Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ವ್ಯಾಪ್ತಿಯಲ್ಲಿ ಸಂಜೆ ಸುರಿದ ಅಕಾಲಿಕ ಮಳೆ ರೈತರಲ್ಲಿ ಆತಂಕಕ್ಕೆ ಕಾರಣವಾಯಿತು.ಗುರುವಾರ ಸಂಜೆ ದಿಡೀರನೆ ಆರಂಭಗೊಂಡ ಮಳೆ ರಭಸವಾಗಿ ಸುರಿದು ದ್ರಾಕ್ಷಿ, ಕಡಲೆ ಹಾಗೂ ತೊಗರಿ ಬೆಳೆಗಾರರಲ್ಲಿ ಕಸಿವಿಸಿ ಉಂಟುಮಾಡಿತು. ಈ ಕುರಿತು ರೈತನಾಯಕರಾದ ಜಯರಾಮ್ ನಾಡಗೌಡ ಮಾತನಾಡಿ, ತೊಗರಿ, ಮೆಕ್ಕೆಜೋಳ ಬೆಳೆಗಳು ರಾಶಿ ಮಾಡುವ ಹಂತದಲ್ಲಿದೆ. ಈ ಮಳೆಗೆ ಕಾಳು ಸಿಡಿದುಹೋಗುವ ಸಾಧ್ಯತೆಗಳಿವೆ. ಕಡಲೆ ಬೆಳೆಯು ಸಹ ತನ್ನ ಹುಳುಚು ಕಳೆದುಕೊಂಡು ಮುಂದೆ ಕಡಿಮೆ ಹೂ ಬಿಡುವ ಹಾಗೂ ಬಿಡದೇ ಇರಬಹುದು. ಇನ್ನೂ ಗೋಧಿ ಸಹ ಇಟ್ಟಂಗಿರೋಗ ಎಂಬ ಬಾಧೆಗೆ ಒಳಗಾಗಿ ಕೆಂಪಾಗುವ ಸಾಧ್ಯತೆಗಳಿವೆ. ಅಲ್ಲದೆ ಹೂ ಬಿಡುವ ದ್ರಾಕ್ಷಿ ಬೆಳೆಗೆ ಸಾಕಷ್ಟು ಹಾನಿಯಾಗುವದು. ಸರ್ಕಾರದಿಂದ ಬೆಳೆ ಪರಿಹಾರ ಸ್ವಲ್ಪವಾದರೂ ಬಂದಾಯಿತಲ್ಲ ಎಂದು ಸಮಾಧಾನ ಪಡುತ್ತಿರುವಂತೆಯೇ ಮತ್ತೇ ಮಳೆ ಆರಂಭಗೊಂಡು ಉಳಿದ ಬೆಳೆಗಳಿಗೆ ಮಾರಕವಾಗುತ್ತದೆಯೋ ಎಂಬ ಸಣ್ಣ ಭಯ ಆರಂಭವಾಗಿದೆ ಎನ್ನುತ್ತಾರೆ.ಮಳೆಯಿಂದ ರಸ್ತೆಯಲ್ಲಿ ಹರಿಯುವ ನೀರಿನ ಪ್ರಮಾಣ ನೋಡಿದಾಗ ಇನ್ನೂ ಸ್ವಲ್ಪ ದಿನ ಯಾವುದೇ ಮಳೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ, ಉತ್ತರ ಪ್ರಾಂತ ವತಿಯಿಂದ ಗೋವಿನ ಜೋಳ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ಪ್ರತಿ ಪಂಚಾಯತಿ ಮಟ್ಟದಲ್ಲಿ ಕೇಂದ್ರ ತೆರೆಯಲು ಜಿಲ್ಲಾಧಿಕಾರಿ ಡಾ. ಆನಂದ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಭಾರತೀಯ ಕಿಸಾನ ಸಂಘದ ಕರ್ನಾಟಕ ಪ್ರದೇಶ ಜಿಲ್ಲಾಧ್ಯಕ್ಷ ರವೀಂದ್ರ ಮೇಡೆಗಾರ ಮಾತನಾಡಿ, ರೈತರು ಬೆಳೆದ ಗೋವಿನ ಜೋಳ ಹಾಗೂ ತೊಗರಿ ಉತ್ಪನ್ನಗಳನ್ನು ಮಿತಿ ಹಾಕದೆ ಪ್ರತಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಸಹಕಾರಿ ಸಂಘಗಳ ಮೂಲಕ ಉತ್ಪನ್ನಗಳನ್ನು ಖರೀದಿಸಲು ಸಂಬಂಧ ಪಟ್ಟವರಿಗೆ ಅತಿ ಶೀಘ್ರದಲ್ಲಿ ಖರೀದಿಸಲು ಕ್ರಮ ಕೈಕೊಳ್ಳಬೇಕು. ಅದಕ್ಕೆ ಬೇಕಾದ ಮೈಸ್ಸನ ಚೆಕ್ ಮಾಡುವದನ್ನು ಖರೀದಿ ಕೇಂದ್ರಗಳಲ್ಲಿ ಪೂರೈಸಬೇಕು. ತಡ ಮಾಡಿದರೆ ರೈತರು ಬಿದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದರು.ಈ ಸಂದರ್ಭಧಲ್ಲಿ ಮಲ್ಲನಗೌಡ ಪಾಟೀಲ, ಗುರುನಾಥ ಬಗಲಿ, ಶ್ರೀಶೈಲ ಜಾಲಗೇರಿ, ಮಹಾಂತೇಶ ಬಾಗೇವಾಡಿ, ಸಿದರಾಯ ಕುಂಬಾರ, ಬಸವರಾಜ ಸುತಗುಂಡಿ, ಪುಟ್ಟಸ್ವಾಮಿ ಸಂಗಮೇಶ ಕುಂಬಾರ, ಶ್ರೀಶೈಲ ಜವಳಗಿ, ಚನ್ನಪ್ಪ ಮಿರಗಿ, ಚಿದನಂದ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ನಾವು ನಡೆದಾಡುವ ಈ ನೆಲ ಕುಡಿಯುವ ನೀರು , ಸೇವಿಸುವಾಗ ಗಾಳಿ ಎಲ್ಲವೂ ಈ ಪ್ರಕೃತಿಯ ಕೊಡುಗೆ ಅದಕ್ಕೆ ನಾವು ಸದಾ ಕೃತಜ್ಞರಾಗಿರಬೇಕು ಎಂಬ ಭಾವ ನಮ್ಮಲ್ಲಿ ಸದಾ ಮಿಡಿಯುತ್ತಿರುತ್ತದೆ. ಯಾವುದೇ ವಸ್ತುವಿರಲಿ ವ್ಯಕ್ತಿ ಇರಲಿ ಅವರಿಂದ ನಮಗೆ ದೊರೆಯುವ ಸಹಾಯ ಸಲಹೆ ಸಹಕಾರಗಳು ಅನುಕೂಲಕರವಾಗಿ ಪರಿಣಮಿಸಿದಾಗ ನಾವು ಅವರಿಗೆ ಗೌರವ ಮತ್ತು ಪ್ರೀತಿಪೂರ್ವಕವಾಗಿ ಧನ್ಯವಾದಗಳು ಅರ್ಪಿಸುತ್ತೇವೆ. ಇದನ್ನೇ ಕೃತಜ್ಞತೆ ಎಂದು ಹೇಳುವುದು..ಮನುಷ್ಯನಿಗೆ ಯಾವುದೇ ವಿಷಯದಲ್ಲಿ ಸಂತಸ ತೃಪ್ತಿಗಳು ಅತ್ಯವಶ್ಯಕ. ಈ ಸಂತಸ ಮತ್ತು ತೃಪ್ತಿಗಳಿಗೆ ಪೂರಕವಾಗಿ ಕೃತಜ್ಞತೆಯು ಕಾರ್ಯನಿರ್ವಹಿಸುತ್ತದೆ. ಹೊಲದಲ್ಲಿ ಕಾಲಿಡುವ ಮುನ್ನ ರೈತ ತನ್ನ ಭೂಮಿಗೆ ನಮಸ್ಕರಿಸಿ ಬಂಗಾರದ ಬೆಳೆ ಕೊಡು ಎಂದು ಬೇಡಿಕೊಂಡು ಬೀಜವನ್ನು ಬಿತ್ತುತ್ತಾನೆ, ನೀರು ಹಾಯ್ಸುತ್ತಾನೆ ಬೆಳೆ ಬೆಳೆಯುತ್ತಾನೆ. ಒಂದೊಳ್ಳೆಯ ಫಸಲು ಬೆಳೆದು ನಿಂತಾಗ ಸಕುಟುಂಬ ಪರಿವಾರ ಸಮೇತ ಅತ್ಯಂತ ವಿಜೃಂಭಣೆಯಿಂದ ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಆಕೆಯ ಮಡಿಲಲ್ಲಿ ನೈವೇದ್ಯವನ್ನು ಇಟ್ಟು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಪಂಚಾಯಿತಿ ಪೌರಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ರಾಜ್ಯ ಪೌರ ನೌಕರರ ಸಂಘದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ, ಹಾಗೂ ತಮ್ಮ ಬೇಡಿಕೆಗಳನ್ನು ಇಡೇರಿಸಲು ಆಗ್ರಹಿಸಿ ಶಿರಸ್ತೇದಾರ ಡಿ.ಎಸ್.ಭೋವಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಪಂಚಾಯಿತಿ ಪೌರಕಾರ್ಮಿಕರು ಬುಧವಾರ ತಹಶೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿ ತಮ್ಮ ಬೇಡಿಕೆ ಇಡೇರಿಕೆಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಬಾಗೇವಾಡಿ ಮಾತನಾಡಿ, ನಮ್ಮೇಲ್ಲ ಪೌರ ಕಾರ್ಮಿಕರನ್ನು ರಾಜ್ಯ ಸರ್ಕಾರಿ ನೌಕರರೆಂದೂ ಪರಿಗಣಿಸುವುದು ಹಾಗೂ ಸೌಲಭ್ಯಗಳನ್ನು ಜಾರಿ ಮಾಡುವುದು. ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ನೇರಪಾವತಿಗೆ ಒಳಪಡಿಸುವುದು. ಮತ್ತು ೨೦೨೨-೨೩ನೇ ಸಾಲಿನಲ್ಲಿ ಪೌರಕಾರ್ಮಿಕರ ವಿಶೇಷ ನೇಮಕಾತಿ ಅಡಿಯ ನೇಮಕಗೊಂಡ ಪೌರಕಾರ್ಮಿಕರ ವೇತನವನ್ನು ಎಸ್.ಎಫ್.ಸಿ ಅನುದಾನದಡಿ ನೀಡುವುದು ಸಹಿತ ಹಲವು ಬೇಡಿಕೆಗಳನ್ನು ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಪರಿಗಣಿಸಿ ಇಡೇರಿಸಲು ಆಗ್ರಹಿಸುತ್ತೇವೆ. ಬೇಡಿಕೆ ಇಡೇರುವವರೆಗೆ ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ಒಳಚರಂಡಿ ನಿರ್ವಹಣೆ ಮತ್ತು ನೀರು ಪೂರೈಕೆ ಹಾಗೂ ಕಚೇರಿ ಕೆಲಸವನ್ನು ಸ್ಥಗಿತಗೊಳಿಸಲಾಗುವುದು ಎಂದರು. ನಂತರ…
ಪಿಡಬ್ಲೂಡಿ ಇಲಾಖೆಯ ಪತ್ರ ನಿರ್ಲಕ್ಷಿಸಿ ರಸ್ತೆಯ ಪಕ್ಕ ಅಳವಡಿಸಿದ ಪೈಪಲೈನ್ | ಪೈಪಲೈನ್ ಅಳವಡಿಕೆ ಪ್ರದೇಶದಲ್ಲಿ ಮಳೆಗಾಲದಲ್ಲಿ ವಾಹನ ಸಿಕ್ಕಿಕೊಳ್ಳುವ ಆತಂಕ | ಎಚ್ಚರಿಸಿದ ಗ್ರಾಮಸ್ಥರ ಮೇಲೆ ದೂರು ದಾಖಲು ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸರ್ಕಾರದ ನಿರ್ದೇಶನ ಪಾಲಿಸದೇ ಜಿಲ್ಲಾ ಮುಖ್ಯರಸ್ತೆಯ ಬದಿಯಲ್ಲಿ ರಸ್ತೆ ಅಗೆದು ಪೈಪ್ಲೈನ್ ಅಳವಡಿಸುವ ಮೂಲಕ ಜಲಧಾರೆ ಕಾಮಗಾರಿ ಕೈಗೊಂಡಿರುವ ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳ ನಡೆಗೆ ಗ್ರಾಮಸ್ಥರು ಹಾಗೂ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಟ್ಟಣದ ಮೂಲಕ ತಾಳಿಕೋಟೆ ಸಂಪರ್ಕಿಸುವ ಜಿಲ್ಲಾ ಮುಖ್ಯರಸ್ತೆಯಲ್ಲಿ ಜಲಧಾರೆ ಕಾಮಗಾರಿಯ ಪೈಪಲೈನ್ ರಸ್ತೆ ಪಕ್ಕವೇ ಅಳವಡಿಸಿದ್ದು ಸರ್ಕಾರದ ನಿಯಮ ಹಾಗೂ ಲೋಕೋಪಯೋಗಿ ಇಲಾಖೆಯ ಪತ್ರವನ್ನು ಗಾಳಿಗೆ ತೂರಿದೆ. ಈ ಬಗ್ಗೆ ಮುಖಂಡ ನಾನಾಗೌಡ ಬಿರಾದಾರ(ಗೊಟಗಣಕಿ) ಮಾತನಾಡಿ, ಸರ್ಕಾರ ಯಾವುದೇ ಜಿಲ್ಲಾ ರಸ್ತೆಯ ಮಧ್ಯೆ ಭಾಗದಿಂದ ೧೫ ಮೀ ಅಂತರದಲ್ಲಿ ಪೈಪಲೈನ್ ಕಾಮಗಾರಿ ಕೈಗೊಳ್ಳತಕ್ಕದ್ದು ಎಂಬ ಸ್ಪಷ್ಟ ನಿರ್ದೇಶನವಿದೆ. ಆದರೆ ಹಂಚಲಿ ಗ್ರಾಮದ ಹತ್ತಿರ ಜಲಧಾರೆ ಕಾಮಗಾರಿಯನ್ನು ರಸ್ತೆಪಕ್ಕವೇ ಕೈಗೊಂಡಿದ್ದು…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿಡ್ಯಾಂಸೈಟ್ ಪ್ರದೇಶದಲ್ಲಿ ಅಪಾರ ಸಂಖ್ಯೆಯಲ್ಲಿರುವ ಬೇವಿನ ಮರಗಳು ಕ್ರಮೇಣ ಯಾವುದೋ ಕಾಯಿಲೆಗೆ ಒಣಗುತ್ತಿದ್ದು, ಎಲೆಗಳೆಲ್ಲಾ ಹಳದಿ ಬಣ್ಣಕ್ಕೆ ತಿರುಗಿವೆ.ರೋಗ ನಿರೋಧಕ ಶಕ್ತಿ ಹೊಂದಿರುವ ಅನೇಕ ರೋಗಗಳಿಗೆ ಔಷಧಿಯಾಗಿ ಬಳಕೆಯಾಗುವ ಬೇವಿಗೆ ಇಂಥ ಕುತ್ತು ಬಂದಿದೆ. ಸಹಸ್ರಾರು ಬೇರೆ ಬೇರೆ ಜಾತಿಯ ಗಿಡಗಳಿದ್ದರೂ ಕೇವಲ ಬೇವಿನ ಮರಗಳಿಗೆ ಮಾತ್ರ ಈ ರೀತಿಯ ರೋಗ ಕಂಡು ಬಂದಿದ್ದು, ಮರಗಲ ಎಲೆಗಳೆಲ್ಲಾ ಒಣಗಿ ನಿಂತಿವೆ. ಸದ್ಯ ಆಲಮಟ್ಟಿ ರೇಲ್ವೆ ಸ್ಟೇಷನ್ ನಿಂದ ಜವಾಹರ ನವೋದಯ ಶಾಲೆಯ ಮಾರ್ಗದುದ್ದಕ್ಕೂ ಎರಡೂ ಬದಿ ಹತ್ತಾರು ಬೇವಿನ ಮರಗಳು ಸಂಪೂರ್ಣ ಒಣಗಿವೆ. ಆಲಮಟ್ಟಿಯಿಂದ ಸೀತಿಮನಿ ಮಾರ್ಗದುದ್ದಕ್ಕೂ (ರೈಲು ಮಾರ್ಗ) ಅಕ್ಕ ಪಕ್ಕ ಹಚ್ಚಿರುವ ಬೇವಿನ ಗಿಡಗಳೆಲ್ಲವೂ ಒಣಗಿವೆ. ಸಾಲಾಗಿರುವ ಈ ಬೇವಿನ ಮರಗಳು ಒಣಗಿದ್ದು, ಈ ರೋಗ ಇನ್ನೀತರ ಅಕ್ಕ ಪಕ್ಕದ ಬೇವಿನ ಮರಗಳಿಗೆ ಕ್ರಮೇಣ ವಿಸ್ತಾರಗೊಳ್ಳುತ್ತಿವೆ.ಚಿಕ್ಕ, ಚಿಕ್ಕ ಬೇವಿನ ಗಿಡಗಳು ಸೇರಿ, ೨೦ ವರ್ಷ ಹಳಿತಾದ ದೊಡ್ಡ ದೊಡ್ಡ ಮರಗಳಿಗೂ ಈ ರೋಗದ ಬಾಧೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅಂಗವಿಕಲರ ಓಡಾಟದ ಅನುಕೂಲಕ್ಕಾಗಿ ಸರ್ಕಾರ ಉಚಿತವಾಗಿ ನೀಡುವ ಇಂಧನ ಚಾಲಿತ ತ್ರಿಚಕ್ರ ವಾಹನವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು ಮತ್ತು ಜಾಗರೂಕತೆಯಿಂದ ಚಲಾಯಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯತ್ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ೧೪ಜನ ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿದ ಅವರು, ೨೦೨೩-೨೪ನೆಯ ಸಾಲಿನಿಂದ ಇಲ್ಲಿಯವರೆಗೆ ಸಿಂದಗಿ ಮತಕ್ಷೇತ್ರದಲ್ಲಿ ಬರುವ ವಿಕಲಚೇತನರಿಗೆ ಈಗಾಗಲೇ ೨೯ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ. ಜೊತೆಗೆ ವಿಕಲಚೇತನರ ಜಾವನೋಪಾಯಕ್ಕೆ ಉಪಯೋಗವಾಗುವ ೪೮೦ ಕಿಟ್ಗಳನ್ನು ಇಲಾಖೆಯ ವತಿಯಿಂದ ಕೊಡಿಸುವ ಕಾರ್ಯವನ್ನು ಸಹ ಮಾಡಲಾಗಿದೆ. ೨೦೨೫-೨೬ನೆಯ ಸಾಲಿನಲ್ಲಿ ೧೪ತ್ರಿಚಕ್ರ ವಾಹನವನ್ನು ವಿತರಣೆ ಮಾಡಲಾಗಿದೆ. ಇನ್ನೂ ೧೬ ತ್ರಿಚಕ್ರ ವಾಹನಗಳನ್ನು ಮಂಜೂರಾಗಿದ್ದು ಚಳಿಗಾಲ ಅಧಿವೇಶನ ಮುಗಿದ ಬಳಿಕ ವಿತರಣೆ ಮಾಡುವ ಕಾರ್ಯವನ್ನು ಮಾಡುತ್ತೇವೆ. ಕಳೆದ ವರ್ಷ ಆಲಮೇಲದಲ್ಲಿ ವಿಕಲಚೇತನರು ಹಮ್ಮಿಕೊಂಡ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಭವನಕ್ಕಾಗಿ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿಯ ಆರ್ಎಂಎಸ್ಎ ಶಾಲೆಗೆ ಶಿಕ್ಷಕರ ಕೊರತೆ ಇದ್ದು ತಕ್ಷಣ ಮೂವರು ಶಿಕ್ಷಕರನ್ನು ನಿಯೋಜಿಸಬೇಕು. ತಪ್ಪಿದ್ದಲ್ಲಿ ಎಲ್ಲ ಪಾಲಕರೊಂದಿಗೆ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವದಾಗಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕ್ಷೇತ್ರ ಶೀಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ ಎಚ್ಚರಿಸಿದೆ.ಈ ಬಗ್ಗೆ ಉದಯರಶ್ಮಿ ನ್ಯೂಸ್ ಗೆ ಮಾಹಿತಿ ನೀಡಿದ ಸಮಿತಿ ಸದಸ್ಯ ಹಾಗೂ ಪತ್ರಕರ್ತ ಬಂದೇನವಾಜ ಕುಮಸಿ ಮಾತನಾಡಿ, ಶಾಲೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ ಖಾಯಂ ಶಿಕ್ಷಕರ ಕೊರತೆ ಗಂಭೀರ ಹಂತವನ್ನು ತಲುಪಿದೆ. ಇದರಿಂದ ಶಾಲೆಯ ಶೈಕ್ಷಣಿಕ ಗುಣಮಟ್ಟವೇ ಅಪಾಯದ ಅಂಚಿನತ್ತ ಸಾಗುತ್ತಿದೆ. ಕಳೆದ ಹಲವು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.೧೦೦ ರಷ್ಟು ಫಲಿತಾಂಶ, ಗರಿಷ್ಠ ಅಂಕಗಳು ಸೇರಿದಂತೆ ವಿವಿಧ ರಾಜ್ಯ ಮಟ್ಟದ ಸಾಧನೆಗಳನ್ನು ಮಾಡಿ ತಾಲೂಕಿನಲ್ಲಿಯೇ ಮಾದರಿಯಾಗಿ ಹೆಸರುವಾಸಿಯಾದ ಶಾಲೆ ಸಧ್ಯ ಈ ಹಂತಕ್ಕೆ ಬಂದು ತಲುಪಿದ್ದು ಶಿಕ್ಷಣ ಇಲಾಖೆ ಈ ಶಾಲೆಯ ಬಗ್ಗೆ ನಿರ್ಲಕ್ಷ ವಹಿಸಿದಂತಾಗಿದೆ.ಇಲ್ಲಿನ ಸಮಸ್ಯೆಗಳ ಬಗ್ಗೆ ಶಿಕ್ಷಣ…
ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಗುಡುಗು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೆರೆ ಪರಿಹಾರ ವಿಷಯವಾಗಿ ರಾಜ್ಯ ಸರ್ಕಾರದ ಮಂತ್ರಿಗಳು ಬೇಜವಾಬ್ದಾರಿ ತೋರಿದ್ದಾರೆ, ಹೀಗಾಗಿ ಅವರ ಕೊರಳ ಪಟ್ಟಿಯನ್ನು ಹಿಡಿದು ರೈತರ ಪರವಾಗಿ ನಮ್ಮ ಹಕ್ಕನ್ನು ಕೇಳಬೇಕಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಗುಡುಗಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಒಂದೇ ಒಂದು ತಾಲೂಕುಗಳಿಗೆ ಭೇಟಿ ನೀಡಿಲ್ಲ, ಕೆಡಿಪಿ ಸಭೆಯನ್ನೂ ನಡೆಸಿಲ್ಲ, ನೆರೆ ಪರಿಹಾರ ವಿಷಯವಾಗಿಯೂ ಒಂದೇ ಒಂದು ಕಡೆ ಸಭೆ ನಡೆಸಿಲ್ಲ, ರಾಜ್ಯದ ಯಾವ ಮೂಲೆಯಲ್ಲಿಯೂ ಈ ವಿಷಯಾಧಾರಿತ ಸಭೆ ನಡೆಸಿಲ್ಲ, ಕೇವಲ ಹೆಲಿಕ್ಯಾಪ್ಟರ್ನಲ್ಲಿ ಓಡಾಡುವುದನ್ನು ವೈರಲ್ ಮಾಡುವ ನೀವುಗಳು ನಿಮ್ಮ ಪಾದವನ್ನು ರೈತರ ಹೊಲದಲ್ಲಿ ಇರಿಸಿದ್ದೀರಾ? ಕೃಷಿ ಸಚಿವರು, ತೋಟಗಾರಿಕಾ ಸಚಿವರು ರೈತರ ಜಮೀನುಗಳಿಗೆ ಎಂದಾದರೂ ಭೇಟಿ ನೀಡಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.ರೈತರ ಬಾಯಿಗೆ ಮಣ್ಣು ಹಾಕುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ, ರೈತರ…
ಟ್ರಾಕ್ಟರ್ ನಲ್ಲಿ ರೈತರ ದಂಡು | ಸರ್ಕಾರದ ವಿರುದ್ಧ ರೈತರ ಗುಡುಗು | ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಾವಿರಾರು ರೈತರು ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು.ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರು ಹೆದ್ದಾರಿ ರಸ್ತೆಯಲ್ಲಿರುವ ಟೋಲ್ ಕೇಂದ್ರದಲ್ಲಿ ಟ್ರ್ಯಾಕ್ಟರ್ಗಳ ಮೂಲಕ ಆಗಮಿಸಿ ಸಮಾವೇಶಗೊಂಡರು. ನೂರಾರು ರೈತರು ಹಸಿರು ಶಲ್ಯ ಧರಿಸಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸದ ಸರ್ಕಾರಕ್ಕೆ ಧಿಕ್ಕಾರ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂಬಿತ್ಯಾದಿ ಫಲಕಗಳನ್ನು ಪ್ರದಶಿಸಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಅಕಾಲಿಕ ಮಳೆಯಿಂದಾಗಿ ಹಾನಿಗೀಡಾಗಿರುವ ತೊಗರಿ, ಮೆಕ್ಕೆಜೋಳ, ಉಳ್ಳಾಗಡ್ಡಿ ಬೆಳೆಗಳನ್ನು ಪ್ರದರ್ಶಿಸಿ ಪರಿಹಾರಕ್ಕಾಗಿ ಹಕ್ಕೊತ್ತಾಯ ಮಂಡಿಸಿದರು.ಇನ್ನೂ ಹಲವಾರು ಕಡೆ ಸೂಕ್ತ ಬೆಲೆ ನಿಗದಿ ಮಾಡದ ಹಿನ್ನೆಲೆಯಲ್ಲಿ ಈರುಳ್ಳಿ ಸೇರಿದಂತೆ ಅನೇಕ ಬೆಳೆಗಳನ್ನು ಸುರುವಿ ಆಕ್ರೋಶ ಹೊರಹಾಕಿದರು.ಕೇವಲ ಪ್ರತಿಭಟನೆಗೆ ಸೀಮಿತವಾದ ಟ್ರ್ಯಾಕ್ಟರ್…
