Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಂಜಾರ ಭಾಷೆಯನ್ನು ಭಾರತ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸುವ ಸಲುವಾಗಿ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ ಚವ್ಹಾಣ ಅವರ ಅಧ್ಯಕ್ಷತೆಯಲ್ಲಿ ಜ.28 ರಂದು ಬಂಜಾರ ಸಮುದಾಯದ ತಜ್ಞರ ಸಭೆಯನ್ನು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಲ್ಲಿ ಆಯೋಜಿಸಲಾಗಿತ್ತು.ಈ ಸಭೆಯಲ್ಲಿ ಬಂಜಾರ ಸಮುದಾಯದ ಹಿರಿಯ ತಜ್ಞರುಗಳಾದ ಡಾ ಡಿ.ಬಿ. ನಾಯಕ್‌, ಡಾ.ಹರಿಲಾಲ ಪವಾರ, ಪ್ರೊ.ಸಣ್ಣರಾಮ ನಾಯ್ಕ್‌, ಬಿ.ಹೀರಾ ನಾಯ್ಕ್‌, ಭೋಜ್ಯಾ ನಾಯಕ್, ಬಾಲರಾಜ್‌ ನಾಯಕ್ ಇವರುಗಳು ಬಂಜಾರಾ ಸಮುದಾಯದ ಐತಿಹಾಸ, ಭಾಷೆ, ಸಂಸ್ಕೃತಿಯ ಹಿನ್ನೆಲೆಯನ್ನು ಚರ್ಚೆಸಿ, ವರದಿಯನ್ನು ಸಿದ್ದಪಡಿಸಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ.ಮೋತಿಲಾಲ್‌ ಚವ್ಹಾಣ್‌ ಹಾಗೂ ರಿಜಿಸ್ಟ್ರಾರ್‌ ಡಿ.ಎಂ.ರವಿಕುಮಾರ್ ಅವರಿಗೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಡಾ.ಎಂ.ರವಿ ನಾಯ್ಕ ಅವರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೂರ್ಯ ಪೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿ ಮತ್ತು ಲಕ್ಷ್ಯ ಕರಿಯರ್ ಅಕಾಡೆಮಿ ಅವರು ನೀಡುವ ರಾಜ್ಯ ಮಟ್ಟದ “ಶಿಕ್ಷಣ ಚೈತನ್ಯ ಪ್ರಶಸ್ತಿ “ಗೆ ಆಕ್ಸಫರ್ಡ್ ಇಂಟರನ್ಯಾಷನಲ್ ಸ್ಕೂಲ್ ಹಾಗೂ ಬಿ ಎಂ ಪಾಟೀಲ್ ಪ್ರೌಢ ಶಾಲೆ ಗುಬ್ಬೆವಾಡ ಶಾಲೆಯನ್ನು ಆಯ್ಕೆ ಮಾಡಿ ಆ ಪ್ರಶಸ್ತಿ ಯನ್ನು ನೀಡಿದ್ದಕ್ಕಾಗಿ ಗಣರಾಜ್ಯೋತ್ಸವ ದಿನದಂದು ಊರಿನ ಎಲ್ಲ ಗಣ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಸೇರಿ ಶ್ರೀ ಅಪ್ಪಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಾಪೂಗೌಡ ಎಂ ಪಾಟೀಲ್ ಅವರಿಗೆ ಸನ್ಮಾನಿಸಿ, ಗೌರವಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಧುನಿಕತೆ ಬೆಳದಂತೆ ಮೋಬೈಲ್, ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ನಮ್ಮ ಗ್ರಾಮೀಣ ಜಾನಪದ ಸಂಸ್ಕೃತಿ, ನೃತ್ಯ, ಯಕ್ಷಗಾನ, ಮಹಾಭಾರತ-ರಾಮಾಯಣದಂತಹ ಕಥಾರೂಪಕಗಳು ಮಾಯವಾಗುತ್ತಿರುವದು ತೀರ ಆತಂಕಕಾರಿ ಸಂಗತಿ. ಮಕ್ಕಳಲ್ಲಿರುವ ಅಭಿರುಚಿ, ಆಸಕ್ತಿ ಮತ್ತು ಪ್ರತಿಭೆ ಗುರುತಿಸಿ, ಸುಪ್ತವಾದ ಕಲೆ-ಕೌಶಲ್ಯ ಅನಾವರಣಗೊಳ್ಳಲು ಸಾಂಸ್ಕೃತಿಕ ವೇದಿಕೆಗಳು ಇಂದಿನ ಅಗತ್ಯತೆಯಾಗಿದೆ ಎಂದು ನಿವೃತ್ತ ಪ್ರಾಂಶುಪಾಲೆ ಶಾಂತಾ ಹೆರಕಲ್ ಅವರು ಅಭಿಪ್ರಾಯಪಟ್ಟರು.ಅವರು ಮಾತನಾಡುತ್ತಾ, ಪ್ರತಿಯೊಂದು ಮಗುವಿನಲ್ಲಿ ಒಂದೊಂದು ವಿಶಿಷ್ಟವಾದ ಪ್ರತಿಭೆ ಮತ್ತು ನೈಪುಣ್ಯತೆ ಇದ್ದೇ ಇರುತ್ತದೆ. ಆ ಪ್ರತಿಬೆಯು ಸಮಾಜದ ಮುಖ್ಯವಾಹಿನಿಗೆ ಬರಲು ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವದರ ಮೂಲಕ ವೇದಿಕೆ ಕಲ್ಪಿಸಿಕೊಡಬೇಕು. ಅಳಿವಿನ ಅಂಚಿನಲ್ಲಿರುವ ನಮ್ಮ ದೇಶೀಯ ಸಂಗೀತ, ಸಾಹಿತ್ಯ, ಕಲೆ-ಸಂಸ್ಕೃತಿ, ಗರತಿಯ ಹಾಡುಗಳು, ಕೋಲಾಟ, ನೃತ್ಯ, ಯಕ್ಷಗಾನ, ಶಿವತಾಂಡವ ಇವೆಲ್ಲವನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.ಕಾರ್ಯಕ್ರಮದಲ್ಲಿ ನಟರಾಜ ಡ್ಯಾನ್ಸ್ ಅಕ್ಯಾಡೆಮಿಯ ಸುಮಾರು ೬೦ ಕ್ಕೂ ಹೆಚ್ಚು ಮಕ್ಕಳಿಂದ ಹೇ ಶಾರದೆ, ವೀಣಾ ಪುಸ್ತಕ, ಗರುಡ…

Read More

ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಕಳವಳ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಮ್ಮ ದೇಶ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ನೀಡಿ ತನ್ನ ನಾಯಕನನ್ನು ಆರಿಸುವ ಸೌಭಾಗ್ಯ ಕಲ್ಪಿಸಿದರೂ ಇನ್ನೂ ಶೇ.೧೦೦ ರಷ್ಟು ಮತದಾನವಾಗದಿರೋದು ದುರದೃಷ್ಟಕರ ಸಂಗತಿ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಚುನಾವಣಾ ಆಯೋಗ, ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಮತದಾನ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಅತ್ಯಂತ ಪ್ರಮುಖ ಕರ್ತವ್ಯವೂ ಹೌದು. ಕೆಲವರು ನನ್ನ ಮತದಿಂದ ಏನು ಬದಲಾವಣೆ ಆಗುತ್ತದೆ ಎಂದು ನಿರ್ಲಕ್ಷ ತೋರಿಸುವದು ತಪ್ಪು. ಒಂದು ಮತವೂ ಫಲಿತಾಂಶವನ್ನು ಬದಲಿಸುವ ಶಕ್ತಿ ಹೊಂದಿದೆ ಎನ್ನುವ ಸತ್ಯವನ್ನು ಪ್ರತಿಯೊಬ್ಬರು ಅರಿಯಬೇಕು. ಚುನಾವಣೆ ಸಮಯದಲ್ಲಿ…

Read More

25 ಶಾಸಕರ ನಿಗಮ-ಮಂಡಳಿಗಳ ಅಧ್ಯಕ್ಷ ಅವಧಿ ಮುಕ್ತಾಯ | ಆದೇಶ ಹೊರಡಿಸಿದ ರಾಜ್ಯ ಸರ್ಕಾರ | ಬೆಂಗಳೂರು: 25 ಶಾಸಕರ ನಿಗಮ – ಮಂಡಳಿಗಳ ಅಧ್ಯಕ್ಷ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬುಧವಾರ ಅವರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಮಹತ್ವದ ಅಧಿಸೂಚನೆ ಹೊರಡಿಸಿದೆ.2024 ಜನವರಿ 26 ರಂದು ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಒಟ್ಟು 25 ಶಾಸಕರ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(DPAR)ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಎಲ್ಲಾ ಶಾಸಕರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ ಮುಂದುವರಿಸಲಾಗಿದೆ. ಈ ನೇಮಕಾತಿಯು ಜನವರಿ 26, 2026 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಯಾರೆಲ್ಲಾ ಮುಂದುವರಿಕೆ?ಎನ್.ಎ. ಹ್ಯಾರಿಸ್: ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ).ಎಸ್.ಆರ್. ಶ್ರೀನಿವಾಸ್ (ವಾಸು): ಅಧ್ಯಕ್ಷರು, ಕೆಎಸ್‌ಆರ್‌ಟಿಸಿ (KSRTC).ಕೆ.ಎಂ.…

Read More

ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಜೇಮ್ಸ್ ಎಲ್ಲೀಸ್ ಅವರು, “ವೃತ್ತಪತ್ರಿಕೆಗಳು ಈ ಜಗತ್ತಿನ ಕನ್ನಡಿ ಇದ್ದಂತೆ” ಎಂದು ಹೇಳಿದ್ದಾರೆ. ಅಂದರೆ ವಿಶ್ವದೆಲ್ಲೆಡೆ ನಡೆದ ಘಟನೆ, ಪ್ರಚಲಿತ ಮತ್ತು ಮುಂದೆ ನಡೆಯಬಹುದಾದ ಸಂಗತಿಗಳ ಬಗ್ಗೆ ಮಾಹಿತಿ ನೀಡುವ ಒಂದು ಪರಿಣಾಮಕಾರಿ ಸಂವಹನ ಮತ್ತು ಮಾಧ್ಯಮವಾಗಿದೆ. ಪ್ರತಿಯೊಬ್ಬರೂ ಬೆಳಿಗ್ಗೆ ಎದ್ದ ಕೂಡಲೇ ಕೈಯಲ್ಲಿ ಟೀ ಅಥವಾ ಕಾಫಿ ಹಿಡಿದು ವೃತ್ತಪತ್ರಿಕೆಯನ್ನು ಒದುತ್ತಿರುವದನ್ನು ನಾವೆಲ್ಲರೂ ಕಂಡಿದ್ದೇವೆ. ರಾಜ್ಯ, ದೇಶ-ವಿದೇಶಗಳ ಸುದ್ದಿಗಳನ್ನು ಪ್ರತಿ ಮನೆಗೆ ತಲುಪಿಸುವ ಏಕೈಕ ಸಾಧನವೆಂದರೆ ಅದುವೇ ವೃತ್ತಪತ್ರಿಕೆ. ನಾವು ಇಡೀ ವಿಶ್ವದ ದಶ ದಿಕ್ಕುಗಳ (ನಾರ್ಥ, ಈಸ್ಟ್, ವೆಸ್ಟ್ & ಸೌಥ್) ದೈನಂದಿನ ದಿನಚರಿ ಮತ್ತು ಆಗಿ ಹೋದ ಘಟನೆಗಳ ಬಗ್ಗೆ ತಿಳಿಸುವ ಪತ್ರಿಕೆಯ ಕಾರ್ಯ ಶ್ಲಾಘನೀಯ. ನಮಗೆ ಜಗತ್ತಿನ ಎಲ್ಲ ಅಗು-ಹೋಗುಗಳ ಕುರಿತು ತಿಳಿಸಿಕೊಡುವುದೇ ವೃತ್ತಪತ್ರಿಕೆ. ಇಂದಿನ ಡಿಜಿಟಲ್ ಯುಗದಲ್ಲಿ ವೃತ್ತಪತ್ರಿಕೆಯು ಇ-ಪೇಪರ್, ಸಾಮಾಜಿಕ ಜಾಲತಾಣ ಮತ್ತು ವಿವಿಧ ವೆಬಸೈಟಗಳ ಮೂಲಕವೂ ತಮ್ಮ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸುತ್ತಾ…

Read More

ಹೆಚ್ ಡಿ ಕೋಟೆ ಹಿಂದೂ ಸಮಾಜೋತ್ಸವ | ಹಿಂದೂ ಜಾಗರಣಾ ವೇದಿಕೆಯ ಉಲ್ಲಾಸ್ ಜೀ ಅಭಿಮತ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಪ್ರಯುಕ್ತ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ನಡೆಯಿತು.ಚಾಮುಂಡೇಶ್ವರಿ ದೇವಾಲಯದಿಂದ ಹೊರಟ ಭಾರತಮಾತಾ ರಥಯಾತ್ರೆ ವಿವಿಧ ಕಲಾತಂಡಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಸಾಗಿ ಒಂದನೇ ಮುಖ್ಯರಸ್ತೆ ಬಾಪೂಜಿ ಸರ್ಕಲ್ ಹತ್ತಿರ ಇರುವ ಹಳೆ ಆಸ್ಪತ್ರೆ ಮೈದಾನದಲ್ಲಿ ಸಮಾಪ್ತಿಗೊಂಡಿತ್ತು. ಬಳಿಕ ವೇದಿಕೆ ಕಾರ್ಯಕ್ರಮಕ್ಕೆ ಬಿಡುಗಲು ಪಡುವಲು ವಿರಕ್ತ ಮಠದ ಮಹಾದೇವಸ್ವಾಮಿಗಳು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.ಹಿಂದೂ ಜಾಗರಣಾ ವೇದಿಕೆಯ ಉಲ್ಲಾಸ್ ಜೀ ಮಾತನಾಡಿ, ಎಲ್ಲಿಯವರೆಗೆ ಧರ್ಮ ಸುರಕ್ಷಿವಾಗಿರುತ್ತೋ ಅಲ್ಲಿಯವರೆಗೆ ರಾಷ್ಟ್ರ ಸುರಕ್ಷಿತವಾಗಿತ್ತೆ. ಭಾರತದ ಶಕ್ತಿಯನ್ನು ಕುಗ್ಗಿಸಲು ಸುತ್ತಮುತ್ತಲಿನ ರಾಷ್ಟ್ರಗಳಲ್ಲಿ ದಂಗೆ ಎಬ್ಬಿಸಲಾಗುತ್ತಿದೆ. ಬೆಂಗಳೂರಿನ ಕೆಜೆ, ಡಿಜೆ ಹಳ್ಳಿ, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಗಳ ಹಿಂದೆ ವಿದೇಶ ಶಕ್ತಿಗಳ ಕೈವಾಡ ಇದೆ. ಮತೀಯ ಸಂಘಟನೆಗಳು ಇದರಲ್ಲಿ ಪಾಲ್ಗೊಂಡಿವೆ. ಇದನ್ನು ತಡೆಯಬೇಕಾದರೆ ಹಿಂದೂಗಳು ಎದ್ದು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾಮಾಜಿಕ, ಸಹಕಾರ ರಂಗದಲ್ಲಿ ಅವಿರತವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ದಿ.ಬಿ.ಎಸ್.ಪಾಟೀಲ ಮೇರುವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ ಎಂದು ವಕೀಲ ಎಸ್.ಬಿ.ಪಾಟೀಲ ಹೇಳಿದರು.ತಾಲ್ಲೂಕಿನ ನಿವಾಳಖೇಡ ಗ್ರಾಮದಲ್ಲಿ ಬುಧವಾರ ಜರುಗಿದ ಸಹಕಾರಿ ಕ್ಷೇತ್ರದ ಧುರೀಣ ದಿ:ಬಿ.ಎಸ್.ಪಾಟೀಲ ಇವರ ನಾಲ್ಕನೆಯ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ದೇವರಹಿಪ್ಪರಗಿ ಶ್ರೀಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ಸತತ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿ ತಮ್ಮದೇಯಾದ ವಿಶಿಷ್ಠ ಸೇವೆಯ ಮೂಲಕ ಮನೆಮಾತಾಗಿದ್ದ ಪಾಟೀಲರು ಯಾವುದೇ ವಿವಾದಗಳಿಗೆ ಅವಕಾಶ ನೀಡದೇ ಸದಾ ಹಸನ್ಮುಖಿಯಾಗಿ, ಗ್ರಾಹಕರ ಮನೋಭಾವನೆಗಳಿಗೆ ಸ್ಪಂದಿಸುವುದರ ಮೂಲಕ ಬ್ಯಾಂಕ್‌ನ್ನು ಪ್ರಗತಿಪಥದಲ್ಲಿ ಮುನ್ನಡೆಸಿ ಸಮಾಜಕ್ಕೆ ಕೊಡುಗೆ ನೀಡಿದವರು. ಇಂತಹ ಮಹನೀಯರ ಆದರ್ಶಗಳನ್ನು ಇಂದಿನ ಸಹಕಾರ ರಂಗದ ಇತರರು ಮೈಗೂಡಿಸಿಕೊಳ್ಳಬೇಕು ಎಂದರು.ಬಸವನ ಬಾಗೇವಾಡಿ ಮುತ್ತಯ್ಯ ಸ್ವಾಮೀಜಿ ಹಾಗೂ ಜಂಬಲದಿನ್ನಿ ಸಿದ್ಧರಾಮ ದೇವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಲೋಕೋಪಯೋಗಿ ಇಲಾಖೆಯ ನಿವೃತ್ತ ಇಇ ಬಿ.ಬಿ.ಪಾಟೀಲ, ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ಅಧ್ಯಕ್ಷ ವೈ.ಬಿ.ಪಾಟೀಲ, ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್ ಹಾಗೂ ಕರ್ನಾಟಕ ನಾಡ ರಕ್ಷಣಾ ವೇದಿಕೆ ವಿಜಯಪುರ ವತಿಯಿಂದ ವಿಶೇಷ ಸಾಧಕರಿಗೆ ಕೊಡಮಾಡುವ ರಾಷ್ಟ್ರೀಯ ಜ್ಞಾನಸಿರಿ ಪ್ರಶಸ್ತಿಯನ್ನು ನಗರದ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ಡಿ.ಎನ್.ಧರಿ ಅವರಿಗೆ ಬುಧವಾರ ಪ್ರದಾನ ಮಾಡಲಾಯಿತು.ಜ.28 ರ ಇಳಿಹೊತ್ತು ನಗರದಲ್ಲಿ ನಡೆದ ‘ಜ್ಞಾನಸಿರಿ ಉತ್ಸವ-2026’ ಸಮಾರಂಭದಲ್ಲಿ ಮನುಗೂಳಿಯ ಸಂಗನಬಸವ ಶಿವಾಚಾರ್ಯರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಮತ್ತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ಸೇರಿದಂತೆ ಅನೇಕ ಗಣ್ಯರು ಡಾ. ಡಿ.ಎನ್.ಧರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Read More

ಚಡಚಣದಲ್ಲಿ ವಿವಿಧ ಇಲಾಖೆಗಳ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭರವಸೆ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರ ಜಿಲ್ಲಾಧಿಕಾರಿ ಡಾ| ಆನಂದ.ಕೆ. ಅವರು ಬುಧವಾರ ಚಡಚಣ ಪಟ್ಟಣಕ್ಕೆ ಭೇಟಿ ನೀಡಿ ಸಮುದಾಯ ಆರೋಗ್ಯ ಕೇಂದ್ರ, ಬಿಸಿಎಮ್ ವಸತಿಗೃಹ, ಅಂಗನವಾಡಿ ಕೇಂದ್ರ, ಭೂಮಿ ಕೇಂದ್ರ, ತಹಶೀಲದಾರರ ಕಾರ್ಯಾಲಯ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಕಚೇರಿಗಳನ್ನು ಪರಿಶೀಲಿಸಿದರು.ಪರಿಶೀಲನೆಯ ವೇಳೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಸೇವೆಗಳ ಸ್ಥಿತಿ, ಸಿಬ್ಬಂದಿ ಹಾಜರಾತಿ, ಔಷಧಿ ಲಭ್ಯತೆ, ಸ್ವಚ್ಛತೆ ಹಾಗೂ ರೋಗಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯಬದ್ಧ ಸೇವೆ ನೀಡುವಂತೆ ಹಾಗೂ ಔಷಧಿಗಳನ್ನು ಹೊರಗಡೆಯಿಂದ ಬರೆದುಕೊಡಬಾರದು, ಡಯಾಲಿಸಿಸ್ ವಿಭಾಗದಲ್ಲಿ ಕೇವಲ 2 ಹಾಸಿಗಳು ಇದ್ದು, ಹೆಚ್ಚುವರಿ ಹಾಸಿಗೆಗಳ ಬೇಡಿಕೆ ಇಟ್ಟಿದ್ದು, ನಾನು ಸರಕಾರದ ಹಂತದಲ್ಲಿ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಹೇಳಿದ ಅವರು, ಈ ಆಸ್ಪತ್ರೆಯನ್ನು ತಾಲೂಕಾ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಪತ್ರಕರ್ತರು ಕೇಳಿದಾಗ ತಾಲೂಕಾ ಆಸ್ಪತ್ರೆಗೆ ಮೇಲ್ದರ್ಜೆಗೇರಿಸಬೇಕಾದರೆ ವೈದ್ಯರ ಕೊರತೆ ಇದೆ. ಅದೂ ಅಲ್ಲದೇ…

Read More