Author: editor.udayarashmi@gmail.com

ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರತಿ ವರ್ಷದಂತೆ ಮೇಜರ್ ಧ್ಯಾನಚಂದರವರ ಹುಟ್ಟು ಹಬ್ಬದ ಅಂಗವಾಗಿ ಆಗಸ್ಟ್ ೨೯ರಂದು ಬೆಳಿಗ್ಗೆ ೮ ಗಂಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಕ್ರೀಡಾಪಟುಗಳು, ಕ್ರೀಡಾ ಪ್ರೋತ್ಸಾಹಕರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Read More

ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹರು https://swdservices.karnataka.gov.in/PrizeMoneyClientApp/ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್ ಅಥವಾ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಚಡಚಣ: ತಾಲೂಕಿನ ಸಮೀಪದ ಧುಮಕನಾಳ ಗ್ರಾಮದಲ್ಲಿ ಜರುಗಿದ ಲಾಯಗಂಗಾ ದೇವಿಯ ಜಾತ್ರೆಯಲ್ಲಿ ಧುಮಕನಾಳ ಹಾಗೂ ಹಡಲಸಂಗ ಲಾಯಗಂಗಾ ದೇವಿಯ ಭೇಟಿ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ನಿಮಿತ್ತವಾಗಿ ಗ್ರಾಮದ ಲಾಯಗಂಗಾದೇವಿ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆದ ಶ್ರೀ ಭೀರಲಿಂಗೇಶ್ವರ ಹಾಗೂ ಹಡಲಸಂಗ ಗ್ರಾಮದಲಾಯಗಂಗಾದೇವಿ ಪಲ್ಲಕ್ಕಿ ಭೇಟಿ ನಡೆಯಿತು. ಮಧ್ಯಾಹ್ನ 2:30 ಜರುಗಿದ ಈ ಭವ್ಯ ಭೇಟಿಯಲ್ಲಿ ಪಲ್ಲಕ್ಕಿಯ ಮೇಲೆ ನೂರಾರು ಭಕ್ತರು ಭಕ್ತಿಯ ಭಂಡಾರವನ್ನು ಚೆಲ್ಲಿ ಭಕ್ತಿಭಾವದಿಂದ ನಮನ ಸಲ್ಲಿಸಿದರು. ಗ್ರಾಮವು ಸುತ್ತಮುತ್ತಲಿನಗ್ರಾಮಗಳಿಂದ ಜಮಾಯಿಸಿದ ಭಾರಿ ಜನಸ್ತೋಮದಿಂದ ಕಂಗೊಳಿಸುವಂತ್ತಿತ್ತು. ಬೇಧ ಭಾವವಿಲ್ಲದೆ ಸಕಲಸದ್ಭಕ್ತರು, ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಮಸ್ಥರು ಜಾತ್ರೆಯಲ್ಲಿಭಾಗವಹಿಸಿ ಭೀರಲಿಂಗೇಶ್ವರ ಹಾಗೂ ಲಾಯಗಂಗಾ ದೇವರಿಗೆ ನೈವೇದ್ಯ, ತೆಂಗಿನಕಾಯಿ ಒಡೆದು ವಿಶೇಷ ಪೂಜೆಯನ್ನು ಸಲ್ಲಿಸಿ ತಾಯಿಯ ಕೃಪಾಶಿರ್ವಾದಕ್ಕೆ ಪಾತ್ರರಾದರು. ಈ ಸಂದರ್ಭದಲ್ಲಿ ಸೆರಿದ್ದ ನೂರಾರು ಜನರ ಜನಸ್ತೋಮದಿಂದ ಮೈಮನತಣಿಸುವಂತಿತ್ತು.ಈ ವೇಳೆಯಲ್ಲಿ ಗ್ರಾಮದ ಅತ್ಯುತ್ತಮ ಹಿನ್ನೆಲೆ ಗಾಯಕಭೈರುಬಾ ತಾಟೆ ಮತ್ತು ಸಂಗಡಿಗರಿಂದ ಡೊಳ್ಳಿನ ಪದಗಳು ಜರುಗಿದವು.ಈ ವೇಳೆಯಲ್ಲಿ…

Read More

ವೆಚ್ಚ ಹಂಚಿಕೆ ರೈಲ್ವೆ ಯೋಜನೆ | ಪ್ರಗತಿ ಪರಿಶೀಲಿಸಿದ ಸಚಿವ ಡಾ.ಎಂ.ಬಿ.ಪಾಟೀಲ ಬೆಂಗಳೂರು: ರೈಲ್ವೆ ಜತೆ ವೆಚ್ಚ ಹಂಚಿಕೆ ಆಧಾರದಲ್ಲಿ ಕೈಗೊಂಡಿರುವ ರಾಜ್ಯದ ಗದಗ- ವಾಡಿ, ಧಾರವಾಡ-ಬೆಳಗಾವಿ, ತುಮಕೂರು- ದಾವಣಗೆರೆ, ತುಮಕೂರು-ರಾಯದುರ್ಗ ಸೇರಿದಂತೆ ಹಲವಾರು ರೈಲ್ವೆ ಯೋಜನೆಗಳಿಗೆ ಎದುರಾಗಿರುವ ಭೂಸ್ವಾಧೀನ ಅಡೆತಡೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಮತ್ತು ಯೋಜನೆಗಳ ತ್ವರಿತ ಕಾಮಗಾರಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಮಂಗಳವಾರ ಇಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಮಹತ್ತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಈ ಸಭೆಯಲ್ಲಿ ಅವರು ಸಚಿವರಾದ ಪ್ರಿಯಾಂಕ್ ಖರ್ಗೆ, ದಾವಣಗೆರೆ, ಕಲ್ಬುರ್ಗಿ ಮತ್ತು ಹಾವೇರಿ ಜಿಲ್ಲಾಧಿಕಾರಿಗಳು, ಕೃಷ್ಣಾ ಭಾಗ್ಯ ಜಲನಿಗಮದ ಉನ್ನತಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ತಂತಮ್ಮ ಜಿಲ್ಲೆಯಲ್ಲಿ ಹಾದು ಹೋಗುವ ರೈಲ್ವೆ ಯೋಜನೆಗಳಿಗೆ ತೊಡಕಾಗಿರುವ ಸಮಸ್ಯೆಗಳನ್ನು ಕ್ಷಿಪ್ರವಾಗಿ ಬಗೆಹರಿಸಿ, ಸಹಕರಿಸುವಂತೆ ಮನವಿ ಮಾಡಿದರು. ಜತೆಗೆ, ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ಅವರೊಂದಿಗೆ ಸದ್ಯದಲ್ಲೇ…

Read More

ವಿಜಯಪುರ: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಮೂಲಕ ಮೇಜರ್ ಧ್ಯಾನ ಚಂದ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ ೨೯ ರಂದು ರಾಷ್ಟ್ರೀಯ ಕ್ರೀಡಾ ದಿನಾಂಚರಣೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೮ ಗಂಟೆಗೆ ಆಚರಿಸಲಾಗುತ್ತಿದೆ. ಆದ್ದರಿಂದ ಎಲ್ಲಾ ಕ್ರೀಡಾಪಟುಗಳು, ಕ್ರೀಡಾ ಪ್ರೋತ್ಸಾಹಕರು ಹಾಗೂ ಸಾರ್ವಜನಿಕರು ಕ್ರೀಡಾ ದಿನಾಚರಣೆಯಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪಿಒಪಿ ಗಣೇಶ ವಿಗ್ರಹ ಬಳಕೆ ಮಾಡದಂತೆ ಸೂಚನೆ ವಿಜಯಪುರ: ಸರ್ಕಾರ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಹಾಗೂ ರಾಸಾಯನಿಕ ಬಣ್ಣ ಗಣಪತಿ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ಮತ್ತು ಯಾವುದೇ ಜಲಮೂಲಗಳಲ್ಲಿ ನದಿ, ಕಾಲುವೆ, ಭಾವಿಗಳಲ್ಲಿ ವಿಸರ್ಜಿಸುವುದು ಸಂಪೂರ್ಣವಾಗಿ ನಿಷೇಧಿಸಿದೆ.ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಕೃತಕ ಹೊಂಡಗಳನ್ನು ಹಾಗೂ ಸಂಚಾರ ಗಣೇಶ ವಿಸರ್ಜನಾ ವಾಹನಗಳ ಸೇವೆಯನ್ನು ಒದಗಿಸಲಾಗುತ್ತಿದ್ದು, ಕೇವಲ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಮಾತ್ರ ಬಳಸುವಂತೆ ಮನವಿ ಮಾಡಿಕೊಳ್ಳಲಾಗಿದೆ.ನಗರದ ಸಾರ್ವಜನಿಕರು ಯಾವುದೇ ವಿಗ್ರಹಗಳನ್ನು ನದಿ-ಕಾಲುವೆ-ಭಾವಿಗಳಲ್ಲಿ ವಿಸರ್ಜಿಸದೇ, ಪಾಲಿಕೆ ವತಿಯಿಂದ ನಿರ್ಮಿಸಲಾದ ಕೃತಕ ಹೊಂಡಗಳು ಮತ್ತು ಸಂಚಾರಿ ಗಣೇಶ ವಿಸರ್ಜನಾ ವಾಹನಗಳಲ್ಲಿ ಗಣೇಸ ವಿಸರ್ಜನೆ ಮಾಡಬೇಕು. ಒಂದು ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿನಿಂದ ಹಾಗೂ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳನ್ನು ತಯಾರಿಸುವುದು ಕಂಡು ಬಂದಲ್ಲಿ ಕಾನೂನುರಿತ್ಯ ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಎಲ್ಲ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾ.ಪಂ ಅಧ್ಯಕ್ಷರು, ಸರ್ವಸದಸ್ಯರು ಶ್ರಮ ವಹಿಸಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದ್ದಾರೆ.ಕೊಲ್ಹಾರ ತಾಲ್ಲೂಕಿನ ಕೂಡಗಿ, ಗ್ರಾಮ ಪಂಚಾಯಿತಿಗೆ ಆ.೨೮ರಂದು ಭೇಟಿ ನೀಡಿ ಎನ್‌ಟಿಪಿಸಿ ಯೋಜನೆಯಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೂಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎನ್‌ಟಿಪಿಸಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಬೇಕು. ಸರ್ಕಾರಿ ಶಾಲಾ ಕಟ್ಟಡ, ಚರಂಡಿ ನಿರ್ಮಾಣ, ಸಿ.ಸಿ.ರಸ್ತೆ, ಹೈಟೆಕ್ ಶೌಚಾಲಯ, ಆಟದ ಮೈದಾನ ಕಾಮಗಾರಿಗಳು ಸೇರಿದಂತೆ ಎಲ್ಲ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಹಾಗೂ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸರ್ವಸದಸ್ಯರು ಹೆಚ್ಚಿನ ಗಮನಹರಿಸುವಂತೆ ಅವರು ಹೇಳಿದರು.ಕೂಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡಗಿ ತಾಂಡಾದ ವಾರ್ಡ್ ನಂ ೫ ರಲ್ಲಿರುವ ಸರ್ಕಾರಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ,…

Read More

ವಿಜಯಪುರ: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತದ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ್ ಘೋಷ ಅವರು ಆಗಸ್ಟ್ ೩೦ ಹಾಗೂ ೩೧ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆ.೩೦ರಂದು ವಿಜಯಪುರಕ್ಕೆ ಆಗಮಿಸಿ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳಿಗೆ ಭೇಟಿ ನೀಡುವರು. ಶಾಲೆ, ಕಾಲೇಜು ಹಾಗೂ ಐಟಿಐಗಳಿಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯಲ್ಲಿನ ಹಾಸ್ಟೇಲ್‌ಗಳು, ಆಸ್ಪತ್ರೆಗಳಿಗೆ, ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರ ಕಚೇರಿಗಳಿಗೆ ಭೇಟಿ ನೀಡಿ, ನಂತರ ಮುಂಗಾರು ಋತುವಿನ ವಿಪತ್ತು ನಿರ್ವಹಣಾ ಯೋಜನೆಯ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.ಆ.೩೧ರಂದು ಬೆಳಿಗ್ಗೆ ೧೦-೩೦ ರಿಂದ ೧-೩೦ರವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿಜಯಪುರದಿಂದ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ನಗರದ ಬಿ. ಎಲ್. ಡಿ. ಈ ಡೀಮ್ಡ್ ವಿಶ್ವವಿದ್ಯಾನಿಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಮಕ್ಕಳ ವೈದ್ಯ ಡಾ. ಎಂ. ಎಂ. ಪಾಟೀಲ ಮತ್ತು ಅವರ ತಂಡ ಬರೆದ “ತೊಳೆಯದ ದ್ರಾಕ್ಷಿ ಸೇವನೆಯಿಂದ ಉಂಟಾದ ವಿಷಪ್ರಭಾವ” ಎಂಬ ಮಹತ್ವದ ಲೇಖನ ವಿಶ್ವದ ಮಟ್ಟದಲ್ಲಿ ಪ್ರಸಿದ್ಧವಾದ ಬ್ರಿಟಿಷ್ ಮೆಡಿಕಲ್ ಜರ್ನಲ್ ಗ್ಲೋಬಲ್ ಹೆಲ್ತ್ ಕೇಸ್ ರಿಪೋರ್ಟ್ ನಲ್ಲಿ ಪ್ರಕಟವಾಗಿದೆ.ಈ ಲೇಖನವು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಒಂದು ಮುಖ್ಯ ಸಮಸ್ಯೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬೆಳಕಿಗೆ ತಂದಿದೆ. ದ್ರಾಕ್ಷಿಯನ್ನು ತಿನ್ನುವ ಮುನ್ನ ಅದನ್ನು ಸ್ವಚ್ಛಗೊಳಿಸದೆ ಇರುವುದರಿಂದ ಉಂಟಾಗುವ ಸಮಸ್ಯೆಗಳು ವಿಶೇಷವಾಗಿ ರಾಸಾಯನಿಕ ಕೀಟನಾಶಕಗಳಿಂದ ಎದುರಾಗುವ ಅಪಾಯಗಳ ಕುರಿತು ಈ ಲೇಖನ ಸಂಪೂರ್ಣ ಮಾಹಿತಿ ಹೊಂದಿದೆ. ಗ್ರಾಮೀಣ ಭಾಗದ ಮಕ್ಕಳು ಎದುರಿಸುವ ಹಾನಿಕಾರ ಸಮಸ್ಯೆಗಳಿಗೆ ಒಳಗಾಗುವುದನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತು ಕೂಡ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಕ್ಷಣದ ಕೊರತೆ ಎಷ್ಟು ಗಂಭೀರವಾಗಿದೆ ಎಂಬುದನ್ನು ಈ ಲೇಖನದಲ್ಲಿ ಎತ್ತಿ…

Read More

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಲಬುರಗಿ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಆಗಷ್ಟ 25 ರಂದು ರವಿವಾರ ಜಮಖಂಡಿಯ ಬಿ.ಎಲ್.ಡಿ.ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ಕಲಬುರಗಿ ವಲಯ ಮಟ್ಟದ ಚೆಸ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಲಾವಣ್ಯ ತೊಗರಿ, ದೀಪ್ತಿ ಮಂಗಳಗಿ, ಗೀತಾಂಜಲಿ ಮೂದನೂರ, ಸಾನಿಕಾ ದೇಶಪಾಂಡೆ ದ್ವಿತಿಯ ಸ್ಥಾನ ಗಳಸಿದ್ದಾರೆ.ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಚಾರ್ಯರಾದ ಡಾ. ಸಂಜಯ ಕಡ್ಲಿಮಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Read More