Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ವಿಜಯಪುರ: ಶ್ರೀ ಕೃಷ್ಣನ ಆದರ್ಶಗಳನ್ನು ಮಕ್ಕಳಿಗೆ ತಿಳಿಸುವುದರ ಮೂಲಕ ಅವರನ್ನು ಆದರ್ಶಪ್ರಾಯ ವ್ಯಕ್ತಿಯಾಗಿ ರೂಪಿಸಿ ವಿಶ್ವ ಮಾನವ ಸಂದೇಶ ಎಲ್ಲೆಡೆ ಪಸರಿಸಬೇಕು ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಹಯೋಗದಿಂದ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ಜರುಗಿದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸರ್ವ ಸಮುದಾಯಗಳ ಪ್ರೀತಿಗೆ ಪಾತ್ರರಾದ ಶ್ರೀ ಕೃಷ್ಣರ, ಕೌಶಲ್ಯ, ಎಲ್ಲರೊಂದಿಗೆ ಬೆರೆಯುವ ವ್ಯಕ್ತಿತ್ವ, ಆದರ್ಶ, ಸ್ನೇಹ, ಅಪಾಯಮಾನ್ಯವಾಗಿದೆ. ರಾಜತಾಂತ್ರಿಕ ನಿಪುಣತೆ, ಸಹನೆ, ತಾಳ್ಮೆಯಂತಹ ಗುಣಗಳಿಂದ ವಿಶಿಷ್ಟವಾಗಿ ಹೊರಹೊಮ್ಮಿದ ಶ್ರೀ ಕೃಷ್ಣ ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ಅವರದ್ದು, ಕುಚೇಲ ಶ್ರೀಕೃಷ್ಣನ ಸ್ನೇಹ, ಯಾವ ಬೇಧ ಭಾವಗಳಿಲ್ಲದ ಅಪರೂಪದ ವ್ಯಕ್ತಿತ್ವ, ಶ್ರೀ ಕೃಷ್ಣನ ಆದರ್ಶಗಳು ನಮ್ಮ ಮನೆ ಮನ ಬೆಳಗುವಂತಾಗಲಿ, ಮಕ್ಕಳಿಗೆ ಶ್ರೀಕೃಷ್ಣನ ಆದರ್ಶಗಳನ್ನು ತಾಯಂದಿರ ತಿಳಿಸಿಕೊಡಬೇಕು.…
ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ವಿಜಯಪುರ: ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಪ್ರಥಮ ೩ ಸಾವಿರ ರೂ. ದ್ವಿತೀಯ ೨ ಸಾವಿರ ರೂ ಮತ್ತು ತೃತೀಯ ೧ ಸಾವಿರ ರೂ. ಬಹುಮಾನ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಪ್ರಬಂಧಗಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಕೂಡ ಕಳುಹಿಸಲಾಗುತ್ತದೆ.ಪ್ರೌಢ ಶಾಲಾ ವಿಭಾಗ: ೧) ಮಹಾತ್ಮ ಗಾಂಧೀಜಿ…
ಕಲಬುರ್ಗಿ: ನಗರದ ಸುನಿತ್ ಮತ್ತು ಚೈತ್ರಾ ದಂಪತಿಯ ೧.೩ ವರ್ಷದ ಮುದ್ದು ಕುವರ ಕು.ಕ್ರಿಶಿವ್ ಸೋಮವಾರ ಶ್ರೀಕೃಷ್ಣ ಗೋಕುಲಾಷ್ಟಮಿ ಪ್ರಯುಕ್ತ ಬೆಣ್ಣೆ ಮೆಲ್ಲುವ ಬಾಲ ಕೃಷ್ಣನ ವೇಷದಲ್ಲಿ ಕಂಗೊಳಿಸಿದ್ದು ಹೀಗೆ.. ಕೊಳನೂದುವ ಬಾಲ ಕೃಷ್ಣನಾಗಿ ಕು.ನೀಲ್ ವಿಜಯಪುರ: ನಗರದ ಖ್ಯಾತ ಲೆಕ್ಕಪರಿಶೋಧಕ ಶಾಂತವೀರ ಮತ್ತು ಶ್ವೇತಾ ಶಾಂ.ಮಣೂರ ದಂಪತಿಯ ಮುದ್ದಿನ ಮಗು ಕು.ನೀಲ್ ಮಣೂರ ಸೋಮವಾರ ಶ್ರೀಕೃಷ್ಣ ಗೋಕುಲಾಷ್ಟಮಿ ಪ್ರಯುಕ್ತ ಕೊಳನೂದುವ ಬಾಲ ಕೃಷ್ಣನಾಗಿ ಕಂಗೊಳಿಸಿದ್ದು ಹೀಗೆ..
ವಿಜಯಪುರ: ಜನರ ವಿಶ್ವಾಸ ಗಳಿಸಿ, ಜನಪ್ರಿಯವಾದ ಸರಕಾರದ ಕಾರ್ಯಚಟುವಟಿಕೆಗೆ ಅಡಿಗಡಿಗೂ ಅಡ್ಡಿ ಮಾಡುತ್ತಿರುವ ರಾಜ್ಯಪಾಲರ ಕ್ರಮ ರಾಜಕೀಯ ಪ್ರೇರಿತವಾಗಿದ್ದು, ಉಭಯ ಸದನಗಳಲ್ಲಿ ಅಂಗೀಕಾರವಾದ ಮಸೂದೆಗಳನ್ನು ವಾಪಸ್ ಮಾಡಿರುವ ರಾಜ್ಯಪಾಲರ ಕ್ರಮಕ್ಕೆ ವಿಧಾನ ಪರಿಷತ ಶಾಸಕ ಸುನೀಲಗೌಡ ಸೇರಿದಂತೆ 15 ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಜಂಟಿ ಪ್ರಕಟಣೆ ನೀಡಿರುವ ಕಾಂಗ್ರೆಸ್ ಶಾಸಕರಾದ ಸುನೀಲಗೌಡ ಪಾಟೀಲ, ಮಂಜುನಾಥ ಭಂಡಾರಿ, ಎಸ್. ರವಿ, ಅನಿಲ್ ಕುಮಾರ್, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲಗೌಡ ಪಾಟೀಲ್, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ , ಡಿ. ಟಿ. ಶ್ರೀನಿವಾಸ, ಶರಣಗೌಡ ಪಾಟೀಲ, ಭೀಮರಾವ್ ಪಾಟೀಲ, ತಿಪ್ಪಣ್ಣಾ ಕಮಕನೂರು ಅವರು ರಾಜ್ಯಪಾಲರ ನಡೆಯ ಬಗ್ಗೆ ಧ್ವನಿ ಎತ್ತಿದ್ದಾರೆ.ಆಗಸ್ಟ್ ತಿಂಗಳಲ್ಲಿ ರಾಜ್ಯಪಾಲರು ಆರು ಪ್ರಮುಖ ಮಸೂದೆಗಳನ್ನು ಹಿಂತಿರುಗಿಸಿದ್ದಾರೆ. ಒಟ್ಟು 11 ವಿಧೇಯಕಗಳನ್ನು ರಾಜ್ಯಪಾಲರು ವಾಪಸ್ ಕಳಿಸಿ ವಿರೋಧ ಪಕ್ಷದ ನಾಯಕರಂತೆ ವರ್ತಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ…
ವಿಜಯಪುರ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (ಆಡಳಿತ) ಡಾ. ಬಿ.ಎಸ್.ಕನಮಡಿ ಮಾಹಿತಿ ವಿಜಯಪುರ: ೨೧ನೇ ರಾಷ್ಟ್ರೀಯ ಜಾನುವಾರು ಗಣತಿಗೆ ಸಿದ್ಧತೆಗಳು ಆರಂಭವಾಗಿದ್ದು, ಸೆ.೧ರಂದು ಅದಕ್ಕೆ ವಿಜಯಪುರ ತಾಲೂಕಿನಲ್ಲಿ ಚಾಲನೆ ನೀಡಲಾಗುವುದೆಂದು ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (ಆಡಳಿತ) ಡಾ. ಬಿ.ಎಸ್.ಕನಮಡಿ ತಿಳಿಸಿದ್ದಾರೆ.ಈ ಕುರಿತು ಆ.೨೬ ಸೋಮವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ತಾಲೂಕಿನಲ್ಲಿ ಹೈನುಗಾರಿಕೆ, ಪಶುಪಾಲನೆ ಪ್ರಮುಖ ವೃತ್ತಿಯಾಗಿದೆ. ಪ್ರತಿ ೫ವರ್ಷಕ್ಕೊಮ್ಮೆ ನಡೆಸಲಾಗುವ ಈ ಗಣತಿಯಲ್ಲಿ ಜಾನುವಾರಗಳ ಪ್ರಮಾಣ, ವಯಸ್ಸು, ಲಿಂಗ ಸಂಯೋಜನೆ, ಕೋಳಿ, ಕುರಿ ಹಾಗೂ ಮೇಕೆ ಸಾಕಾಣಿಕೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಗಣತಿಯು ಸೆಪ್ಟೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಮನೆ-ಮನೆಗೆ ತೆರಳಿ ಮಾಡಲಾಗುವುದು. ಕಾರಣ ಸಾರ್ವಜನಿಕರು, ರೈತರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಡಾ.ಕನಮಡಿ ಕೋರಿದ್ದಾರೆ. ೧೭ ಸಿಬ್ಬಂದಿಯಿಂದ ಗಣತಿ ವಿಜಯಪುರ ತಾಲೂಕಿನಲ್ಲಿ ೨೧ನೇ ಜಾನುವಾರು ಗಣತಿ ಸಲುವಾಗಿ ಇಲಾಖೆಯು ಸಕಲ ಸಿದ್ಧತೆಯಲ್ಲಿ ತೊಡಗಿದೆ. ತಂಡಗಳ ರಚನೆ ಮಾಡಿ ಅವರಿಗೆ ತರಬೇತಿ ನೀಡಲು ಮುಂದಾಗಿದೆ. ಗಣತಿ ಸಂಬಂಧ ಪೋಸ್ಟರ್ ಬಿಡುಗಡೆ…
ವಿಜಯಪುರ: ಶ್ರೀ ಸಿದ್ದೇಶ್ವರ ಸಂಸ್ಥೆಯ ಅಡಿಯಲ್ಲಿ ನಡೆಯುವ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ, ನಾಮಿನಿ ಚೇರ್ಮನ್ ಎಸ್.ಎಚ್.ನಾಡಗೌಡ ಹಾಗೂ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ವಿಜಯಲಕ್ಷ್ಮೀ ರಾ ಪಟ್ಟೇದ ಹಾಗೂ ಉಪ ಪ್ರಾಂಶುಪಾಲೆ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶಾಲೆಯ ಪ್ರಾಂಶುಪಾಲೆ ಶ್ರೀಮತಿ ವಿಜಯಲಕ್ಷ್ಮೀ ರಾ ಪಟ್ಟೇದ ಶ್ರೀ ಕೃಷ್ಣ ಜನ್ಮಾಷ್ಟಮಿ ಕುರಿತು ವಿಶೇಷವಾಗಿ ಮಾತನಾಡಿದರು.ಮುದ್ದು ಮಕ್ಕಳು ರಾಧೆ ಕೃಷ್ಣ ವೇಷಭೂಷಣ ಧರಿಸಿದ್ದರು ಮತ್ತು ಮುದ್ದು ಮಕ್ಕಳಿಗಾಗಿ ರಾಧೆ ಮತ್ತ ಕೃಷ್ಣ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ಬಾಲಕೃಷ್ಣರೆಲ್ಲರೂ ಕೂಡಿ ಮಡಿಕೆ ಒಡೆಯುವುದರ ಮೂಲಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.ಎಲ್ಲ ಮುದ್ದು ಮಕ್ಕಳು ತಮ್ಮ ಉಡುಪು ವಿನ್ಯಾಸಗಳನ್ನು ಧರಿಸಿ ಗಮನ ಸೆಳೆದರು. ಹಾಗೂ ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು
ವಿಜಯಪುರ: ನಗರದ ಗೀತಾಂಜಲಿ ಮಾದರಿ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆ.26ರಂದು ಬಹಳ ಅದ್ದೂರಿಯಿಂದ ಆಚರಿಸಲಾಯಿತು.ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳು ಶ್ರೀಕೃಷ್ಣ ಮತ್ತು ರಾಧೆಯರ ವೇಷಭೂಷಣ ಧರಿಸಿ ಕಂಗೊಳಿಸಿದರು.ಮಕ್ಕಳ ವೇಷಭೂಷಣ, ಕಲರವದಿಂದ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ದ್ವಾಪರದ ಗೋಕುಲವೇ ಧರೆಗಿಳಿದು ಬಂದಂತೆ ಭಾಸವಾಗುತ್ತಿತ್ತು. ಮಕ್ಕಳ ಪಾಲಕರೂ ಸಹ ಈ ಸಂಭ್ರಮದಲ್ಲಿ ಭಾಗಿಯಾಗಿದ್ದರು.ಈ ಕಾರ್ಯಕ್ರಮದಲ್ಲಿ ವರ್ಗ ಶಿಕ್ಷಕರಾದ ವಿಜಯಲಕ್ಷ್ಮಿ ಆಕಳವಾಡಿ, ಶಬಾನಾ ರುಮಲದಾರ, ಆರತಿ ಕುಂಬಾರ, ಮುಖ್ಯೋಪಾಧ್ಯಯಿನಿ ಶ್ರೀಮತಿ ಸುನಂದಾ ಕೊಂಡಗೂಳಿ, ಹಾಗೂ ಚಿತ್ರಕಲಾ ಶಿಕ್ಷಕ ಬಿ.ಎಸ್.ಪಾಟೀಲ ಸೇರಿದಂತೆ ಅನೇಕರಿದ್ದರು.
ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ಜಾತ್ರೆಯ ದಾಸೋಹಕ್ಕೆ ಮಹಿಳೆಯರು ತಮ್ಮ ಮನೆಯಲ್ಲಿ ಮಾಡಿದ ರೊಟ್ಟಿಗಳನ್ನು ಬುಟ್ಟಿಯಲ್ಲಿ ಇಟ್ಟು ಜಿಟಿ ಜಿಟಿ ಮಳೆಯನ್ನು ಲೆಕ್ಕಿಸದೇ ಶನಿವಾರ ಸಂಜೆ ವಿರಕ್ತಮಠದಿಂದ ಮೆರವಣಿಗೆ ಮೂಲಕ ದೇವಸ್ಥಾನದ ದಾಸೋಹ ಭವನಕ್ಕೆ ತಲುಪಿಸಿದರು.ಸ್ಥಳೀಯ ವಿರಕ್ತಮಠದಲ್ಲಿ ಬಸವಣ್ಣನವರ ಭಾವಚಿತ್ರ ಹಾಗೂ ರೊಟ್ಟಿಯ ಬುಟ್ಟಿಗಳಿಗೆ ಸಿದ್ಧಲಿಂಗ ಸ್ವಾಮೀಜಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಮಹಿಳೆಯರು ರೊಟ್ಟಿಯ ಬುಟ್ಟಿಯನ್ನು ತಲೆಯಮೇಲೆ ಹೊತ್ತುಕೊಂಡು ಬಸವಜನ್ಮ ಸ್ಮಾರಕ, ಪಲ್ಲೇದ ಕಟ್ದೆ, ಅಗಸಿ, ಬಸವೇಶ್ವರ ವೃತ್ತದ ಮಾರ್ಗವಾಗಿ ದೇವಸ್ಥಾನಕ್ಕೆ ತೆರಳಿದರು.ಪಟ್ಟಣದ ವಿವಿಧ ಗಲ್ಲಿಯ ಮಹಿಳೆಯರು ಮೂರು ಸಾವಿರಕ್ಕಿಂತ ಹೆಚ್ಚು ರೊಟ್ಟಿಗಳನ್ನು ಹಾಗೂ ತಾಳಿಕೋಟೆ ತಾಲೂಕಿನ ಹಗರಗುಂಡ ಎಲ್.ಟಿ ಯ ಸುರೇಶ ರಾಠೋಡ ಅವರು ಟ್ರ್ಯಾಕ್ಟರ ಮೂಲಕ ಎರಡು ಸಾವಿರ ರೊಟ್ಟಿಗಳನ್ನು ದಾಸೋಹ ಭವನಕ್ಕೆ ತಲುಪಿಸಿದರು.ಜಾತ್ರೆಗೆ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಜಾತ್ರೆಯಲ್ಲಿ ನಿರಂತರವಾಗಿ ದಾಸೋಹ ನಡೆಯುತ್ತದೆ. ಪಟ್ಟಣದ ವಿವಿಧ ಬಡಾವಣೆಗಳ ಮಹಿಳೆಯರು ತಮ್ಮ ಮನೆಯಲ್ಲಿ ಮಾಡಿದ ರೊಟ್ಟಿಗಳನ್ನು ದಾಸೋಹಕ್ಕೆ ನೀಡುತ್ತಿರುವುದು ವಿಶೇಷ.…
ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸಮ್ಮತಿ | ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿಕೆ ಬಸವನಬಾಗೇವಾಡಿ: ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣಿ ಕುಸಿದ ಕಾರಣ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಂಬಲ ಬೆಲೆ ಯೋಜನೆಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ ಗೆ 8.682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ.ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಧಾರಣಿ ಕುಸಿದಿದೆ ಎಂದು…
ವಿಜಯಪುರ: ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದ ಗಜಾನನ ಉತ್ಸವ ಮಹಾಮಂಡಳಕ್ಕೆ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀ ಗಜಾನನ ಉತ್ಸವ ಮಹಾಮಂಡಳ ಸಂಸ್ಥಾಪಕರು, ಮಾಜಿ ಸಚಿವರಾದ ಅಪ್ಪಾಸಾಹೇಬ ಮ.ಪಟ್ಟಣಶೆಟ್ಟಿ ಅವರಿಗೆ ನೂತನ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳು ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವರು, ಶ್ರೀ ಗಜಾನನ ಉತ್ಸವ ಮಹಾಮಂಡಳ ಇಡೀ ವಿಜಯಪುರ ಜಿಲ್ಲೆಯಲ್ಲಿ ಮಾದರಿ ಗಣೇಶೋತ್ಸವ ಆಚರಿಸುವ ಮೂಲಕ ಎಲ್ಲರ ಮನೆ ಮಾತಾಗಿದೆ. ಈ ಮಂಡಳಿ ಗಣೇಶ ಉತ್ಸವದ ಜೊತೆಗೆ ಹತ್ತು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಂಸ್ಕೃತಿಕ ಉತ್ಸವಕ್ಕೂ ಸೈ ಹಾಗೂ ಸಾಮಾಜಿಕ ಚಟುವಟಿಕೆಗೂ ಸೈ , ಮತ್ತು ಈ ಮಹಾಮಂಡಳದ ವತಿಯಿಂದ ಕರೊನಾ ಮಾಹಾಮಾರಿ ಸಂದರ್ಭದಲ್ಲಿ ರೋಗಿಗಳ ಪರಿಚಾರಕರಿಗೆ ಸತತ 54 ದಿನಗಳ ಕಾಲ ಶುಚಿ ರುಚಿಯಿಂದ ಕೂಡಿದ ಆಹಾರದ ಪೊಟ್ಟಣ ವಿತರಣೆ ಮಾಡುವ ಮೂಲಕ ಮಾನವೀಯತೆ ಕಾರ್ಯವನ್ನು ಮಾಡಿದ ನಮ್ಮ ಮಹಾಮಂಡಳದ ಕಾರ್ಯಕರ್ತರು ಜೀವನದ ಹಂಗು ತೊರೆದು ಕಾರ್ಯ…
