Author: editor.udayarashmi@gmail.com

ವಿಜಯಪುರ: ಕರ್ನಾಟಕ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಜಿಲ್ಲಾಸ್ಪತ್ರೆಗೆ ದಿಡೀರ್ ಭೇಟಿ ನೀಡುವ ಮೂಲಕ ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲಿಸಿದರು.ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಗಳಿಂದ ಅಲ್ಲಿನ ವ್ಯವಸ್ಥೆ ಕುರಿತು ವಿಚಾರಿಸಿದಾಗ, ಇಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದ್ದು, ಸರಿಯಾದ ಸಮಯಕ್ಕೆ ವೈದ್ಯರು ತಪಾಸಣೆ ಮಾಡಿ ಅಗತ್ಯ ಸಲಹೆ ಸೂಚನೆ ನೀಡುವ ಮೂಲಕ ಔಷಧೋಪಾಚಾರ, ನಿಗದಿತ ಸಮಯದಂತೆ ಆಸ್ಪತ್ರೆಯಿಂದ ಆಹಾರ ಒದಗಿಸುತ್ತಾರೆ ಎಂದು ಮಾಹಿತಿ ನೀಡಿದರು.ಆಸ್ಪತ್ರೆಯ ಪ್ರತಿ ಹಂತದ ವಾರ್ಡ್ಗಳಲ್ಲಿಯೂ ದಾಖಲಾಗಿರುವ ರೋಗಿ ಹಾಗೂ ಅವರ ಸಂಬಂಧಿಕರ ಆರೋಗ್ಯ ವಿಚಾರಿಸುತ್ತಾ,ಅಲ್ಲಿನ ಹೊರ ರೋಗಿಗಳ ವಿಭಾಗ, ಕಣ್ಣಿನ ವಿಭಾಗ, ಮಕ್ಕಳ ಒಳರೋಗಿ ಚಿಕಿತ್ಸಾ ವಿಭಾಗ ಪರಿಶೀಲನೆ ನಡೆಸಿ ಉತ್ತಮ ಚಿಕಿತ್ಸೆ, ಔಷಧ ಅಗತ್ಯ ಸೌಲಭ್ಯ ಒದಗಿಸುತ್ತಿರುವ ಬಗ್ಗೆ ಮಾಹಿತಿ ಮಾಹಿತಿ ಕ್ರೋಡಿಕರಿಸಿದರು.ಡೆಂಗ್ಯೂ ವಾರ್ಡ್ಗೆ ಭೇಟಿ ನೀಡಿ ಅಲ್ಲಿ ಒದಗಿಸಲಾಗಿತ್ತಿರುವ ಚಿಕಿತ್ಸಾ ಸೌಕರ್ಯಗಳ ಬಗ್ಗೆ, ಚಿಕ್ಕಮಕ್ಕಳ ತೀವ್ರ ನಿಗಾ ಘಟಕಮಕ್ಕಳ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರದಲ್ಲಿ ಮಕ್ಕಳಿಗೆ ಪೂರೈಸಲಾಗುತ್ತಿರುವ ಆಹಾರದ ಗುಣಮಟ್ಟ ಪರೀಕ್ಷಿಸಿ ಯಾವುದೇ ಲೋಪವಾಗದಂತೆ…

Read More

ಕಾನೂನು ಅರಿವು ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಸಲಹೆ ವಿಜಯಪುರ: ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳು ಒಂದೇ ಆಗಿದ್ದು, ಸಾರ್ವಜನಿಕರ ಅಗತ್ಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗದಂತೆ ಅವರಿಗೆ ಕಾನೂನು ಕುರಿತಾಗಿ ಜಾಗೃತಿ ಮೂಡಿಸಿ ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಹೇಳಿದರು.ಅವರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಜಿಲ್ಲಾ ನ್ಯಾಯಾಂಗ ಘಟಕ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಜಯಪುರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ನಡೆದ ಉತ್ತಮ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ನ್ಯಾಯಾಂಗದ ಮೇಲೆ ಜನರು ತುಂಬಾ ವಿಶ್ವಾಸವಿಟ್ಟಿದ್ದು, ಕಾನೂನು ಸೇವಾ ಪ್ರಾಧಿಕಾರದ ಮೂಲಕ ಅಸಹಾಯಕರಿಗೆ ನ್ಯಾಯ ದೊರಕಿಸಿಕೊಡುವ ಸೇವಾ ಪ್ರಾಧಿಕಾರದ ಮೂಲಕ ಕಾಲಕಾಲಕ್ಕೆ ಹಮ್ಮಿಕೊಳ್ಳುವ ಲೋಕ ಅದಾಲತ್‌ನಲ್ಲಿ ಹಲವಾರು…

Read More

ಕೆಎಎಸ್ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಮುಂದಿನ ಆಡಳಿದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಸೂಕ್ಷ್ಮವಾಗಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ವೃಂದ ಪರಿಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆ.೨೭ರ ಮಂಗಳವಾರ ಕೆಎಎಸ್ ಪರಿಕ್ಷೆ ನಡೆಯಲಿದೆ. ಪ್ರತಿ ೪-೫ ಪರೀಕ್ಷಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿಯನ್ನು ನೇಮಿಸಿವುದು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿಯನ್ನು ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ್ತç ಪೊಲೀಸ್ ಸಿಬ್ಬಂದಿ, ಗ್ರೂಪ್-ಡಿ ಸಿಬ್ಬಂದಿ, ವಾಹನದ ವ್ಯವಸ್ಥೆಗೆ ಅವರು ಸೂಚನೆ ನೀಡಿದರು.ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟಾçನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ…

Read More

ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರಲ್ಲೇ ಒಳಜಗಳ ಆರಂಭ |ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ, ಜನರ ತೆರಿಗೆ ಹಣವನ್ನು ಯಾವ ರೀತಿ ಲೂಟಿ ಮಾಡಬೇಕು ಎಂಬ ಬಗ್ಗೆ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿ ಚರ್ಚೆ ನಡೆಸಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರಲ್ಲೇ ಒಳಜಗಳ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಮ್ಯೂಸಿಕಲ್ ಚೇರ್ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ನಡುವೆ ಪೈಪೋಟಿ ನಡೆದಿದೆ. ಎಲ್ಲರೂ ದೆಹಲಿಗೆ ಓಡಾಡುತ್ತಿದ್ದಾರೆ. ಸಿದ್ದರಾಮಯ್ಯ ಬಳಿಕ ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದರು. ದೆಹಲಿಗೆ ತೆರಳಿದ್ದ ರಾಜ್ಯ ಕಾಂಗ್ರೆಸ್ ಮುಂಖಂಡರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮತ್ತು ಹಲವು ಹಿರಿಯ ಸಚಿವರು ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,…

Read More

ಚಡಚಣ: ೧೯೬೯ರಲ್ಲಿ ಸ್ಥಾಪನೆಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ(ಇಸ್ರೋ) ೫೫ ವರ್ಷಗಳಿಂದ ಬಾಹ್ಯಾಕಾಶ ಸಂಶೋಧನೆಯಲ್ಲಿ ಅಗಾಧ ಸಾಧನೆ ಮೆರೆದಿದೆ. ಹಲವು ಉಪಗ್ರಹಗಳ ಮೂಲಕ ಭಾರತದ ಅಭಿವೃದ್ಧಿಯಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಜತೆಗೆ ಬಾಹ್ಯಾಕಾಶ ಸಾಧನೆಗಳ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿದೆ ಎಂದು ರೇವತಗಾಂವ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಆರ್.ಎಚ್.ನದಾಫ್‌ರವರು ಹೇಳಿದರು.ಶುಕ್ರವಾರದಂದು ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಬಾಹ್ಯಾಕಾಶ ದಿನ”ದ ಅಂಗವಾಗಿ ಮಾತನಾಡಿದ ಅವರು. ಭಾರತದ ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-೩ ಯೋಜನೆಗೆ ವಿಶೇಷ ಸ್ಥಾನವಿದೆ. ಕಳೆದ ವರ್ಷ ಅ.೨೩ ರಂದು ಚಂದ್ರಯಾನ-೩ ಮಿಷನ್ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಕ್ಷಣದಲ್ಲಿ ಇತಿಹಾಸವೇ ಸೃಷ್ಟಿಯಾಯಿತು. ಈ ಸ್ಥಳಕ್ಕೆ ತಲುಪಿದ ಮೊದಲ ರಾಷ್ಟ್ರ ಭಾರತವಾಯಿತು. ಈ ಸಂಭ್ರಮವನ್ನು ಸದಾ ಸ್ಮರಣೀಯಗೊಳಿಸಲು ಭಾರತ ಸರಕಾರವು ಪ್ರಸಕ್ತ ವರ್ಷದಿಂದ ಅಗಸ್ಟ್ ೨೩ ರಂದು “ರಾಷ್ಟ್ರೀಯ ಬಾಹ್ಯಾಕಾಶ ದಿನ” ಎಂದು ಆಚರಿಸಲು ಮುಂದಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ…

Read More

ಇಂಡಿ: ಈ ವರ್ಷ ಮುಂಗಾರಿಯಲ್ಲಿ ಆಗಷ್ಟ ೨೦ರ ವರೆಗೆ ತಾಲ್ಲೂಕಿನಲ್ಲಿ ಸರಾಸರಿ ೨೬೦ ಮಿಲಿ ಮೀಟರ್ ಮಳೆ ಬೀಳಬೇಕಿತ್ತು ಇದರ ಬದಲಾಗಿ ತಾಲ್ಲೂಕಿನಲ್ಲಿ ಆಗಷ್ಟ ೨೦ರ ವರೆಗೆ ಸರಾಸರಿ ೪೯೧.೦ ಮಳೆಯಾಗಿದ್ದು, ಸರಾಸರಿಗಿಂತ ಹೆಚ್ಚಿನ ಮಳೆಯಾಗಿದೆ. ತೊಗರಿ ತಾಲ್ಲೂಕಿನಲ್ಲಿ ಪ್ರಮುಖ ಮುಂಗಾರಿ ಬೆಳೆಯಾಗಿದ್ದು, ಇಲ್ಲಿಯವರೆಗೆ ಬೆಳೆ ಚೆನ್ನಾಗಿ ಬೆಳೆದಿದೆ. ಇದೀಗ ಮೊಗ್ಗು, ಹೂವು ಬಿಡುವ ಹಂತದಲ್ಲಿದೆ. ಇನ್ನು ಮೇಲೆ ಸುಮಾರು ೧೫ ರಿಂದ ೨೦ ದಿವಸಗಳ ಕಾಲ ಮಳೆಯಾಗದಿದ್ದರೆ ಮುಂಗಾರಿ ಬೆಳೆಗಳು ಒಳ್ಳೆಯ ಇಳುವರಿ ನೀಡುತ್ತವೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ತಿಳಿಸಿದ್ದಾರೆ.ತಾಲ್ಲೂಕಿನಲ್ಲಿ ಮುಂಗಾರಿ ಹಂಗಾಮಿನಲ್ಲಿ ವಿವಿಧ ಬೆಳೆಗಳ ಬಿತ್ತನೆಯ ಕರ‍್ಯ ಪೂರ್ಣಗೊಂಡಿದ್ದು, ಶೇಕಡಾ ೯೯.೧ ರಷ್ಟು ಬಿತ್ತನೆಯಾಗಿದೆ. ಮುಸುಕಿನ ಜೋಳ ೧೫೭೧೬ ಹೆಕ್ಟರ್ ಗುರಿಯ ಬದಲಾಗಿ ೧೯೪೧೦ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಸಜ್ಜೆ ೭೦೪೦ ಹೆಕ್ಟರ್ ಬದಲಿಗೆ ೫೧೬೫ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ತಾಲ್ಲೂಕಿನಲ್ಲಿ ತೊಗರಿ ಪ್ರಮುಖ ಮುಂಗಾರಿ ಬೆಳೆಯಾಗಿದ್ದು, ೯೧೭೫೦ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯ…

Read More

ಇಂಡಿ: ಇಂಡಿಯ ಶಿಕ್ಷಣ ಇಲಾಖೆ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು, ನಿಂಬೆ ಅಭಿವೃದ್ದಿ ಮಂಡಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕೃಷಿ ವಿಜ್ಞಾನ ಕೇಂದ್ರ, ಭೂ ಸೇನಾ ನಿಗಮ ಸೇರಿದಂತೆ ಅನೇಕ ಇಲಾಖೆಗಳಲ್ಲಿ ಮೇಲಾಧಿಕಾರಿಗಳು ಇರುವುದೇ ಅಪರೂಪ.ಅವರ ಮನೆಗಳು ವಿಜಯಪುರದಲ್ಲಿ ಇದ್ದು ಇಲ್ಲಿರುವದು ನಮ್ಮ ಮನೆ. ನಾವು ಇಂಡಿಗೆ ಬರುವದು ಸುಮ್ಮನೆ ಎಂಬಂತಾಗಿದೆ ಇಂಡಿಯ ಇಲಾಖೆಗಳ ಆಡಳಿತ ವ್ಯವಸ್ಥೆ.ಇಲಾಖೆಯ ಮುಖ್ಯಸ್ಥರು ಕೇಂದ್ರ ಸ್ಥಾನದಲ್ಲಿ ಇರಬೇಕೆಂದು ನಿಯಮ ಇದೆ. ಆದರೆ ಇಲ್ಲಿ ಯಾರೂ ಕ್ಯಾರೆ ಎನ್ನುತ್ತಿಲ್ಲ.ಶಿಕ್ಷಣ ಇಲಾಖೆಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಹಿಡಿದು ಅದೇ ಇಲಾಖೆಯ ಕಚೇರಿಯಲ್ಲಿ ನಾಲ್ಕು ಅಧಿಕಾರಿಗಳು ವಿಜಯಪುರದಿಂದ ರೈಲಿನಿಂದ ೧೨ ಗಂಟೆಗೆ ವಿಜಯಪುರ ಬಿಟ್ಟು ಇಂಡಿಗೆ ಒಂದು ಗಂಟೆಗೆ ಬರುತ್ತಾರೆ. ಮತ್ತು ೪ ಗಂಟೆಯ ರೈಲಿಗೆ ಮರಳಿ ಹೋಗುತ್ತಾರೆ.ಒಂದು ವೇಳೆ ಯಾವದೇ ಕಾರಣಕ್ಕೆ ೪ ಗಂಟೆ ರೈಲು ತಪ್ಪಿದರೆ ಇಲಾಖೆಯ ವಾಹನ ತೆಗೆದುಕೊಂಡು ನಾಲ್ಕು ಜನ ವಿಜಯಪುರಕ್ಕೆ ಹೋಗುತ್ತಾರೆ. ಯಾವದೇ ಶಾಲೆಗಳಿಗೆ ಭೇಟಿ ನೀಡುವದಿಲ್ಲ, ಶಿಕ್ಷಕರ ಸಮಸ್ಯೆ ಮತ್ತು ಸಾರ್ವಜನಿಕರ ಸಮಸ್ಯೆ…

Read More

ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ೪ ವಿದ್ಯಾರ್ಥಿಗಳು ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಗುರು ಆರ್.ಸಿ. ರಾಠೋಡ ತಿಳಿಸಿದ್ದಾರೆ.ಆಯ್ಕೆಯಾದ ವಿದಾರ್ಥಿಗಳುಬಾಲಕರ ಕಬಡ್ಡಿ, ಬಾಲಕರ ಖೋ-ಖೋ, ೪೦೦ ಮೀಟರ್ ಓಟ ಭಾಗ್ಯಶ್ರೀ ನಿಂಬಾಳ (ಪ್ರಥಮ), ೬೦೦ ಮೀಟರ್ ಓಟ ಲಕ್ಷ್ಮಿ ಇಂಡಿ (ದ್ವಿತೀಯ), ಗುಂಡು ಎಸೆತ ಸೈಬಣ್ಣ ಮೈದರಗಿ (ಪ್ರಥಮ), ಚಕ್ರ ಎಸೆತ ಸೈಬಣ್ಣ ಮೈದರಗಿ (ಪ್ರಥಮ).ಇದೇ ಸಂರ್ದದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಜಣ್ಣ ಪಾತಾಳಿ, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ರಮೇಶ್ ಬಗಲೂರ, ಕೆಜಿಎಸ್ ಶಾಲೆಯ ಮುಖ್ಯ ಗುರುಮಾತೆ ಬಿ.ಎಸ್. ಬಾಸಗಿ, ಯು.ಬಿ.ಎಸ್ ಶಾಲೆಯ ಸುರೇಶ ಚವ್ಹಾಣ, ಎಲ್.ಪಿ.ಎಸ್.ಸೋಲಾಪೂರ ವಸ್ತಿ ಶಾಲೆಯ ರವೀಂದ್ರ ವಾಲೀಕಾರ ಸೇರಿದಂತೆ ಕ್ಲಸ್ಟರ್ ಮಟ್ಟದ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Read More

ತಾಳಿಕೋಟಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಟಾಪ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಲಿತ ನೌಕರ ಶಶಿಕಾಂತ ಬೆನ್ನೂರ ಇವರ ಆತ್ಮಹತ್ಯೆಗೆ ಕಾರಣಿ ಕರ್ತರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿವಿಧ ದಲಿತ ಪರ ಸಂಘಟನೆಗಳು ಶುಕ್ರವಾರ ಕರೆದ ತಾಳಿಕೋಟಿ ಬಂದ್ ಸಂಪೂರ್ಣ ಯಶಸ್ವಿಯಾಯಿತು.ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿದ್ದ ಶಶಿಕಾಂತ ಬೆನ್ನೂರ ಇವರಿಗೆ ಅಲ್ಲಿಯ ಆಡಳಿತ ಅಧಿಕಾರಿ ವೈದ್ಯ ಹಾಗೂ ಸಿಬ್ಬಂದಿಗಳಾದ ಈರಣ್ಣ ವಡವಡಗಿ ಜ್ಯೋತಿ ಕೋಳೂರಗಿ ಶ್ರೀದೇವಿ ಬಗಲಿ ಇವರು ನೀಡಿದ ಹಿಂಸೆಯನ್ನು ತಾಳದೆ ಜಿಗುಪ್ಸೆಗೊಂಡು ಆಗಸ್ಟ್ ೨೧ ರಂದು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಈ ಘಟನೆಯನ್ನು ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟವು ತಾಳಿಕೋಟಿ ಬಂದ್ ಗೆ ಕರೆ ನೀಡಿದ್ದವು. ಬಂದ್ ಅಂಗವಾಗಿ ಮುಂಜಾನೆ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು.ಪ್ರತಿಭಟನಾ ಮೆರವಣಿಗೆಯು ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡುವುದರೊಂದಿಗೆ ಆರಂಭವಾಗಿ ಕತ್ರಿ…

Read More

ತಾಳಿಕೋಟೆ: ತಾಲ್ಲೂಕಿನ ಬಳಗಾನೂರ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಸಮಿತಿಯಿಂದ ಪೋಷಕರ ಸಭೆಯನ್ನು ಶುಕ್ರವಾರ ಆಯೋಜಿಸ ನಾವುಲಾಗಿತ್ತು. ಮೂರುದಿನಗಳ ಕಾಲ 2022-23ನೇ ಸಾಲಿನ ಶಾಲಾ ಶೈಕ್ಷಣಿಕ ಪ್ರಗತಿಯ ಬಗ್ಗೆ ಚರ್ಚೆ ನಡೆಯಿತು. ಶೌಚಾಲಯ ನಿರ್ವಹಣೆ, ಕುಡಿಯುವ ನೀರಿನ ವ್ಯವಸ್ಥೆ, ಮೈದಾನ, ಕ್ರೀಡಾ ಚಟುವಟಿಕೆ, ಮಧ್ಯಾಹ್ನ ಉಪಹಾರ ಯೋಜನೆ, ಪಾಲಕ-ಪೋಷಕರ ಸಭೆ, ಹಣಕಾಸಿನ ವ್ಯವಹಾರ, ಶಾಲಾ ಮೂಲಭೂತ ಸೌಕರ್ಯ, ಮಕ್ಕಳ ಕೃತಿ ಸಂಪುಟ, ಶಿಕ್ಷಕರ ಕಾರ್ಯ ನಿರ್ವಹಣಾ ತಪಶೀಲನೆ, ಹಾಜರಾತಿ, ವಿಧ್ಯಾರ್ಥಿಗಳ ಮನೆ ಬೇಟಿ ಪಾಲಕರಿಂದ ಅಭಿಪ್ರಾಯ ಸಂಗ್ರಹಣೆ ಜೊತೆ ಶುಕ್ರವಾರ ಎಲ್ಲಾ ಪಾಲಕ ಪೋಷಕರು ಸಭೆ ನಡೆಸಲಾಯಿತು.ಪಾಲಕ ಪೋಷಕರು ಸಭೆ ಪ್ರಗತಿ ಮತ್ತು ಕುಂದುಕೊರತೆಗಳು, ಮಕ್ಕಳ ಶೈಕ್ಷಣಿಕ ಕುಂದು ಕೊರತೆಗಳು,ಶಾಲಾ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತುಕಾರ್ಯಕ್ರಮ ಅಧ್ಯಕ್ಷತೆಯನ್ನು ಮಹ್ಮದಸಾಬ.ಚಂ.ವಾಲಿಕಾರ , ಮುಖ್ಯ ಅತಿಥಿಗಳಾಗಿ ಹಮೀದಾ.ರ.ಮಕಾನದಾರ, ತಾಲೂಕು ಪಂಚಾಯತ್ ತಾಳಿಕೋಟೆ(ನರೇಗಾ)ದ ನೋಡಲ್ ಅಧಿಕಾರಿ ಜಗದೀಶ ಕೋಲಕಾರ, ಪಾರ್ವತಿ ವಡ್ಡರ, ಉರ್ದು ಸಿಆರ್ಪಿ ಗಳಾದ ಜಾವೀದ ಯಾಕೀನ, ಎ.ಎ.ಆಲಮೇಲ, ಎ.ಎಂ.ಬಿದರಿ,…

Read More