Author: editor.udayarashmi@gmail.com

ಕೆಎಎಸ್ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಮುಂದಿನ ಆಡಳಿದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಸೂಕ್ಷ್ಮವಾಗಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ವೃಂದ ಪರಿಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆ.೨೬ರ ಮಂಗಳವಾರ ಕೆಎಎಸ್ ಪರಿಕ್ಷೆ ನಡೆಯಲಿದೆ. ಪ್ರತಿ ೪-೫ ಪರೀಕ್ಷಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿಯನ್ನು ನೇಮಿಸಿವುದು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿಯನ್ನು ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ್ತ್ರ ಪೊಲೀಸ್ ಸಿಬ್ಬಂದಿ, ಗ್ರೂಪ್-ಡಿ ಸಿಬ್ಬಂದಿ, ವಾಹನದ ವ್ಯವಸ್ಥೆಗೆ ಅವರು ಸೂಚನೆ ನೀಡಿದರು.ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ…

Read More

ಸಂವಾದ ಕಾರ್ಯಕ್ರಮದಲ್ಲಿ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಕಿವಿಮಾತು ವಿಜಯಪುರ: ದುರ್ಬಲರಿಗೆ, ಅನ್ಯಾಯಕ್ಕೊಳಗಾದವರಿಗೆ ಕಾನೂನು ರಕ್ಷಣೆ ನಿಡುವ ಮೂಲಕ ಅವರಿಗೆ ನ್ಯಾಯ ದೊರಕಿಸುವ ಉತ್ಕೃಷ್ಟ ಜವಾಬ್ದಾರಿ ವಕೀಲರ ಮೇಲಿದ್ದು, ವಕೀಲರು ಕಾನೂನಿನ ಸಂಪೂರ್ಣ ಅರಿವು ಹೊಂದುವ ಮೂಲಕ ನ್ಯಾಯ ದೊರಕಿಸಲು ಮುಂದಾಗಬೇಕು ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಕಿವಿ ಮಾತು ಹೇಳಿದರು.ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಘಟಕ ಹಾಗೂ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಹತ್ವದ ಕಾನೂನು ರಚನೆ ಹಾಗೂ ತಿದ್ದುಪಡಿಯಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ. ವಕೀಲರು ಸಮಾಜಕ್ಕೆ ಹತ್ತಿರವಿರುವ ಲೋಕಾಯುಕ್ತ ಕಾನೂನಿನ ಬಗ್ಗೆ ತಿಳಿದುಕೊಂಡು ಸಮಾಜಕ್ಕೆ ಎಲ್ಲರಿಗೂ ಸಹಾಯ ಮಾಡಲು ಅವಕಾಶವಿದೆ.ಸಮಾಜದಲ್ಲಿ ಎಲ್ಲರೂ ಗೌರವಯುತವಾಗಿ ಜೀವನ ನಡೆಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಸಂವಿಧಾನದ ಆಶಯವೂ ಇದಾಗಿದೆ.…

Read More

ವಿಜಯಪುರ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿದ ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಬಸವನಬಾಗೇವಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನುಕಂಪದ ಆಧಾರದ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ವಿರುಪಾಕ್ಷಪ್ಪ ಮೋಟಗೇರಿ ಇವರು ಸಲ್ಲಿಸಿದ ದೂರಿನ ವಿಚಾರಣೆ ಕೈಗೆತ್ತಿಕೊಂಡು, ಅಧಿಕಾರಿಗಳಿಂದ ವಿವರ ಪಡೆದುಕೊಂಡರು. ನೇಮಕಾತಿ ವಿಷಯಗಳು ಲೋಕಾಯುಕ್ತ ಕಾಯ್ದೆಯಡಿ ಬರುವುದಿಲ್ಲ, ತಾವು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಿ, ಉಚ್ಛ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸುವ ಹಕ್ಕನ್ನು ಕಾಯ್ದಿರಿಸಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಪ್ರಕರಣವನ್ನು ಮುಕ್ತಾಯಗೊಳಿಸಿದರು.ನಿವೃತ್ತಿ ವೇತನ ಹಾಗೂ ನಿವೃತ್ತಿ ನಂತರದ ಸೌಲಭ್ಯಗಳನ್ನು ಒದಗಿಸಲು ಕೋರಿ ರಾಜೇಶ್ವರಿ ಇವರು ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಕೆಎಟಿ ಮುಂದೆ ಅರ್ಜಿ ಸಲ್ಲಿಸಿದ್ದು, ಅಲ್ಲಿ ಸಾಕಷ್ಟು ಆದೇಶಗಳನ್ನು ಸಹ ಹೊರಡಿಸಲಾಗಿದೆ.…

Read More

ಸಚಿವ ಈಶ್ವರ್‌ ಖಂಡ್ರೆ ಖಡಕ್ ಎಚ್ಚರಿಕೆ | ಜಿಲ್ಲಾಡಳಿತಗಳಿಗೆ ಸೂಚನೆ | ಜಲಮೂಲ ಕಲುಷಿತಗೊಳಿಸಿದರೆ ಕ್ರಿಮಿನಲ್ ಮೊಕದ್ದಮೆ ಬೆಂಗಳೂರು: ಈ ಬಾರಿ ಗೌರಿ ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಹೇಳಿದರು. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಆದರೆ ಈಗ ಸಾಕಷ್ಟು ಮುಂಚಿತವಾಗಿಯೇ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಖಂಡ್ರೆ, ಪರಿಸರ ಸ್ನೇಹಿ ವಿಗ್ರಹಗಳನ್ನು ಉತ್ತೇಜಿಸಲು ಮತ್ತು ಹಸಿರು ಪಟಾಕಿಗಳ ಬಳಕೆಯನ್ನು ಉತ್ತೇಜಿಸಲು ಜಿಲ್ಲಾಧಿಕಾರಿಗಳ ಅಡಿಯಲ್ಲಿ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.ಇತ್ತೀಚೆಗೆ ಶಿರೂರು ಮತ್ತು ವಯನಾಡಿನಲ್ಲಿ…

Read More

ನೀರಿನ ದರ ಶೇ.20-30 ರಷ್ಟು ಏರಿಕೆ | ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (ಬಿಡಬ್ಲ್ಯೂಎಸ್‌ಎಸ್‌ಬಿ) ಮಂಡಳಿಯು ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ನಷ್ಟವನ್ನು ಪರಿಹರಿಸಲು ಬೆಂಗಳೂರಿನಲ್ಲಿ ನೀರಿನ ದರವನ್ನು ಹೆಚ್ಚಿಸಲು ನಿರ್ಧರಿಸಿದೆ. “ನೀರು ಉಪಯುಕ್ತತೆಯ ಉಳಿವಿಗಾಗಿ 20-30% ರಷ್ಟು ಬೆಲೆಗಳನ್ನು ಹೆಚ್ಚಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.“ನೀರು ಬರದಿದ್ದಾಗ ನಾಗರಿಕರು ನಮ್ಮನ್ನು ಬೈಯುತ್ತಾರೆ, ವಾಟ್ಸಾಪ್ ಸಂದೇಶಗಳು ಮತ್ತು ಕರೆಗಳಿಂದ ನಮ್ಮನ್ನು ಬೇಟೆಯಾಡುತ್ತಾರೆ. ನನ್ನನ್ನು ಯಾರಾದರೂ ಟೀಕಿಸಲಿ, ನಾನು ಬೆಂಗಳೂರಿನಲ್ಲಿ ನೀರಿನ ದರವನ್ನು ಹೆಚ್ಚಿಸುತ್ತೇನೆ, ಇಲ್ಲದಿದ್ದರೆ ನಾವು ಬದುಕುವುದಿಲ್ಲ” ಎಂದು ಶಿವಕುಮಾರ್ ಹೇಳಿದರು.“ಕಳೆದ 12-13 ವರ್ಷಗಳಲ್ಲಿ ನೀರಿನ ದರ ಏರಿಕೆಯಾಗಿಲ್ಲ. ಬಿಡಬ್ಲ್ಯೂಎಸ್‌ಎಸ್‌ಬಿ ತನ್ನ ಹಣಕಾಸು ನಿರ್ವಹಣೆಯನ್ನು ಬಹಳ ಕಷ್ಟದಿಂದ ನಿರ್ವಹಿಸುತ್ತಿದೆ. ನೀರಿನ ದರ ಏರಿಕೆ ಅನಿವಾರ್ಯವಾಗಿದೆ ಮತ್ತು ಇದಕ್ಕೆ ಯಾವುದೇ ವಿರೋಧವನ್ನು ಲೆಕ್ಕಿಸದೆ ಮಾಡಲಾಗುವುದು” ಎಂದು ‘ಕಾವೇರಿ ನೀರು ನಿಮ್ಮ ಮನೆ ಬಾಗಿಲಿಗೆ’ ಅಭಿಯಾನವನ್ನು ಉದ್ಘಾಟಿಸಿದ ನಂತರ ಉಪ ಮುಖ್ಯಮಂತ್ರಿಗಳು…

Read More

ಇಂಡಿ: ೨೧ ನೇ ರಾಷ್ಟ್ರೀಯ ಜಾನುವಾರು ಗಣತಿಗೆ ಸಿದ್ದತೆ ಆರಂಭವಾಗಿದೆ. ಸೆ.೧ ರಂದು ಜಾನುವಾರು ಗಣತಿ ಕಾರ್ಯಕ್ಕೆ ಇಂಡಿ ತಾಲೂಕಿನಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಪಶುಪಾಲನಾ ಇಲಾಖೆಯ ಅಗತ್ಯ ಸಿದ್ದತೆಗೆ ಮುಂದಾಗಿದೆ. ಇಲಾಖೆ ಅವರಿಗೆ ಜಾನುವಾರು ಗಣತಿ ಬಗ್ಗೆ ತಿಳಿಸುವ ಕೆಲಸ ಮಾಡುತ್ತಿದೆ ಎಂದು ಹಿರಿಯ ಪಶು ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿ ಹೈನುಗಾರಿಕೆ ಪಶುಪಾಲನೆ ಪ್ರಮುಖ ವೃತ್ತಿಯಾಗಿದೆ. ಆದರೆ ವರ್ಷದಿಂದ ವರ್ಷಕ್ಕೆ ಈ ಪ್ರಮಾಣ ಗಣನೀಯವಾಗಿ ಕುಸಿತ ಕಾಣುತ್ತಿದೆ. ೧೯ ನೇ ಜಾನುವಾರು ಗಣತಿಗೆ ಹೋಲಿಸಿದರೆ ೨೦ ರಲ್ಲಿ ಈ ಪ್ರಮಾಣ ಕಡಿಮೆಯಾಗಿದೆ. ನಂತರ ಕೂಡ ವರ್ಷದಿಂದ ವರ್ಷಕ್ಕೆ ಇಳಿಕೆ ಕಂಡು ಬಂದಿದೆ. ಪ್ರತಿ ೫ ವರ್ಷಕ್ಕೊಮ್ಮೆ ನಡೆಸಲಾಗುವ ಜಾನುವಾರು ಗಣತಿಯಲ್ಲಿ ಜಾನುವಾರುಗಳ ಪ್ರಮಾಣ, ವಯಸ್ಸು, ಲಿಂಗ ಸಂಯೋಜನೆ, ಕೋಳಿ ಸಾಗಾಣಿಕೆ, ಕುರಿ ಮೇಕೆ ಸಾಕಾಣಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.ತಾಲೂಕಿನಲ್ಲಿ ೨೧ ನೇ ಜಾನುವಾರು ಗಣತಿ ಸಲುವಾಗಿ ಇಲಾಖೆಯು ಅಗತ್ಯ ಸಿದ್ದತೆಯಲ್ಲಿ ತೊಡಗಿದೆ. ತಂಡಗಳ…

Read More

ವಿಜಯಪುರ: ಸಣ್ಣ ಮಕ್ಕಳಲ್ಲಿ ಹೆಚ್ಚುತ್ತಿರುವ ಕಣ್ಣಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಟೈಟಾನ ಕಂಪನಿಯು ದೃಷ್ಟಿ ದೋಷವುಳ್ಳ ಶಾಲಾ ಮಕ್ಕಳಿಗೆ “ನನ್ನಕಣ್ಣು” ಯೋಜನೆಯಡಿಯಲ್ಲಿ ಉಚಿತವಾಗಿ ಕನ್ನಡಕ ನೀಡಲು ಮುಂದಾಗಿದೆ . ಈ ಸೌಲಭ್ಯವನ್ನು ದೃಷ್ಟಿದೋಷ ಸವಾಲುಗಳುಳ್ಳ ಮಕ್ಕಳು ಇದರ ಸದೋಪಯೋಗ ಪಡೆದುಕೊಳ್ಳಬೇಕು ಎಂದು ಶಂಕರ ಆಸ್ಪತ್ರೆಯ ಆರ್.ಎಚ್.ಕಟಕದೊಂಡ ಹೇಳಿದರು.ಶುಕ್ರವಾರದಂದು ಕಳೆದ ವಾರದ ಹಿಂದೆ ವಿದ್ಯಾರ್ಥಿಗಳಿಗೆ ಉಚಿತ ನೇತ್ರತಪಾಸಣೆ ನಡೆಸಲಾಗಿತ್ತು. ಈ ಪೈಕಿ ದೃಷ್ಟಿದೋಷ ಕಾಣಿಸಿಕೊಂಡ ಶಾಲೆಯ ೧೫ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯಿಂದ ಕನ್ನಡಕ ವಿತರಣೆ ಮಾಡಲಾಯಿತು ಎಂದರು. ಮಾನವನ ಅಂಗಗಳಲ್ಲಿ ಕಣ್ಣು ಬಹಳ ಪ್ರಮುಖವಾದದ್ದು. ಕಣ್ಣಿನ ಆರೋಗ್ಯ ಕಾಯ್ದುಕೊಳ್ಳುವುದು ಅವಶ್ಯಕ ಎಂದು ಹೇಳಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿ ಮಾತನಾಡುತ್ತ, ಕಣ್ಣು ಮನುಷ್ಯನಿಗೆ ಅತ್ಯಮೂಲ್ಯ. ಕಣ್ಣು ಕಳೆದುಕೊಂಡರೆ ಜಗತ್ತೇ ಕತ್ತಲು ಮಯವಾಗುತ್ತದೆ. ಮಕ್ಕಳು ಮೊಬೈಲ್, ಟಿವಿಯನ್ನು ಅತೀ ಸಮೀಪದಿಂದ ವೀಕ್ಷಿಸುವುದರಿಂದ ಕಣ್ಣಿಗೆ ತೊಂದರೆ ಆಗುವ ಸಾಧ್ಯತೆ ಇರುತ್ತದೆ ಎಂದರು.ಈ ವೇಳೆ ಶಾಲೆಯ ಶಂಕರ ಆಸ್ಪತ್ರೆ ಸಿಬ್ಬಂದಿ…

Read More

ವಿಜಯಪುರ: ಲಾವಣಿಗಳ ಮೂಲಕ ಪ್ರಖ್ಯಾತರಾಗಿರುವ ಈ ನಾಡಿನ ಹೆಸರಾಂತ ಲೇಖಕ ಬಿ.ಆರ್.ಪೊಲೀಸ್ ಪಾಟೀಲ ಅವರು ಬರೆದ ಗದುಗಿನ ತೋಂಟದಾರ್ಯ ಮಠದ ಹಿಂದಿನ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಜೀವನಾಧಾರಿತ ಕಾದಂಬರಿ ‘ಉರಿಯ ಗದ್ದುಗೆ’ ಎರಡನೇ ಆವೃತ್ತಿಯ ಲೋಕಾರ್ಪಣೆ ಸಮಾರಂಭ ಗುರುವಾರ ಸಂಜೆ ಇಲ್ಲಿನ ಮನಗೂಳಿ ರಸ್ತೆಯ ಗುರುಪಾದೇಶ್ವರ ನಗರ( ಇಬ್ರಾಹಿಂಪುರ ಪಕ್ಕದ ಬಡಾವಣೆ) ದ ತೋಂಟದಾರ್ಯ ಅನುಭವ ಮಂಟಪದಲ್ಲಿ ಜರುಗಿತು.ಶ್ರಾವಣ ಮಾಸದ ಪ್ರಯುಕ್ತ ತೋಂಟದಾರ್ಯ ಅನುಭವ ಮಂಟಪದಲ್ಲಿ ಕವಿ ಚಾಮರಸ ವಿರಚಿತ ಪ್ರಭುಲಿಂಗ ಲೀಲೆ ಪ್ರವಚನ ಹೇಳುತ್ತಿರುವ ಖ್ಯಾತ ಪ್ರವಚನಕಾರರು, ಶ್ರೇಷ್ಠ ಅನುಭಾವಿಗಳಾದ ಅಥಣಿ ತಾಲೂಕಿನ ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಸ್ವಾಮಿಗಳು ಉರಿಯ ಗದ್ದುಗೆ ಎರಡನೇ ಆವೃತ್ತಿಯ ಪುಸ್ತಕ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಮಹಾತ್ಮರ ಜೀವನಚರಿತ್ರೆಯ ಪುಸ್ತಕಗಳನ್ನು ಓದುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು. ಹೆಸರಾಂತ ಲೇಖಕರಾದ ಬಿ.ಆರ್. ಪೊಲೀಸ್ ಪಾಟೀಲ ಅವರು ಬೆಳಗಾವಿ ನಾಗನೂರ ಮಠದ ಶಿವಬಸವ ಸ್ವಾಮಿಗಳ ಜೀವನಾಧಾರಿತ ‘ಮಹಾವೃಕ್ಷ’ ಕಾದಂಬರಿ ಸೇರಿದಂತೆ ಹಲವಾರು ಕೃತಿಗಳನ್ನು…

Read More

ವಿಜಯಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಕಾ. ಗುಬ್ಬೇವಾಡ ಇವರ ನಿರ್ದೇಶನದ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ಪರಶುರಾಮ ರ. ಪಾರಣ್ಣವರ ಇವರನ್ನು ಆಯ್ಕೆ ಮಾಡಲಾಗಿದೆ.ಕಾರಣ ತಾವು ಕೂಡಲೇ ಅಧಿಕಾರವನ್ನು ವಹಿಸಿಕೊಂಡು ಪಕ್ಷದ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರುಗಳ ಹಾಗೂ ಮುಖಂಡರ ಸಹಕಾರದೊಂಧಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯ್ನು ಯಶಸ್ವಿಯಾಗಿ ನಿರ್ವಹಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸಂಘಟನೆಗೆ ಶ್ರಮಿಸುವಂತೆ ಈ ಆದೇಶ ಮಾಡಲಾಗಿದೆ.

Read More

ವಿಜಯಪುರ: ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ಹಾಗೂ ಶ್ರೀ ಶಾಂತವೀರ ಪದವಿ ಪೂರ್ವ ಕಾಲೇಜು ಬಬಲೇಶ್ವರ ಸಹಯೋಗದಲ್ಲಿ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮ ಬಬಲೇಶ್ವರ ಶಾಂತವೀರ ಪ ಪೂ ಕಾಲೇಜಿನಲ್ಲಿ ಆ.೨೪ರಂದು ಬೆಳಿಗ್ಗೆ ೧೧.೩೦ ಕ್ಕೆ “ವಿಶ್ವ ಜಾನಪದ ದಿನಾಚರಣೆ ೨೦೨೪ ” ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಾಪುಗೌಡ ಪಾಟೀಲ (ಶೇಗುಣಸಿ) ಉದ್ಘಾಟಿಸುವರು. ಪ್ರಾಚಾರ್ಯ ಪ್ರೊ ಲಕ್ಷ್ಮೀನರಸಯ್ಯ ಎನ್ ಅಧ್ಯಕ್ಷತೆ ವಹಿಸುವರು. ಜಾನಪದ ಸಾಹಿತಿ ಶಂಕರ ಬೈಚಬಾಳ ಉಪನ್ಯಾಸ ನೀಡುವರು. ಪರಿಷತ್ ಅಧ್ಯಕ್ಷ ಬಾಳನಗೌಡ ಪಾಟೀಲ ಪ್ರಾಸ್ತಾವಿಕ ನುಡಿ ಹೇಳುವರು. ಬಯಲಾಟ ಅಕಾಡೆಮಿ ಸದಸ್ಯೆ ಶ್ರೀಮತಿ ಅನಸುಬಾಯಿ ವಡ್ಡರ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ರವೀಂದ್ರ ಉಗಾರ, ಕೆಪಿಸಿಸಿ ಅಲ್ಪಸಂಖ್ಯಾತ ತಾಲೂಕಾ ಅಧ್ಯಕ್ಷ ಅಬ್ದುಲ್ ಗೋಕಾವಿ, ಪರಿಷತ್ ಪದಾಧಿಕಾರಿಗಳಾದ ಗೂಳಪ್ಪ ಯರನಾಳ, ಮೌಲಾಸಾಹೇಬ ಜಹಾಗೀರದಾರ ಆಗಮಿಸುವರು.ಕಲಾವಿದರಾದ ಶ್ರೀಶೈಲ ಬಾಟಿ( ಕೊಲ್ಹಾರ) ಇದ್ರಾಬಾಯಿ ಪಡಗಾರ( ಬಬಲೇಶ್ವರ) ಇವರನ್ನು ಸನ್ಮಾನಿಸಲಾಗುವುದು.ಕಾರ್ಯಕ್ರಮದಲ್ಲಿ ಹೆಜ್ಜೆಮೇಳ ಮತ್ತು ಚೌಡಕಿ ಪದ ಪ್ರದರ್ಶನ…

Read More