Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಸಾಂಸ್ಕೃತಿಕ ಕಲೆಗಳ ಅನಾವರಣಕ್ಕೆ ಪ್ರತಿಭಾ ಕಲೋತ್ಸವ ಸಹಕಾರಿಯಾಗಬಲ್ಲದು ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಸರ್ಕಾರಿ ಉರ್ದು ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಿಂದಗಿ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ದೇ.ಹಿಪ್ಪರಗಿ ಅಡಿಯಲ್ಲಿ ಬುಧವಾರ ಜರುಗಿದ ದೇವರಹಿಪ್ಪರಗಿ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳಿಗೆ ಪಠ್ಯಗಳ ಕಲಿಕೆಯ ಜೊತೆಗೆ ಹೊಸದಾದ ಜೀವನ ಕೌಶಲ್ಯಗಳನ್ನು ಹೊಂದಲು ಇದು ಉತ್ತಮ ವೇದಿಕೆಯಾಗಿದೆ ಎಂದರು.ಖ್ಯಾತ ವಕೀಲ ಎ.ಎಮ್.ತಾಂಬೋಳಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಪ್ರತಿಭಾ ಕಲೋತ್ಸವ ಅವಕಾಶ ಒದಗಿಸುತ್ತದೆ. ಜೊತೆಗೆ ಮಕ್ಕಳ ವ್ಯಕ್ತಿತ್ವ ರೂಪಿಸಲು ಶಿಕ್ಷಕರಿಗೆ ಹಾಗೂ ಪಾಲಕರಿಗೆ ಅವಕಾಶ ಕಲ್ಪಿಸಿ ಪ್ರೋತ್ಸಾಹಿಸುತ್ತದೆ ಎಂದರು.ಮಹಿಳಾ ಪಿಎಸ್ಐ ಪಿ.ಎಸ್.ಚೌರ ಮಾತನಾಡಿ, ಸರ್ಕಾರದ ಈ ಕಾರ್ಯಕ್ರಮ ಉತ್ತಮವಾಗಿದ್ದು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಉತ್ತಮ ವೇದಿಕೆಯಾಗುತ್ತವೆ ಎಂದರು. ನಂತರ…
ವಿಶ್ವ ಛಾಯಾಗ್ರಹಣ ದಿನಾಚರಣೆ | ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ವಿಜಯಪುರ: ನಮ್ಮ ಪರಂಪರೆ, ವಿಶ್ವದ ಐತಿಹಾಸಿಕ ಕ್ಷಣಗಳ ಇತಿಹಾಸ, ತಲೆ ತಲೆ ಮಾರುಗಳ ದಾಖಲಿಕರಣವನ್ನು ತಮ್ಮ ಕ್ಯಾಮರಾಗಳ ಮುಖಾಂತರ ಸೆರೆ ಹಿಡಿದು ಇಡಿ ಜಗತ್ತಿಗೆ ತೋರಿಸುವಲ್ಲಿ ಛಾಯಾಗ್ರಾಹಕರು ಸಾಕ್ಷಿಯಾಗಿಸಿದ್ದಾರೆ. ಇವರೆಲ್ಲ ನಮ್ಮ ಸಾಂಸ್ಕೃತಿಕ ರಾಯಭಾರಿಗಳೆಂದರೆ ತಪ್ಪಲ್ಲ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಪ್ರಾಯಪಟ್ಟರು.ನಗರದ ಸರಕಾರಿ ಆರ್ಟ್ ಗ್ಯಾಲರಿಯಲ್ಲಿ ಬುಧವಾರ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ “ವಿಶ್ವ ಛಾಯಾಗ್ರಹಣ ದಿನಾಚರಣೆಯ” ಅಂಗವಾಗಿ ಹಮ್ಮಿಕೊಂಡ ಛಾಯಾಗ್ರಹಣ ಕ್ಷೇತ್ರದ ಹಿರಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಛಾಯಾಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಈ ಪ್ರದರ್ಶನದಲ್ಲಿ ಹಲವಾರು ವಿಭಿನ್ನ ವಿಷಯಗಳ ಅದ್ಬುತ ದೃಶ್ಯಕಾವ್ಯವನ್ನು ಛಾಯಾಗ್ರಾಹಕರು ಸೆರೆಹಿಡಿದಿದ್ದಾರೆ. ಸರಕಾರ ಛಾಯಾಗ್ರಾಹಕರಿಗೆ ಎಲ್ಲ ರೀತಿಯ ಆರ್ಥಿಕ ಸೌಲಭ್ಯ ನೀಡಿ ಅವರಿಗೂ ನೆಮ್ಮದಿಯ ಜೀವನ ಸಾಗಿಸುವ ಹಾಗೆ ಮಾಡಬೇಕು. ಸರಕಾರದಿಂದ…
“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್. ಕೆ, ಬೆಂಗಳೂರು ಹೀಗೊಂದು ಪುಸ್ತಕ ಈಗ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದೆ. ಪರ ವಿರೋಧದ ಚರ್ಚೆಗಳನ್ನು ಹುಟ್ಟುಹಾಕಿದೆ.. ಈ ವಚನ ದರ್ಶನ ಪುಸ್ತಕ ವಚನಗಳನ್ನು ಸನಾತನ ಧರ್ಮದ ವೇದ ಉಪನಿಷತ್ತುಗಳು, ಮನಸ್ಮೃತಿಗಳು, ಸಂಪ್ರದಾಯಗಳು, ಆಚರಣೆಗಳ ಆಧಾರದ ಮೇಲೆ ಮತ್ತೆ ಪುನರ್ ಅರ್ಥೈಸಿ, ಪರೋಕ್ಷವಾಗಿ ಭಕ್ತಿ ಪಂಥದ ಮುಂದುವರಿದ ಭಾಗವಾಗಿ ಚಿತ್ರಿಸಲಾಗಿದೆ. ಇದು ಬಸವ ತತ್ವದ ಅಥವಾ ವಚನ ಸಾಹಿತ್ಯದ ಮೂಲ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಇದನ್ನು ಒಂದು ಹಿಡನ್ ಅಜೆಂಡಾ ಆಗಿ ಶರಣ ಸಂಸ್ಕೃತಿಗೆ ಧಕ್ಕೆ ತರಲು, ಅಪಚಾರವೆಸಗಲು, ಅದನ್ನು ಗೊಂದಲಗೊಳಿಸಿ ಜನರಲ್ಲಿ ಅದರ ಬಗ್ಗೆ ನಿರಾಸಕ್ತಿ ಮೂಡಿಸಲು ಈ ಪುಸ್ತಕವನ್ನು ಉದ್ದೇಶಪೂರ್ವಕವಾಗಿಯೇ ರಚಿಸಲಾಗಿದೆ. ಇದು ಬಲಪಂಥೀಯ ಚಳವಳಿಯ ಒಂದು ಭಾಗ ಎಂಬುದಾಗಿ ಕೆಲವರು ಆರೋಪ ಮಾಡುತ್ತಿದ್ದಾರೆ.. ಹಾಗೆಯೇ,ವಚನ ಸಾಹಿತ್ಯವನ್ನು, ಬಸವ ತತ್ವವನ್ನು, ಶ್ರಮ ಸಂಸ್ಕೃತಿಯನ್ನು, ಲಿಂಗಾಯತ ಧರ್ಮವನ್ನು ಗುತ್ತಿಗೆ ಪಡೆದಂತೆ ಆಡುತ್ತಿರುವ ಕೆಲವರು, ಬಸವಣ್ಣನವರ ನಿಜವಾದ ಆಶಯಗಳನ್ನು ಮರೆಮಾಚಿ ತಮ್ಮ ಹಠಮಾರಿ ಧೋರಣೆಗೆ…
ವಿಜಯಪುರ: 245 ಸಿಟಿಐ ಮತ್ತು 545 ಸಿವಿಲ್ ಪಿ.ಎಸ್.ಐ ಹುದ್ದೆಗಳ ನೇಮಕಾತಿ ಸೇರಿದಂತೆ ಈಗಾಗಲೇ ನಡೆದಿರುವ ಲಿಖಿತ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ ಲೋಕಸೇವಾ ಆಯೋಗ ಆದಷ್ಟು ಬೇಗ ಪ್ರಕಟಿಸಬೇಕು ಎಂದು ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಪಿಸಿ (ಸಿವಿಲ್/ಸಿಎಆರ್/ಡಿಎಆರ್) ಹುದ್ದೆಯಿಂದ ದೂರ ಉಳಿಯುತ್ತಾರೆ. ಇದರಿಂದ ಬೇರೆಯವರಿಗೂ ಅವಕಾಶ ಸಿಗುತ್ತದೆ ಹಾಗೂ ತೇರ್ಗಡೆಯಾದವರಿಗೆ ಮತ್ತೆ ಪರೀಕ್ಷೆ ಬರೆಯುವ ಅವಶ್ಯಕತೆ ಇರುವುದಿಲ್ಲ.ಪಿ.ಸಿ ಪರೀಕ್ಷೆಯ ಫಲಿತಾಂಶ ಮೊದಲು ಬಿಡುಗಡೆಯಾಗಿ, ನಂತರ ಪಿ.ಎಸ್.ಐ ಆಗಿ ಎರಡರಲ್ಲೂ ತೇರ್ಗಡೆಯಾದವರು ಪಿ.ಸಿ ಬಿಟ್ಟು ಪಿ.ಎಸ್.ಐ ಆಯ್ಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮತ್ತೆ ಬ್ಯಾಕ್ಲಾಗ್ ಆಗಿ ಸರ್ಕಾರಕ್ಕೂ ಅಭ್ಯರ್ಥಿಗಳಿಗೂ ತೊಂದರೆಯಾಗುವುದು ಖಚಿತ.ಒಂದು ಉದ್ಯೋಗ ಸಿಗುವುದರಿಂದ ಒಂದು ಮನೆಗೆ ಸಾಕಷ್ಟು ಆರ್ಥಿಕ ನೆರವಾಗುತ್ತದೆ. ಅಭ್ಯರ್ಥಿಯ ಭವಿಷ್ಯ ಸಧೃಡವಾಗುತ್ತದೆ. ಪರೀಕ್ಷೆ ಫಲಿತಾಂಶದ ವಿಳಂಬ, ಅನಿಶ್ಚಿತತೆ, ಅವೈಜ್ಞಾನಿಕ ವೇಳಾಪಟ್ಟಿ, ಅಭ್ಯರ್ಥಿ ಇರುವ ಊರಿಂದ ಬೇರೆ ಊರಿಗೆ ಪರೀಕ್ಷೆ ಸೆಂಟರ್ ನಿಗದಿ…
Udayarashmi kannada daily newspaper Udayarashmi kannada daily newspaper
ಚಡಚಣ: ಎನ್ ಎಚ್ ಎಮ್ ಒಳಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಚಡಚಣ ಸಮುದಾಯದ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಕೈಗೆ ಕಪ್ಪು ಬಟ್ಟೆ ಧರಿಸಿ ಆಸ್ಪತ್ರೆಯ ಮುಂದೆ ಮೌನ ಪ್ರತಿಭಟನೆ ನಡೆಸಿದರು.ಇದೇ ಸಂದರ್ಭದಲ್ಲಿ ಡಾ. ಆಯ್ ಎಮ್ ಬಿರಾದಾರ. ಪ್ರಶಾಂತ ಸಾಳುಂಕೆ, ಸಚೀನ ತೇಲಿ, ಶಿವಾನಂದ ಹಾಲಶೆಟ್ಟಿ, ಶ್ರೀಧರ ಬಂಡಗಾರ, ಶ್ರೀಶೈಲ ಯಳಮೇಲಿ, ರಾಜು ರತ್ನಾಕರ, ಪ್ರಕಾಶ ವಾಘಮೋರೆ, ಸಂಗಪ್ಪ ಕುಸಬಿ, ಪ್ರಸಾದ ಕೋತ, ಗಂಗಾಧರ ಬೈರಶೇಟ್ಟಿ, ಸುರೇಶ್ ಜೊಳ್ಳಿ, ರೇಣುಕಾ ಬೆಳ್ಳೇನವರ, ಭಾಗಿರಥಿ ಬೆಳ್ಳೇನವರ, ಜಕ್ಕಮ್ಮಾ ಶಾಪೂರ, ರಾಜಶ್ವೇರಿ ಗೋಟ್ಯಾಳ ಉಪಸ್ಥಿತರಿದ್ದರು.
ಬಸವನಬಾಗೇವಾಡಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ಜನರ ಕಲ್ಯಾಣಕ್ಕಾಗಿ ಸಾಮಾಜಿಕ ಸಮಾನತೆಗಾಗಿ ನ್ಯಾಯದ ದೃಷ್ಟಿಯಿಂದ ಮೀಸಲಾತಿ ಒದಗಿಸಿದ್ದರು. ಆದರೆ ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ನೀಡಿದ ೨೦೧೧ ರ ಸದಾಶಿವ ಆಯೋಗದ ವರದಿಯ ಆಧಾರ ಇಟ್ಟುಕೊಂಡು ಜನಸಂಖ್ಯೆ ಆಧಾರದ ಮೇಲೆ ಒಳಮೀಸಲಾತಿ ನೀಡಲು ಪ್ರಯತ್ನದಲ್ಲಿದೆ. ಸರ್ಕಾರದ ನಡೆ ಸಂವಿಧಾನದ ಆಶಯಕ್ಕೆ ವಿರುದ್ಧವಿದೆ. ಇದಕ್ಕೆ ಬಂಜಾರಾ,ಭೋವಿ, ಕೊರಚ ಹಾಗೂ ಕೊರಮ ಸಮುದಾಯದ ವಿರೋಧವಿದೆ ಎಂದು ರಾಷ್ಟ್ರೀಯ ಗೊರಮಾಳವ ತಾಲೂಕಾಧ್ಯಕ್ಷ ಶಾಂತು ರಾಠೋಡ, ಭೋವಿ ಸಮಾಜದ ಜಿಲ್ಲಾ ಮುಖಂಡ ಸಿದ್ರಾಮ ಪಾತ್ರೋಟಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿರಾಗ್ ಪಾಸ್ವಾನ್, ಮಾಯಾವತಿ, ರಾಮದಾಸ ಅತವಾಲೆ ಅವರು ಆಗಷ್ಟ್ ೧ ರಂದು ಸುಪ್ರಿಂಕೋರ್ಟ್ ಒಳಮೀಸಲಾತಿ ನೀಡುವ ಅಧಿಕಾರ ಆಯಾ ರಾಜ್ಯ ಸರ್ಕಾರಕ್ಕೆ ಇದೆ ಎಂದು ತೀರ್ಪು ನೀಡಿದನ್ನು ವಿರೋಧಿಸಿ ಇಂದು…
ಬಸವನಬಾಗೇವಾಡಿ: ಪಟ್ಟಣದ ಉತ್ತರಾದಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ೩೫೩ ನೇ ಆರಾಧನಾ ಮಹೋತ್ಸವದಂಗವಾಗಿ ಬುಧವಾರ ಬೆಳಗ್ಗೆ ಮಧ್ಯ ಆರಾಧನೆ ಪೂಜೆ, ಅಷ್ಟೋತ್ತರ, ಕ್ಷೀರಾಭಿಷೇಕ ಜರುಗಿತು. ಆಚಾರ್ಯ ವಾದಿರಾಜ ಯಜುರ್ವೇದಿ ಅವರಿಂದ ಮಹಾಪೂಜೆ, ಅಲಂಕಾರ ಪೂಜೆ ನೆರವೇರಿತು.ಪೂಜಾ ಕಾರ್ಯಕ್ರಮದಲ್ಲಿ ವಸಂತಚಾರ್ಯ ಇಂಗಳೇಶ್ವರ, ರಾಮಾಚಾರಿ ಯಜುರ್ವೇದಿ, ವಿಠ್ಠಲಾಚಾರ್ಯ ಜೋಶಿ, ವಿಠ್ಠಲ ದೇಶಪಾಂಡೆ, ವಸಂತ ಕುಲಕರ್ಣಿ, ಯಲಗೂರೇಶ ಯಜುರ್ವೇದಿ, ಪ್ರಲ್ಹಾದ ಕುಲಕರ್ಣಿ, ಅನಂತರಾವ ಕುಲಕರ್ಣಿ, ವಿಠ್ಠಲ ಕುಲಕರ್ಣಿ, ರಾಮಾಚಾರ್ಯ ಜೋಶಿ, ನಾರಾಯಣ ಕುಲಕರ್ಣಿ ಇತರರು ಇದ್ದರು.ಆ.೨೨ ರಂದು ರಾಘವೇಂದ್ರ ಸ್ವಾಮಿಗಳ ೩೫೩ ನೇ ಆರಾಧನಾ ಮಹೋತ್ಸವದಂಗವಾಗಿ ಉತ್ತರಾರಾಧನೆ ಪೂಜೆ, ಸತ್ಯನಾರಾಯಣ ಪೂಜೆ, ಮಹಾರಥೋತ್ಸವ ಜರುಗಲಿದೆ ಎಂದು ವಾದಿರಾಜ ಯಜುರ್ವೇದಿ ತಿಳಿಸಿದರು.
ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ಜಾತ್ರಾಮಹೋತ್ಸವ ಆಗಷ್ಟ್ ೨೬ ರಿಂದ ಐದು ದಿನಗಳ ಕಾಲ ಜರುಗಲಿದ್ದು. ಜಾತ್ರೆಗೆ ಬರುವ ಭಕ್ತ ಸಮೂಹಕ್ಕೆ ಐದು ದಿನಗಳ ಕಾಲ ನಿರಂತರ ಕೂಡಲಸಂಗಮ ಅಭಿವೃದ್ಧಿ ಮಂಡಳಿಯಿಂದ ದಾಸೋಹವನ್ನು ದೇವಸ್ಥಾನದ ಹತ್ತಿರವಿರುವ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಬಸಪ್ಪ ಪೂಜಾರಿ ಹೇಳಿದರು.ಪಟ್ಟಣದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಾತ್ರೆಯಂಗವಾಗಿ ದಾಸೋಹದ ಅಡುಗೆ ತಯಾರಿಸಲು ತಾತ್ಕಲಿಕವಾಗಿ ಹಾಕಲಾಗುತ್ತಿರುವ ಶೆಡ್ ಅನ್ನು ಬುಧವಾರ ಸಂಜೆ ವೀಕ್ಷಿಸಿ ಮಾತನಾಡಿದ ಅವರು, ಈಗಾಗಲೇ ಜಾತ್ರೆಗೆ ಬೇಕಾದ ಅಗತ್ಯ ಸಿದ್ಧತೆ ಭರದಿಂದ ಸಾಗಿದೆ. ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿನಿತ್ಯ ದಾಸೋಹ ವ್ಯವಸ್ಥೆ ಇರುತ್ತದೆ. ಜಾತ್ರೆಗೆ ಅಪಾರ ಪ್ರಮಾಣದ ಭಕ್ತರು ಬರುವದರಿಂದಾಗಿ ಅಲ್ಲಿ ಜಾಗೆ ವಿಶಾಲವಾಗಿಲ್ಲದೇ ಇರುವದರಿಂದಾಗಿ ಪ್ರತಿ ವರ್ಷ ಜಾತ್ರೆಯ ದಾಸೋಹದ ವ್ಯವಸ್ಥೆಯನ್ನು ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮಂಡಳಿಯಿಂದ ವ್ಯವಸ್ಥೆ ಮಾಡಲಾಗುತ್ತದೆ. ದಾಸೋಹವನ್ನು ಸುವ್ಯವಸ್ಥಿತವಾಗಿ…
ಅಕ್ಕಮಹಾದೇವಿ ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ ವಿಜಯಪುರ: ನಗರದ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ೨೦೨೩-೨೪ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್., ಸ್ಕೌಟ್ಸ್ ಮತ್ತು ಗೈಡ್ಸ್, ಇ.ಎಲ್.ಸಿ ಹಾಗೂ ರೆಡ್ಕ್ರಾಸ್ ಚಟುವಟಿಕೆಗಳ ಸಮಾರೋಪ ಹಾಗೂ ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುವ ಸಮಾರಂಭ ಆ.೨೧ರಂದು ಜರುಗಿತು.ಸದರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ವಿದ್ಯಾರ್ಥಿಗಳು ಬರಿ ಪದವಿ ಪಡೆಯುವುದು ಮುಖ್ಯವಲ್ಲ. ಅದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕಲೆಯನ್ನು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪ್ರತಿನಿತ್ಯ ಒಂದಾದರೂ ದಿನ ಪತ್ರಿಕೆಯನ್ನು ಓದಬೇಕು ಎಂದು ತಿಳಿಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಡಾ. ಆರ್.ಎಸ್. ಕಲ್ಲೂರಮಠ ಮಾತನಾಡಿ, ವಿದ್ಯಾರ್ಥಿನಿಯರು ನಿಯಮಿತವಾಗಿ ಕಾಲೇಜಿಗೆ ಬರಬೇಕು. ಕಾಲೇಜಿನಲ್ಲಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಅತಿಥಿಗಳಾಗಿ ಭಾಗವಹಿಸಿದ ವಿಶ್ರಾಂತ ಪ್ರಾಧ್ಯಾಪಕ ಎಸ್.ಪಿ. ಬೀಡಗೊಂಡ ಮಾತನಾಡುತ್ತ ವಿದ್ಯಾರ್ಥಿನಿಯರು ಚೆನ್ನಾಗಿ ಅಧ್ಯಯನಗೈದು ಕಾಲೇಜು ಹಾಗೂ ತಮ್ಮ ಮನೆಗೆ ಕೀರ್ತಿ…
