Author: editor.udayarashmi@gmail.com

ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಸಂಸದರ ಉಪಸ್ಥಿತಿ | ಹೆಚ್ಡಿಕೆ ವಿರುದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ ಬೆಂಗಳೂರು: ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ರಾಜ್ಯಪಾಲರ ಮುಂದೆ ಬಾಕಿ ಇರುವ ಹಲವರ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಆಗಸ್ಟ್ 31ರಂದು ‘ರಾಜಭವನ ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,”ಆಗಸ್ಟ್ 31ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಈ ವೇಳೆ ಮುಖ್ಯಮಂತ್ರಿ, ಎಲ್ಲಾ ಸಚಿವರು, ಕಾಂಗ್ರೆಸ್‌ನ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಉಪಸ್ಥಿತರಿರಲಿದ್ದಾರೆ” ಎಂದು ಹೇಳಿದರು.“ಬೇರೆ ನಾಯಕರ ವಿರುದ್ಧ ಪ್ರಾಥಮಿಕ ತನಿಖೆ ನಡೆದು ವಿಚಾರಣೆಗೆ ಅನುಮತಿ ಕೇಳಿದ್ದರೂ ರಾಜ್ಯಪಾಲರು ನೀಡಿಲ್ಲ. ಆದರೆ, ಯಾವುದೇ ಪ್ರಾಥಮಿಕ ತನಿಖೆ ನಡೆಯದಿದ್ದರೂ ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ತರಾತುರಿಯಲ್ಲಿ…

Read More

ಕೊಲ್ಹಾರ: ತಾಲೂಕಿನ ಹಣಮಾಪೂರ ಹಾಗೂ ಬಳೂತಿ ಗ್ರಾಮಗಳ ಆರಾಧ್ಯ ದೈವ ಸುಕ್ಷೇತ್ರ ಬಾಂವಿ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ರಥೋತ್ಸವವು ಅಪಾರ ಸಂಖ್ಯೆಯ ಭಕ್ತ ಸಮೂಹದ ಮದ್ಯದಲ್ಲಿ ಬಹಳ ವಿಜೃಂಭಣೆಯಿಂದ ಜರುಗಿತು.ಸೋಮವಾರ ಬಾವಿ ಬಸವೇಶ್ವರ ಅರ್ಚಕರಾದ ಸಂಗಯ್ಯ ಚಿಕ್ಕಮಠರವರಿಂದ ಬೆಳಿಗ್ಗೆ ೮ಗಂಟೆಯಿಂದ ೧೦ಗಂಟೆವರೆಗೆ ಬಾಂವಿ ಬಸವೇಶ್ವರನಿಗೆ ರುದ್ರಾಭಿಷೇಕ ಜರುಗಿತು.ನಂತರ ಬಳೂತಿ ಗ್ರಾಮದಿಂದ ದೇವಸ್ಥಾನದವರೆಗೆ ಸಕಲ ವಾದ್ಯ ವೈಭವಗಳೊಂದಿಗೆ ಬಸವೇಶ್ವರ ಬೆಳ್ಳಿ ಮೂರ್ತಿಯನ್ನು ಮೆರವಣಿಗೆ ಮೂಲಕ ಬರಮಾಡಿಕೊಂಡು ಮೂಲ ನಂದಿಶ್ವರನಿಗೆ ಬೆಳ್ಳಿ ಮೂರ್ತಿಯನ್ನು ತೋಡಿಸಲಾಯಿತು. ಮದ್ಯಾಹ್ನ ೩ ಗಂಟೆಯಿಂದ ಹಣಮಾಪೂರ ಗ್ರಾಮದ ಸಕಲ ಸದ್ಭಕ್ತರಿಂದ ಬಹು ವರ್ಷಗಳ ನಂತರ ನಿರ್ಮಿಸಿದ ನಂದಿಕೋಲು ಹಾಗೂ ರಥೋತ್ಸವದ ಹಗ್ಗ ಹಾಗೂ ಕಳಸಗಳನ್ನು ಸಕಲ ವಾದ್ಯ ವೈಭವಗಳೊಂದಿಗೆ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆ ತರಲಾಯಿತು. ನಂತರ ಕಳಸ ಹಾಗೂ ಹಗ್ಗಗಳಿಗೆ ಪೂಜೆ ಸಲ್ಲಿಸಿ ದೇವಸ್ಥಾನ ಹಾಗೂ ರಥೋತ್ಸವದ ಮೇಲೆ ಕಳಸಗಳನ್ನು ಪ್ರತಿಷ್ಟಾಪನೆ ಮಾಡಲಾಯಿತು. ನಂತರ ಹಣಮಾಪೂರ, ಬಳೂತಿ, ಕೊಲ್ಹಾರ, ಮಟ್ಟಿಹಾಳ ಸೇರಿದಂತೆ ಅನೇಕ ಸುತ್ತ ಮುತ್ತಲಿನ…

Read More

ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಸೋಮವಾರ ರಾತ್ರಿ ಸರಣಿ ಕಳ್ಳತನವಾಗಿದೆ.ಚನ್ನಬಸಪ್ಪ ಗುರಿಕಾರ ಅವರ ಮನೆಯ ಬೀರು ಮುರಿದು ೨ ತೊಲಿ ಬಂಗಾರ ಹಾಗೂ ೨೦ ಸಾವಿರ ನಗದು ಎಗರಿಸಿದ ಖದೀಮರು ತಮ್ಮ ಕೈಚಳಕವನ್ನು ತೋರಿಸಿದ್ದಾರೆ. ಬಸವರಾಜ ಹೌಶಟ್ಟಿ ಅವರ ಮನೆಯ ಬಾಗಿಲು ಮುರಿದು ಮನೆಯ ತುಂಬ ಹುಡಿಕಾಡಿದ್ದಾರೆ ಆದರೆ ಮನೆಯಲ್ಲಿ ಬಂಗಾರ ಹಾಗೂ ನಗದು ಹಣ ಇಲ್ಲದಿರುವದರಿಂದ ಬೆಲೆಬಾಳುವ ೨ ಸೀರೆಯನ್ನು ಹೊತ್ತಿದ್ದಾರೆ. ಗುರುಲಿಂಗಪ್ಪ ಕುಂಬಾರ ಹಾಗೂ ಅಬ್ದುಲಸಾಬ ಹಣಗಿ ಅವರ ಮನೆಯ ಬಾಗಿಲು ಮುರಿದು ಕಳ್ಳತನಕ್ಕೆ ವಿಫಲ ಪ್ರಯತ್ನ ನಡೆಸಿದ್ದಾರೆ.ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಠಾಣೆಯ ಪಿಎಸ್‌ಐ ಸಂಜೀವ ತಿಪರೆಡ್ಡಿ, ಕ್ರೈಂ ಪಿಎಸ್‌ಐ ಆರ್.ಎಲ್.ಮನ್ನಾಬಾಯಿ ಭೇಟಿ ನೀಡಿ ಪರಿಶೀಲಿದ್ದು ಕಲ್ಳರ ಹೆಡೆಮುರಿ ಕಟ್ಟುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More

ಮುದ್ದೇಬಿಹಾಳ: ಜಗತ್ತು ನಿಂತಿರೋದು ತಾಯಂದಿರ ತಾಕತ್ತು, ಶಕ್ತಿ, ಸಾಮರ್ಥ್ಯದ ಮೇಲೆ ಎಂದು ಹಿರೂರಿನ ಅನ್ನದಾನೇಶ್ವರಿ ಸಂಸ್ಥಾನ ಹಿರೇಮಠದ ಜಯಸಿದ್ದೇಶ್ವರ ಮಹಾಸ್ವಾಮಿಗಳು ನುಡಿದರು.ಪಟ್ಟಣದ ಹೇಮರಡ್ಡಿ ಕಲ್ಯಾಣ ಮಂಟಪದಲ್ಲಿ ಶ್ರೀ ವರದಾನೇಶ್ವರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಡಿ ತುಂಬುವ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಅವರು ಎಲ್ಲಿ ಸ್ತ್ರೀಯರಿಗೆ ಗೌರವಿದೆಯೋ ಅಲ್ಲಿ ದೇವಾನು ದೇವತೆಗಳು ವಾಸವಿರುತ್ತಾರೆ ಎಂದರು.ಸೋಮನಾಳದ ಭ್ರಮರಾಂಬ ಸಮೇತ ಮಲ್ಲಿಕಾರ್ಜುನ ಆಶ್ರಮದ ರುದ್ರಮುನಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಒಟ್ಟು ೧೫೦೧ ಮುತೈದೆಯರಿಗೆ ಉಡಿ ತುಂಬಲಾಯಿತು.ಈ ವೇಳೆ ಭೂದಾನಿ ಸಿದ್ದಯ್ಯ ಕಲ್ಯಾಣಮಠ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಪುರಸಭೆ ಸದಸ್ಯ ಚನ್ನಪ್ಪ ಕಂಠಿ, ಸಮಾಜ ಸೇವಕಿ ರೂಪಾ ದೇಸಾಯಿ, ಟ್ರಸ್ಟ್ ನ ಗೌರವಾಧ್ಯಕ್ಷ ಎಸ್.ಎಲ್.ಗುರವ ವೇದಿಕೆ ಮೇಲಿದ್ದರು. ಮಹಾಂತೇಶ ಮಠಪತಿ, ಮಹಾಂತೇಶ ಮೋಟಗಿ, ಬಸನಗೌಡ ಬಿರಾದಾರ ಸೇರಿದಂತೆ ಮತ್ತೀತರರು ಇದ್ದರು.

Read More

ಬಸವನಬಾಗೇವಾಡಿ: ಇಂದಿನ ತಂತ್ರಜ್ಞಾನ ಯುಗದ ಸಾಮಾಜಿಕ ಜಾಲತಾಣದ ಅಬ್ಬರದಲ್ಲಿ ವೃತ್ತರಂಗಭೂಮಿ ನಶಿಸಿ ಹೋಗುವ ಸಾಧ್ಯತೆ ಇರುವದರಿಂದಾಗಿ ಇದರ ಸಂರಕ್ಷಣೆ ಮಾಡುವ ಕಾರ್ಯವಾಗಬೇಕೆಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.ಪಟ್ಟಣದ ಬಸ್ ನಿಲ್ದಾಣ ಪಕ್ಕದಲ್ಲಿರುವ ಇಂದಿರಾ ಕ್ಯಾಂಟೀನ್ ಹಿಂಭಾಗದ ಜಾಗೆಯಲ್ಲಿ ಸ್ಥಳೀಯ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಜೇವರ್ಗಿಯ ಪಂಚಾಕ್ಷರ ನಾಟ್ಯಸಂಘ ಹಾಕಿರುವ ರಂಗಸಜ್ಜಿಕೆಯಲ್ಲಿ ಸೋಮವಾರ ಸಂಜೆ ಕುಂಟ ಕೋಣ ಮೂಕ ಜಾಣ ಎಂಬ ನಾಟಕದ ಪ್ರದರ್ಶನಕ್ಕೆ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ನಾಟಕ, ಚಲನಚಿತ್ರಗಳು ಮನುಷ್ಯನ ಬದುಕನ್ನು ಬದಲಾವಣೆ ಮಾಡುವ ಶಕ್ತಿಯನ್ನು ಹೊಂದಿವೆ. ಎಷ್ಟೋ ಜನರು ನಾಟಕ, ಚಲನಚಿತ್ರದಲ್ಲಿನ ಉತ್ತಮ ಸಂದೇಶ ನೀಡಿದ ನಟರ ಅಭಿನಯ ಕಂಡು ಅವರು ತಮ್ಮ ಜೀವನದಲ್ಲಿ ಬದಲಾವಣೆಯಾಗಿರುವದನ್ನು ಕಾಣುತ್ತೇವೆ. ಇಂದು ಸಾಮಾಜಿಕ ಜಾಲತಾಣ ಬೆನ್ನುಹತ್ತಿರುವ ಯುವಜನಾಂಗ ಸೇರಿದಂತೆ ಅನೇಕರು ಹಾಳಾಗಿರುವದನ್ನು ಕಾಣುತ್ತೇವೆ. ನಾಟಕ, ಚಲನಚಿತ್ರಗಳನ್ನು ವೀಕ್ಷಿಸಿ ಅದಲ್ಲಿರುವ ಉತ್ತಮ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಜೀವನ ನಮ್ಮದಾಗಿಸಿಕೊಳ್ಳಬಹುದು ಎಂದರು.ವ್ಹಿಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷ…

Read More

ಬಸವನಬಾಗೇವಾಡಿ: ಬಾಲ್ಯದಲ್ಲಿಯೇ ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲು ಶಾಲಾ ಹಂತದ ಕ್ರೀಡಾಕೂಟ ಸಹಕಾರಿಯಾಗಿದೆ. ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಮುನ್ನೆಲೆಗೆ ತರುವಲ್ಲಿ ಪಂಚಾಯತ ಮಟ್ಟದ ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಹೇಳಿದರು.ತಾಲೂಕಿನ ಕಾನ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರಸಮನ್ವಾಧಿಕಾರಿಗಳ ಕಾರ್ಯಾಲಯ, ಜಾಯವಾಡಗಿಯ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕಾನ್ನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಣಕಾಲ ಪಂಚಾಯತ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹಂತ ಹಂತವಾಗಿ ಯಶಸ್ವಿಗೊಳಿಸಬೇಕೆಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯುವ ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡುತ್ತದೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಗಂಭೀರವಾಗಿ ಪರಿಗಣಿಸದೇ ಸ್ಪರ್ಧಾತ್ಮಕವಾಗಿ ಭಾಗವಹಿಸುವದು ತುಂಬಾ ಮುಖ್ಯವಾಗಿದೆ. ಪ್ರತಿಭೆ ಎಲ್ಲ ವಿದ್ಯಾರ್ಥಿಗಳಲ್ಲಿ ಇರುತ್ತದೆ ಇದನ್ನು ಪತ್ತೆ ಹಚ್ಚಿ ಪ್ರೋತ್ಸಾಹಿಸುವ ಕಾರ್ಯವನ್ನು ಪಾಲಕರು,…

Read More

ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ದೇವರ ಜಾತ್ರಾಮಹೋತ್ಸವದ ಎರಡನೇ ದಿನವಾದ ಮಂಗಳವಾರ ದೇವಸ್ಥಾನದ ಪ್ರಾಂಗಣದಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ವಿವಿಧ ಜನಪದ ಗಾಯಕರು ನಡೆಸಿಕೊಟ್ಟ ಭಜನಾ ಪದಗಳು, ಡೊಳ್ಳಿನ ಪದ ಜನರ ಮನರಂಜಿಸುವ ಜೊತೆಗೆ ಮನಸೂರೆಗೊಂಡವು.ತಾಲೂಕಿನ ನಾಗೂರ ಗ್ರಾಮದ ಯಮುನೂರೇಶ್ವರ ಭಜನಾ ಮಂಡಳಿಯ ಹತ್ತು ವರ್ಷದ ಬಾಲಕಿ ಅನ್ನಪೂರ್ಣ ದೊಡ್ಡಮನಿ ಪ್ರಸ್ತುತ ಪಡಿಸಿದ ಭಜನಾಪದಗಳಿಗೆ ಜನರು ಮನಸೋತರು. ಇದೇ ತಂಡದ ಗಾಯಕರಾದ ಸುನೀತಾ ಬೀರಲದಿನ್ನಿ, ರುದ್ರಯ್ಯ ಹಿರೇಮಠ, ಮಲ್ಲಯ್ಯ ಶೀಕಳವಾಡಿಮಠ, ರುದ್ರಯ್ಯ ಹಿರೇಮಠ, ಬಾಲಗಾಯಕ ಮಲ್ಲಿಕಾರ್ಜುನ ಹಿರೇಮಠ ಅವರು ಸುಶ್ರಾವ್ಯವಾಗಿ ಭಜನಾ ಪದಗಳನ್ನು ಪ್ರಸ್ತುತಪಡಿಸುವ ಮೂಲಕ ನೆರೆದ ಜನರ ಮನಸೂರೆಗೊಂಡರು. ಇವರಿಗೆ ಕಾಂತು ಪಡೇಕನೂರ, ಮಲ್ಲು ಸಜ್ಜನ, ಹಣಮಂತ ಹುಣಶ್ಯಾಳ, ಹಣಮಂತ ದಿಂಡವಾರ, ನಿಂಗಪ್ಪ ಹೂಗಾರ ಅವರು ವಿವಿಧ ವಾದ್ಯಗಳನ್ನು ನುಡಿಸುವ ಮೂಲಕ ಸಂಗೀತ ಸಾಥ್ ನೀಡಿದರು.ತಳೇವಾಡದ ಶ್ರೀಸದ್ಗುರು ಸಾದುಮುತ್ಯಾ ಭಜನಾ ಮಂಡಳದ ಬಾಲಗಾಯಕರಾದ ಸಹೋದರಿಯರಾದ ರೂಪಾ ಐಹೊಳ್ಳಿ, ಸುಶ್ಮಿತಾ ಐಹೊಳ್ಳಿ, ನಗನೂರಿನ ಚೌಡೇಶ್ವಿರ ಭಜನಾ ಮಂಡಳಿಯ ಬಾಲಗಾಯಕರಾದ ದೀಪಾ ಡೊಡ್ಡಮನಿ,…

Read More

ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಐತಿಹಾಸಿಕ ಹೋರಿಮಟ್ಟಿ ಗುಡ್ಡಕ್ಕೆ ತೆರಳಿದ್ದ ಅಲಂಕೃತ ಮೂಲನಂದೀಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಭಕ್ತರ ಜಯಘೋಷ, ಬಸವಣ್ಣನ ಕುದರಿ ಶಿವಾನಂದ ಈರಕಾರಮುತ್ಯಾ ಅವರ ಹೇಳಿಕೆ ನುಡಿದ ನಂತರ ದೇವಸ್ಥಾನದಲ್ಲಿರುವ ಬೆಳ್ಳಿ ಪಲ್ಲಕ್ಕಿ ಇಡುವ ಕಟ್ಟೆಗೆ ಮರಳುವ ಮೂಲಕ ಪಲ್ಲಕ್ಕಿ ಉತ್ಸವ ಸಂಪನ್ನಗೊಂಡಿತ್ತು.ಪಟ್ಟಣದಿಂದ ಸುಮಾರು ೫ ಕಿಮೀ ಅಂತರದಲ್ಲಿರುವ ಐತಿಹಾಸಿಕ ಹೋರಿಮಟ್ಟಿ ಗುಡ್ಡಕ್ಕೆ ಸೋಮವಾರ ತೆರಳಿದ್ದ ಮೂಲನಂದೀಶ್ವರ(ಬಸವೇಶ್ವರ) ದೇವರ ಅಲಂಕೃತ ಬೆಳ್ಳಿ ಪಲ್ಲಕ್ಕಿ ಉತ್ಸವ ಸಂಜೆ ಆಕರ್ಷಕ ಸಿಡಿಮದ್ದು, ವಿವಿಧ ಕಲಾ ತಂಡಗಳ ಮೆರವಣಿಗೆ, ವಿವಿಧ ವಾದ್ಯಮೇಳದೊಂದಿಗೆ ಭಕ್ತರ ಜಯಘೋಷದೊಂದಿಗೆ ಪುರ ಪ್ರವೇಶ ಮಾಡಿದ ನಂತರ ಅದ್ದೂರಿ ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ತಲುಪಿದ ನಂತರ ರಾತ್ರಿ ಪಲ್ಲಕ್ಕಿ ಪಲ್ಲಕ್ಕಿ ಕಟ್ಟೆಗೆ ಮರಳಿತು. ಮಂಗಳವಾರ ನಸುಕಿನ ಜಾವ ಬಸವಣ್ಣನ ಕುದರಿ ಶಿವಾನಂದ ಈರಕಾರಮುತ್ಯಾ ಅವರು ಆಗಮಿಸಿದ ನಂತರ ಪಲ್ಲಕ್ಕಿ ಉತ್ಸವವು ದೇವಸ್ಥಾನದ ಪ್ರಾಂಗಣದಲ್ಲಿ ಮೂರು ಪ್ರದಕ್ಷಿಣೆ ಹಾಕಿದ ನಂತರ ಶಿವಾನಂದ ಈರಕಾರಮುತ್ಯಾ ಅವರು ಈ…

Read More

ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯ ಗುರುಮಾತೆ ಶ್ರೀಮತಿ ಸಹನಾ ಹತ್ತಳ್ಳಿ ಅವರ ಮುದ್ದಿನ ಮಗಳು ಶ್ರೀಶಾ ಹತ್ತಳ್ಳಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ರಾಧೆಯ ವೇಷಭೂಷಣ ರೂಪದ ಸಂಭ್ರಮದಲ್ಲಿ ಕಣ್ಮನ ಸೆಳೆದು ನಯವಾಗಿ ಕಂಡಿದ್ದು ಹೀಗೆ !

Read More

ಇಂಡಿ: ಸೆ.೧ ಭಾನುವಾರ ಕರ್ನಾಟಕ ರಾಜ್ಯ ಕಟಬು ಕಟಬರ ಅಲೆಮಾರಿ ಒಕ್ಕೂಟದ ವತಿಯಿಂದ ಬೃಹತ್ ಜಿಲ್ಲಾ ಜಾಗೃತಿ ಸಮಾವೇಶವನ್ನು ಇಂಡಿ ಪಟ್ಟಣದ ಶಂಕರ ಪಾರ್ವತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು ಕಟಬು ಕಟಬರ ಅಲೆಮಾರಿ ಜನಾಂಗ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಮಾಜದ ಜಿಲ್ಲಾ ಅಧ್ಯಕ್ಷ ಶಿವಮೂರ್ತಿ ಕಾಟಕರ ಹೇಳಿದರು.ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜ ಸಂಘಟನೆಯ ಸದುದ್ದೇಶದಿಂದ ಸರಕಾರದಲ್ಲಿ ನಮಗೂ ಪ್ರಾತಿನಿಧ್ಯ ನೀಡಲಿ ಎಂಬ ಆಶಯದೊಂದಿಗೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದ ಸಾನಿಧ್ಯವನ್ನು ಹುನಗುಂದದ ಲೀಲಾಮಠದ ಕಲ್ಲಿನಾಥ ಮಹಾಸ್ವಾಮಿಗಳು, ಚಿಣಮಗೇರಾ ಮಹಾಂತೇಶ್ವರ ಮಠದ ವೀರಮಹಾಂತ ಶಿವಾಚಾರ್ಯರು ವಹಿಸಲಿದ್ದು, ಅಧ್ಯಕ್ಷತೆಯನ್ನು ಕಟಬು ಸಮಾಜದ ರಾಜ್ಯಾಧ್ಯಕ್ಷ ಜಗದೀಶ ಕ್ಷತ್ರಿಯವರು, ಮುಖ್ಯ ಅತಿಥಿಗಳಾಗಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಸಿಂದಗಿ ಮಾಜಿ ಶಾಸಕ ರಮೇಶ ಭೂಸನೂರ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಕಟಬು ಸಮಾಜದ ರಾಜ್ಯಾಧ್ಯಕ್ಷ ಬಿ.ಟಿ ಮೋರೆ ಸೇರಿದಂತೆ, ಕರ್ಣ ಕ್ಷತ್ರಿ, ನಾರಾಯಣ ಶಿಂಧೆ, ಮಲ್ಲಿನಾಥ ಕ್ಷತ್ರಿ, ಡಾ. ನಾಗೇಶ ನೇಕನಾರ,…

Read More