Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ್ ನರ್ಸಿಂಗ್ ಕಾಲೇಜಿನಲ್ಲಿ ಆಗಷ್ಟ 30 ಮತ್ತು ಆಗಷ್ಟ 31 ರಂದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿಧ್ಯಾಲಯದ ಕಲಬುರಗಿ ವಲಯ ಮಟ್ಟದ ಬಾಲಕರ ಕಬ್ಬಡ್ಡಿ ಪಂದ್ಯಾವಳಿ ನಡೆಯಲಿದೆ.ಆಗಷ್ಟ 30 ರಂದು ಬೆಳಿಗ್ಗೆ 9.30 ಗಂಟೆಗೆ ಪ್ರಾರಂಭವಾಗಲಿರುವ ಪಂದ್ಯಾವಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಚಾಲನೆ ನೀಡಲಿದ್ದಾರೆ.ಆಗಷ್ಟ್ 31 ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ ಬಹುಮಾನ ವಿತರಿಸಲಿದ್ದಾರೆ.ರಾಜೀವ್ ಗಾಂಧಿ ಆರೋಗ್ಯ ವಿಶ್ವವಿಧ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾಲೇಜುಗಳ ಕಬಡ್ಡಿ ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೋಳ್ಳಲಿವೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ್ ನರ್ಸಿಂಗ್ ಕಾಲೇಜಿನಲ್ಲಿ ಆಗಷ್ಟ 30 ಮತ್ತು ಆಗಷ್ಟ 31 ರಂದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿಧ್ಯಾಲಯದ ಕಲಬುರಗಿ ವಲಯ ಮಟ್ಟದ ಬಾಲಕರ ಕಬ್ಬಡ್ಡಿ ಪಂದ್ಯಾವಳಿ ನಡೆಯಲಿದೆ.ಆಗಷ್ಟ 30 ರಂದು ಬೆಳಿಗ್ಗೆ 9.30 ಗಂಟೆಗೆ ಪ್ರಾರಂಭವಾಗಲಿರುವ ಪಂದ್ಯಾವಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಚಾಲನೆ ನೀಡಲಿದ್ದಾರೆ.ಆಗಷ್ಟ್ 31 ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ ಬಹುಮಾನ ವಿತರಿಸಲಿದ್ದಾರೆ.ರಾಜೀವ್ ಗಾಂಧಿ ಆರೋಗ್ಯ ವಿಶ್ವವಿಧ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾಲೇಜುಗಳ ಕಬಡ್ಡಿ ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೋಳ್ಳಲಿವೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು ಕಲಬುರಗಿಯಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಲಬುರಗಿ ವಲಯ ಮಟ್ಟದ ಮಹಿಳಾ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಆಗಷ್ಟ 27 ರಂದು ಮಂಗಳವಾರ ಕಲಬುರಗಿಯ ಟಿಪ್ಪು ಸುಲ್ತಾನ ಯುನಾನಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರಾದ ಪೃಥ್ವಿ ಸಿದರೆಡ್ಡಿ, ಶ್ರೇಯಾ ರೆಡ್ಡಿ, ಅರ್ಪಿತಾ ದೇಶಪಾಂಡೆ ದ್ವಿತಿಯ ಸ್ಥಾನ ಗಳಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ, ದೈಹಿಕ ನಿರ್ದೇಶಕ ಹಣಮಂತ ಪವಾರ, ಬೋಧಕ, ಬೋಧಕರ ಹೊರತಾದ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಆಗಷ್ಟ 27 ರಂದು ಮಂಗಳವಾರ ಕಲಬುರಗಿಯಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕಲಬುರಗಿ ವಲಯ ಮಟ್ಟದ ಪುರುಷರ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ತೃತಿಯ ಸ್ಥಾನ ಗಳಿಸಿದ್ದಾರೆ.ಕಲಬುರಗಿಯ ಸುಲ್ತಾನ ಯುನಾನಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ ಖುಣೆ, ಸುಮಿತ ದಾಯಗೊಂಡೆ, ಅಜಯಸಿಂಗ್ ರಾಠೋಡ ತೃತಿಯ ಸ್ಥಾನ ಗಳಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ.ಸಂಜಯ ಕಡ್ಲಿಮಟ್ಟಿ, ದೈಹಿಕ ನಿರ್ದೇಶಕ ಹಣಮಂತ ಪವಾರ, ಬೋಧಕ, ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯಪುರ: ನಗರದ ದರ್ಬಾರ ಆಟದ ಮೈದಾನದಲ್ಲಿ ಬುಧವಾರದಂದು ನಡೆದ ಸಿದ್ದೇಶ್ವರ ‘ಬಿ’ ವಲಯ ಮಟ್ಟದ ಪ್ರೌಢ ಶಾಲಾ ಗುಂಪು ಆಟಗಳ ಕ್ರೀಡಾಕೂಟದಲ್ಲಿ ಬಂಜಾರಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷರಾದ ಕೆ.ಜಿ.ರಾಠೋಡ, ಕಾರ್ಯದರ್ಶಿಗಳಾದ ರಾಜಶೇಖರ ಚವ್ಹಾಣ್, ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿ, ದೈಹಿಕ ಶಿಕ್ಷಕರಾದ ಎಸ್.ಎಲ್.ದೊಡಮನಿ, ತಂಡದ ಮ್ಯಾನೇಜರ್ ಆರ್.ವಿ.ಭುಜಂಗನವರ, ರೇಖಾ ರಜಪೂತ ಸೇರಿದಂತೆ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.
ವಿಜಯಪುರ: ಶ್ರೀ ಚಿದಂಬರ ಸೇವಾ ಸಮಿತಿ, ವಿಜಯಪುರ ವತಿಯಿಂದ ಶ್ರಾವಣ ಮಾಸದದ ೪೮ನೇ ವರ್ಷದ ಶ್ರೀ ಶಿವಚಿದಂಬರ ಅಪ್ರಕಾಶಿತ ಲೀಲಾಗ್ರಂಥ ಪಠಣದ ಮಂಗಲ ಮಹೋತ್ಸವ ಕಾರ್ಯಕ್ರಮವು ಜರುಗುವುದು.ಆ.೩೧ ರಂದು ಶೋಭಾ ಯಾತ್ರೆ ಸಂಜೆ ೪ ಗಂಟೆಗೆ ನಗರದ ಇಬ್ರಾಹಿಂಪೂರ ವೆಂಕಟೇಶ್ವರ ದೇವಸ್ಥಾನದಿಂದ ಚಿದಂಬರೇಶ್ವರ ದೇವಸ್ಥಾನದ ವರೆಗೆ ಶೋಭಾಯಾತ್ರೆ ನಂತರ ಸಭೆ, ಸೆ.೧ರಂದು ಮಂಗಳ ಮಹೋತ್ಸವ ದಿವ್ಯ ಸಾನ್ನಿಧ್ಯ ಮುರಗೋಡ ಕೆಂಗೇರಿಯ ಶಿವಚಿದಂಬರೇಶ್ವರ ಮಠ ಪೀಠಾಧಿಪತಿ ದಿವಾಕರ ದೀಕ್ಷಿತ ಶಂಕರ ದೀಕ್ಷಿತ ಗುರುಮಹಾರಾಜರು ಅವರ ದಿವ್ಯ ಸಾನ್ನಿಧ್ಯ. ಬೆಳಿಗ್ಗೆ ೬ ಗಂಟೆಗೆ ಕಾಕಡಾರತಿ ೭ ಗಂಟೆಗೆ ಕ್ಷೀರಾಭಿಷೇಕ ಹಾಗೂ ರುದ್ರಾಭಿಷೇಕ ೮ ಗಂಟೆಗೆ ಶ್ರೀಮದ್ ಯೋಘೀಶ್ವರ ಯಾಜ್ಞವಲ್ಕ ಮಹರ್ಷಿಗಳ ಅಷ್ಟೊತ್ತರ. ೧೦ ಗಂಟೆಗೆ ಸತ್ಯ ಚಿದಂಬರ ವ್ರತ ಮತ್ತು ಕಥೆ, ಮಧ್ಯಾಹ್ನ ೧೨ ಗಂಟೆಗೆ ಸಭಾ ಕಾರ್ಯಕ್ರಮದ ಸಾನಿಧ್ಯವನ್ನು ಮುರಗೋಡ ಕೆಂಗೇರಿಯ ಶಿವಚಿದಂಬರೇಶ್ವರ ಮಠ ಪೀಠಾಧಿಪತಿಗಳಾದ ದಿವಾಕರ ದೀಕ್ಷಿತ ಶಂಕರ ದೀಕ್ಷಿತ ಗುರುಮಹಾರಾಜರು ಹಾಗೂ ಬ್ರಹ್ಮಾನಂದ ಮಹಾಸ್ವಾಮಿಗಳು ದ್ವಾದಶ ಪೀಠಾಧಿಕಾರಿಗಳಾ ಶ್ರೀ ಜ್ಞಾನೇಶ್ವರ…
ವಿಜಯಪುರ: ಸರ್ಕಾರಿ ಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ವಿಧ್ಯಾರ್ಥಿಗಳು ಮದ್ಯಾಹ್ನ ಬಿಸಿಊಟ ಸೇವಿಸುತ್ತಿರುವ ಸಮಯದಲ್ಲಿ ಹಾರಿ ಬಂದ ರಾಷ್ಟ್ರಪಕ್ಷಿ ನವಿಲು ಮಕ್ಕಳೊಂದಿಗೆ ಬಿಸಿಊಟ ಸವಿದು ಮಕ್ಕಳಿಗೆ ಮನೊಲ್ಲಾಸ ಹೆಚ್ಚಿಸಿದ ಘಟನೆ ಸೋಮವಾರ ನಡೆದಿದೆ.ತಾಲ್ಲೂಕಿನ ಜಂಬಗಿ (ಆ) ಗ್ರಾಮದ ಕೆರೂರವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳು ಬಿಸಿಊಟ ಸೇವಿಸುವಾಗ ಹಾರಿ ಬಂದ ರಾಷ್ಟ್ರ ಪಕ್ಷಿ ಮಕ್ಕಳು ತಟ್ಟೆಯಲ್ಲಿ ಅನ್ನ ಹಾಕಿಕೊಂಡು ಪ್ರಾರ್ಥನೆ ಮಾಡುತ್ತಾ ಕುಳಿತಾಗ ಅನ್ನದ ತಟ್ಟೆಗೆ ಕಡೆಗೆ ಹೆಜ್ಜೆ ಹಾಕುತ್ತಾ ಸಾಗಿದೆ. ಈ ಸಮಯದಲ್ಲಿ ವಿಧ್ಯಾರ್ಥಿಯೋರ್ವಳು ತನ್ನ ತಟ್ಟೆಯನ್ನು ನವಿಲಿಗೆ ಕೊಟ್ಟು ಬೇರೊಂದು ತಟ್ಟೆ ತೆಗೆದುಕೊಂಡಿದ್ದಾಳೆ.ಶಾಲಾ ಆವರಣವು ಹಚ್ಚ ಹಸಿರಿನ ಗಿಡಗಳ ಮಧ್ಯೆ ಸುಂದರ ಪ್ರಕೃತಿ ಸೌಂದರ್ಯ ಹೊಂದಿದ್ದು, ಪ್ರತಿದಿನ ಮಕ್ಕಳು ಈ ಪ್ರಕೃತಿ ಮಡಿಲಲ್ಲಿ ಊಟ ಸೇವಿಸುತ್ತಾರೆ. ಹಸಿರು ತುಂಬಿದ ವಾತಾವರಣದಲ್ಲಿ ರಾಷ್ಟ್ರಪಕ್ಷಿ ಆಗಮಿಸಿದ್ದರಿಂದ ವಿಧ್ಯಾರ್ಥಿಗಳು ಖುಷ್ ಆಗಿದ್ದಾರೆ. ಈ ಸಂದರ್ಭದಲ್ಲಿ ಊಟ ಸವಿಯುತ್ತಾ ಮುಖ್ಯೋಪಾಧ್ಯಾಯ ಪಿ.ಪಿ.ನಾಯಕ ಮಕ್ಕಳಿಗೆ ರಾಷ್ಟ್ರಪಕ್ಷಿಯ ಕುರಿತು ಸಂಪೂರ್ಣ ವಿವರ ನೀಡಿ ಮಕ್ಕಳಿಗೆ ಪಕ್ಷಿ…
ಶುಶ್ರೂಷಕ ಶಶಿಕಾಂತ ಆತ್ಮಹತ್ಯೆ :ನ್ಯಾಯಕ್ಕಾಗಿ ಎಸ್ಸಿ-ಎಸ್ಟಿ ನೌಕರರ ಆಗ್ರಹ ವಿಜಯಪುರ: ಸರಕಾರಿ ಆಸ್ಪತ್ರೆಯಲ್ಲಿ ಸ್ಟಾಪನರ್ಸ್ ಅಂತಾ ಕಾರ್ಯನಿರ್ವಹಿಸುತ್ತಿರುವ ಶಶಿಕಾಂತ ತಂ ಮನೋಹರ ಬನ್ನೂರ ಇವರ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ರಾಜ್ಯ ಎಸ್.ಸ್ಸಿ / ಎಸ್ಟಿ ನೌಕರರ ಸಮನ್ವಯ ಸಮಿತಿ, ಜಿಲ್ಲಾ ಘಟಕ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಮನ್ವಯ ಸಮಿತಿಯ ಜಿಲ್ಲಾದ್ಯಕ್ಷ ಬಿ.ಎಚ್. ನಾಡಗಿರಿ ಮಾತನಾಡಿ, ತಾಳಿಕೋಟಿ ತಾಲೂಕಾ ಆರೋಗ್ಯ ಸಮುದಾಯ ಕೇಂದ್ರದಲ್ಲಿ ಸ್ಟಾಪ್ ನರ್ಸ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದ ಶಶಿಕಾಂತ ಇವರು ಆ.೨೧ ರಂದು ಆತ್ಮಹತ್ಯೆಗೆ ಮುಂಚೆ ತನ್ನ ಸಾವಿಗೆ ಕಾರಣ ಯಾರೆಂದು ವ್ಯಾಟ್ಸ್ಫ್ ಸ್ಟೇಟಸ್ನಲ್ಲಿ ಹೆಸರು ಬರೆದು ಹಾಕಿದ್ದಾರೆ. ಕಾರಣ ಈತನ ಸಾವಿಗೆ ಮೂಲ ಕಾರಣರಾದ (೧) ಈರಣ್ಣ ವಡವಡಗಿ (೨) ಶ್ರೀಮತಿ ಜ್ಯೋತಿ ಕೋಳೂರಗಿ (೩) ಶ್ರೀಮತಿ ಶ್ರೀದೇವಿ ಬಗಲಿ ಈ ಮೂವರು ಅದೇ ಆಸ್ಪತ್ರೆಯಲ್ಲಿ ಸೇವೆಸಲ್ಲಿಸುತ್ತಿದ್ದು, ದಿನನಿತ್ಯ ಜಾತಿ ನಿಂದನೆ ದಬ್ಬಾಳಿಕೆ ಕಿರುಕುಳದಿಂದ ಬೇಸತ್ತು…
– ಜಯಶ್ರೀ.ಜೆ. ಅಬ್ಬಿಗೇರಿ,ಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ. ಮೊ: ೯೪೪೯೨೩೪೧೪೨ ಜೀವನ ನಮ್ಮನ್ನು ಸುಖಮಯ ದಾರಿಯಲ್ಲಿ ಕರೆದುಕೊಂಡು ಹೊರಟಾಗ ನಾವು ಮೇಲ್ಮೆöÊಯಲ್ಲೇ ಬದುಕಿ ಬಿಡುತ್ತೇವೆ. ಬದುಕು ನಾವು ಅಂದುಕೊಂಡದಕ್ಕಿಂತ ಸ್ನೇಹಮಯಿಯಾಗಿದೆ ಅಂತ ಜ್ಞಾನದ ಮೂಸೆಯಿಂದ ಒಂದು ಮಾತು ಬರೋದೇ ಇಲ್ಲ. ಆದರೆ ಯಾತನೆಗಳು ಸುತ್ತುವರಿದಾಗ ಬದುಕಿನ ಜಟಕಾ ಬಂಡಿ ಓಡಿಸುವುದು ತುಂಬಾ ದುಸ್ತರವೆನಿಸುತ್ತದೆ. ಕಂಡ ಕಂಡವರ ಮುಂದೆ ಗೋಳಿಡುತ್ತೇವೆ. ಸುಖದ ಬೆಳಕಿನಲ್ಲಿ ಕಣ್ಮುಚ್ಚಿದ್ದ ನಮಗೆ ಕಷ್ಟ ಬಂದಾಗ ಬದುಕಿನಾಳ ತಿಳಿಯುತ್ತದೆ. ಕಷ್ಟ ನಮ್ಮವರು ಯಾರೆಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಎಂಬ ಜ್ಞಾನವಿದ್ದರೂ ಕ್ರಿಯೆಯಲ್ಲಿ ತರಲು ಸಾಧ್ಯವಾಗುವುದಿಲ್ಲ. ಕಷ್ಟದ ಕತ್ತಲಲ್ಲಿ ತಡಕಾಡುತ್ತಿರುವಾಗ ಸುಖದ ಕಿಟಕಿಯಿಂದ ಒಂದೇ ಒಂದು ಕಿರಣ ಒಳನುಸುಳಿದರೂ ಸಾಕು ಅದನ್ನು ಗಬಕ್ಕನೇ ಹಿಡಿಕೊಳ್ಳಲು ಕಾತರಿಸುತ್ತೇವೆ. ಸುಖವನ್ನು ಸುಖವಾಗಿ ಕಳೆಯುತ್ತೇವೆ. ಮತ್ತೊಬ್ಬರ ಭಾವನೆಗಳನ್ನು ಅಗತ್ಯಗಳನ್ನು ಲೆಕ್ಕಿಸದೇ ಕಳೆದುಬಿಡುತ್ತೇವೆ. ಆದರೆ ಕಷ್ಟವನ್ನು ಸಹಿಸಿಕೊಳ್ಳಲಾಗುವುದಿಲ್ಲ. ಬದುಕಿನ ಕೊನೆಯ ಕ್ಷಣವೇ ಬಂದಂತೆ ಕ್ಷಣ ಕ್ಷಣವೂ ವಿಲ ವಿಲ ಒದ್ದಾಡುತ್ತೇವೆ. ಹಬ್ಬಕ್ಕೆ ತೊಡಬೇಕೆಂದು ತಂದ ಹೊಸ ಧಿರಿಸೊಂದು ಕೊಳೆಯಲ್ಲಿ ಬಿದ್ದರೆ…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ನಟನಿಗೆ ಸಂಕಷ್ಟ ಎದುರಾಗಿದೆ. ದರ್ಶನ್ ರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶ ನೀಡಿದೆ.ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಲವು ಆರೋಪಿಗಳನ್ನು ಸಹ ಇದೀಗ ಬೇರೆ ಬೇರೇ ಜೈಲಿಗೆ ಸ್ಥಳಾಂತರಿಸುವಂತೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಅದರಂತೆ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ನ್ಯಾಯಾಲಯದ ಆದೇಶದ ಪ್ರತಿ ಸಿಗುತ್ತಿದ್ದಂತೆ ಜೈಲು ಸಿಬ್ಬಂದಿ ದರ್ಶನ್ ರನ್ನು ಸ್ಥಳಾಂತರಿಸಲಿದ್ದಾರೆ. ದರ್ಶನ್ ಶಿಫ್ಟ್ ಆಗಲಿರುವ ಬಳ್ಳಾರಿ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಇದೆ. ಹೀಗಾಗಿ ಮುಂದೆ ನ್ಯಾಯಾಲಯದ ವಿಚಾರಣೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಒಳಪಡಿಸಲಾಗುತ್ತದೆ.ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿನ ಪವನ್, ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ ಶಿಫ್ಟ್ ಆಗಬೇಕಿದೆ. ಜಗದೀಶ್, ಲಕ್ಷ್ಮಣ ಶಿವಮೊಗ್ಗ ಜೈಲು, ಧನರಾಜ್ಗೆ ಧಾರವಾಡ ಜೈಲು ಗತಿಯಾಗಿದೆ. ವಿಜಯಪುರ ಜೈಲಿಗೆ ವಿನಯ್ ಸ್ಥಳಾಂತರ…
