Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಸೇರಿದ್ದ ಜನಸ್ತೋಮ ಕಂಡು ದಿಗಿಲುಗೊಂಡಿರುವ ಕಾಂಗ್ರೆಸ್ ನಾಯಕರು, ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಅವರನ್ನು ವೈಯಕ್ತಿಕವಾಗಿ ನಿಂದಿಸುವುದನ್ನು ಬಿಡಬೇಕು. ಇಲ್ಲವೇ ಶಾಸಕರ ಕಾರ್ಯವೈಖರಿ ಕುರಿತು ಬಹಿರಂಗ ಚರ್ಚೆಗೆ ಬರಬೇಕು ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ರಾಜೇಂದ್ರ ಸವಾಲು ಹಾಕಿದ್ದಾರೆ.ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಿಕೆ ಕಾರ್ಯಕ್ರಮಕ್ಕೆ ಜಾಗ ಕೊಡುವಂತೆ ಅರ್ಜಿಯನ್ನೇ ಹಾಕಿರಲಿಲ್ಲ ಎಂಬ ಬಿ.ವಿ.ಬಸವರಾಜು ಆರೋಪ ಸತ್ಯಕ್ಕೆ ದೂರವಾದದ್ದು. ಅರ್ಜಿ ಹಾಕಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದು ಅರ್ಜಿ ತೋರಿಸಿದರು.ಸತತ ಎರಡು ಬಾರಿ ಗೆದ್ದಿರುವ ಶಾಸಕ ಅನಿಲ್ ಚಿಕ್ಕಮಾದು ಹೆಚ್ ಡಿ ಕೋಟೆ ಕೋಟೆ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದಾರೆ. ಈಗಲೂ ಅವರ ಸಾಧನೆ ಶೂನ್ಯ, ಈ ಕುರಿತು ನಾನು ಚರ್ಚೆಗೆ ರೆಡಿ ಇದ್ದೇನೆ ಎಂದು ಗುಡುಗಿದರು.ಶಾಸಕ ಅನಿಲ್ ಚಿಕ್ಕಮಾದು ಕೆಲವರ ಕೈಗೊಂಬೆ ಆಗಿದ್ದಾರೆ. ಬಿ.ವಿ ಬಸವರಾಜುಈಗ ಜಿಲ್ಲಾ ಪಂಚಾಯತ್ ಚುನಾವಣೆ ಟಿಕೆಟ್ ಗಾಗಿ ಶಾಸಕರಿಗೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕೇಂದ್ರದಲ್ಲಿ ಕೃಷಿ ಸಚಿವರಾಗಿ ಹಸಿರು ಕ್ರಾಂತಿಯನ್ನು ಯಶಸ್ವಿಗೊಳಿಸುವ ಮೂಲಕ ಆಹಾರ ಭದ್ರತೆಗೆ ಬುನಾದಿ ಹಾಕಿದವರು ಬಾಬು ಜಗಜೀವನರಾಮ ಎಂದು ಶ್ರೀ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಸತ್ಯಣ್ಣ ಹಡಪದ ಹೇಳಿದರು.ನಗರದ ಬಾಬು ಜಗಜೀವನರಾಮ ಸಬಾಭವನದಲ್ಲಿ ತಾಲೂಕು ಆಡಳಿತ, ತಾಪಂ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇಂಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬಾಬು ಜಗಜೀವನರಾಮರವರ ೧೧೯ ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಜನಮಾನಸದಲ್ಲಿ ಬಾಬೂಜಿ ಎಂದೇ ಜನಪ್ರಿಯರಾಗಿರುವ ಬಾಬು ಜಗಜೀವನರಾಮ ಅವರು ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ನ್ಯಾಯದ ಹರಿಕಾರ. ದೇಶದ ಅತ್ಯುನ್ನತ ಸಂಸದೀಯ ಪಟುಗಳಲ್ಲಿ ಒಬ್ಬರಾಗಿದ್ದರು. ದಲಿತ ಮತ್ತು ಶೋಷಿತ ವರ್ಗಗಳ ಏಳಿಗೆಗಾಗಿ ತಮ್ಮ ಇಡಿ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದರು.ಮುಖಂಡ ಸುರೇಶ ನಡಗಡ್ಡಿ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣಿ, ಶರಣಪ್ಪ ಚಾಳಿಕಾರ ಮಾತನಾಡಿದರು.ವೇದಿಕೆಯ ಮೇಲೆ ನಗರಸಭೆ ಆಯುಕ್ತ ಶಿವಾನಂದ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಯಿದಾ ಮುಜಾವರ, ತಾಪಂ ಯೋಜನಾಧಿಕಾರಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ 2026-27ನೇ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಾತಿ ಪ್ರವೇಶ ಪತ್ರಗಳನ್ನು ಬಿಡುಗೊಳಿಸಲಾಗಿದೆ.‌ಏ.12 ರಂದು ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಪ್ರವೇಶ ಪತ್ರಗಳನ್ನು ಅಲ್ಪಸಂಖ್ಯಾತರ : Website :https://erp.dom.karnataka.gov.in/adm/Admission/studentHallticket ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.ಪ್ರತಿ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೂ ಕೂಡಾ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಮೌಲಾನಾ ಆಜಾದ ಭವನ, ಜಿಲ್ಲಾ ಪಂಚಾಯತ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ-586109, ದೂರವಾಣಿ ಸಂಖ್ಯೆ :08352-295523 ಸಂಪರ್ಕಿಸಬಹುದಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ‌ ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿಯಲ್ಲಿ 750 ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ನೀಡಲಾಗುತ್ತಿದೆ.ಅದೇ ಮಾದರಿಯಲ್ಲಿ‌ ಮುದ್ದೇಬಿಹಾಳ ತಾಲೂಕಿನ ಯರಝರಿ ಹಾಗೂ ಸಿಂದಗಿ‌ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ತಲಾ ಒಂದೊಂದು‌ ಗ್ರಾಮ್ ಒನ್ ಸೇವಾ ಕೇಂದ್ರ ಆರಂಭಿಸಲು ಆಸಕ್ತರು ಏ.15 ರೊಳಗಾಗಿ ಅರ್ಜಿ‌ ಸಲ್ಲಿಸಬಹುದಾಗಿದೆ.ಅರ್ಜಿಯನ್ನು https://sevasindhuservices.karnataka.gov.in ಮೂಲಕ ಸಲ್ಲಿಸಬಹುದಾಗಿದೆ.ಆಸಕ್ತ ಅಭ್ಯರ್ಥಿಗಳು ಕೇಳಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ವಿಜಯಪುರದಲ್ಲಿ ಮೇ ಸಾಹಿತ್ಯ ಮೇಳ ಬಳಗದಿಂದ ಸುದ್ದಿಗೋಷ್ಠಿ | ಲಡಾಯಿ ಪ್ರಕಾಶನದ ಮುಖ್ಯಸ್ಥ ಬಸವರಾಜ ಸೂಳೀಭಾವಿ ವಿವರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಇದೇ ದಿ.೧೦ ರಿಂದ ಐದು ದಿನಗಳ ಕಾಲ ಬುದ್ಧ, ಬಸವ ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳವನ್ನು ಪ್ರಥಮ ಬಾರಿಗೆ ವಿಜಯಪುರದಲ್ಲಿ ಆಯೋಜಿಸಲಾಗಿದ್ದು, ಮೇಳಕ್ಕೆ ಸಕಲ ಸಿದ್ಧತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ ಎಂದುಲಡಾಯಿ ಪ್ರಕಾಶನದ ಮುಖ್ಯಸ್ಥ, ಪ್ರಗತಿಪರ ಚಿಂತಕ ಬಸವರಾಜ ಸೂಳಿಭಾವಿ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ಹಾಗೂ ದಲಿತ, ಪ್ರಗತಿಪರ ಸಂಘಟನೆಗ ಸಹಯೋಗದಲ್ಲಿ ಈ ಮೇಳ ಆಯೋಜಿಸಲಾಗಿದ್ದು, ಸ್ವರಚಿತ ಪುಸ್ತಕಗಳೊಂದಿಗೆ ಸಾಹಿತಿಗಳ ಜಾಥಾ ಅಪೂರ್ವ ರೀತಿಯಲ್ಲಿ ನಡೆಯಲಿದ್ದು, ಸಾಹಿತಿಗಳೇ ಈ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದರು.ಏ.೧೦ ರಂದು ಮಧ್ಯಾಹ್ನ ೧೨ ಕ್ಕೆ ಡಿಎಸ್‌ಎಸ್ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ ಪುಸ್ತಕ ಮೇಳಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಅಧ್ಯಕ್ಷತೆ ವಹಿಸಲಿದ್ದಾರೆ, ಮುಂಬೈನ…

Read More

ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ಆಶಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯ ಸಭೆ ನಡೆಸಿ ೬ ವರ್ಷದ ಮಕ್ಕಳ ಸಮಗ್ರ ಸಮೀಕ್ಷೆ ನಡೆಸುವಂತೆ ಸಿಇಓ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್ ಹೇಳಿದರು.ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯಲ್ಲಿರುವ ೬ ವರ್ಷದ ಮಕ್ಕಳ ಸಂಖ್ಯೆ ಇದೆ, ಆದರೆ ಶಾಲೆಯಿಂದ ಅನೇಕ ಮಕ್ಕಳು ಹೊರಗುಳಿದಿರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ರಾಜ್ಯದಲ್ಲಿರುವ ಆರು ವರ್ಷದ ಮಕ್ಕಳ ಸಂಖ್ಯೆ ದತ್ತಾಂಶಗಳ ಸಂಗ್ರಹಣೆಯೇ ಇಲ್ಲ, ಕಳೆದ ಒಂದು ವರ್ಷದಿಂದ ಈ ನಿಖರವಾದ ದತ್ತಾಂಶ ಸಂಗ್ರಹಣೆ ಪ್ರಯತ್ನ ನಡೆಸಲಾಗುತ್ತಿದೆ, ೧೦೦ ಮಕ್ಕಳು ೬ ವರ್ಷದವರು ಇದ್ದರೆ ಅದರಲ್ಲಿ ಶಾಲೆಗೆ ಸೇರಿದ ಮಕ್ಕಳ ಸಂಖ್ಯೆ ೮೦ ಇರಬಹುದು, ಶಾಲೆಯಲ್ಲಿರುವ ಮಕ್ಕಳು ಹೊರತುಪಡಿಸಿ ೬ ವರ್ಷದ ಮಕ್ಕಳ ಸಂಖ್ಯೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸೈದ್ದಾಂತಿಕ ನೆಲೆಗಟ್ಟಿನ ಮೇಲೆ ಭಾರತೀಯ ಜನತಾ ಪಕ್ಷವನ್ನು ಕಟ್ಟಿದ ಹಿರಿಯರ ಮಾರ್ಗದರ್ಶನದಲ್ಲಿ ನಾವುಗಳು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ೪೬ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಮಾಜ ಸೇವೆಯ ಗುರಿಯನ್ನು ಹೊಂದಿಕೊಂಡು ಜನರ ಅಭ್ಯುದಯಕ್ಕಾಗಿ, ನಾಡು-ದೇಶದ ಹಿತಕ್ಕಾಗಿ ಹಗಲಿರುಳು ಶ್ರಮಿಸುವ ಹಿರಿಯರು ಹಾಗೂ ಯುವಕರ ಸಮ್ಮಿಲನದಿಂದ ಕೂಡಿದ ಕಾರ್ಯಕರ್ತರನ್ನು ಹೊಂದಿರುವ ಪಕ್ಷವೇ ಬಿಜೆಪಿ ಎಂದು ಹೇಳಿದರು. ಸಮಗ್ರ ದೃಷ್ಟಿಕೋನವನ್ನು ಮನಗಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕಾರ್ಯನಿರ್ವಹಿಸಿ, ರಾಜಕೀಯ ಕ್ಷೇತ್ರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಯುವಕರು ಮುಂದಾಗಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಪಕ್ಷವನ್ನು ಕಟ್ಟಿದ ಹಿರಿಯರನ್ನು ಸ್ಮರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಮುಖಂಡರಾದ ಮಲ್ಲಿಕಾರ್ಜುನ ದೇವರಮನಿ, ಜಗದೀಶ ಸುನಗದ, ಚಂದ್ರಶೇಖರಯ್ಯ ಗಣಕುಮಾರ, ಚಂದ್ರಶೇಖರ ಬೆಳ್ಳುಬ್ಬಿ, ಪಟ್ಟಣ ಪಂಚಾಯತ್ ಸದಸ್ಯ ಬಾಬು ಭಜಂತ್ರಿ, ಅಮೀನಪ್ಪ ತೆಗ್ಗಿ, ವಿಜಯಕುಮಾರ ಕೊಟ್ಟಗಿ, ಡೋಂಗ್ರಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಅಮಾಯಕ ಸರಾಫ ವರ್ತಕರಿಗೆ ಇತ್ತೀಚಿನ ದಿನಗಳಲ್ಲಿ ಪೊಲೀಸರ ಕಿರುಕುಳ ಹೆಚ್ಚಾಗಿದ್ದು, ಅದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಸರಾಫ್ ವರ್ತಕರ ಸಂಘದ ಸದಸ್ಯರು ಚಡಚಣ ಉಪತಹಶೀಲದಾರ ಹುಸನಪ್ಪ ಹೊಸಮನಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಸೋಮಶೇಖರ ಕಂಬಾರ ಮಾತನಾಡಿ, ಪಟ್ಟಣವು ಮಹಾರಾಷ್ಟ್ರದ ಗಡಿ ಭಾಗದಲ್ಲಿ ಇದ್ದು, ಆ ರಾಜ್ಯದ ಕಳ್ಳರು ಯಾವುದೋ ಸ್ಥಳದಲ್ಲಿ ಬಂಗಾರವನ್ನು ಕಳವು ಮಾಡಿ ಅದನ್ನು ಎಲ್ಲಿ ಮಾರಾಟ ಮಾಡಿರುತ್ತಾರೆ ಎಂಬುದು ನಮಗೆ ಗೊತ್ತಿರುವದಿಲ್ಲ. ಆದರೆ, ಯಾವುದೇ ಪೊಲೀಸರು ಕಳ್ಳರೊಂದಿಗೆ ಏಕಾ ಏಕಿ ಬಂದು ಕಳ್ಳರು ತೋರಿಸಿದ ಅಂಗಡಿಗೆ ನುಗ್ಗಿ ಅಂಗಡಿ ಮಾಲಿಕರನ್ನು ದರೋಡೆಕೋರರ ತರಹ ನೀನು ಅಂಗಡಿಯನ್ನು ಬಂದ ಮಾಡಿ ನಮ್ಮ ಜೊತೆ ಠಾಣೆಗೆ ಬಾ ಎಂದು ಕಳ್ಳನ ಜೊತೆಗೆ ಅಪರಾಧಿ ತರಹ ಅವರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಿ, ಪೊಲೀಸ್ ಠಾಣೆಯಲ್ಲಿ ಕಳ್ಳನು ಎಷ್ಟು ಬಂಗಾರ ಹೇಳುತ್ತಾನೋ ಅಷ್ಟನ್ನು ಸರಾಫ ವರ್ತಕರಿಗೆ ಬಲವಂತವಾಗಿ ಒಪ್ಪಿಸಿ ಅಷ್ಟು…

Read More

ಆರೋಪಿಗಳ ಬಂಧನಕ್ಕೆ ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಚಡಚಣ: ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫೋಟೋಗ್ರಾಫರ್ ಮೇಲೆ ನಡೆದ ಹಲ್ಲೆ ಪ್ರಕರಣವು ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ವಿವಿಧ ಛಾಯಾಚಿತ್ರಗ್ರಾಹಕರ ಸಂಘಗಳು ಖಂಡನೆ ವ್ಯಕ್ತಪಡಿಸಿವೆ.ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ (ರಿ.) ಕೂಡ ಈ ಘಟನೆಯನ್ನು ಖಂಡಿಸಿ, ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.ಫೋಟೋಗ್ರಾಫರ್‌ಗಳು ತಮ್ಮ ಜೀವನೋಪಾಯಕ್ಕಾಗಿ ದುಡಿದುಕೊಂಡು ಜೀವನಸಾಗಿಸುತ್ತಿರುವ ಈ ಸಂದರ್ಭದಲ್ಲಿ ಅವರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಅಸಹ್ಯಕರವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಫೋಟೋಗ್ರಾಫರ್‌ಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಸಂಘ ಒತ್ತಾಯಿಸಿದೆ. ಮತ್ತು ದುಷ್ಕರ್ಮಿಗಳಿಂದ ಹಾನಿಗೋಳಗಾದ ಕ್ಯಾಮರಾ ಸೇರಿದಂತೆ ಇನ್ನಿತರ ಪೀಠೋಪಕರಣಗಳು ದುಷ್ಕರ್ಮಿಗಳಿಂದ ಮರಳಿ ಕೊಡಿಸುವಂತೆ ಆಗ್ರಹಿಸಿದ್ದಾರೆ.ಈ ಪ್ರಕರಣದ ಕುರಿತು ತ್ವರಿತ ಕ್ರಮ ಕೈಗೊಳ್ಳುವಂತೆ ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷರಾದ ಸಂಜಯ ರೇವೆ ಹಾಗೂ ಎಲ್ಲ ಪದಾಧಿಕಾರಿಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ದಿ.8 ಬುಧವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆ.12.30ಗಂ. ವಿಜಯಪುರ ಜಿಲ್ಲಾ ಪಂಚಾಯತ ಕಾರ್ಯಾಲಯ ಆವರಣದಲ್ಲಿ ಪವರ ಗ್ರೀಡ್ ಸಿ.ಎಸ್.ಆರ್ ಅನುದಾನಡಿ ಆರೋಗ್ಯ ಇಲಾಖೆ ಸಲಕರಣೆಗಳು, ಶಿಕ್ಷಣ ಇಲಾಖೆಗೆ 2500 ಮೇಜುಗಳ ವಿತರಿಸಲಿದ್ದಾರೆ. ನಂತರ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣಕ್ಕೆ ಲೈಟಿಂಗ್ ವ್ಯವಸ್ಥೆ ಅಳವಡಿಕೆ, ಪ್ರವಾಸೋದ್ಯಮ ಇಲಾಖೆ ಎಸ್.ಸಿ.ಪಿ/ಟಿ..ಎಸ್.ಪಿ ಯೋಜನೆಯಡಿ ಆರು ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟಿನ್, ಜಿಲ್ಲಾ ಪಂಚಾಯಿತಿಯ ನಿರ್ಬಂಧಿತ ಅನುದಾನದಡಿ ಮೀಸಲಿಟ್ಟ 33ಲಕ್ಷ ರೂ. ಅನುದಾನದಲ್ಲಿ ವಿಕಲಚೇತನರಿಗಾಗಿ ಸಾಧನ ಸಲಕರಣೆ ಹಾಗೂ ಶಿಕ್ಷಣ ಇಲಾಖೆಯ ಅಗತ್ಯ ಸಾಮಗ್ರಿ ಖರೀದಿ ಅನುದಾನದಡಿ ರೂಪಾಯಿ 40 ಲಕ್ಷ ರೂ. ಅನುದಾನದಲ್ಲಿ 20 ಹೈಸ್ಕೂಲ್ ಗಳಿಗೆ ಸ್ಮಾರ್ಟ್ ಕ್ಲಾಸ್ ಉಪಕರಣಗಳನ್ನು ವಿತರಿಸಲಿದ್ದಾರೆ.ನಂತರ ಮ. 1.30ಗಂ. ಧನರ್ಗಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಶಾದಿಮಹಲ್ ಕಟ್ಟಡ ಉದ್ಥಾಟಿಸಲಿದ್ದಾರೆ ಎಂದು ಸಚಿವ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Read More