Author: editor.udayarashmi@gmail.com

ಸಿದ್ದಸಿರಿ ಸಕ್ಕರೆ ಕಾರ್ಖಾನೆಗೆ ಸಿಗದ ಅನುಮತಿ | ಧರಣಿಗೆ ವಿಪಕ್ಷ ನಾಯಕ ಅಶೋಕ್ ಸಾಥ್ | ದ್ವೇಷ ರಾಜಕಾರಣದ ಆರೋಪ ಕಲಬುರಗಿ: ಕಲಬುರ್ಗಿ ಜಿಲ್ಲೆಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯ ಮರು ಆರಂಭಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಸಕ್ಕರೆ ಕಾರ್ಖಾನೆ ಮಾಲೀಕರೂ ಆಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಧರಣಿ ನಡೆಸಿದ್ದಾರೆ.ಸಕ್ಕರೆ ಕಾರ್ಖಾನೆ ಆರಂಭಕ್ಕೆ ಕೋರ್ಟ್ ಆದೇಶ ನೀಡಿದರೂ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಗೆ ಕ್ರಮ ವಹಿಸದ ನಿರ್ಧಾರವನ್ನು ಬಸನಗೌಡ ಪಾಟೀಲ್ ಖಂಡಿಸಿದ್ದಾರೆ. ಮಂಗಳವಾರ ರಾತ್ರಿಯಿಂದಲೂ ಯತ್ನಾಳ್ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಬಿಟ್ಟು ತೆರಳದೇ ಧರಣಿ ನಡೆಸಿದ್ದಾರೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆ ಲೈಸನ್ಸ್ ನವೀಕರಣ ಆಗಿಲ್ಲ ಮತ್ತು ಎಥೆನಾಲ್ ಉತ್ಪಾದನೆ ವಿಚಾರದಲ್ಲಿ‌ ನಿಯಮ ಉಲ್ಲಂಘನೆಯಾಗಿದೆ ಎಂಬ ಕಾರಣ ನೀಡಿ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆ ಮುಚ್ಚುವಂತೆ ನೋಟಿಸ್ ನೀಡಿ, ಬಂದ್ ಮಾಡಿಸಿತ್ತು. ಮಂಡಳಿಯ ನಿರ್ಧಾರದ ವಿರುದ್ಧ ಹೈಕೋರ್ಟ್…

Read More

ಇಂಡಿ: ಶಾರೀರಿಕ ವ್ಯಾಯಾಮ ಮತ್ತು ಮನೋಲ್ಲಾಸಕ್ಕೆ ಕ್ರೀಡೆ ಅತ್ಯಂತ ಸಹಕಾರಿ. ಇಂದಿನ ದಿನಗಳಲ್ಲಿ ಕ್ರೀಡೆಯನ್ನು ಜೀವನದ ಭಾಗವಾಗಿ ಅಳವಡಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಹೇಳಿದರು.ಅವರು ತಾಲೂಕ ಕ್ರೀಡಾಂಗಣದಲ್ಲಿ ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ತಡವಲಗಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಕ್ರೀಡೆ ಮನುಷ್ಯನಿಗೆ ಹೊಸ ಶಕ್ತಿ, ಸ್ಪೂರ್ತಿ, ಚೈತನ್ಯ, ಜೀವನೋತ್ಸವವನ್ನು ಕೊಡುತ್ತದೆ. ಮಗುವಿನ ಬಾಲ್ಯದಲ್ಲಿ ಪ್ರಾರಂಭವಾಗುವ ಕ್ರೀಡಾ ಶಕ್ತಿಯು ವಿಶ್ವ ಸ್ಪರ್ಧೆಗಳಲ್ಲಿಭಾಗವಹಿಸುವಂತೆ ಮಾಡುತ್ತದೆ ಎಂದರು.ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಎಚ್ ಕೆ ಮಾಳಗೊಂಡ ಮಾತನಾಡಿ, ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲು ಸಾಧ್ಯ. ವಿದ್ಯಾರ್ಥಿಗಳು ಬದ್ಧತೆ ಮತ್ತು ನ್ಯಾಯಯುತವಾಗಿ ಆಡಬೇಕು. ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು.ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುದರ್ಶನ ಬೇನೂರ ಹಾಗೂ ಸದಸ್ಯ ರವಿ ಹೊನ್ನಳ್ಳಿ ಅವರು ಕ್ರೀಡಾ ಜ್ಯೋತಿ ಸ್ವೀಕರಿಸಿದರು. ದೈಹಿಕ ಶಿಕ್ಷಕ ಶರಣು ಕಂಠಿಕರ…

Read More

ಬಸವನಬಾಗೇವಾಡಿ: ಪಟ್ಟಣದ ಮೂಲನಂದೀಶ್ವರ (ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಬುಧವಾರ ಜರುಗಿದ ಭಾರ ಎತ್ತುವ ಕಸರತ್ತಿನ ಸ್ಪರ್ಧೆಯಲ್ಲಿ ಮುಳಸಾವಳಗಿಯ ೭೪ ವರ್ಷದ ವೃದ್ಧ ರಮೇಶ ಪಾಟೀಲ ಅವರು ೫೦ ಕೆಜಿಯ ಕಬ್ಬಿಣ ಹಾರೆಯನ್ನು ಮೀಸೆಯಿಂದ ಎತ್ತಿ ನೆರೆದ ಅಪಾರ ಜನಸ್ತೋಮವು ನಿಬ್ಬೆರಾಗುವಂತೆ ಮಾಡುವ ಮೂಲಕ ತಮ್ಮ ಶಕ್ತಿಯನ್ನು ಪ್ರದರ್ಶಿಸಿ ಎಲ್ಲರಿಂದ ಸೈ ಎನಿಸಿಕೊಂಡಿದ್ದು ಗಮನ ಸೆಳೆಯಿತು.

Read More

ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ದೇವರ ಜಾತ್ರೆಯ ಮೂರನೇ ದಿನ ಬುಧವಾರ ಜಾತ್ರೆಯಲ್ಲಿ ಎಲ್ಲಿ ನೋಡಿದರೂ ಅಪಾರ ಜನಜಂಗುಳಿ ಕಂಡುಬಂದಿತ್ತು. ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜನತೆ ಆಗಮಿಸಿದ್ದು ಕಂಡುಬಂದಿತ್ತು.ದೇವಸ್ಥಾನ ಮೂಲ ಜೀರ್ಣೋದ್ಧಾರಕ ದಿ.ಮಲ್ಲಪ್ಪ ಶಂಕ್ರೆಪ್ಪ ಸಿಂಹಾಸನ ಅವರ ಪ್ರತಿಮೆಯ ಆವರಣದಲ್ಲಿ ಜಾತ್ರೆಯಂಗವಾಗಿ ಬಂಜಾರ ಸಮಾಜ ಬಾಂಧವರ ಉಡುಗೆ-ತೊಡುಗೆ, ಅಲಂಕಾರಿಕ ಸಾಮಗ್ರಿಗಳ ಮಾರಾಟದ ಮಳಿಗೆಗಳು ಹೆಚ್ಚಾಗಿ ಕಂಡುಬಂದವು. ಈ ಮಳಿಗೆಯಲ್ಲಿ ಬಂಜಾರ ಸಮಾಜ ಬಾಂಧವರು ತಮಗೆ ಬೇಕಾದ ಉಡುಗೆ-ತೊಡುಗೆ, ಅಲಂಕಾರಿಕ ಸಾಮಗ್ರಿಗಳನ್ನು ಖರೀದಿಸುವಲ್ಲಿ ನಿರತರಾಗಿದ್ದರು. ಈ ಜಾತ್ರೆಯ ಮೂರನೇ ದಿನ ಪಟ್ಟಣ ಸೇರಿದಂತೆ ತಾಲೂಕು, ವಿವಿಧೆಡೆಗಳಿಂದ ಬಂಜಾರ ಬಾಂಧವರು ಪ್ರತಿವರ್ಷ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುವದು ವಿಶೇಷ.ದೇವಸ್ಥಾನದ ಹತ್ತಿರದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯಿಂದ ನಡೆಯುತ್ತಿರುವ ನಿರಂತರ ದಾಸೋಹದಲ್ಲಿ ಅಪಾರ ಪ್ರಮಾಣದ ಜನತೆ ಪ್ರಸಾದ ಸೇವಿಸಿದರು. ಜಾತ್ರೆಯ ಅಂಗಡಿ-ಮುಂಗಟ್ಟುಗಳಲ್ಲಿ, ವಿವಿಧ ಬಗೆಯ ತೂಗುತೊಟ್ಟಿಲು ಇರುವ ಜಾಗೆಯಲ್ಲಿ ಅಪಾರ ಪ್ರಮಾಣದ ಜನರು ಕಂಡುಬಂದರು. ಜಾತ್ರಾಮಹೋತ್ಸವದಲ್ಲಿ ಪಾಲಕರಿಂದ…

Read More

– ಬಸವರಾಜ ನಂದಿಹಾಳಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ದೇವರ ಜಾತ್ರಾಮಹೋತ್ಸವದಂಗವಾಗಿ ಮೂರನೇ ದಿನವಾದ ಬುಧವಾರ ಬಸವೇಶ್ವರ ದೇವಸ್ಥಾನದ ಸಿಬಿಎಸ್ಸಿ ಶಾಲಾ ಆವರಣದಲ್ಲಿ ಜರುಗಿದ ವಿವಿಧ ಭಾರ ಎತ್ತುವ ಕಸರತ್ತಿನ ಸ್ಪರ್ಧೆಗಳು ಜನರ ಮೈಮನ ರೋಮಾಂಚನಗೊಳಿಸಿದವು.ಈ ಸಲ ಜಾತ್ರಾ ಉತ್ಸವ ಸಮಿತಿಯು ಭಾರ ಎತ್ತುವ ಸ್ಪರ್ಧಾ ಕಣವನ್ನು ಎತ್ತರ ಮಟ್ಟದಲ್ಲಿ ನಿರ್ಮಾಣ ಮಾಡಿದ್ದರಿಂದಾಗಿ ಎಲ್ಲ ಜನರಿಗೆ ಫ್ವೆಲ್ವಾನರು ಭಾರ ಎತ್ತುವ ದೃಶ್ಯವನ್ನು ಕಾಣಬಹುದಿತ್ತು. ೯೫ ಕೆಜಿ, ೧ ಕ್ವಿಂಟಾಲ್, ೧ ಕ್ವಿಂಟಾಲಗಿಂತಲೂ ಹೆಚ್ಚಿನ ಭಾರವಾದ ಗುಂಡುಗಲ್ಲು, ಸಂಗ್ರಾಣಿ ಕಲ್ಲು ಎತ್ತುವಾಗ ಜನರು ಸುಡು ಬಿಸಿಲನ್ನು ಲೆಕ್ಕಿಸದೇ ಕೇಕೇ ಹಾಕುವ ಜೊತೆಗೆ ವಾವ್ಹ್ ವಾವ್ಹ್ ಭೇಷ್ ಎಂದು ಉದ್ಗಾರ ತೆಗೆಯುವ ಮೂಲಕ ಭಾರ ಎತ್ತುವ ಫ್ವೆಲ್ವಾನರಿಗೆ ಹುರಿದುಂಬಿಸುತ್ತಿದ್ದರು. ಇದರಿಂದಾಗಿ ಫ್ವೆಲ್ವಾನರು ಜನರು ನಿರಾಶೆಯಾಗದಂತೆ ತಮ್ಮ ಎಲ್ಲ ಶಕ್ತಿಯನ್ನು ಉಪಯೋಗಿಸಿ ಭಾರ ಎತ್ತುವುದು ಕಂಡುಬಂದಿತ್ತು. ಭಾರ ಎತ್ತುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಸವೇಶ್ವರ ಜಾತ್ರಾ ಉತ್ಸವ ಸಮಿತಿಯಿಂದ ಬೆಳ್ಳಿ ಕಡಗ ನೀಡಿ ಸನ್ಮಾನಿಸಲಾಯಿತು.ಈ ಸ್ಪರ್ಧೆಯಲ್ಲಿ ೨.೧೫…

Read More

ಸಿಂದಗಿ: ಬದುಕಿನಲ್ಲಿ ಧೈರ್ಯ ಮತ್ತು ಸಾಹಸಿಯ ಗುಣ ಇರುವ ವ್ಯಕ್ತಿ ಒಂದಲ್ಲ ಒಂದು ದಿನ ಸಾಧಕನಾಗುತ್ತಾನೆ ಎಂದು ಯೋಗ ಗುರು ನಿರಂಜನ ಶ್ರೀಗಳು ಹೇಳಿದರು.ಪಟ್ಟಣದ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪಪೂ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡ ೨೦೨೪-೨೫ನೆಯ ಸಾಲಿನ ಪಠ್ಯತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ನಾವು ನಿತ್ಯ ಧನಾತ್ಮಕ ಚಿಂತನೆಗಳನ್ನು ಮಾಡಬೇಕು. ಋಣಾತ್ಮಕ ವಿಚಾರಗಳಿಂದ ದೂರವಿರಬೇಕು. ಸಾಧಿಸುವವನಿಗೆ ಬಡತನ ಮುಖ್ಯವಲ್ಲ. ಆತ್ಮಸ್ಥೈರ್ಯ, ಸೃಜನಶೀಲತೆ, ಮುಂದಾಲೋಚನೆಯ ಗುಣಗಳು ಮೂಲವಾಗುತ್ತದೆ. ಎಲ್ಲ ಕ್ಷೇತ್ರಗಳ ಜ್ಞಾನ ಇಂದು ಅತ್ಯಂತ ಅವಶ್ಯಕವಾಗಿದೆ. ಕೇವಲ ನಾವು ಪುಸ್ತಕದ ಹುಳಗಳಾಗದೇ ಸರ್ವಜ್ಞನ ತರಹ ಎಲ್ಲ ಮುಜುಲುಗಳನ್ನು ಅಧ್ಯಯನ ಮಾಡುವಂಥವರಾಗಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿ.ಎಂ.ಮನಗೂಳಿ ಕಲಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಮಾತನಾಡಿ, ವಿದ್ಯಾರ್ಥಿಗಳ ಬದುಕು ಸುಂದರವಾಗಬೇಕಾದರೆ ಜ್ಞಾನದ ಹೆಚ್ಚಿನ ಅವಶ್ಯಕತೆ ಇದೆ. ವಿದ್ಯಾರ್ಥಿ ಜೀವನ ಒಮ್ಮೆ ಕಳೆದು ಹೋದರೆ…

Read More

ಸಿಂದಗಿ ಗೆಳೆಯರ ಬಳಗ & ಪತ್ರಕರ್ತರ ಸಂಘದಿಂದ ಡಾ.ರವಿ ಗೋಲಾ ಮತ್ತು ಬಸವರಾಜ ಕಾಂಬಳೆ ಗೆ ಸನ್ಮಾನ ಸಿಂದಗಿ: ಇಂದಿನ ವೈಜ್ಞಾನಿಕ ಯುಗದಲ್ಲಿ ನಾವು ಸಂಬಂಧಗಳಿಗೆ ಬೆಲೆ ಕೊಡದೇ ಹೋಗುತ್ತಿದ್ದೇವೆ. ಇದು ನಿಜಕ್ಕೂ ಆತಂಕಕಾರಿ ವಿಚಾರ ಎಂದು ಶಾಸಕ ಅಶೋಶ ಮನಗೂಳಿ ಹೇಳಿದರು.ಅವರು ಪಟ್ಟಣದ ಸಿಂದಗಿ ಗೆಳೆಯರ ಬಳಗ ಮತ್ತು ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಸನ್ಮಾನ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವ್ಯಕ್ತಿ ಸಮಾಜಕ್ಕೆ ತನ್ನದೇ ಆಗಿರುವಂತ ಉತ್ತಮ ಕಾರ್ಯಗಳನ್ನು ನೀಡುವಂಥವನಾಗಬೇಕು. ನಾವು ಸಮಾಜವನ್ನು ಪ್ರೀತಿಸಿದಾಗ ಮಾತ್ರ ಸಮಾಜ ನಮ್ಮನ್ನು ಪ್ರೀತಿಸುತ್ತದೆ. ಸಮಾಜ ಮುಖಿಯಾಗಿರುವ ಚಿಂತನೆಗಳನ್ನು ಸದಾ ನಾವು ರೂಡಿಸಿಕೊಳ್ಳಬೇಕು ಎಂದು ಹೇಳಿದರು.ಈ ವೇಳೆ ಕ್ರಿಕೆಟ್ ಕ್ಷೇತ್ರದಲ್ಲಿ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಿದ ಡಾ.ರವಿ ಗೋಲಾ ಮತ್ತು ಸಿಂದಗಿ ನಗರ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಕಾಂಬಳೆ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆ ಜಿ.ಪಿ.ಪೋರವಾಲ ಮಹಾವಿದ್ಯಾಲಯದ ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಸನ್ಮಾನ ಸ್ವೀಕರಿಸಿ ಮಾತನಾಡಿ, ಗೆಳೆತನವೇ…

Read More

ಸಿಂದಗಿ: ವಿಧಾನ ಸಭಾ ಕ್ಷೇತ್ರದ ಪುರಸಭೆಗೆ ಸನ್೨೦೨೧-೨೨ನೆಯ ಸಾಲಿನ ವಾಜಪೇಯಿ ನಗರದ ವಸತಿ ಯೋಜನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ವಸತಿ ನಗರ ಯೋಜನೆಯ ಅಡಿಯಲ್ಲಿನ ೭೫೦ ಮನೆಗಳ ಫಲಾನುಭವಿಗಳ ಅನುದಾನವನ್ನು ತೆಡೆಹಿಡಿಯಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.ಹೆಚ್ಚುವರಿ ಗುರಿಗೆ ಫಲಾನುಭವಿಗಳನ್ನು ಆಶ್ರಯ ಸಮಿತಿಯ ಆ.೦೭, ೨೦೨೩ರಂದು ಠರಾವು ಸಂಖ್ಯೆ ೦೧ರಲ್ಲಿ ಸಾಮಾನ್ಯ ಹಾಗೂ ಅಲ್ಪ ಸಂಖ್ಯಾತರು ಸೇರಿ ೫೬೯ ಹಾಗೂ ಪ.ಜಾತಿ ಮತ್ತು ಪ.ಪಂಗಡ ೧೮೧ ಫಲಾನುಭವಿಗಳನ್ನು ಆಯ್ಕೆ ಮಾಡಿರುತ್ತಾರೆ. ಆದರೆ ಡಾ.ಬಿ.ಆರ್.ಅಂಬೇಡ್ಕರ್ ನಗರ ವಸತಿ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿ ಬದಲಾಗಿ ಇತರ ಸಾಮಾನ್ಯ ವರ್ಗದ ಫಲಾನುಭವಿಗಳನ್ನು ಆಯ್ಕೆ ಮಾಡಿರುತ್ತಾರೆ ಎಂದು ನೀಡಿರುವ ದೂರಿನನ್ವಯ ನಗರ ಮಟ್ಟದ ತಾಂತ್ರಿಕ ಕೋಶದ ಸಿಬ್ಬಂದಿ ತಂಡ ರಚಿಸಿ ತನಿಖೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.ಈ ತನಿಖಾ ತಂಡವು ಪರಿಶೀಲನೆ ಮಾಡಿ ವರದಿ ಸಲ್ಲಿಸಿದ್ದು, ಸದರಿ ವರದಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಗರ…

Read More

ವಿಜಯಪುರ: ಬಿಜೆಪಿ ಸದಸ್ಯತ್ವ ಅಭಿಯಾನ-೨೦೨೪ ಸೆ.೨ ರಿಂದ ಆರಂಭವಾಗಲಿದ್ದು, ಪ್ರತಿ ಬೂತ್‌ಗೆ ೩೦೦ ರಂತೆ ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಪಕ್ಷದ ಸದಸ್ಯರನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಪಿ.ರಾಜೀವ ಕರೆ ನೀಡಿದರು.ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ-೨೦೨೪ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸದಸ್ಯತ್ವ ಅಭಿಯಾನ ಪ್ರಮುಖ ಘಟ್ಟ. ಕೇಂದ್ರ ಸಚಿವರಿಂದ ಹಿಡಿದು ಬೂತ ಮಟ್ಟದ ಕಾರ್ಯಕರ್ತರು ಈ ಸದಸ್ಯತ್ವ ಅಭಿಯಾನದಲ್ಲಿ ಅತ್ಯಂತ ಕ್ರೀಯಾಶೀಲವಾಗಿ ಪಾಲ್ಗೊಂಡು ತಮ್ಮ ತಮ್ಮ ಬೂತ ಮಟ್ಟದಲ್ಲಿ ೩೦೦ ಹೊಸ ಸದಸ್ಯರನ್ನಾಗಿ ಮಾಡುವಂತೆ ತಿಳಿಸಿದರು.ಈ ಬಾರಿಯ ಸದಸ್ಯತ್ವ ಅಭಿಯಾನ ಸ್ವಲ್ಪ ವಿಭಿನ್ನವಾಗಿದ್ದು, ಕೇವಲ ಮಿಸ್ ಕಾಲ ನೀಡಿದರೆ ಸದಸ್ಯರಾಗಲ್ಲ. ಮೊಬೈಲ್ ಬರುವ ಒಟಿಪಿ ಬಳಸಿಕೊಂಡು ಐಡಿ ಕಾರ್ಡ ಆದ ನಂತರವೇ ಸದಸ್ಯತ್ವ ಅಭಿಯಾನ ಪೂರ್ತಿಯಾದಂತೆ ಅದನ್ನು ಕಾರ್ಯಕರ್ತರು ಗಮನಿಸಬೇಕು ಎಂದರು.ಅಲ್ಲದೇ ಸದಸ್ಯತ್ವ ಅಭಿಯಾನದಲ್ಲಿ ಪ್ರತಿ ಮತಕ್ಷೇತ್ರ-ಮಂಡಲದಲ್ಲಿರುವ ಬರುವ ಮಾಜಿ ಸಚಿವರು…

Read More

ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ೩೯ ಜನರಿಗೆ ಸುಜ್ಞಾನ ಶಿಷ್ಯ ವೇತನ ಮಂಜುರಾತಿ ಪತ್ರ ವಿತರಣೆ ಇಂಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು, ಶಿಕ್ಷಣಕ್ಕೆ ಒತ್ತು ಕೊಡುತ್ತದೆ, ಈ ಯೋಜನೆಯಿಂದ ಫಲ ಪಡೆದ ತಾವೆಲ್ಲರೂ ಮುಂದೆ ಸಮಾಜಕ್ಕೆ ಒಳ್ಳೆಯ ಕಾರ್ಯಕ್ರಮಗಳನ್ನು ನೀಡಬೇಕು ಮತ್ತು ಉನ್ನತ ಅಧಿಕಾರಿ ಆಗಬೇಕೆಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಆಶಿಸಿದರುಪಟ್ಟಣದ ಕ್ಷೇತ್ರಶಿಕ್ಷಣಾಧಿಕಾರಿಗಳ ಗುರುಭವನ ಸಬಾಭವನದಲ್ಲಿ ಇಂಡಿ ತಾಲೂಕಿನ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಮಂಜೂರಾತಿಯಾಗಿರುವ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯಲ್ಲಿ ಸದಸ್ಯರಾಗಿರುವ ಮತ್ತು ವೃತ್ತಿಪರ ಓದುತ್ತಿರುವ ಐ.ಟಿ.ಐ, ನರ್ಸರಿ,ಡಿಪ್ಲೋಮಾ ಸೇರಿದಂತೆ ಇನ್ನಿತರ ವೃತ್ತಿ ಪರ ಕೋರ್ಸು ಮಾಡುತ್ತಿರುವ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ, ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ್ ರೈ, ತಾಲೂಕಿನ ಯೋಜನಾಧಿಕಾರಿ ನಟರಾಜ ಐ,ಒ, ಮೇಲ್ವಿಚಾರಕಿ ಸರಸ್ವತಿ ಮಾತನಾಡಿದರು.ಹಣಕಾಸು ಪ್ರಬಂದಕರು, ತಾಲೂಕು ನೂಡಲ್ ಅಧಿಕಾರಿ, ಸೇವಪ್ರತಿನಿಧಿಗಳು, ೩೯ ಜನ ಸುಜ್ಞಾನ ನಿಧಿ ಶಿಷ್ಯವೇತನ ಪಡೆಯುವ ವಿದ್ಯಾರ್ಥಿಗಳು ಮತ್ತು ಪಾಲಕರು…

Read More