Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕೆಂಭಾವಿ: ಪಟ್ಟಣದ ಸುತ್ತಮುತ್ತ ಬಹುತೇಕ ಗುಡಿಸಲು ನಿವಾಸಿಗಳೇ ಹೆಚ್ಚಿದ್ದು, ಇಲ್ಲಿನ ರೈತರು ಹೆಚ್ಚಾಗಿ ಕಬ್ಬು, ಭತ್ತ ಬೆಳೆಯುತ್ತಾರೆ. ಬೇಸಿಗೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದರೆ, ಬೆಳೆದ ಫಸಲು ಕೈಗೆ ಬಾರದೆ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಬೆಂಕಿಗಾಹುತಿಯಾಗಿರುತ್ತದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಕಡೆ ಗಮನಹರಿಸದಿದ್ದಲ್ಲಿ ಹೋರಾಟ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಅತೀ ದೊಡ್ಡ ಹೋಬಳಿ ಕೇಂದ್ರವಾಗಿರುವ ಕೆಂಭಾವಿ ಪಟ್ಟಣದ ಸುತ್ತಮುತ್ತ ಗ್ರಾಮಗಳಾದ ಯಾಳಗಿ, ಹದನೂರು, ಮಲ್ಲಾ, ಏವೂರು, ನಗನೂರು, ಖಾನಾಪುರ, ಮಾಲಗತ್ತಿ, ಕಿರದಳ್ಳಿ, ಹೆಗ್ಗನದೊಡ್ಡಿ, ಕರಡಕಲ್, ಮಾಲಹಳ್ಳಿ, ನಡಕೂರ, ಆಲ್ಹಾಳ, ಐನಾಪುರ, ಮಲ್ಕಾಪುರ, ಗುತ್ತಿಬಸವೇಶ್ವರ, ಚಿಂಚೋಳಿ, ವಂದಗನೂರು, ಬೊಮ್ಮನಹಳ್ಳಿ, ಸೇರಿದಂತೆ ವಲಯದ ವ್ಯಾಪ್ತಿಯಲ್ಲಿ ಅಗ್ನಿ ಅನಾಹುತ ಸಂಭವಿಸದರೆ, 30 ಕಿಲೋಮೀಟರ್ ದೂರದ ಸುರಪುರದಿಂದ ಅಗ್ನಿ ಶಾಮಕ ದಳದ ವಾಹನ ಬರಬೇಕಾದ ಅನಿವಾರ್ಯತೆ ಎದುರಾಗಿದೆ. ವಾಹನ ಬರುವುದು ಸ್ವಲ್ಪ ತಡವಾದರೆ ಬೆಂಕಿ ಅವಘಡ ಸಂಭವಿಸಿದ್ದು ಅನೇಕ ನಿರ್ದೇಶನಗಳಿದ್ದು.ಎಚ್ಚೆತ್ತುಕೊಂಡ ಅಧಿಕಾರಿಗಳು ಸರ್ವೆ ನಂಬರ್ 512 ರಲ್ಲಿ ಎರಡು…
ವಿಜಯಪುರ: ಡಿ.22 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024 ಕಾರ್ಯಕ್ರಮವನ್ನು ಕಳೆದ ಬಾರಿಗಿಂತಲೂ ಅತ್ಯುತ್ತಮವಾಗಿ ಆಯೋಜಿಸಲು ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ.ಮಹಾಂತೇಶ ಬಿರಾದಾರ ತಿಳಿಸಿದ್ದಾರೆ.ಮಂಗಳವಾರ ಸಂಜೆ ನಗರದಲ್ಲಿ ನಡೆದ ಸಿದ್ಧತೆಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಈ ಸಭೆಯಲ್ಲಿ ಪಾಲ್ಗೊಂಡ ಕೋರ್ ಕಮಿಟಿ ಸದಸ್ಯರು ಈವರೆಗೆ ಕೈಗೊಳ್ಳಲಾದ ಸಿದ್ಧತೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಾರಿ ಇನ್ನಷ್ಟು ಉತ್ತಮವಾಗಿ ಓಟವನ್ನು ಆಯೋಜಿಸಲಾಗುತ್ತಿದೆ.ವಿಜಯಪುರ ನಗರದ ಐತಿಹಾಸಿಕ ತಾಣಗಳಾದ ಗೋಳಗುಮ್ಮಟ, ಸುಂದರೇಶ್ವರ ದೇವಸ್ಥಾನ, ಆನಂದ ಮಹಲ, ಚರ್ಚ್, ನರಸಿಂಹ ದೇವಸ್ಥಾನ, ಬಾರಾಕಮಾನ, ಇಬ್ರಾಹಿಂ ರೋಜಾ, ಸೈನಿಕ್ ಶಾಲೆ, 770 ಅಮರಗಣಾಧೀಶ್ವರರ ಲಿಂಗ ಸ್ಮಾರಕ, ಜ್ಞಾನಯೋಗಾಶ್ರಮ, ಶತಮಾನದ ಶಿವಯೋಗಿ ಸಿದ್ದರಾಮೇಶ್ವರ ದೇವಸ್ಥಾನಗಳ ಮುಂಬಾಗದಲ್ಲಿ ಓಟ ಸಾಗಲಿದ್ದು, ಈ ತಾಣಗಳ ಮಹತ್ವದ ಕುರಿತು ಈಗಿನಿಂದಲೇ ಸಾಮಾಜಿಕ ಜಾಲತಾಣಗಳ ಮೂಲಕ ಜನರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಪ್ರಾಯೋಜಕರು ಪ್ರಾಯೋಜಕತ್ವ…
ವಿಜಯಪುರ: ವಿಜಯಪುರ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಎನ್.ಸಿ.ವ್ಹಿ.ಟಿ. ಸಂಯೋಜನೆ ಹೊಂದಿರುವ ಒಂದು ಮತ್ತು ಎರಡು ವರ್ಷಗಳ ಸಾಂಪ್ರದಾಯಿಕ ಹಾಗೂ ಅತ್ಯಾಧುನಿಕ ವೃತ್ತಿಗಳಿಗೆ ಆಗಸ್ಟ್-೨೦೨೪ನೇ ಸಾಲಿಗೆ ಆಫ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.ವೆಲ್ಡರ್, ಟರ್ನರ್, ಇಂಡಸ್ಟ್ರಿಯಲ್ ರೋಬೋಟಿಕ್ಸ್ & ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಶಿಯನ್, ಆರ್ಟಿಷಿಯನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ ವೃತ್ತಿಗಳಿಗೆ ೦೮ನೇ ಹಾಗೂ ೧೦ನೇ ತರಗತಿ ಪಾಸಾದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ ಎಂದು ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರಿ ಅಡ್ವೋಕೇಟ್ ಅಥವಾ ೨೦ ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಾರ್ ಕೌನ್ಸಿಲ್ನಲ್ಲಿ ನೊಂದಾಯಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ೩.೫೦ಲಕ್ಷಕ್ಕೆ ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ೩೦ ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ೨ ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.ಅರ್ಜಿ ಸಲ್ಲಿಸಲು ದಿನಾಂಕ : ೧೭-೦೯-೨೦೨೪ ಕೊನೆಯ ದಿನಾಂಕವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ಹತ್ತಿರ, ಕನಕದಾಸ ಬಡಾವಣೆ, ವಿಜಯಪುರ ದೂ: ೦೮೩೫೨-೨೯೫೫೨೩ ಸಂಖ್ಯೆಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲೆಯ ೦೮ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ ಬಿ ವೃಂದದ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜ್, ಅಂಜುಮನ್ ಕಾಲೇಜ್, ಪಾಲಿಟೆಕ್ನಿಕ್ ಕಾಲೇಜ್, ಬಿಡಿಇ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಪರೀಕ್ಷೆಗಳು ಅತ್ಯಂತ ಸುಗಮ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಿಸಿದವರಿಗೆ ಅವರು ಸೂಚನೆ ನೀಡಿದರು.
ವಿಜಯಪುರ: ಆಲಮಟ್ಟಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ ೬ನೇ ತರಗತಿಗೆ ೨೦೨೫ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ತಿತಿತಿ.ಟಿಚಿvoಜಚಿಥಿಚಿ.gov.iಟಿ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೧೬-೦೯-೨೦೨೪ ಆಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೪೨೬-೨೮೧೦೮೮, ಮೊಬೈಲ್ ಸಂಖ್ಯೆ ೯೯೦೧೯೪೦೧೮೮, ೯೦೩೬೯೦೨೮೫೯ ಹಾಗೂ ೯೪೪೯೪೪೧೪೨೨ ಸಂಪರ್ಕಿಸಬಹುದಾಗಿದೆ ಎಂದು ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್ಗೆ ೮೬೮೨ ರೂ. ಬೆಂಬಲ ಬೆಲೆಯಡಿ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನವನ್ನು ಖರೀದಿಸಲು ನಿರ್ಧರಿಸಲಾಗಿದೆ.ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಭಾಲನ್ ಅವರ ಅಧ್ಯಕ್ಷತೆಯಲ್ಲಿ ಆ.೨೬ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ ೭೦೬ ಹೆಕ್ಟೇರ್ ಕ್ಷೇತ್ರದಲ್ಲಿ ಹೆಸರುಕಾಳು ಬಿತ್ತನೆಯಾಗಿದ್ದು, ಅಂದಾಜು ೮೮೦೫ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಗೆ ಆವಕವಾಗದೇ ಸಮೀಪದ ಮಾರುಕಟ್ಟೆಯಲ್ಲಿ ಹೆಸರುಕಾಳು ಕನಿಷ್ಠ ೬೪೯೫ ರಿಂದ ಗರಿಷ್ಠ ೭೮೫೧ ಹಾಗೂ ಸರಾಸರಿ ೭೦೦೨ ರೂ. ಪ್ರತಿ ಕ್ವಿಂಟಾಲ್ಗೆ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳು ಪ್ರತಿ ಕ್ವಿಂಟಲ್ ೮೬೮೨ ರೂ.ಗೆ ಖರೀದಿಸಲು ತೀರ್ಮಾನಿಸಿ, ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಟಿಎಪಿಸಿಎಂಎಸ್ ಸಂಸ್ಥೆಗಳನ್ನು ಖರೀದಿ ಕೇಂದ್ರಗಳೆಂದು ಪರಿಗಣಿಸಿ ಪರಿಗಣಿಸಿ ರೈತರ ನೊಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.ಜಿಲ್ಲೆಯ ವಿಜಯಪುರ, ಬಸವನಬಾಗೇವಾಡಿ,…
ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್ಗೆ ೭೨೮೦ ರೂ. ಬೆಂಬಲ ಬೆಲೆಯಡಿ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ನಿರ್ಧರಿಸಲಾಗಿದೆ.ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಭಾಲನ್ ಅವರ ಅಧ್ಯಕ್ಷತೆಯಲ್ಲಿ ಆ.೨೬ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ೧೭೪೫ ಹೆಕ್ಟೇರ್ ಕ್ಷೇತ್ರದಲ್ಲಿ ಸೂರ್ಯಕಾಂತಿ ಬಿತ್ತನೆಯಾಗಿದ್ದು, ಅಂದಾಜು ೨೬೧೭೫ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಸೂರ್ಯಕಾಂತಿ ರೂ. ೪೪೦೦ ರಿಂದ ೪೮೦೦ ವರೆಗಿನ ದರದಲ್ಲಿ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಲ್ ೭೨೮೦ ರೂ.ಗೆ ಖರೀದಿಸಲು ತೀರ್ಮಾನಿಸಲಾಗಿದ್ದು, ನ್ಯಾಫೆಡ್ ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಬೆಂಗಳೂರು ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರಿದಿ ಸಂಸ್ಥೆಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೆಓಎಫ್ ಸಂಸ್ಥೆಯ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳನ್ನು…
ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದ್ದ ಹುದ್ದೆಗಳಿಗೆ ಜಿಲ್ಲೆಯ ೮ ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ಪೂರ್ವಭಾವಿ ಪರೀಕ್ಷೆಗೆ ಒಟ್ಟು ೪೦೦೭ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು.ಬಾಲಕರ ಸರಕಾರಿ ಪದವಿಪೂರ್ವ ಕಾಲೇಜ್, ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜ್, ವಿದ್ಯಾನಿಕೇತನ ಪ.ಪೂ. ಕಾಲೇಜ್, ಬಿಡಿಇ ಬಾಲಕಿಯರ ಪ್ರೌಢಶಾಲೆ, ಪಿಡಿಜೆ ಪ್ರೌಢಶಾಲೆ, ಸರಕಾರಿ ಪಾಲಿಟೆಕ್ನಿಕ್ ಕಾಲೇಜ್, ವ್ಹಿ.ಬಿ.ದರಬಾರ ಪ.ಪೂ.ಕಾಲೇಜ್ ಹಾಗೂ ಅಂಜುಮನ್ ಕಲಾ & ವಾಣಿಜ್ಯ ಮಹಾವಿದ್ಯಾಲಯ ಸೇರಿದಂತೆ ಒಟ್ಟು ೮ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಿದ್ದು, ಪತ್ರಿಕೆ-೧ಕ್ಕೆ ೨೯೨೮ ಹಾಗೂ ಪತ್ರಿಕೆ-೨ಕ್ಕೆ ೨೯೧೪ ಅಭ್ಯರ್ಥಿಗಳು ಹಾಜರಾಗಿ, ಪತ್ರಿಕೆ-೧ಕ್ಕೆ ೧೦೭೯ ಹಾಗೂ ಪತ್ರಿಕೆ-೨ಕ್ಕೆ ೧೦೯೩ ಅಭ್ಯರ್ಥಿಗಳು ಗೈರು ಹಾಜರಾಗಿದ್ದರು ಎಂದು ಪ್ರಕಟಣೆ ತಿಳಿಸಿದೆ.
ನಿವೃತ್ತ ದೈ.ಶಿಕ್ಷಕ ಬಸವರಾಜ ಅನಂತಪುರ ದಂಪತಿಗೆ ಸಂಪ್ರೇಮದ ಸನ್ಮಾನ ಚಿಕ್ಕಪಡಸಲಗಿ: ಸುಮಾರು 39 ವಸಂತಕಾಲದವರೆಗೆ ದೈಹಿಕ ಶಿಕ್ಷಣದ ವೃತ್ತಿ ಕಾಯಕವನ್ನು ಅತ್ಯಂತ ಶಿಸ್ತು ಬದ್ದತೆಯಿಂದ ಪೂರೈಸಿ ಈಚೆಗೆ ವಯೋಸೇವಾ ನಿವೃತ್ತರಾದ ಬಸವರಾಜ ಅನಂತಪುರ ತಮ್ಮ ಸೇವಾವಧಿಯಲ್ಲಿ ಆದರ್ಶತನದ ಕಾಯಕ ನಿಷ್ಠೆ ಮೆರೆದಿದ್ದಾರೆ. ಅವರ ಶಿಕ್ಷಣ ಪ್ರೇಮದ ಜೀವನ ಮಾದರಿಯಾಗಿದೆ ಎಂದು ಕಲಬುರಗಿ ಆಕಾಶವಾಣಿ, ದೂರದರ್ಶನ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಸೋಮಶೇಖರ ಎಸ್.ರುಳಿ ಶ್ಲಾಘಿಸಿದರು.ಜಮಖಂಡಿ ನಗರದಲ್ಲಿನ ಬಸವರಾಜ ಅನಂತಪುರ ಅವರ ಸ್ವಗ್ರಹಕ್ಕೆ ತೆರಳಿ ನಿವೃತ್ತರಾದ ಪ್ರಯುಕ್ತ ಬಂಗಾರ ಉಂಗುರದೊಂದಿಗೆ ಸಂಪ್ರೇಮದಿಂದ ಶಾಲು ಹೊದಿಸಿ ಅನಂತಪುರ ದಂಪತಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಅನಂತಪುರ ಗುರುಗಳು ಸಾತ್ವಿಕ ಸಂಪನ್ನರು. ಅವರ ವೃತ್ತಿ ಬದುಕು ಬದ್ದತೆಯ ಹೂರಣದಲ್ಲಿ ನಡೆದಿದೆ. ಹೆಜ್ಜೆ ಗುರುತು ಅನುಪಮವಾಗಿವೆ ಅವರ ಶಿಕ್ಷಣ ರಂಗದ ಜೀವನ ಮಾದರಿಯಾಗಿದೆ. ವೃತ್ತಿಯ ಮೇಲೆ ಹಿಡಿತ ಸಾಧಿಸಿ ಗ್ರಾಮೀಣ ಮಕ್ಕಳಲ್ಲಿ ಕ್ರೀಡೆಗಳ ಅಭಿರುಚಿ ಬೆಳೆಸಿ ಕ್ರೀಡಾ ಸಂಹವನ ಸುಲಭವಾಗಿಸಿದ್ದಾರೆ. ಸಮಾಜಮುಖಿಯಾಗಿ ಬೆರೆಯುವ ವಿಶೇಷ ಗುಣ ಸ್ವಭಾವದ ನಡುವಳಿಕೆಯಿಂದ ಮೆಚ್ಚುಗೆ ಪಾತ್ರರಾಗಿದ್ದಾರೆ.…
