Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಬಡ್ತಿ ಹೊಂದಿ ಸುಮಾರು ೭ ವರ್ಷಗಳು ಕಳೆಯುತ್ತಾ ಬಂದಿದ್ದರೂ ಸಹ ವಿಜಯಪುರ ನಗರದ ಕೆಲವೊಂದು ವಾರ್ಡಗಳಲ್ಲಿ ಅಭಿವೃದ್ದಿ ಎನ್ನುವದು ಮರಿಚಿಕ್ಕೆಯಾಗಿದೆ. ಇದಕ್ಕೆ ನಿರ್ದಶನ ಎಂಬಂತೆ ವಾರ್ಡ ನಂ. ೨೦ರ ಮುಬಾರಕ ಕಾಲನಿ, ಟಿಪ್ಪು ಸುಲ್ತಾನ ಮ್ಯಾರೇಜ್ ಹಾಲ್ಹತ್ತಿರ, ಜೆ.ಎಂ.ರೋಡದಲ್ಲಿ ಬರುವ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಇನ್ನುವರೆಗೆ ಡಾಂಬರೀಕರಣ ರಸ್ತೆಯಾಗಲಿ, ಸಿ.ಸಿ. ರಸ್ತೆ ಆಗಿರುವದಿಲ್ಲ. ಇನ್ನು ಈ ರಸ್ತೆಯ ಮೂಲಕ ಇಕ್ರಾ ಶಾಲೆ, ಅಂಜುಮನ್ ಪದವಿ ಪೂರ್ವ ಕಾಲೇಜು, ಅಲ್ಹುದಾ ಶಾಲೆ, ಎ೧ ಶಾಲೆಗಳಿಗೆ ಹೋಗುವ ಚಿಕ್ಕ ಮಕ್ಕಳಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ತಿಗಳಿಗೆ ದಿನಂಪ್ರತಿ ಹಲವಾರು ಸಮಸ್ಯೆಗಳು ಎದುರಿಸುವ ಪರಿಪಾಠ ಬಂದಿದೆ. ಇನ್ನು ಮಳೆಗಾಲದಲ್ಲಿ ಎಲ್ಲೆಂದರಲ್ಲಿ ರೊಜ್ಜು, ಕೆಸರು ಹೆಚ್ಚಾಗುತ್ತದೆ. ಇದರಿಂದ ಚಿಕ್ಕ ಮಕ್ಕಳು ಕೆಸರಿನ ಗುಂಡಿಗಳಿಗೆ ಬಿದ್ದು, ಸಮಸ್ಯೆಗಳಿಗೆ ಈಡಾಗಿದ್ದಾರೆ. ಇನ್ನು ಈ ಬಡಾವಣೆಯಲ್ಲಿ ಸರಿಯಾದ ರಸ್ತೆ ದೀಪಗಳಿಲ್ಲ, ಡ್ರೈನೇಜ್, ಇನ್ನು ಹಲವಾರು ಸಮಸ್ಯೆಗಳು ಇದ್ದು,ಈ ಕುರಿತು ವಾರ್ಡ ಸದಸ್ಯರಿಗೆ ಮಹಾನಗರ ಪಾಲಿಕೆ ಮಹಾಪೌರರಿಗೆ…
ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ವಿಜಯಪುರ: ಸಂವಿಧಾನಿಕ ಹುದ್ದೆಯಲ್ಲಿರುವ ಗೌರವಾನ್ವಿತ ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರ ವರ್ತನೆ ಖಂಡಿಸಿ, ವಾಲ್ಮೀಕಿ ಹಗರಣ, ಮುಡಾ ಹಗರಣದ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ವಿರೋಧಿಸಿ ಹಾಗೂ ಕಾರಣಿಕರ್ತರಾದ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ಗುರುವಾರ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು.ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಈ ವೇಳೆ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ದಲಿತ ರಾಜ್ಯಪಾಲರು ಎನ್ನುವ ಕಾರಣಕ್ಕೆ ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು, ಮುಖಂಡರು ಮನಸ್ಸಿಗೆ ಬಂದಂತೆ ಅವಹೇಳನಕಾರಿಯಾಗಿ ಹಾಗೂ ಏಕವಚನ ಪ್ರಯೋಗ ಮಾಡುವ ಮೂಲಕ ಸಂವಿಧಾನ ಹುದ್ದೆಯಲ್ಲಿರುವ ಗೌರವಾನ್ವಿತ ರಾಜ್ಯಪಾಲರನ್ನು ನಿಂದಿಸಿರುವುದು ಖಂಡನೀಯ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಎದುರಲ್ಲೇ ಈ ರೀತಿಯ ಹೀನ ವರ್ತನೆ ನಡೆದರೂ,…
ಧಾರಾಕಾರ ಮಳೆಗೆ ತುಂಬಿ ಹರಿದ ಹಳ್ಳಕೊಳ್ಳ | ರಸ್ತೆ ಸಂಚಾರ ಬಂದ್ ತಿಕೋಟಾ: ತಾಲ್ಲೂಕಿನ ಜಾಲಗೇರಿ, ಟಕ್ಕಳಕಿ, ಲೋಹಗಾಂವ, ಹುಬನೂರ, ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ ಸೇರಿದಂತೆ ವಿವಿಧೆಡೆ ಬುಧವಾರ ರಾತ್ರಿ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಗೆ ಹಳ್ಳಕೊಳ್ಳಗಳು ಭರಪೂರ ತುಂಬಿ ಹರಿಯುತ್ತಿವೆ.ವಿವಿಧ ಗ್ರಾಮಗಳ ನಡುವಿನ ಸೇತುವೆಗಳು ಮೇಲ್ಮಟ್ಟದಿಂದ ತುಂಬಿ ಹರಿಯುತ್ತಿದ್ದು, ಹಲವೆಡೆ ವಾಹನ ಸಂಚಾರ ಬಂದ್ ಆಗಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ಬಿರುಗಾಳಿಗೆ ದ್ರಾಕ್ಷಿ ಪಡದ ಸಾಲುಗಳು ನೆಲಕ್ಕುರುಳಿ ರೈತನಿಗೆ ಸಂಕಷ್ಟ ತರಿಸಿದೆ.ಟಕ್ಕಳಕಿ ಹಾಗೂ ಡೋಕಳೆವಾಡಿ ಮದ್ಯೆ ಇರುವ ಹಳ್ಳ ಸಂಪೂರ್ಣ ತುಂಬಿ ಹರಿಯುತ್ತಿದ್ದು ದಿನವಿಡಿ ಯಾವುದೇ ವಾಹನ ಸಂಚಾರ ಆಗದೇ ರಸ್ತೆ ಸಂಫೂರ್ಣ ಬಂದ್ ಆಗಿ ಸಾಲುಗಟ್ಟಲೇ ವಾಹನಗಳು ಎರಡು ಬದಿಗೆ ನಿಂತುಕೊಂಡ ದೃಶ್ಯ ಕಾಣುತ್ತಿತ್ತು. ಹುಬನೂರ ಹಳ್ಳ ಸಹ ಸೇತುವೆ ಮೇಲಿಂದ ನೀರು ಹರಿಯುತ್ತಿತ್ತು. ರೈತರ ಜಮೀನಿನ ಒಡ್ಡುಗಳಲ್ಲಿ ನೀರು ತುಂಬಿದ್ದವು, ಕೆಲವೆಡೆ ಒಡ್ಡು ಒಡೆದು ಹೋಗಿವೆ.ವಾಲಿದ ದ್ರಾಕ್ಷಿ ಪಡ: ಲೋಹಗಾಂವ ತಾಂಡಾ ನಿವಾಸಿ ರಾಜು ಹುನ್ನೂರ ಅವರ…
ದೇವರಹಿಪ್ಪರಗಿ: ಬಂಜಾರಾ ಸಮುದಾಯದ ಪ್ರಮುಖರು ಕೆಸರಟ್ಟಿ ಶಂಕರಲಿಂಗಮಠದ ಸೋಮಲಿಂಗ ಮಹಾರಾಜ್ರ ೪೧ನೇ ಜನ್ಮದಿನದ ಪ್ರಯುಕ್ತ ಅವರನ್ನು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಸುಭಾಸ ಜಾಧವ, ಬಾಳು ರಾಠೋಡ, ವಿಕ್ರಮ ರಾಠೋಡ, ವಸಂತ ರಾಠೋಡ, ಉಪೇಂದ್ರ ಚವ್ಹಾಣ, ಧರ್ಮು ರಾಠೋಡ, ಅಶೋಕ ರಾಠೋಡ ಇದ್ದರು.
ದೇವರಹಿಪ್ಪರಗಿ: ಸಾಮಾಜಿಕ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಇವರ ಸಹಯೋಗದಲ್ಲಿ ಪರಿಸರ ದಿನಾಚರಣೆ ಅಂಗವಾಗಿ “ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ” ಜರುಗಿತು.ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಎಂ.ವೈ.ಮಲಕ್ಕನ್ನವರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಪ್ರತಿಯೊಬ್ಬ ನಾಗರಿಕ ಕೂಡ ತನ್ನ ತಾಯಿ ಹೆಸರಿನಲ್ಲಿ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸಿ, ಬೆಳೆಸುವ ಕಾರ್ಯ ಮಾಡಬೇಕು. ಜಿಲ್ಲೆಯಾದ್ಯಂತ ವ್ಯಾಪಕವಾಗಿ ಅರಣ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದನ್ನು ಅರಿತುಕೊಳ್ಳುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಈ ಸಂದರ್ಭದಲ್ಲಿ ಉಪವಲಯ ಅರಣ್ಯ ಅಧಿಕಾರಿ ಆರ್.ಎಚ್.ಬಿರಾದಾರ, ಐಇಸಿ ಸಂಯೋಜಕ ಸಿದ್ದು ಕಾಂಬಳೆ, ಜಿ.ಎಸ್.ರೋಡಗಿ, ಕಿರಣ ಪಾಟೀಲ, ಆನಂದ ಮುದೋಡಗಿ, ಪರಶುರಾಮ ಗುಬ್ಬೇವಾಡ, ಭೀಮರಾಯ ಭಾವಿಕಟ್ಟಿ, ಭಾರತಿ ಕೋಳಿ, ಭಾರತಿ ಸೇರಿದಂತೆ ಅರಣ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.
ವಿಜಯಪುರ: ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿದ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.ನಿಗದಿತ ಅರ್ಜಿ ನಮೂನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : ೧೮-೦೯-೨೦೨೪ರೊಳಗೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೦೮೫,ಮೊ: ೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಸಂಸ್ಥೆಗಳು ಆಯೋಜಿಸುವ ರಾಷ್ಟçಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ನಮೂನೆಯನ್ನು ಪಡೆದು, ದಿನಾಂಕ : ೧೮-೦೯-೨೦೨೪ರೊಳಗಾಗಿ ಭರ್ತಿ ಮಾಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಗೆ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೦೮೫,ಮೊ: ೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ sಸಲಹೆ ಸೂಚನೆಗಳನ್ನು ನೀಡಿದರು.ವಿದ್ಯಾಲಯದ ಬೋಧನಾ ಗುಣಮಟ್ಟವನ್ನು ಹೆಚ್ಚಿಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ, ಮಕ್ಕಳ ಕೌಶಲ್ಯತೆಯನ್ನು ಹೆಚ್ಚಿಸಲು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು.ಪಾಠ ಮಾಡಿ ಮಕ್ಕಳಿಗೆ ಪ್ರೇರಣೆಯಾದ ಡಿಸಿ ಹಾಗೂ ಸಿಇಒ : ಈ ಸಂದರ್ಭದಲ್ಲಿ ೧೦ನೇ ತರಗತಿಯ ಕೊಠಡಿಗೆ ತೆರಳಿ ವಿದ್ಯಾರ್ಥಿ ಗಳಿಗೆ ಭೂಗೋಳ, ಗಣಿತ,ಸಮಾಜ ವಿಜ್ಞಾನ ಸೇರಿದಂತೆ ಸಾಮಾನ್ಯ ಜ್ಞಾನದ ವಿಷಯದ ಬಗ್ಗೆ ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ರೇಖಾಗಣಿತ ಹಾಗೂ ಇಂಗ್ಲೀಷ ವ್ಯಾಕರಣದ ಕುರಿತು ತಿಳಿಸಿಕೊಟ್ಟರು.ವಿದ್ಯಾರ್ಥಿ ಜೀವನವನ್ನು ಸುಂದರವಾಗಿಸಿಕೊಳ್ಳಿ, ಜ್ಞಾನಾರ್ಜನೆ ಪಡೆದುಕೊಳ್ಳಲು ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು. ಪ್ರತಿನಿತ್ಯದ ಪಾಠಗಳನ್ನು ಶ್ರವಣ ಮಾಡುವ ಮೂಲಕ ಮನನ ಮಾಡಿಕೊಳ್ಳಬೇಕು. ಜೀವನ ಸುಂದರಗೊಳಿಸಿಕೊಂಡು ಕಲಿತ ಶಾಲೆ ತಮ್ಮ ಊರಿಗೆ…
ಸಾರ್ವಜನಿಕ ಅಹವಾಲು ಸ್ವೀಕಾರ & ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಸೂಚನೆ ವಿಜಯಪುರ: ಸಾರ್ವಜನಿಕ ಸಮಸ್ಯೆಗಳನ್ನು ಪರಿಹಾರ ಮಾಡುವುದು ಸರಕಾರಿ ನೌಕರರ ಆದ್ಯತೆಯಾಗಬೇಕು. ಸಮಸ್ಯೆಗಳು ಉದ್ಭವವಾಗದಂತೆ ತಮಗೆ ವಹಿಸಿದ ಕಾರ್ಯದ ವ್ಯಾಪ್ತಿ, ಜವಾಬ್ದಾರಿ ಅರಿತುಕೊಂಡು ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆ ಹಾಗೂ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ಮೂಲಕ ಸಾರ್ವಜನಿಕ ಆಡಳಿತ ಗುಣಮಟ್ಟ ಹೆಚ್ಚಿಸಬೇಕು ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಹೇಳಿದರು.ಗುರುವಾರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಯಾವುದೇ ಆಮಿಷಕ್ಕೆ ಒಳಗಾಗದೇ ಸಂದರ್ಭಾನುಸಾರ ಕಾನೂನು ನಿಯಮಾವಳಿಗಳ ಪ್ರಕಾರ ಭ್ರಷ್ಟಾಚಾರರಹಿತ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ನೌಕರರ ಕರ್ತವ್ಯವಾಗಿದ್ದು, ಅರ್ಹ ಫಲಾನುಭವಿಗಳಿಗೆ ದೊರೆಯಬೇಕಾದ ಸೇವೆಯಲ್ಲಿ ಯಾವುದೇ ವಿಳಂಬವಾಗದಂತೆ ಕಾರ್ಯ ನಿರ್ವಹಿಸಿ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದರು.ಸಾರ್ವಜನಿಕರ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಂಡು…
ದೇವರಹಿಪ್ಪರಗಿ: ಗ್ರಾಮದಲ್ಲಿ ಸುರಿದ ಮಳೆ ಶಾಲಾ ಆವರಣ ಹಾಗೂ ಕೊಠಡಿಗಳಲ್ಲಿ ನಿಂತು ಮಕ್ಕಳ ಆಟಪಾಠ ಸೇರಿದಂತೆ ಎಲ್ಲ ಚಟುವಟಿಕೆಗಳಿಗೆ ಅಡ್ಡಿಯಾಯಿತು.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಆವರಣ ಬುಧವಾರ ಸುರಿದ ಮಳೆಯ ನೀರಿನಿಂದ ತುಂಬಿದ್ದು, ಮಕ್ಕಳ ಶಾಲಾ ಪ್ರವೇಶ, ಪ್ರಾರ್ಥನೆ ಹಾಗೂ ತರಗತಿಗಳಿಗೆ ತೊಂದರೆಯಾಯಿತು. ಮಳೆ ನೀರು ಆವರಣದಲ್ಲಿ ನಿಂತ ಪರಿಣಾಮ ಮಕ್ಕಳು ಶಾಲಾ ಕೋಣೆಗಳಿಗೆ ಪ್ರವೇಶಿಸದಂತಾಗಿತ್ತು. ಜೊತೆಗೆ ಬೆಳಿಗ್ಗೆ ಆರಂಭದಲ್ಲಿ ಮಕ್ಕಳು ಪ್ರಾರ್ಥನೆ ಹಾಗೂ ರಾಷ್ಟ್ರಗೀತೆ ಹೇಳಲು ಅವಕಾಶ ಇಲ್ಲದಂತಾಯಿತು. ಇನ್ನೂ ನಾಲ್ಕು ಕೊಠಡಿಗಳು ಸಹ ಮಳೆ ನೀರಿನಿಂದ ಸೋರಿಕೆಯಾಗಿ ಪಾಠಗಳು ನಡೆಯದಂತಾದವು. ಇದರಿಂದ ಶಿಕ್ಷಕರು ಸಹ ಅಸಹಾಯಕರಾಗಿ ಮಕ್ಕಳೊಂದಿಗೆ ಸೇರಿ ಆವರಣದ ನೀರು ಖಾಲಿಮಾಡಲು ಹರಸಾಹಸ ಪಟ್ಟರು.ಶಾಲಾ ಆವರಣದಲ್ಲಿ ಮಳೆ ನೀರು ನಿಲ್ಲವುದು ಹಾಗೂ ಕೋಣೆಗಳ ಸೋರುವಿಕೆ ಕುರಿತಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದ್ದರು ಸಹ ಗ್ರಾಮವನ್ನು ಪ್ರತಿನಿಧಿಸುವ ಐವರು ಗ್ರಾಮ ಪಂಚಾಯಿತಿ ಸದಸ್ಯರು ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ಪ್ರತಿವರ್ಷ ಮಳೆಗಾಲದಲ್ಲಿ…
