ವಿವಿಧತೆಯಲ್ಲಿ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಪ್ರೋ ಕಬ್ಬಡ್ಡಿ ಲೀಗ್ ೧೧ರ ತಂಡಗಳಿಗೆ ಚಿಮ್ಮಡ ಗ್ರಾಮದಲ್ಲಿ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.ಇಲ್ಲಿನ ಭೂಮಿಕಾ ವಸತಿ ಶಾಲೆಯ ವಿದ್ಯಾರ್ಥಿಗಳಾದ ಚಂದ್ರನಾಯ್ಕ ಬೆಂಗಳೂರು ಬುಲ್ಸ ತಂಡಕ್ಕೆ ಹಾಗೂ ಸತ್ಯಪ್ಪಾ ಮಟ್ಟಿ ಪುನೇರಿ ಪಲ್ಟನ್ ತಂಡಗಳಿಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಸ್ಪರ್ದಾಳುಗಳಿಗೆ ಇಲ್ಲಿನ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಮಾಲಾ ಅಶೋಕ ಮೋಟಗಿ ಹಾಗೂ ಭೂಮಿಕಾ ವಿದ್ಯಾ ಸಂಸ್ಥೆಯ ಸಂಸ್ಥಾಪಕಅಧ್ಯಕ್ಷ ಮುತ್ತು ಢವಳೇಶ್ವರ ಅಭಿನಂದಿಸಿದ್ದಾರೆ.
