Author: editor.udayarashmi@gmail.com

ಮೂವರಿಗೆ ವಾರ್ಷಿಕ, ಮೂವರಿಗೆ ಯುವ ಪ್ರಶಸ್ತಿ | ಜಿಲ್ಲಾಧಿಕಾರಿ ಡಾ.ಆನಂದ ಕೆ. ಪ್ರಕಟಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವಾರ್ಷಿಕ ಗೌರವ ಹಾಗೂ ಯುವ ಪ್ರಶಸ್ತಿಗಳನ್ನು ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಪ್ರಕಟಿಸಿದ್ದಾರೆ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಷ್ಠಾನದ ಸಭೆಯಲ್ಲಿ ಅರ್ಹರಿಗೆ ಪ್ರಶಸ್ತಿಗಳನ್ನು ಅಂತಿಮಗೊಳಿಸಲಾಗಿದೆ.ಪ್ರತಿಷ್ಠಾನದ ಗೌರವ ವಾರ್ಷಿಕ ಪ್ರಶಸ್ತಿಯನ್ನು ಜಾನಪದ ಸಾಹಿತ್ಯ ಸಮಗ್ರ ಸಾಹಿತ್ಯ ಹಾಗೂ ವಿಮರ್ಶೆ, ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ ಕೃತಿಗಳನ್ನು ಗಣನೀಯ ಸೇವೆ ಸಲ್ಲಿಸಿರುವ ಸಾಹಿತಿಗಳನ್ನು ಹಾಗೂ ಯುವ ಪ್ರಶಸ್ತಿಗೆ ಅತ್ಯುತ್ತಮ ಕೃತಿಗಳನ್ನು ರಚಿಸಿದ ಯುವ ಬರಹಗಾರರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದೆ.ವಾರ್ಷಿಕ ಗೌರವ ಪ್ರಶಸ್ತಿ ೫೦ ಸಾವಿರ ರೂ. ಗಳು ಹಾಗೂ ಯುವ ಪ್ರಶಸ್ತಿಗೆ ೧೦ ಸಾವಿರ ರೂ. ಗಳ ನಗದಿನೊಂದಿಗೆ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ವಾರ್ಷಿಕ ಪ್ರಶಸ್ತಿ ಪುರಸ್ಕೃತರು: ಜನಪದ ಕ್ಷೇತ್ರದಲ್ಲಿ ೨೦೨೨ನೇ ವಾರ್ಷಿಕ ಗೌರವ ಪ್ರಶಸ್ತಿಗೆ ದಕ್ಷಿಣಕನ್ನಡ ಜಿಲ್ಲೆಯ ಡಾ. ಬಿ.ಎ. ವಿವೇಕ ರೈ ಪುರಸ್ಕೃತರಾಗಿದ್ದಾರೆ.…

Read More

ಬಬಲೇಶ್ವರ ಮತಕ್ಷೇತ್ರದ ಮತಗಟ್ಟೆ ಅಧಿಕಾರಿಗಳಿಗೆ ಸನ್ಮಾನ ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದಲ್ಲಿ ನಡೆಯುತ್ತಿರುವ ೨೦೨೬ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ನಿಗದಿತ ಅವಧಿಗಿಂತ ಮುಂಚಿತವಾಗಿಯೇ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಜುಲೈ ೧೬ರಂದು ಸನ್ಮಾನಿಸಿ, ಅಭಿನಂದಿಸಲಾಯಿತು.​ಮತದಾರರ ಪಟ್ಟಿ ಪರಿಷ್ಕರಣೆಯ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ನಿಗದಿತ ಸಮಯಕ್ಕಿಂತ ಮೊದಲೇ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.೨೯-ಬಬಲೇಶ್ವರ ಮತಕ್ಷೇತ್ರದ​ ಭಾಗ ಸಂಖ್ಯೆ ೮೪ರ ಮತಗಟ್ಟೆ ಮಟ್ಟದ ಅಧಿಕಾರಿಯಾದ ಎಚ್.ಎನ್. ಮೋಹಿತೆ ಹಾಗೂ ಮತಗಟ್ಟೆ ಮೇಲ್ವಿಚಾರಕರಾದ ಶ್ರೀಮತಿ ಸುಜಾತಾ ಬಾಗಲಕೋಟ, ಭಾಗ ಸಂಖ್ಯೆ ೨೦೪ರ ಮತಗಟ್ಟೆ ಅಧಿಕಾರಿಯಾದ ಶ್ರೀಮತಿ ಚಂದ್ರವ್ವ ತಂಬದ ಹಾಗೂ ಮತಗಟ್ಟೆ ಮೇಲ್ವಿಚಾರಕರಾದ ಶಕೆ.ಕೆ. ಅಸ್ಕಿ ಮತ್ತು ಭಾಗ ಸಂಖ್ಯೆ ೨೧೨ರ ಮತಗಟ್ಟೆ ಅಧಿಕಾರಿಯಾದ ಶ್ರೀಮತಿ ಸುನೀತಾ ವಾಲೀಕಾರ ಹಾಗೂ ಮತಗಟ್ಟೆ ಮೇಲ್ವಿಚಾರಕರಾದ ಶಿವಪ್ಪ ಕಾಂಬಳೆ ಇವರನ್ನು ಸನ್ಮಾನಿಸಲಾಯಿತು.​ ಅವಧಿಗೆ ಮುನ್ನವೇ…

Read More

ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಪ್ರಸಾದ್ ಮನವಿ ಉದಯರಶ್ಮಿ ದಿನಪತ್ರಿಕೆ ವರದಿ: ಶ್ರೀಕಂಠ ಈಶ್ವರ್ಎಚ್ ಡಿ ಕೋಟೆ: ತಾಲೂಕಿನ ಹಲವು ಭಾಗಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲದ ಛಾಯೆ ಆವರಿಸಿದೆ. ಈ ಬಾರಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬೆಳೆಗಳು ಒಣಗುತ್ತಿದ್ದು, ಕೊಳವೆ ಬಾವಿಗಳು ಕೂಡ ಬರಿದಾಗಿವೆ. ಮುಸುಕಿನ ಜೋಳ ಒಣಗುತ್ತಿದ್ದು, ಹತ್ತಿ ಬೆಳೆ ಯಲ್ಲಿ ಯಾವುದೇ ಬೆಳವಣಿಗೆ ಕೂಡ ಕಂಡುಬರುತ್ತಿಲ್ಲ. ಇನ್ನು ಹೊಗೆಸೊಪ್ಪು ಕೂಡ ಬೆಳೆಯದೆ ಇರುವುದರಿಂದ ರೈತರು ಆತಂಕಗೊಂಡಿದ್ದಾರೆ. ಇನ್ನು ಸುರಿಯುತ್ತಿರುವ ಇಬ್ಬನಿಗೆ ಬೆಳೆಗಳು ನಾಶವಾಗುತ್ತಿದ್ದು, ಅನ್ನದಾತನಿಗೆ ದಿಕ್ಕೆತೋಚದಂತಾಗಿದೆ.ತಾಲೂಕಿನಲ್ಲಿ ಈ ತಿಂಗಳಲ್ಲಿ ಇಲ್ಲಿಯವರಿಗೆ ಕೇವಲ ನಾಲ್ಕರಿಂದ ಐದು ದಿನಗಳು ಮಾತ್ರ ಸಾಧಾರಣ ಮಳೆಯಾಗಿದ್ದರೆ, ಬೀಚನಹಳ್ಳಿ, ಆಲನಹಳ್ಳಿಯಲ್ಲಿ ಒಂದು ಹನಿ ಕೂಡ ಮಳೆ ಧರೆಗೆ ಬಿದ್ದಿಲ್ಲ. ಹೀಗಾಗಿ ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದು, ಅನ್ನದಾತ ಆಕಾಶ ನೋಡುವಂತಾಗಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ. 52 ರಷ್ಟು ಕಡಿಮೆ ಮಳೆಯಾಗಿರುವುದರಿಂದ ಬಹುತೇಕ ಕಡೆ ರೈತರು ಇನ್ನು ಬಿತ್ತನೆ…

Read More

ವಿಜಯಪುರದಲ್ಲಿ ರಾಷ್ಟ್ರೀಯ ಬಂಜಾರ ಪರಿಷತ್ ಅಧ್ಯಕ್ಷ ಪ್ರಕಾಶ ಬಾಳು ಚವ್ಹಾಣ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರಸಿದ್ಧ ಶ್ರೀ ಅಂಬಾ ಭವಾನಿ ವಾರ್ಷಿಕ ಜಾತ್ರಾ ಮಹೋತ್ಸವವು ಜುಲೈ 18 ಹಾಗೂ 19 ರಂದು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ನಡೆಯಲಿದ್ದು, ಜಾತ್ರೆಯ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ರಾಷ್ಟ್ರೀಯ ಬಂಜಾರ ಪರಿಷದ ಅಧ್ಯಕ್ಷ ಪ್ರಕಾಶ ಬಾಳು ಚವ್ಹಾಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಅವರು ಮಾತನಾಡಿ, ಜುಲೈ 18ರಂದು ಬೆಳಿಗ್ಗೆ 9.00 ಗಂಟೆಗೆ ಸೋಲಾಪುರ ರಸ್ತೆಯಲ್ಲಿರುವ ಮರಗಟ್ಟೆ ಓಣಿಯಿಂದ ಶ್ರೀ ಅಂಬಾ ಭವಾನಿ ದೇವಿಯ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಬಂಜಾರ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಡೊಳ್ಳು-ತಾಶಾ, ಸಾಂಪ್ರದಾಯಿಕ ನೃತ್ಯಗಳು, 501 ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ, ಗೋಂಬೆ ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.ಜುಲೈ 19ರಂದು ಸಂಜೆ 6.00 ಗಂಟೆಗೆ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧ…

Read More

ವಿಜಯಪುರ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ಆನಂದ ಕೆ ಮಾಹಿತಿ ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮನೆ ಮನೆ ಗಣತಿ ಹಾಗೂ ಡಿಜಿಟಲೀಕರಣ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಪ್ರಸ್ತುತ ಜಿಲ್ಲಾದ್ಯಂತ ಒಟ್ಟು ೧೯,೩೯,೬೭೭ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಗಣತಿ ಕಾರ್ಯವು ಪ್ರಗತಿಯಲ್ಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಜುಲೈ.೧೬.ರಲ್ಲಿದ್ದಂತೆ ಮತದಾರರ ಪಟ್ಟಿಯಲ್ಲಿ ಒಟ್ಟು ೧೯,೮೨,೧೧೪ ಮತದಾರರಿದ್ದು, ಗಣತಿ ನಮೂನೆಗಳನ್ನು ಈಗಾಗಲೇ ಆಯಾ ವ್ಯಾಪ್ತಿಯ ಬಿ.ಎಲ್.ಒ ಗಳಿಗೆ ವಿತರಿಸಲಾಗಿದೆ.ಮನೆ ಮನೆ ಗಣತಿ ಹಾಗೂ ಡಿಜಿಟಲೀಕರಣದ ಅವಧಿಯು ದಿನಾಂಕ ೩೦-೦೬-೨೦೨೬ ರಿಂದ ಆರಂಭಗೊಂಡಿದ್ದು, ೦೮-೦೮-೨೦೨೬ರವರೆಗೆ ನಡೆಯಲಿದೆ.​ಇದುವರೆಗೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಗಣಕೀಕರಣದ ಸದ್ಯದ ಸ್ಥಿತಿಗತಿಯಂತೆ ಒಟ್ಟು ೧೦,೦೮,೮೯೯ ಗಣತಿ ನಮೂನೆಗಳನ್ನು ಯಶಸ್ವಿಯಾಗಿ ಗಣಕೀಕರಣಗೊಳಿಸಲಾಗಿದೆ. ಇದರಲ್ಲಿ ಆನ್‌ಲೈನ್ ಮೂಲಕ ಮತದಾರರು ಸಲ್ಲಿಸಿದ ಒಟ್ಟು ಗಣತಿ ನಮೂನೆಗಳ ಸಂಖ್ಯೆ ೩,೩೨೧ ಆಗಿದೆ. ಇನ್ನುಳಿದಂತೆ ಕ್ಷೇತ್ರ ಭೇಟಿಯ ಸಮಯದಲ್ಲಿ ವಿವರ ಸಂಗ್ರಹಿಸಲು ಸಾಧ್ಯವಾಗದ ಅಥವಾ ಗೈರುಹಾಜರಾದ ಮತದಾರರ ಸಂಖ್ಯೆ…

Read More

ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗುರುವಾರ ಮಧ್ಯಾಹ್ನ ೧೨:೦೦ ಗಂಟೆಯವರೆಗೆ ೨,೫೨,೫೭೦ ಮತದಾರರ ಗಣತಿ ನಮೂನೆಗಳನ್ನು ವಿತರಣೆ ಮಾಡಲಾಗಿದ್ದು, ಅದರಲ್ಲಿ ೭೬,೭೭೭ ಗಣತಿ ನಮೂನೆಗಳು ಡಿಜಿಟೈಜ್ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಹೇಳಿದರು.ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ -೨೦೨೬ ಪ್ರಗತಿ ಕುರಿತಂತೆ ನಗರ ಮತಕ್ಷೇತ್ರದ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಆನಲೈನನಲ್ಲಿ ಮತದಾರರು ಸಲ್ಲಿಸಿದ ಒಟ್ಟು ಗಣತಿ ನಮೂನೆಗಳು ೧೯೭೯, ಸಂಗ್ರಹಿಸಲಾಗದ/ಗೈರುಹಾಜರಾದ ಮತದಾರರು ೧೧, ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರು ೪೬೮, ಮರಣ ಹೊಂದಿರುವ ಮತದಾರರು ೮೬೭ ಈಗಾಗಲೇ ನೋಂದಾಯಿಸಿಕೊಂಡ ಮತದಾರರು ೭೩೦ ಮತ್ತು ಇತರೆ ೬೯ ಪ್ರಗತಿಯ ಬಗ್ಗೆ ಮಾಹಿತಿ ನೀಡಲಾಯಿತು.ಈಗಾಗಲೇ ಶೇ.೮೭ರಷ್ಟು ಮತದಾರರಿಗೆ ಮನೆ ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಗಣತಿ ನಮೂನೆ ತಲುಪದಿರುವ ಮತದಾರರ ಗುರುತಿನ ಚೀಟಿಯ ಮಾಹಿತಿ ಹಾಗೂ ಅವರ…

Read More

ಗೋಲಗೇರಿಯ ಡಂಬಳ ಕ್ರಾಸ್‌ನಲ್ಲಿ ಸಿಂದಗಿ ಬಿಜೆಪಿ ಮಂಡಲ ಹಾಗೂ ರೈತರ ನೇತೃತ್ವದಲ್ಲಿ ಬೃಹತ್ ರಸ್ತೆ ತಡೆ ಚಳುವಳಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದೆ ನಂಬಿಕೆ ದ್ರೋಹ ಮಾಡಿದೆ. ಮಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣವೇ ಪ್ರತಿ ಹೆಕ್ಟರ್‌ಗೆ ರೂ.೫೦ ಸಾವಿರ ಬೆಳೆ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ರಮೇಶ ಭೂಸನೂರ ಆಗ್ರಹಿಸಿದ್ದಾರೆ.ಸಿಂದಗಿ ತಾಲೂಕಿನ ಗೋಲಗೇರಿಯ ಡಂಬಳ ಕ್ರಾಸ್‌ನಲ್ಲಿ ಸಿಂದಗಿ–ಕೊಡಂಗಲ್ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು, ಗುತ್ತಿಗೆ ಬಸವಣ್ಣ ಏತ ನೀರಾವರಿ ಯೋಜನೆ ಹಾಗೂ ಇಂಡಿ ಐಬಿಸಿ ಕಾಲುವೆಗಳಿಗೆ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿ ಸಿಂದಗಿ ಬಿಜೆಪಿ ಮಂಡಲ ಹಾಗೂ ರೈತರ ನೇತೃತ್ವದಲ್ಲಿ ಹಮ್ಮಿಕೊಂಡ ಬೃಹತ್ ರಸ್ತೆ ತಡೆ ಚಳುವಳಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸುತ್ತಿದೆ. ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿವೆ. ಸರ್ಕಾರ ನೀಡಿರುವ ಭರವಸೆಗಳು ಈಡೇರಿಲ್ಲ ಎಂದು ಟೀಕಿಸಿದ ಅವರು, ಕಾಂಗ್ರೆಸ್…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರ್ವೇ ನಂ.೪೮೭ರ ಜಾಗವು ವಿವಾದಿತವಾಗಿದ್ದು, ಅದರ ಬಗ್ಗೆ ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ತಿಳಿಯದೆಯೇ ಸಮಾಜ ಭವನ ನಿರ್ಮಾಣ ಕಾರ್ಯಕೈಗೊಳ್ಳಲಾಗಿದೆ ಎಂದು ಪತ್ರಕರ್ತ ಸಂಗಮೇಶ ಡಿಗ್ಗಿ ಆರೋಪಿಸಿದ್ದಾರೆ.ಈ ಸ್ಥಳದ ಸುತ್ತಮುತ್ತ ಸರ್ಕಾರಿ ಶಾಲೆಗಳು, ಆದರ್ಶ ಶಾಲೆ ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿದ್ದು, ಇಲ್ಲಿ ಸಮಾಜ ಭವನ ನಿರ್ಮಾಣವಾದರೆ ಸಭೆ-ಸಮಾರಂಭಗಳ ಕಾರಣದಿಂದ ಉಂಟಾಗುವ ಶಬ್ದಮಾಲಿನ್ಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಸಂಗಮೇಶ ಡಿಗ್ಗಿ ತಿಳಿಸಿದ್ದಾರೆ.ಮನವಿ ಸಲ್ಲಸಿ ಮಾತನಾಡಿದ ಅವರು, ಇದೇ ಜಾಗವನ್ನು ಒಂದು ಸಮುದಾಯಕ್ಕೆ ನೀಡಿದರೆ, ಮುಂದಿನ ದಿನಗಳಲ್ಲಿ ಇತರೆ ಸಮುದಾಯಗಳು ಹಾಗೂ ಧರ್ಮದವರೂ ಸಹ ಭವನ ಅಥವಾ ಧಾರ್ಮಿಕ ಕೇಂದ್ರಗಳಿಗಾಗಿ ಇದೇ ರೀತಿಯ ಬೇಡಿಕೆ ಮುಂದಿಡುವ ಸಾಧ್ಯತೆ ಇದ್ದು, ಇದರಿಂದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯಾಗುವ ಆತಂಕ ವ್ಯಕ್ತಪಡಿಸಿದ್ದಾರೆ.ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಜಾತಿ-ಧರ್ಮ ಸಂಬಂಧಿತ ಸಂಘರ್ಷಕ್ಕೆ ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.ನಗರದಲ್ಲಿ ಸಮುದಾಯ ಭವನ ಅಥವಾ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಬೇಕಾದರೆ, ಲೇಔಟ್‌ಗಳಲ್ಲಿರುವ ಸಿ.ಎ.ಸೈಟ್‌ಗಳಲ್ಲಿ ನಿರ್ಮಿಸಬೇಕು.…

Read More

ವಿಜಯಪುರ ಜಿಲ್ಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಮತ್ತು ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಒತ್ತಾಯ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ಸಂಪೂರ್ಣ ಅನುಷ್ಠಾನಗೊಳಿಸುವುದು ವಿಜಯಪುರ ಜಿಲ್ಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶ್ರೀ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಸಿದ್ದಲಿಂಗ ದೇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ವಾಸುದೇವ ಮೇಟಿ ಬಣ) ತಾಲೂಕ ಘಟಕದ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ತಾಳಿಕೋಟೆ ತಾಲೂಕಿನ ಹಾಗೂ ಸುರಪೂರ ಭಾಗದ ರೈತರ ಪ್ರತಿಭಟನಾ ಮೆರವಣಿಗೆಗೆ ಶ್ರೀ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಚಾಲನೆ ನೀಡಿ ಆಶೀರ್ವಚನ ನೀಡಿದರು.ಅಲ್ಲಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಬಸವೇಶ್ವರ ವೃತ್ತಕ್ಕೆ ತಲುಪಿ ಅಲ್ಲಿ ಮಾನವ ಸರ್ಪಳಿ ನಿರ್ಮಿಸಿ ಕೆಲ ಹೊತ್ತು ರಸ್ತೆ ತಡೆ ನಡೆಸಿ ಯೋಜನೆ ವಿಳಂಬ ಖಂಡಿಸಿ…

Read More

ಯುವಸಿರಿ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಕೂಲಿಕಾರ್ಮಿಕರು, ಸಣ್ಣ ವ್ಯಾಪಾರಸ್ಥರು, ದಿನಗೂಲಿ ನೌಕರರ ಸ್ವಸಹಾಯ ಗುಂಪುಗಳು ಹಾಗೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಈ ಯುವಸಿರಿ ಸೌಹಾರ್ದ ಸಹಕಾರಿ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಯರನಾಳ ಯುವಸಿರಿ ಸೌ.ಸ.ಸಂ.ಅಧ್ಯಕ್ಷರಾದ ಶಂಕರಗೌಡ ಪಾಟೀಲ ಹೇಳಿದರು.ಗುರುವಾರ ತಾಲೂಕಿನ ಹಿರೂರು ಗ್ರಾಮದಲ್ಲಿ ಸಂಘದ ಹತ್ತನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದಲ್ಲಿ ೨೦೦೧ರಲ್ಲಿ ಆರಂಭವಾದ ಈ ಸಂಘವು ಕೇವಲ ೫ ವರ್ಷಗಳಲ್ಲಿ ೧೦ ಶಾಖೆಗಳನ್ನು ಹೊಂದಿದ್ದು, ೨೫ ಕೋಟಿ ಠೇವಣಿ, ೩೦ ಕೋಟಿ ದುಡಿಯುವ ಬಂಡವಾಳ ಹಾಗೂ ೧.೫ ಕೋಟಿ ಶೇರು ಬಂಡವಾಳ ಹೊಂದಿ ಪ್ರಗತಿ ಹಂತದಲ್ಲಿದೆ. ಸಂಘವು ವಿಶೇಷವಾಗಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಒತ್ತು ಕೊಟ್ಟು ಕೆಲಸ ಮಾಡುತ್ತಿದೆ. ಗ್ರಾಮೀಣ ಜನರ ಆರ್ಥಿಕ ಸಂಕಷ್ಟವನ್ನು ದೂರ ಮಾಡಿ ಸುಲಭವಾಗಿ ಸಾಲ ಸೌಲಭ್ಯ ಒದಗಿಸುವ ಮೂಲಕ…

Read More