Author: editor.udayarashmi@gmail.com

ಆರೋಪಿಗಳ ಬಂಧನಕ್ಕೆ ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಚಡಚಣ: ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫೋಟೋಗ್ರಾಫರ್ ಮೇಲೆ ನಡೆದ ಹಲ್ಲೆ ಪ್ರಕರಣವು ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ವಿವಿಧ ಛಾಯಾಚಿತ್ರಗ್ರಾಹಕರ ಸಂಘಗಳು ಖಂಡನೆ ವ್ಯಕ್ತಪಡಿಸಿವೆ.ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ (ರಿ.) ಕೂಡ ಈ ಘಟನೆಯನ್ನು ಖಂಡಿಸಿ, ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.ಫೋಟೋಗ್ರಾಫರ್‌ಗಳು ತಮ್ಮ ಜೀವನೋಪಾಯಕ್ಕಾಗಿ ದುಡಿದುಕೊಂಡು ಜೀವನಸಾಗಿಸುತ್ತಿರುವ ಈ ಸಂದರ್ಭದಲ್ಲಿ ಅವರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಅಸಹ್ಯಕರವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಫೋಟೋಗ್ರಾಫರ್‌ಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಸಂಘ ಒತ್ತಾಯಿಸಿದೆ. ಮತ್ತು ದುಷ್ಕರ್ಮಿಗಳಿಂದ ಹಾನಿಗೋಳಗಾದ ಕ್ಯಾಮರಾ ಸೇರಿದಂತೆ ಇನ್ನಿತರ ಪೀಠೋಪಕರಣಗಳು ದುಷ್ಕರ್ಮಿಗಳಿಂದ ಮರಳಿ ಕೊಡಿಸುವಂತೆ ಆಗ್ರಹಿಸಿದ್ದಾರೆ.ಈ ಪ್ರಕರಣದ ಕುರಿತು ತ್ವರಿತ ಕ್ರಮ ಕೈಗೊಳ್ಳುವಂತೆ ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷರಾದ ಸಂಜಯ ರೇವೆ ಹಾಗೂ ಎಲ್ಲ ಪದಾಧಿಕಾರಿಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ದಿ.8 ಬುಧವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆ.12.30ಗಂ. ವಿಜಯಪುರ ಜಿಲ್ಲಾ ಪಂಚಾಯತ ಕಾರ್ಯಾಲಯ ಆವರಣದಲ್ಲಿ ಪವರ ಗ್ರೀಡ್ ಸಿ.ಎಸ್.ಆರ್ ಅನುದಾನಡಿ ಆರೋಗ್ಯ ಇಲಾಖೆ ಸಲಕರಣೆಗಳು, ಶಿಕ್ಷಣ ಇಲಾಖೆಗೆ 2500 ಮೇಜುಗಳ ವಿತರಿಸಲಿದ್ದಾರೆ. ನಂತರ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣಕ್ಕೆ ಲೈಟಿಂಗ್ ವ್ಯವಸ್ಥೆ ಅಳವಡಿಕೆ, ಪ್ರವಾಸೋದ್ಯಮ ಇಲಾಖೆ ಎಸ್.ಸಿ.ಪಿ/ಟಿ..ಎಸ್.ಪಿ ಯೋಜನೆಯಡಿ ಆರು ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟಿನ್, ಜಿಲ್ಲಾ ಪಂಚಾಯಿತಿಯ ನಿರ್ಬಂಧಿತ ಅನುದಾನದಡಿ ಮೀಸಲಿಟ್ಟ 33ಲಕ್ಷ ರೂ. ಅನುದಾನದಲ್ಲಿ ವಿಕಲಚೇತನರಿಗಾಗಿ ಸಾಧನ ಸಲಕರಣೆ ಹಾಗೂ ಶಿಕ್ಷಣ ಇಲಾಖೆಯ ಅಗತ್ಯ ಸಾಮಗ್ರಿ ಖರೀದಿ ಅನುದಾನದಡಿ ರೂಪಾಯಿ 40 ಲಕ್ಷ ರೂ. ಅನುದಾನದಲ್ಲಿ 20 ಹೈಸ್ಕೂಲ್ ಗಳಿಗೆ ಸ್ಮಾರ್ಟ್ ಕ್ಲಾಸ್ ಉಪಕರಣಗಳನ್ನು ವಿತರಿಸಲಿದ್ದಾರೆ.ನಂತರ ಮ. 1.30ಗಂ. ಧನರ್ಗಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಶಾದಿಮಹಲ್ ಕಟ್ಟಡ ಉದ್ಥಾಟಿಸಲಿದ್ದಾರೆ ಎಂದು ಸಚಿವ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕಿಯರಾದ ಶ್ರೀಮತಿ ಅಶ್ವಿನಿ ಬಿಸ್ವಾಗರ ಹತ್ತು ವರ್ಷ ಸೇವೆ ಹಾಗೂ ಶ್ರೀಮತಿ ದೀಪಾ ಹೊಸಮಠ ಅವರ ಹದಿನೆಂಟು ವರ್ಷಗಳ ಸೇವೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟದ ಸಾವಿತ್ರಿಬಾಯಿ ಪುಲೆ ಅನುಪಮಾ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಇತ್ತೀಚಿಗೆ ಅಥಣಿ ಪಟ್ಟಣದ ರಾಯಲ್ ಫಂಕ್ಷನ್ ಹಾಲನಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಹಾಗೂ ಚಿಕ್ಕೋಡಿ ಜಿಲ್ಲೆ ಅಥಣಿ ಘಟಕದ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಾತೆ ಸಾವಿತ್ರಿಬಾಯಿ ಪುಲೆಯವರ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಗೌರವಯುತವಾಗಿ ಆಚರಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಅಧಿಕಾರಿ ರವೀಂದ್ರ ಮುರಗಾಲಿ ಅವರ ಧೋರಣೆಯನ್ನು ಖಂಡಿಸಿ, ಸೋಮವಾರ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಮುಖಂಡ ಶಿವಾನಂದ ಸೌದಾಗರ ತಿಳಿಸಿದ್ದಾರೆ.ಮಾಧ್ಯಮದವರ ಮುಂದೆ ಮಾತನಾಡಿದ ಶಿವಾನಂದ ಸೌದಾಗರ, ಅಧಿಕಾರಿಗಳ ಬೇಜವಾಬ್ದಾರಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. “ಜಯಂತಿಯ ದಿನದಂದು ಕಚೇರಿಯಲ್ಲಿ ಯಾವುದೇ ಪೂಜೆ ಪುನಸ್ಕಾರ ಮಾಡಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ, ಅಧಿಕಾರಿಗಳು ಹಾರಿಕೆ ಉತ್ತರ ನೀಡಿದ್ದಾರೆ. ದಲಿತ ಮುಖಂಡರು ಒತ್ತಾಯಿಸಿದ ನಂತರ ಮಧ್ಯಾಹ್ನ 2 ಗಂಟೆಗೆ ಪೂಜೆ ಮಾಡಲು ಸಂತೋಷ್ ಚೌವ್ಹಾಣ್ ಎಂಬ ಸಿಬ್ಬಂದಿಯನ್ನು ಕಳುಹಿಸಲಾಗಿತ್ತು. ಆದರೆ, ಆ ಸಿಬ್ಬಂದಿ ಮದ್ಯದ ಅಮಲಿನಲ್ಲಿ ಕಚೇರಿಗೆ ಬಂದು ಪೂಜೆ ಮಾಡಲು ಮುಂದಾಗಿದ್ದಾನೆ. ಇದನ್ನು ಸಾರ್ವಜನಿಕರು ಪ್ರಶ್ನಿಸಿದಾಗ ಕಚೇರಿಯನ್ನು ತೆರೆದಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ತದನಂತರ ಸಂಜೆ 3:50ರ ಸುಮಾರಿಗೆ ಇಲಾಖೆಯ ಸಿಪಾಯಿ ಬಂದು ಕಾಟಾಚಾರಕ್ಕೆ ಪೂಜೆ ಮುಗಿಸಿದ್ದಾರೆ”…

Read More

ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡದಿದ್ದಲ್ಲಿ ಮಾದಿಗ ಸಮುದಾಯದಿಂದ ಉಗ್ರ ಹೋರಾಟದ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಒಳ ಮೀಸಲಾತಿ ಜಾರಿ ಮಾಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ತಾಲೂಕಿನ ಮಾದಿಗ ಸಮುದಾಯದ ಮುಖಂಡರು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿ ಹೊರಬಂದರು.ಒಳಮೀಸಲಾತಿ ಜಾರಿ ಮಾಡದ ಹೊರತು ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯದ ಮುಖಂಡರು ಪಾಲ್ಗೊಳ್ಳುವುದಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಮೊದಲ ಎಚ್ಚರಿಕೆ. ಉಪಚುನಾವಣೆ ಮುಗಿದ ಬಳಿಕವೂ ಕುಂಟು ನೆಪವೊಡ್ಡಿ ಒಳಮೀಸಲಾತಿ ಜಾರಿ ಮಾಡದೇ ಹೋದರೆ ರಾಜ್ಯದಂತ ಉಗ್ರಹೋರಾಟ ಮಾಡಲಾಗುವುದು ಎಂದು ಮಾದಿಗ ಸಮುದಾಯದ ಮುಖಂಡರು ಕಠೋರವಾಗಿಯೇ ಎಚ್ಚರಿಕೆ ನೀಡಿದರು.ಪಟ್ಟಣದ ಆಡಳಿತ ಸೌಧದಲ್ಲಿ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಸಕ ಅನಿಲ್ ಚಿಕ್ಕಮಾದು ಜೊತೆಗೂಡಿ ಡಾ.ಬಾಬು ಜಗಜೀವನ್ ರಾಮ್ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿದ ನಂತರ ಮಾದಿಗ ಸಮುದಾಯದ ಮುಖಂಡರು, ಒಳಮೀಸಲಾತಿ ಹೋರಾಟಕ್ಕೆ ಒಳ್ಳೆಯದಾಗಲಿ,…

Read More

ಶ್ರೀ ಚಿಕ್ಕದೇವಮ್ಮ ಬೆಟ್ಟದ ಪಾರುಪತ್ತೇದಾರ್ ಮಹದೇವಸ್ವಾಮಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸರಗೂರು: ಹಿಂದೂ ಸನಾತನ ಪರಂಪರೆಯು ಜಗತ್ತಿನ ಅತಿ ಹಳೆಯ ಮತ್ತು ದಾರ್ಶನಿಕ ಸಂಸ್ಕೃತಿಯಾಗಿದ್ದು, ಇದನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಹಿಂದೂವಿನ ಕರ್ತವ್ಯವಾಗಿದೆ. ಎಂದು ಶ್ರೀ ಚಿಕ್ಕದೇವಮ್ಮ ಬೆಟ್ಟದ ಪಾರುಪತ್ತೇದಾರ್ ಶಾಂತಿಪುರ ಮಹದೇವಸ್ವಾಮಿ ಹೇಳಿದರು.ಪಟ್ಟಣದ ಜೈನಭವನದಲ್ಲಿ ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕು ಶಿವಾರ್ಚಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಶೈವಾಗಮ ರೀತ್ಯಾ ಅರ್ಚಕರ ಪೂಜಾ ತರಬೇತಿ ಹಾಗೂ ಪಂಚಾಂಗ ಪರಿಚಯ, ದೀಕ್ಷಾ ಉಪನಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ವಿದ್ವಾನ್ ಮಲ್ಲಣ್ಣನವರ ನೇತೃತ್ವದಲ್ಲಿ ಸರ್ಕಾರಿ ಸಂಸ್ಕೃತ ಪಾಠ ಶಾಲೆಯ ನಿವೃತ್ತ ಪ್ರಾಧ್ಯಾಪಕರಿಂದ ಶಿಬಿರಾರ್ಥಿಗಳಿಗೆ ಪೂಜಾ ವಿಧಿವಿಧಾನಗಳು, ಮಂತ್ರೋಚ್ಛಾರಣೆ, ಶ್ಲೋಕಗಳು, ಮತ್ತು ದೇವಸ್ಥಾನದ ಆಚರಣೆಗಳ ಬಗ್ಗೆ ತಿಳಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಶಿಬಿರಾರ್ಥಿಗಳುಸಮಾಜವನ್ನು ಕಟ್ಟುವ ಕೆಲಸ ಮಾಡಬೇಕು, ಇಡೀ ದೇಶಕ್ಕೆ ಮಾದರಿಯಾಗುವಂತಹ ಪರಿಪೂರ್ಣ ಜ್ಞಾನ ಹೊಂದಿರಬೇಕು ಎಂಬುದಷ್ಟೇ ದೀಕ್ಷಾ ಉಪನಯನ ಉದ್ದೇಶವಾಗಿದೆ. ಎಪ್ರಿಲ್ 22ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುತ್ತೆ ಎಂದು ಪಾರುಪತ್ತೇದಾರ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಬ್ಬಡ್ಡಿಯು ೪೦೦೦ ವರ್ಷಗಳಷ್ಟು ಪುರಾತನವಾದ ಮತ್ತು ನಮ್ಮ ದೇಶದ ಗ್ರಾಮೀಣ ಕ್ರೀಡೆಯಾಗಿದೆ. ಇದು ಎರಡು ತಂಡಗಳ ನಡುವಿನ ಸಂಪರ್ಕದ ಕ್ರೀಡೆಯಾಗಿದೆ. ಈ ಕ್ರೀಡೆಯು ನಮ್ಮ ದೇಶಕ್ಕೆ ಹೆಗ್ಗಳಿಕೆಯನ್ನು ತಂದು ಕೊಟ್ಟಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾಪಟುಗಳು ಕ್ರೀಡಾಸಕ್ತಿ ಮತ್ತು ಸ್ಪೂರ್ತಿಯೊಂದಿಗೆ ಆಟವಾಡಬೇಕು ಎಂದು ಡಾ.ರವಿ ಗೋಲಾ ಅವರು ಅಭಿಪ್ರಾಯಪಟ್ಟರು.ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎರಡನೇಯ ವಲಯದ ಅಂತರ ಮಹಾವಿದ್ಯಾಲಯಗಳ ಪುರುಷರ ಕಬ್ಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ದೈಹಿಕ ಸಾಮರ್ಥ್ಯವಿದ್ದರೆ ಮಾತ್ರ ಬೌದ್ಧಿಕತೆ ಬೆಳೆಯುವುದು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿದಾಗ ಮಾತ್ರ ವ್ಯಕ್ತಿತ್ವದ ಸರ್ವಾಂಗೀಣ ವಿಕಸನಗೊಳಿಸುತ್ತದೆ. ಆದ್ದರಿಂದ ಸದೃಢ ಆರೋಗ್ಯಕ್ಕಾಗಿ ಯಾವುದಾದರೊಂದು ಆಟವನ್ನು ಸದಾ ಆಡಲೇಬೇಕು. ಅದರಲ್ಲೂ ನಮ್ಮ ಗ್ರಾಮೀಣ ಮತ್ತು ಗಂಡು ಮೆಟ್ಟಿನ ನಾಡಿನ ಪ್ರಬಲ ಆಟವಾದ ಕಬ್ಬಡ್ಡಿಯನ್ನು ಆಡುತ್ತಾ, ಮುಂದಿನ ಯುವ ಜನಾಂಗಕ್ಕಾಗಿ ಉಳಿಸಿ-ಬೆಳೆಸುವ ಕಾರ್ಯ ಮಾಡಬೇಕಾಗಿರುವುದು ಇಂದಿನ ಅಗತ್ಯತೆಯಾಗಿದೆ ಎಂದರು.ಇನ್ನೊರ್ವ ಅತಿಥಿ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸಮಾಜ ಸುಧಾರಕರಾಗಿ ಡಾ.ಬಾಬು ಜಗಜೀವನ ರಾಮ ದೇಶದ ಇತಿಹಾಸದಲ್ಲಿ ಅಮೂಲ್ಯವಾದ ಸ್ಥಾನವನ್ನು ಹೊಂದಿದ್ದಾರೆ. ದಲಿತ ಸಮುದಾಯದ ಹಕ್ಕುಗಳಿಗಾಗಿ ಅವರು ಹೋರಾಡಿ ಸಮಾನತೆ ಮತ್ತು ನ್ಯಾಯಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದರು ಎಂದು ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಸುನಂದಾ ಎಸ್. ಶಿರೂರ ತಿಳಿಸಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಜಮಖಂಡಿಯಲ್ಲಿ ಸಾಂಸ್ಕೃತಿಕ ವಿಭಾಗ ಹಾಗೂ ಐ.ಕ್ಯೂ.ಎ.ಸಿ. ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಾಬು ಜಗಜೀವನ ರಾಮ ಇವರ ಜನ್ಮ ದಿನದ ಪ್ರಯುಕ್ತ ಸಮತಾ ದಿನವನ್ನು ಆಚರಿಸಿ, ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.ಬಾಬು ಜಗಜೀವನ ರಾಮ ಅವರ ಜೀವನವು ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದು, ಈ ಕಾರಣದಿಂದಲೇ ಅವರ ಜನ್ಮ ದಿನವನ್ನು ಸಮತಾ ದಿನವೆಂದು ಆಚರಿಸಲಾಗುತ್ತದೆ ಎಂದು ವಿವರಿಸಿದರು.ಆರ್. ಎಸ್. ಜಾಧವ ಅವರು ಮಾತನಾಡಿ, ಭಾರತದ ರಾಜಕೀಯ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ, ವಿವಿಧ ಕೇಂದ್ರ ಸಚಿವ ಸ್ಥಾನಗಳನ್ನು…

Read More

ಕಸದ ಕೊಂಪೆಯಾದ ಹೊರ್ತಿ ಯ ಐತಿಹಾಸಿಕ ಶಿವ ದೇವಸ್ಥಾನ | ಎಗ್ಗಿಲ್ಲದೆ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳು | ಗಾನಯೋಗಿ ಸಂಘದಿಂದ ಪುನಃ ಸ್ವಚ್ಚತಾ ಕಾರ್ಯ ಉದಯರಶ್ಮಿ ದಿನಪತ್ರಿಕೆ ವರದಿ: ರಾಜು ಕೆರುಟಗಿವಿಜಯಪುರ: ಅದೊಂದು ಕಾಲದಲ್ಲಿ ಕಾಲಕಾಲಕ್ಕೆ ಪೂಜೆ-ಪುನಸ್ಕಾರಗಳೊಂದಿಗೆ ಸಹಸ್ರಾರು ಭಕ್ತರ ಶ್ರದ್ಧಾಭಕ್ತಿಯ ಕೇಂದ್ರವಾಗಿದ್ದ ದೇವಸ್ಥಾನವೊಂದು ಇದೀಗ ಕುಡುಕರ, ದುರ್ವ್ಯಸನಿಗಳ ಅಡ್ಡೆಯಾಗಿ ಮಾರ್ಪಟ್ಟು ನಮ್ಮ ಪರಂಪರೆಯನ್ನು ಅಣಕಿಸುವಂತಾಗಿದೆ.ಜಿಲ್ಲೆಯ ಇಂಡಿ ತಾಲೂಕಿನ ಹೋರ್ತಿ ಗ್ರಾಮದಲ್ಲಿ ಕಲ್ಯಾಣಿ ಚಾಲುಕ್ಯರ ಕಾಲಕ್ಕೆ ಸೇರಿದ ಅಪರೂಪದ ನಕ್ಷತ್ರಾಕಾರದ ಶಿವ ದೇವಸ್ಥಾನವೊಂದಿದೆ. ಈ ದೇವಸ್ಥಾನದ ಇಂದಿನ ಪರಿಸ್ಥಿತಿ ಅತ್ಯಂತ ದಯನೀಯ ಮತ್ತು ವಿಷಾದಕರವಾಗಿದೆ.ಈ ದೇವಸ್ಥಾನದ ಉನ್ನತ ಪರಂಪರೆ, ಇತಿಹಾಸ ಅರಿತವರು ಯಾರೇ ಆಗಿದ್ದರೂ ದೇಗುಲದ ಇಂದಿನ ದುಸ್ಥಿತಿ ಕಂಡು ಮರುಗದೇ ಇರರು.ದೇವಸ್ಥಾನದ ಹೊರ ಮತ್ತು ಒಳ ಆವರಣದಲ್ಲೆಲ್ಲ ಬೀಯರ್ ಬಾಟಲಿಗಳು, ವ್ಹಿಸ್ಕಿ ಪ್ಯಾಕೆಟ್ಗಳು, ಪ್ಲಾಸ್ಟಿಕ್ ಗ್ಲಾಸ್‌ಗಳು, ನೀರಿನ ಖಾಲಿ ಬಾಟಲಿಗಳು ಮತ್ತು ಗುಟ್ಕಾ ಕಲೆಗಳು ಎಲ್ಲೆಡೆ ರಾರಾಜಿಸುತ್ತವೆ. ಕಸದ ರಾಶಿ ಕಣ್ಣಿಗೆ ರಾಚುತ್ತ ದೇವಸ್ಥಾನವು ತಿಪ್ಪೆಗುಂಡಿಯಂತಾಗಿ, ಅನೈತಿಕ ಚಟುವಟಿಕೆಗಳ ತಾಣವಾಗಿ…

Read More

ಪ್ರಶಸ್ತಿ ಪುರಸ್ಕೃತ ಕಂಪೂನವರ ಗೆ “ಉದಯರಶ್ಮಿ” ಸಂಪಾದಕ ಇಂದುಶೇಖರ ಮಣೂರ & ಪತ್ರಿಕಾ ಬಳಗದಿಂದ ಅಭಿನಂದನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಡಿಯಲ್ಲಿ ಲಿಂಗಸುಗೂರು ಸಿದ್ರಾಮಪ್ಪ ಹೆಸರಿನಲ್ಲಿ ಅವರ ಪುತ್ರ ಶಿವರಾಜ ಕೆಂಭಾವಿಯವರು ಹೊಸದಾಗಿ ಸ್ಥಾಪನೆ ಮಾಡಿರುವ ಲಿಂಗಸುಗೂರು ಸಿದ್ರಾಮಪ್ಪ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಏಷ್ಯಾನೆಟ್ ಸುವರ್ಣ ನ್ಯೂಸ್ ಟಿವಿ ಜಿಲ್ಲಾ ಹಿರಿಯ ವರದಿಗಾರ ಷಡಕ್ಷರಿ ಬಸವರಾಜು ಕಂಪೂನವರ ಅವರು ಆಯ್ಕೆಯಾಗಿದ್ದಾರೆ.ಬೀದರ್‌ನಲ್ಲಿ ಏ.11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹಿರಿಯ ವರದಿಗಾರ ಷಡಕ್ಷರಿ ಬಸವರಾಜು ಕಂಪೂನವರ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾನಿಪ ರಾಜ್ಯ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಷಡಕ್ಷರಿ ಕಂಪೂನವರ ಅವರನ್ನು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ಪದಾಧಿಕಾರಿಗಳು…

Read More